ಒಟ್ಟು 1951 ಕಡೆಗಳಲ್ಲಿ , 110 ದಾಸರು , 1438 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ನಿನ್ನ ನೆನೆಯುವುದೆ ಭಾಗ್ಯ ನಿನ್ನ ನೋಡುವುದೇ ಕಂಗಳಿಗೆ ಹಬ್ಬ ನಿನ್ನ ಬಳಿ ನಲಿದಾಡುವುದೇ ಭಕ್ತರಿಗಿಷ್ಟ ನಿನ್ನಗಲಿ ಇಹದೊಂದು ಘಳಿಗೆಯೂ ಅವರ ಮನಸಿನಲಿ ಅಖಿಳ ದೇವೇಶ ನಿನ್ಹೊರತು ಗತಿಯಮಗಾರೆಂಬರೊ ನಿನ್ನ ಭಕ್ತರು ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಿನ್ನ ಪೂಜೆಯೊ-ರಾಮ ಪ ನಿನ್ನ ಪೂಜೆ ಹೊರತಿಲ್ಲಎನ್ನ ವ್ಯಾಪಾರವೆಲ್ಲ ಸ್ನಾನ ಸಂಧ್ಯಾವಂದನ ಹೋಮ ಮೌನ ಜಪ ಸದ್ಗ್ರಂಥ ವ್ಯಾ-ಖ್ಯಾನ ಯಜ್ಞಸಾಧನ ಸಂಪಾದನ ಅಧ್ಯಯನನಾನಾ ರಸ ನೈವೇದ್ಯ ಭೋಜನ ತಾಂಬೂಲಚರ್ವಣಮಾನಿನಿ ಮೊದಲಾದ ಸ್ಯಂದನ ಗಾನದ ಭೋಗಗಳೆಲ್ಲ1 ಸರ್ವೇಂದ್ರಿಯಗಳಲಿಹ ಶರ್ವಾದಿ ದೇವರ್ಕಳಿಗೆಸರ್ವಚೇಷ್ಟಾಪ್ರದನಾದ ಪ್ರಾಣಗೆ ನಿರ್ವಾಹಕನಾಗಿಸರ್ವ ಜೀವರ ಕೈಯಿಂದ ಸರ್ವಜ್ಞಾನ ಕರ್ಮಗಳನುಸರ್ವದಾ ಮಾಡಿಸಿ ಅವರ ಸರ್ವಶುