ಒಟ್ಟು 28225 ಕಡೆಗಳಲ್ಲಿ , 136 ದಾಸರು , 9942 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೊಮ್ಮ ಪ ಉಲಿವ ಘಂಟೆಗಳಿಂದ | ಬಾಲವೂ ಬಲು ಛಂದಚೆಲುವ ಮೂರುತಿ ಭಾವ | ಸುಂದರ ಪ್ರಭಾವ |ಕಲಿಮಲವ ಕಳೆವಂಥ | ನಿನಗಿಹುದು ಸತ್ಪಂಥಗುರ್ಹೊಸೂರಲಿ ವಾಸ | ಭಕುತ ಜನ ತೋಷಾ 1 ಭವ ಮೋಹಪ್ರಧ್ವಂಸವೆನಿಸಯ್ಯ | ಮಧ್ವಮುನಿ ಜೀಯಾ 2 ನಿತ್ಯ ಮುದಗೊಳ್ವ 3
--------------
ಗುರುಗೋವಿಂದವಿಠಲರು
ಬೊಮ್ಮ ಪದವಿ ಕೊಂಡೆ ಪ ಕೂರ್ಮರೂಪನಾಗಿ | ಬೊಮ್ಮಾಂಡ ಧರ ಪರಬೊಮ್ಮನ ಪರಿಮಿತ | ಪೇರ್ಮೆ ನಿನ್ನೊಳೆಂತೂಅಮ್ಮಮ್ಮ ನಿನಸಮ | ಸುಮ್ಮನಸರೊಳಿಲ್ಲ ಅ.ಪ. ಪಾದ್ಯ ಮೂರ್ತಿ ಪಾದ ಭಜಕ ವಿನೋದ ದಿಂದಲಿ | ಭೋದಿಸುವೆ ಶೇ |ಷಾದಿಗಳಿಗೆ ಅ | ಗಾಧ ಮಹಿಮನೆ 1 ಗಾನಲೋಲನ | ಗಾನ ಮಾಡ್ಡ ಮ |ಹಾನುಭಾವ ಸು | ಶ್ವಾಸ ರೂಪದಿಮೌನಿ ಸುರರಿಗೆ | ಗಾನ ಅನು ಸಂ |ಧಾನ ಗೋಪ್ಯದಿ | ಪ್ರಾಣ ಸಲಹೋ 2 ವ್ಯಾಪ್ತ ಜಗಹರಿ | ವ್ಯಾಪ್ತಿ ಎಲ್ಲೆಡೆಪ್ರಾಪ್ತ ನಿನ ಸಮ | ಆಪ್ತರಿಲ್ಲವೊಗೋಪ್ತ ಗುರು ಗೋವಿಂದ ವಿಠಲನವ್ಯಾಪ್ತಿ ತಿಳಿಸು ಸು | ದೀಪ್ತ ಮಾರುತಿ 3
--------------
ಗುರುಗೋವಿಂದವಿಠಲರು
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಬೊಮ್ಮ ಬಂದನೆಂದು ತಮ್ಮ ಲೋಕದಿ ನಮ್ಮ ಮಾರುತ ಬಂದನೆ ಧಿಮ್ಮಿ ಧಿಮ್ಮಿ ಧಿಮ್ಮಿ ಧಿಮಕು ಎನುತಲೆ ರಮ್ಮಿ ರಮಣಿಯರ ಕುಣಿಸುತ ಪ. ರುದ್ರ ಬಂದನೆಂದು ಸಿದ್ದಜನ ಕೂಡಿಪ್ರಸಿದ್ದ ಇಂದ್ರನು ಬಂದನೆ ಅಲ್ಲಿದ್ದÀ ಪರಿವಾರ ಎಲ್ಲ ಸಹಿತಾಗಿಶುದ್ಧ ಅಗ್ನಿಯು ಬಂದನೆ 1 ವಾಹನ ವರುಣ ಬಂದನೆರಮಣಿ ಗಂಗೆಯು ಬಂದಳೆ2 ವಾತ ಬಂದನೆಂದು ಖ್ಯಾತಿಯಿಂದಲೆಆತಪನು ಬಂದನೆ ವೀತ ದೋಷ ರಮೇಶನಲ್ಲಿಗೆ ನೂತನದ ಮುಯ್ಯ ನೋಡಲು3
--------------
ಗಲಗಲಿಅವ್ವನವರು
ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ. ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1 ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2 ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3
--------------
ವಾದಿರಾಜ
ಬೊಮ್ಮಗಟ್ಟಿರಾಯ ಪಾಲಿಸೋ ನಮ್ಮ ನೀ ಮಾರಾಯ ಧರ್ಮ ಕಾಮ್ಯಾರ್ಥ ಕೊಡುವೊ ಕರುಣಾಂಬುಧಿ ಪ ನಿಗ್ರ(ಹ) ಮಾಡುತ ಪರಮಾಗ್ರ(ಹ) ದಲಿ ಸೀಗ್ರ (ಶೀಘ್ರ?) ದಿಂದಲಿ ದಶಗ್ರೀವನ ಲಂಕ- ದುರ್ಗದಲ್ಲಾಡಿದ್ಯಗ್ನಿಯ ಒಡಗೂಡಿ 1 ರಾಮಪಾದಾಂಬುಜ ಸೇವಕ ಸೇತುವೆ ಪ್ರೇಮದಿ ಕಟ್ಟಿ ನಿಂತನು ರಣದಿ ನೇಮದಿಂದಲಿ ಸಂಜೀವನ ತಂದಾತ ವಾಹನನಾದ ತ್ರಿಧಾಮದೊಡೆಯಗೆ 2 ವಾತಾತ್ಮಜ ರಘುನಾಥಗೆ ನೀ ನಿಜ- ದೂತನೆನಿಸಿ ಬಹು ಪ್ರೀತಿಯಲಿ ಭೂತಳದೊಳು ಪ್ರಖ್ಯಾತಿಯ ಪಡೆದೆ ನಿ- ರ್ಭೀತನಾದ ಭೀಮೇಶಕೃಷ್ಣನ ಪ್ರಿಯ 3
--------------
ಹರಪನಹಳ್ಳಿಭೀಮವ್ವ
ಬೊಮ್ಮಗೆ ಶರಣಿಂಬೆವಮ್ಮ ನಮ್ಮ ಗುರು ಎಂದುಹಮ್ಮಿನ ಸುಭದ್ರಾ ದೇವಿಗೆ ದಮ್ಮಯ್ಯ ಎನಲೆಂದು ಪ. ವಾಚಾಭಿಮಾನಿ ನಿಜ ಬುದ್ಧಿ ಸೂಚಿಸು ನಮಗೆಂದುನಾಚಿಸಿ ದ್ರೌಪತಿಯ ಆಣೆ ಅಚೆ-ಲಿಟ್ಟೆವೆಂದು1 ಮಂದ ಜಾಸನ ಜಗಕೆ ನೀವು ತಂದೆ ಹೌದೆಂದುನಿಂದಿಸಿ ಸುಭದ್ರೆ ಪಂಥ ಹಿಂದಕ್ಕೆ ಹಾಕೆವೆಂದು2 ಸರಸಿಜಾಸನ ರಾಮೇಶನ ಅರಸಿಯರ ಗೆಲಿಸೆಂದುಸರಸದಿ ಸುಭದ್ರಾ ಪಂಥ ಬಿರುಸು ಮಾಡೆವೆಂದು 3
--------------
ಗಲಗಲಿಅವ್ವನವರು
