ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾವಾತ ನಾನಲ್ಲಾ ಸಾವು ಮೊದಲೆನಗಿಲ್ಲಾ ಯೋಗಿ ತಾ ಬಲ್ಲಾ ಪ ಧರೆಯೆನಿಸಿ ದೊರೆಯಾಜÉ್ಞಯೊಳಾಳುತಿಹೆ ನಾನು ವರಮಂತ್ರಿಯಾಗಿ ವರ್ತಿಸುವವನೆ ನಾನು ಕರಣಿಕರ ತೆರದಿ ಲೆಕ್ಕವ ನೋಡುತಿಹೆ ನಾನು ಪರಿವಾರವಾಗಿ ಓಲೈಸುವವನೆ ನಾನು 1 ವಾಹನ ಹೊರುವಾತ ನಾನು ಹೊತ್ತಂತಿರುವೆ ನಾನು ಹರಿನಾಮ ಹರನಾನು ನರನಾನು ಸರ್ವವೀ ಪರಿಯೊಳಗೆ ಮೆರೆದು ವಿಸ್ತರಿಪೆ ನಾನು 2 ಅಣುರೇಣು ತೃಣಕಾಷ್ಠ ಭರಿತನಾಗಿಹೆ ನಾನು ಗಣನೆಯಿಲ್ಲದ ಗುಣವ ತೋರ್ಪೆ ನಾನು ಉಣಲಿಕ್ಕುವವ ನಾನು ಉಂಡು ತೃಪ್ತಿಪೆ ನಾನು ರಣನಾನು ರಣವ ಗೆಲುವಾತ ನಾನು 3 ಭೂಮಿಯಾಗಿಹೆ ನಾನು ಬೆಳೆವ ಬೆಳೆಯೇ ನಾನು ಸೋಮ ಸೂರ್ಯಾಗ್ನಿ ವಾಯುಗಳೆ ನಾನು ನಾಮರೂಪಾತೀತ ವಸ್ತುವಾಗಿಹೆ ನಾನು ಕಾಮಿನಿಯರಾಗಿ ಕಾಮಿಸುವವನೆ ನಾನು 4 ಒಲಿವಾತನೇ ನಾನು ಒಲಿದರಗಲೆ ನಾನು ಕೊಲಿಸಿಕೊಂಬುವೆ ನಾನು ಕೊಲುವಾತ ನಾನು ಸುಲಭದಿಂದಲಿ ಜ್ಞಾನ ಫಲವಿಕ್ಕುವವ ನಾನು ಚೆಲುವ ವಿಮಲಾನಂದ ಗುರುರಾಯ ನಾನು 5
--------------
ಭಟಕಳ ಅಪ್ಪಯ್ಯ
ಸಾಸಿರ ಜಿಹ್ವೆಗಳುಳ್ಳ ಶೇಷನೆ ಕೊಂಡಾಡಬೇಕುವ್ಯಾಸಮುನಿರಾಯರ ಸಂನ್ಯಾಸದಿರವ ಪ ಆಸೆಯಿಂದ ತಮ್ಮುದರ ಪೋಷಣೆಗಾಗಿ ಛಪ್ಪನ್ನದÉೀಶವ ತಿರುಗಿ ಸಂಚಾರ ಮಾಡುತಮೀಸಲ ಮಡಿ ಬಚ್ಚಿಟ್ಟು ಮಿಂಚುಕೂಳನುಂಡು ದಿನಮೋಸಮಾಡಿ ಕಳೆವ ಸನ್ಯಾಸಿಗಳ ಸರಿಯೆ1 ಕೆರೆ ಬಾವಿ ಪುರ ಅಗ್ರಹಾರಂಗಳ ಮಾಡಿ ಭೂಸುರರೊಂದು ಲಕ್ಷ ಕುಟುಂಬಗಳಪೊರೆವ ವೈಭವ ಕೀರ್ತಿಯಿಂದಲಿ ವ್ಯಾಸರಾಯರ ಗುಣಗಣ ಗಾಂಭೀರ್ಯಾದಿಗಳ2 ಹಗಲಿರುಳೆನ್ನದೆ ಆವಾಗ ಶ್ರೀಹರಿ ಪದಪದ್ಮಯುಗಳವನರ್ಚಿಸಿ ಭಕುತಿಯಿಂದರಘುಪತಿಭಜಕ ಬ್ರಹ್ಮಣ್ಯತೀರ್ಥರ ಕುವರರಂಗವಿಠಲನನ್ನು ಬಿಡೆಬಿಡೆನು ಎಂಬ3
