ಒಟ್ಟು 7812 ಕಡೆಗಳಲ್ಲಿ , 132 ದಾಸರು , 3804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದು ನೋಡುವೆ ಎನ್ನ ಗುರುವಿನಾ | ನಿಂದು ನಂದಿಗಮನನಾ ಎಂದೆಂದಿಗೆ ಪೊಂದಿದವರಿಗಾ | ಇಂದು ಮೌಳಿಯ ಪ ತ್ರಿಗುಣ ರೂಪನ ತ್ರಿಭುವನೇಶನ | ಜಗತಿಧರ ವಿಭೂಷನ || ನಗವತಿ ಸುತಿಪತಿಯ ರುದ್ರನ 1 ತಪೋಧನೇಶನ ತಪ ಪ್ರತಾಪನ | ತಪನ ಶಶಿ ಅಗ್ನಿನೇತ್ರನ | ಕುಪಿತ ರಹಿತ ಕುಜನ ಮಥನನ | ಅಪರಮಿತ ಗುಣ ವನದಿ ಶಿವನ 2 ವಿಮಲಗಾತ್ರನ ವಿಶ್ವಪಾಲನ | ರಮೆಯರಸ ಪದಿಧಾರನ || ಸುಜನ ರನ್ನನ | ನಮಿಸುವರ ಮನೋವಾಸ ಈಶನ 3 ಅಂಧಹರಣನ ಅರ್ಧವೇಷನ | ಮಂದಮತಿ ವಿದುರನ | ಬಂಧು ಬಳಗನ ಬಹು ಉದ್ದಂಡನ | ಅಂಧ ಏಕೇಶವರ್ನ ವದನನ 4 ತತುವನಾಥನ ತುಂಗ ವರದನ | ಸತತ ವೈರಾಗ್ಯ ಭಾಗ್ಯನ || ಪತಿತ ಪಾವನ ವಿಜಯ ವಿಠ್ಠಲನ್ನ | ಪತಿ ವಿಶ್ವೇಶನ 5
--------------
ವಿಜಯದಾಸ
ಎಂದೆಂದೆನ್ನ ಮನದಿಂದ ಅಗಲದಿರೋನಂದ ನಂದನನೆ ಆನಂದ ಮೂರುತಿಯೆ ಪ ಬಹುಕಾಲ ನಿನ್ನ ಶ್ರವಣವೆಂಬ ಹೊನ್ನೋಲೆಯಬಹುಮಾನದಿಂದೆನ್ನ ಕಿವಿಯೊಳಿಟ್ಟುಮಹಿತ ಮಂಗಳಸೂತ್ರವೆಂಬೊ ದಾಸ್ಯವನ್ನು ಮಹದಾನಂದದಿ ಎನ್ನ ಕೊರಳೊಳ್ ಕಟ್ಟಿದೆಯಾಗಿ1 ಸುಲಲಿತ ಸೈರಣೆಯೆಂಬ ಭೂಷಣವಿತ್ತುಸಲಹಿದೆ ಬಹು ಪ್ರೀತಿ ಸಖಿಯೆಂದೆನ್ನಬೆಲೆಯಿಲ್ಲದ ಸುಜ್ಞಾನ ನಿಧಿಯನಿತ್ತುಜಲಜಾಕ್ಷ ಎನ್ನನು ಒಲಿದು ಆಳಿದೆಯಾಗಿ 2 ಎಲ್ಲಿ ನೀ ನಿಲಿಸಿದರೆನಗೇನು ಭಯವಿಲ್ಲಬಲ್ಲೆನೊ ವಿಶ್ವವ್ಯಾಪಕನೆಂಬುದಸಲ್ಲದೊ ಈ ಮುನಿಸೆನ್ನೊಳು ಸಿರಿಕೃಷ್ಣಒಲ್ಲದಿದ್ದರೆ ನಿನ್ನ ಸೆರಗಪಿಡಿದೆಳೆವೆ 3
--------------
ವ್ಯಾಸರಾಯರು
