ಒಟ್ಟು 721 ಕಡೆಗಳಲ್ಲಿ , 91 ದಾಸರು , 619 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ ಧ್ರುವ ಹರಿಃ ಓಂ ತತ್ಸದಿತಿಯೆಂಬ ಶ್ರೀ ಹರಿ ವಾಕ್ಯವರಿಯದೆ ಬರುದೆ ಶ್ರೀ ಹರಿ ಶ್ರೀ ಹರಿಯಂದೊದರುವದ್ಯಾಕೆ 1 ಏಕಾಂಶೇನ ಸ್ಥಿತೋ ಜಗತ ಎಂಬ ವಾಕ್ಯವರಿಯದೆ ನಾಲ್ಕಾರು ವೇದಶಾಸ್ತ್ರವೋದಿ ಕೇಳುವದ್ಯಾಕೆ 2 ಎಂಬ ವಾಕ್ಯವರಿಯದೆ ಹದಿನೆಂಟು ಪುರಾಣ ಕೇಳಿ ಹೇಳುವದ್ಯಾಕೆ 3 ಮಮೈವಾಂಶೋ ಜೀವಲೋಕೇ ಜೀವಭೂತ:ಸನಾತನ ಎಂಬ ವಾಕ್ಯವರಿಯದೆ ನಾನಾವ್ರತಾಚಾರ ಸಂನ್ಯಾಸ ಕೈಕೊಂಬುದ್ಯಾಕೆ 4 ಸುದರ್ಶನ ಮಹಾಜ್ವಾಲಾ ಕೋಟಿಸೂರ್ಯ ಸಮಪ್ರಭ ಎಂಬ ವಾಕ್ಯವರಿಯದೆ ಸೀಳಿ ಸುದರ್ಶನಗಳ ಪೂಜಿ ಮಾಡುವದ್ಯಾಕೆ 5 ಮಂತ್ರ ಪ್ರಣಮ್ಯವರಿಯದೆ ತಂತ್ರ ಮಂತ್ರಸರವ್ಯಾಕೆ ಅಂತರಾತ್ಮವರಿಯದೆ ತರ್ಕಭೇದಗಳ್ಯಾಕೆ 6 ವಿಶ್ವವ್ಯಾಪಕ ಗುರು ಭಾಸ್ಕರಮೂರ್ತಿ ಶ್ರೀಪಾದ ವಿಡದಿಹ ಮಹಿಪತಿಗೆ ಭವಪಾಶದಂಜಿಕಿನ್ಯಾಕೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹಿಂಗಾಯಿತಲ್ಲಾ ಏನಿದು ಹರಿಹರಿಪ ಮಂಗನ ತೆರ ಈ ಅಂಗವ ವಿಷಯತ ರಂಗೆ ವಡ್ಡುತ ರಂಗನ ಮರೆತಿಹೆ ಅ.ಪ. ಬರಿದೆಯೆ ಹೋಗುತ್ತಿರುವುದು ಹೊತ್ತು ಹರಿಧ್ಯಾನಕೆ ಸಾಲದು ಪುರಸೊತ್ತು ತಿರುಗಲು ಮನೆಮನೆ ಸಾಲದು ಹೊತ್ತು ಸರಸಿಜನಾಭನೆ ಇದಕ್ಕೇನು ಮದ್ದು 1 ಶ್ರೀ ಕಮಲೇಶನ ಪೂಜೆಯ ಮಾಡನೆ ಆಕಳಿಸುತ ಮೈ ಕೈ ಮುರಿಯುವೆನು ಸ್ವೀಕರಿಸಲು ಸವಿ ಪಾನೀಯಂಗಳ ಮುಖಸಹತೊಳೆಯದೆನೂಕುತ ಮುಖ ಪ್ರಕ್ಷಾಳನೆ ಬಿಡುವೆ2 ಸ್ನಾನವ ಮಾಡೆನು ಸಂಧ್ಯಾ ತಿಳಿಯೆನು ಧ್ಯಾನವು ಯೆಂತೆನೆ ಕೂಳಿನ ಚಿಂತೆಯು ಆನನ ಮುಸುಕುತ ಬರಿಪಿಚಿಯೆಂದು ನಿ ಧಾನದಿ ಜಪಸರ ನೂಕುವೆನಲ್ಲಾ 3 ಮಂತ್ರವು ಬಾರದು ಸ್ತ್ರೋತವು ಬಾರದು ತಂತ್ರದಿ ನೂಕುವೆ ದೇವರ ಪೂಜೆಯ ವಿಧಿಗಳ ಮೌನದಿ ಕರ್ಮಗಳೆಲ್ಲವ ಮಂತ್ರಿಯ ಮಡಿದಿಯು ಪೇಳಿದ ತೆರದೂಳು ಯಂತ್ರ ವಿಧಾನದಿ ನುಡಿಯುವೆ ದಿನವಹಿ4 ಹೀನಕ ವೃತ್ತಿಗಳಿಂದಲಿ ಜೀವನ ವರ್ಣವಿವೇಕವ ನಡಿಸಲಸಾಧ್ಯವು ಜನ್ಮದಿ ವಿಪ್ರನು ನಾನಿಹೆ ಬರಿಸರಿ ತಿನ್ನುತ ಕುಡಿಯುತ ತಳ್ಳುವೆ ಆಯುಷ್ಯ5 ಊಟದ ಚಪಲವು ತಿಂಡಿಯ ಚಪಲವು ನೋಟದ ಚಪಲವು ಚಪಲ ಕಂದರ್ಪನ ಕಾಟದಿ ಸಿಲುಕಿಹೆ ಕೈಟಭಮರ್ದನ ದಾಟುವೆದೆಂತೋ ಭವವನು ಕಾಣೇ 6 ಏರಿದೆ ಬಹುನಿತ್ರಾಣವು ಗಾತ್ರದಿ ಮೀರಿದವಯ ಶಾಸ್ತ್ರಾಭ್ಯಾಸಕೆ ಕಾರುವರೈ ವಿಷ ಬಾಂಧವರೆಲ್ಲರು ಆ ರವಿಸುತನಾಳ್ಗಳಗು ನಾನಿಹೆ 7 ಮಡದೀ ಮಕ್ಕಳ ಪಾಶದಿ ಬಿದ್ದಿಹೆ ದುಡಿಯದ ಕಾರಣ ದುಗುಡವ ತೋರ್ಪರು ನಡೆಯದು ತುಸನನ್ನ ಮಾತೇನಿಲ್ಲ ಮಿಡುಕುತ ಮಿಡುಕುವೆ ಮುಪ್ಪಿನ ಹಿಡಿತದಿ 8 ತೋಡಿದರೂ ಎದೆ ಕಾಣೆನು ಭಕ್ತಿಯ ಕಾಡನು ಸೇರಲೊ ಬಾವಿಗೆ ಬೀಳಲೋ ಜೋಡಿಯು ಆಗಲೊ ಜೋಳಿಗೆ ಪಿಡಿಯಲೊ ಓಡದು ಬುದ್ಧಿಯು ತೋರಿಸು ಹಾದಿ 9 ಕರುಣಾಮಯ ನೀನೆಂಬುವ ಬಿರುದನು ಹಿರಿಯರ ಮುಖದಿಂ ಕೇಳಿಹೆ ಸ್ವಾಮಿಯೆ ಭರವಸೆ ಎನಗಿಹದೊಂದೇ ನಿಶ್ಚಯ ಶರಣನ ಬಿಡದಿರು ಆಪದ್ಬಾಂಧವ 10 ಪಾಮರ ನಿಹೆಬಹು ಕಲುಷಿತ ಚಿತ್ತನು ಭೀಮಾರ್ಚಿತ ಪದಯಗ ನಂಬಿಹೆ ಪ್ರೇಮವ ಸುರಿಸುತ ಕಾಯೈ ಬೇಗನೆ ಸಾಮನೆ ಶರಣೈ “ಶ್ರೀ ಕೃಷ್ಣವಿಠಲಾ” 11
--------------
ಕೃಷ್ಣವಿಠಲದಾಸರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೆಚ್ಚುಕಡಿಮೆಯೆಂದು ಹೆಣಗಾಡಬೇಡಿ ಸಚ್ಚಿದಾನಂದ ಬ್ರಹ್ಮನ ಗುಟ್ಟು ನೋಡಿ ಪ ಪರಮಾತ್ಮ ಕಾಯದೊಳಿರುತಿರ್ಪತನಕಾ ಪರಿಪರಿ ಹೆಸರಿಂದ ಕರಿವರು ಅನಕಾ ಶರೀರ ಭೋಗವ ತೀರಿಸಿಕೊಂಡು ಹೋಹಾಗೆ ಲ್ಲರಿಗೊಂದೆ ಪೆಸರಿಂದ ಕರೆಯುವರಾಗಾ 1 ಅರಸು ಮಂತ್ರಿ ಕರಣೀಕ ತಳವಾರಾ ಕವಿ ಶಾಸ್ತ್ರಿ ಉದಾರಾ ಪರಿಯ ನಾಮಗಳಿಂದ ಉಪಾಧಿಯೋಗಾ ಪರಮಾತ್ಮ ತೊಲಗಲು ಹೆಣವೆಂಬರಾಗಾ 2 ಪರಮಾತ್ಮನಾಟದ ಲೀಲೆ ಇದೆಲ್ಲಾ ಗುರುಪುತ್ರನಾದ ಮಹಾತ್ಮನೆ ಬಲ್ಲಾ ಗುರು ವಿಮಲಾನಂದ ಶರಧಿಯೊಳಾಡಿ ಹಿರಿದು ಕಿರಿದು ಯಾವಲ್ಯುಂಟೆಂದು ನೋಡಿ 3
--------------
ಭಟಕಳ ಅಪ್ಪಯ್ಯ
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು
ಹ್ಯಾಂಗೆ ಉದ್ಧಾರ ಮಾಡ್ಯಾನೋ ಶ್ರೀಹರಿ ಹೀಗೆ ದಿನಗಳಿವಂಗನಿಗೆ ಪ ಬ್ಯಾಗ ಪತಿಗೆ ತಾ ಬಾಗದನುಕೂಲವಾಗಿರದೆ ತಿಳಿದ್ಹಾಗೆ ನಡೆವಳ ಅ.ಪ. ಉದಯದಲೆದ್ದತಿ ಸಜಮಲಳಾಗಿ ತಾ ಮುದದಿ ಪತಿಗೆ ನಮಿಸದವಳಿಗೆ ಪದುಮಾಕ್ಷಿ ತುಳಸಿಯ ಪೂಜಿಸಿ ಮನದಿ ಮಾಧವನ ಭಕ್ತಿಲಿ ಸ್ತುತಿಸದವಳಿಗೆ ಪದುಮನಾಭನೇ ಸರ್ವಪರನೆಂದು ಅರಿಯದೆ ಅಧಮ ಶಾಸ್ತ್ರವ ಕೇಳಿ ಅದರಂತೆ ನಡೆವಳ 1 ಹರಿದಿನದಲಿ ಉಂಡು ಹರಿಯನ್ನದಲೇ ಊರ ತಿರುಗಿ ಹೊತ್ತು ಕಳೆವಳಿಗೆ ಸರಸದಿ ನರಹರಿ ನಾಮ ಸಂಕೀರ್ತನೇ ಇರುಳು ಜ್ಯಾಗರ ಮಾಡದವಳಿಗೆ ದೊರಕಿದಷ್ಟರಲೇ ತಾ ಹರುಷ ಪಡೆದೇ ಧನ ಪತಿ ಹೊರಗ್ಹಾಕ್ವಳ 3 ಗುರು ಹಿರಿಯರ ಅತ್ತೆಮಾವರ ಜರಿದು ತಾ ಹಿರಿಯಳು ಮನಿಗೆ ನಾನೆನುತಿರ್ಪಳು ಪರರ ನಿಂದಿಸಿ ಭೂಸುರರು ಬಂದರೆ ಅನ್ನ ದೊರಕದೆನುತ ಹೇಳಿ ಕಳಹುವಳ ಸರಸ ಮೃಷ್ಟಾನ್ನವ ಹರುಷದಿ ಪತಿದ್ವಾರಾ ಹರಿಗರ್ಪಿಸದಲೇ ತ್ವರದಿ ತಾ ತಿನ್ವಳ 3 ಪತಿ ಅಂತರ್ಯಾಮಿ ಶ್ರೀ ಪತಿಯನರಿದು ತನ್ನ ಪತಿಯ ಸೇವೆ ಮಾಡದಿರುವಳಿಗೆ ಪತಿ ಮುಕ್ತಿ ಪಥವೆಂದು ಪತಿಹಿತದವನೆಂದು ಅರಿಯದೇ ಪತಿ ನೋಡ್ವಳಿಗೆ ಪತಿಯಿಂದಲಂಕೃತವಾಗಿಹ ಮಂಗಳಸೂತ್ರವೇ ಸಕಲ ಭೂಷಣವೆಂದರಿಯದವಳಿಗ್ಹಾಂಗೆ 4 ಪರಮ ಅತ್ತೆಯ ಮಾತು ಶಿರದಿ ಸ್ವೀಕರಿಸಿ ಐವರ ಕೂಡ ಧಾರೆಯರೆಸಿಕೊಂಡಾ ಪರಮ ಪಾವನಳಾದ ಭಾರತೀ ದೇವೇರ ಸ್ಮರಿಸದೇ ಅದರಂತಾಚರಿಸದೆ ಇರುವಳಿಗ್ಹ್ಯಾಂಗೆ 5 ವನವಾಸದಲಿ ಪಾಂಡು ತನಯರ ಕೂಡ ತಾ ಧನ ಸುಖ ಬೇಡದೆÀ ಪೋದವಳು ಘನ ಹಸಿವುತೃಷೆಯಿಂದ ಅನ್ನ ಬೇಡಿದ ದುರ್ವಾಸಾದಿಗಳನು ಆದರಿಸಿದವಳಾ ಆಜನನಿ ದೃಪವ ನಂದನಿಯ ಕೃತ್ಯಗಳನ್ನು ನೆನೆದು ತನ್ನಯ ಮನವನ್ನು ತೊಳೆಯದವಳು 6 ಮರುತಂತರ್ಗತ ಸ್ವಾಮಿ ಸಲಹೆನ್ನದೇ ಪರರಿಗೊಂದೆಡೆ ಇಕ್ಕಿ ಪಂಕ್ತಿ ಭೇದವ ಮಾಡಿ ಕರ್ಮ ಮಾಡ್ವಳಿಗೆ ಪರಮ ಪಾವನನಾದ ಹನುಮೇಶವಿಠಲನ ನೆರೆ ನಂಬದಲೇ ದೇಹ ಸ್ಥಿರವೆಂದು ತಿಳಿವಳಿಗ್ಹ್ಯಾಂಗ 7
--------------
ಹನುಮೇಶವಿಠಲ
ಹ್ಯಾಗೆ ಮುಕ್ತಿಯಾಗುವುದು ಕೂಗಿದರೇನು ಫಲ ಪ ಯೋಗವರಿತು ತನ್ನಲಿರುವ ನಾಗಶಯ್ಯನನ ನೋಡದೆ ಅ.ಪ ಅರಿತೆವೆಂದು ಹಾರಾಡುವ ಅಹಂಕಾರಿಗಳಿಗೆ 1 ವೇದಶಾಸ್ತ್ರ ಓದಲಿಲ್ಲ ವಾದವಿಲ್ಲಿ ಸಲ್ಲ ಬೋಧೆ ಮನಸಿಗಂಟಲಿಲ್ಲ ಬುದ್ಧಿಶೂನ್ಯರಿಗೆಲ್ಲ 2 ನಾವು ನಮ್ಮದೆಂಬುದು ಬಿಡದೆ ಸಾವ ಕುನ್ನಿಗಳಿಗೆ 3 ಬಾಯಿಮಾತಿಲಿಂದಲೇನು ಮಾಯವಾದಗಳೇನು ನ್ಯಾಯಮಾರ್ಗವರಿತವನು ಕಾಯದಾಸೆಮಾಡನು 4 ಗುರುರಾಮವಿಠ್ಠಲನ ಸ್ಮರಣೆಯ ಮಾಡದೆ ದುರುಳ ನರರಿಗೆ 5
--------------
ಗುರುರಾಮವಿಠಲ
124-2ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಆರಣೀ ಸಜ್ಜನರ ಸೌಭಾಗ್ಯ ಏನೆಂಬೆಸೂರಿವರ ಸತ್ಯವರ್ಯ ಭಾವಿ ಸತ್ಯಪ್ರಿಯರಆರಾಧಿಸಿ ಕಳುಹಿಸಿದ ಸ್ವಲ್ಪ ಕಾಲದಲೆಆರಣಿಗೆ ಬಂದರು ಸತ್ಯವಿಜಯಾರ್ಯ 1ಸಂಸ್ಥಾನ ಮೂರ್ತಿಸ್ಥ ಹರೀಪೂಜೆ ವೈಭವವುನಿತ್ಯಪ್ರವಚನ ಪಾಠ ಕೀರ್ತನೆ ಏನೆಂಬೆಸತ್ಯವಿಜಯರು ಯುಕ್ತ ಕಾಲದಲಿ ದೇಹಅದಾರುಢ್ಯ ಹೊಂದಿದರು ರಾಜಗೆ ಹೇಳಿದರು 2ತಮ್ಮ ತರುವಾಯ ಸಂಸ್ಥಾನ ಸರ್ವಾಡಳಿತಶ್ರೀಮನೋಹರ ಹರಿಪ್ರಿಯರು ಸತ್ಯವರ್ಯಸುಮನೋಹರ ಸತ್ಯಪ್ರಿಯ ತೀರ್ಥ ನಾಮದಲಿರಮಾರಮಣನ ಸೇವೆಗೆ ವಹಿಸಬೇಕೆಂದು 3ಆದ ಕಾರಣ ಆ ಸ್ವಾಮಿಗಳ ಕರೆತರಿಸಿಭಕ್ತಿ ವಿನಯದಿ ಮಠವ ಒಪ್ಪಿಸಬೇಕೆಂದುಹಿತದಿ ಆಜ್ಞಾಪಿಸಿ ಹರಿಪುರಯೈದಿದರುಚೈತ್ರ ಕೃಷ್ಣ ಪುಣ್ಯದಿನ ಏಕಾದಶಿ ದ್ವಾದಶಿಲಿ 4ಆರಣೀರಾಜನು ಸತ್ಯವರ್ಯ ತೀರ್ಥರಲಿಅರಿಕೆ ಮಾಡಿ ಸ್ವಾಮಿಗಳು ಕೆಲವು ದಿನಮೇಲ್ಆರಣಿಗೆ ಪೋದರು ಶ್ರೀಮಠದ ಆಡಳಿತಹರಿಪ್ರೀತಿ ಸೇವೆಗೆ ಕೊಂಡರು ತಾವು5ಮೊದಲೇವೆ ಶ್ರೀ ಸತ್ಯವರ್ಯ ತೀರ್ಥರ ಮಠಸಂಸ್ಥಾನ ವೈಭವದಿ ಪ್ರಕಾಶಿಸುತ್ತಿತ್ತುಸತ್ಯ ವಿಜಯರ ಕೋರಿಕೆಯಂತೆ ಈವಾಗಹೊಂದಿದರು ಸತ್ಯವಿಜಯರ ಸಂಸ್ಥಾನ 6ಸತ್ಯಾಭಿನವರ ಪದ್ಧತಿಯಲ್ಲಿ ಶ್ರೀಮಠಸತ್ಯಪೂರ್ಣ ಸತ್ಯವಿಜಯರಿಂದ ವೈಭವದಿಇದ್ದ ಆಮಠ ಪೀಠ ಅಲಂಕರಿಸಿದರೀಗಸತ್ಯವರ್ಯ ವೈರಾಗ್ಯ ನಿಧಿಯು ಶ್ರೀಮಾನ್ 7ಬಾದರಾಯಣರಾಮ ಯದುಪತಿಯ ಸೇವೆಗೆಪ್ರೀತಿಗೆ ಸ್ವಾಮಿಗಳು ಮಠವನ್ನು ಹೊಂದಿಸತ್ಯವಿಜಯರು ಕೋರಿದಂತೆ ತಮ್ಮಯನಾಮಸತ್ಯಪ್ರಿಯತೀರ್ಥರೆಂದು ಕೊಂಡರು ಮುದದಿ 8ಧನ ಸತ್ಯಪ್ರಿಯ ತೀರ್ಥರುವಿಜೃಂಭಣೆಯಿಂದ ಚರಿಸಿ ಪುರಜನರ್ಗೂರಾಜನಿಗೂ ಫಲ ಮಂತ್ರಾಕ್ಷತೆಗಳ ಕೊಟ್ಟುರಾಜ ಮಾರ್ಯಾದೆ ಕೊಂಡುಹೊರಟರು ಅಲ್ಲಿಂದ 9ಆಂಧ್ರದೇಶದ ಕಡಪ ಉತ್ತರ ಕರ್ನಾಟಕಮತ್ತು ದಕ್ಷಿಣ ಕರ್ನಾಟಕ ಶ್ರೀರಂಗಇಂಥ ಸ್ಥಳಗಳಲ್ಲಿ ಸಂಚಾರ ಮಾಡುತ್ತಾಹಿತದಿ ಅನುಗ್ರಹಿಸಿದರು ಭಕ್ತವೃಂದಕ್ಕೆ 10ಪೀತಾಸಿಂಗ ರಾಘವಜಿ ಮುರಾರಿ ಮೊದಲಾದಕೃತಜÕ ಜನ ಪ್ರಮುಖರ ಭಕ್ತಿ ಯುತವಾದಭೂದಾನ ಗ್ರಾಮದಾನ ಮಾಡಿದ್ದ ಸ್ವೀಕರಿಸಿಶ್ರೀದನಿಗೆ ಅರ್ಪಿಸುತ ಒಲಿದರು ಸಜ್ಜನಕೆ 11ರಾಯಚೂರು ಹರಿಯಾಚಾರ್ಯರೆಂಬ ವೈಷ್ಣವಕಾಯವಾಙ್ಮನ ಇದ್ದ ಬ್ರಾಹ್ಮಣ ದಂಪತಿಯುಪ್ರಿಯ ವತ್ಸರುಗಳೊಡೆ ಸ್ವಾಮಿಗಳ ಕಡೆ ಬಂದುವಿನಯದಿ ನಮಿಸಿ ನಿಂತರು ಮಠದಲ್ಲಿ 12ಹರಿಯಾಚಾರ್ಯರ ಮಕ್ಕಳಲಿ ರಾಮಾರ್ಯಸ್ಫುರದ್ವರ್ಚಸ್ ಯುತ ಬಹುಚೂಟಿಯಾದ ಮಗನುಶ್ರೀ ಶ್ರೀಗಳು ಆ ಹುಡುಗಗೆ ಮಠದಲ್ಲಿಶಾಸ್ತ್ರಾಭ್ಯಾಸಾದಿಗಳ ಒದಗಿಸಿದರು 13ಕಾಲಕ್ರಮದಲ್ಲಿ ವಟುಗೆ ವಿವಾಹ ಮಾಡಿದರುಮಕ್ಕಳು ರಾಮಚಾರ್ಯರಿಗೆ ಎರಡುಮಾಲೋಲ ಇಚ್ಛೆಯಿಂ ಸ್ವಾಮಿಗಳು ದಕ್ಷಿಣಸ್ಥಳ ಯಾತ್ರೆ ಗೈದರು ಸೇತು ಸಮೀಪ 14ಮಾನಾಮಧುರೆಯ ವೇಗವತೀ ತೀರವುತನ್ನ ಮಠವನ್ನು ಸ್ಥಾಪಿಸಿದರು ಅಲ್ಲಿಘನಮಹಾ ಸೂರಿಯು ರಾಮಚಾರ್ಯರನ್ನತನ್ನ ಸಮೀಪದಲ್ಲೇ ನಿಲ್ಲಿಸಿದರು 15ಬಹು ವರ್ಷ ಸಂನ್ಯಾಸ ರತ್ನರಾಗಿ ಬೆಳಗಿವಹಿಸಿ ಸಂಸ್ಥಾನವ ಏಳು ವರ್ಷಶ್ರೀಹರಿಗೆ ಪ್ರಿಯರಾಮಾಚಾರ್ಯರಿಗೆ ಸಂನ್ಯಾಸವಿಹಿತದಿ ಇತ್ತರು ಶ್ರೀ ಸ್ವಾಮಿಗಳು 16ಸತ್ಯಪ್ರಿಯ ಗುರುವರ್ಯ ತಮ್ಮ ಪ್ರಿಯ ಶಿಷ್ಯರಿಗೆಸತ್ಯಬೋಧ ತೀರ್ಥವೆಂಬ ಸಂನ್ಯಾಸ ನಾಮವನ್ನಿತ್ತುಚೈತ್ರ ಶುದ್ಧ ಹದಿಮೂರನೆ ಪುಣ್ಯ ದಿನದಿಯದುಪತಿಯ ಧ್ಯಾನಿಸುತ ಹರಿಪುರಯೈದಿದರು 17ಮತ್ತೊಂದು ಅಂಶದಲಿ ಬೃಂದಾವನದಲ್ಲಿನಿಂತಿಹರು ಅಶ್ವಾಸ್ಯಧ್ಯಾನಪರರಾಗಿಹಿತದಿ ಕೊಡುತಿಹರು ವಾಂಛಿತವ ಶರಣರಿಗೆಸದಾನಮೋ ಮಾಂಪಾಹಿ ಗುರುವರ್ಯ ಶರಣು 18ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 19 ಪ
--------------
ಪ್ರಸನ್ನ ಶ್ರೀನಿವಾಸದಾಸರು
130-1ದ್ವಿತೀಯ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪದ್ವಿತೀಯಾಶ್ರಮವನ್ನು ಯುಕ್ತ ಕಾಲದಿ ಕೊಂಡುಸದ್ಧರ್ಮ ಆಚರಿಸಿ ಗೃಹಕೃತ್ಯದಲ್ಲಿಇದ್ದರು ಜಯತೀರ್ಥ ಆಚಾರ್ಯ ಆದರುಸದಾ ಹರಿಯಲ್ಲೇ ಧಾವಿಸಿತು ಮನಸ್ಸು 1ಕ್ಷೀರಫೇಣವೊಲ್ ತೂಲಿಕ ಹಂಸ ತಲ್ಪವುಶುಭ್ರ ಕನ್ನಡಿ ಚಿತ್ರಾಲಂಕಾರಗಳುಕೊರತೆ ಏನೂ ಇಲ್ಲ ಐಹಿಕ ಸಂಪತ್ತಿಗೆಸ್ಪುರದ್ರೂಪಿಣಿಸತಿಸುಶೀಲೆ ಸುಗುಣೆ2ಪ್ರಾರಬ್ಧ ಕರ್ಮನಿಮಿತ್ತ ಶ್ರೀಹರಿಯೇವೆಪರಿಪರಿಭೋಗಗಳ ಒದಗಿಸಿದ್ದೆಲ್ಲಹರಿಗೆ ಅರ್ಪಿಸುತ ಅನುಭವಿಸುತಿರಲಾಗಹೊರಗಿಂದ ಓರ್ವನು ಹಾಡಿದನು ನುಡಿಯ 3ಮಂಚಬಾರದು ಮಡದಿಬಾರಳು ಕುಂಚುಕನ್ನಡಿ ಬಾರದುಸಂಚಿತಾರ್ಥವು ಮತ್ತೆ ಬಾರದು ಮುಂಚೆ ಮಾಡಿರಿ ಧರ್ಮವಕಂಚಿನ ಗಂಟೆ ಧ್ವನಿ ಅಂದದಿ ಈ ನುಡಿಕೇಳಿಮಂಚದಿಂದಿಳಿದರು ಕುಳಿತರು ಚಿಂತೆಯಲಿ 4ಅಕಳಂಕ ಗುಣನಿಧಿ ನಾರಾಯಣ ಮಾಯೇಶಸಂಕರುಷಣ ಪ್ರದ್ಯುಮ್ನ ಅನಿರುದ್ಧಶ್ರೀಕರಾರ್ಚಿತ ಪಂಚರೂಪನ ಪ್ರೇರಣೆಯೆಂದುಮಾಕಳತ್ರನ ಸ್ಮರಿಸಿ ಹೊರಟರು ಹೊರಗೆ 5ಲೌಕಿಕ ವಿಷಯ ವಿಜೃಂಭಣಾಡಂಬರವಲೆಕ್ಕಿಸದೆ ವೈರಾಗ್ಯ ಮನಪಕ್ವದಿಭಕುತಿ ಉನ್ನಾಹದಿ ಅವಧೂತಚರ್ಯದಿಶ್ರೀಕರ ನಾರಾಯಣನ ಸೇವಿಸಿದರು 6ತೀರ್ಥಕ್ಷೇತ್ರಾಟನ ಮಾಡಲಿಕೆ ಹೊರಟರುಹಾದಿಯಲಿ ಸರ್ಪವು ಅಡ್ಡ ಬರಲುವೇದ್ಯವಾಯಿತು ಜಯತೀರ್ಥ ಮುನಿಗಳು ತಾವೇಬಂದು ತಡೆದರು ಸರ್ಪರೂಪದಲಿಯೆಂದು 7ಈ ಪುಣ್ಯ ಶ್ಲೋಕರು ಜಯತೀರ್ಥವಿಪ್ರಸರ್ಪರೂಪಶೇಷದೇವರ ಜಯಮುನಿಗಳಅಭಿಪ್ರಾಯವನ್ನರಿತು ಶಾಸ್ತ್ರಪ್ರವಚನಶಿಷ್ಯೋಪದೇಶದಿ ಹರಿಯ ಸೇವಿಸಿದರು 8ಮಲಾಪಹಾರಿಣಿ ತೀರಸ್ಥ ಮುನವಳ್ಳಿಶೀಲತಮ ಅಡವಿ ಪ್ರದೇಶ ಗ್ರಾಮದಲಿಕುಳಿತು ಶಿಷ್ಯರಿಗೆ ಸುಧಾದಿಗಳ ಪೇಳಿದರುಪೊಗಳ ಬಲ್ಲೆನೆ ಇವರ ಮಹಿಮೆಸಾಕಲ್ಯ9ಸುಮಧ್ವವಿಜಯ ಪಾರಾಯಣ ಮಾಡುತ್ತಕಲ್ಮಷ ಕಿಲುಬು ಹತ್ತಿದ ಪಾತ್ರೆಯನ್ನಕಲ್ಮಷ ಕಿಲಬನ್ನ ತ್ವರಿತದಿ ನೀಗಿಸಿಹೇಮಮಯ ಮಾಡಿದರು ಜನರು ಕಂಡಿಹರು 10ಹನ್ನೆರಡುಬಾರಿಸುಧಾದಿಗಳ ಪ್ರವಚನ ಮಾಡಿವಿನಯ ಸಂಪನ್ನಶ್ರದ್ಧಾಳು ಶಿಷ್ಯರಿಗೆಹನ್ನೆರಡಾವರ್ತಿ ಸುಧಾ ತತ್ವ ಪ್ರಕಾಶಿಕ ಪೇಳಿಘನಮಹಿಮ ಟಿಪ್ಪಣಿ ಮಾಡಿಹರು ಎರಡಕ್ಕೂ11ಭುಜಗಶಾಯಿ ಕ್ಷೀರಾಬ್ಧಿವಾಸನ ಪ್ರೀತಿಗೂಸುಜನಅಧಿಕಾರಿಗಳ ಉದ್ಧಾರಕ್ಕುರಚಿಸಿ ಗ್ರಂಥಗಳನ್ನ ಕೃತಕೃತ್ಯ ಮನದಲ್ಲಿರಾಜರಾಜೇಶ್ವರಿ ಶ್ರೀ ಹರಿಗರ್ಪಿಸಿದರು 12ಸತ್ಯಸಂಧಾರ್ಯರ ಹಸ್ತಪದ್ಮೋತ್ಪನ್ನಸತ್ಯವರ ತೀರ್ಥರ ಕರಕಂಜದಿಂದಜಯತೀರ್ಥಾಚಾರ್ಯರು ಕೊಂಡರು ತುರ್ಯಾಶ್ರಮತೋಯಜಾಕ್ಷಶ್ರೀ ವಿಷ್ಣುತೀರ್ಥ ನಾಮದಲಿ13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ನಮಹಾಭಕ್ತ ಶ್ರೀ ವಿಷ್ಣು ತೀರ್ಥಾರ್ಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-2ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಜಯದಾಸರಲಿ ಗೋಪಾಲದಾಸರಲಿನಿಜ ಗುರುಭಕ್ತಿ ವರ್ಧಿಸಿ ಹರಿದಾಸನಿಜಪಂಥದಿ ತನ್ನ ಸೇರಿಸೆ ಅನುಗ್ರಹಿಸೆನಿಜಭಾವದಲಿ ಆಚಾರ್ಯ ಬೇಡಿದರು 1ನರಸಿಂಹ ದಾಸರಾಗಿಹ ತಂದೆಮುಖದಿಂದವರಗಾಯತ್ರಿ ಮಂತ್ರ ಉಪದಿಷ್ಟರಾಗಿವರದೇಂದ್ರರಲಿ ಮೂಲಟೀಕಾದಿ ಗ್ರಂಥಗಳುಮಂತ್ರೋಪದೇಶವು ಕೊಂಡವರು ಮೊದಲೇ 2ಶ್ರೀನಿವಾಸಾಚಾರ್ಯರ ಕೋರಿಕೆಯಮನ್ನಣೆಮಾಡಿದರು ದಾಸಾರ್ಯರುಘನಮಹಾಸಚ್ಛಾಸ್ತ್ರ ತತ್ತ್ವ ವಿಷಯಗಳಕನ್ನಡಮಾತಲ್ಲಿ ಬೋಧಿಸಿದರು 3ಪ್ರಣವಹರಿ ಜಾಗ್ರದಾದ್ಯವಸ್ಥಾ ಪ್ರಣಯನಕೃಷ್ಣರಾಮ ನಾರಸಿಂಹವರಾಹವಿಷ್ಣು ಪರಂಜ್ಯೋತಿ ಪರಂಬ್ರಹ್ಮವಾಸುದೇವಏನೆಂಬೆ ಶ್ರೀಶ ಗುಣಕ್ರಿಯಾ ರೂಪಮಹಿಮೆ 4ಗಾಯತ್ರಿ ನಾಮಆಮ್ನಾಯಗಾಯನ ಮಾಡಿದಯದಿ ಜಗವೆಲ್ಲ ರಕ್ಷಿಸುವ ಸ್ವಾಮಿಹಯಗ್ರೀವ ಗಾಯತ್ರಿ ಮಂತ್ರ ಪ್ರತಿಪಾದ್ಯನುನಾರಾಯಣವಾಸುದೇವವೈಕುಂಠ5ತ್ರಾತಹಯ ಶೀರ್ಷನೆ ಗಾಯತ್ರಿ ನಾಮನುಭೂತಪೂರ್ಣ ವಾಗ್ವಶಿ ಶರೀರವ್ಯಾಪ್ತಪೃಥ್ವಿ ಆಶ್ರಯ ಪ್ರಾಣಾಧಾರ ಹೃದಯನುತ್ರಿಧಾಮ ಪಾದತ್ರಯ ಜಗತ್ಪಾದ ಸದೃಶ 6ಜ್ಞಾನ ಸುಖಬಲಪೂರ್ಣ ಸರ್ವ ಆಧಾರನುದಿನಪತೇಜಃ ಪುಂಜಚೇಷ್ಟಕ ಸ್ಫೂರ್ತಿದನುವನಜಜಾಂಡದ ಸರ್ವಕರ್ತನೂ ದೇವಭಜನೀಯ ಧ್ಯಾತವ್ಯ ಶ್ರೀ ನಾರಾಯಣನು 7ವರ್ಣಗಳು ನಿತ್ಯವು ವರ್ಣಾಭಿಮಾನಿಗಳೊಳ್ವರ್ಣಪ್ರತಿಪಾದ್ಯಹರಿ ಶ್ರೀ ಸಹ ಇಹನುಪೂರ್ಣ ಸುಗುಣಾರ್ಣವನುನಿರ್ದೋಷಸರ್ವಜಗತ್ಜನ್ಮಾದಿ ಕರ್ತನು ನಿಗಮೈಕವೇದ್ಯ 8ಶಬ್ದಗಳು ಸರ್ವವೂ ಮುಖ್ಯ ವೃತ್ತಿಯಲಿಮಾಧವನ್ನಲ್ಲಿಯೇ ವಾಚಕವಾಗಿವೆಯುವೈದಿಕ ಶಬ್ದಗಳು ಹರಿಗೇವೆ ಅನ್ವಯವುಸಂಸ್ತುತ್ಯ ದ್ರಷ್ಟವ್ಯ ಅನುಪಮೈಕಾತ್ಮ 9ಸತ್ಯಜ್ಞಾನಾನಂತಆನಂದಮಯಹರಿಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯವ್ಯಾಪ್ತನು ಸರ್ವತ್ರ ಸರ್ವದಾ ಸರ್ವಕ್ಕೂಆಧಾರ ಅಕ್ಷರನು ಕ್ಷರಾಕ್ಷರೋತ್ತಮನು 10ರಾಜಿಸುತಿಹ ನಮ್ಮ ದೇಹಾಖ್ಯ ರಥದಲ್ಲಿರಾಜರಾಜೇಶ್ವರನು ಶ್ರೀ ಹ್ರೀ ಸಮೇತಯುವರಾಜ ವಾಯುದೇವನ ಸೇವೆಕೊಳ್ಳುತಿಹರಾಜೀವೇಕ್ಷಣಹರಿಪ್ರಾಣನಾಮ11ಪ್ರಸ್ಥಾನತ್ರಯ ವೈದಿಕಶಾಸ್ತ್ರ ವಿಷಯಗಳುಇತಿಹಾಸಭಾಷಾತ್ರಯಪುರಾಣಗಳುಪ್ರತಿರಹಿತ ಸರ್ವೋತ್ತಮ ಸ್ವಾಮಿ ಶ್ರೀಶನ್ನಚಿಂತಿಸಿ ಕಾಣಲುಬಗೆ ತೋರಿಸುತಿವೆ 12ಆಚರಿಸಿ ಜ್ಞಾನ ಪೂರ್ವಕವಿಹಿತಕರ್ಮಅಚ್ಚಭಕ್ತಿಯಿಂದ ಚಿಂತಿಸಿ ಸ್ತುತಿಸೆಅಚ್ಚುತ ಸ್ವತಂತ್ರನು ಮುಖ್ಯ ಕಾರಣ ವಿಷ್ಣುಪ್ರೋಚ್ಯ ಸುಖವೀವನು ತೋರಿತಾ ಒಲಿದು 13ಮಧ್ವಮತ ಸಿದ್ಧಾಂತ ಪದ್ಧತಿ ಅನುಸರಸಿಸದನು ಸಂಧಾನ ಭಕ್ತಿ ಉನ್ನಾಹದಿಮಾಧವನ ಗುಣಕ್ರಿಯಾ ರೂಪಗಳ ಕೊಂಡಾಡಿಪದವಾಕ್ಯ ಶ್ಲೋಕ ಪದ್ಯಗಳ ನುಡಿಯುವುದು 14ಒಂದೊಂದು ಕೀರ್ತನೆ ಪದ್ಯ ಗ್ರಂಥಗಳಲ್ಲೂಇಂದಿರೇಶನು ತತ್ತತ್ ಪ್ರತಿಪಾದ್ಯ ಇಹನುಪದ್ಯ ಕೀರ್ತನೆ ಗ್ರಂಥ ವಿಷಯ ಶ್ರೀಹರಿಯಮಂತ್ರ ಚಿಂತಿಸಿ ಅರ್ಪಿಸಬೇಕು ರಚನೆ 15ಬೃಹತೀ ಸಹಸ್ರಸ್ವರ ವ್ಯಂಜನಾಕ್ಷರ ವಾಚ್ಯಶ್ರೀಹರಿಅಹರ್ನಿಶಿಕಾಯುವ ದಯಾಳುಅಹರಹ ಸದುಪಾಸ್ಯ ಬ್ರಹ್ಮ ಶಿವ ಈಡ್ಯನುದೇಹ ಒಳಹೊರಗಿಪ್ಪ ಸರ್ವಾಂತರ್ಯಾಮಿ 16ಸ್ವತಃ ಅವ್ಯಕ್ತನು ಸರ್ವದಾ ಸರ್ವತ್ರಸ್ವತಂತ್ರ ಪೂರ್ಣಜ್ಞಾನ ಆನಂದರೂಪಸ್ವಪ್ರಯತ್ನದಿ ಅಲ್ಲ ಮುಮುಕ್ಷುಗಳಿಗಪರೋಕ್ಷಮೋದಮಯ ಶ್ರೀಹರಿಯ ಪ್ರಸಾದದಿಂದಲೇ 17ಜ್ಞಾನಿಗೆ ಪ್ರತ್ಯಕ್ಷ ಹರಿಯ ಅವ್ಯಕ್ತತ್ವಅನ್ಯರಿಗೆ ವೇದ್ಯ ಸೂಕ್ಷ್ಮತ್ವಾನುಮಾನದಿತನ್ಮಾತ್ರ ತೇಜಸ್ಸು ಭೌತಿಕವು ಎಂಬಂಥಅಗ್ನಿಯ ಸೂಕ್ಷ್ಮತ್ವ ಸ್ಥೂಲತ್ವವೋಲ್ಲ 18ಎಲ್ಲೆಲ್ಲೂ ಎಂದೆಂದೂ ಏಕಪ್ರಕಾರದಲ್ಲಿಳಾಳಕನು ಅವ್ಯಕ್ತರೂಪ ಇರುತಿಹನುಇಲ್ಲ ಇವಗೆ ಎಂದೂ ಎಲ್ಲೂ ಪ್ರಾಕೃತರೂಪಒಲಿದು ಕಾಣುವ ತನ್ನ ಇಚ್ಛೆಯಿಂದಲೇ 19ಮೂಲರೂಪದಿ ಸೂಕ್ಷ್ಮತ್ವ ಅವತಾರಗಳಲಿಸ್ಥೂಲತ್ವವೆಂಬುವ ವಿಶೇಷವು ಇಲ್ಲಇಳೆಯಲ್ಲಿ ಕೃಷ್ಣಾದಿ ರೂಪಗಳ ಕಂಡದ್ದುಮಾಲೋಲನಿಚ್ಛೆಯೇ ಪುರುಷಯತ್ನದಿ ಅಲ್ಲ 20ಅರೂಪಮ ಕ್ಷರಂಬ್ರಹ್ಮ ಸದಾವ್ಯಕ್ತಂಆತ್ಮಾವರೇ ದ್ರಷ್ಟವ್ಯ ಎಂದುಈ ರೀತಿ ಅವ್ಯಕ್ತತ್ವ ಅಪರೋಕ್ಷತ್ವಎರಡು ಪೇಳುವಶ್ರುತಿವಿರೋಧವು ಇಲ್ಲ21ಆರಾಧನಾದಿ ಪ್ರಯತ್ನಕ್ಕೂ ಅವ್ಯಕ್ತಉರುಸುಖಮಯಅಪ್ರಾಕೃತಅವಿಕಾರಿಪರಮಪುರುಷ ಹರಿಯ ಇಚ್ಛಾಪ್ರಸಾದದಿಂಅಪರೋಕ್ಷಮೋಕ್ಷಗಳು ಲಭ್ಯಯೋಗ್ಯರಿಗೆ22ವನಜನಾಭನರೂಪಗುಣಮಹಿಮೆಕೇಳಿಅನುಭವಕೆ ಬರುವಂಥ ಮನನ ಸುಧ್ಯಾನಅನಘಹರಿಯಲಿ ಭಕ್ತಿ ಸುಖಬಾಷ್ಪ ಸುರಿಸೆತನ್ನಿಚ್ಚೆಯಿಂದಲೆ ಅಪರೋಕ್ಷವೀವ 23ಬ್ರಹ್ಮಪುರವನರುಹವೇಷ್ಮವ್ಯೋಮಸ್ಥದೇಹ ಸರ್ವಾಂಗಸ್ಥ ಸರ್ವನಾಡಿಸ್ಥಬಹಿರಂತರ ಸರ್ವಮೂರ್ತಾ ಮೂರ್ತಸ್ಥಮಹಾಮಹಿಮ ಹರಿಯು ಸರ್ವತ್ರ ಪ್ರಸಿದ್ಧ 24ಸರ್ವತ್ರ ವ್ಯಾಪ್ತನು ಸತ್ತಾದಿ ದಾತನುಸರ್ವದೊಳು ಸದಾಪೂರ್ಣಅಖಿಳಸಚ್ಛಕ್ತಸರ್ವೇಶ ಸರ್ವಾಧಾರನಾಗಿಹ ಸ್ವಾಮಿದೇವಿ ಲಕ್ಷ್ಮೀರಮಣ ವಿಷ್ಣು ನರಸಿಂಹ 25ಉಗ್ರವೀರನು ಮಹಾವಿಷ್ಣು ತೇಜಃಪುಂಜಸುಪ್ರಕಾಶಿಪ ಸರ್ವತೋಮುಖ ನೃಸಿಂಹಅರಿಗಳಿಗೆ ಭೀಷಣನು