ಒಟ್ಟು 3226 ಕಡೆಗಳಲ್ಲಿ , 122 ದಾಸರು , 2221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಬೇಕೆಲೋ ರಂಗಾ ಎನ್ನಾ | ನೀ ಕಾಯಬೇಕೆಲೋ ರಂಗಾ | ತೋಯಜಾಕ್ಷ ದಯಾನಿಧಿ ತರಣೋ | ಪಾಯದೋರೋ ಶುಭಾಂಗಾ ಪ ದುರಿತ ಸಮೂಹವ ಬಂದು | ಶಣಸುತ | ಹರಿದಂಜಿಸುತಿವೆಯಿಂದು | ನರಹರಿ ನಿನ್ನ ನಾಮದ ಘನಗರ್ಜನೆಯ |ಕೊಡು | ಮರಳು ಮಾನವನಿವನೆಂದು 1 ಕುಂದನಾರಿಸಿಯೆಲ್ಲಾ ನೋಡಲು | ಒಂದೆರಡೆನಲಿಕ್ಕಿಲ್ಲಾ | ಮಂದಮತಿ ಅವಗುಣ ರಾಶಿ ಪತಿತರ | ವೃಂದದೊಳೆನ್ನಧಿಕಲಾ2 ಕೊಂಬು ನೀಚನವಾದರೆ ಬಿರದಾ | ಡಂಬರ ನೀಚನಲ್ಲಾ | ಇಂಬುದೋರೆಲೆ ನಿನ್ನ ದಾಸರ ದಾಸ | ಎಂಬದೆನ್ನಧಿಕಾರವಿಲ್ಲಾ 3 ಬಿನ್ನಹವೆನ್ನ ಮುರಾರಿ | ಪಾಲಿಸಿ | ನಿನ್ನ ಚರಣವ ದೋರಿ | ಧನ್ಯಗೈಸೆಲೋ ಗುರುವರ ಮಹಿಪತಿ ಚಿನ್ನನೊಡಿಯ ಸಹಕಾರಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯಬೇಕೋ ಶಂಕರೇಶ್ವರ ನೀನೆನ್ನನೂ ದೇವಾ ಪ ಮಾಯಧಾರಿಪ್ರೀಯನಹುದೋ ಕಾಯಜಾಂತಕನೇ ಆಯತಾರ್ಥವನ್ನು ತೋರೋ ಪಾರ್ವತೀಶನೆ ದೇವನೆ 1 ಇಂತುದಿನವು ಗಳಿಸಿಯಿರುವ ಅಂತು ದು:ಖಕ್ಕೆ ಪಂತವ್ಯಾಕೊ ಪಾಲಿಸೆನ್ನೊಳಂತರಂಗಮಂ ಶಂಭೂ 2 ದಾಸ ತುಲಸಿರಾಮ ನಿನ್ನ ದಾಸನಾದೆನೂ ದೋಷ ರಹಿತನ ಮಾಡೆನ್ನ ಮೋಸಹೋದೆನೂ-ಗುರುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಯಯ್ಯ ರಘುರಾಮ ದೀನಜನೋದ್ದಾರಿ ರಘುರಾಮ ಧ್ರುವ ಕೈವಲ್ಯಾವನ ಮೂರುತಿ ನೀನು ಕೇವಲ ಘನ ಅಪರಾಧಿಯುನಾನು ದೇವನೆ ಕರುಣಾಸಾಗರ ನೀನು 1 ಭಾವ ಭಕುತಿಕೀಲವ ನಾನರಿಯೆ ವಿವೇಕಾಮೃತ ನೀಡುವ ದೊರೆಯೆ ಅವಾಗ ವಿಷಯಾಸಕ್ತನು ಹರಿಯೆ ಕಾವ ದೈವ ನೀನೆ ಶ್ರೀ ಹರಿಯೆ 2 ಚರಣವೆ ಗತಿಯೆಂದಾತನ ತಂದೆ ತರಳನ ಕುಂದನಾರಿಸದಿರು ತಂದೆ ತರಳ ಮಹಿಪತಿ ಪ್ರಭು ನಮೋ ಎಂದೆ ಶರಣ ರಕ್ಷಕ ನೀನಿಹುದೆಂದೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯವ ನೆರೆನಂಬಿ ಕೆಡದಿರು ಮಾಯೆಯ ತಿಳಿದೇಳು ಪ. ನ್ಯಾಯವನರಿಯದೆ ನೀ ಮಾಯಾಮೋಹವೆ ಹೇಯಕಾರ್ಯರಿದೊಳಪಾಯದಿ ನರಳುವ ಅ.ಪ. ತನುಮನಕನಕವಿದು ನಿತ್ಯದಿ ತನದಾಗಿಹುದೆಂದು ಹೊನ್ನು ಮಣ್ಣು ಹೆಣ್ಣೆಂಬೀ ಮೂರರ ಬಣ್ಣದೆ ಬಗೆಗೆಟ್ಟು ಕಣ್ಣು ಕಾಣದೆ ಮುಂಬರುತಿಹ ಭಿನ್ನವನೆಣಿಸದೆಯೆ ಸಣ್ಣತನದಿ ಜೀವನ ವ್ಯರ್ಥವೆನಿಸುವ 1 ಸುಜನರ ಸಂಗತಿ ತ್ಯಜಿಸಿ ಮದದಲಿ ಕುಜನರ ಕೂಟವ ಬಯಸಿ ಋಜುಮಾರ್ಗವ ತೊರೆದು ಕಾಲವ ಅಜಗರನಂದದಿ ಕಳೆದು ಗಜಪತಿ ವರದನ ಪದಪಂಕಜ ಮಹಿಮೆಯ ನಿಜವರಿಯದೆ ದುರ್ಜೀವನವೆನಿಸುವ 2 ನೀರಗುಳ್ಳೆಯ ತೆರದಿ ಕರಗುವ ಸಾರವಿಲ್ಲದ ಭವದಿ ಮೂರುದಿನದ ಬಾಳೆಂದು ನೆನೆಯದೆ ಹಾರಾಡುವರೇ ನಿಂದು ಮಾರಪಿತನ ಪದಸಾರಸವನು ನೆನೆ [ನೆನೆದು] ನೀರ ಶೇಷಗಿರಿವರನೆÀ ಗತಿಯೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಯೊ ಕರುಣಾಕರ ಕೃಪಾಲ ಶ್ರೀ ಗುರು ಎನ್ನ ಕಾಯೊ ದಯದಿಂದೆನ್ನ ಪರಮಪಾವನ ಧ್ರುವ ಹುಟ್ಟಿಸಿಹ್ಯ ಜೀವನ ಸೃಷ್ಟಿಯೊಳು ನಾ ನಿಮ್ಮ ದೃಷ್ಟಿಸಿ ನೋಡಲು ಎನ್ನ ಕಷ್ಟಪರಿಹಾರ ಶಿಷ್ಟಜನ ಪ್ರತಿಪಾಲ ದುಷ್ಟಜನ ಸಂಹಾರ ಎಷ್ಟೆಂದು ಪೊಗಳಲಯ್ಯ ಕೃಷ್ಣಕೃಪಾಲ 1 ಇನ್ನೊಂದು ಅರಿಯೆ ನಾ ಅನ್ಯಪಥÀವೆಂಬುದನು ನಿನ್ನ ಚರಣಕೆ ಪೂರ್ಣ ನಂಬಿಹ್ಯನು ಭಿನ್ನವಿಲ್ಲದೆ ಎನ್ನ ಚನ್ನಾಗಿ ಸಲಹಯ್ಯ ಧನ್ಯಗೈಸೊ ಪ್ರಾಣ ಚಿನ್ಮಯನೆ 2 ವಾಸನೆಯ ಪೂರಿಸೊ ವಿಶ್ವವ್ಯಾಪಕ ಎನ್ನ ಭಾಸ್ಕರಕೋಟಿ ಪ್ರಕಾಶ ಪೂರ್ಣ ಲೇಸು ಲೇಸಾದಿ ಪಾಲಿಸೊ ವಾಸುದೇವನೆ ದಾಸಾನುದಾಸ ನಿಜದಾಸ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊನೀನೆ ಕರುಣದಿ ಪ ರಾಮರಾಮಯೆಂದು ಪೊಗಳುವನು ಮಹಾರಾಜ ಸಾರ್ವಭೌಮ ಪೂರ್ಣ ಕಾಮನೆ ದಶರಥಾವನೀಶ ಕುಮಾರ 1 ದೇವದೇವನೆ ಕೃಪಾವಲೋಕನದಿ ದೀನಜನರ ನೋಡೊ ನೀದಯಮಾಡೊ ನೀಡೋಯನ್ನದುರಿ- ಜಯಜಯ ಪ್ರಭೋ ಭಂಜನ ಜಗ ಜ್ಜೀವನ ನತಜನ ಸಂಜೀವನಸು- ಶುಭ ಕುಶೀಲವರತಾತ ಸುಪ್ರೀತ2 ಸರಿಸಿಜೋದ್ಭವಾದ್ಯಮರನಾಯಕ ಸಾಧುರಕ್ಷಸ್ಸದ್ಧರ್ಮ ಪಾಲಕ ಮನುಜವೇಷ ದುರ್ಜನ ಕಾಲ ಶರಧಿ ಸೇತು ಬಂಧನ ಕಂಜೇಕ್ಷಣ ಮಾಂ ಪಾಹಿ ರಘುವೀರ 3
--------------
ಗುರುರಾಮವಿಠಲ
ಕಾಯೋ ಕರುಣಿಸಿ ಎನ್ನ ರಂಗಾ | ಬೇಗನೇ ಪಾದವದೋರಿಸಿ | ನಮನಕ ಭವಬಲಿಯನು ಬಿಡಸಿ ರಂಗಾ ಪ ಶರಣೆಂದು ಸಕಲರು ಬಂದು ಪೋಗುವಾ | ನಿನ್ನ ಮಹಾದ್ವಾರದಲಿ | ಇರುತಿಹ ನಿನ್ನಯ ಭಕುತ ಬಲೆಯಲಿ | ಇರಿಸಿ ನೀ ಇಟ್ಟು ಅಚಲದಲಿ ರಂಗಾ | ಸಂಬಳನಿತ್ತಿಹ ಧನವ ನಾನೊಲ್ಲೆ | ಬೇಡುವೆ ಒಂದÀನೋ ರಂಗಾ | ಹಂಬಲ ದಣಿವಂತೆ ನಾಮ ಭಾಂಡಾರವ | ಮಾಡೆನ್ನ ಆಧೀನವ ರಂಗಾ 1 ಕರಿದಲಿಧೃತಿ ಚಿತ್ತವನಿತ್ತು ಅನುದಿನಾ | ಹರಿಪಾದ ಸದ್ಬಕ್ತಿಯಾ ರಂಗಾ | ಮೆರೆವ ಮಂಟಪದೊಳು ನಿಲಿಸೆನ್ನ | ದುರಿತವ ತಟ್ಟದಂದದಿ ಪೊರೆಯೋ ರಂಗಾ2 ಇಹಪರದಲ್ಲಿ ಏಕೋದೇವನೆಂಬ ಮುದ್ರೆಯಾ ಭಾವದ ಬಲದಿಂದಲಿ | ಮಹಿಪತಿ ಸುತ ಪ್ರಭು ಕೊರಳಿಗೆ ಹಾಕಿನ್ನು | ಸಲಹು ನೀ ಕೃಪೆಯಿಂದಾ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ದಯದಿಂದೆನ್ನ ಕಾರುಣ್ಯ ನಿಧಿಯೇ | ಯದು ನಾಯಕನೇ ದೇವ ದೇವಾ ಪ ಪುಷ್ಯರಾಗದಿ ನವರತ್ನ ಪದಕಧರ | ಘನಶ್ಯಾಮ ಉರಗಶಯನಾ | ಕಶ್ಯಪ ವಸಿಷ್ಠಾದಿ ಸ್ಮರಣೆ ಮಾಳ್ವವರಿಂಗೆ | ದೃಶ್ಯನಾಗಿಹ ಮುರಾರಿ ಶೌರಿ1 ನಂದಸುಕುಮಾರ ಸಿರಿನಾರಿಯ | ಸದ್ಬಕ್ತವೃಂದ ರಕ್ಷಕ ಭೂಧರಾ | ಇಂದಿರಾ ಭಾವನೆಯೂ ಪೂರಿತಿಕೇಳು | ಜಗವಂದ್ಯ ಮುಕುಂದ ಗರುಡರೂಢಾ2 ಚಕ್ರಕರ ಕಮಲಾಕ್ಷ ಚತುರಾಸ್ಯ ಜನಕ ಬಲಿ | ಚಕ್ರವರ್ತಿಗೆ ವರದನಾ | ಶಕ್ರನುತ ಮಹಿಪತಿ ಸ್ವಾಮಿ ಸುತ ಪ್ರೀಯಾ | ತ್ರಿವಿಕ್ರಮನೆ ಕೋಮಲಾಂಗಾ ರಂಗಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾಲ ವ್ಯರ್ಥ ಪ ಘನ್ನ ನಿರಯಕೆ ವೈವೋ ಸಾಧನವೋ ಗೋಪಾಲ ಅ.ಪ ಸುರರು ಬಲ್ಲರೈ ಚದುರ ತತ್ವೇಶಗಣ ಬಲ್ಲರಯ್ಯಾ ವಿಧಿಪಿತನೆ ನಿನ್ನ ಬಿಟ್ಟನ್ಯತ್ರ ಮನವಿರಲು ನಿಧನ ನೋವಿಗೆ ಮಿಗಿಲು ಪದುಮ ಮುಕ್ತರು ಸಾಕ್ಷಿ1 ಬಂಧಿಸಲು ನೀ ನಮ್ಮ ಬಿಡಿಸಿಕೊಂಬುವರುಂಟೆ ಅಂಧತಮಸಿನ ಭೋಗದಿಂದಾಹುದೊ ಸಿಂಧು ಚಿನ್ಮಯ ಕಾಯ ತಂದೆ ನಿನ್ನಯ ಕರುಣ ಉಂಬುವನೆ ಬಹುಧನ್ಯ 2 ಗೋ ಗೊಲ್ಲರಲಿ ಕರುಣ ಸುರಿದ ದೀನ ಬಂಧು ಭಾಗ್ಯಪಾಲಿಸು ಭಕ್ತಿಯೋಗವಿತ್ತು ರೋಗದಲಿ ಬಲು ನೊಂದೆ ಭಯವನ್ನು ಹೀರುವುದು ನಾಗತಲ್ಪ ಜಯೇಶವಿಠಲನೆ ಉದ್ಧರಿಸು 3
--------------
ಜಯೇಶವಿಠಲ
ಕಾಲ ಚಕ್ರವನೇರಿ ಭಾಸಿಪ ಬಾಲ ಸೂರ್ಯನ ವಂದಿಪೆ ಪ ಕಾಲ ರೂಪನೆ ಬಾಲ ಚಂದ್ರನೆ ಪೂಜಿಪೆ ಅ.