--------------
ಶ್ರೀಪಾದರಾಜರು
ಸಾಸಿರ ನಾಮವ ಹಾಡೆ | ತಂಗಿ ಪ ದಾಸರು ಬಂದರೆ ಕೈ ಜೋಡಿಸಿ ವಂದಿಸೆ ತೋಷದಿ ವರಗಳ ಸೀಡುವರಮ್ಮ ಅ.ಪ ಪರಿಮಳ ಭರದಲಿ ಮೆರೆಯುವ ಹೂಗಳ ಅರಸಿ ತಂದಿರುವಳು ನೀನಲ್ಲವೇ ಪರಮ ಮಂಗಳಕರ ಸರಸಿಜಪಾದಕೆ ಹರುಷದೊಳರ್ಪಿಸೆ ಮರೆಯದಿರಮ್ಮ 1 ಮಂದರಧರ ಗೋವಿಂದನು ಮನದಲಿ ನಿಂದಿರುವನು ತಾನೆಂದೆಣಿಸಮ್ಮ ಬಂಧಿಸಿ ಪಂಚೇಂದ್ರಿಯಗಳನೆಲ್ಲ ವಂದಿಸಿ ಕೈಪಿಡಿ ಎಂದು ಬೇಡಮ್ಮ 2 ಅಂಗನೆಯರ ಭಾವಭಂಗಿಗೆ ನಲಿಯುವ ಮಾಂಗಿರಿಯರಸನು ನಿಜವಮ್ಮ ಇಂಗಿತವರಿತು ಗೋಪಾಂಗನೆಯರಿಗಾ- ಲಿಂಗನವಿತ್ತವನಿವನಮ್ಮ 3 ಇವನಮ್ಮ ಮನದೈವ ಗೋಪಾಲನು ಇವನಮ್ಮ ಪರದೈವ ನೀಲಾಂಗನು ಭವದೂರ ಸುಕುಮಾರ ಸಿರಿಲೋಲನು ನವನೀತ ದಧಿಚೋರ ಸುವಿಲಾಸನು 4 ಪರಮಾರ್ಥ ಚರಿತಾರ್ಥ ವರದಾತನು ಪರತತ್ವ ಚಿರತತ್ವ ಗುರುವೀತನು ದುರಿತಾರಿ ಉಪಕಾರಿ ಪರಮಾತ್ಮನು ಸಿರಿರಂಗ ಮಾಂಗಿರಿಯ ದೊರೆಯೀತನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿಕ್ಕ ಸಮಯ ನಿಜ ತಿಳಿಯದಲೆ ಬರಿ ಕಕ್ಕುಲಾತಿ ನಿನಗ್ಯಾಕಲೆ ಮರುಳೆ ಪ ಬೊಕ್ಕಸ ಭಂಡಾರವೆಲ್ಲ ಸುಳ್ಳೆ ಸುಳ್ಳೆ ನಿನ್ನ ನಿಕ್ಕುವ ಮನೆ ಊರ್ಹೊರಗಿದೆಲೆ ಅ.ಪ ಮೇಲುಮಾಳಿಗೆಮನೆ ಸ್ಥಿರವಲ್ಲ ಬಹು ಬಾಳುವೆ ಧನಸಿರಿ ನಿನಗಿಲ್ಲ ನಾಳೆ ಬಂದೊದಗಲು ಯಮಶೂಲ ಹಿಂ ಬಾಲಿಸಿ ನಿನಗೊಂದು ಬರೋದಿಲ್ಲ 1 ಬಂಧುರ ಬುವಿಯಧಿಕಾರ ನಿಖಿಲ ಮಹ ಅಂದಣೈಶ್ವರ್ಯ ಛತ್ರ ನಂಬಿಗಿಲ್ಲ ತಂದೆ ತಾಯಿ ಬಂಧು ಬಳಗೆಲ್ಲ ನಿನ ಗೊಂದುಕೊಂದು ಸಂಬಂಧವಿಲ್ಲ 2 ಅತಿರಥರೆಲ್ಲರೀ ಭೂಮಿ ಸುಖ ನೆಚ್ಚಿ ಮತಿಗೆಟ್ಟು ಪೊಂದದಿರತಿ ದು:ಖ ಜತೆಯಲಾರ್ವೊಯ್ಯಲಿಲ್ಲಂತೆಕ್ಕ ಸುಳ್ಳೆ ವ್ಯಥೆ ಬಟ್ಟರು ತಿಳಿಯದಿದರ ಲೆಕ್ಕ 3 ಕ್ಷೋಣೆ ಪಾರುಪತ್ಯತನವೆಲ್ಲ ತಿಳಿ ಆನೆ ಕುದುರೆ ಒಂಟೆ ನಿನ್ನದಲ್ಲ ಕಾಣುವುದೆಲ್ಲ ಮಾಯಭವಜಾಲ ಮತ್ತು ಮನುಷ್ಯಜನುಮ ಸೀಗೋದಲ್ಲ 4 ನಾನು ನೀನೆಂಬುವ ದುಷ್ಟಮದ ಸುಟ್ಟು ಜ್ಞಾನದೊಡನೆ ಗೆಲಿ ಭವಬಾಧೆ ಧ್ಯಾನದಾಯಕ ಶ್ರೀರಾಮಪಾದ ನಿಜ ಧ್ಯಾನವಿಡಿದು ಪಿಡಿ ಮುಕ್ತಿಪದ 5
--------------
ರಾಮದಾಸರು
ಸಿಕ್ಕ ಸಿಕ್ಕ ಇಲ್ಲೇ ಸಿಕ್ಕ ಪ ಅಡಗಲು ಎಲ್ಲೆಲ್ಲ್ಯೂ ಸ್ಥಳವಿಲ್ಲವಕ್ಕಜಡ ಜೀವಗಳೊಳು ತೋರುವನಕ್ಕ 1 ಸಕಲರಿಗಿವನು ಕಾಣನು ತಕ್ಕಭಕುತರಿಗಷ್ಟೇ ಕಾಣುವನಕ್ಕ 2 ಶಕ್ತಿಯುಕ್ತಿಯಿಂದರಸಲು ಸಿಗನಕ್ಕಭಕ್ತಿಯೊಳರಸಲು ಇಲ್ಲೇ ಸಿಗುವನಕ್ಕ 3 ಇಲ್ಲೆ ಗದುಗಿನಲ್ಲೆ ನಿಂದಿಹನಕ್ಕಬಲ್ಲ ವೀರನಾರಾಯಣನಕ್ಕ 4
--------------
ವೀರನಾರಾಯಣ
ಸಿಕ್ಕದಿರು ನಾರಿಯರ ಕಡೆಗಣ್ಣಿಗೆ ಮನ ವಿಕ್ಕಿದರೆ ಇಹಪರದ ಗತಿ ಕೆಡಗು ನಿನಗೆ ಪ ಹೇಸದೇತಕೆ ಮನಸು ಪರದಾರ ಪರದ್ರವ್ಯ ದಾಸೆಯೊಳು ಹಗಲಿರುಳು ಕುದಿದು ಕುದಿದು ಘಾಸಿಯಾಗುತ ತೊಳಲಿ ಬಳಲಿ ಯಮನರಕದೊಳು ವಾಸವನು ಮಾಡದಿರು ಎಲೆ ಮೂಢ ಮನುಜ 1 ಮೊಲೆಯೆ ಮಾಂಸದ ಚೆಂಡು ಮೊಗವು ಶ್ಲೇಷ್ಮೆಯಗೂಡು ಬಳಸಿ ನೋಡಿದರಿದಕೆ ಹುರುಳಿಲ್ಲವೋ ಒಳ ಹೊರಗು ಹೊಲಸು ಹೆಬ್ಬಡಿಕೆಗಳು ವಸನದಲಿ ಬೆಳಗುವಳು ತಲೆ ತುರಿಸಿ ಸಿಲುಕದಿರು ಕಂಡ್ಯಮನುಜ 2 ವಿಧಿ ಲಿಖಿತ ಸರಿಗು ಇಹಪರ ಕೆಡಗು ಪರವಧುವಿನೊಳು ಮನವ ಹರಿಸಬೇಡ ತೊರೆದಿವರ ಮರುತಸುತ ಕೋಣೆ ಲಕ್ಷ್ಮೀಪತಿಯ ಸಾಯುಜ್ಯ ಪದವಿಯನು 3
--------------
ಕವಿ ಪರಮದೇವದಾಸರು
ಸಿಕ್ಕಿತೆನಗೊಂದು ಸುವಸ್ತ ಮುಖ್ಯದಂತಸ್ಥ ಅಕ್ಕಿ ಮನಕ್ಕಾಯಿತು ಸ್ವಸ್ತ ದಕ್ಕಿ ಪ್ರಶಸ್ತ 1 ಕಟ್ಟ ಇಡುವದಲ್ಲ ಬಿಟ್ಟರೆ ಹೋಗುವದಲ್ಲ ಮುಟ್ಟಿದರೆ ಬಿಡುವುದಿಲ್ಲ ಗುಟ್ಟು ಕೇಳೆಲ್ಲ 2 ಮುಚ್ಚುಮರಿಲಿಹುದಲ್ಲ ಬಚ್ಚಿಟ್ಟು ಕೊಂಬಂಥದಲ್ಲ ನೆಚ್ಚಿದ ಮಹಿಮನೆ ಬಲ್ಲ ಆಶ್ಚರ್ಯವಲ್ಲ 3 ಭಾನುಕೋಟಿ ತೇಜನಾಗಿ ಘನದಯದಲೊದಗಿ ತಾನೆ ಸಿಕ್ಕಿತ್ಯೆನಗಾಗಿ ಸಾನುಕೂಲಾಗಿ4 ಮಿಹಿತದ ಅಗರ ಸ್ವಹಿತ ಸುಖಸಾಗರ ಮಹಿಪತಿಯ ಮನೋಹರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿಟ್ಟು ತ್ಯಜಿಸಲೆ ಖೊಟ್ಟಿ ಮನವೆ ಎಷ್ಟು ಪೇಳಲಿ ನಿನಗೆ ಸಿಟ್ಟಿನಿಂದಲಿ ಎಷ್ಟೋ ಜನರು ಕೆಟ್ಟು ಪೋದದ್ದರಿಯಲೊ ಪ ಸಿಟ್ಟಿನಿಂದ ಹಿರಣ್ಯಕನ ಎಷ್ಟು ವರಬಲ ಕೆಟ್ಟಿತ್ತೊ ಸಿಟ್ಟಿನಿಂದಲೆ ರಾಣವನ ಆರುಕೋಟಿ ಆಯುಷ್ಯ ಅಳಿಯಿತೊ 1 ಸಿಟ್ಟಿನಿಂದಲೆ ಮುಪ್ಪುರಂಗಳ ಅಷ್ಟಭೋಗವು ತೀರಿತೋ ಸಿಟ್ಟಿನಿಂದಲೆ ಕುರುಪನ ಕುಲ ನಷ್ಟವಾಗಿಪೋಯಿತೊ2 ದುಷ್ಟ ಕಂಸನು ಸಿಟ್ಟಿನಿಂದ ನಷ್ಟ ಪೊಂದಿದ್ದರಿಯೆಲೊ ಸಿಟ್ಟಿನಿಂದಲೆ ಸೇರಿದರು ಯಮ ಪಟ್ಟಣವ ದಿಟ್ಟರೆಂಬರೆಲ್ಲರು 3 ಸಿಟ್ಟಿಗೆದ್ದ ವಿಶ್ವಾಮಿತ್ರನ ಎಷ್ಟು ತಪವೇನಾಯಿತು ಸಿಟ್ಟಿಗೆ ಮನಗೊಟ್ಟ ಬಳಿಕ ನಷ್ಟ ತಪ್ಪದು ಕಾಣೆಲೊ 4 ಅಷ್ಟು ಯಾತಕೆ ನೀನೆ ಯೋಚಿಸು ಸಿಟ್ಟಿನಿಂದ ನೀನೇನಾದಿ ಶಿಷ್ಟ ಶ್ರೀರಾಮನಡಿಗೆ ಪೊಂದಿ ಸಿಟ್ಟನಳಿದು ಬದುಕೆಲೊ 5
--------------
ರಾಮದಾಸರು
ಸಿಟ್ಟು ಮಾಡುವುದೆಂದಿಗು ಸಲ್ಲ ಪೂರ್ಣ ಸಿರಿನಲ್ಲ ಪ. ಮೋಹ ಪಾಶ ಮಿಕ್ಕು ಬಿಗಿದಿಹುದು ರಿಪು ವ್ಯೂಹ ಸುತ್ತಮುತ್ತ ನೆಗದಿಹುದು ದೇಹದಿ ದಿನದಿನ ಬಲಕುಂದಿ ಬಂತು ಚಿ- ದ್ದೇಹ ನೀನೊಲಿವ ಸನ್ನಹಗೊಳ್ವದೆಂತೊ 1 ಒಂದು ಸತ್ಕರ್ಮ ಸಾಧಿಸುವಲ್ಲಿ ಬೇಗ ಪಾತಕ ಝಲ್ಲಿ ಮಂದರಧರ ಮಧುಸೂದನ ಮನದಿ ನೀ ನಿಂದು ಸಾರ್ಥಕ ಮಾಳ್ಪ ತೆರವೆಲ್ಲ ಬಲ್ಲಿ 2 ಹಿಂದೆ ಮುಂದಿನ ಸರ್ವ ಕರ್ಮಫಲ ಎನ್ನ ತಂದೆ ಸ್ವೀಕರಿಸಿ ಮಾಡಿಸು ನಿರ್ಮಲ ಇಂದಿರೇಶ ವೆಂಕಟೇಶನೆ ತ್ವಚ್ಚರ- ಣೆಂದೀವರ ನೆರಳಿರಿಸನುಗಾಲ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು
ಸಿದ್ದಮಾಡಿಕೊ ಹರಿನಾಮ ಬದ್ಧನಾಗದಲೆ ಶುದ್ಧಬುದ್ಧಿಯು ನಿನ್ನೊಳಿದ್ದ ಸಮಯದಲ್ಲೇ ಪ ಕಿತ್ತಿ ಅರ್ಭಟಿಸುತ ಸುತ್ತಿದ ಮಹ ಧನುರ್ವಾಯ ಪಿತ್ತ ಕಫ ಮೇಲಕ್ಕೆ ಒತ್ತಿಕೊಂಡೊಯ್ದು ಕುತ್ತಿಗೆ ಅಡರಿಕೊಂಡೆತ್ತೆತ್ತ ಬೊಗಳಿಸುವ ಹೊತ್ತಿಗ್ಗೆ ಹರಿನಾಮ ಮತ್ತಾಗಿ ಬರದು 1 ನಾಲಗೆ ಸೆಳೆಯುವುದು ಆಲಿಗಳು ತಿರುಗುವುವು ಮೇಲಕ್ಕ್ಹರಿವುವು ನಯನ ನೀಲಗೊಂಬೆಗಳು ಕಾಲಚಕ್ರನಿಗಂಜಿ ಮಲ ಒಸರುತಿರುವಾಗ ನೀಲಶ್ಯಾಮನ ನಾಮ ನಾಲಗ್ಗೆ ಬರದು 2 ಎಂಟೆರಡು ವಾಯುಗಳ ಕಂಠನಾಳಕೆ ಸೇರಿ ಸುಂಟರಗಾಳ್ಯಂತೆ ಅಂಟಿ ಸುಳಿಸುತ್ತೆ ಮೀಂಟಿ ಕರ್ಣದಿ ಒದರಿ ಹೊಂಟೋಗ್ವ ಸಮಯ ದ್ವೈ ಕುಂಠ ನಾಮವು ತಂಟೆಗೆ ಬರದು 3 ಅಡವು ಬಂದು ಅವಯವ ಕೂಡಿಕೊಳ್ಳಲು ಸೊನ್ನೆ ಕಾಯ ನಾಡಿಗಳು ಕುಂದಿ ನೋಡಿ ಸತಿಸುತರಂ ಮಾತಾಡೇನೆಂದೆನಲಾಗ ರೂಢಿಗೀಶನ ಧ್ಯಾನ ಕೂಡಿ ಬರದಯ್ಯ 4 ಮೂಳನಾಗಿ ಸಮಯ ಹಾಳುಮಾಡಿಕೊಳ್ಳದೆ ಕಾಲನಾಳಿನ ಮಹ ಧಾಳಿಯನು ಗೆಲಿಯೊ ಕಾಲಿಮರ್ದನ ಜಗತ್ಪಾಲ ಶ್ರೀರಾಮನಡಿ ಕಾಲತ್ರದಲಿ ದೃಢದಿ ಮೇಲಾಗಿ ಭಜಿಸಿ 5
--------------
ರಾಮದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಸಿದ್ಧಿದಾಯಕ ವಿಘ್ನರಾಜ ಸುಪ್ರ ಸಿದ್ಧ ಮಹಿಮಯೋಗಿಹೃದ್ಯ ರವಿತೇಜ ಪ. ಬಾದರಾಯಣ ಸುಪ್ರಸಾದ ಸತ್ಪಾತ್ರ ಶ್ರೀಧರೋಪಾಸನಶೀಲ ಸುಪವಿತ್ರ 1 ಭೋಗೀಂದ್ರಭೂಷಣ ನಾಗೇಂದ್ರವದನ ಭಾಗವತರ ಭಾಗ್ಯಸದನ ಜಿತಮದನ 2 ಸರ್ವಾಪರಾಧವ ಗುರುವರ್ಯ ಕ್ಷಮಿಸಯ್ಯ ಸರ್ವೋತ್ತಮ ಲಕ್ಷ್ಮೀನಾರಾಯಣಪ್ರಿಯ 3 ಶ್ರೀಹರಿ ಸಂಕೀರ್ತನ
