ಒಟ್ಟು 905 ಕಡೆಗಳಲ್ಲಿ , 62 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಗೆಯು ಬರುತಿದೆ - ಎನಗೆನಗೆಯು ಬರುತಿದೆ ಪ.ಜಗದೊಳಿದ್ದ ಮನುಜರೆಲ್ಲಹಗರಣಮಾಡುವುದ ನೋಡಿಅಪಪರಸತಿಯರ ಒಲುಮೆಗೊಲಿದುಹರುಷದಿಂದಅವರ ಬೆರೆದುಹರಿವ ನೀರಿನೊಳಗೆ ಮುಳುಗಿಬೆರೆಳನೆಣಿಸುವರ ಕಂಡು 1ಪತಿಯ ಸೇವೆ ಬಿಟ್ಟು,ಪರಸತಿಯ ಕೂಡೆ ಸರಸವಾಡಿಸತತ ಮೈಯ ತೊಳೆದು ಹಲವುವ್ರತವ ಮಾಡುವರ ಕಂಡು 2ಹೀನಗುಣವ ಮನದೊಳಿಟ್ಟುತಾನು ವಿಷದ ಪುಂಜನಾಗಿಮಾನಿ ಪುರಂದರವಿಠಲನಧ್ಯಾನ ಮಾಡುವವರ ಕಂಡು 3
--------------
ಪುರಂದರದಾಸರು
ನಡುಮನೆಯೊಳಗೊಂದು ನಾಲ್ಕು ತೆಂಗಿನಮರ -ಹೇ ಗಿಣಿ - ಹೇ ಗಿಣಿಯೇ |ಕಡೆಮೊದಲಿಲ್ಲದೆ ಅದುಕಾತು ಹಣ್ಣಾಯ್ತ - ಹೇಗಿಣಿಪ.ಕಾಲಿಲ್ಲದವ ಹತ್ತಿ ಕೈಯಿಲ್ಲದವ ಕೊಯ್ದ - ಹೇ ಗಿಣಿತಲೆಯೆಲ್ಲದವ ಬಂದು ಹೊತ್ತು ಕೊಂಡುಹೋದ - ಹೇ ಗಿಣಿ 1ಕಣ್ಣಿಲ್ಲದವ ನೋಡಿ ಕೆಂಪಿನ ಹಣ್ಣೆಂದ - ಹೇ ಗಿಣಿಬಾಯಿಲ್ಲದವ ನುಂಗಿ ಬಸಿರೊಳಗಿಂಬಿಟ್ಟ - ಹೇ ಗಿಣಿ 2ಬಲೆಯ ಹಾಕಿದರು ಬಲೆಯದಾಟುವದಯ್ಯ - ಹೇ ಗಿಣಿಚೆಲುವ ಪುರಂದರವಿಠಲನೇ ಬಲ್ಲ - ಹೇ ಗಿಣಿ 3
--------------
ಪುರಂದರದಾಸರು
ನಂಬದಿರು ಈ ದೇಹ ನಿತ್ಯವಲ್ಲ |ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ |ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು |ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ |ಗತಿಶೂನ್ಯನಾಗಿ ಕೆಡಬೇಡ ಮನವೆ 2ಪರರ ನಿಂದಿಸದೆ ಪರವಧಗಳನು ಬಯಸದೆ |ಗುರು - ವಿಪ್ರಸೇವೆಯನುಮಾಡು ಬಿಡದೆ ||ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು |ಪರಮಪುರಂದರವಿಠಲನೊಲಿದು ಪಾಲಿಸುವ3
