ಒಟ್ಟು 929 ಕಡೆಗಳಲ್ಲಿ , 95 ದಾಸರು , 778 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಸಹಜಭಾವ ಸಿರಿಯರ ಜೀವ ಶರಣು ಶರಣು ದೇವ ದೇವ ಪ ಶರಣು ನಿನ್ನ ಚರಣಸೇವೆ ಕರುಣಿಸೆನಗೆ ನಿರುತದಭವ ಪರಮಪಾವನ ನಿಮ್ಮ ಚರಿತ ಕರುಣಿಸೆನ್ಹøದಯಕ್ಕೆ ಸತತ ಪೊರೆಯೊ ಪ್ರೇಮದಿ ದುರಿತಪರ್ವತ ತರಿದು ತೊರೆಸಿ ಜಗದ ಮಮತೆ ಅ.ಪ ಸಾರ ಸುರಸಮೂಹಸೇವಿತ ಮಾರಾರಿವಿನುತ ಕ್ಷೀರವಾರಿಧಿ ಸುತೆಯ ಪ್ರಿಯನಾಥ ಸನಕಾದಿನಮಿತ ಸೇರಿ ಭಕ್ತರಗಣದಲಿ ಗುಪ್ತ ನಲಿಯುವಿ ಮಮತೆ ತೋರಿ ಎನ್ನನು ಮಾಡು ಪಾವನ ಮೀರದ ಸಂಸಾರಬಂಧನವಾರಿಯ ದಾಂಟಿಸುಯೀಕ್ಷಣ ಸೇರಿಸದೆ ಎನ್ನ ಮಾಯಾಜಾಲದಿಂ ಸೇರಿಸು ನಿಜಜ್ಞಾನ ದಯದಿ 1 ವೇದವೇದಂಗಳಿಗೆ ಅಗೋಚರ ವೇದಂಗಳಾಧಾರ ವೇದವೇದ್ಯಮಳೈರ್ಕ ಪರತರ ವೇದಗಳ್ಹಿತಕರ ವೇದವೇದಾಂಗ ಶ್ಯಾಮಸುಂದರ ವೇದಾದಿ ಮನೋಹರ ವೇದವಿದ್ಯೆ ಬೋಧಿಸಯ್ಯ ವೇದಸಾಧನ ತೋರಿಸಯ್ಯ ವೇದಮಂತ್ರ ಸಿದ್ಧಿಸಯ್ಯ ವೇದವೇದಾಂತದೊಳು ಗೌಪ್ಯವಾದ ತತ್ವದ ಮೂಲ ತಿಳಹಿ ವಾದಬುದ್ದಿಯ ನೀಗಿಸಿ ನಿಮ್ಮ ಪಾದಭಕ್ತಿಯ ಕರುಣಿಸಭವ 2 ಭುವನತ್ರಯದ ಪರಮ ಸುಸೂತ್ರ ವಾರಿಜನೇತ್ರ ಭುವನತ್ರಯದ ಪಾವನ ಸ್ತೋತ್ರ ಪರಮಪವಿತ್ರ ಭುವನಜಾತೆಯ ಮೋಹದ ಮಿತ್ರ ವನರುಹ ಗಾತ್ರ ಭುವನದ್ಹತ್ತವತಾರ ದೇವ ಭುವನವೀರೇಳು ಹೊತ್ತು ಆಳುವ ಜಯವ ಪೊಂದಿಸಿ ನಿಮ್ಮಯ ಕರುಣದೊರಕಿಸಿ ದಯದಿ ಮುಕ್ತಿಯ ಕೊಡು ಶ್ರೀರಾಮ 3
--------------
ರಾಮದಾಸರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶುಭ ಮಂಗಳ ತ್ರಯಭುವನ ವಂದ್ಯ ಸೀತಾಕಾಂತಗೆ ಪ ದಶರಥಾತ್ಮಜನಾಗಿನರಲೀಲಿ ನಟಿಸಿದಗ ಋಷಿಮುಖಕಾಯ್ದ ಹಿಲ್ಯೋದ್ದಾರಗ ಅಸಮಧನುಮುರಿದ ವನಿಜೆಯಾಮಾಲೆಧರಿಸಿದಗ ಬೀಸಜಲೋಚನ ಜನಕ ಜಾಮಾತಗ 1 ಮೂನವರನುಜರ ಕೂಡಿ ಕಲ್ಯಾಣವಿಡಿದಂಗ ದೇವಭೃಗುಪತಿ ಮನಾನಲಿಸಿದವಂಗ ಅವಿಭವಿ ಬಂದಯೋಧ್ಯಾ ಪುರವನಾಳ್ದಂಗ ಜೀವಜಾತಕಸುಖವ ಬಡಿಸಿದಂಗೆ 2 ಗುರು ಮಹೀಪತಿ ಸುತನ ಜೀವ್ಹದಲಿತಾನಿಲಿಸಿ ನಿರುಪಚಾರಿತ್ರ ನುಡಿಸಿದಂಗೆ ಧರೆಯೊಳಗ ದೀನ ಅನಾಥರನು ಪೊರೆವ ಪರಮ ಮಂಗಳ ನಾಮ ಶ್ರೀ ರಾಮಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ಮಂಜುಳಗಾತ್ರ್ರೆಕುಂಜರದಂತೆ ಗಮನೆ ರಂಜಿತಾಂಗಿ ನಿರಂಜನಾಂಗಿ ಪ ಧರೆಯ ಮ್ಯಾಲೆ ಹಿರಿಯಳು ನಾ-ನಿರಲು ಲಜ್ಜೆ ತೊರೆದು ನೀನುಸರಸವಾಡೋದೆ ಮುರಹರನಕರೆದು ಭಾಮಿನಿ ಸುಗುಣೆ ಕಾಮಿನಿ 1 ಪತಿಯ ಪ್ರೀತಿ ಎನ್ನ ಮ್ಯಾಲೆಅತಿಶಯದಿ ಇರಲು ಜ್ಯೇಷ್ಠಸತಿಯಳೇನೇ ನೀನು ನೋಡುಮತಿಯ ರುಕ್ಮಿಣಿ ಸುಪದ್ಮಗಂಧಿನಿ2 ಒಂದು ಕಾಲದಲ್ಲಿ ದಾಸಿ-ಯಿಂದ ಪತಿಯು ಸರಸವಾಡಲುಬಂದಳೇನೇ ಅರಸಿ ಸಮ-ಳೆಂದು ಭಾಮಿನಿ ಸುಗುಣೆ ಕಾಮಿನಿ 3 ದಾಸಿ ಸಮಳು ನಾನು ಅಲ್ಲ ದೋಷ ಮಾತನಾಡಬೇಡಶ್ರೀಶನ ದಯರಾಶಿ ಇರಲುದಾಸಿಯೆ ರುಗ್ಮಿಣಿ ಸುಪದ್ಮಗಂಧಿನಿ 4 ಸಾರೆ ಕೃತ್ಯವಾರೆ ಹೂಡಿದ್ವಾರಾವತಿಯಿಂದ ಎನ್ನಸಾರೆ ಬಂದ ಪ್ರೀತಿಯು ಅ-ಪಾರೆ ಭಾಮಿನಿ ಸುಗುಣೆ ಕಾಮಿನಿ5 ಕಡಲಶಾಯಿ ತಡೆದರಿನ್ನುದಿಡುಗು ದೇಹ ಬಿಡುವೆನೆಂಬೊನುಡಿಯ ಕೇಳಿ ಪಿಡಿದನೆಬಿಡದೆ ರುಗ್ಮಿಣಿ ಸುಪದ್ಮಗಂಧಿನಿ 6 ಮಂದರಧರನು ಪ್ರೀತಿ-ಯಿಂದ ನಿನ್ನ ಪಡೆದನೇನೆಒಂದು ಮಣಿಯ ಕಾರಣದಿಬಂದೆ ಭಾಮಿನಿ ಸುಗುಣೆ ಕಾಮಿನಿ7 ಸುಮ್ಮನೆ ಬಂದವಳಿಗೆಬ್ರಹ್ಮ-ಲಗ್ನದಿ ಬಂದೆನಗೆಸಾಮ್ಯವೇನೆ ಯಾಕೆ ನಿನಗೆಹೆಮ್ಮೆ ರುಗ್ಮಿಣಿ ಸುಪದ್ಮಗಂಧಿನಿ. 8 ಮಾನಾದಿ ಭಕ್ತಿಯು ಕನ್ಯಾ-ದಾನವು ಲೋಕದೊಳಗುಂಟುಏನು ನಿನ್ನ ತಾತ ಕೊಟ್ಟದೀನ ಭಾಮಿನಿ ಸುಗುಣೆ ಕಾಮಿನಿ 9 ಎನ್ನ ಹಂಗದೆಂದುಪ್ರಸನ್ನ ಕೇಳಿ ಶತಧನ್ವನಬೆನ್ನಟ್ಟಿ ಕೊಂದನೇ ನೀ-ಚೆನ್ನ ರುಗ್ಮಿಣಿ ಸುಪದ್ಮ ಗಂಧಿನಿ 10 ವೀರ ಅರಸರ ಸ್ವಭಾವಚೋರರ ಕೊಲ್ಲಬೇಕೆಂಬೋಸಾರ ಪ್ರೀತಿಯದರಿಂದತೋರಿ ಭಾಮಿನಿ ಸುಗುಣೆ ಕಾಮಿನಿ11 ಇಂದ್ರಾದಿ ದೇವತೆಗಳೊಳುಸಾಂದ್ರಯುದ್ಧವನ್ನೆ ಮಾಡಿವೀಂದ್ರ ಎನಗೆ ಪಾರಿಜಾತತಂದ ರುಗ್ಮಿಣಿ ಸುಪದ್ಮಗಂಧಿನಿ12 