ಒಟ್ಟು 2161 ಕಡೆಗಳಲ್ಲಿ , 110 ದಾಸರು , 1442 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಜಯ ತುಂಗಭದ್ರೆ ನಮಿತರನು ಪಾಲಿಸುವ ಸದ್ಗುಣ ಸಮುದ್ರೆ ಪ ವೈರಾಚ ನಗರಿಯಲಿ ವಿಧಾರುಣಿಯ ರೋಚಕನು ಮೀರಿ ದೇವಾದಿಗಳಿಗಂಜದಿರಲು ಘೋರ ರೂಪವ ತಾಳಿ ಅವನ ಕೊಲ್ಲಲು ಹರಿಯ ಮೋರೆ ಕರಿಬೆವರಿಡಲು ಅತಿ ಹರುಷದಿಂದ 1 ರೂಢಿಯೊಳಗೆಲ್ಲ ಸಮಸ್ತ ನದಿ ಉದಕಗಳು ನೋಡಿದರು ರುಚಿಕರವಿಲ್ಲವೆಂದೂ ಸುರರು ಕೊಂಡಾಡುತಿರೆ ಈಡ್ಯಾರು ನಿನ್ನ ಮಹಿಮೆಗೆ ವರಹತನಯೇ 2 ಸಲಿಲವೇ ಹರಿಯಾದ ಶಿವ ನಿನಗೆ ಶಿಲೆಯಾದ ಬಲು ಮುನಿಗಳು ಮಳಲವಳಗಾದರೂ ಜಲಜ ಸಂಭವನು ತೃಣನಾದ ಬಳಿಕ ವಿಷ್ಣು ಕೆಲವುಕಾಲ ನಿನ್ನೊಳಗೆ ನಿಲಿಸಿದನು ತುಂಗೆ ಗಂಗೆ3 ವೇದಾದ್ರಿಯಲಿ ಜನಿಸಿ ನರಸಿಂಹ ಕ್ಷೇತ್ರದಲಿ ಭೇದವಿಲ್ಲದಲೆ ಸಂಗಮವು ಎನಿಸೀ ಆದರದಿಂದ ಹರಹರ ಪೊಂಪ ಬಲಗೊಂಡು ಮೊದಲು ಶ್ರೀ ಕೃಷ್ಣ ಬೆರದೆ ಕೂಡಲಿಯೊಳು 4 ತುಂಗೆ ತುಂಗೆ ಎಂದು ಸ್ಮರಿಸುವಾ ಜನರಿಗು ತ್ತಂಗ ಗತಿಯಾಗುವುದು ಪಾಪವಳಿದು ಮಂಗಳ ಮೂರುತಿ ವಿಜಯವಿಠ್ಠಲನ ಚರಣಂಗಳಲಿ ಇದ್ದವರ ಸತತ ಪೊರೆವುದು ದೇವಿ 5
--------------
ವಿಜಯದಾಸ
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನಮೋ ನಮೋ ಭೀಮಾ | ಜೀವೋತ್ತುಮಾಪ್ತ ಜನ ಪ್ರೇಮಾ ಪ ಕುಮಾನ ಜನ ಸುಪ್ರಮೋದ ವಿನಾಶಕ ಶಮಾದಿ ಗುಣನಿಧೆ | ಕ್ಷಮಾಪಣಂ ಕುರು ಅ.ಪ. ಕಾನನ ಸುಕುಠಾರ ||ಭ್ರಾಂತ ದುಶ್ಯಾಸನ | ಅಂತ್ಯವ ಕಾಣಿಸಿಕಾಂತಾ ಮಣೀಯನು | ಸಂತೋಷ ಪಡಿಸಿದೆ 1 ಗೋಪಿ | ನಂದಾನಗತಿ ಪ್ರೀಯವಂದೀಸಿ ಬೇಡುವೆ | ಕುಂದೂಗಳೆನ್ನಯನೊಂದಾನು ಎಣಿಸಿದೆ | ನಂದನ ಪಾಲಿಸೊ 2 ಕಾಯ ಭವ ಮುಖಾದಿ ಗೇಯ ||ಅವಿರತದಿ ಗುರು | ಗೋವಿಂದ ವಿಠಲನಸ್ತವನ ಗೈವನ | ಭವವ ಕಳೆಯುವ 3