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎದ್ದು ನಿಂತ ಖಳರ ಕೃತಾಂತಹೊದ್ದಿದವರ ಪೊರೆವ ಧವಳಗಂಗೆ ಹನುಮಂತಪ. ಕಪಟ ದಶಮುಖನ ಮದಭಂಜನ ಮಾಳ್ಪೆನೆಂದೆದ್ದು ನಿಂತಸಂಜೀವನವ ತಂದು ಕಪಿಗಳ ಕಾಯ್ದಆಂಜನೆಯ ತನಯ ತಾನೆದ್ದು ನಿಂತ 1 ಗುದ್ದ್ದಿ ರಾವಣನ ಧರೆಯೊಳು ಕೆಡಹಿ ಅರಿಕಟಕಮರ್ದನ ಮಹಾಮಹಿಮನೆದ್ದು ನಿಂತಯುದ್ಧದಲಿ ರಘುಪತಿಯ ಹೊತ್ತು ಭಕುತಿಯ ತೋರ್ದಶುದ್ಧಸ್ವಭಾವ ತಾನೆದ್ದು ನಿಂತ2 ರಾಗಗಳ ಮೇಳೈಸಿ ಹಯವದನನೊಲಿಸಿಯೋಗಿಗಳನುದ್ಧರಿಸಲೆಂದೆದ್ದು ನಿಂತಈಗ ಧರೆಯೊಳು ಸುಜನರ ಮನೋಭೀಷ್ಟಗಳವೇಗದಲಿ ಕೊಡುವೆನೆಂದೆದ್ದು ನಿಂತ3
--------------
ವಾದಿರಾಜ
ಎದ್ದು ಬರುತಾರೆ ನೋಡೆ ತಾ - ವೆದ್ದು ಬರುತಾರೆ ನೋಡೆ ಪ ಮುದ್ದು ಬೃಂದಾವನ ಮಧ್ಯದೊಳಗಿದ್ದು ತಿದ್ದಿ ಹಚ್ಚಿದ ನಾಮ - ಮುದ್ರೆಗಳೊಪ್ಪುತೀಗ ಅ.ಪ ಗಳದೊಳು ಶ್ರೀ ತುಳಸಿ ನಳಿನಾಕ್ಷಿ ಮಾಲೆಯು ಚಲುವ ಮುಖದೊಳು ಪೊಳೆವೊ ದಂತಗಳಿಂದ 1 ಹೃದಯ ಸದನದಲ್ಲಿ ಪದುಮನಾಭನ ಭಜಿಸಿ ನಿತ್ಯ ಸದಮಲ ರೂಪತಾಳಿ 2 ದಾತ ಗುರು ಜಗನ್ನಾಥವಿಠಲನ್ನ ಪ್ರೀತಿಯ ಬಡಿಸುತ ದೂತರ ಪೊರೆಯುತ 3
--------------
ಗುರುಜಗನ್ನಾಥದಾಸರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎದ್ದೆವು ನಾವಿನ್ನು ಸದ್ಗುರು ಕೃಪೆಯಿಂದ ಧ್ರುವ ಭವ ನಿದ್ರಿಯಗಳೆದು 1 ಕಾಯ ಮಂದಿರದೊಳು | ಮಾಯ ಮುಸುಕು ತೆಗೆದು 2 ಚೆನ್ನಾಗಿ ಮಲಗಿದ್ದ | ಜನ್ಮ ಹಾಸಿಗೆ ಬಿಟ್ಟು 3 ತನ್ನ ತಾ ತಿಳಿವ್ಹಾಂಗೆ ಕಣ್ದೆರೆದಿನ್ನು 4 ಎದ್ದಿದ್ದರೆ ನೀವಿನ್ನು ಶುದ್ಧ ಬದ್ಧರಾಗಿ 5 ಮನದಲ್ಲಿ ಇನಕೋಟಿ ತೇಜನ ಕಾಣುಹಾಂಗೆ 6 ದೀನ ಮಹಿಪತಿ ಸ್ವಾಮಿ ಮನೋಹರ ಮಾಡೊಹಾಂಗೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನಗ ನೀ ಕಾಯಲಾಗದೇ|ಆಗದೇ ದೇವಾಪ ದಶ ಜನುಮ ವಂಗೀಕರಿಸಿ ಭಕ್ತ ಅಂಬ| ರೀಷನ ಶಾಪ ಹರಿದೆ ದೇವಾ 1 ಗಣಿಕಾ ಅಜಮಿಳ ಶಬರಿ ಮುಖ್ಯರಾಗಿಹಾ| ಗಣಿತರನು ಪೊರೆದೆ ದೇವಾ 2 ಗುರುವರ ಮಹಿಪತಿ ಸುತ ಪ್ರಭು ಯನ್ನನು| ದ್ದರಿಸುವದನರಿದ ಅರಿದೇ ದೇವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗಿನ್ಯಾತರ ಹಂಗೇನು | ಘನ ಗುರು ತಾನಾದ ಶ್ರಯಧೇನು ಪ ಸುರಲೋಕ ಪದವಿಯ ಸುಖದಿಚ್ಛೆಯಾತಕ | ಪರಗತಿ ದಾಯಕ ದೊರಕಿರಲಿಕ್ಕೆ 1 ರಿದ್ದಿ ಶಿದ್ದಿಗಳೆಂಬ ಮಾತಿನ ಗೊಡವಿಲ್ಲಾ | ಪಾದ ಕಮಲಾ 2 ಹಂಬಲಿಸೆನು ಯೋಗ ಭೋಗ ಮುಕ್ತಿಯ ನಾಲಕು | ಅಂಬುಜಾಕ್ಷನ ಸೇವೆಲಿರುವುದೇ ಸಾಕು 3 ತಂದೆ ಮಹೀಪತಿ ಪ್ರಭು ದಯದಿಂದಲಿ | ಕಂದಗ ವಿಶ್ರಾಂತಿ ಇದಿರಿಟ್ಟಿರಲಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗೆ ಕಾರಣವೇನು ಪಾಪಕ್ಕೆ ುನ್ನುನಿನಗೆ ಕಾರಣವೆಂಬ ಮಾತಿನ್ನದೇಕೆ ಪಎನ್ನ ಸ್ಟೃಯ ಮಾಡ ಹೇಳಿದೆನೆ ಮತ್ತೆಅನ್ನವನಿತ್ತುಣ್ಣ ಕಲಿಸೆಂದೆನೆಮನ್ಮಥ ನೆಲೆಯಾಗಬೇಕೆಂದೆನೆ ಬೇಗಕನ್ನೆಯೊಬ್ಬಳ ಮುಂದೆ ನಿಲಿಸೆಂದೆನೆ ಸ್ವಾಮಿ 1ಜಾತಾದಿ ಷೋಡಶ ಕರ್ಮಗಳ ನಿತ್ಯಪ್ರೀತಿುಂದಲಿ ಮಾಡಿ ಸ್ವರ್ಗಗಳವೋತು ಪಾಪಗಳಿಂದ ನರಕಗಳ ಹೊಂದಿಯಾತನೆಗೊಳಿಪಂತಾಗೆಂದೆನೆ ವಿಧಿಗಳ 2ಮಡದಿ ಮಕ್ಕಳು ಮನೆವಾರ್ತೆಯೆಂಬ ಬಲುತೊಡಕಿನೊಳನ್ಯರೆನ್ನವರೆಂತೆಂಬಬಡಿಶಕ್ಕೆ ಸಿಲುಕಿಯೊದ್ದಾಡಿಕೊಂಬ ುಂಥಹೆಡಗುಡಿಯನು ಕಟ್ಟಿ ಕೊಲ್ಲೆಂದೆನೆ ಸ್ವಾಮಿ 3ಆಡಿಸಿದಂತೆ ನೀನಾಡುವೆನು ುೀಗನೋಡಿದರಿಲ್ಲ ಸ್ವತಂತ್ರವಿನ್ನೇನುಬೇಡಿಕೊಂಬೆನು ಪಾದಕ್ಕೆರಗೀಗ ನಾನು ನೀನುಕೂಡಿ ರಕ್ಷಿಸಬೇಕು ಕಪಟವಿನ್ನೇನು 4ಸೂತ್ರಧಾರಕ ನೀನು ಸಕಲಕ್ಕೆ ಮಾಯಾಮಾತ್ರವೀ ಜಗವಿದನಾಡಲಿನ್ನೇಕೆಪಾತ್ರ ಕೃಪೆಗೆ ನಾನು ಗುರು ನೀನಾಗಲ್ಕೆ ಸುಪವಿತ್ರ ಚರಿತ್ರ ವೆಂಕಟ ಮರೆಹೊಕ್ಕೆನು 5ಓಂ ಸತ್ಯಭಾಮಾಧವಾಯ ನಮಃ
--------------
ತಿಮ್ಮಪ್ಪದಾಸರು
ಎನಗೊಬ್ಬರು ಇಲ್ಲಾ ನೋಡಿ ಸಿರಿನಲ್ಲ ಪ ಮನದಿ ಯೋಚಿಸಲು ತಂದೆ ತಾಯಿಸತಿ ತನಯ ಸಹೋದರ ಮಿತ್ರರೆಂಬುವರು ಅ.ಪ ಒಬ್ಬರಾದರೂ ಇವರಲಿ ಇದ್ದರೆ ಹಬ್ಬವಾಗಿ ಸಂತೋಷ ಪುಟ್ಟುವುದು ತಬ್ಬಲಿಯಾದೆನು ಸಂಸ್ಮರಣವೆಂಬ ಹೆಬ್ಬುಲಿಯಕೈಗೆ ಸಿಕ್ಕಿರುವೆನು ನಾಂ1 ಯಾರಿಗೆ ಮೊರೆಯಿಡಲೀ ಕಷ್ಟ ಕಿವಿ- ಯಾರ ಕೇಳಿ ಪರಿಹರಿಸುವರಾರು 2 ರಾಯ ತಂದೆ ಧರ್ಮವೆ ಸೋದರರು ಸತಿ ನೋಯಿಸದಿರುವುದು ಮಿತ್ರನು ಇವರೊಳು 3 ಈ ಬಂಧುಗಳುಳ್ಳವಗೆ ನಿರುತವು ಮ- ಹಾಭಾಗ್ಯವುಯಿಹಪರ ಸೌಖ್ಯವು ನಾ ಭ್ರಾಂತಿಯೊಳೆಲ್ಲೆಲ್ಲಿ ತಿರುಗಿದರು ವೋ ಭಗವಂತ ಮಹಂತಾನಂತನೆ 4 ಹೊರಗಿನವರ ಬಾಲ್ಯದಿ ಕಾಣದೆ ಕರೆ ಗುರುರಾಮವಿಠಲ ಹೊರವೊಳಗೂನೀ ನಿರುವೆ ಕರುಣಿಸೈ ಸರ್ವವು ನೀನೆ 5
--------------
ಗುರುರಾಮವಿಠಲ
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ಪ ಕನಸಿನೊಳಗ ಕಂಡ ಪರಿಯಾರೂಪದ ದೋರಿ ದಾವ ತೇಜಮುಸುಕಿತು ಧರಿಯೇ | ತ್ರೈ ಭುವನವ ರಕ್ಷಿಸ ಬಂದಾ ಹರಿಯೇ | ಮುಜ್ಜೆಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಅಡಿಯಿಟ್ಟುನಲಿದು ಬರುವ ರಾಮೋ ಘಮ್ಮನೇ ಪರಬೊಮ್ಮನೆ4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಮನ ಅನ್ಯಕ್ಕೆರಗುತ್ತಿದೆ ಪ ಪತಿ ಅಂಗ ಸಂಗದೊಳಿರುತಿದ್ದು ಇದ್ದುಸತಿ ಉಪಪತಿಯನ್ನು ಬಯಸುವಂತೆಶ್ರುತಿ ತತ್ವ ಶಾಸ್ತ್ರಗಳರಿತಿದ್ದು ಇದ್ದು ದು-ರ್ಮತಿ ದುಷ್ಟ ಚರಿತೆಗೆ ಎಳೆಯುತಿದೆ ಎನ್ನ1 ನಿತ್ಯ ಉಣುತಿದ್ದು ಇದ್ದುಸುರೆಯ ಚಿಂತಿಸಿ ರುಚಿಗೊಳ್ಳುವಂತೆಕರಿ-ಸುರನದಿಯಲ್ಲಿ ಮೀಯುತಿದ್ದು ಇದ್ದುಪರಮ ಹರುಷದಿ ಕೆಸರ ಚೆಲ್ಲಿಕೊಂಬಂತೆ 2 ಪರಮ ಪಾವನ ಗುಣಪೂರ್ಣನೆ ನಿನ್ನಚರಣಯುಗಳವನ್ನು ಧ್ಯಾನಿಸುತನೆರೆಹೊರೆಯಲಿ ಮನ ಹೋಗದಂದದಲಿಕರುಣಿಸಿ ನಿಲ್ಲಿಸೊ ಸಿರಿಕೃಷ್ಣರಾಯ 3
--------------
ವ್ಯಾಸರಾಯರು