ಒಟ್ಟು 1175 ಕಡೆಗಳಲ್ಲಿ , 95 ದಾಸರು , 1043 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ಬಾ ಬಾ ಯದುಕುಲರಾಯ | ಹೇ ಭಾಗವತಪ್ರಿಯ ಪ ಸಾರಸಾಕ್ಷ ಕರುಣಾರಸಪೂರಿತ ಮಾರಜನಕ ಭವತಾರಕ ಮುರಹರ ಅ.ಪ. ಬೃಂದಾರಕ ಬೃಂದ ಸುವಂದಿತ ಚರಣ | ಭುಜಗೇಂದ್ರಶಯನ ವಿಹಗೇಂದ್ರಗಮನ ಮಂದಹಾಸ ಬಲುಸುಂದರವದನಾ | ಶುಭಗಣಪೂರ್ಣ ಮಂದರಧರ ಗೋವಿಂದ ಭಜಕ ಜನ ಮಂದಾರನೆ ಮುಚುಕುಂದವರದ ರಾ ಕೇಂದುಕುಲಜಲಧಿ ಚಂದಮನೆನಿಸುವ ಇಂದಿರೆಯರಸ ಶ್ರೀ ಕರಿಗಿರೀಶನೇ 1
--------------
ವರಾವಾಣಿರಾಮರಾಯದಾಸರು
ಬಾರಯ್ಯ ಯದುಕುಲತಿಲಕ ತೋರಯ್ಯ ನಿನ್ನ ಮುದ್ದು ಮುಖವಓರಂತೆ ಮುದ್ದಿಸಿ ಯಶೋದೆ ಕುಮಾರನೆ ಬಾರೆಂದಳೈಪ. ಅಂದವಾದ ನಿನ್ನ ಮುದ್ದುಮುಖದ ಚೆಂದವನ್ನು ತಾ ನೋಡಿಕಂದಿಕುಂದಿ ಇಂದಿರೆಯು ಮರುಳಾಗಿ ಕಂದ ನಿನ್ನ ಪೊಂದೇನೆಂದಳೈ 1 ಕೃಷ್ಣ ನಿನ್ನ ಮಕ್ಕಳಾಟಿಕೆ ಶ್ರೇಷ್ಠರಿಗೆ ಮೋಹನವಾಯಿತುದುಷ್ಟಮತಮಾತಂಗಕ್ಕೆ ಅಟ್ಟುವೊ ಸಿಂಹದ ಮರಿಯೆ2 ಇಂಥ ಹಯವದನನ ಇಂಥ ದೇವರ ನಾ ಕಾಣೆಪಂಥವೇನೊ ಎನ್ನ ಕೂಡೆ ದಿನಮಣಿ ತಿಂತಿಣಿಯೆ ಬಾರೆಂದಳೈ3
--------------
ವಾದಿರಾಜ
ಬಾರೆ ವೆಂಕಟರಮಣಿ ಶ್ರೀದೇವಿ ನೀ ಬಾರೆ ವೆಂಕಟರಮಣಿ ಪ ನಿತ್ಯ ಅ.ಪ. ಏನು ಪುಣ್ಯವೆ ನಂದು ಪಾರಾಯಣನೀನು ಕೇಳುವಿ ಬಂದುಹೀನ ಮಾನವನಿಗೆ ನೀನು ಬರುವಿ ಎಂಬೊಜ್ಞಾನವಿಲ್ಲದೆ ಉಚ್ಚ ಸ್ಥಾನದೊಳಗೆ ಬಾರೆ 1 ಸ್ವಪ್ನದೊಳಗೆ ಬರುವಿ ಶ್ರೀದೇವಿ ನೀಕ್ಷಿಪ್ರದಿಂದಲಿ ಪೋಗುವಿಸರ್ಪಶಯನ ನಮ್ಮಪ್ಪ ಗೋಕುಲ ಬಾಲಅಪ್ಪಿಕೊಳ್ಳುವ ಸುಖ ಒಪ್ಪಿಸಬೇಕಮ್ಮ 2 ಸಿರಿ ರಂಗನಂಕದಿ ಕೂತುಭೃಂಗಕುಂತಳೆ ಹೃದಯಂಗಳದೊಳಗಾಡೆ 3 ಎಲ್ಲ ದೇವತೆಗಳನೆ ತಪಾದಿಯೆಪುಲ್ಲ ವಾರಿಜನಯನೆಗೊಲ್ಲ ಬಾಲನಪಾದ ಪಲ್ಲವ ನೋಡದೆನಿಲ್ಲಲೊಲ್ಲದು ಮನಸೊಲ್ಲು ಲಾಲಿಸೆ ತಾಯೆ4 ಇಂದಿರೇಶನ ರಾಣಿ ಎನ್ನಯ ಮನೋ-ಮಂದಿರದೊಳು ಬಾ ನೀನಂದಗೋಕುಲ ಬಾಲಾನಿಂದು ಕರದೊಳೆತ್ತಿತಂದು ತೋರಿಸೆ ಅರವಿಂದನಿಲಯೆ ಲಕ್ಷ್ಮಿ 5
