ಒಟ್ಟು 1130 ಕಡೆಗಳಲ್ಲಿ , 91 ದಾಸರು , 971 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೊ ಜಾನಕಿ ಕಾಂತ ಶಾಂತ ಪ ತಕ್ಷಣದಲಿ ಉಪೇಕ್ಷೆಯ ಮಾಡದೆ ಅ.ಪ ದಕ್ಷ ನಾನಲ್ಲವೊ ಪೊಗಳಲು ಶಾಸ್ತ್ರ ವಿ ಚಕ್ಷಣೆಯರಿಯೆನೋ ಲಕ್ಷ್ಮೀನಾಥ1 ಸಂತತಪಡುತಿಹ ಚಿಂತೆಯ ಬಿಡುತಲಿ ಶಾಂತಿಯ ಪೊಂದುವ ತಂತ್ರವ ತೋರುತ 2 ಬೇಡುವ ವಿಧದಲಿ ರೂಢಿಯಿಲ್ಲದೆ ಬಲು ಪಾಡುಪಡುತಿಹೆನೋ ನೀಡುತ ಕರವನು 3 ಕ್ಷೀಣಿಸೆ ಉರುತರ ತಪಗಳಿಂ ತನುವನು ತ್ರಾಣವಿಲ್ಲವೋ ರಮಾಪ್ರಾಣನಾಥನೆ 4 ಕೆಟ್ಟಯೋಚನೆ ಎನ್ನ ಮುಟ್ಟದೆ ಮನವನು ಘಟ್ಟಿಯ ಮಾಡುತ ಶಿಷ್ಟ ಪ್ರಸನ್ನನೇ 5
--------------
ವಿದ್ಯಾಪ್ರಸನ್ನತೀರ್ಥರು
ರಕ್ಷಿಸೋ ಶ್ರೀಶ ಶ್ರೀ ಶ್ರೀನಿವಾಸ ಅಕ್ಷಯ ಗುಣಪೂರ್ಣ ಪಕ್ಷಿವಾಹನ ದೇವ ಅಕ್ಷರೇಶಾತ್ಮಕ ಮೋಕ್ಷ ದಾತನೆ ಹರಿ ಪ ರಕ್ಷಿಸೀಕ್ಷಣ ಲಕ್ಷ್ಮೀರಮಣ ಈಕ್ಷಿಸೀಗಲೆ ರಕ್ಷಿಸೆಮ್ಮನು ಕುಕ್ಷಿಯೊಳು ಜಗ ರಕ್ಷಿಸುವ ಹರಿ ಸೂಕ್ಷ್ಮ ಸ್ಥೂಲದೊಳಿರುವ ದೇವ ಅ.ಪ ಇಂದಿರೆರಮಣ ಗಜೇಂದ್ರವರದ ಹರಿ ಮಂದಹಾಸದಿ ಭಕ್ತವೃಂದವ ಪಾಲಿಪ ನಂದಕಂದನೆ ಬಂದು ರಕ್ಷಿಸು ಇಂದಿರಾ ಭೂದೇವಿ ರಮಣನೆ ಸುಂದರಾಂಗನೆ ಸುಮನ ಸರ ಹೃ- ನ್ಮಂದಿರದಿ ಶೋಭಿಸುವ ದೇವ 1 ನಂದನಕಂದ ಮುಕುಂದ ಹರೇ ಕೃಷ್ಣ ಕಂದರ್ಪ ಜನಕನೆ ಕರುಣಾನಿಧೆ ಹರಿ ಮದನ ಜನಕÀ ಸುಂದರಾಂಗ ಶ್ರೀಸುಮನಸರ ಪ್ರಿಯ ಬಂಧಮೋಚಕ ಭವವಿದೂರನೆ ಸಿಂಧುಶಯನ ಸರ್ವೇಶ ಶ್ರೀಹರಿ 2 ಕನಕ ಗರ್ಭನ ಪಿತ ಕರುಣಿಸೊ ನಿನ್ನಧ್ಯಾನ ಕನಸುಮನಸಲಿ ನಿನ್ನ ಸ್ಮರಣೆ ಎನಗಿತ್ತು ಕನಲಿಕೆಯ ಕಳೆದೆಮ್ಮ ಕ್ಷಣ ಬೆಂ- ಬಿಡದೆ ಕಾಪಾಡೆನ್ನುತ ಪ್ರಾರ್ಥಿಪೆ ಕಮಲನಾಭವಿಠ್ಠಲನೆ ಕರುಣದಿಕಮಲ ಮುಖಿಯೊಡಗೂಡಿ ಹರುಷದಿ 3