--------------
ಪುರಂದರದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ನಂಬಿ ಕೆಟ್ಟವರುಂಟೆ - ಕೃಷ್ಣಯ್ಯನ |ನಂಬಲಾರದೆ ಕೆಟ್ಟರು ಪ.ಅಂಬುಜನಾಭನ ಪಾದವ ನೆನೆದರೆ |ಇಂಬುಗೊಡದ ದುಃಖ ಹರಿಸುವ ಶ್ರೀ ಕೃಷ್ಣ ಅಪಬಲಿಯ ಪಾತಾಳಕಿಳುಹಿ - ಭಕ್ತನ ಬಾ - |ಗಿಲವ ಕಾಲುವೆ ನಾನೆಂದ ||ಛಲದೊಳು ಅಸುರರ ಶಿರಗಳ ತರಿದು ತಾ |ನೊಲಿದು ವಿಭೀಷಣಗೆ ಪಟ್ಟಗಟ್ಟಿದ ಈ ಕೃಷ್ಣ 1ತರಳ ಪ್ರಹ್ಮಾದಗೊಲಿದು - ಹಿರಣ್ಯಕನ ಉ - |ಗುರಿನಿಂದಲೆ ಸೀಳಿದ |ಕರಿರಾಜಗೊಲಿದುನೆಗಳು ನುಂಗುತಿರಲಾಗ ||ಪರಿಹರಿಸಿದ ಜಲದೊಳು ಪೊಕ್ಕು ಶ್ರೀ ಕೃಷ್ಣ 2ಪಾಂಡವರಿಗೆ ಒಲಿದು - ಕೌರವರನು |ತುಂಡು ಛಿದ್ರಮಾಡಿದೆ ||ಗಂಡರೈವರ ಮುಂದೆ ದ್ರೌಪದಿ ಕೂಗಲು |ಕಂಡು ಕರುಣದಿ ಕಾಯ್ದ ಪುರಂದರವಿಠಲನ 3
--------------
ಪುರಂದರದಾಸರು
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು
ನಂಬೊ ನಂಬೊ ಹರಿಪದವ ನಂಬೊ ಪ.ಮಾತುಳನಚಂದನಪ್ರೀತಿಲಿ ಕೊಟ್ಟ ಮನಸೋತವಳಂಗಪುನೀತಮಾಡಿದನಂಘ್ರಿಯ1ಅಜಾಮಿಳ ಸಹಜ ತನುಜನ ಕರೆಯಲಾಗಿನಿಜಭಟರಟ್ಟಿದ ಸುಜನೇಶನಂಘ್ರಿಯ 2ನಂಬಿದರವಗುಣಕುಂದನೋಡದೆಹೊರೆವತಂದೆ ಪ್ರಸನ್ನವೆಂಕಟೇಶನಂಘ್ರಿಯ 3
--------------
ಪ್ರಸನ್ನವೆಂಕಟದಾಸರು
ನಮ್ಮಪ್ಪ ಸುಮ್ಮಗಿರೊ ಗೋಪಾಲಾ-|ಗುಮ್ಮನು ಎಳೆದೊಯ್ವನು ಪಎಡದ ಕೈಯಲಿ ಕಪಾಲ-ಗೋಪಾಲಾ-|ಬಲದ ಕೈಯಲಿ ತ್ರಿಶೂಲ ||ಚಳಿಬೆಟ್ಟದ ಹೆಣ್ಣ ಮೈಯೊಳಿಟ್ಟವನಂತೆ |ಅಲೆದು ಸ್ಮಶಾನವ ತಿರುಗುವನಂತೆ 1ಮೂರು ಕಣ್ಣಿನವನೊ-ಗೋಪಾಲಾ-|ಐದು ತಲೆಗಳವನೊ ||ದಾರಿಯ ಪೋಗುವ ನಾರಿಯನೆಳತಂದು |ಸೇರಿಸಿ ಶಿರದಲ್ಲಿ ಹೊತ್ತನೊ 