ಒಟ್ಟು 3651 ಕಡೆಗಳಲ್ಲಿ , 115 ದಾಸರು , 2098 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಛಂದದಿಂದ ಬಂದು ಸಲಹೊ ಫಂಡರೀಶ ನಿನ್ನ ನಂಬಿದೆ ಪ ತಂದೆ ನೀನೆ ಸರ್ವರಿಗೆ ಅನಿಮಿತ್ತ ಬಂಧುವಲ್ಲವೆ ಅ.ಪ ದೋಷಿನಾನು ಮೂಢನಾನು ವಲಿಯೆನೆಂದು ಏಕೆ ಹೇಳು ದೋಷದೂರ ಜ್ಞಾನರೂಪ ಬಿಂಬ ನಿನ್ನ ದಾಸನಲ್ಲವೆ 1 ಎಲ್ಲಾ ಸತ್ತಾದಾತ ನೀನು ಇಲ್ಲ ನಿನಗೆ ಭೇದವೇನು ನಲ್ಲ ಶರಣು ಎಂದಮೇಲೆ ವಲ್ಲೆ ಎನ್ನೆ ಬಿರುದು ಪೋಗದೆ 2 ಕಾಕುಮಾಡಿ ಎನ್ನ ಜಗದಿ ನೂಕಿ ಬಿಟ್ಟು ಭಂಟರಲ್ಲಿ ಸಾಕದೇನೆ ಬಿಟ್ಟರೀಗ ಲೋಕನಗದೆ ಭಕ್ತರಾಣೆ 3 ಮುಂದುಮಾಡಿ ಹಿಂದೆ ಎನ್ನ ಹಿಂದು ಮಾಡಿ ಈಗ ನಗುವೆ ಇಂದಿರೇಶ ನಿನ್ನ ನ್ಯಾಯ ಮಂದನಾನು ಅರಿಯೆ ಶರಣು 4 ಲಕುಮಿ ಮೊದಲು ಎಲ್ಲಾ ಜಗಕೆ ಶಕುತ ನೀನೆ ಒಬ್ಬ ಆಶ್ರಯ ನೀಡಿಕಾಯೋ ಬೇಗನೆ 5
--------------
ಕೃಷ್ಣವಿಠಲದಾಸರು
ಛಿ ಛಿ ಮನುಜನೆ ನಿನ್ನನೆ ತಿಳಿಯೋಚಿಕ್ಕ ಬುದ್ಧಿಯ ನೀನೀಗ ಮಾಡಬೇಡ ಪ ಎಲ್ಲ ದಿನಗಳು ಆಗಲೋ ಈಗಲೋ ಒಳ್ಳಿತಾಗಿ ಬಿಡು ಸಂಸಾರವನುಸರ್ವರನು ನಿನಗೊಪ್ಪಿಸೆಯೋ ಸತಿಸುತ ರೆಂಬರುಏನಾದರೆಂದು ತಿರುಗಿ ಪರಾಮರಿಸಿ ಕೊಂಬೆಯಾ 1 ತುದಿಗಟ್ಟೆಯಲಿ ತಂಬಿಗೆ ಇಟ್ಟರೆ ತೆಗೆಯಿರಿ ಒಳಯಿಕೆ ನೀವೆಂಬಿತುದಿಗಟ್ಟೆಯಲಿಹ ತುಂಬಿಗೆಯಿಂದಲಿತಿರುಗಿ ಕುಡಿಯುವೆಯೋ ನೀನೀರ2 ಮನೆ ಮಾತಿಗೆ ನೀ ಬಡಿದು ಆಡಿದ ಮನೆ ತಕ್ಕೊಂಡೆಲ್ಲದರಮನೆಯಲಿ ಆರಿಗೆ ಹೇಳಿ ಹೋಗುವೆಯೋಮನೆ ಪರಾಮರಿಗೆ ತಿರುಗಿ ಕೊಂಬೆಯೋ 3 ದೇಹವ ಸಾರ್ಥಕ ಮಾಡಿರಿ ಎಂದು ದೈನ್ಯದಿ ಎಲ್ಲರಿಗೂ ಹೇಳುವೆದೇಹವ ಸಾರ್ಥಕ ಮಾಡಿದರಿಲ್ಲವೋದೇಹ ಪರಾಮರಿಕೆಯ ಕೊಂಬೆಯೋ 4 ನಿನ್ನ ದೇಹವೇ ನಿನಗೆ ಇಲ್ಲವೋ ನಿನಗೆಲ್ಲಿಯ ಸತಿಸುತ ಭ್ರಾಂತಿನಿನ್ನ ಚಿದಾನಂದ ಗುರುವೆಂದು ಕಂಡರೆನಿನಗೇನಿಲ್ಲವೋ ಗುರುವಾಗುವೆ ನೀ 5