ಬೋಧ ಘನ ಗಂಭೀರ ಗುಣಸುಜನ | ಪಾದ ಯೋಗ ಸಾಂಖ್ಯಗಳಾದ ಸೀಮೆಯಲಿ ನಲಿದಾಡಿ ತುರ್ಯದಲಿ ಮನೆಮಾಡಿ | ಸಹಜಾವಸ್ಥೆ ಗೂಡಿ | ಆ ಮಹಾ ಪದದಿಂದ ಪರಿಹರಿಸಿ ಭವಬಂಧ | ಕಾಮಿತಾರ್ಥವ ನೀವ ದೀನರುದ್ಧರಿಸುವ | ಶ್ರೀ ಮಹಿಪತಿ ಸ್ವಾಮಿ ನಂದನೋಡಿಯನು ನೇಮಿ ಹರಿಕಥಾನಂದ ಪ್ರೇಮಿ |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ನುಡಿಗಳು | ಹೀನ ಮನುಜರಿಗ್ಯಾತಕೆ | ಪಾದ ಕಮಲಧ್ಯಾನವುಳ್ಳ ಸುಜನರಿಗಲ್ಲದೇ ಪ ಕಾಣದವಗ ಕನ್ನಡಿ ಅದ್ಯಾತಕೆ | ರಾಣಿ ಯಾತಕೆ ಷಂಡಗೆ | ಗೋಣಿಗ್ಯಾತಕೆ ಗವಸಣಿಕೆ ಗೀ | ರ್ವಾಣಗಳೇಕೆ ಗೊರವಗ 1 ಶ್ವಾನಗ್ಯಾತಕ ಇಕ್ಷುದಂಡವು | ಈ ನರಿಗೆ ಊರ್ಯಾತಕೆ | ದೀನಗ್ಯಾತಕೆ ಧರ್ಮವಾರ್ತೆಯು | ವಾನರಕ ಸರ ಮುತ್ತು ಯಾತಕೆ 2 ಬುತ್ತಿಗಳ್ಳರಿಗ್ಯಾಕೆ ವೃತಗಳು | ಕತ್ತಿಗ್ಯಾತಕೆ ಕಸ್ತೂರಿ | ಕರ್ತ ಮಹಿಪತಿ ನಂದನುಸುರಿದ | ಚಿತ್ತ ಶುದ್ಧಿಯ ಪಡಿಯದವರಿಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ಪ ಶ್ರೀನಿವಾಸನ ನಾಮ ಲೀಲೆಯಸಾನುರಾಗದಿ ವಾಣಿಜಾಣೆಸೂನೂನ ಪಾಪವ ಹಾನಿಯ ಮಾಡುತ 1 ಹತ್ತು ನಾಲ್ಕು ಸುತ್ತದೇಶದಿಚಿತ್ರ ಚರಿತನ ವೃತ್ತಿ ನಿತ್ಯದಿವಿಸ್ತರಿಸಿ ಹೇಳುತ ಚಿತ್ತದಿ ಸುಖಿಸುವಿ 2 ಇಂದಿರೇಶನ ತಂದು ತೋರುವಿಎಂದು ನಿನ್ನನು ಪೊಂದಿ ಬಂದೆನಂದನ ಕಂದನ ಬಂದೀಗ ತೋರಿಸು 3
--------------
ಇಂದಿರೇಶರು
ಬೋಧ ಬಂದನು ಮಾ | ಪ್ರಪಂಚ ಗೆಲುವವ ನಾರೆಲಮಾ ನಮ್ಮ | ಪತಿ - ಭಕ್ತರು ಕಾಣಿಲಮಾ ಪ ಎನಗಾರು ಇದಿರಿಲ್ಲ ಸ್ವರಾಜ್ಯದೊಳಗಿಂದು | ನೀನಾರೋ ಪರದೇಶಿ ಹೇಳಲಮಾ | ನಾನೆಂಬ ಹಮ್ಮಿನ ಬಿರುದನ ಬಿಡಿಸುವ | ನಾನೆಂಬ ಹಮ್ಮಿನ ಬಿರುದವ ಬಿಡುಸುವ | ಜ್ಞಾನ ಶಸ್ತ್ರಧಾರಿ ಬೋದನುಮಾ 1 ಸರಸಿದ ಭವರುದ್ರ ಇಂದ್ರರ ಬಗೆಯದ | ನೆರೆ ಕಾಮ ಗೆಲುವವ ರಾರೆಲಮಾ | ಭಾಗವತ ಶುಕ ಹನುಮಂತನು ಮೆರೆವ ಭೀಷ್ಟ ದೇವ ನಲ್ಲೇನುಮಾ 2 ವೈಕುಂಠದೊಳು ಸನಕಾದಿಕರೊಳು ಹೊಕ್ಕ | ಆ ಕೋಪ ಕಾನುವ ನಾರೆಲಮಾ | ಸಾಕಿ ಬೆಳೆಸಿದ ಶಾಂತಿಯ ನೆಲೆಯಿಂದ | ಪ್ರಖ್ಯಾತ ಕದರಿಯು ಕೇಳಲಮಾ 3 ಧರಿಯಿತ್ತ ರಾಮಗ ಸ್ಥಳ ವಿಲ್ಲೆಂದರು ಬ್ರಾ | ಹ್ಮರು ಲೋಭಗೆದ್ದ ವನಾರೆಲಮಾ | ಮರುಳ ಕೇಳು ಧನ ತೃಣ ಸಮ ಬಗೆದರು | ಕರ್ಣ ರಲ್ಲೇನು ಮಾ 4 ಬೆಟ್ಟದಿ ಉಡಿಹಾಕಿ ಕೊಳ್ಳಲು ಹೋದನ | ಶಿಷ್ಯ ಮೋಹನ ಗೆಲುವ ನಾರೆಲ ಮಾ | ಮುಟ್ಟಿ ಬೇಡಲುಳಿವ ಮಹನ ತಂದಿಟ್ಟನು | ಸೃಷ್ಟಿ ಮನುಜ ಚಿಲ್ಹಾಳಲ್ಲೇನು ಮಾ 5 ಭ್ರಗು ಮುನಿದಕ್ಷನು ಕಾರ್ತೃ-ವೀರ್ಯಾದಿಯ | ಬಗೆಯದ್ದ ಮದ-ವಳಿ ದಾರೆಲ ಮಾ | ಜಗ ಹೊಡೆತನವಿದ್ದು ಬಾಗಿ ನಡೆದ ನಮ್ಮ | ಸುಗುಣ ಜನಕರಾಯ ನಲ್ಲೇನು ಮಾ 6 ಹುಚ್ಚಾದ ವಶಿಷ್ಟನೊಳು ವಿಶ್ವಾಮಿತ್ರನು | ಮತ್ಸರಿಲ್ಲದವ ನಾರೆಲ ಮಾ | ಎಚ್ಚರಿಸಿದ ಸುಯೋಧನಗ ವಿಜಯತನ | ಸಚ್ಚರಿತ ಧರ್ಮ ನಿಲ್ಲೇನು ಮಾ 7 ಬಗೆ ಬಗೆ ವಿಷಯ ದುಪಾಯಗಳೆನಗುಂಟು | ನಿಗದಿಯ ನಡೆನುಡಿ ಕೇಳೆಲ ಮಾ | ಭಗವದ್ಭಾವ ಸರ್ವ ಭೂತದಿ ನೋಡಲು | ವಿಗುಣವೆ ಸದ್ಗುಣ ಭಾಸುದ ಮಾ 8 ನಿನ್ನ ಬಲವ ಕಂಡೆ ಶರಣವ ಹೊಕ್ಕೆನು | ಬೋಧ ಕೇಳೆಲ ಮಾ | ಸನ್ನುತ ಮಹಿಪತಿ ಸುತ ಪ್ರಭು ನೆಲೆದೋರಿ ಮನ್ನಿಸಿ ಹೊರೆವನು ಬಾರೆಲಮಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಬೋಧ ಸದ್ಗುರು ಜಿತಮದನ ಪ ಬಾದರಾಯಣ ವೈದೇಹಿ ಚರಣಾಬ್ಜಾ ರಾಧಕ ನಮಿಪೆ ಸನ್ಮೋದವಿತ್ತು ಕಾಯೊ ಅ.ಪ. ಶ್ರೀ ಮಧ್ವ ಮತವಾರಿಧಿ ಸೋಮ | ದ್ವಿ ಜ ಸನ್ನುತ ಗುಣಧಾಮಾ ಕಾಮಿತಜನ ಕಲ್ಪಭೂಜ ವಿಬುಧ ಸು ಪ್ರೇಮ ಸಂಯಮಿಕುಲೋದ್ಧಾಮ ದಯಾಂಬುಧೇ ಗೋಮಿನೀವಲ್ಲಭನ ಪದಯುಗ ತಾಮರರಸಗಳನನುದಿನದಿ ಬಿಡ ದೇ ಮನಾಬ್ಜದಿ ಭಜಿಸುತಿಪ್ಪಮ ಹಾ ಮಹಿಮ ತುತಿಸಿಬಲ್ಲನೆ 1 ದೀನಜನರ ಬಂಧು ನಿನ್ನಾ | ಪಾದ ಕಾನೆರಗುವೆ ಸುಪ್ರಸನ್ನಾ ದಾನ ಮಾನಗಳಿಂದ ಜ್ಞಾನಿಜನರಿಗೆ ಮ ಹಾನಂದ ಬಡಿಸುತ ಸಾನುರಾಗದಿ ನಿತ್ಯಾ ಶ್ರೀ ನಿಕೇತನ ಪರಮ ಕಾರು ಣ್ಯ ನಿವಾಸ ಸ್ಥಾನನೆನಿಪ ಮ ಹಾನು ಭಾವ ಭಗವತ್ಪದಾಂಭೋ ಜಾನುಗರೊಳೆನ್ನೆಣಿಸಿ ಪಾಲಿಸು 2 ಸತ್ಯಪ್ರಿಯರ ಕರಕಮಲ | ಜಾತ ನಿತ್ಯ ನಿರ್ಜಿತ ಘೋರ ಶಮಲಾ ಚಿತ್ತಜಪಿತ ಜಗನ್ನಾಥ ವಿಠಲನ ಚಿತ್ತಾನುವರ್ತಿಗಳಾಗಿ ಸಂಚರಿಸುತಾ ಅತ್ಯಧಿಕ ಸಂತೋಷದಲಿ ಪ್ರತ್ಯರ್ಥಿಗಳಿಗುತ್ತರಿಸಿ ಮಿಗೆ ಪುರು ಷೋತ್ತಮನೆ ಪರನೆಂದು ಡಂಗುರ ವೆತ್ತಿ ಹೊಯ್ಸಿ ಕೃತಾರ್ಥನೆನಿಸಿದ 3
--------------
ಜಗನ್ನಾಥದಾಸರು
ಬೋಧಕರಾರೊ ಲೋಕದೀ ದಾಸಗೆ ಬಾಧಿಪ ದುರಿತಗಳ ದೂರ ಮಾಡಿ ಮಾಧವ ನೀನೆ ದಯವು ಮಾಡಲಿ ಬೇಕೊ ಸಾಧಕ ಸಾಧ್ಯನೊ ನೀನು ಸ್ವಾಮಿ ಪ ಓದಲು ಮೊದಲಿಲ್ಲ ಕೇಳಿ ಶಾಸ್ತ್ರಗಳಿಲ್ಲ ಮೋದಿಸುವ ಮಾತ್ರ ಭಕ್ತರ ಕಡು ಮೋದತೀರ್ಥರ ಮತ ಇವನಿಗೆ ತಿಳುವಂತೆ ಕರವ ಪಿಡಿಯೊ 1 ಆಲಸಬಟ್ಟನು ಇವ ನಿನ್ನ ಪೂಜಿಗೆ ತಕ್ಕ ಕೆಲಸವ ಮಾಡಲು ಮೊದಲರಿಯ ಒಲಿಸಬೇಕೆಂದು ಮನದಿ ಹಂಬಲಿಸು ಚಲಿಸದ ಮನ ಮಾತ್ರಕೆ ಕೊಡಲಿಬೇಕು 2 ಭಾರ ನಿನ್ನದು ಸ್ವಾಮಿ ಆಸರಾಗಲಿ ಬೇಕು ಒಬ್ಬರಿಗೆ ದಾಸ ಮತ್ತೊಬ್ಬ ಎಂದು ನಿನ್ನಯ ಕ್ಲಪ್ತ ವಾಸುದೇವವಿಠಲ ನೀನರಿಯದೇನೊ 3
--------------
ವ್ಯಾಸತತ್ವಜ್ಞದಾಸರು
ಬೋಧಾ ಜ್ಞಾನದಾ ಬೋಧ ಮೋದಾ ಶಾಂತಿಯಾ ಸ್ವಾದಾ ಪ ಸ್ವರೂಪದಾ ಸುಖಸ್ಪದಾ ಪ್ರಶಾಂತ ಗುರುಬೋಧಾ ಬೋಧ ಅ.ಪ. ಸುಲಭಸಾಧ್ಯ ಸುವಿಚಾರಾ ವೇದಾಂತಶಾಸ್ತ್ರದ ಸಾರಾ ತಾನೇ ಪರಮಾತ್ಮನು ಎನುವಾ ಸ್ವಾನುಭವಾಮೃತಜಲಧಾರಾ ಘೋರಾ ಸಂಸ್ಕøತಿಯ ಪಾರಾ 1 ಜೀವಭಾವವ ಮರೆಯಿಸುತಿರುವಾ ಸಾವ ನೀಗುವಾ ಮಂತ್ರವಾ ಸಾರಿ ಪೇಳ್ವ ಶಂಕರಾರ್ಯ ಮೋದಾ ಶಾಂತಿಯಾ ಸ್ವಾದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