ಕ್ಲೇಶ ನೋಡಿ ತಂದತರುವ ಭಾಮಿನಿ ಸುಗುಣೆ ಕಾಮಿನಿ13 ನಿಜಳೆಂದು ರಂಗನು ಎನ್ನವಿಜಯಯಾತ್ರೆಯಲ್ಲಿ ತನ್ನಭುಜಗಳಿಂದಾಲಂಗಿಸಿದಸುಜನೆ ರುಗ್ಮಿಣಿ ಸುಪದ್ಮಗಂಧಿನಿ 14 ಅರಸರ ಸ್ವಭಾವ ತಮ್ಮಅರಸೇರ ಮನೆಯೊಳಗಿಟ್ಟುಸರಸ ದಾಸೇರಿಂದ್ಹೋಗೋದುಸ್ಮರಿಸೆ ಭಾಮಿನಿ ಸುಗುಣೆ ಕಾಮಿನಿ 15 ಸಾರವಚನ ಕೇಳಿ ಭಾಮೆಮೋರೆ ಕೆಳಗೆ ಮಾಡುತಿರಲುನಾರಿ ರುಕ್ಮಿಣಿ ಭಾಮೆಯರನ್ನುವೀರ ಕರೆದನು ತಾ ಸೇರಿ ಮೆರೆದನು16 ಮಂಗಳಾಂಗ ಮಹಿಮ ಕೇಶವಾ-ಲಿಂಗಿಸಿದ ಭೈಷ್ಮಿಯನ್ನುತುಂಗಗುಣ ಗೋಪೀರಮಣರಂಗವಿಠಲನು ಅನಂಗಜನಕನು 17
--------------
ಶ್ರೀಪಾದರಾಜರು
ಶುಭ ಮಂಗಳ ಸುಜನಾಂಬುಧಿ ಚಂದ್ರಗೆ ಪ ಶ್ರೀ ಸುಧೀಂದ್ರ ಕುಮಾರಗೆ ಮಂಗಳ ಭೂಸುರನುತ ಮಹಿಮಗೆ ಮಂಗಳ ದೇಶಿಕ ಕುಲವನ ಜಾತನಿಗೆ ಮಂಗಳ ಭಾಸುರ ಕೀರ್ತಿಯ ಪಡೆದವಗೆ 1 ವೃಂದಾವನ ದಿವಿಯೊಳಗೆ ಸುರದ್ರುಮ ದಂದದಿ ರಾಜಿಸುವವಗೆ ಮಂಗಳ ಅಂಧ ಪಂಗು ಮೂಕ ಬಧಿರರೀಪ್ಸಿತ ಸಂದೋಹ ಸಲಿಸುವ ಮುನಿಗೆ 2 ವಿಪಿನ ಭಯ ವೀತಿಹೋತ್ರನಿಗೆ ಮಂಗಳ ವಾತ ಜನಕ ಜಗನ್ನಾಥ ವಿಠ್ಠಲನ ದೂತರ ಸಲಹುವ ದಾತನಿಗೆ 3
--------------
ಜಗನ್ನಾಥದಾಸರು
ಶೂರ್ಪಾಲಯ ಕ್ಷೇತ್ರದ ನರಹರಿ ಸ್ತೋತ್ರ (ಕೃಷ್ಣಾತೀರ) ನರಹರೀ ಪಾಹಿ | ಮರನೂರ ನರಹರೀ ಪ ಪರಿ ಭವಣೆಯ | ಪರಿಹರಿಸುತ ಮುನ್ನವರ ವೈರಾಗ್ಯವನಿತ್ತು | ಕರುಣೀಸೊ ಸಂಪನ್ನ ಅ.ಪ. ಸತಿ | ಕೃಷ್ಣೆಗಕ್ಷಯ ವಸನಸೃಷ್ಟಿಗಿತ್ತವ ಹರಿ | ಕೃಷ್ಣನೆ ಸಲಹೆನ್ನ 1 ಬುದ್ಧ | ಆಘಹರ ಕಲ್ಕಿಯೆ 2 ಜನಿತ ಸುಖ ಜಲ ಕಣ್ಣ | ಬಿಂದುಯುಗಳವು ಬೀಳೆ ಪಾವನ್ನ | ವೃಕ್ಷಯುಗಳೋದಯವಾಯ್ತು ಮುನ್ನ | ಆಹಅಗಣಿತ ಮಹಿಮ | ಅಶ್ವತ್ಥ ಸನ್ನಿಹಿತನೆನಿಗಮ ವೇದ್ಯನೆ ಸರ್ವ | ಜಗದೀಶ ಸಲಹೆನ್ನ 3 ಶೂಲಿಯಿಂದೊಡಗೂಡಿ ರಾಮ | ಚಂದ್ರಪಾಲಿಸುತಿಹ ಸಾರ್ವಭೌಮ | ಸುಜನಾಳಿ ಪಾಪಾರಣ್ಯ ಧೂಮ | ಕೇತುಓಲೈಪ ಜನರಘ ಭಸ್ಮ | ಆಹಲೀಲೆಯಿಂದಲಿ ಗೈವ | ಆಲಯವಿದು ಶೂರಪಾಲೀಯ ಕ್ಷೇತ್ರದಿ | ಶ್ರೀಲೋಲ ನರಹರಿ 4 ನಡು ನದಿಯೋಳು ಕೋಟೇಶ | ಮತ್ತೆಪಡುವಲಯದೋಳು ಕಂಕೇಶ | ಇನ್ನುಬಡಗ ನರಹರಿ ಬಳಿ ಬೈಲೇಶ | ಆಹರೊಡಗೂಡಿ ನೆಲಸೀಹ | ಕಡು ಮುದ್ದು ರೂಪದಿದೃಢ ಭಕ್ತನೆನಿಸೀಹ | ಮೃಡನಿಂದ ಪೂಜಿತ 5 ಅಜಪಿತ ಪದಜಳು ಎನಿಪ | ಮತ್ತೆಅಜಾಂಡ ಕಟಹದಿಂ ಬರ್ಪ | ಇನ್ನುಅಜಸುತ ಶಿರದಲಿ ಧರಿಪ | ಸಗರಜರ ಪಾಪವನ್ನು ಹರಿಪ | ಆಹಮಝಬಾಪು ಗಂಗೆಯ | ನಿಜ ಪಾಪ ಕಳೆಯಲುಅಜಸುತ ನಾಜ್ಞೆಯಿಂ | ಬಿಜಯಿಸಿದಳು ಇಲ್ಲಿ 6 ಪರರಘಗಳ ಹೊತ್ತು ಗಂಗೆ | ಬಂದುಹರ ಪೇಳಿದಂಥ ದ್ವಿಜಂಗೆ | ಶೂರ್ಪವರ ವಾಯು ನ್ವಿತ್ತಳವಂಗೆ | ಪಾಪಹೊರದೂಡಿದಳು ಮಂಗಳಾಂಗೆ | ಆಹಗುರುಕನ್ಯಾಗತನಾಗೆ | ಸರಿದ್ವರ ಕೃಷ್ಣೇಲಿಬೆರೆಯುತ ಸುರ ನದಿ | ಹರಿಪಳು ಜನರಘ 7 ಮಧ್ವಾರ್ಯ ಸಂತತಿ ಜಾತ | ಗುರುವಿದ್ಯಾಧೀಶರು ಇಲ್ಲಿ ಖ್ಯಾತ | ದ್ವಾದಶಬ್ದ ಪರಿಯಂತನುಷ್ಠಾತ | ಪ್ರಾಣಮುದ್ದು ಪ್ರತಿಮೆ ಪ್ರತಿಷ್ಠೀತ | ಆಹಶುದ್ಧ ದ್ವಾದಶಿ ದಿನ | ಸದ್ವೈಷ್ಣ್ವ ಲಕ್ಷರ್ಗೆವಿಧ್ಯುಕ್ತ ಭೋಜನ | ಶ್ರದ್ಧೆಯಿಂದಲಿ ಗೈದರ್ 8 ಪರ ತತ್ವವೆನಿಸಿ | ಸ್ತುತಿಸ್ಕಂದೋಕ್ತ ಮಹಿಮೆಯ ಸ್ಮರಿಸಿ | ಆಹಇಂದುಪ ಗುರು ಗೋ | ವಿಂದ ವಿಠಲನಹೊಂದಿ ಭಜಿಪರ್ಗ | ಬಂಧನವೆಲ್ಲಿಹದೋ 9
--------------
ಗುರುಗೋವಿಂದವಿಠಲರು
ಶೇಷಾದ್ರಿ ವಾಸಾ ಪಾಲಿಸೋ | ನಿನ್ನ ಶ್ರೀಪಾದದಾಸ ಜನರೊಳಗಾಡಿಸೊ ಪ ಭವ | ಪಾಶಗಳಳಿಯುತವಾಸಿಸೊ ಮನದಾ | ಕಾಶದೊಳಗೆ ಶ್ರೀಶಾವೃಷ್ಣೀಶ ಸರ್ವೇಶ - ಕೃತ ಖಳಕುಲ ಬಹುನಾಶ ಅ.ಪ. ಮದನ ಕೋಟಿ ಲಾವಣ್ಯಾ | ಶ್ರೀ ಭೂ ವರೇಣ್ಯಾಪದುಮೆ ಮನಮೋಹನಾ |ಮುದ ಮನದಲಿ ಮನದವಕಾಶದಿ ಪೊಳೆಸುರಭೂಜ | ರವಿತೇಜ | ಮಹ ಓಜ ವೈರಾಜಾ 1 ತರುಜಾತಿ ಫಲ ಸುಮನಾ | ಸುರರೀ ಭವನಾಧರಿಸಿ ಮೆರೆವ ಸುಜನಾ |ಗಿರಿಯೊಳು ನೆಲೆಸುತ - ಸುರರ ಸೇವೆ ವಿಸ್ತಾರಗಂಭೀರ ಮನೋಹಾರ - ಕೃತಕ್ರತು ಸಮ ಅಪಾರ 2 ಭಾರತೀಶ ಪ್ರಾಣಾಂತರ್ಗತ | ಕಾಮಿತದಾತಾಸಾರ ಸದ್ಗುಣ ಭರಿತಾ ||ನೀರಜಾಕ್ಷ ಗುರು | ಗೋವಿಂದ ವಿಠಲನೆಮೈದೋರೊ | ಮುದಬೀರೊ | ನಿನಗೆಲ್ಲು ಸರಿಯಾರೋ 3
--------------
ಗುರುಗೋವಿಂದವಿಠಲರು
ಶೋಭನವೆ ಹರಿ ಶೋಭನವುವೈಭವಾಮಲ ಪಾವನ ಮೂರುತಿಗೆಶೋಭನವೆ ಶೋಭನವು ಪ. ಕುಂಡಲಿ ನಗರದ ರುಕ್ಮಿಣಿ ಸ್ವಯಂವರಗಂಡಕಿ ಕ್ಷೋಣಿಯ ತೀರದಲಿ ಚಂದ್ರಮಂಡಲ ಕ್ಷೋಣಿಜಾತೆ ಪ್ರಭೆದುಂದುಭಿ ಪಾರಿಜಾತ ಎಸೆಯೆ 1 ಕನ್ನಡಿ ಕಲಶವು ಕನಕದುಪ್ಪರಿಗೆ ಸು-ವರ್ಣ ಮಾಣಿಕದ ಗಗನದಲೆಸೆಯೆರನ್ನದ ಕಿಟಕಿ ಉಜ್ವ[ಲ]ಪನ್ನಗಾಸ್ಯಲಿ ಸು-ವರ್ಣ ಮಾಣಿಕದ ತೋರಣವೆ 2 ಪಚ್ಚದ ಪರಿಮಳ ತಳಿರುತೋರಣ ಕಟ್ಟಿನಿ[ಚ್ಚ]ಕಲ್ಯಾಣ ನೀಲವರ್ಣಉ[ಚ್ಚ]ಹವಾಯಿತು ಇರುಳಿನ ಚರಿತ್ರಾಅಚ್ಚುತನೆ ಗಮ್ಮನೆ ಬಾಹುದು 3 ಭೀಷ್ಮಕ ರುಕ್ಮಿಣಿ ಶಿಶುಪಾಲ[ಗೀವೆ]ನೆಂದುಸೇಸೆಯ ತಳೆದು ಧಾರೆನೆರೆಯೆಆ ಸಮಯದಲಿ ದ್ವಾರ[ಕೆ]ಕೃಷ್ಣಗೆಲೇಸಾದ ಓಲೆಯ ಬರೆದಳಾಕೆ 4 ಬರೆದೋಲೆಯ ಕಾಣಿಸಿ ತೆಗೆದೋದಿಪುರೋಹಿತ ಗಗ್ರ್ಯಾಚಾರ್ಯರುನಿರೂಪ ಕೊಡು ನಮಗೆ ನಿಗಮಗೋ- ಚರನು ಗರುಡವಾಹನ ಗಮ್ಮನೆಬಾಹೋನು 5 ಗವರಿಯ ನೋನುವ ಮದುವೆಯ ಸಡಗರಭುವನೇಶ ತಾ ತಡೆದನ್ಯಾಕೆಂದುತಾ ಚಿಂತಿಸಿದಳು ತಾವರೆಗಂಗಳೆಹವಣಿಸಿದಳು ವಿಲಕ್ಷಣಗಾಗಿ6 ಚಂದದಿ ರುಕ್ಮಿಣಿ ಮುತ್ತೈದೆರಿಗೆಲ್ಲಸಂಭ್ರಮದಿಂದ ಬಾಗಿಣ[ಬೀರೆ ಐ]ತಂದು ತಾಳಿಯ ಮಂಗಳಸೂತ್ರ ಮು-ಕುಂದ ಕಟ್ಟಿ ಕಲ್ಯಾಣವಾದ 7 ಅಂಬಿಕೆಗುಡಿಯಲಿ ಚಂದದಿಂದ ಪೂಜೆಯ ಮಾಡಿರಂಗ[ನ] ಕೂಡಿದ ಸಂಭ್ರಮದಿಂದಮಂದಾರಮಾಲೆಯ ಚಂದದಿಂದಲಿ ತಂದುರಂಗನ ಕೊರಳೊಳು ಹಾಕಿದಳು8 ಹಿಂದಿಂದ ಬಹ ರುಕುಮನ ಕಂಡುಭಂಗಿಸಿ ಕರೆದು ಭಂಗವ ಮಾಡಿಹಿಂದಿಂದ ಕರೆದು ಮುಂದಕೆ ಕಟ್ಟಿ ಮು-ಕುಂದ ಹಯವದನ ದ್ವಾರಕೆ ಪೊಕ್ಕ9
--------------
ವಾದಿರಾಜ