--------------
ನಿಡಗುರುಕಿ ಜೀವೂಬಾಯಿ
ರಘುನಂದನ ರಘುನಂದನ ರಘುನಂದನ ರಘುನಂದನ ಪಸುಖದಾಯಕ ಸಕಲಾಗಮ ನಿರುತಖಗವಾಹನ ಮಣಿಭೂಷಣ ಕರುಣಾಕರ ಚರಿತಕೌಸಲ್ಯ ವರನಂದನ ಘನಕುಂಡಲ ಮಣಿಮಂಡಲನಾರಾಯಣ ದಾಮೋದರ ಮಧುಸೂದನ ಕೃಷ್ಣ 1ಗೋ'ಂದ ಮುಕುಂದಾಚ್ಚುತ ಕೃಷ್ಣಾಂಬುಜನಾಥಲಕ್ಷ್ಮೀಶ ಕೃಪಾಳೋ, ಜಗದೀಶವಂದ್ಯ 'ಷ್ಣುಶ್ರೀ ರಾಘವ ರಾಮಾನುಜ ಪಾ' ಮುಕುಂದಸೀತಾರಮಣ ತ್ರಿನಯನ ಗೋಪಾಲ ಗಿರೀಶ 2ಗೋಪಾಲ ಗೋಪಾಲ ಗೋಪಾಲ ಗೋಪಾಲಭಕ್ತಪ್ರಿಯ ಗೋ'ಂದ ಮುಕುಂದ ಅತಿಭೀಷಣ ಕಟುಭಾಷಣ ಯಮಕಿಂಕರ ಪಠಳಂಕೃತತಾಡನ ಪರಪೀಡನ ಮರಣಾಗಮ ಸಮಯೇ 3ಶಿವ ಶಂಕರ ಶಿವ ಶಂಕರ ಶಿವ ಶಂಕರ ಶಿವ ಶಂಕರಉಮಯಾಸಾಮಮಪೇಕ್ಷಿತ ಯಮಶಾಶ್ವತ ಶೂಲಿಂಪರಮೇಶ್ವರ ಹರಗೌರಿರಮಣ * 4
--------------
ವೆಂಕಟದಾಸರು
ರಾಧಾಕೃಷ್ಣ ದಯದಿ ನೋಡೆನ್ನ ಪ ಯದುಕುಲ ಚಂದ್ರ ಬಹುಗುಣ ಸಾಂದ್ರ ಅ.ಪ. ಗೋಪಿ ಕುಮಾರ ಗೋಪಾಲಧೀರ ತಾಪ ವಿದೂರ ಕೃಪಾಸಾರ 1 ಬೃಂದಾವನಾನಂದ ಗೋವಿಂದ ಶೂರ ಕಂದರ್ಪ ಕೋಟಿ ಸೌಂದರ್ಯಸಾರ 2 ಏಕಾಂತ ಭಕ್ತ ಪ್ರಿಯ ಲಕ್ಷ್ಮೀಕಾಂತ ವೈಕುಂಠನಾಥಾಶ್ರಿತ ಪಾರಿಜಾತ 3
--------------
ಲಕ್ಷ್ಮೀನಾರಯಣರಾಯರು
ರಾಮ ಗೋವಿಂದ-ಹರಿ-ಕೃಷ್ಣ ಗೋವಿಂದ ಕೃಷ್ಣ ಗೋವಿಂದ- ಹರಿ-ರಾಮ ಗೊವಿಂದ ಪ ರಾಮ ರಾಮ ಕೃಷ್ಣಕೃಷ್ಣ _ ಕೃಷ್ಣಕೃಷ್ಣ ರಾಮರಾಮ ರಾಮ ಕೃಷ್ಣ ರಾಮರಾಮ _ ಕೃಷ್ಣ ರಾಮ ಕೃಷ್ಣ ಕೃಷ್ಣ ಅ.ಪ. ಮತ್ಸ್ಯಕೂರ್ಮ ಭೂವರಾಹ _ ಜೈ ಜೈ ವಾಮನ ನಾರಸಿಂಹ ತ್ರಿವಿಕ್ರಮ _ ಶರಣು ಉಪೇಂದ್ರ 1 ಬುದ್ಧ ಕಲ್ಕಿ _ ಭೃಗುಜ ಜಯೇಶ ವಾಸುದೇವ ಹೃಷಿಕೇಶ _ ಕೇಶವಾಚ್ಯುತ 2 ಅಧೋಕ್ಷಜ ಅನಿರುದ್ಧ ಶ್ರೀಧರ ವೇದವ್ಯಾಸ ಕಪಿಲದತ್ತ _ ಮಧುಸೂದನ 3 ತೈಜಸ ಪ್ರಾಜ್ಞತುರ್ಯ-ಬ್ರಹ್ಮ ಧಾಮ ಪೃಶ್ನಿಗರ್ಭ ಮಹಿದಾಸ _ ಪುರುಷೋತ್ತಮ 4 ಅಜಪರಶ್ರೀನಿವಾಸ _ ಸಾಸಿರಾನಂತ ಶಿಂಶುಮಾರ _ ಸಚ್ಚಿದಾನಂದ 5 ನಾರಾಯಣ ಜನಾರ್ದನ _ ಹಂಸ ಪ್ರದ್ಯುಮ್ನ ಮಾಧವ 6 ಅಪ್ಪ ಉರಗಾದ್ರಿ ವಾಸ _ ವೆಂಕಟೇಶ ಅಪ್ರಮೇಯ ರಂಗನಾಥ _ ಪಾಂಡುರಂಗ 7 ಸತ್ಯವ್ಯಕ್ತ ಸತ್ಯನೇತ್ರ _ ಸತ್ಯಪರ ಭಿನ್ನ ನಿತ್ಯತೃಪ್ತ _ ಸತ್ತದಾತ _ ಪುರುಷ ಮಹಾಂತ 8 ಲಕ್ಷ್ಮೀರಮಣ ಕೃಷ್ಣವಿಠಲ _ ಮುಕ್ತರಾಶ್ರಯ ಲಕ್ಷ್ಯಮಾಡೆ ಮುಕ್ತಿ ಕೊಡುವ _ ಭಕ್ತವತ್ಸಲ9
--------------
ಕೃಷ್ಣವಿಠಲದಾಸರು
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ರಾಮನೆಯಖಿಲ ಜಗತ್ಸ್ವಾಮಿ [ಯೌ] ದಾರ್ಯ ಜಯತು ಪ ಸಾಮಗಾನಪ್ರಿಯ ಕೋಮಲಶರೀರ ಜಯ ತಾಮರಸನಯನ ಲಕ್ಷ್ಮೀ ಮನೋಹರನೆ ಜಯ ಮಾಧವ ಮೂರ್ತಿ ಕೀರ್ತಿ ಜಯ ನೇಮಿ ಜಗದಂತರ್ಯಾಮಿ ಚಾತುರ್ಯ ಜಯತು 1 ರಾಮಕೃಷ್ಣ ಮುರಾರಿ ಜಯತು ಮೇಘ ಶ್ಯಾಮ ಅಚ್ಯುತಾನಂತ ಜಯತು ನಿ- ಸ್ಸೀಮ ಲೋಕಶರಣ್ಯ ಜಯತು ಸಾರ್ವ- ಭೌಮ ವಿರಾಡ್ರೂಪ ಜಯ ಜಯತು 2 ಶ್ರುತಿ ಸ್ತೋಮ ಸಂಸ್ತುತ ಜಯ ಜಯತು ವೈಕುಂ- ಠೇತಿ ಸುಕ್ಷೇಮ ಲೋಕಾರಾಧ್ಯ ಜಯತು ಸುತ್ರಾಮಾರ್ಚಿತಾಂಘ್ರಿಯುಗಳ ಜಯತು ಜ್ಯೋತಿ ಪರಂಜ್ಯೋತಿ ನಿರಾಮಯ ವೇಲಾಪುರೀಶನೆ ಜಯತು3
--------------
ಬೇಲೂರು ವೈಕುಂಠದಾಸರು
ರಾಮಾನಾಮಾಮೃತಪಾನಸುಖಧಾಮನು ಮುಖ್ಯಪ್ರಾಣ ಸೋಮಶೇಖರಮುಖ್ಯಾಮರಸಂಕುಲಸ್ವಾಮಿ ಮಹಾಸುತ್ರಾಣ 1 ಯಾವತ್ಕಾಲ ಕಳೇವರದೊಳನಿಲ ತಾವದ್ಧರಿಸನ್ನಿಧಾನ ದೇವಬ್ರಹ್ಮ ಸುಜನಾವಳಿಸುಖದ ಮಹಾಪ್ರಭು ಪವಮಾನ 2 ಲಕ್ಷ್ಮಣಪ್ರಾಣದಾತಾರ ನಿಭೃತಮೋಕ್ಷಹೃದಯ ಪರಿಪೂರ್ಣ ಲಕ್ಷ್ಮೀನಾರಾಯಣಾಂಘ್ರಿಭಕ್ತಿದಕ್ಷ ಲೋಕೈಕಧುರೀಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ರುದ್ರದೇವರ ಸ್ತುತಿ ಪರಾಕು ಸಜ್ಜನಪ್ರೇಮಿಪ. ಕರುಣಾಕರ ಕೋಟಿದಿವಾಕರ ಪೂರ್ಣ ಸುಧಾ- ಕರ ಮಕುಟಲಲಾಮಅ.