--------------
ಚಿದಾನಂದ ಅವಧೂತರು
ಛೀ ಛೀ ಛೀ ಛೀ ಮೂಳಿ ನಾಚಿಕೆ ಇಲ್ಲದ ಹಾಳಿನೀಚ ಮನುಜರೊಡನೆ ಆಡಲುಬಂತು ಮೂರ್ಖೆ ಮೂಳಿ ಪ ಸುಕೃತ ಮಾರ್ಗವ ಸುಟ್ಟೆ 1 ಎಲ್ಲಿ ಸತಿಯು ಸುತರು, ಮತ್ತೆಲ್ಲಿ ಪತಿಯು ಪಿತರುಯಮನು ವೈಯ್ಯುವಾಗ ಬಹರೆ ಸರ್ವಹಿತರುಗುರುವಿನ ಪಾದವ ಹೊಂದು ನೀ 2 ಮರೆಯದಿರು ಮಾತೆಂದೂಗುರು ಚಿದಾನಂದನು ತಾನೆ ಎನಲು ಹೋಹುದು ಭವವುಹಿಂದು 3
--------------
ಚಿದಾನಂದ ಅವಧೂತರು
ಛೀ ಛೀ ಬಿಡು ಸಂಸಾರಾಬ್ಧಿಯ ದಾಂಟಲು ನಾವೆಯಚಾಚು ಛೂ ಛೂ ಎಂದರು ಸರ್ವನು ಒಂದಿಷ್ಟು ನಾಚಿಕೆಯಿಲ್ಲ ಈಸು ಪ ಬಿಡುವುದೆ ಲೇಸು ಗಾದಿಯು ತಿಳಿಯದು ಈಸು ಪ್ರಾಚೀನ ಕರ್ಮವಿ ದೀಸು ತಾರಕ ಮಂತ್ರವ ಸೂಸು 1 ಹೊನ್ನಿನ ಬಳಿಯಲಿ ಸರ್ವಾಭರಣವು ಚಿನ್ನವು ಎನಿಸದ ಹಾಗೆ ಚೆನ್ನಾಗಿ ತೋರುವಹಾಗೆ ಕಣ್ಣಲಿ ಕಾಣುವುದೆಲ್ಲ ಕಡೆಯಲಿ ನುಣ್ಣಗೆ ಲಯವಾದಹಾಗೆ ರೂಪನು ತಾನಾದ ಹಾಗೆ 2 ರೇಚಕ ಪೊರಕ ಕುಂಭಕವಿರವನು ಸಾಧಿಸು ನಿನಗದು ಊಚು ಗೋಚರ ದೊಳು ಲಘುತೋಚು 3
--------------
ಕವಿ ಪರಮದೇವದಾಸರು
ಜಗತ್ಸಾರ ವಿಠಲ | ನೀನಿವಳ ಸಲಹೊ ಪ ಬಗೆಬಗೆಯಲಿಂ ನಿನ್ನ | ದಾಸ್ಯಕಾಂಕ್ಷಿಪಳಅ.ಪ. ಭಯದೋರಿ ಸ್ವಪ್ನದಲಿ | ಜಯದೇವಿಸುತ ಪ್ರಾಣದಯೆ ಪಡೆಯಲನುವಾಗ್ಯೆ | ಭಯವನು ತೋರ್ದೇಹಯಮೊಗನೆ ನಿನ್ನಂಥ | ದಯೆ ಪೂರ್ಣರಿನ್ನುಂಟೆನಯವಿನಯ ದಿಂದಿರ್ಪ | ಕನ್ಯೆಯನು ಸಲಹೊ 1 ವ್ಯಾಜ ಕರುಣೇಗೋಜು ಸಂಸøತಿಯಳಿಯೆ | ಬಾಜಿಸುತ ಮನದಲ್ಲಿನೈಜರೂಪವ ತೋರೊ | ಹೇ ಜನಾರ್ದನನೇ 2 ನೂಕಿ ಸಂತಾಪಗಳ | ಲೌಕಿಕ ಸುಭೋಗ ವೈದೀಕ ವೆನಿಸೋ ಹೇ ಕೃ | ಪಾಕರನೇ ದೇವಾಜೋಕೆಯಿಂದಿವಳ ನೀ ಸಾಕಬೇಕೆಂದೆಂಬವಾಕು ಮನ್ನಿಸಿ ಕಾಯೊ | ಶ್ರೀ ಕರಾರ್ಚಿತನೇ 3 ನೀಚೋಚ್ಚ ತರತಮದ | ಸೂಕ್ಷ್ಮ ಸುಜ್ಞಾನಗಳವಾಚಿಸಿವಳಲಿ ನಿಂತು | ಕೀಚಕಾಂತಕನುತಪ್ರಾಚೀನ ಕರ್ಮಗಳ | ಮೋಚಕನು ನೀ ಸವ್ಯಸಾಚಿ ಸಖನೇ ಇವಳ | ಪೇಕ್ಷೆಗಳ ನೀಯೋ 4 ದೇವವರ ಭವ್ಯಾತ್ಮ | ಪಾವನವು ತವ ಸ್ಮøತಿಯನೀ ವೊಲಿದು ಸರ್ವತ್ರ | ಸರ್ವ ಕಾಲದಲೀಈ ವುದನೆ ಬಿನ್ನವಿಪೆ | ಬಾವಜ್ಞ ಸಲಿಸುವುದುಕಾವ ಕರುಣಾಳು ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗನ್ನಿವಾಸ ಜಾನಕೀರಮಣ ಪ ಅಗಣಿತ ಚರಿತಾನಂದ ಮುಕುಂದಾ 1 ಶಂಕ ಚಕ್ರ ಗದ ಶಾಙ್ರ್ಞಪಾಣಿ ಪಂಕಜೋದರ ಪಾಲಕ ಪಾವನ 2 ಗಮನ ಕರಿವರದ ಗೋವಿಂದ ಪರಮಾತ್ಮಾ ಪರಬ್ರಹ್ಮ ಪರಮಾನಂದಾ 3 ವಾರಿಧಿ ಬಂಧನ ನೀರಜನಯನ ವಾರಿಜೋದ್ಭವ ಪಿತ ವಸುದೇವನಂದನ 4 ಸ್ವಾಮಿ ಪರಂಧಾಮ ಸರ್ವ ರಕ್ಷಕ ಹರಿ 5
--------------
ಹೆನ್ನೆರಂಗದಾಸರು
ಜಂಗಮನು ಇಂತಿವನು ಸರ್ವಸಂಗ ದೂರಾದವನೀಗ ಜಂಗಮ ಪ ತನ್ನ ತಿಳಿದು ತಾನಾದವ ಜಂಗಮ ಜಗವಭಿನ್ನವೆಂದು ಕಾಣದವ ಜಂಗಮಹೊನ್ನು ಹೆಣ್ಣು ಬಿಟ್ಟವನು ಜಂಗಮ ಸಂ-ಪನ್ನ ಸಾಧು ಸಂಗವಿಹ ಜಂಗಮ 1 ಒಳಗೆ ಹೊರಗೆ ಒಂದಾದವ ಜಂಗಮ ಎಲ್ಲಹೊಳೆವುದೊಂದೆ ಜ್ಯೋತಿಯು ಎಂಬುವ ಜಂಗಮಹೊಲೆಯು ಶುದ್ಧವ ಕಳೆದವ ಜಂಗಮ ಎನಗೆಕುಲವು ಛಲವು ಇಲ್ಲವೆಂಬುವ ಜಂಗಮ 2 ಅಂಗ ಲಿಂಗವಾಗಿಹ ಜಂಗಮಲಿಂಗ ಅಂಗ ಏಕವಾಗಿಹ ಜಂಗಮಮಂಗಳವೇ ನಿತ್ಯವಿಹ ಜಂಗಮ ಗುರುಲಿಂಗವಾದ ಚಿದಾನಂದ ಜಂಗಮ 3