--------------
ತುಪಾಕಿ ವೆಂಕಟರಮಣಾಚಾರ್ಯ
ಸಿಂಧುಶಯನನೆ ಸರ್ವಬಂಧುಬಳಗ ನೀನೆ ತಂದೆ ನೀ ಬಿಟ್ಟರೆ ಬಂಧುಗಳ್ಯಾರಿಲ್ಲ ಪ ಒಂದು ವೃಕ್ಷದಿ ಬಂದು ಪಕ್ಷಿಗ ಳ್ವøಂದ ಗೂಡಗಲ್ಹೋಗುವಂದದಿ ಒಂದಕೊಂದು ಸಂಬಂಧವಿಲ್ಲದ ಬಂಧುವೆಂಬುವರೆಲ್ಲ ಪುಸಿಯು ಅ.ಪ ಕೊಳದಿ ಮಕರಿಗೆ ಸಿಲ್ಕಿ ಬಳಲುತಿರುವ ಕÀರಿಯ ಬಲವಾಗುಳಿಸಿದರಾರು ಬಳಗ ಹಿಂಡುಗಳಿರ್ದು ನಳಿನಲೋಚನ ನೀನೆ ಗತಿಯೆನೆ ಒಲದು ಆ ಕ್ಷಣ ಕರಿಯನುಳುಹಿದಿ ತಿಳಿದು ಭಜಿಸುವ ದಾಸಜನಕತಿ ಸುಲಭನೆಲೊ ನೀ ಜಲಜನಾಭ 1 ಕುರುಪತಿಸಭೆಯೊಳು ಇರುತಿರೈವರು ಪರಿ ದುರುಳ ಕೊಳ್ಳುತಲಿರೆ ನೆರೆದ ಪತಿಗಳು ಸುಮ್ಮನಿರುತಿರೆ ಹರಿಯೆ ಗತಿಯೆಂದು ತರುಣಿ ಮೊರೆಯಿಡೆ ಮಾನವ ಕಾಯ್ದಿ ಚರಣಭಕ್ತರ ನಿರುತರಸುರಧೇನು 2 ದೃಢದಿ ಶ್ರೀಹರಿಯೆಂದು ನುಡಿಯುವ ಬಾಲಗೆ ಹಿರಣ್ಯ ಕಡುವೈರಿಯಾಗಿ ಗಡನೆ ತೋರ್ಹರಿ ಮೂಢ ಎಲ್ಲೆನೆ ಒಡನೆ ಕಂಬದಿ ಮೂಡಿ ದುರುಳನ ಒಡಲ ಬಗಿದು ಪಿಡಿದು ಭಕ್ತನ ಬಿಡದೆ ಸಲಹಿದಿ ಕಡುದಯಾನಿಧೆ 3 ಇಳೆಪತಿ ಪಿತನಿದಿರೊಳ್ ಮಲತಾಯಿಕೃತಿಯಿಂದ ಬಲುನೊಂದು ಧ್ರುವರಾಜ ಕಳವಳಗೊಂಡು ಜಲಜನಾಭನ ಮೊರೆಯನಿಟ್ಟು ಚಲಿಸದೆ ಮನಮುಟ್ಟಿ ತಪಿಸಲು ಒಲಿದು ಧ್ರುವಪದವಿತ್ತಿ ಭಕ್ತರ ಕಲ್ಪಿತವನೀವ ಕಲ್ಪತರು ನೀನು 4 ಪ್ರಾಣೇಶ ಶ್ರೀರಾಮ ಧ್ಯಾನಿಪರಿಗೆ ಸತ್ಯ ನಾನಾದೈವದ ಬಲವು ನೀನೆಯಾಗಿರುವಿ ಕಾನನದಿ ಕಲ್ಲನ್ನು ತುಳಿದು ದಾನ ಕೊಟ್ಟೆಯ ಜೀವ ಸುದತಿಗೆ ಜ್ಞಾನವಿಲ್ಲದಧಮ ಎನಗೇನು ಶಕ್ಯ ನಿನ್ನ ಮಹಿಮೆ ಪೊಗಳಲು 5
--------------
ರಾಮದಾಸರು