ಪ. ಭೋಗೀಂದ್ರ ಫಣಾಮಣಿಮಂಡನ ಸ- ದ್ಯೋಗೀಂದ್ರ ಮನೋವಿಶ್ರಾಮಿ ಭಾಗೀರಥಿ ಸುತರಂಗೊತ್ತುಂಗ ಮಹಾ ಸಾಗರ ತೇ ನೌಮಿ1 ಕೇವಲ ಪಾಪಿ ಸದಾವ್ರತಹೀನನ ಕಾವುದು ಗೋಪತಿಗಾಮಿ ನೀನೊಲಿದರೆ ಮತ್ತಾವುದು ಭಯ ಮಹಾ- ದೇವ ವಶೀಕೃತಕಾಮಿ2 ಲಕ್ಷ್ಮೀನಾರಾಯಣದಾಸಾರ್ಯ ಮ- ಹೋಕ್ಷಧ್ವಜ ಸುರಸುಕ್ಷೇಮಿ ದಕ್ಷಾಧ್ವರಹರ ವರಪರಮೇಶ ಮು- ಮುಕ್ಷುಜನಾಂತರ್ಯಾಮಿ3
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀ ದೇವಿ ಇಂದಿರೆ ನಾ ನಿನ್ನ ವಂದಿಸಿ ಬೇಡುವೆ ಬಂದು ನೀ ಪಾಲಿಸೇ ಚಂದಿರವದನೆ ಪ ಸಿಂಧು ಕುಮಾರಿಯೆ ಎಂದಿಗೂ ನಿನ್ನ ಪದ ದ್ವಂದ್ವವ ಸೇವಿಪೆನೆಂದು ನಾ ಬೇಡುವೆ ಅ.ಪ ದೇವಿ ನಿನ್ನಂಘ್ರಿಯ ಸೇವಿಸಿ ಪದ್ಮಭವ ಭಾವಿ ಫಣೇಶ ಸುರಾಧಿಪರೆಲ್ಲರು ಈ ವಿಧವಾದನುಭಾವವ ಪೊಂದಿರಲು ಈ ವಿಷಯಕೆ ಶ್ರುತಿ ಸಾವಿರವಿರುವುದೆ 1 ಪನ್ನಗವೇಣಿಯೆ ನಿನ್ನನೆ ನಂಬಿರಲು ಸಣ್ಣ ಮನುಜರ ವರ್ಣಿಪುದೇಕೆಲೆ ಎನ್ನಪರಾಧವ ಮನ್ನಿಸಿ ಕೃಪೆಯನು ಎನ್ನೊಳು ತೋರಲು ಧನ್ಯ ನಾನಾಗುವೆ 2 ತಾಮರಸಾಕ್ಷಿಯೆ ನಾಮಗಿರೀಶ ಶ್ರೀ ಸ್ವಾಮಿ ನೃಸಿಂಹನ ಕಾಮಿನೀಮಣಿಯೇ ಕೋಮಲಗಾತ್ರಯೆ ಶ್ರೀ ಮಹಾಲಕ್ಷ್ಮಿ ಎನ್ನ ಸಹೋದರಿ 3
--------------
ವಿದ್ಯಾರತ್ನಾಕರತೀರ್ಥರು
ಲಕ್ಷ್ಮೀ ದೇವಿ ಕಾದಿರುವಳು ರುಕ್ಮಿಣಿ ಕೃಷ್ಣ ಬರುವನೆಂದು ಪ. ಕರವ ಪಿಡಿವನೆಂದು ಅ.ಪ. ವಿಪ್ರನ್ನ ಕಳುಹಿರುವೆನು ಕ್ಷಿಪ್ರದೊಳು ಗುಡಿಯೊಳಿಹೆನು ಅಪ್ರಮೇಯ ನಿನ್ನಡಿಗಳನ್ನು ಸುಪ್ರಕಾಶ ನಂಬಿರುವೆನೆಂದು 1 ಶಿಶುಪಾಲನೊಲ್ಲೆನೆಂದು ವಸುಧೀಶ ನೀನೆ ಗತಿಯೆಂದು ಹಸುಳೇಯ ಸಲಹು ಎಂದು ಬೆಸಸಿಹೆನು ಪತ್ರವೆಂದು 2 ರಥವೇರಿ ಬರುತಲಿಹನೊ ಪಥದೊಳು ಕಾದಿರುವನೊ ರತಿಪತೀ ಪಿತನ ಪದವ ಅತಿಶಯದಲಿ ಕಾಣುವ ತವಕದಿ 3 ಶಂಕಾತುರಂಗಳಿಂದ ಶಂಕರೀಯಪೂಜೆಗೈದು ಕಿಂಕಿಣಿಯ ನಾದದಿಂದ ಶಂಕರಾದಿವಂದ್ಯ ಬರುವ ಪಥದಿ ಬಂದು 4 ಬಂದಾನೋ ಬಾರನೋ ಎನುತಾ ಇಂದಿರೆಯ ಅರಸನ್ಹೊರತು ಪೊಂದಲಾರೆನನ್ಯರನೆನುತ ಸುಂದರೀಮಣಿ ಕೃಷ್ಣನಾಗಮ ನೋಡುತ 5 ದ್ವಾರಕಿಯಾ ನಾಥ ಬಂದು ಪಾರುಗಾಣಿಸುವನೆಂದು ಚಾರುಕರದೊಳೆತ್ತಿ ಎನ್ನ ದ್ವಾರಕೆಗೊಯ್ವ ಶ್ರೀ ಶ್ರೀನಿವಾಸನೆಂದು 6
--------------
ಸರಸ್ವತಿ ಬಾಯಿ
ಲಕ್ಷ್ಮೀ ದೇವಿಯ ಗಂಡ ಹರಧನುರ್ಭಂಗಾ ರುಕ್ಮಾಂಗ ಧನಪಾಲಾ ಕರುಣಾಂತರಂಗಾ ಪ ಪೂಜಿಸಿದವರಿಗಭೀಷ್ಟವ ಕೊಡುವಾ ಪೂಜಿಪ ದಾಸರ ಕಷ್ಟವ ತರಿವಾ ಸಜ್ಜನರಿರುವಲ್ಲಿ ನಿರುತನಾಗಿರುವಾ 1 ಸ್ಮಾರನನ್ನು ಪಡೆದ ಮನೋಹರ ಮೂರ್ತಿ ಶರಣು ಬಂದವರಿಗೆ ವರ ಚಕ್ರವರ್ತಿ ಧರೆಯಲ್ಲಿ ಪೊಗಳುವೆ ಶ್ರೀಹರಿ ಕೀರ್ತಿ ಅರಿಯದ ದಾಸಗೆ ಸುಖಗಳ ಭರತೀ 2 ಪನ್ನಗಶಯನ ಶ್ರೀದಾಸರ ಪೋಷಾ ಸನ್ನುತ ಕಾವ ಶ್ರೀ ದೂರ್ವಾಪೂರೇಶಾ ಮನ್ನಿಸಿ ರಕ್ಷಿಸೊ ಭಜಕರ ಪೋಷಾ ಚನ್ನಿಗ ಕೇಶವದಾಸನಧೀಶಾ3
--------------
ಕರ್ಕಿ ಕೇಶವದಾಸ
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಬಾರಮ್ಮ ಮುತ್ತೈದೆ ಬಾರಮ್ಮ ಪ ಲಕ್ಷ್ಮೀರಮಣನ ವಕ್ಷಸ್ಥಳದಲಿ ರಕ್ಷಿತಳಾದೆ ಸುಲಕ್ಷಣ ದೇವಿ 1 ಗೆಜ್ಜೆಯ ಕಾಲಿನ ನಾದಗಳಿಂದಲಿ ಸಜ್ಜನರಿಗೆ ನೀ ಅಭಯವ ಕೊಡುತಲಿ2 ಕಮಲನಾಭ ವಿಠ್ಠಲನೊಡಗೂಡುತ ಭ್ರಮರ ಕುಂತಳೆ ಸೌಭಾಗ್ಯದ ನಿಧಿಯೆ3
--------------
ನಿಡಗುರುಕಿ ಜೀವೂಬಾಯಿ