2ಚಂದ್ರನರ್ಧವ ಪಿಡಿದು-ತಲೆಯ ಮೇಲೆ-ಚೆಂದಕಿಟ್ಟಿರುವನಂತೆ ||ಅಂದಗಾರನಂತೆ [ಅನಲನೇತ್ರನಂತೆ] |ಮುಂದಿಪ್ಪ ಹುಡುಗನ ಕೊಂದು ತಿಂದವನಂತೆ 3ನಿನ್ನ ಮಗನ ಮಗನೊ-ಗೋಪಾಲಾ-|ಪನ್ನಗಭೂಷಣನೋ ||ಧನ್ಯನಾಗಿ ಶ್ರೀರಾಮ ನಾಮವನು |ಚೆನ್ನಾಗಿ ಚಿಂತಿಪನೊ 4ಕರಿಯಜಿನ ಪೊತ್ತವನೊ ಗೋಪಾಲಾ-|ನೆರೆದ ಭೂತ ತಂದವನೊ ||ಶರಧಿಶಯನ ನಿನ್ನಚರಣಪಂಕಜಭೃಂಗ|ಪುರಂದರವಿಠಲ ಪನ್ನಂಗ ಶಯನನೆ 5
--------------
ಪುರಂದರದಾಸರು
ನರನಾದ ಮೇಲೆ |ಹರಿನಾಮ ಜಿಹ್ವೆಯೊಳಿರಬೇಕು ಪ.ಭೂತದಯಾಪರನಾಗಿರಬೇಕು |ಪಾತಕವೆಲ್ಲವ ಕಳೆಯಲು ಬೇಕು |ಮಾತು - ಮಾತಿಗೂಹರಿಎನಬೇಕು1ವೇದ - ಶಾಸ್ತ್ರಗಳನೋದಲು ಬೇಕು |ಭೇದಾಭೇದವ ತಿಳಿಯಲು ಬೇಕು |ಸಾಧು - ಸಜ್ಜನರ ಸಂಗದೊಳಿರಬೇಕು 2ತಂದೆ - ತಾಯಿಗಳ ಸೇವೆಯು ಬೇಕು |ಬಂದುದನುಂಡು ಸುಖಿಸಲು ಬೇಕು |ತಂದೆ ಪುರಂದರವಿಠಲನ ದಯೆಬೇಕು 3
--------------
ಪುರಂದರದಾಸರು
ನರಸಿಂಹ ಮಂತ್ರ ಒಂದೇ ಸಾಕು -ಮಹಾ - |ದುರಿತಕೋಟೆಗಳ ಸಂಹರಿಸಿ ಭಾಗ್ಯವನೀವ ಪಹಸುಳೆ ಪ್ರಹ್ಲಾದನ ತಲೆಗಾಯ್ದುದೀ ಮಂತ್ರ |ಅಸುರನೊಡಲ ಬಗೆದ ದಿವ್ಯವiಂತ್ರ ||ವಸುಧೆಯೊಳು ದಾನವರ ಅಸುವ ಹೀರಿದ ಮಂತ್ರ |ಪಶುಪತಿಗೆ ಪ್ರಿಯವಾದ ಮೂಲ ಮಂತ್ರ 1ದಿಟ್ಟ ಧ್ರುವರಾಯಗೆ ಪಟ್ಟಗಟ್ಟಿದ ಮಂತ್ರ |ಶಿಷ್ಟ ವಿಭೀಷಣನ ಪೊರೆದ ಮಂತ್ರ ||ತುಟ್ಟತುದಿಯೊಳಜಾಮಿಳನ ಸಲಹಿದ ಮಂತ್ರ |ಮುಟ್ಟಭಜಿಪರಿಗಿದು ಮೋಕ್ಷಮಂತ್ರ 2ಹಿಂಡು ಭೂತವ ಕಡಿದು ತುಂಡು ಮಾಡುವ ಮಂತ್ರ |ಕೊಂಡಾಡೆ ಲೋಕಕುದ್ದಂಡ ಮಂತ್ರ ||ಗಂಡುಗಲಿ ಪ್ರಚಂಡಹಿಂಡು ದಾನವರ |ಗಂಡ ಪುರಂದರವಿಠಲನ ಮಹಾ ಮಂತ್ರ3
--------------
ಪುರಂದರದಾಸರು