ಶ್ರೀ ಕಮಲನೇತುರ | ಪುಣ್ಯಗಾತುರ | ಸಾಕಾರ ಕ್ಷಣ ಮಾತುರ | ನೀ ಕರುಣದಿಂದ | ವಾಕು ಲಾಲಿಸು | ಬೇಕು ವೇಗದಲಿ | ಗೋಕುಲಾಂಬುಧಿ ರಾಕಾಂಬುಜ ಲಾ | ವಕರ ತೊಲಗಿಸಿ | ಸಾಕುವುದೆನ್ನ ನಿ | ಜಕರ ವಿಡಿದೂ ಪ ನಿತ್ಯ ಅಜಾತಾ | ಕುಂಭ ಮಕುಟನೀತಾ | ಮಾವ ಮರ್ದನ ನಿರ್ಭೀತಾ || ದೇವಮರರ ಕಾ | ವ ಭಕ್ತರ | ಜೀವನೆ ವರ | ವೀವನನುದಿನ | ಆವು ಕಾವುತ ಪೋಗಿ | ದಾ ವಿಷ ಬಿಡಿಸದೆ || ಶ್ರೀ ವಲ್ಲಭ ನಿನಗಾವವನೆಣೆ ತ್ರಿ | ಭುವನದೊಳಗತಿ | ಸೇವಕ ಜನರಿಗೆ ಕೈವಲ್ಯವನು ಕೊಡುವಾ 1 ಪೂತನಿ ಪ್ರಾಣಾಪಹಾರಾ | ಪರಮ ಸುಂದರಾ | ಪರಿಹಾರಾ | ಮರಣಜರ ವಿದೂರಾ | ಭೂತಿ ಉಳ್ಳಿಂದ್ರ ಕುಮಾರಾ | ಸೂತ ನೀನಾಗಿ ಭೂತಳದೊಳು | ವ್ರಾತ ಯಮುನೆಯ | ಭ್ರಾತನ್ನ ನಗರಿಯ | ಯಾತನಿಗಟ್ಟಿದೆ | ಪೂತುರೆ ನಿನ್ನ ಮಾ | ಯಾತನಕೇನೆಂಬೆ | ಖ್ಯಾತಿ ಮೂರುತಿ ಬೆನ್ನಾತು ಕಾಯೊ ಪಾರಿ | ಜಾತವ ತಂದ | ಮಿತ ಮಹಿಮ ಜಗ | ತಾತಾ ಬೊಮ್ಮಾದಿ ವಿನುತಾ 2 ತೋಷ ಗೋಪಾಲ ಮಾನಿಸಾ ವೇಷ | ಆ ಪಾರ ರತುನ ಭೂಷಾ | ನಂತಪ್ರಕಾಳಾ | ತಾಪಸಿಗಳ ವಿಲಾಸಾ || ಕೋಪ ಮೊದಲಾದ ತಾಪತ್ರಯಗಳ | ನೀ ಪೋಗಾಡು ಉ | ಡುಪಿ ಸದನನೆ ಪಾಪರಹಿತ ಮಧ್ವಪತಿ ಕರದಿಂ | ದ ಪೂಜೆಗೊಂಡ ಪ್ರತಾಪನೆ ಜ್ಞಾನದ | ದೀಪ ಬೆಳಗಲಿ | ರೂಪವ ತೋರಿಸು ಯದುಪಾ ಎನ್ನ ಸಮೀಪಾ 3
--------------
ವಿಜಯದಾಸ
ಶ್ರೀ ಕಲ್ಯಾಣಿ ಸುಗುಣಮಣಿ ಗಿರಿಜೆ ಪ-ರಾಕೆ ಬಾಗಿಲ ತೆಗೆಯೆಸಾಕು ನೀನಾರು ನಿನ್ನಯ ನಾಮವನು ಪ-ರಾಕು ಮಾಡದೆ ಪೇಳಯ್ಯ 1 ಕಾಮಿನಿಯರೊಳು ಕಟ್ಟಾಣಿ ಪಾರ್ವತಿ ಕೇಳೆಕೌಮಾರಿ ಕಾಣೆ ಜಾಣೆಕೌಮಾರಿಯಾದರೊಳ್ಳಿತು ನಡೆ ಋಷಿಗಳಸ್ತೋಮದ ವನಕಾಗಿ 2 ಕಾಳ ಪನ್ನಗವೇಣಿ ಕಲಕೀರವಾಣಿಕೇಳೆ ಶೂಲಿ ಕಾಣೆಲೆ ಕೋಮಲೆಶೂಲಿ ನೀನಾದರೊಳ್ಳಿತು ನಡೆ ವೈದ್ಯರಜಾಲವಿದ್ದೆಡೆಗಾಗಿ3 ನೀಲಕುಂತಳೆ ನಿಗಮಾಗಮನುತೆ ಕೇಳೆನೀಲಕಂಠನು ಕಾಣೆನೀಲಕಂಠನು ನೀನಾದರೆ ತರುಗಳ ಮೇಲೆಕುಳ್ಳಿರು ಪೋಗಯ್ಯ4 ಸೋನೆ ಕೋಕಿಲಗಾನೆಸ್ಥಾಣು ನಾನೆಲೆ ಜಾಣೆನೀನಾದರೊಳ್ಳಿತು ನಡೆ ವಿಪಿನಸ್ಥಾಣದೊಳಿರು ಪೋಗಯ್ಯ5 ಎಸಳುಗಂಗಳ ಬಾಲೆ ಎಸವ ಮೋಹನಮಾಲೆಪಶುಪತಿ ಕಾಣೆ ಕೋಮಲೆಪಶುಪತಿಯಾದರೊಳ್ಳಿತು ನಡೆಗೋಗಳವಿಸರವ ಕಾವುದಕೆ 6 ಜಾತಿನಾಯಕಿ ಕೇಳೆ ನೂತನವೇತಕೆಭೂತೇಶ ಕಾಣೆ ಜಾಣೆಭೂತೇಶನಾದರೊಳ್ಳಿತು ನಡೆ ಭೂತವ್ರಾತದ ವನಕಾಗಿ7 ಮಿಂಚಿನ ಗೊಂಚಲ ಮುಂಚಿ ಪಳಂಚುವಚಂಚಲನೇತ್ರಯುಗೆಅಂಚಿತಮಾದ ವಿಪಂಚಿಯ ಸ್ವರವ ಪಳಂಚುವಿಂಚರದಬಲೆ 8 ಕರಗಿಸಿ ಕರುವಿಟ್ಟೆರದ ಚಿನ್ನದ ಬೊಂಬೆಸುರುಚಿಕರ ಸುನಿತಂಬೆಪರಿಪೂರ್ಣ ಶರದಿಂದುವದನೆ ಕುಂದರದನೆವರಸುಗುಣಾವಲಂಬೆ 9 ಕುಂಕುಮರೇಖಾಲಂಕೃತೆ ಪರತರೆಪಂಕಜಸಮಪಾಣಿಶಂಕರಿ ಪಾಪಭಯಂಕರಿ ಸರ್ವವಶಂಕರಿ ಶುಭವಾಣಿ10 ಚಂಡಮುಂಡಾಸುರಖಂಡನ ಪಂಡಿತೆಮಂಡಲತ್ರಯನಿಲಯೆಮಂಡಿತ ನವರತ್ನಖಚಿತ ಮಹೋಜ್ವಲಕುಂಡಲೆ ಮಣಿವಲಯೆ 11 ವರದಾನದಿಯ ತೀರವಾಸ ಶ್ರೀ ಕೆಳದಿಯಪುರದ ರಾಮೇಶ ಕಾಣೆಪುರದ ರಾಮೇಶನಾದರೆ ನೆರೆಬಾಯೆಂದುಕರೆದಳು ಗಿರಿಜಾತೆ12 ಗಿರಿಜಾ ಶಂಕರರ ಸಂವಾದದ ಪದಗಳಬರೆದೋದಿ ಕೇಳ್ದರಿಗೆಪರಮ ಸೌಭಾಗ್ಯ ಸಂತಾನಗಳನು ಕೊಟ್ಟುಪೊರೆವನು ರಾಮೇಶ13
--------------
ಕೆಳದಿ ವೆಂಕಣ್ಣ ಕವಿ
ಶ್ರೀ ಗಿರಿಜಾತನಯಾ ಮಹೋದಯಾಶ್ರೀ ಗಿರಿಜಾತನಯಾ ಪಭಾಗವತಪ್ರಿಯ ಭೋಗಿಜನಾಶ್ರಯಬಾಗಿನ'ುಸುವೆನಯ್ಯಾ ಅ.ಪಸುರವರ ಪೂಜಿತ ವರಸಿದ್ದಿಸಂಯುತಶರಣಪಾಲಕನಿರತ 'ಖ್ಯಾತಾ 1ಪಾಶಾಂಕುಶಧರ ದಾಸಸಂಕಟಹರಈಶಕುವರ ಸುಂದರ ಸುಧೀರ 2ಮೋದಕಸ'ತ ಬಾಧಕರ'ತವೇದವಚನ'ನುತ ಪುನೀತ 3ರಕ್ತಮಾಲ್ಯಾಂಬರಾ ಸಕ್ತದೇವಗುರುಭಕ್ತಿದಾನ ಚತುರದ್ವೈಮಾತುರ 4ಏಕವದನ ಗಣಾಧೀಕ 'ಭೂಷಣಭೀಕರ ರಿಪುಹರಣ ಚಿದ್ವನ 5
--------------
ಹೊಸಕೆರೆ ಚಿದಂಬರಯ್ಯನವರು
ಶ್ರೀ ಗುರು ಜಗನ್ನಾಥಾರ್ಯ ಕರುಣಿಸಯ್ಯ ಮೊರೆಹೊಕ್ಕೆ ತ್ವತ್ವದಕೆÉ ಮರಿಯದಲೆ ಪಿಡಿ ಕೈಯ್ಯ ಪ ಪ್ರಹ್ಲಾದನನುಗ್ರವು ಎಲ್ಲ ಕಾಲದಲಿ ನಿ ನ್ನಲ್ಲಿ ಸಂಪೂರ್ಣವಾಗಿರುವದೆಂಬ ಸೊಲ್ಲು ಲಾಲಿಸಿ ನಿನ್ನ ಪಲ್ಲಾವಾಂಘ್ರಿಗೆ ನಮಿಪೆ ಬಲ್ಲಿದನೆ ಹರಿಧ್ಯಾನದಲ್ಲಿ ನಿಲ್ಲಿಸು ಮನವ 1 ಜನಕಾಗ್ರಜಾತಾರ್ಯ | ನರನಿಸಿ ಜನಿಸುತ ಮಂತ್ರಮುನಿ ನಿಲಯ ಮುನಿವರ್ಯ ಶ್ರೀ ರಾಯರ ಗುಣಸ್ತವನ ವಿರಚಿಸುತ ಪ್ರಣತರಿಗೆ ಪಠಿಸುತ್ತ ಮನದಿಚ್ಛೆ ಪಡೆವುದರೆ ಅನುಕೂಲಿಸಿದ ಜ್ಞಾನಿ 2 ಶ್ರೀಶಾಮಸುಂದರನ ದಾಸವರ್ಯರ ಉಪ ದೇಶವನು ಕೊಂಡು ಉಪಾಸನೆಯನು ಲೇಸಾಗಿ ಬಿಡದೆ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಕೋಸಿಗೆ ವಾಸ 3
--------------
ಶಾಮಸುಂದರ ವಿಠಲ
ಶ್ರೀ ಜಗನ್ನಾಥತೀರ್ಥರ ದಿವ್ಯ ಮಹಿಮೆಯನು ರಾಜಿಸುವ ಹೈಮಲಿಪಿಯಲ್ಲಿ ಬರೆಯಲಿ ಬೇಕು ಪ ಸುಜನ ಸುರಭೂಜರಾಗಿಹ ಮಹಾ ಕರ ಸಂಜಾತ ಅ.ಪ ಉದ್ಭವಿಸಿದರು ಗಾಲವರು ಜಗದೊಳೆಂಬಂಶ ವೇದ್ಯವಾಯಿತು ಆಪ್ತಜನವೃಂದಕೆ ಮಧ್ವಮತ ತತ್ವಗಳನುದ್ಧಾರವನೆಗೈದ ದಿಗ್ಧಂತಿಗಳತಿ ಪ್ರಸಿದ್ಧ ಸ್ಥಾನವ ಪಡೆದ 1 ಸಕಲ ಶಾಸ್ತ್ರಾರ್ಥ ನಿರ್ಣಯಗೈವ ಪರಸೂತ್ರ ನಿಕರಗಳಿಗಲವಬೋಧರ ಭಾಷ್ಯವ ಸುಖದಿಂದಲರಿಯಲುಪಕೃತಿಗೈದ ಯತಿಕುಲ ತಿಲಕ ಭಾಷ್ಯಾದೀಪಿಕಾಚಾರ್ಯರೆಂದತಿ ಖ್ಯಾತ 2 ಸರ್ವಗುಣ ಗುಣಪೂರ್ಣ ಸರ್ವತ್ರ ವ್ಯಾಪ್ತ ಹರಿ ಸರ್ವಭಕ್ತ ಪ್ರಸನ್ನನೆಂದರುಹಲು ಉರ್ವನುಗ್ರಹ ಪಡೆದ ಸರ್ವತಂತ್ರ ಸ್ವತಂತ್ರ 3
--------------
ವಿದ್ಯಾಪ್ರಸನ್ನತೀರ್ಥರು
ಶ್ರೀ ಜಯತೀರ್ಥ ಸ್ತೋತ್ರ ಯತಿಕುಲಮುಕುಟ ಶ್ರೀ ಜಯತೀರ್ಥ ಸದ್ಗುಣಗಣ ಭರಿತ ಅತಿಸದ್ಭಕುತಿಲಿ ನುತಿಪಜನರ ಸಂ - ತತ ಪಾಲಿಸುತಲಿ ಪೃಥಿವಿಲಿ ಮೆರೆವ ಪ ಶ್ರೀ ಮಧ್ವಮತ ವಾರಿಧಿನಿಜಸೋಮ ಅಗಣಿತಸನ್ಮಹಿಮ ಆಮಹಾಭಕ್ತಾರ್ತಿಹ ನಿಷ್ಕಾಮ ಈ ಮಹಿಸುರರನು ಪ್ರೇಮದಿ ಪಾಲಿಪ ಕಾಮಿತ ಫಲದ 1 ಮಧ್ವಮುನಿಗಳಗ್ರಂಥಕೆ ವ್ಯಾಖ್ಯಾನ ರಚಿಸಿದ ಸುಙÁ್ಞನ ವಿದ್ಯಾರಣ್ಯನ ಸದ್ವಾದÀದಿ ನಿಧನ ಗೈಸಿದಗುಣಪೂರ್ಣ ಅದ್ವೈತಾಟವಿ ದಗ್ಧಕೃತಾನಲ ಸದ್ವೈಷ್ಣವ ಹೃತ್ಪದ್ಮಸುನಿಲಯ 2 ಲಲಿತಾ ಮಂಗಳವೇಡಿಪÀ ರಘುನಾಥ ವನಿತಾಸಂಜಾತ ಮಳಖೇಡ ಕಾಗಿನಿ ತೀರನಿವಾಸ ಮಾಡಿಹ ಮೌನೀಶನಲವರದೇಶ ವಿಠಲನ ವಲಿಮೆಯಲಿ ಇಳಿಯೊಳು ಬೋಧಿಪ ಅಲವ ಬೋಧಾಪ್ತ 3
--------------
ವರದೇಶವಿಠಲ