--------------
ಗುರುಗೋವಿಂದವಿಠಲರು
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನರಜನ್ಮ ವ್ಯರ್ಥವಲ್ಲವೇ | ಈ ಮೂಢರ | ನರಜನ್ಮ ವ್ಯರ್ಥವಲ್ಲವೇ ಪ ಗುರುಗಳ ಶರಣ್ಹೊಕ್ಕು ದಯ ಪಡಿಲಿಲ್ಲಾ | ತರಣೋಪಾಯದ ನಿಜ ತಿಳಿದವನಲ್ಲಾ 1 ಘಟ್ಟಿಸಿ ಒಬ್ಬರ ಮನಿಯ ಮುಣಗಿಸಿ | ಹೊಟ್ಟೆಯ ಬಿಟ್ಟನು ಅನ್ಯಾಯ ಘಳಿಸಿ 2 ಉತ್ತಮರಲ್ಲಿ ಅರಕ್ಷಣವಕ್ಕುಳ್ಳಿರನು | ಲೆತ್ತ ಪಗಡಿಯಾಡಿ ಹೊತ್ತು ಗಳೆವನು 3 ವಾಸುದೇವನ ಸೇವೆಗಾಲಸ್ಯ ಹಿಡಿದಾ | ಕಾಸಿನ ಆಶೆಗೆ ಎತ್ತಾಗಿ ದುಡಿವಾ 4 ಮಹಿಪತಿ ನಂದನ ಪ್ರಭುವಿನ ಮರತಾ | ಸ್ವಹಿತದ ಹಾದಿಗೆ ಅವನು ಹೊರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಸಿಂಹ ನರಸಿಂಹ ನಮಿಸುವೆನೊ ಘೋರ ದುರಿತ ಬೆನ್ನ ಬಿದ್ದಿದೆ ಪರಿಹರಿಸೋ ಶ್ರೀ ನರಸಿಂಹ ಪ ಪರಮೇಷ್ಠಿ ಹರ ಸುರಪತಿ ಮುಖರಾ ಸುರನಿಕರ ಪೊರೆವ ಪ್ರಭೊ ಪ್ರವರ ದುರಿತವು ಅವರನ್ನ ಬಾಧಿಸದಂತೆ ಪೊರೆದ ಪರಿಯಿಂದ ಎನ್ನ ಪೊರೆಯೊ 1 ಕಾಯ್ದು ತನ್ನಯ ತನ್ನ ತಂದೆಯ ಬಾಧೆ ಭಯದಿಂದ ಮನದಲ್ಲಿ ನಿನ್ನ ನೆನಿಯೆ ದಯದಿಂದ ನೀ ಕಂಭದಲಿ ಬಂದು ಪೊರೆದಂತೆ ಎನ್ನ ಭಯ ಪರಿಯೆ ಪೊರೆ ಶ್ರೀ ನರಸಿಂಹ 2 ನಿನ್ನ ಪೆಸರೆಂದರೆ ದುರಿತಂಗಳು ತನ್ನಿಂದ ತಾನೆ ಜರಿಯುವವು ಚನ್ನಾಗಿ ಶರಣರ ಪೊರೆದದಕೆ ನಿನ್ನವರೆಂದು ಕೇಳಿ ಬಲ್ಲೆ ಶ್ರೀ ನರಸಿಂಹ 3 ನಖ ಮುಖ ಶಿಖಿ ತನ್ನ ನೆನೆಯೆ ಸುಖಿತರವಾಹೋದು ಶರಣರಿಗೆ ಮಖಭುಜ ರವಿ ಸಾಕ್ಷಿ ಇದಕಾಗಿರೆ ವಿಖನಸಾರ್ಚಿತ ಪಾದ ಸುಖಮಯನೆ ಶ್ರೀ ನರಸಿಂಹ ಕಾಯೊ 4 ಅರಿದರೀಧರ ವರ ಕರಯುಗನೆ ಕರಯುಗ ಜಾನು ಶಿರದಲ್ಲಿಪ್ಪನೆ ಶಿರದಿಂದೊಪ್ಪುವ ಕರತಳನೆ ವರ ವಾಸುದೇವವಿಠಲ ಪೊರೆಯೊ ಶ್ರೀ ನರಸಿಂಹ ಕಾಯೊ 5
--------------
ವ್ಯಾಸತತ್ವಜ್ಞದಾಸರು
ನರಹರಿ ಬಂದು ಮೂಡಿದಾ ಶರಣಗದಯವಾ ಮಾಡಿದಾ ಪ ಛಟ ಛಟ ಶಬ್ಧವ ತೋರುತಾ ಪಟ ಪಟ ತಾರೆಗಳಾರಲು ತಾ 1 ಗುಡ ಗುಡ ಗುಟ್ಟಿಬಾಯಾಳಗಗ್ನಿಯ ಧಡ ಧಡ ಕಿಡಿಗಳನುಗುಳುತಾ ಗಡ ಬಡಿಸಲು ಸಮುದ್ರಗಳೆಲ್ಲವು ಬುಡು ಬುಡು ಗುಳ್ಳೆಗಳೇಳಲು ತಾ2 ಫಳ ಫಳ ಭೂಮಿಯು ಬಿಚ್ಚಿತು ಗಿರಿಗಳು ಹಳ ಹಳ ಕಲ್ಲುಗಳುದುರಿದವು ಭಳ ಭಳ ಭಾಸಮ ಗಡಿಶತ ತೇಜನ ಥಳ ಥಳ ಮಿಂಚುಗಳಾಡಿದವು 3 ಮಾಗ್ಗಿತು ಧನಿಯನು ಕೇಳುತ ಕೇಳವು ಮುಗ್ಗಿತು ಕಂಗಾಣದೆ ಹಲವು ಅಗ್ಗಳ ದೈತ್ಯರು ದೂರದಿ ಬಿಸುಟರು ನುಗ್ಗಾದವು ಅವರಾಯುಧವು 4 ಭವ ಭವ ಸುರಮುನಿ ಇಂದ್ರರು ಇರದೆವೆ ಮುರಿಯನು ಸಾರಿದಿರು ಗುರುವರ ಮಹಿಪತಿ ನಂದನಸಾರಥಿ ಶರಣಿಂದೆನುತಲಿ ಹೊಗಳಿದನು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನವ ಸುವರ್ಣದಾ ಪರಿಯ ಹೊಳೆವ ಕೆಂಜೆಡೆಯಲೀ ದಿವಿಜ ನದಿಯ ನಿರುತ ಧರಿಸೀ ಮುಂದಲಿಯ ಲೀ ತವ ಶೀತಾಂಶೂನಾ ಕಳೆಯ ತಿಲಕಾ ಮಾಡಿ ಮೆರೆವಾ ಭವ ಭಯ ನಿವಾರಿಸಿ ಹೊರೆವಾ 1 ಮದನ ನಳಿದಾ ಭಾಲನಯನಾ ಸುವಿಧ್ಯದಿ ಮೊರೆಹುಗಲು ವಲುವಾನಂದನಯನಾ ಫಣಿ ಭೂಷಣ ಮಾರಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 2 ಠವ ಠವಿಸುವ ಮುನಿಯ ಮನೋಹರ ಪಂಚ ವದನಾ ರವಿ ಕೋಟಿ ತೇಜದಿರುವಾಘನ ಕಾರುಣ್ಯ ಸದನಾ ಭವಾನೀ ಯಡದ ತೋಡಿಯಲಿರಿಸೀ ಕೊಂಡು ಮೆರೆವಾ ಭವ ಭಯ ನಿವಾರಿಸಿ ಹೊರೆವಾ 3 ಧವಲೀಸುತಿಹ ತನು ರೂಚಯ ಕರ್ಪೂರ ಪರಿಯಾ ತವಕದಿಂದುಟ್ಟಾ ಉಡುಗಿ ಹರನಾ ಚರ್ಮ ಕರಿಯಾ ಸವಿಭೂತಿಯ ಸುಧರಿಸಿ ತಪವೇಷದಿ ಮೆರೆ ವಾ ಭವ ಭಯ ನಿವಾರಿಸಿ ಹೊರೆವಾ 4 ಭುವನತೃಯದಾ ಸುರನರೋರಗ ಪೂಜಿಸುತಿಹಾ ಪಾದ ದ್ವಿತೀಯಾ ಅವಿನಾವಾ ದೇವರ ಜನಗಿರಿ ವಾಸವಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 5 ತ್ರಿವಿಧ ತಾಪವಾಹರಿಸುವದು ಹರಯಂದ ಭರವಿದೀ ಭವಯನ್ನ ಲಾಗಾ ಸುಖಗರೆವ ಸಾನಂದ ವರದೀ ಭವ ಭಯ ನಿವಾರಿಸಿ ಹೊರೆ ವಾ 6 ಸವಾರೀಧರನಾವರಣದಿರುವಾ ಕಪ್ಪುಗೋರಳಾ ತ್ರಿವಿಷ್ಟಾಪರಿಯಾ ಪದವ ಮುನಿವಾ ತ್ರಿಶೂಲ ಸರಳಾ ಕವಿಬೋಧಿಸುವಾ ಡುವರ ಸೂತ್ರದ ಕೈಯ್ಯಾ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 7 ಶಿವಷ್ಟಕವನು ಹೃದಯ ಪತ್ರ ಮ್ಯಾಲ ಬರವಾ ಅವನಿಷ್ಟಾರ್ಥವಾ ಕುಡುತ ದುಷ್ಕøತ ಮೂಲಹರಿವಾ ಅವಿದ್ಯೋಡಿ ಸುವಾ ಗುರು ಮಹಿಪತಿಯಾಗಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನವಖಂಡದ ಸ್ವಾಮಿ ಒಂದು ನಮ್ಮಗೆಲಿಸಲಿಶುಕಬುದ್ಧಿ ಬಾಲೆಯರ ಕುಂದುಗೈಸಲಿ ಪ. ಚನ್ನನಚಾರಿವಾಸ ಮನ್ನಾರಿ ಕೃಷ್ಣನ ಸಹಮುನ್ನ ಪ್ರಯಾಗಿ ಮಾಧವನ ಬಲಗೊಂಬೆವು1 ಇಳಾ ವರ್ತಾ ಭದ್ರಶಾಮ ಈತನ ಬಲಗೊಂಬೆವುನಾವು ಈತನ ಬಲಗೊಂಬೆವು ಅವರು ನಮ್ಮ ಪಂಥ ಗೆಲಿಸೆಂಬೆವು2 ಹರಿ ವರುಷ ಕಿಂಪುರುಷ ಭರತ ಖಂಡದಲ್ಲಿದ್ದಭರತ ಖಂಡದಲ್ಲಿದ್ದ ನರಹರಿಯ ಬಲಗೊಂಬೆ ಪಂಥಗೆಲಿಸುವ ಶುದ್ಧ 3 ಕೇತು ಮೂಲ ಖಂಡದ ಹರಿಯ ಪ್ರೀತಿಲೆ ಬಲಗೊಂಬೆವುಮಾತು ಸೋಲಿಸಿ ಅವರ ನಮ್ಮ ಮಾತುUಲಿಸೆಂಬೆವು 4 ರಮ್ಯಕ್ಕೆ ಹಿರಣ್ಮಯ ಈ ಕುರುಖಂಡವೆಂಬೊಕುರುಖಂಡದಲಿ ರಮಿಸಿ ಅಲ್ಲಿರುವ ರಾಮೇಶನ ಬಲಗೊಂಬೆವು5
--------------
ಗಲಗಲಿಅವ್ವನವರು
ನವನೀತ ಕೃಷ್ಣನ ಪ ನೆನೆಯೋ ಗೋಪೀತನಯ ಕಂಸನ ಮನೆಯ ಕೊಂಡಾತನ ಅ ತರಳ - ಚೆಲುವ ಮುಂಗುರುಳಹುಲಿಯುಗುರ ಕೊರಳಉಂಗುರಗಳ ಬೆರಳಕಾಲಿಗೆ ಕಟ್ಟಣಳನಿಲುವುತಿಹ ದುರುಳತನದಲಿ ತುರುಗಳ ಕಾಯ್ದವನ 1 ವಿಷವನುಣಿಸಿ ತಲ್ಲಣಿಸುವಹುರಿತ ಸಹೊಸವ (ದುರಿತ ಸಹವಾಸವ ?)ಆದರಾವಿ ದಾಸವ (ಅದರ ವಿಲಾಸವ ?)ನೋಡಿದರೆ ಸಿಸುವಾಗಿಬಲು ಅಸುರರ ಗೆಲಿದವನ 2 ಸಲಯ ಕಾಳಿಂಗನತಲೆಪಿಡಿದ ಕಂಗೊಲೆಯಮೊರೆ ಕೇಳಿ ಬಲಿಯಅವನ ಕೋಮಲೆಯಕಿವಿಗೆ ಪೂಮಾಲೆಯಾದ ನೀಟುಗಾಯನೆಲೆಯಾದಿಕೇಶವನ 3
