ಒಟ್ಟು 2522 ಕಡೆಗಳಲ್ಲಿ , 120 ದಾಸರು , 1811 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜಾಣೆ ನಂಬಿದೆ ಇಸ್ಟೇಟರಾಣೀ ನೀನೊಲಿದೆನ್ನ ಪಾಣಿಯೊಳಗೆ ಬಂದು ಕಾಣಿಸಮ್ಮ ಪ ವಾಣಿ ಶ್ರೀಲಕುಮಿಶ ರುದ್ರಾಯಣಿಯರಿಗಿಂತ ಕ್ಷೋಣಿಯೊಳಗೆ ಬಹುಮಾನಿತೆ | ನೀನಮ್ಮ ಅ.ಪ ಜನಕನು ಗಳಿಸಿದ ಧನವೆಲ್ಲಾ ಕಳಕೊಂಡೆ ದನಕರ ಹೊಲಮನೆಯನು ಮಾರಿದೆ ಜನರೊಳಗಪಹಾಸ್ಯಗೊಳಗಾದೆ ಕೇಳಮ್ಮ ವನಿತೆ ಮಕ್ಕಳ ಕೈಲಿ ಕೊನೆಗೆ ಪರಟೆ ಕೊಟ್ಟೆ 1 ಉಣಲು ಅನ್ನವು ಕಾಣೆ | ಉಡಲು ವಸ್ತ್ರವು ಕಾಣೆ ಕಡುಕಷ್ಟ ಕಡಲೋಳು ಮುಳುಗಿದೆ ನೋಡಮ್ಮ ಪೊಡವಿಯೋಳ್ ನಿನ್ಹೊರತು ಕಡೆ ಹಾಯಿಸುವಂಥ ಕಾಣಿ ಕೈಪಿಡಿದು ರಕ್ಷಿಸೊ ರಕ್ಷಿಸೋ ನೀನಮ್ಮ 2 ಎಲ್ಲಾ ಹಾಳಾಯಿತು | ಸಾಲ ಬಹಳಾಯಿತು ಜೋಳಿಗೆ ಬಂದಿತು ಕೂಳಿಗೆ ಮನೆ ಮನೆ ಚಾಲುವರಿದೆನಮ್ಮಾ 3 ಹಾರಿ ಹೋಗುವದಮ್ಮಾ ಪಕ್ಕಾರಂಗು ಧಾರುಣೀಶರ ಮಧ್ಯ ತೋರೀದ ಸಮಯದಿ ಆ ರಾಣಿ ವರ್ಗವ ಥರ ಥರ ನಡುಗಿಸುವಿ 4 ಅಕ್ಕರದಲಿ ಎರಡೆಕ್ಕದೊಳು ಬಂದು ಪಕ್ಕನೆ ನೀ ಎನ್ನ ಕೈಯೊಳು ಬಾರೆ ಮುಕ್ಕಣ ಸಖ ತನ್ನ ಬೊಕ್ಕಸದೊಳಗಿನ ರೊಕ್ಕ ಹಾಕಲು ಅವನ ಲೆಕ್ಕಸೆ ನಮ್ಮ 5 ಕಾಮಿತ ದಾಯಿನಿ ಕಾಮಿನಿ ಶಿರೋಮಣಿ ಶಾಮಸುಂದರ ಸಾರ್ವಭೌಮನ ರಾಣಿ ಶ್ರೀಮಂತ ಜೋಕರನ ಪ್ರೇಮದ ಭಗಿನಿಯೆ ನಾ ಮೊರೆ ಹೊಕ್ಕೆನು ನೀ ದಯಮಾಡು ತಾಯೆ 6
--------------
ಶಾಮಸುಂದರ ವಿಠಲ
ಜಿಜ್ಞಾಸುವಿನ ಲಕ್ಷಣಾ ಕೇಳು ನೀಕ್ಷಣಾ ಪರಮಸುಖಾಕಾಂಕ್ಷಕನಾ ಬಾಳಿನ ವಿಷಯದಿ ಬೇಸರಗೊಳು ತಾ ವಿರತಿಯಿಂದರುವಾ ಬೋಧ ಕೇಳ್ವನಿವಾ ಚಿತ್ತದಿ ಭಕ್ತಿಭಾವನಾ ತಾಳುತ ಸಾಧನಾ ಮಾಡುತಲಿಹನಿವ ಕಾಣಾ ಆತ್ಮಾನಾತ್ಮನಿವೇಕ ವಿಚಾರ ಕೇಳುತ ತನ್ನೊಳಗÉೀ ಮಿಥ್ಯಾರೊಪಿತ ಜೀವಭಾವನನಾ ಜರÉಯುತ ಮನದೊಳಗೇ ಮಾಡುವ ಸುವಿಚಾರಾ ಇವನೆ ಧೀರ ಪರಮಸುಖಕಾಂಕ್ಷಕನಾ ವಿಷಯದಿ ಹರಿಯುವ ಮನವÀನೆಳೆÀದು ಬೋಧದೊಳಗಿರುವಾ ಮೋದ ಹೊಂದುವ ತಾ ಶ್ರೀ ಗುರುಶಂಕರನಾ ಆನಂದರೂಪನಾಬೆರೆತು ನಾ ಸುಖಿಸುವನಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಜೀವ ಕರ್ತೃತ್ವದ ಭ್ರಮೆಯ ಬಿಡಿಸೊ ಪ ಜೀವೇಶನೊಡೆಯ ಶ್ರೀ ವೇಣುಗೋಪಾಲ ಹರಿ ಅ.ಪ ಮಿಥ್ಯೆವೆಂಬುದು ಬಲ್ಲೆ ಕರ್ತೃತ್ವ ನಮಗಿಲ್ಲ ಪ್ರತ್ಯಕ್ಷಕಪವಾದದಲ್ಲಿ ಬಾಳ್ವೆ ವ್ಯರ್ಥಧಾವತಿಪಡುವೆ ಸರ್ವಕರ್ತನ ಮರೆದು ಯತ್ನಕೆ ವಶವಲ್ಲ ಮಿಥ್ಯೆ ಭಾವವು ಬಿಡಲು 1 ವಿಷಯ ವಿಷವದು ಬಲ್ಲೆ ತಲ್ಲೋಭ ಬಿಡಲರಿಯೆ ವಿಷಮಗತಿ ಪ್ರವಹದಲಿ ವಿವಶನಾಗಿ ಹುಸಿನಂಬಿ ತೆರಳುತಿಹೆ ಹರುಷ ಕಾಣದೆ ನಿಜದೆ ಕೃಶನಾದೆ ಹರಿಯೆನ್ನ ಕೈಪಿಡಿದು ಉದ್ಧರಿಸೊ 2 ಗುಣವಿಲ್ಲ ದೋಷಿಲ್ಲದೆಡೆಯಿಲ್ಲ ಎನ್ನಲ್ಲಿ ದನುಜಾರಿ ನಿನ್ನವರ ಕರುಣ ಉಂಟೊ ಪ್ರಣತಾರ್ಥಿ ಹರ ಶ್ರೀ ಜಯೇಶವಿಠಲನಲ್ಲಿ ವಿನುತ 3
--------------
ಜಯೇಶವಿಠಲ
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ಸುಖಸಾರ ಪ ಜೋ ಜೋ ಜೋಜೋ ದೋಷ ವಿದೂರ ಅ.ಪ ಸುಮ್ಮನೆ ಸಾಗೆಲೊ ಮುಂದೆ ನಮ್ಮ ಮಗುವು ತಾ ಮಲಗಿಹನಿಂದು ನಿಮ್ಮ ಮಂದಿಗೆ ಈ ಶಿಶುವು ಬೊಮ್ಮನು ಫಣಿಯಲಿ ಬರೆದಿಹನೇನೊ 1 ನಿದ್ರೆಯ ಸುದ್ದಿಯ ಕಾಣದ ನಾನು ನಿದ್ರೆಯ ಮಾಡುವ ಸಡಗರವೇನು ಮುದ್ದು ಮಾತುಗಳಲಿ ಫಲವೇನು ನಿದ್ರೆ ನಾ ಮಾಡಲು ಎದ್ದಿರುವರ್ಯಾರು2 ನಿದ್ರೆ ಮಾಡುವುದೆಂತು ಬೇಕಾದ ಜೋಗುಳ ಪಾಡುವೇನೊ ಏಕಮನದಿ ನೀ ಪ್ರಾಜ್ಞನ ಕೂಡೊ ದಧಿ ಕ್ಷೀರಗಳು ನಾಕು ನಿಮಿಷದಲಿ ಜೀರ್ಣವಾಗುವುವೊ 3 ಕಣ್ಣನು ಮುಚ್ಚಿದೆ ಪ್ರಾಜ್ಞ ನಾನು ಚನ್ನಾಗಿ ತಬ್ಬಿದೆ ನೋಡಮ್ಮ ಎನ್ನಯ ಕುಕ್ಷಿಯು ಬರಿದಾಯ್ತು ಇನ್ನು ಪ್ರಸನ್ನಳಾಗುಣಬಡಿಸಮ್ಮ 4
--------------
ವಿದ್ಯಾಪ್ರಸನ್ನತೀರ್ಥರು
ಜೋಗಿ ಬಂದ ಕಾಣೇ ಈತ ಮಹಾಯೋಗಿ ಬಂದ ಕಾಣೇ ಗಗನ ಮಣಿಯ ಮೀರುವ ತೇಜದ ದತ್ತ ದಿಗಂಬರ ನೆನಿಪೆ ನೋಡಮ್ಮಾ ಪ ತವೆ ಸಂಜೆ ಧಾರೆಗಳು ಹೊಳೆವ ಲೊ ಪ್ಪುವ ಕೆಂಜೆಡಿಯಗಳು ಕುವಲಯ ಶಾಮನು ಕಿರೀಟ ಕುಂಡಲದಿಂದ ಠವಠವಿಸುವ ಮೊಗದಾ ನೋಡಮ್ಮಾ 1 ಕೇಶರ ಗಂಧವನು ನುಂಪಿಟ್ಟು ತ್ರಿಸರೋಜ ಮಾಲೆಯನು ಭೂಷಿತ ದಿವ್ಯಾಂಬರ ಕಾಂಚಿ ಧಾಮದಿ ಘೋಷಿಪ ಘಂಟೆಗಳು ನೋಡಮ್ಮಾ 2 ಮೆಟ್ಟಿದ ಪಾದುಕೆಯಾ ರತನದ ಬೊಟ್ಟಿಲಿ ಜಪ ಮಾಲೆಯಾ ನೆಟ್ಟನೆ ನೆನೆವ ರುದ್ಧರಿಸಲು ತಾರಕ ಸೃಷ್ಟಿಗೆ ಗುರುವಾಗಿಹ ನೋಡಮ್ಮಾ 3 ಆದಿ ಯೋಗವನು ಪ್ರಕಟಿಸಿ ಹಾದಿಯ ತೋರುವನು ದ್ವಾದಶ ನಾದದ ಭೇದ ತೋರುವ ಶಂಖ ನೂಡುತ ನಲಿಯುತಲಿಹ ನೋಡಮ್ಮಾ 4 ಮೂರ್ತಿ ಚಿ-ಹ್ನವನು ದೋರುವಾ ಶ್ರೀ ಮನೋರಮ ದೇವನು ನೇಮದ ಮಹಿಪತಿ ನಂದನ ಪ್ರಭು ಭಕ್ತ ಕಾಮಿತಾರ್ಥವ ನೀಡುವ ನೋಡಮ್ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನ ಪ್ರದಾಯಕ ಪ್ರಾಣದೇವ ಪ ಕಾಣೆ ನಿನಗೆ ಸಮಸತ್ಪ್ರಭಾವ ಅ.ಪ ಈ ಶರೀರದೊಳು ವಿಭೀಷಣನ ತೋರೊ 1 ಕೋಪ ಕುಜನತ್ವ ದುರ್ ವ್ಯಾಪಾರಾದಿಗಳನ್ನೆಲ್ಲ ರೂಪಡಗಿಸಿದೆ ನೀನೇ ಭೂಪನೈಯ್ಯ 2 ಇಪ್ಪತ್ತೊಂದು ವಿಧದ ತಪ್ಪುಗಳ ತಿದ್ದಿದೆ ತಿ- ಮ್ಮಪ್ಪ ವೇದ ವ್ಯಾಸರ ಶಿಷ್ಯಾವರ್ಯಾ 3 ಕಲಿಮಾರ್ಗದಲಿ ಪೋಪ ಹೊರೆ ಬುದ್ಧಿನಾಶಗೈಸಿ ಒಳಗೆ ನೀ ಪೊಳೆವುದು ಜಲಜಾಪ್ತ ಪ್ರಿಯ4 ರಂಜೀತವಾದ ಕಣ್ಣ್ಣಿಗೆ ಮಂಜು ಮುಚ್ಚಿಹುದು ದಿ- ವ್ಯಾಂಜನ ಹಚ್ಚೈ ವೀರಾಂಜನೇಯಾ5 ಯೇಳಾರೊಳಗೆ ಹದಿನೇಳಾನೆಯವರನು ಪಾಲಿಪ ದೊರೆ ನೀನು ಜಾಲವೇನು?6 ಸಿರಿಗುರುರಾಮ ವಿಠಲನ ಶರಣಾರಾಭರಣ ನೀನೆ ಕರುಣೀಸದಿದ್ದರೆಮ್ಮನು ಕಾವರಾರೈ 7
--------------
ಗುರುರಾಮವಿಠಲ
ಜ್ಞಾನಕಿದೇ ನಡಿ ಕುರುಹು | ಶ್ರೀ ರಮಾನಾಥಾಂಘ್ರಿಯ ಕಾಣುವದರಿತು ಪ ಕೋಪ ತಾಪವ ಬಿಡಬೇಕು ಪಶ್ಚಾ | ತ್ತಾಪದಿ ವೈರಾಗ್ಯ ಘನ ಬಲಿಬೇಕು | ಪಾಪವಿರಹಿತಾಗಬೇಕು | ಗತಿ | ಸೋಪಾನವಾದಾ ಶಾಂತಿಯ ಜಡಿಬೇಕು 1 ಕರುಣ ಮೂರುತಿ ಆಗಬೇಕು ಸರ್ವ | ಧರೆಯು ಜನಕ ಪ್ರಿಯವಾಗಿರಬೇಕು | ನೆರೆ ಲೋಭವನು ಜರಿಬೇಕು ತನ್ನ | ತೆರನರಿ ತನ್ನವ ನೀಡಲಿಬೇಕು 2 ದುರಿತ ಭಯವ ಬಿಡಬೇಕು | ದುಃಖ | ದುರ್ವಾಣಿಯಲಿ ತಾ ಬಳಲದಿರಬೇಕು | ಹರಿಭಕ್ತಿ ದೃಢಗೊಳ್ಳಬೇಕು ಗುರು | ಬೋಧ ನಿಜವೆನಬೇಕು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನವನ್ನೇ ತಿಳಿದುಕೋ ಮನುಜ ಜ್ಞಾನವನ್ನೇ ತಿಳಿದುಕೋ ಪ ಸತ್ತು ಹುಟ್ಟಿಯೇ ಸತ್ತು ಮುಂದಣ ಜನ್ಮಕು ಮತ್ತುಮತ್ತು ಗಳಿಸಿಕೊಂಡು ವಿಪತ್ತು ಮತ್ತೆ ಬಂದಿದೆ ಮೃತ್ಯು 1 ಹಾದಿಯಿದೆ ಸಾಪು ಕಾಣದೆ ಬಿಡುವೆ ಆಪುಬಯಕೆ ಯೋನಿಯ ಕೂಪು ಹಾಕಿ ಹಾಕಿ ಭಾಪು 2 ಹಸಿವು ಬಿಡೋ ಹಸಿವು ಯಾಕೆ ಆದಿ ಪಶುವುಬಗುಳ ಬೇಡ ಹುಸಿಯು ನಾಚುತಿದೆ ಬಸಿರು3 ಹೆಚ್ಚ ಬೇಡ ಹೆಚ್ಚು ಅಹಂಕಾರ ಮುಚ್ಚುಓದಿಗೆ ಬೆಂಕಿಯ ಹಚ್ಚು ಮಾಡಿಕೊಂಡೆಯ ಕಿಚ್ಚು4 ಜ್ಞಾನವ ತಿಳಿಯಿನ್ನು ಯಮಗೆ ಕೊಡಬೇಡ ಬೆನ್ನುಆರುತಾನಿಹನೆನ್ನು ಚಿದಾನಂದನೆ ಎನ್ನ5
--------------
ಚಿದಾನಂದ ಅವಧೂತರು
