ಒಟ್ಟು 11932 ಕಡೆಗಳಲ್ಲಿ , 136 ದಾಸರು , 6615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯನೆತ್ತುವೆ ಪ ಸಾರಸನೇತ್ರಗೆ ಮುತ್ತಿನ ಅ.ಪ ನೀಡುತ್ತಯನ್ನನು ಕೂಡಿ ಸುಖಪಡಿಸುವವಗೆ 1 ಅನುದಿನದಲಿ ಎನ್ನ ಘನ ಬೋಧೆ ಪೇಳುವವಗೆ 2 ಪಾಮರತ್ವವ ಬಿಡಿಸಿ ಕ್ಷೇಮಾವಕೊಡುವ ಗುರು ರಾಮ ವಿಠ್ಠಲನಿಗೆ 3
--------------
ಗುರುರಾಮವಿಠಲ
ಆರತಿಯಾಡುವೆನು ಸದ್ಗುರುವಿಗೆಆರತಿಯಾಡುವೆನು ಪ ಕಾಯವ ಜರೆಯುತ್ತಲಿಕೈಯನೆ ಮುಗಿಯುತಲಿಮಾಯವ ಹರಿಯುತಲಿಬಾಯಿ ಕೊಂಡಾಡುತಲಿ ಸದ್ಗುರುವಿಗೆ 1 ಕುಣಿ ಕುಣಿದಾಡುತಲಿಮನವನೆ ನೀಡುತಲಿಘನಮುಕ್ತಿ ಬೇಡುತಲಿಅನುಮಾನವ ಬಿಡುತಲಿ ಸದ್ಗುರುವಿಗೆ 2 ಅರಿವನೆ ಅರಿತುಗುರಿಯನೆ ಮರೆತುಪೂರವನೆ ಬೆರೆತುಗುರು ಚಿದಾನಂದನರಿತು ಸದ್ಗುರುವಿಗೆ 3
--------------
ಚಿದಾನಂದ ಅವಧೂತರು
ಆರಮ್ಮ ಮುರಲಿಯನೂದುವನುಮಾರ ಸುಂದರ ಸುಖ ಸಾರುವ ಜಗಕೆ ಪ ಪುಂಡರೀಕಾಕ್ಷನು ಹಿಂಡುಗೋವ್ಗಳ ಕಾಯ್ದುಕಂಡ ಕಂಡವರನ್ನು ಕರೆಯುತಾನೆಚೆಂಡು ಬಗರಿ ಗೋಲಿ ಗುಂಡುಗಳನೆ ಕಟ್ಟಿತಂಡ ತಂಡವಾಗಿ ಪೋದನಮ್ಮ 1 ತಾಯಿ ಕಟ್ಟಿರುವಂಥಾ ತೋರ ಬುತ್ತಿಯ ಗಂಟುತೂಗುತ ಯಮುನೆಯ ತೀರದಲ್ಲೇತೋರ ಉಪ್ಪಿನಕಾಯಿ ಬುತ್ತಿಗಳನೆ ತಿಂದುತೀರಿದವರಿಗೆಲ್ಲಾ ತಾ ಕೊಡುವಾ 2 ಇಂದಿರೇಶನು ಕೊಟ್ಟ ತಿಂದ ಉಪ್ಪಿನಕಾಯಿಆನಂದಬಟ್ಟರು ಗೋಪನಂದನರುಹಿಂದಿನ ಪುಣ್ಯವು ಬಂದೊದಗಿತು ಎಂದುತಿಂದ ಎಂಜಲನಿಟ್ಟ ಇಂದಿರೇಶ3
--------------
ಇಂದಿರೇಶರು
ಆರಾಧನೆ ಪರಮಾನಂದ ಪ ತಾರಾನಾಥ ಕುಲೋದ್ಭವ ಕೃಷ್ಣನ ಅ.ಪ ಘೋರವು ಈ ಸಂಸಾರವೆನ್ನುವುದು ದೂರಿನ ನುಡಿಯಿದು ಬಾಳುವಗೆ ನೂರು ವರುಷಗಳ ಮೀರಿ ಜೀವಿಸಲು ಕೋರಿಕೆ ಬರುವುದು ಧೀರ ಜನರಿಗೆ 1 ನಿರ್ಮಲ ದೇಹವು ನಿರ್ಮಲ ಹೃದಯವು ನಿರ್ಮಲ ನಡೆನುಡಿ ಕರ್ಮಗಳು ಮರ್ಮಜ್ಞರ ಮಾರ್ಗಗಳಲಿ ಸ್ವೋಚಿತ ಧರ್ಮಗಳಲಿ ವಿಶ್ವಾಸವಿರುವವರಿಗೆ 2 ಅನ್ನವಿರುವವರಿಗೆ ತಿನ್ನಲಾಗದು ತಿನ್ನಬಲ್ಲವರಿಗೆ ಅನ್ನವು ಸಿಗದು ಘನ್ನ ಮಹಿಮನ ಪ್ರಸನ್ನತೆಯಿಂದಲಿ ಅನ್ನ ಪಡೆದು ತಿನ್ನಲು ಬಲ್ಲವರಿಗೆ 3