ನಲಿದಾಡೆ ಎನ್ನ ನಾಲಿಗೆ ಮೇಲೆ - ಸರಸ್ವತಿ ದೇವಿ ಪಕುಣಿದಾಡೆ ಎನ್ನ ನಾಲಗೆ ಮೇಲೆ ಅ.ಪಸಲಿಲಜೋದ್ಬವನವದನನಿಲಯಳೇಇಳೆಯೊಳಪ್ರತಿಮ ಗುಣಾಂಬುಧಿ ತಾಯೆ ಅ.ಪಘಿಲುಘಿಲು ಘಿಲ್ಲು ಗೆಜ್ಜೆಯ ನಾದ | ಭಳಿ ಭಳಿರೆಂಬಂದುಗೆ |ಹೊಳೆವ ಬೆರಳುಂಗುರ ಕಿಣಿಕಿಣಿನಾದ | ಎಳೆಯ ಮಾವಿನ |ತಳಿರ ಪೋಲುವ ದಿವ್ಯಪಾದ| ಚೆಲ್ವಪೆಂಡೆಯ ಭೇದ ||ನಲಿವಯುಗಳಜಂಘೆ| ಜಲಗುಳ್ಳೆಯಂತೆಜಾನು|ಥಳಥಳಿಸುವ ತೊಡೆ ಹೊಳೆವ ಸುಗುಣಿಯೆ 1ದಿನಕರಕೋಟಿ ತೇಜದಿ ಹೊಳೆವ ಅನುಪಮವಾದ |ಕನಕವಸನದಿಂದಲಿ ಎಸೆವ | ಘನವಾದ ಜಘನಗ-ಗನದಂದದಿ ಕಟಿಯಲ್ಲಿ ಮೆರೆವ | ಮಣಿದಾಮವಿಭವ ||ತನು ಜಠರವುಜಾಹ್ನವಿಸುಳಿನಾಭಿಯು |ಘನಸ್ತನಯುಗಳ ಚಂದನಲೇಪಿತಳೆ 2ದುಂಡಮುತ್ತಿನ ಕೊರಳ ಹಾರ | ಉದ್ದಂಡಮಣಿ ಪ್ರ-|ಚಂಡ ಮಿಣಿಮಿಣಿಸುವ ಹೊನ್ನಿನ ಹಾರ | ಕರಿರಾಜಪೋತನ |ಸೊಂಡಿಲಿನಂತೆ ಭುಜದಭಾರನಡೆವ ಒಯ್ಯಾರ ||ಮಂಡಿತವಾದ ಕಂಕಣ ತೋಳ್ಬಳೆಗಳು |ದುಂಡು ಹವಳ ಕೈಕಟ್ಟುಳ್ಳವಳೆ 3ನಸುನಗು ಮುಖವು ನಾಸಾಭರಣ | ಎಸೆವಕಪೋಲ|ಹೊಸಕುಂಡಲಚಳಿತುಂಬುಳ್ಳ ಶ್ರವಣ | ಬಿಸಜದಳದಂತೆ |ಎಸೆವ ಕರ್ಣಾಂತವಾದ ನಯನ | ತಿಲಕದ ಹಸನ ||ಶಶಿಸೂರ್ಯರ ಆಭರಣ ಸುಶೋಭಿತೆ |ಕುಸುಮಮುಡಿದ ಮೂರ್ಧಜವುಳ್ಳವಳೇ4ಸಿಂಗಾರದ ಜಡೆಬಂಗಾರ | ಹೊಂಗೇದಗೆ ಮುಡಿದ |ಬಂಗಾರದ ಹೆರಳಿನ ರಾಗುಟಿವರ | ಭೃಂಗಾದ ಸ್ವರ |ಹಿಂಗದೆ ಭಕ್ತರ ಸಲಹುವಭಾರ| ಕಂಗಳ ಮನೋಹರ ||ರಂಗಪುರಂದರವಿಟ್ಠಲರಾಯನ |ಮಂಗಳ ಮೂರ್ತಿಯ ತೋರೆ ಶುಭಾಂಗಿ 5
--------------
ಪುರಂದರದಾಸರು
ನಳಿನಜಾಂಡತಲೆಯದೂಗೆ |ಇಳೆಯು ನಲಿದು ಮೋಹಿಸುತಿರಲು ||ಕೊಳಲ ಪಿಡಿದು ಬಾರಿಸಿದನು |ಚೆಲುವ ಕೃಷ್ಣರಾಯನು ಪಪೊಳೆವ ಪೊಂಬಟ್ಟೆಯ ದಟ್ಟಿ |ಅಳವಡಿಸಿ ನೆಗಹಿನಿಂದ ||ಹಲವು ರನ್ನದುಂಗುರವಿಟ್ಟ |ಚೆಲುವ ಬೆರಳ ನಟಿಸುತ |||ಲಲಿತವಾಮಭಾಗತೋಳ-|ಲೊಲಿದು ಓರೆನೋಟದಿಂದ ||ಬಲದಪಾದಎಡಕೆ ಚಾಚೆ |ನಳಿನಪದಗಳೊಪ್ಪುತಿರಲು 1ಸೆಳನಡುವಿನೊಳಗೆ ಕತ್ತರಿ |ಕಳೆಯ ಸಂಚಿ, ಗಜುಗು ಚೀಲ ||ಬಿಳಿಯ ಮಣಿಯು ಗುಳ್ಳೆಗಳಿರಲು |ಮಲಯಜಾನು ಲೇಪನ ||ಜಲಜನೇತ್ರ ಕೌಸ್ತುಬಾಧಿ-|ಗಳದಿ ಸ್ವರಗಳೊಪ್ಪುತಿರಲು ||ಲಲಿತವೇಣುಕಲ್ಪನೆಯಲಿ ಗೋ-|ವಳರೆಲ್ಲರು ಕುಣಿಯಲು 2ಮಾರವಿ ದೇಸಿ ಗುರ್ಜರಿ ಭೈರವಿ |ಗೌರಿನಾಟಿಸಾವೇರಿ ಆಹೇರಿ ||ಪೂರವಿ ಕಾಂಬೋದಿ ಪಾಡಿ ದೇಶಾಕ್ಷಿ ಶಂ-|ಶಕರಾಭರಣ ರಾಗದಿ ||ಪೂರವಿ ಕಲ್ಯಾಣಿ ವಸಂತ ತೋಡಿ |ವರಾಳಿ ಗುಂಡಕ್ರಿ ಸಾರಂಗ ಸಾಳಗ ||---------------------ಸೋರಟ ಭೂಪಾಳಿ ಶ್ರೀ ರಾಗದಿಂದಲಿ 3ಹರುಷದಿ ಬಾರಿಸುವ ರವಕೆ |ಪುರದ ಸ್ತ್ರೀ ಜನರು ಎಲ್ಲ ||ಮರೆದು ಮಕ್ಕಳ ಮನೆಯ ಕೆಲಸ |ಮರೆದು ಹರಿಯ ಬಳಸಲು ||ಕರಿಯು ಮೃಗವುಕೇಸರಿಶರಭ|ಹರಿಣ ನವಿಲುಉರಗಮೋಹಿಸಿ ||ನೆರೆದು ಮರೆದು ಜಾತಿವೈರವ |ಸ್ವರವ ಕೇಳುತಿರಲು 4ಕರಗೆ ಗಿರಿಯ ಕಲ್ಲು ತರುಗ-|ಳೆರಗಿ ಪಕ್ಷಿ ತತಿಗಳಿರಲು ||ಸುರರುಸುಮನ ಸುರಿಯುತಿರಲು |ಧರೆಯು ಮುದದಿ ಕುಣಿಯುತಿರಲು ||ಶರಧಿಉಕ್ಕಿಸರಿತುಸೊಕ್ಕಿ |ಪುರರಿಪುವಿಧಿಪೊಗಳುತಿರಲು ||ವಿರಚಿಸಿದ ಪುರಂದರವಿಠಲ |ಮುರಲಿಗಾನ ಮಾಡಿದ 5
--------------
ಪುರಂದರದಾಸರು
ನಾ ನಿನಗೇನ ಬೇಡುವುದಿಲ್ಲ - ಎನ್ನಹೃದಯಕಮಲದೊಳು ನೆಲಸಿರು ಹರಿಯೆ ಪಶಿರ ನಿನ್ನ ಚರಣಕೆರಗಲಿ -ಚಕ್ಷುಎರಕದಿಂದಲಿ ನಿನ್ನ ನೋಡಲಿ ಹರಿಯೆ ||ನಿರುಮಾಲ್ಯ ನಾಸ ಘ್ರಾಣಿಸಲಿ -ಎನ್ನಕರಣ ಗೀತಂಗಳ ಕೇಳಲಿ ಹರಿಯೆ 1ನಾಲಗೆ ನಿನ್ನ ಕೊಂಡಾಡಲಿ ಎನ್ನತೋಳು ಕರಂಗಳ ಮುಗಿಯಲಿ ಹರಿಯೆ ||ಕಾಲು ತೀರ್ಥಯಾತ್ರೆಗೆ ಪೋಗಲಿ -ಮನಓಲೈಸಿ ನಿನ್ನನು ಸ್ಮರಿಸಲಿ ಹರಿಯೆ 2ಚಿತ್ತ ನಿನ್ನೊಳು ಮುಳುಗಾಡಲಿ -ನಿನ್ನಭಕ್ತ ಜನರ ಸಂಗ ದೊರಕಲಿ ಹರಿಯೆ ||ತತ್ತ್ವಯೋಗಾಭ್ಯಾಸಕ್ಕಾಗಲಿ -ಉಕ್ಕಿಸತ್ಯ ಮೂರುತಿ ನಮ್ಮಪುರಂದರವಿಠಲ3
