ಒಟ್ಟು 3141 ಕಡೆಗಳಲ್ಲಿ , 118 ದಾಸರು , 2209 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಲ್ಹಾಪುರದ - ವಾಸಿನೀ | ಹೇ ಮಹಾಲಕ್ಷ್ಮಿಸೊಲ್ಲ ಲಾಲಿಸೇ ಮಾನಿನೀ ಪ ಬಲ್ಲವರಲ್ಲಿಗೆ ನಿಲ್ಲದೆ ತೆರಳಿಸೆಖುಲ್ಲರ ದಲ್ಲಣ | ನಲ್ಲರಿಸೆ ಮನ ಅ.ಪ. ಭೃಗುಮುನಿಯೂ ತಾ ಬರುತಾ | ವಕ್ಷಘಾತವಾಗಲು ತವ ತಾಣ - ತಾಡಿತ |ಅಗಡ ಮುನೀಗೆ ಪ್ರೀತಾ | ನಾಗುತಲಕುಮಿಗೆ ಅವನು - ಆದ್ರುತದೃಗಜಲಜಿಗಿಸುತ | ಹಗರಣಗೆಯ್ಯುತಜಗಳವ ನಟಿಸುತ | ನಗಧರನಲಿ ನೀನುಜಗದೊಡೆಯನ ಮನ | ಬಗೆಯನು ತಿಳಿಯುತಸೃಗಾಲ ಪುರಕಾಗಿ ಆಗಮ ನಿನ್ನದೂ 1 ಇಂಥಹ ನಿಮ್ಮ ಆಟವೂ | ಭಕ್ತರ ಮುಕ್ತಿಪಂಥವೆನಿಪ - ಮಾರ್ಗವೂಸಂತರ ಅಂತರಂಗವೂ | ನಿರ್ಮಲಿನ ಮುಕ್ತಿಕಾಂತೆಯೊಡನೆ ಆಟವೂ |ಅಂತರಂಗದಲಿಪ್ಪ ಗ್ರಂಥಿಸು ಭೇದನಸಂಚಿತಗಳು ನಾಶ | ಮುಂಜೆನ ನಿರ್ಲೇಪಅಂತರಂಗದಿ ಹರಿ | ಕಾಂತಿಯ ದರ್ಶನಎಂತು ನಾ ಪೇಳಲಿ | ಪಂಥಕೀರ್ತಾಳೀ 2 ಕುಂಡಲ ಕಪೋಲೆ | ಕಿರೀಟ ಮೌಳೇತಿಲಾಲಜ ಕರೆ ಕೋಮಲೇ ||ಕೇಳಿಲಿ ಯಮುನಾ ಕೂಲೇ | ಹರಿಯೊಡನೆ ಲೀಲೇತೂಳಿದಾನಂದ ಸುಜಾಲೇ ||ಕಾಲಕೂಟ ಸಮ | ಕೀಳು ವಿಷಯದಲಿಬೀಳುವುದೆನ ಮನ | ಲಾಲಿಸು ಹೇ ತಾಯೇಶೀಲನೆನ ಹರಿ ಗುರು | ಗೋವಿಂದ ವಿಠಲನ ||ಲೀಲೆಯ ತೋರು | ವಿಶಾಲ ಹೃದಯಳೇ 3
--------------
ಗುರುಗೋವಿಂದವಿಠಲರು
ಕೊಳಲಕೃಷ್ಣ ಬಂದು ನಿಲ್ಲೊ ಹೃದಯ ಕಮಲದಿ ನಳಿನನಾಭ ನಿನ್ನ ದಿವ್ಯ ಚಲುವ ರೂಪದಿ ಪ. ಶಿರದಿ ಮಕುಟ ಫಣೆಯ ತಿಲುಕ ಒಲಿವ ಮುಂಗುರುಳು ನಾಸಿಕ ಗಲ್ಲ ಹೊಳೆಯುತ 1 ಕರ್ಣದಲಿ ಕುಂಡಲಗಳು ಸ್ವರ್ಣ ಕಂಠವು ನಿನ್ನ ದಂತ ಹೊಳೆಯುತಿರಲು ಚನ್ನ ಶ್ರೀಹರಿಯೆ 2 ಅಧರ ಉರದಿ ಲಕ್ಷಿಯು ನಳಿತೋಳಿನಲಿ ಶಂಖ ಚಕ್ರ ವೇಣು ಪಿಡಿದಿಹ 3 ಕಮಲ ಮಾಲೆ ಮೇಲೆ ತುಳಸಿಯು ಮಾರಜನಕ ಹೊಳೆವೊ ಜರಿಯ ಪೀತ ವಸನವು 4 ರಕ್ತವರ್ಣ ವಸನ ಉಟ್ಟು ಕಟ್ಟಿ ಕಿರುಗೆಜ್ಜೆ ಮುಕ್ತರೊಡೆಯ ಮುಕ್ತಿಕೊಡುವ ಪಾದಕಮಲವು 5 ಕ್ಲೇಶ ಕಳೆಯುತ ದಾಸ ಜನರ ಕಾಯ್ವ ಕೃಷ್ಣ ಘಾಸಿಗೊಳಿಸದೆ 6 ಗುರುಗಳಲ್ಲಿ ನಿಂತು ಎನ್ನ ಹರುಷಪಡಿಸೊ ನೀ ಪರಮಪುರುಷ ನರಹರಿಯೆ ದುರಿತದೂರನೆ 7 ನೀರೊಳಾಡಿ ಭಾರಪೊತ್ತು ಕೋರೆ ತೋರಿದೆ ಘೋರರೂಪಿ ಬ್ರಹ್ಮಚಾರಿ ಕ್ಷತ್ರಿಯಾರಿ ನೀ 8 ಶ್ರೀ ಹರಿ ರಾಮ ಕೃಷ್ಣ ಬೌದ್ಧ ಕಲ್ಕಿಯೆ ಗೋಪಾಲಕೃಷ್ಣವಿಠ್ಠಲ ರೂಪ ತೋರೊ ನೀ 9
--------------
ಅಂಬಾಬಾಯಿ
ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ಪ ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ಒರೆದಿತು ಖಗಕುಲ ಸಾಧಿಸಿ ನೋಡಲು ಕೃಷ್ಣನ ಈಗಲೆಸಾಧ್ಯವೆ ನೀ ಬೃಂದಾವನದೊಳು1 ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನಾಆವು ಕಾವುತಲಿ ಗೋವಳರೆಲ್ಲರಹಾವ ಭಾವದಲಿ ಬೃಂದಾವನದೊಳು 2 ಕದಂಬ ವನದೊಳು 3
--------------
ವ್ಯಾಸರಾಯರು
ಕೊಳಲನೂದುವ ನಮ್ಮ ಚಲುವ ಕೃಷ್ಣಯ್ಯ ನಳಿನಾಕ್ಷಿಯರ ಮಧ್ಯೆ ಪೊಳೆವ ರಂಗಯ್ಯ ಪ. ಕರದ್ವಯದಲಿ ಶಂಖ ಚಕ್ರಪಿಡಿದಿಹ ಕಿರುನಗೆ ನಗುತ ಸುಲಿಪಲ್ಲಿನ ಚಲುವ ಸ್ವರಗಳ ಪಿಡಿಯುತ ವೇಣು ನುಡಿಸುವ ಸರಸಿಜನಾಭ ಹೃನ್ಮಂದಿರದಿ ಮೆರೆವ 1 ಜಗವ ಮೋಹಿಸುವಂಥ ನಗೆಯ ಮೊಗ ಚೆಲುವ ಹೆಗಲು ಎಡದಲ್ಲಿ ಗಲ್ಲ ತಗುಲಿಸಿ ಇರುವ ಸತಿ ಹೆಗಲಲಿ ಇಡುವ ನಗಧರ ನರ್ತನವಾಡಿ ಮುದವೀವ 2 ಕಾಲಕಡಗ ಗೆಜ್ಜೆ ಪಾಡಗರುಳಿಯು ಮೇಲೆ ಪೀತಾಂಬರ ಜರಿಯ ವೈಭವವು ಸಾಲ ಮುತ್ತಿನಹಾರ ಪದಕದ್ವಜ್ರಗಳು ಓಲಾಡುವ ನೀಲಾಂಬರ ಹೊದ್ದಿಹ ಒಲಪು 3 ಕಂಠ ಕೌಸ್ತುಭಮಣಿ ಅಧರದ ಕೆಂಪು ಕರ್ಣ ಕದಪು ಕನ್ನಡಿಯು ಬಂಟರಾದವರನ್ನು ಪೊರೆಯುವ ದೃಷ್ಟಿ ವೈ - ನಾಸಿಕ ಫಣೆಯ ತಿಲುಕವು 4 ಶ್ರೀಪತಿ ಮುಂಗುರುಳು ಶಿರದಲ್ಲಿ ಮಕುಟ ಪಾಪವ ದಹಿಸುವ ಪಾವನ ವೇಣು ಆಪಾದ ಮೌಳಿಯ ರೂಪದ ಚಲುವ ಗೋಪಾಲಕೃಷ್ಣವಿಠ್ಠಲ ಎನ್ನ ಕಾವ 5
--------------
ಅಂಬಾಬಾಯಿ
ಕೊಳಲನೂದೋ ಇನ್ನೊಮ್ಮೆ ರಂಗಯ್ಯಾ ಕೊಳಲನೂದೋ ಇನ್ನೊಮ್ಮೆ ಕೃಷ್ಣಯ್ಯಾ ಪ ಕೊಳಲನೂದೋ ದ್ವಾರಕಾ ಪುರನಿಲಯಾ ಅ.ಪ. ಎಡಹೆಗಲಲ್ಲೆಡಗಲ್ಲಂವ ನೀಡೀ ಕುಡಿ ಹುಬ್ಬುಗಳಲ್ಲಾಡಿಸುತ್ತ 1 ಮೃದುತರ ತುದಿ ಬೆರಳಿಂದೊತ್ತುತ ಮಧುರಾಧರದಲ್ಲಿಟ್ಟು ರಂಗಯ್ಯ2 ನಾದ ಮೂರುತಿ ಗೋಪೀಜನಲೋಲಾಶ್ರೀದವಿಠಲ ಗೋಪಾಲಬಾಲ3
--------------
ಶ್ರೀದವಿಠಲರು
ಕೊಳಲೂದೋ ಕೃಷ್ಣ ಕೊಳಲೂದೊ ಪ ಕೊಳಲೂದಲು ಮನ ತಳೆವುದು ಮನವಿದೊಬಳಲಿಪ ಚಿಂತೆಯ ಕಳೆವುದು ನಾದೊ ಅ.ಪ. ಸವಿಸವಿ ಸ್ವರಗಳು ಕಿವಿಗಳ ಹೊಗಲದು _ಭವಿಸುದೆನ್ನೊಳು ಭಕುತಿಯನಾದೊ 1 ತನು ಕೊಳವೆಯಲಿ ನಿನದುಸಿರನು ಕೊಡೆಇನಿದು ನುಡಿದು ಪಾವನ ತನುವಹುದೊ 2 ಸ್ವರಮಧುರತೆಯು ಶಿರದೊಳು ಚರಿಸುತೆನಿರುತ ನಿನ್ನಯ ಸ್ಮರಣೆಯ ನೀವುದೊ 3 ಮಧುರ ನಿನ್ನಯ ಗಾನವ ಕೇಳ್ವುದುಗದುಗು ವೀರನಾರಾಯಣನ ಮಹಾ ಪ್ರಸಾದೊ 4
--------------
ವೀರನಾರಾಯಣ
ಕೋಮಲಾಂಗಿಯೆ ಸಾಮಗಾಯನ ಪ್ರಿಯೆ ಪ ಹೇಮಗರ್ಭ ಕಾಮಾರಿ ಶಕ್ರಸುರ ಬಟ್ಟುಕುಂಕುಮ ನೊಸಲೋಳೆ ಮುತ್ತಿನ ಹೊಸ ಕಟ್ಟಾಣಿ ತ್ರಿವಳಿ ಕೊರಳೋಳೆ ಇಟ್ಟ ಪೊನ್ನೋಲೆ ಕಿವಿಯೋಳೆ ಪವಳದ ಕೈಯ ಕಟ್ಟ ಕಂಕಣ ಕೈಬಳೆ ತೊಟ್ಟ ಕುಪ್ಪಸ ಬಿಗಿದುಟ್ಟ ಪೀತಾಂಬರ ಘಟ್ಟಿ ವಡ್ಯಾಣ ಕಾಲಂದಿಗೆ ರುಳಿಗೆಜ್ಜೆ ಬೆಟ್ಟಿಲಿ ಪೊಳೆವುದು ವೆಂಟಿಕೆ ಕಿರುಪಿಲ್ಲಿ ಇಟ್ಟು ಶೋಭಿಸುವ ಅಷ್ಟಸಂಪನ್ನೆ 1 ಸಕಲ ಶುಭಗುಣಭರಿತಳೆ ಏಕೋದೇವಿಯೆ ವಾಕುಲಾಲಿಸಿ ನೀ ಕೇಳೆ ನೋತನೀಯನ್ನ ಮಹಲೀಲೆ ಕೊಂಡಾಡುವಂಥ ಏಕಮನವ ಕೊಡು ಶೀಲೆ ಪತಿ ಪಾದಾಬ್ಜವ ಏಕಾಂತದಿ ಪೂಜಿಪರ ಸಂಗವ ಕೊಡು ಲೋಕದ ಜನರಿಗೆ ನಾ ಕರವೊಡ್ಡದಂತೆ ನೀ ಕರುಣಿಸಿ ಕಾಯೆ ರಾಕೇಂದುವದನೆ 2 ಇಂದಿರೆ ಯೆನ್ನ ಕುಂದು ದೋಷಗಳಳಿಯೆ ಅಂದ ಸೌಭಾಗ್ಯದ ಸಿರಿಯೆ ತಾಯೆ ನಾ ನಿನ್ನ ಕಂದನು ಮುಂದಕ್ಕೆ ಕರೆಯೆ ಸಿರಿ ವಿಜಯವಿಠ್ಠಲರೇಯ ಎಂದೆಂದಿಗೊ ಮನದಿಂದಗಲದೆ ಆ ನಂದದಿಂದಲಿ ಬಂದು ಮುಂದೆ ಕುಣಿಯುವಂತೆ ವಂದಿಸಿ ಪೇಳಮ್ಮ ಸಿಂಧುಸುತೆಯಳೆ3
--------------
ವಿಜಯದಾಸ
ಕೋರಬೇಡ ದುರ್ವಿಷಯಸುಖಗಳನು ಕೋತಿಮನವೆ ನೀನು ||ಪ|| ಯಾರಿದ್ದರೇನು ನಿನ್ನ ಯೋಗ್ಯತೆಯ ಮೀರಿನಡಯಲಸಾಧ್ಯ ಶತಕಲ್ಪಕು ಅ.ಪ ಕಷ್ಟ ಒದಗಲಿ ನಿಷ್ಠುರ ನುಡಿಯಲಿ ಕೆಟ್ಟವನಿವನೆನಲಿ ಇಷ್ಟ ಬಂಧುಗಳು ಶತ್ರುಗಳಾಗಲಿ ಇಲ್ಲದೆ ನಿಂದಿಸಲಿ ಹೊಟ್ಟೆತುಂಬ ಆಹಾರವಿಲ್ಲದಿರಲಿ ಹುಚ್ಚನೆಂದು ಬೈಯಲಿ ಸಂಕಲ್ಪವು 1 ಬನ್ನ ಅನ್ಯರಂತೆ ತಾನಿರಬೇಕೆಂದಾಯಾಸ ಹೊಂದಬೇಡ ತತ್ವನಂಬಬೇಡ | ಮೂಢಾ 2 ಪರಿಪರಿ ಸಂಕಟ ಬಂದರೂ ನೊಂದು ಪರರ ದೂಷಿಸಬೇಡ ಸ್ಥಿರವೀ ಶರೀರವೆಂದು ನಂಬಿ ಛೀ ಎನಿಸಿಕೊಳ್ಳಬೇಡ ತಿಳಿಯಲೊ ಮೂಢಾ 3
--------------
ಗುರುರಾಮವಿಠಲ
ಕೋಲ ಕೋಲನ್ನ ಕೋಲ ಕೋಲ ಕೋಲನ್ನ ಕೋಲಕೋಲ ಹೊಯ್ದುಪಾಡಿ ನಮ್ಮ ಜಾಣರಂಗಗೆ ಪ. ಲೋಕನಾಯಕ ವ್ಯಾಸ ಮುನಿಗಳಿಗೆ ಏಕೋ ಭಾವದಿಂದ ನಮಿಸಿಹಾಕಿರೆಮ್ಮ ಕೋಲ ಹೊಯ್ದುವಾಕ್ಯಗೆಲಿಸೆಂದು1 ಮಿತ್ರೆ ರುಕ್ಮಿಣಿದೇವಿ ಕರೆದುಮಿತ್ರಾದಿಗಳಿಗೆ ಹೇಳಿದಳುಮುತ್ತಿನ ಕೋಲ ತೊಳಿಯಿರವ್ವಉತ್ತಮ ಜಲದೊಳು 2 ರಾಸ ಕ್ರೀಡೆಯಲ್ಲಿ ವನಿತೆಯರುವಾಸುದೇವ ಪಿಡಿದ ಕೋಲ ಸೋಸಿಲೆ ಪೂಜಿಸಿರಮ್ಮಲೇಸು ಕೊಡಲೆಂದು 3 ಮಂದಗಮನೆಯರೆಲ್ಲ ಕೋಲಿಗೆ ಗಂಧ ಅಕ್ಷತೆ ಏರಿಸಿರೆ ಮುಂದಾಗಿ ಬಲಗೊಳ್ಳಿರೆಲ್ಲವೃಂದಾರಕರನ್ನ4 ನಲ್ಲೆಯರು ಮುತ್ತಿನ ಕೋಲಿಗೆ ಮಲ್ಲಿಗೆ ಸಂಪಿಗೆ ಏರಿಸಿರೆಎಲ್ಲಾ ಫಲಗಳಿಟ್ಟು ಕೈಯ್ಯನಲ್ಲೆಯರು ಮುಗಿದಿರೆ 5 ಜಾಣೆಯರು ನೀವೆಲ್ಲ ಮೊದಲೆವಾಣಿಯ ಬಲಗೊಳ್ಳಿರೆ ಕಲ್ಯಾಣವಾಗಲೆಂದು ಕೈಯ್ಯಮಾಣಗೆ ಮುಗಿದಿರೆ 6 ಮೃಡನ ಮಗನ ಮೊದಲೆ ನೆನೆದುಪಿಡಿಯಿರಮ್ಮ ಕೋಲ ನಿಮ್ಮನುಡಿಯಗೆಲಿಸಲೆಂದು ದ್ರವ್ಯವಕೊಡಿರೆ ದಾನವ 7 ಇಂದು ಗೆಲಿಸೆಂದು 8
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲಕೋಲ ಕೋಲೆನ್ನ ಕೋಲಕೋಲಾಹಲವ ಮಾಡಿ ಬಾಲೆಯರು ಪಾರ್ಥಗೆ ಕೋಲ ಪ ಕಟ್ಟಿ ಜಾನ್ಹವಿಯಲ್ಲಿ ಬಿಟ್ಟು ಬದುಕಲು ಭೀಮ ಥಟ್ಟನೆ ಮಗ್ಗಲ ಹಚ್ಚಿ ಬಿಟ್ಟಿತು ಸರ್ಪಪ್ರಾಣ1 ಕುಸುಮದಂಥವಳಿಗೆ ಸವಳ ಪುರುಷನು ವಿಷದ ಲಡ್ಡಿಗೆ ತಿಂದು ಭಸ್ಮ ಮಾಡಿದ ಭೀಮ2 ಲಜ್ಜೆ ಬಿಟ್ಟು ಅರ್ಜುನ ಖೋಜಾನೆಂದೆನಿಸಿಕೊಂಡಿವಜ್ರ್ಯವಾಯಿತು ಮಾನ ನಿರ್ಜರೋತ್ತಮ ನಕ್ಕ3 ಹೆಣ್ಣಲ್ಲ ಗಂಡಲ್ಲ ಬಣ್ಣ ವಿಷ್ಟ್ಯಾಕೊ ನಿನಗೆ ಸಣ್ಣದಿ ನೆನೆದು ಕೀರ್ತಿ ಅಣ್ಣ ಬಲರಾಮನಕ್ಕನು 4 ಶೂರತನ ವೆಲ್ಲ ನೀಗಿ ಸೀರೆಯನುಟ್ಟುಕೊಂಡಿಬಾರದೆ ನಾಚಿ ನಿಂತೆಶೌರಿ ರಾಮೇಶನಕ್ಕನು ಕೋಲ5
--------------
ಗಲಗಲಿಅವ್ವನವರು
ಕೋಲನ್ನ ಕೋಲೇ ಕೋಲೇ ಕೋಲನ್ನ ಕೋಲೇಸದ್ಗುರುವ ಬಲಗೊಂಬೆ ಕೋಲನ್ನ ಕೋಲೆ ಪ ನಾಯಿಗೋಣನೆ ಮುರಿದು ನಾಗಾರ ಇಲಿ ತಿಂದುಹೋಯಿತೇ ಕಣ್ಣು ಕಾಗೆಯದು ಕೋಲನ್ನ ಕೋಲೆ 1 ಕಷ್ಟದ ಹದ್ದನೆ ಬಡಿದು ಇಷ್ಟವಿಲ್ಲದೆ ಗುಡ್ಡವನೇರಿದವನ ನರಿಸೂಚಿಸಿತೇ ಕೋಲನ್ನ ಕೋಲೆ2 ಆನೆಯ ಅಣುನುಂಗಿ ಅಡರಿತೇ ಮೇಲಕೆಕೋಣನ ಕೋಗಿಲೆ ನುಂಗಿತೇ ಕೋಲನ್ನ ಕೋಲೆ 3 ಊದಿತ್ತು ಓಲೆಯು ಒಂಭತ್ತು ಮಡಕೆಗೆಹಾದಿಯಾಯಿತೇ ನಡುವಣ ಮಾರ್ಗ ಕೋಲನ್ನ ಕೋಲೇ4 ಕದವನೆ ತೆರೆದು ಕಳ್ಳರ ಬಲಿಕೊಟ್ಟುಮೊದಲಗಿತ್ತಿಗೆ ಮೂಗುತಿಯಿಟ್ಟೆ ಕೊಲನ್ನ ಕೋಲೇ 5 ತುಂಬಿ ಕಮಲ ಕಳೆಯೇರೆ ಕೋಲನ್ನ ಕೋಲೇ 6 ಓಡಿಲಗಲ ಮಾಡಿ ಉಣ್ಣದೂಟವುಂಡುಓಡುವ ಹಾರುವನ ಕಟ್ಟಿಹಾಕಿ ಕೋಲನ್ನ ಕೋಲೆ 7 ಕೋತಿಯು ಸತ್ತಿತೇ ಕೊಡವೀಗ ಒಡೆಯಿತೇಜೋತಿಯು ಒಳಗ್ಹೊರಗೆ ಬೆಳಗಿತೇ ಕೋಲನ್ನ ಕೋಲೆ 8 ಮುದುಕಿಯನೆ ಕೊಂದು ಮರವನೆ ಮುರಿದೊರಗಿಚಿದಾನಂದ ಬ್ರಹ್ಮ ತಾನಾಯಿತೇ ಕೋಲನ್ನ ಕೋಲೆ9
--------------
ಚಿದಾನಂದ ಅವಧೂತರು
ಕೋಲು ಕೋಲು ಕೋಲು ಕೋಲೇಕೋಲೇ ಕೋಲನ್ನ ಪ ಆಧಾರವನೆ ಮೆಟ್ಟಿ ಚಕ್ರಾರ ಭೇದಿಸಿನಾದದ ನಾದ ಸುನಾದವ ಕೇಳಿಶೋಧಿಸಿ ಸುಷುಮ್ನ ಮಾರ್ಗ ಮನೆಯ ಪೊಕ್ಕುಮೋದಿ ಬೆಳಗಿನೊಳ ಬೆಳಕು ತಾನಹುದೆ ಹಟ1 ಪ್ರಾಣಾಪಾನವು ಕೂಡಿ ಸರ್ಪವನೆಬ್ಬಿಸಿಜಾಣತನದ ನಾಗ ಸ್ವರವನೂದಿಮಾಣದೆ ಮುತ್ತುಗಳುದುರುವ ಬಯಲಲಿಕೇಣವಿಲ್ಲದೆ ಆಡಿಪುದೆ ಕುಂಡಲಿಯೋಗ 2 ಪೀಕುತ ನಾಲಗೆ ಕ್ಷೀರಾಹಾರದೊಳಿದ್ದುನೂಕುತಂಗಲದೊಳು ರಸನವನುತೇಕ ನಿಲ್ಲಿಸಿ ನಾಲಗೆಯಲಮೃತವನ್ನುಂಡುಮೂಕ ಸಕ್ಕರೆ ತಿಂದ ತೆರದಲಂಬಿಕ ಯೋಗ 3 ಷಣ್ಮುದ್ರೆ ಹಿಡಿದು ಷಡಂಗುಲದಲಿ ಒತ್ತಿಕಣ್ಣ ಅಂತರ್ಯದಿ ದೃಷ್ಟಿಯಿಟ್ಟುಹುಣ್ಣಿಮೆ ಚಂದ್ರನ ಕಳೆಯ ಬೆಳಗಿನೊಳುಥಣ್ಣಗೆ ಥಳ ಥಳಿಸುವುದದು ಹಟ ರಾಜ4 ವಾಯುವ ಸಮನಿಸಿ ರೇಚಕ ಪೂರಕದಿಂದಸಾಯಾಸದಲಿ ಕುಂಭಕವ ನಿಲ್ಲಿಸಿಬಾಯಿ ಮಾಡುವ ಸುನಾದವ ಲಕ್ಷಿಸಿಹಾಯಿ ಎಂದೆನಿಪ ಸುಖಹೊಂದೆ ಲಯಯೋಗ 5 ದೃಷ್ಟಿಯರ್ಧವನೀಗ ಮುಚ್ಚಿ ಸದ್ಗುರುವಾಗಿದೃಷ್ಟಿಸಿ ತನ್ನನೆ ನೋಡುತಿರೆಸುಟ್ಟು ಜೀವತ್ವವ ದೇಹಭಾವವ ಮರೆತುಮುಟ್ಟಿ ಬ್ರಹ್ಮಾದುದೆ ಅದುವೆ ಸದ್ಗುರು ಮಾರ್ಗ6 ಹೊರಗೊಂದು ಆಗದೆ ಒಳಗೊಂದು ಆಗದೆಹೊರಗೆ ಒಳಗೆ ತಾನೆ ತಾನೆಯಾಗಿಗುರು ಚಿದಾನಂದನು ಸಹಜ ತೋರುತ ಸರ್ವಪರಮ ಮಂಗಳ ಸಾಕ್ಷಿಯದು ರಾಜಯೋಗ7
--------------
ಚಿದಾನಂದ ಅವಧೂತರು
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ | ಕೋಲು ಸದ್ಗುರುವಿನಾ ಬಲಗೊಂಬೆ ಕೋಲೆ ಪ ಶರಣು ಶರಣು ಗುರುವೇ ಶರಣರ ಸುರತರುವೆ | ಶರಣರ ಹೃದಯದೊಳಗಿರುವೇ ಕೋಲೆ | ಅನುದಿನ | ಕರುಣದ ಮಳೆಯಾಗರೆವುತ ಕೋಲೆ 1 ಕರಣ ತೃಯದಿನಂಬಿ ಸ್ಮರಣೆಯ ಮಾಡಲು | ಧರಣಿಯಲಿಷ್ಟಾರ್ಥ ಕೊಡುತಿಹ ಕೋಲೆ | ಧರಣಿಯಲಿಷ್ಟಾರ್ಥ ಕೊಡುತಿಹ ಜನದಂತ ಕರಣದೊಳಗೆ ಬಯಕೆ ನಿಲದಂತೆ ಕೋಲೆ 2 ಚರಣ ಸರಸಿಜಕ ಶರಣ ಹೋಗಲು ಜನ್ಮ | ಮರಣದ ಭಯಕಂಜಿ ಜನರು ಕೋಲೆ | ಮರಣದ ಭಯಕಂಜಿ ಜನರು ಬರೆ ಕಂಡು | ಕರುಣಾ ಕಟಾಕ್ಷದಿ ನೋಡುವ ಕೋಲೆ 3 ಕರದಿಂದ ಪಿಡಿದವನ ತರಣೋಪಾಯದ ಬೋಧಾ | ಭರದಿಂದ ಬೀರುವೆ ಮನಸಿಗೆ ಕೋಲೆ | ಭರದಿಂದ ಬೀರುವೆ ಮನಸಿಗೆ ಭವದೊಳು | ಮರಳ್ಯವ ಸಿಕ್ಕದಂತೆ ಮಾಡುವೆ ಕೋಲೆ 4 ಜ್ಞಾನವೆಂಬಂಜನೆ ಸೂನಯನಕ ಊಡಿ | ಹೀನ ಅಜ್ಞಾನವ ಹರಿಸೂವ ಕೋಲೆ ಹೀನ ಅಜ್ಞಾನವ ಹರಿಸುವೆ ಬೇಗದಿ | ಸ್ವಾನುಭವದ ಸುಖ ಬೀರುವೆ ಕೋಲೆ 5 ನಾನಾ ಹಂಬಲವನ ಏನೆನುಳಿಯದ್ಹಾಂಗ | ತಾನಿದ್ದ ಬದಿಯಲಿ ಇಹಪರ ಕೋಲೆ | ತಾನಿದ್ದ ಬದಿಯಲಿ ಇಹಪರ ಸುಖಗಳ | ನೀನಿದಿರಿಡುತಿಹೆ ಸದಮಲ ಕೋಲೆ 6 ಎಂಟು ಸಿದ್ಧಿಗಳು ಉಂಟಾಗಿ ಬಂದರೆ | ವೆಂಟಣಿಸಿ ಅದರ ಕಡೆಗೇ ಕೋಲೆ | ವೆಂಟಣಿಸಿ ಅದರ ಕಡೆಗೇ ನೋಡ ನಿನ್ನ | ಬಂಟನೆಯ ಮಹಿಮೆಯ ಜಗದೊಳು ಕೋಲೆ 7 ನಿನ್ನ ಮಹಿಮೆಯನ್ನು ಇನ್ನು ನಾ ಪೊಗಳಲು | ಎನ್ನಳವಲ್ಲಾ ಜಗಕಲ್ಲಾ ಕೋಲೆ | ಎನ್ನಳವಲ್ಲಾ ಜಗಕಲ್ಲಾ ಸದ್ಗುರು | ನಿನ್ನ ಮಹಿಮೆ ಬಲ್ಲೆ ನೀನವೆ ಕೋಲೆ 8 ಮಹಿಗೆ ನೀ ಪತಿಯಾಗಿ ವಿಹರಿಸುತಿಹೆ ದೇವಾ | ಸಹಕಾರನಾಗಿ ಭಕ್ತರ್ಗೆ ಕೋಲೆ | ಸಹಕಾರನಾಗಿ ಭಕ್ತರ್ಗೆ ಅನವರತ | ಅಹಿತರವಂಡಣೆ ಮಾಡುತ ಕೋಲೆ 9 ಮುನ್ನಿನಪರಾಧವ ಇನ್ನೇನು ನೋಡದೇ | ಎನ್ನನುದ್ಧರಿಸು ದಯದಿಂದ ಕೋಲೆ | ಎನ್ನನುದ್ಧರಿಸು ದಯದಿಂದ ಮತಿಕೊಟ್ಟು | ನಿನ್ನ ಕೀರ್ತಿಯ ಕೊಂಡಾಡುವಂತೆ ಕೋಲೆ 10 ಎಂದೆಂದು ನಿಮ್ಮ ಪದ ಹೊಂದಿದ್ದವನು ನಾನು | ಕುಂದ ನೋಡದೇ ಸಲಹಯ್ಯಾ ಕೋಲೆ ಕುಂದ ನೋಡದೇ ಸಲಹಯ್ಯಾ ಮಹಿಪತಿ | ಕಂದನು ಮುಗ್ಧನೆಂದು ಬಿಡಬ್ಯಾಡಿ ಕೋಲೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕ್ಲೇಶಮಾಡಲಿ ಬೇಡ ಮನವೆ ನೀನೂ ದೇಶದೊಳಗೆ ಕೇಳು ಜ್ಞಾನಿಗಳ ಸಮ್ಮತಾ ಪ ವಸಿಷ್ಠ ಮಹಾಋಷಿಗೆ ನೂರುಮಂದಿ ಸುತರು ಅಸಮಸಾಹಸರು ಬಲು ಶೀಲಜ್ಞರು ಕಾಲ ಮೃತ್ಯುವಿನ ಕೈ ವಶವಾಗಿ ಹೋದರದು ನೋಡು ದು:ಖವ ಬಿಡು 1 ಕೃಷ್ಣ ಸೋದರಮಾವ ಮತ್ತೆ ಭೀಮಸೇನ ಜೇಷ್ಠಪಿತ, ಪಾರ್ಥನು ಪಡೆದ ಶೂರ ಇಷ್ಟು ಜನ ಇರಲಾಗಿ ಅಭಿಮನ್ಯು ದೇಹವನು ಬಿಟ್ಟು ಪೋಗಲು ಒಬ್ಬರಾದರು ಉಳುಹಿದರೆ2 ಇಂಥವರಿಗೀತ್ಯರನು ನಿನಗಾವ ಸ್ವಾತಂತ್ರ್ಯ ಸಂತೋಷವೆ ಬಡು ಧೈರ್ಯದಲ್ಲಿ ಕಂತು ಜನಕ ನಮ್ಮ ವಿಜಯವಿಟ್ಠಲನಂಘ್ರಿ ಅಂತರಂಗದಲಿಡು ಮುಂದಿನಗತಿ ಬೇಡು 3
--------------
ವಿಜಯದಾಸ
ಖಗವರನೇ ಪಾಲಿಸೋ ಪ ಪೆಗಲೊಳು ಹರಿಯನು | ಮಿಗೆ ಭಕುತಿಲಿ ಪೊತ್ತುನಗಧರ ಬಿಂಬವ | ನಗುತ ನಖದಿ ನೋಳ್ಪ ಅ.ಪ. ವೇದೋದಿತ ಕ್ರಿಯ | ಕಾದ್ಯಭಿಮಾನಿಯೆವೇದಮಯನೆ ಹರಿ | ಗಾದೆಯೊ ವಾಹನಸಾಧಿಸಿ ಶ್ರೀಹರಿ | ಪಾದಾಂಬುಜಗಳಹಾದಿಯ ತೋರೊ ಅ | ಗಾಧ ಮಹಾತ್ಮಾ 1 ಸಾಸಿರ ಬೃಹತಿಯ | ಸೂಸಿ ನೀ ಪೊಗಳುತಸಾಸಿರ ನಾಮನು | ಕೇಶವ ನೊಲಿಮೆಯಪೋಷಿತ ನಾಗಿಹೆ | ಆಶುಗ ಹೃದಯಾಕಾಶದೊಳಿರುತಿಹ | ಶ್ರೀಶನ ತೋರಿಸಿ 2 ಪಾವಮಾನಿಸುತ | ಪಾವಿಸಿ ಮನ್ಮನಭಾ5¥5 | ಗೋವಿಂದ ವಿಠಲನ |ಪಾವನ ನಾಮ ಸು | ಭಾವನ ಉಣಿಸುತಕೋವಿದ ಸಂಗತಿ | ಈವುದು ನೀ ಸದ 3
--------------
ಗುರುಗೋವಿಂದವಿಠಲರು