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ಜ್ಞಾನಸುಧೆಯ ಪಾನಮಾಡಿ ಸ್ವಾನುಭವದಿ ಲೀನನಾದೆ ಹೀನ ಭವದ ತಾಪವೆನಗೆ ಬಾಧಿಸುತಿರೆ ಗುರು ನೀಡಿದ ಪ ಜೀವನ ಸುಖದುಃಖದಾ ಭಾವ ಜೋಲಿಗಳನು ಮರೆದು ದೇವ ನಾನೆ ಎಂದು ತಿಳಿದು ಪಾವನಾತ್ಮನೊಳಗೆ ಬೆರೆದು 1 ನಾನು ನೀನು ಎಂಬ ಭೇದ ಏನು ಮೋಜು ಮಾಯವಾಯ್ತು ಕಾಣದಾಯ್ತು ಜೀವಭಾವ ಜ್ಞಾನಬೋಧದಾ ಪ್ರಭಾವ2 ಭಾನ ಮರೆದು ದೇಹಮನದ ಜ್ಞಾನಗೀತೆಗಳನು ಪಾಡಿ ತಾನೆ ತಾನಾಗಿರುವ ಜ್ಞಾನಿ ಗುರುವಿನೊಳಗೆ ಕೂಡಿ 3 ಕಲ್ಪನಾವಿಲಾಸ ಪೋಗಿ ಅಲ್ಪನೆಂಬ ಮತಿಯ ನೀಗಿ ಅಲ್ಪನಾತೀತನಾದನಲ್ಪನಾದ ಶಂಕರನಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಜ್ಞಾನಾನಂದ ಸ್ವರೂಪ ಭಾನುಕೋಟಿ ಪ್ರದೀಪ ನಾನಾದೋಷ ನೀರ್ಲೇಪ ಮೀನ ರೂಪ ಪ ಏನು ಅರಿಯದ ದೀನ ಭಕುತನಿಗೆ ಸಾನುರಾಗದಿ ಜ್ಞಾನವನೀಯೋ ಅ.ಪ ನಿಗಮಗಳೆಲ್ಲವು ಬಗೆ ಬಗೆಯಿಂದ ನಿನ್ನ ಅಗಣಿತ ಗುಣಗಳ ಪೊಗಳುತಲಿದ್ದರು ಸಿಗದ ನಿನ್ನ ನಾನು ಪೊಗಳಲಳವೆ ಪೇಳೊ ಸಿರಿಯರಸನೆ ನಿನ್ನ ಚರಣಕಮಲದಲಿ ಪರತರ ಭಕುತಿಯ ದೊರಕಿಸೆಲೊ ಸರಸಿಜ ಜನಕನೆ ಮರೆತಪರಾಧವ ಕರುಣದಿಂದಲಿ ಎನ್ನ ಕರಗಳ ಪಿಡಿಯೋ 1 ಒಂದು ದಿನವು ಸುಖ ಗಂಧವನರಿಯದೆ ಭವ ಸಿಂಧುವದನನೆ ತೊಂದರೆ ಪಡುತಿಹೆ ಸುಂದರ ವದನನೆ ತಂದೆ ಎನಗೆ ನೀನೆ ಬಂಧುವೆನಗೆ ನೀನೆ ಮಂದ ಬುದ್ಧಿಯಲಿ ನಿಂದ್ಯನಾದೆನಗೆ ಕುಂದು ಸಹಸ್ರವು ಸಂಧಿಸಿತು ಇಂದು ಮನಕೆ ಆದ ತಂದುಕೊಳ್ಳದೆಲೆ ಮಂದಹಾಸದಲಿ ಬಂದೆನ್ನ ಪೊರೆಯೋ 2 ಹಿತವೆಂದು ಭವವನು ಅತಿ ಮೋಸಹೋದೆನು ಮತಿಗೆಟ್ಟು ನಿನ್ನನು ಸ್ತುತಿಸಲಿಲ್ಲವೊ ನಾನು ಮಿತಿಮೀರುತಿರಲೆನ್ನ ಸ್ಥಿತಿಯ ನೀನರಿಯುತ ಮತಿ ಬೇರೆ ಮಾಡಿ ಮರೆತೆಯೇನೊ ಶ್ರೀಪತೆ ಕ್ಷಿತಿಯೊಳೆನಗೆ ಗತಿ ಇತರರ ಕಾಣೆನÉೂೀ ಪತಿ ನೀನಿರೆ ವಸುಮತಿಯೊಳಗೆ ಪತಿತಪಾವನನೆ ಪ್ರಸನ್ನನಾಗಿ ದಿವ್ಯ ಸತತ ಸುಖಕೆನಗೆ ಪಥವನು ತೋರೊ 3
--------------
ವಿದ್ಯಾಪ್ರಸನ್ನತೀರ್ಥರು
ಜ್ಞಾನಿಯ ಕಾಣಲು ಧಗದಲ್ಯನಾಗುವ ಶಾಸ್ತ್ರಿಜ್ಞಾನಿಗಳು ಶಾಸ್ತ್ರಿಗೇನ ಮಾಡಿದರೋಏನಾದರೂ ಪೂರ್ವದ್ವೇಷವಿತ್ತಾದರೂತಾನು ನಿಂದಿಸಿ ಕುಲಸಹ ಕೆಡಿಸುವನು ಶಾಸ್ತ್ರಿ ಪ ದನವ ಕಾಣುವ ವದನವರಿಹುತಲಿಹದನವ ಕಾಯ್ದವಗಿಂತ ಅತ್ತಿತ್ತ ಕಡೆ ಶಾಸ್ತ್ರಿಘನ ವೇದಾಂತವನೋದಿ ಜ್ಞಾನಿಗಳ ನರರೆಂಬಎನಿತುಗರ್ವ ಅಹಮ್ಮಲಿ ತನ್ನ ತಿಳಿಯ ಶಾಸ್ತ್ರಿ 1 ಓದೋದು ವೇದಾಂತ ಓದುವನಾರೆಂದು ಅರಿಯಓದಿಹೆನೆಂಬ ಗರ್ವವು ತಲೆಗೆ ಹತ್ತಿಓದಿಯೇ ಅಲ್ಲಿ ಗೆದ್ದೆ, ಇಲ್ಲಿ ಗೆದ್ದೆ ನೆಂಬಅದನೊಬ್ಬನೆಲ್ಲೋ ಇರೆ ಆರಗೆದ್ದನು ಶಾಸ್ತ್ರಿ 2 ಸಾಧುಗಳಿಗೆ ವಂದಿಸಲಿಲ್ಲ ಸಾಧುಗಳ ಮನೆ ಹೋಗಲಿಲ್ಲಸಾಧುವು ಮುಂದೆ ಹಾಯಲು ಕುಳಿತು ಏಳದಲಿಹನುಸಾಧುವ ಕಂಡು ನಡೆಯೇನು ನುಡಿಯೇನು ಎಂಬಸಾಧುವ ಭಜಿಪಗೆ ಬಹಿಷ್ಕಾರೆಂದನು ಶಾಸ್ತ್ರಿ 3 ನಾನು ಅರಿಯೆ ನಿನಗೆ ಗತಿಯೇನು ಮತಿಯೇನುನಾನು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆನಾನು ನನ್ಹೆಸರೇನು ಆರು ತಿಳಿಸುವರೆಂಬಜ್ಞಾನವಿಲ್ಲದೆ ಘಟಪದಿ ಮೆರೆದಿಹ ಶಾಸ್ತ್ರಿ 4 ನಾನೇ ಶ್ರೇಷ್ಠನೆಂದೂ ನಾನೇ ದೊಡ್ಡವನೆಂದೂನಾನು ಆರಿಹೆನೆಂಬ ಎಚ್ಚರವದು ಹೋಗಿತಾನಾದ ಚಿದಾನಂದರಾದ ಸತ್ಪುರುಷಏನೇನೋ ನಿಂದೆಯ ಮಾಡಿ ನರಕಕ್ಕಿಳಿಸುವ ಶಾಸ್ತ್ರಿ 5
--------------
ಚಿದಾನಂದ ಅವಧೂತರು