ಪ. ಸೃಷ್ಟಿ ರೂಪನೆ ವೃಷ್ಟಿದಾಯಕ ಶ್ರೇಷ್ಠ ಭೂಮಿಯ ಪುತ್ರನೆ ಕಷ್ಟಹರ ಸುಜ್ಞಾನ ಮೂರುತಿ ಇಷ್ಟದಾಯಕ ಸೌಮ್ಯನೆ 1 ದೇವಗಣಗುರು ಕ್ಷೇಮದಾಯಕ ಜೀವವರ ಗುರು ಪಾಲಿಸೈ ದೇವಶುಕ್ರನೆ ಕಾವ್ಯರೂಪನೆ ಕಾವ್ಯ ಸೇವನೆ ಪೋಷಿಸೈ 2 ಪುಂಗವರ ಮಹಿಮಾಂಗ ಶನಿ ಸನ್ಮಂಗಳಾತ್ಮಕ ದೇವನೆ ಮಂಗಳವನೆಸಗೆಂದು ವಂದಿಪೆ ರಾಹುವೆ ವರಕೇತುವೆ 3 ಶ್ರೀನಿವಾಸನೆ ಪಾಲಿಸುವುದೆಂದೀ ನವಗ್ರಹ ಭಕ್ತಿಯಿಂಧೇನುನಗರ ಜನೇಶನೇವರ ವೇಂಕಟೇಶನೆ ಪೋಷಿಸೈ 4
--------------
ಬೇಟೆರಾಯ ದೀಕ್ಷಿತರು
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಲವೆಂತು ಕಳೆಯಲೆನ್ನಯ್ಯ ಪ ಕಾಲಕಳೆಯಲೆಂತು ನಾನು ತಾಳಿಮೂಗುತಿ ಕಾಣದೊನಿತೆಯ ಹಾಳುಮುಖವ ನೋಡೆವೆಂದು ಶೀಲಮುತ್ತೈದೇರ್ಹಳಿಯುತಿಹ್ಯರು ಅ.ಪ ಏಳುಸುತ್ತಿನಕೋಟಿ ಪಟ್ಟಣದಿ ಖೂಳರುಪಟಳ ಹೇಳಲಳವಲ್ಲ ಸೇರಿ ವಿಧ ವಿಧದಿ ದಾಳಿನಿಕ್ಕಿ ಹಾಳು ಮಾಡ್ವರು ಮನಕೆ ಬಂದತೆರದಿ ಗೋಳು ಕೇಳುವರಿಲ್ಲವೋರ್ವರು ತಾಳೆನೀಬಾಧೆ ಶೀಲದೆನ್ನ ಬಹು ಜೋಕಿಯಿಂ ಮೇಲ್ಮಾಲಿನೋಳಿಟ್ಟು ಆಳುವಂಥ ಮೂಲಪುರಷನಿಲ್ಲದಿನ್ನು 1 ಆರು ಕೇಳುವರಿಲ್ಲ ಇವಳಿಗೆಯೆನುತ ಕೀಳ ಮೂರು ಮಂದಿ ಊರ ಬೀದಿಯೊಳಗೆ ದಾರಿ ತರುಬಿ ಸಾರಿ ತರಿವರು ಮಾರಕೇಳಿಗೆ ಸೈರಿಸಲಿ ಹ್ಯಾಗೆ ಚೋರನೋರ್ವನು ಮೀರಿ ಬಾಧಿಪ ಆರು ಮಂದಿ ಬಿಡದೆ ಎನ್ನನು ಘೋರಿಸುವರು ನಾನ ವಿಧದಿ ಪಾರುಗಾಣೆನು ವ್ರತದಿ ಇನ್ನು 2 ಪತಿಯು ಇಲ್ಲದ ಜನ್ಮವ್ಯಾತಕ್ಕೆ ಕ್ಷಿತಿಯಮೇಲೆ ಸತಿಗೆ ಪರಮ ಗತಿಯ ಕೊಡಲಿಕ್ಕೆ ಪತಿಯೆ ಬಾಧ್ಯ ಇತರರು ಕಾರಣಲ್ಲ ಕಾಯಕ್ಕೆ ಜತನ ಗೈಲಿಕ್ಕೆ ಪ್ರಥಮ ಮುತ್ತಿನ ಮೂಗುತಿಯನು ಹಿತದಿ ಕರುಣಿಸಿ ಪತಿಯಾಗೆನಗೆ ಗತಿಯ ನೀಡಿ ಹಿತದಿಂ ಸಲಹು ಪತಿತ ಪಾವನೆನ್ನ ಪ್ರಾಣ ಶ್ರೀರಾಮ 3
--------------
ರಾಮದಾಸರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