--------------
ವಿದ್ಯಾಪ್ರಸನ್ನತೀರ್ಥರು
ಆರಿಗಾರು ಇಲ್ಲವಯ್ಯ ಆರಿಗಾರು ಇಲ್ಲವಯ್ಯ ಪ ಮಡದಿಯೆಂಬಳು ಯಾಕೆಬಿಡದೆ ಪಂಕ್ತಿಯ ಊಟ ಎಂಬ ಭಾವ ಮೈದುನನೇಕೆಪಡದ ತಂದೆ ತಾಯಿ ಏಕೆ ಪಡಿತತ್ವ ಯಾಕೆಬಡಿಯುತ ಯಮನೀಗ ಒಯ್ಯೆ ಬಿಡಿಸಿಕೊಂಬರಿಲ್ಲ 1 ಅಣ್ಣತಮ್ಮನು ಯಾಕೆ ಅಳಿಯನು ಯಾಕೆಬಣ್ಣದ ಬಾಳು ತಾನೇಕೆ ಬಂಧುಗಳದೇಕೆಚಿನ್ನಕೊಪ್ಪರಿಗೆ ಯಾಕೆ ಚಿತ್ರಮನೆಯಾಕೆಕಣ್ಣ ಕಟ್ಟಿ ಕಾಲನೆಳೆಯ ಕಾವರಾರು ಇಲ್ಲವಯ್ಯ2 ಆರ ನಂಬಿದರು ನಿನ್ನಕಡೆ ಹಾಯಿಪರಿಲ್ಲನೂರು ಬಾರಿ ತಿಳಿದು ನೋಡು ನಿನ್ನೊಳಗೆಲ್ಲಧೀಧೀ ಚಿದಾನಂದ ಹೊಂದೆಯುಕ್ತಿಯಹುದೆಲ್ಲಬಾರೆ ಜನನ ಮರಣಕೆ ಸಂದೇಹವಿಲ್ಲ 3
--------------
ಚಿದಾನಂದ ಅವಧೂತರು
ಆರಿಲ್ಲಿಲ್ಲೋ ಮನುಜಾ | ಅರಿಲ್ಲಿಲ್ಲೋ | ಹರಿಭಕ್ತರಿಗೆ ಸರಿ ಉಂಟೇನಣ್ಣಾ | ಆರಿಲ್ಲಿಲ್ಲೋ ತಮ್ಮಾ | ಬಿರದಿನ ಘಲಗಳ ನಡೆಸುವರಯ್ಯಾ ಪ ಕಂಭದೊಳಗ ಹರಿ ಬಿಂಬವ ತೋರಿಸಿ | ಹಿರಣ್ಯ ಕನಾ | ವೆಂಬ ಶಾರ್ದೂಲ ಕರಳವ ಹಾರಿಸಿದ | ನಂಬಿದ ಪ್ರಲ್ಹಾದ ಮಾಸಾಳ ನಮಾ 1 ಕಂಡು ಸೀತಾಪತಿ ನೊಯ್ದು ರಾವಣ ನೆಂಬಾ | ಖಂಡಿಸಿ ಮದ ಸೊಕ್ಕಿದಾನಿಯನು | ತುಂಡ ಮುಂಡ ಮಾಡಿ ಪದವಿಯ ಪಡದಾ | ಚಂಡ ವಿಭೀಷಣ ಮಾಸಾಳ ನಮಾ 2 ಖಂಡ ದಾಸನಬೇಡಿ ಹೊಂದಿದ್ದ ಕಾಯನ | ಸಂದ ಬಿಡಿಸಿ ಮಲ್ಲಯುದ್ಧದಲಿ | ಮಂದರ ಧರನತಿ ಮೆಚ್ಚಿಸಿ ಮೆರೆದಾ | ನಂದ ಭೀಮಶೇನ ಮಾ-ಸಾಳ ನಮಾ 3 ಬೊಮ್ಮ ಸಾರಥಿ | ಉರಗಸ ಹದಿ ಮೇರು ಗಿರಿ ಪಾಪವು | ಹರಿಶರದಿಂದಲಿ ತ್ರಿಪುರವ ಕೆಡಹಿದ | ಸುರ ರಕ್ಷ ಮಹೇಶ ಮಾಸಾಳನಮಾ 4 ಹಿಂದಿನ ಮಾತಿಂದು ಇಂದಿಲ್ಲ ವೆನಬ್ಯಾಡಿ | ಎಂದೆಂದು ಸ್ವರ್ಗದ ಸುಖಗಳಿಗೆ | ಕುಂದವ ನಿಡುವರು ಮಹಿಪತಿ ಸುತ ಪ್ರಭು | ಹೊಂದಿದ್ದ ದಾಸರು ಮಾಸಾಳರೈಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರೀಗ ನೀ ಎನ್ನ ಕಣ್ಣು ಮುಚ್ಚಿದೆಯೊ ಕು- | ಮಾರ ಮೌನದಲಿದ್ದಿ ಮಾತನಾಡಯ್ಯಾ ಪ ಇಂದಿರಾ ಭೂದೇವಿ ಆಳಿದವನೊ | ನಂದ ಗೋಕುಲದಲ್ಲಿ ಪುಟ್ಟಿದವನೊ || ಕರಿ - | ಬಂಧನ ವಿನಾಶದ ವಿಠ್ಠಲನೊ 1 ಅಂಬರೀಷನ ಶಾಪ ಪರಿಹರನೊ | ಶಂಭು ಮೊರೆಯಿಡಲು ಕಾಯಿದವನೊ || ಕಂಭದಿಂದೊಡೆದು ಬಂದವನೊ | ತ್ರಿ - ಯಂಬಕನ ಭಕ್ತನ ಸಂಹರನೊ 2 ಬೆರಳಲ್ಲಿ ಬೆಟ್ಟವನೆತ್ತಿದವನೊ | ದುರುಳ ಕಾಳಿಂಗನ ತುಳಿದವನೊ || ಒರಳನು ಕಾಲಲ್ಲಿ ಎಳೆದವನೊ | ಸಿರಿ ವಿಜಯವಿಠ್ಠಲರಾಯನೊ 3
--------------
ವಿಜಯದಾಸ
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರು ಪೇಳಿದರೊ ಜೀವಾ ನಿನಗಾರು ಪೇಳಿದರೋ ಪ ಆರು ಪೇಳಿದರೋ ಈ ಸೋರುವ ಮನೆಯೊಳು ಇರುವುದು ಒಳಿತಲ್ಲಾ ತೆರಳುವುದುಚಿತನೇ ಅ.ಪ. ದುಷ್ಟರಿರುವರೋ ಈ ಗ್ರಹದೊಳು ಕಟ್ಟಿ ಸುಲಿಯುವರೋ ಇಟ್ಟಿದ್ದ ಅನ್ನದಿ ಕೆಟ್ಟ ಕ್ರಿಮಿಗಳುಂಟು ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬಿದೋ ಅಲ್ಲಿ 1 ಛಾಯಾವೂ ಇಲ್ಲಾ ಈ ಮನೆಯೊಳು ದಾಯಾವೂ ಇಲ್ಲಾ ಬಾಯ ಬಿಡಿಸುವರೋ ಅನ್ಯಾಯ ಮಾಡುವರೋ ಉಪಾಯದಿಂದಲಿ ಬಿಟ್ಟು ಹಯವದನನ ಶೇರೋ 2 ತರುಣರಿರುವರೋ ಈ ಮನೆಯೊಳು ಮರುಳು ಮಾಡುವರೋ ಪರುಮ ಹರುಷ ನಮ್ಮ ಹನುಮೇಶ ವಿಠಲನ ನೆರೆ ನಂಬಿ ಸ್ಮರಿಸುವ ಸ್ಥಿರ ಪದವನು ಸೇರೊ 3
--------------
ಹನುಮೇಶವಿಠಲ
ಆರು ಬಂದರು ಸಖಿ ತೇರಿನ ಬೀದಿಲೆಮಾರಜನಕನ ಸಾರುತ ಹೊಗಳುವರಾರೆ ಕರಿಪುರದಲಿ ಬಂದವರಾರೆ ಪ. ದುಷ್ಟ ದೈತ್ಯರ ಶಿರವ ಕುಟ್ಟಿ ತಮಸ್ಸಿಗೆ ಹಾಕಿಅಟ್ಟಹಾಸದಿಂದ ಭೇರಿ ಘಟ್ಯಾಗಿ ಹೊಯಿಸುವರಾರೆ1 ಕ್ರೂರ ದೈತ್ಯರ ಶಿರವ ಸೇರಿಸಿ ತಮಸ್ಸಿಗೆ ಭೋರೆಂಬೊ ತುತ್ತೂರಿ ಕಾಳಿ ಹಿಡಿಸುವರಾರೆ 2 ವೆಂಕಟನ ದ್ವೇಷಿಗೆ ಸಂಕಟ ಬಿಡದೆಂದುಡಂಕರದಿಂದಲೆ ಡಂಕಿಯ ಹೊಯಿಸುವರಾರೆ 3 ಖೂಳ ದೈತ್ಯರ ಶಿರವ ಸೀಳಿ ತಮಸಿಗೆ ಹಾಕಿಭಾಳಾ ರೌಸದಿಂದ ಕಾಳಿಯ ಹಿಡಿಸುವರಾರೆ4 ಭಾಗವತರ ಸುಖ ಹೀಗೆ ಉನ್ನತ ಎಂದು ಈಗ ತೋರುತ ಭರದಿ ನಾಗಸ್ವರ ಹಿಡಿಸುವರಾರೆ5 ಅಂಬುಜನಾಭನ ನಂಬಲು ಸುಖವಿತ್ತು ಬಂಬಂಬೆನುತ ಶಂಖವ ಸಂಭ್ರಮದಿ ಹಿಡಿಸುವರಾರೆ 