ಭಕ್ತರಿಗೆ ಇಷ್ಟಪ್ರದಸಂರಕ್ಷಕ ನಮೋ ಮೃತ್ಯುಗೇ ಮೃತ್ಯು 26ಪ್ರೋದ್ಯರವಿನಿಭದೀಪ್ತ ವರ್ತುಲ ನೇತ್ರತ್ರಯಹಸ್ತದ್ವಯ ಆಜಾನು ಮಹಾಲಕ್ಷ್ಮಿಯುತನುಸುದರ್ಶಿನಿ ಶಂಖಿಯುತ ಕೋಟ್ಯಾರ್ಕಾಮಿತತೇಜಉತ್ಕøಷ್ಟಅಖಿಳಸಚ್ಛಕ್ತ ನರಸಿಂಹ27ಇಂಥಾ ವಿಷಯಗಳ ಜಿಜ್ಞಾಸ ಉಪದೇಶಹಿತಮಾತ ಗೋಪಾಲದಾಸಾರ್ಯರಿಂದಮುದದಿಂದ ಶ್ರೀನಿವಾಸ ಆಚಾರ್ಯರು ಕೊಂಡುಪಾದಕೆರಗಿಹರಿಅಂಕಿತ ಬೇಡಿದರು28ವಾರಿಜಾಸನ ಪಿತನ ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 29- ತೃತೀಯ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಅಂದೆ ನಿರ್ಣಯಸಿದರು ಕಾಣೋ |ಇಂದಿರಾಪತಿ ಪರದೈವತವೆಂಬುದ ಪಅಂದು ಚತುರ್ಮುಖ ನಾರದನಿಗೆ ತನ್ನ |ತಂದೆ ಶ್ರೀಹರಿ ಪರದೈವವೆಂದು ||ಸಂದೇಹಗಳ ಪರಿಹರಿಸಿಹ ದ್ವಿತೀಯದಸ್ಕಂಧದೊಳಯ್ದನೆಯ ಅಧ್ಯಾಯದಲಿ 1ಅಂದು ಕಪಿಲದೇವ ದೇವಹೊಲೆಗೆ ತಾನು |ಚೆಂದದ ತತ್ತ್ವವನೆಲ್ಲ ಬೋಧಿಸಿದ ||ಅಂದದಲರ್ಜುನ - ಉದ್ದವರಿಗೆ ಅಂದಾ - |ನಂದದಿ ಗೀತಾಶಾಸ್ತ್ರವನೊರೆದನೆಂದು 2ವೇದೈಶ್ಚ ಸರ್ವೋರಹಮೇವ ವೇದ್ಯಃ |ವೇದವಿಧಾಯಕ ನಾಮದವನು ||ವೇದಾಕ್ಷರಗಳು ಹರಿನಾಮಗಳೆಂದು |ವೇದಾಂತ ಸಿದ್ಧಾಂತಗಳಲಿ ಪೇಳಿದರೆಂದು 3ರಾಜಸ -ತಾಮಸ ಪೌರಾಣಗಳಿವು |ರಾಜಸ -ತಾಮಸ ಜೀವರಿಗೆ ||ರಾಜಸ -ತಾಮಸ ಗತಿಗೋಸ್ಕರ ಮುನಿ - |ರಾಜ ವ್ಯಾಸನು ಮೋಹಕವೆಂದು ಪೇಳಿದ 4ಬಿಡು ಪಾಷಂಡಮತದ ದುರ್ಬುದ್ಧಿಯ |ಬಿಡದೆಮಾಡು ವೈಷ್ಣವಸಂಗವ ||ಧೃಡಭಕ್ತಿಯಿಂದ ಶ್ರೀಹರಿಯ ಪೂಜಿಸಿದರೆ |ಮೃಡಪ್ರಿಯ ಪುರಂದರವಿಠಲನೊಲಿವನೆಂದು 5
--------------
ಪುರಂದರದಾಸರು
ಆ ಸುಖ ಹರಿಮರೆದವಗಯ್ಯದೋಷಾಂಧಃತಮದೊಳಗೇನು ಸುಖ ಪ.ಕಂಠತ ವ್ಯಸನ ಹೊಲಬಿಲ್ಲದೆ ಧರ್ಮಕಂಟಕಶಾಸ್ತ್ರವಿಚಾರಕಗೆಎಂಟುವೃಷಭಹೂಡಿ ಮಹಾಶ್ರಮಿಸಿ ಬರೆದಂಟು ಬೆಳೆದವನಿಗೇನು ಸುಖ 1ಅನಿರುದ್ಧಗಖಿಳವರ್ಪಿಸಿದಾನಲ್ಪಗುಣದೆ ಮತಿ ದೃಢವಿಲ್ಲದ ಮಾನವಗೆಹಣ ವೆಚ್ಚಿಸಿ ರಿಣದೆಗೆದಿಟ್ಟ ಧಾನ್ಯವತೃಣಸಮ ವಿಕ್ರಿಸಲೇನು ಸುಖ 2ಶಂಖಪಾಣಿಯ ನಿಂದಿಸಿ ಕರ್ಮಶಕ್ತಿಯಶಂಕರ ರವಿಗಣೋಪಾಸಕಗೆಸಂಖ್ಯೆ ಇಲ್ಲದ ವಸ್ತು ನಿಶ್ಶೇಷದಿಸುಂಕಕೆ ತೆತ್ತಿದರಾವ ಸುಖ 3ಆಧ್ಯಾತ್ಮಾನುಭವ ಗುರುಕೃಪೆ ಇಲ್ಲದೆವಿದ್ಯೋನ್ಮತ್ತ ದಯಾಶೂನ್ಯಗೆನದ್ಯೋಲ್ಲಂಘಿಸಿ ದಡದಲಿ ನಾವೆ ಮುಳುಗಿದರೆ ಪ್ರಾಣಿಗಳಿಗೇನು ಸುಖ 4ಪ್ರಸನ್ನವೆಂಕಟ ಪದಸರೋರುಹಗಳಪ್ರಸನ್ನೀಕರಿಸದೆ ಸಾಹಸಬಡುವಅಶುಭದನುಜರು ತಪಮಾಡಿ ತುದಿಯಲಿವಿಷಮಗತಿಗ್ಹೋಗಲೇನು ಸುಖ 5
--------------
ಪ್ರಸನ್ನವೆಂಕಟದಾಸರು