--------------
ಚಿದಾನಂದ ಅವಧೂತರು
ಜನನಿ ಜಾನಕೀ ನೀದಯಮಾಡೇ ಜಗದೀಶ್ವರ ನಾಯಕೀ ಪ ಫಣಿವಿಲಾಸನ ಪ್ರೀಯೆ ಭಜಕರ ಮನವಿಗಳ ನೀಕಾಯೆ ತಾಯಳೇ ಪ್ರಣವರೂಪಳೆ ಪ್ರಣಮಿಸುವೆ ತ್ರಿಣಯಸಖನಾರಾಣಿ ಸುಂದರೀ 1 ಸರ್ವತಂತ್ರಳೆ ಸಾಕ್ಷರೂಪಿಣಿ ದುರ್ಮದಾಂತಕಿ ದುಃಖದೂರಳೆ ನಿರ್ವಿಕಲೆ ಗೀರ್ವಾಣೆ ಶುಭಕರಿ ಉರ್ವಿಪಾಲಿಕಳಾದ ಸೀತೆಯ 2 ಆದಿಶಕ್ತಿ ಅನಂತರೂಪಳೆ ವೇದಮಾನಿನಿ ವಾದಿಭೀಕರಿ ಪಾದಸೇವ ಕನಿಷ್ಟಮೊದಗಿಸೆ ಭೂಧರಗೆ ನಿಜರಾಣಿ ವೈಭವೆ 3 ರಂಗನಾಯಕಿ ರಾಧೆ ಶ್ರೀ ಜಯ ಮಂಗಳಾಂಗಿ ಸಮೋದೆ ನಿಚ್ಚಲೆ ಜಂಗಮಾರ್ಚಿತ ಗುರುವು ತುಳಸೀ ಬೆಂಗಳೂರೊಳಗಿರುವ ಕಾರಣ4
--------------
ಚನ್ನಪಟ್ಟಣದ ಅಹೋಬಲದಾಸರು
ಜನನಿ ರುದ್ರಾಣಿ ರಕ್ಷಿಸು ಎನ್ನ ಜಗದೀಶನ ರಾಣಿ ಪ. ವನಜಭವಸುರಮುನಿಕುಲಾರ್ಚಿತೆ ಕನಕವರ್ಣಶರೀರೆ ಕಮಲಾ- ನನೆ ಕರುಣಾಸಾಗರೆ ನಮಜ್ಜನ- ಮನಮುದಾಕರೆ ಮಾನಿತೋದ್ಧರೆ ಅ.ಪ. ಆದಿಕೃತಾಯುಗದಿ ಪ್ರತಿಷ್ಠಿತ- ಳಾದೆ ಧರಾತಳದಿ ಆದಿತೇಯರ ಬಾಧಿಸುವ ದಿತಿ- ಜಾಧಮರ ಭೇದಿಸಿದೆ ಸಜ್ಜನ- ರಾದವರ ಮನ್ನಿಸಿದೆ ತ್ರೈಜಗ- ದಾದಿಮಾಯೆ ವಿನೋದರೂಪಿಣಿ 1 ಖಂಡ ಪರಶುಪ್ರೀತೆ ನಿಖಿಲಬ್ರ- ಹ್ಮಾಂಡೋದರಭರಿತೆ ಚಂಡಮುಂಡವೇತಂಡದಳನೋ- ದ್ದಂಡಸಿಂಹೆ ಅಖಂಡಲಾರ್ಚಿತೆ ಪಾಂಡುತನುಜ ಕೋದಂಡ ವಿತರಣೆ ಚಂಡಿಕೇ ಕರದಂಡಲೋಚನಿ2 ಸಿಂಧೂರ ಸಮಯಾನೆ ಸರಸ ಗುಣ- ವೃಂದೆ ಕೋಕಿಲಗಾನೆ ಸುಂದರಾಂಗಿ ಮೃಗೇಂದ್ರವಾಹಿನಿ ಚಂದ್ರಚೂಡಮನೋಜ್ಞೆ ಸತತಾ- ನಂದಪೂರ್ಣೆ ಮುನೀಂದ್ರನುತೆ ಸುಮ- ಗಂಧಿ ಗೌರಿ ಶಿವೇ ಭವಾನಿ 3 ಲಂಬೋದರಮಾತೆ ಲಲಿತ ಜಗ- ದಂಬಿಕೆ ಗಿರಿಜಾತೆ ಕಂಬುಕಂಠಿ ಕಾದಂಬನೀಕು- ರುಂಬಜಿತಧಮ್ಮಿಲ್ಲೆ ತವ ಪಾ- ದಾಂಬುಜವ ನಾ ನಂಬಿದೆನು ಎನ- ಗಿಂಬು ಪಾಲಿಸೆ ಶುಂಭಮರ್ದಿನಿ 4 ಘನವೇಣುಪುರವಾಸೆ ಸರ್ವಾರ್ಥದಾ- ಯಿನಿ ತ್ರೈಜಗದೀಶೆ ಸನಕನುತೆ ಶ್ರೀಲಕ್ಷುಮಿನಾರಾ- ಯಣಭಗಿನಿ ಶ್ರೀಮಹಿಷಮರ್ದಿನಿ ಮನಮಥಾಮಿತರೂಪೆ ಕಾತ್ಯಾ- ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜನನೀ ತ್ರಿಜಗತಿ ಜನಾರ್ದನೀ ಜನನೀ ಜಯತು ಶ್ರೀಪದ್ಮಾವತೀ ಪ. ಗುಣಗಣಾರ್ಣವೆ ವಿಶ್ವಪೂಜಿತ ಜನನಮರಣವಿದೂರೆ ಪದ್ಮಾಸನೆ ಘನಗಗನಭೂಪಾಲನಂದಿನಿ ಅ.ಪ. ಶ್ರೀನಿವಾಸನ ರಾಣಿ ಸರ್ವಾರ್ಥ ನಿ- ದಾನಾಂಬುಜಪಾಣಿ ಭಾನುಕೋಟಿಸಮಾನ ತೇಜೆ ಸ- ದಾನುರಾಗಪ್ರದಾನೆ ವಿಬುಧ- ಶ್ರೇಣಿನುತೆ ಮಹದಾದಿಮಾಯಾ- ಮಾನಿ ಮಾಧವಮನವಿಲಾಸಿನಿ 1 ಸುಂದರಿ ಸುಮನೋಹರಿ ಸುಜ್ಞಾನಾ- ನಂದೆ ಸಿಂಧುಕುವರಿ ಚಂದ್ರವದನೆ ಚರಾಚರಾತ್ಮಕಿ ವಂದನೀಯೆ ಪರೇಶಪರಮಾ- ನಂದರೂಪೆ ಸನತ್ಸುಜಾತ ಸ- ನಂದನಾದಿಮುನೀಂದ್ರವಂದಿತೆ 2 ಅಂಬೆ ಶ್ರೀಹರಿಪ್ರೀತೆ ಶಂಭುಸಂಭಾವಿತೆ ತ್ರಿಲೋಕಾ- ರಂಭಸೂತ್ರೆ ಪವಿತ್ರೆ ವಿಶ್ವಕು- ಟುಂಬೆ ಕಮಲಯನೇತ್ರೆ ಸಾಧ್ವೀಕ- ದಂಬಮಸ್ತಕಮಣಿಪ್ರಭಾಶಿನಿ 3 ಪದ್ಮ ಸರೋವಾಸಿನೀ ಪಾವನಹೃ ತ್ಪದ್ಮನಿತ್ಯಭಾಸಿನಿ ಪದ್ಮನವಕ್ರೀಡಾವಿಲಾಸಿನಿ ಮ- ಹನ್ಮನೋಧ್ಯಾನಾಧಿರೂಢೆ ಸು- ಪದ್ಮಹಸ್ತೆ ನಮಸ್ತೆ ಪಾವನೆ ಪದ್ಮನಾಭನರಮಣಿ ಕರುಣಿ 4 ವರಲಕ್ಷ್ಮೀವಾರಾಯಣಿ ಕಲ್ಯಾಣಿ ಶ್ರೀ- ಕರೆ ಕಾಳಾಹಿವೇಣಿ ಧರೆಯೊಳುತ್ತಮ ಕಾರ್ಕಳದಿ ಸು- ಸ್ಥಿರನಿವಸವ ಗೈದೆ ಕರುಣಾ- ಶರಧಿ ಭಕ್ತರ ಪ್ರಾರ್ಥನೆಯ ಸ್ವೀ- ಕರಿಸಿ ಪೊರೆವಿಷ್ಟಾರ್ಥದಾಯಿನಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಜನುಮ ಜನುಮದಲ್ಲಿ ಕೊಡು ಕಂಡ್ಯ ಹರಿಯೆ ಪ ಅನಿಮಿತ್ತ ಬಂಧು ಕೃಷ್ಣ ದಯದಿಂದಲೆನಗೆ ಅ.ಪ ಮೆರೆವ ಊಧ್ರ್ವ ಪುಂಡ್ರ ಎರಡಾರು ನಾಮವುಕೊರಳೊಳು ತುಲಸಿಯ ವನಮಾಲೆಯುಮೆರೆವ ಶಂಖಚಕ್ರ ಭುಜದೊಳೊಪ್ಪುತ ನಿಮ್ಮಸ್ಮರಿಸುತ್ತ ಹಿಗ್ಗುವ ವೈಷ್ಣವ ಜನುಮವ 1 ಹರಿಯೆ ಸರ್ವೋತ್ತಮ ರಾಣಿ ಲಕುಮಿ ಬೊಮ್ಮಹರ ಇಂದ್ರಾದ್ಯಖಿಳರು ತವ ಸೇವಕರುವರ ತಾರತಮ್ಯ ಪಂಚ ಭೇದ ಸತ್ಯವೆಂದುನೆರೆ ಪೇಳುವ ವಾಯುಮತದ ಸುಜ್ಞಾನವ 2 ಸಿರಿ ಕೃಷ್ಣ ನಿನ್ನಲ್ಲಿಅಕಳಂಳವಾದ ನವವಿಧ ಭಕುತಿಯನು 3
--------------
ವ್ಯಾಸರಾಯರು
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು
ಜಪವ ಮಾಡಿದರೇನು ತಪವ ಮಾಡಿದರೇನು ವಿಪುಲಭಕ್ತಿಯು ಮಾತ್ರ ಇಲ್ಲದಿರುವವನು ಪ ವಿಪರೀತ ಡಂಭದಲಿ ಉಪಕರಣಗಳ ತೊಳೆದು ಕೃಪೆ ಪಡೆಯದಿರೆ ಗುರು ರಾಘವೇಂದ್ರನ ಅ.ಪ ಗುರುವಿನುಪದೇಶದ ಸ್ಮರಣೆಯನು ಮರೆತವನು ಗುರುಪಾದ ಸೇವೆಯನು ತೊರೆದು ಕಿರಿದೆನ್ನುವನು ಹರಿಯನೇ ನಾ ಕಂಡೆ ಗುರುಹಂಗು ಎನಗಿಲ್ಲ ಸರಿಯಾರು ತನಗೆಂಬ ಗರುವಯುತನು1 ಗುರುವಿನೊಲವೇ ಧರ್ಮ ಗುರುಸೇವೆಯೇ ತಪ ಗುರುನಾಮವೇ ಮಂತ್ರ ಗುರುಸಿದ್ಧಿಯೇ ತಂತ್ರ ಗುರುವೇ ಸ್ವರ್ಗಕೆ ದಾರಿ ಗುರುರೂಪ [ಕಣ್‍ಸಿರಿಯು] ಗುರುವೇ ಸರ್ವಸ್ವ ಮಾಂಗಿರಿರಂಗನುಸಿರು2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್