6 ನಿರ್ಜರ ಹಂಸನೀ ಹೌದೆಂದು ಸಂಶಯ ಬಿಡಿಸುತ ಕಂಸಾಳೆ ಹೊಯ್ಸುವರಾರೆ7 ಎಷ್ಟೆಷ್ಟು ಕಾಲಕ್ಕೂ ಕೃಷ್ಣಗೆ ದೊರೆ ಎಂದುಶ್ರೇಷ್ಠಾದ ಜಾಂಗುಟಿ ಫಟ್ಯಾಗಿ ಹೊಯಿಸುವರಾರೆ8 ಕಬ್ಬು ಬಿಲ್ಲಿನಯ ಒಬ್ಬ ಜಗದೀಶನೆಂದುಅಬ್ಬರದಿ ಕರಣೆ ನಿರ್ಭಯದಿ ಹಿಡಿಸುವರಾರೆ9 ಮಿತಿಯಿಲ್ಲದೆ ಶೃತಿ ಸಾರುವ ಮಧ್ವಮvವೆÉ ಅಧಿಕವೆಂದು ಶೃತಿಯನೆÉ ಹಿಡಿಸುವರಾರೆ 10 ತಂದೆ ರಾಮೇಶನ ಹೊಂದಲು ಸುಖವೆಂದು ಸುಂದರ ಕೊಳಲನೆ ಮುಂದೆ ಊದಿಸುವರಾರೆ 11
--------------
ಗಲಗಲಿಅವ್ವನವರು
ಆರು ಬದುಕಿದರಯ್ಯ ಹರಿ ನಿನ್ನ ನಂಬಿ ಪ ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ಅ ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ 1 ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ2 ತಿರುಪೆ ಕೂಳ್ ಪುಟ್ಟದೈ ಕೃಷ್ಣ3
--------------
ಕನಕದಾಸ
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರು ಹಿತವರು ಎಂದು ನಂಬಬೇಡ ಪ ಆರಿಗಾರಿಲ್ಲ ಆಪತ್ತು ಬಂದೊದಗಿದಡೆ ಅ ಜನಕ ಹಿತದವನೆಂದು ನಂಬಬಹುದೇ ಹಿಂದೆತನಯ ಪ್ರಹ್ಲಾದನಿಗೆ ಪಿತ ಮುನಿದನುಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿತನಯ ರಾಧೇಯನಿಗೆ ಎರಡೆಣಿಸಿದ ಮೇಲೆ 1 ಅನುಜ ಕೊಲಿಸಿದ ಮೇಲೆ2 ತನಗೆ ದೇಹಾನುಬಂಧಿಗಳೆ ಬಂಧುಗಳೆಂದುಮನದಿ ನಿಚ್ಚಳವಾಗಿ ನಂಬಬೇಡಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನಅನುದಿನದಿ ನಂಬಿದವಗಿಹಪರದಿ ಸುಖವು 3
--------------
ಕನಕದಾಸ
ಆರುತಿ ಬೆಳಗುವೆವು ಕೃಷ್ಣಗೆ ರಾಧಾಕೃಷ್ಣಗೆ ಬೆಳಗುವೆವು ಪ ಗೋಕುದಲಿ ಹುಟ್ಟಿ | ಗೋವುಗಳನು | ಕಾಯ್ದವಗೆ ಗೋಪಾಲಕೃಷ್ಣಗೆ ಬೆಳಗುವೆವು 1 ನಂದಕುಮಾರನಿಗೆ ಇಂದೀವರಾಕ್ಷ ಬಾಲನಿಗೆ | ರಾಧಾಕೃಷ್ಣಗೆ ಬೆಳಗುವೆವು 2 ಶಾಮಸುಂದರನಿಗೆ ಕಾಮಿತಶೀಲ ಕೃಷ್ಣನಿಗೆ ರಾಧಾಕೃಷ್ಣಗೆ 3
--------------
ಶಾಮಸುಂದರ ವಿಠಲ