--------------
ಪುರಂದರದಾಸರು
ನಾ ನಿನ್ನ ಧ್ಯಾನದೊಳಿರಲು - ಇಂಥಹೀನ ಮಾನವರಿಂದೇನಾಹೋದು ಹರಿಯೆ ಪ.ಮಚ್ಚರಿಸಿದರೇನ ಮಾಡಲಾಪರೊ ಎನ್ನಅಚ್ಯುತ ನಿನ್ನದೊಂದು ದಯವಿರಲು ||ವಾಚ್ಛಲ್ಯ ಬಿಡದಿರು ನಿನ್ನ ನಂಬಿದ ಮೇಲೆಕಿಚ್ಚಿಗೆ ಗೊರಲೆ ಮುತ್ತುವುದೆ ಕೇಳೆಲೊ ರಂಗ 1ದಾಳಿಯಲಿ ತೇಜಿ ವೈಹಾಳಿಯಲಿ ನಡೆಯಲುಧೂಳು ರವಿಗೆ ತಾನು ಮುಸುಕುವುದೇ ||ತಾಳಿದವರಿಗೆ ವಿರುದ್ಧ ಲೋಕದೊಳುಂಟೆ ?ಗಾಳಿಗೆ ಗಿರಿ ನಡುಗುವುದೆ ಕೇಳೆಲೊ ರಂಗ 2ಕನ್ನಡಿಯೊಳಗಿನ ಗಂಟ ಕಂಡು ಕಳ್ಳಕನ್ನವಿಕ್ಕಲು ವಶವಾಗುವುದೇ ?ನಿನ್ನ ಧ್ಯಾನವ ಮಾಡೆ ಪುರಂದರವಿಠಲನೆಚಿನ್ನಕ್ಕೆ ಪುಟವಿಕ್ಕಿದಂತೆ ಕೇಳೆಲೊ ರಂಗ 3
--------------
ಪುರಂದರದಾಸರು
ನಾ ಮಾಡಿದಕರ್ಮಬಲವಂತವಾದರೆ |ನೀ ಮಾಡುವುದೇನೊ ದೇವಾ ಪಸಾಮಾನ್ಯವಲ್ಲವಿದು ಬ್ರಹ್ಮಬರೆದ ಬರೆಹ |ನೇಮದಿಂದಲಿ ಎನ್ನ ಹಣೆಯಲ್ಲಿ ಬರೆದುದಕೆ ಅ.ಪಅತಿಥಿಗಳಿಗೆ ಅನ್ನ ಕೊಟ್ಟವನಲ್ಲ -ಪರ -|ಸತಿಯರ ಸಂಗವ ಗಳಿಗೆ ಬಿಟ್ಟವನಲ್ಲ ||ಮತಿಹೀನನಾಗಿ ಮರುಳಾಗಿದ್ದೆನೋ ದೇವ |ಗತಿಯಾವುದೈ ಎನಗೆ ಗರುಡವಾಹನ ಕೃಷ್ಣ1ಅನ್ನಪಾನಂಗಳಿಗೆ ಅಗ್ರಗಣ್ಯನು ಆಗಿ |ಸ್ನಾನ ಸಂಧ್ಯಾದಿ ಕರ್ಮಂಗಳನೀಗಿ||ದಾನವಾಂತಕ ನಿನ್ನ ಧ್ಯಾನವ ಮಾಡದೆ |ಶ್ವಾನನಂತೆ ಮನೆಮನೆ ತಿರುಗುತಲಿದ್ದೆ 2ಇನ್ನಾದರು ನಿನ್ನ ದಾಸ ಸಂಗವನಿತ್ತು |ಮನ್ನಿಸಿ ದಯಮಾಡೊ ಮನ್ಮಥಜನಕ ||ಅನ್ಯರೊಬ್ಬರ ಕಾಣೆ ಆದರಿಸುವರಿಲ್ಲ |ಪನ್ನಂಗಶಯನ ಶ್ರೀಪುರಂದರವಿಠಲ 3
--------------
ಪುರಂದರದಾಸರು