--------------
ಕನಕದಾಸ
ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ ಧ್ರುವ ನಾಕು ಬೀದಿಯೊಳಗೆ ಸಾಕು ಸಾಕು ಮಾಡಿದ ಸೋಂಕದೆ ಕೈಯ್ಯಗೊಡಾ ಬೇಕೆಂದಾರುಮಂದಿಗೆ 1 ಹದಿನೆಂಟು ಸಂಧಿಯೂಳು ಶೋಧಿಸಿನೋಡಿದರೆ ಮದನ ಮೋಹನ ನೋಡಿ 2 ತಾನೆ ಸಿಕ್ಕುವ್ಹಾಗೊಂದು ಮನಗೂಡಬೇಕು ತಂದು ದೀನ ಮಹಿಪತಿ ಸ್ವಾಮಿ ಅನಕಾ ದೋರತಾ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನವನೀರದಾಭಗಾತ್ರ ಅವನೀಸುತಾಕಾಂತ ಪ. ಅಣೋರಣೀಯನೆನಿಸಿ ಅನಂತರೂಪ ಧÀರಿಸಿ ಪ್ರಣವ ಸ್ವರೂಪಿ ಮೆರೆವೈ1 ಅನಾಥನಾಥ ನೀನೇ ಸನಂದನಾದಿನುತನೇ ವನಜಾಸನನಂ ಪಡೆದವನೇ 2 ಮದಾಂಧರಾಗಿ ಕೆಡುವ ಪದಚ್ಯುತರ ಪೊರೆವ ವ ಧನ್ಯ ನೀನೆಲೆದೇವ 3 ಬಾರಯ್ಯ ಭಕ್ತಭರಣ ತೋರೀಗ ನಿನ್ನ ಚರಣ ಬಾರೆನ್ನ ಶೇಷಗಿರಿರಮಣ4
--------------
ನಂಜನಗೂಡು ತಿರುಮಲಾಂಬಾ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಳಿನಿಯ ಬಳಿಯಲಿ ಕುಳಿತ ಮರಾಳಾ ಕೊಳಲಿನ ಬಾಲನು ಬಂದರೆ ಹೇಳಾ ಪ ಪುಳಿನದ ಕೊಳದಲಿ ಕುಳಿತು ಕಾಯುವಳಾ ಗೆಳತಿಯೆ ರಾಧೆಯು ಅವಳನು ಕೇಳಾ ಅ.ಪ ತರುಗಳ ಮರೆಯಲಿ ತುರುಗಳ ನೆರೆಯಲಿ ಕರುಗಳ ಜೊತೆಯಲಿ ನಲಿಯುತಲಿ ಅರಳಿದ ಹೂಗಳ ಪರಿಮಳ ಭಾರದಲಿ ಮೆರೆವಲತೆಯ ಬಳಿ ಇರುವನು ಒಲವಿನಲಿ 1 ಮುರಳಿಯ ನಾದವನೆಲ್ಲೆಡೆಗೆರೆವ ತರುಣಿಯರೀವಾ ಬೆಣ್ಣೆಯ ಮೆಲುವಾ ಮೆರೆವಪೀತಾಂಬರ ಉಡಿಗೆಯೊಳೆಸೆವ ಶರಣೆಂದೊಡೆ ನವಚೇತನವೀವ 2 ಪಾಡಿಪೊಗಳುವರ ಕೂಡ ನರ್ತಿಸುವಾ ನಾಡೆ ನರ್ತಿಸುವರ ನೋಡುತ ನಗುವ ಬೇಡಿದ ವರಗಳ ನೀಡುತ ನಗುವ ಮಾಡೆ ವಂದನೆಗಳ ಓಡಿಬಂದಪ್ಪುವ 3 ಜೊನ್ನದ ಬಣ್ಣವ ಹಳಿಯುತೆ ಬೆಳಗುವ ಚೆನ್ನ ಮರಾಳವೆ ನಿನ್ನೆಡೆ ಬರುವ ಅನ್ನೆಗಮೆನ್ನನೀ ಕರೆಯಲು ಮಾಡುವ ಸನ್ನೆಯ ಕಂಡೋಡಿ ಪಿಡಿಯುವೆ ಚರಣವ 4 ಬಾಲೆಯರೊಡನೆ ಕೋಲಾಟವನಾಡುವ ನೀಲಾಂಬರ ಘನ ಶ್ಯಾಮನವ ಮೇಲೆನಿಸುವ ವನಮಾಲೆಯಿಂದೆಸೆವ ಬಾಲನವನು ಮಾಂಗಿರಿಗೆ ಬಾರೆನುವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾ ನಿನ್ನ ಮರೆತರೆ ನೀ ಯನ್ನ ಮರೆವರೆ ದೀನ ವತ್ಸಲ ರಂಗ ದಾನವಾಂತಕ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಧ್ಯಾನ ದೊಳಿಟ್ಟೆನ್ನ ಮಾನದಿಂದಲಿ ಕಾಯೋ ಶ್ರೀನಿವಾಸ ಪ್ರಭುವೆ ಅ.ಪ. ದಿನಕರನ ಜನರು ನೆನೆಯದೆ ಬಿಟ್ಟರೆÉ ಜನರನ್ನು ಬೆಳಗದೆ ದಿನಕರ ಬಿಡುವನೆ ಹೀನವಿಷಯದಿ ಮುಳುಗಿ ತೇಲುವ ಎನ್ನ ನೀನಾಗಿ ಪೊರೆದರೆ ಘನತೆಯಲ್ಲವೆ ದೇವಾ 1 ಪೆತ್ತ ಮಕ್ಕಳು ಬಲು ಕತ್ತೆಗಳಾದರು ಹೆತ್ತ ತಾಯಿಯು ತಾನು ಎತ್ತದೆ ಬಿಡುವಳೆ ಮತ್ತನಾನಾದರು ಉತ್ತಮೋತ್ತಮಸ್ವಾಮಿ ವಾತ್ಸಲ್ಯತೋರಯ್ಯ ಹಸ್ತಿವರದ ಧೊರೆಯೇ 2 ಗೋವತ್ಸಹಾಲಿಗೆ ಗೋವಿನಗುದ್ದಲು ತವಕದಿ ಉಣಿಸದೆ ಗೋವು ಬಿಡುವುದೇ ತವಪಾದ ಕಮಲದಿ ಅವಿನೀತನಾದರೆ ಸುವಿವೇಕ ಜ್ಞಾನವ ಈಯದಿರುವರೇನೋ 3 ಕರಿ ಧೃವ ಭಕ್ತರ ಪೊರೆಯಲಿಲ್ಲವೆ ನೀನು ಘೋರಪಾಪಗಳ ತರಿದೆ ಅಜಾಮಿಳಗೇ ವರವಿತ್ತು ವ್ಯಾಧಗೆ ವರಕವಿಯೆನಿಸಿದೇ ಭಾರವೆ ನಾನಿನಗೆ ಕರುಣಾಸಾಗರ ರಂಗ 4 ಜಯಮುನಿ ಅಂತರ ವಾಯುವಿನೊಳಗಿಪ್ಪ ರಾಯ ಶ್ರೀಕೃಷ್ಣವಿಠಲನೆ ನಂಬಿದೆ ಕಾಯವಚ ಮನದಿ ಜೀಯನೆ ಗತಿಯೆಂಬೆ ನೋಯಿಸದೆ ಭವದಿ ದಯಮಾಡಿ ಸಲಹಯ್ಯ 5
--------------
ಕೃಷ್ಣವಿಠಲದಾಸರು