--------------
ಇಂದಿರೇಶರು
ಬಾರೊ ಕೃಷ್ಣ ಬಾರೊ ಕೃಷ್ಣ ಬಾರೊ ಕೃಷ್ಣ ಮನದಸದನಕೆ ಪ ತೊರೊ ಕೃಷ್ಣ ತೊರೊಕೃಷ್ಣ ತೊರೊಕೃಷ್ಣ ಚರಣ ಬಡವಗೆ ಅ ಶಿರವ ನಿಡುವೆ ಚರಣದಲ್ಲಿದುರಿತಹರಣ ಕರುಣಭರಿತನೆ ಪೊರೆವ ಧರಣಿ ಧರಿಪನೆ 1 ಸಿರಿಯಮದದಿ ಮರೆತೆ ನಿನ್ನ ಕರೆದು ಪೊರೆಯೊ ಶರಣರಕ್ಷಕಾ ಅಳಿವೆ ಕ್ಷೇಮ ಧಾಮನೆ 2 ವೇದವಿನುತ ಮೋದಭರಿತ ಸಾಧುಚರಿತ ಆದಿ ಕಾರಣಾ ಕಾಯೊ ಬಂಧನೀಡ್ವನೇ3 ನೀರಜಾಕ್ಷ ವಾರಿನಿಲಯ ಸೂರಿಗಮ್ಯ ಪೂರ್ಣಧಾಮನೆ ಸರ್ವನಾಮ ಸರ್ವಕರ್ಮ ಸರ್ವಶ್ರೇಷ್ಟಸರ್ವ ಪ್ರೇರಕಾ 4 ಇಂದಿರೇಶ ನಂದಪೂರ್ಣ ಸುಂದರಾಂಗ ಬಂಧಮೋಚಕ ಕುಂದುರಹಿತ ವಂದನಾರ್ಹ ಬಿಂದು ಬಿಂಬ ಕಂಧರಾಶ್ರಯ 5 ಭುವನ ವಿತತ ಭುವನಮೂಲ ಭುವನ ಪಾಲ ಭುವನನಾಶಕ ಭುವನ ಭಿನ್ನ ಸ್ತವನ ಪ್ರೀಯ ಕವನವರಿಯೊ ಕವಿಬಿರೀಡಿತ ಭಕುತಿದಾಯಕ ಶಕುತ “ಶ್ರೀಕೃಷ್ಣವಿಠಲ” ಯುಕುತಿ ಗೊಲಿಯ ಲಕುಮಿನಾಯಕ
--------------
ಕೃಷ್ಣವಿಠಲದಾಸರು
ಬಾರೊ ಬಾರೊ | ಕರುಣಾಕರ ರಂಗನೆ ಬಾರೊ ||ತೋರೊ ತೋರೊ ಚರಣಾರ ವಿಂದವನೆ ಪ ಇಂದಿರೆ ರಮಣನೆ ಬಾರೊಸಿಂಧು ಶಯನ ಅರವಿಂದ ನಯನ | ಎನ್ನ ತಂದೆ ತಾಯಿ ಬಾರೊ 1 ಸರ್ಪಶಯನ ಬಾರೊ | ಕಂದರ್ಪನಯ್ಯಾ ಬಾರೋಶೂರ್ಪಕರ್ಣ ಪ್ರಿಯ ಭ | ಕ್ತಾರ್ಪಿತಾಲ್ಪಕೊಳ್ವ ಬಾರೋ2 ದೋಷ ದೂರ ಬಾರೊ | ಮಧ್ವೇಶ ವದಗಿ ಬಾರೋಶ್ರೀಶ ಮುದ್ದು ಮೋಹಾಭಿಧ | ಗುರು ಗೋವಿಂದ ವಿಠ್ಠಲ ಬಾರೋ 3
--------------
ಗುರುಗೋವಿಂದವಿಠಲರು
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೊ ಹರಿ ಬಾರೊ ದೊರಿ ಬಾಬಾ ಮುರಾರಿ ನೀ ಪ. ನಾರಿಯೇರು ಕರಿಯುವರು ಹೀರಾದ ಪೀಠಕೆ ಬೇಗಾ ಅ.ಪ. ಪದ್ಮಪಾದ ಪೊಳೆಯುತಲಿ ಪದ್ಮಾಕ್ಷಿಯ ಕೂಡುತಲಿ ಪದ್ಮಾದ ಪೀಠಕೆ ಬೇಗ ಶೌರಿ 1 ಪೀತಾಂಬರ ಧರಿಸುತಲಿ ಪೀತ ವಸ್ತ್ರ ವಲಿಯುತಲಿ ಜಾತಿ ಮುತ್ತಿನ್ಹಾರ ಹಾಕಿ ಸೀತಾಪತಿ ಶ್ರೀ ಕೃಷ್ಣನೆ 2 ಚಂದ್ರ ಸದೃಶಾನನ£ É ಇಂದಿರೇಯ ಪೊಂದಿದನೆ ಮಂದರಾದ್ರಿ ಎತ್ತಿದನೇ ಸುಂದರ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಾರೋ ಕ್ಷೀರೋದಧಿಶಯನ ಹರೆ ನಿನ್ನ ಕರುಣವ ಎನ್ನೊಳು ತೋರೊ ಪ ನಂದನಂದನ ಹೃನ್ಮಂದಿರಕೆ ನೀ ಬೇಗ ಬಾರೊ ಅ.ಪ ಶೌರೇ ನಿಂಗೆ ಸೇರಿದಾವನಾಗಿ ಇನ್ಯಾರಿಗೆ ಬೇಡಲೊ ಮುರಾರೆ ಕರುಣಿಸಿ ಬಾರೊ 1 ಕೃಷ್ಣಾಮೂರ್ತೆ ಸೃಷ್ಟಿಪಾಲನಾಗಿ ಪರಮೇಷ್ಠಿ ಜನಕ ನಿಂಗಿಷ್ಟೂಪೇಕ್ಷೆ ಯಾಕೋ 2 ಇಂದಿರೇಶ ಚಂದಿರವದನ ಮುಚುಕುಂದವರದ ಗೋವಿಂದ ಕರುಣಿಸಿ ಬಾರೊ 3 ಮಂಗಳಾಂಗ ಅಂಗಜ ಜನಕ ಯದುಪುಂಗವ ಕೈಬಿಡದಾಂಗೆ ಪಾಲಿಸು 4 ನಾಮಗಿರಿಸ್ವಾಮಿ ನಾರಸಿಂಹ ಬಲರಾಮ ಸೋದರ ಪ್ರಣಾಮ ಮಾಡುವೆ ಬಾರೊ 5
--------------
ವಿದ್ಯಾರತ್ನಾಕರತೀರ್ಥರು
ಬಾರೋ ನಮ್ಮನಿಯೊಳಗೆ ಭಾರತಿಪತಿ ಪ ಬಾರೋ ನಮ್ಮನಿಗೀಗ ನೀರಜಾಕ್ಷನು ನಿನ್ನಸೇರಿದ ಜನರೊಳು ಭಾಳ ಬಹಳೇ ಪ್ರೀತಿಯ ಮಾಳ್ಪ ಅ.ಪ. ಹರಿಯ ಮಂಟಪದೊಳು ಸರಸಿಜಾಕ್ಷನ ಮುಂದೆಇರಿಸಿ ನಿನ್ನನು ನಿತ್ಯಾ ಸ್ಮರಿಸಿ ಪೂಜಿಪೆ ಸ್ವಾಮಿ 1 ನಿನ್ನ ಸೇರಿದ ಕಪಿಯನ್ನು ಪೊರೆದ ಹರಿನಿನ್ನ ಸೇರದ ವಾಲಿಯನ್ನು ಘಾತಿಸಿದಾ 2 ನಂತ ತೀರ್ಥರೆ ದಯದಿಂದ ನಮ್ಮೊಳು ಭವ-ಬಂಧನ ಬಿಡಿಸೆಂದು ಇಂದಿರೇಶಗೆ ಪೇಳು 3
--------------
ಇಂದಿರೇಶರು
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು
ಬಾರೋ ಬಾರೋ ಬಾರೋ ರಂಗಾ | ಬಾರೋ ಶುಭಾಂಗಾ| ವರಶೌರಿ ಪರೋಪರಿದೋರ್ವಲೀಲೆ | ವೀರ ದೀರ ಶೂರುದಾರಿ ವಾರಿಜಾರಿ ವಂಶಜಾ ಪ ಉತ್ಸಹದಗೆ ತ್ಯಾವಿನಾ | ವತ್ಸವ ಗಾಯಿದೇ ಪ್ರಾಣಾ | ಪರ ಸಂಹಾರಾ | ಮತ್ಸ್ಯಾವ ತಾರಾ | ಸಿರಿ ವತ್ಸ ಚಿತ್ಸ್ವರೂಪನೇ 1 ಕಾಯಜಕೋಟಿ ಲಾವಣ್ಯಾ | ಕಯಾದು ಸುತಪಾಲನಾ | ತ್ರಯಭುವನ ವ್ಯಾಪಕಾ | ತೃಯಾಕ್ಷ ಸಖಾ | ದಯ ತೋಯಧಿ ಶ್ರೀ ಯದುನಾಯಕನೇ | ತೋಯಜಾಯತಾಕ್ಷಾಕ್ಷಯ ಪಯಧೀಯ ವಾಸನೇ 2 ಮಂದಮತಿಯೆಂದು ನೋಡೋ | ಕುಂದನನಾರಿಸಬ್ಯಾಡೋ | ಬಂದು ಕೊಡೋ ಮಹಿಪತಿಯಾ | ನಂದನ ಪ್ರಿಯಾ | ಎಂದೆಂದಿಗೆ ಸದ್ವಂದ ರಕ್ಷಕ ಶ್ರೀ - ನಂದ ಕಂದ ಇಂದಿರೇಶಾನಂದನೀವಾ ನಂದನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು ತಾಭೂರಿ ದೃಷ್ಟಿಯ ಮಾಲಿಯನ್ಹಾಕಿದಾಪಾರ ಮಹಿಮ ಬಾ ಪ ಐದು ವರುಷ ಬಾ ಎನಗೆ ಬೋಧವ ನೀಡಿದಿ ಬಾಸಾಧು ಸೇವಿತ ಶ್ರೀಧರ ಭೂಧರ ಗೋಧರಧರನೇ ಬಾ 1 ಗೌರ ಮುಖನೆ ಬಾ ಕರುಣಾವಾರಿ ನಿಧಿಯೇ ಬಾಆರ ಮಾತನು ಹಚಿಕೋ ಬ್ಯಾಡೆಲೆ ಸಾರಿದ ಕೃಷ್ಣ 2 ಗೋಪಿ ಬಂಧನ ಹರಣಾ ಬಾಮುಂದೆ ನಿಲ್ಲುತ ಮಾತುಗಳಾಡಿಸಿ ಇಂದಿರೇಶ ಬಾ 3
--------------
ಇಂದಿರೇಶರು
ಬಾರೋ ಬೇಗನೆ ಶ್ರೀಧರ ಗುಣಾಕರ ಪ ಬಾರೋ ಬೇಗನೆ ಪಾದವಾರಿಜಕೆರಗುವೆ ಚಾರು ಪರಿಯಂಕಕ್ಕೆಅ.ಪ ಶೌರಿ ಅಗ್ರಜನಾಗಿ ಕ್ರೂರರ ಸದೆದು ಭೂ ಭಾರವನಿಳುಹಿದ ಶೌರ್ಯದ ಮಂಚಕೆ1 ರಾಮನ ಶೇವಿಸಿ ಪ್ರೇಮವನು ಪಡೆದಂಥ ಸೌಮಿತ್ರಿಯೆಂಬ ಸುನಾಮದ ಹಾಸಿಗೆಗೆ 2 ಸಾಸಿರವದನದಿ ಶ್ರೀಶನೆ ತವಗುಣ ಲೇಶ ವರ್ಣಿಸುವಂಥ ಭಾಸುರ ತಲ್ಪಕೆ 3 ಇಂದಿರದೇವಿಯು ನಿಂದಿರುವಳು ತವ ಸುಂದರ ಚರಣಾರವಿಂದವ ತೋರಿಸು 4 ಶರಣರ ಪೊರೆವ ಕಾರ್ಪರನರಶಿಂಹನೆ ಹರಗೆ ಭೂಷಣವಾದ ಉರಗಪರ್ಯಂಕಕೆ5
--------------
ಕಾರ್ಪರ ನರಹರಿದಾಸರು
ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ ಮನೆಗೆ ಪ ಬಾರೋ ನಮ್ಮ ಮನೆಗೆ ವಾರೀಜನಾಭನೆಬಾರಿ ಬಾರಿಗು ನಿನ್ನ ಸಾರಿ ಕರೆವೆ ಕೃಷ್ಣ ಅ.ಪ. ಗೋಪಿ ಮಾನುನಿಯರು ಸ್ವಾಮಿ 1 ಕುಂದ ಚಂಪಕ ಜಾಜಿವೃಂದ ಶೋಭಿಪ ಮುಖ ಗಂಧವರ್ಚಿಪ ಕೃಷ್ಣ2 ಇಂದುವದನ ನಿನ್ನ ಚಂದವ ನೋಡಲುದಿವಿಜೇಂದ್ರರು ಬಂದಿಹರು ಇಂದಿರೇಶನೆ ಕೃಷ್ಣ 3
--------------
ಇಂದಿರೇಶರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು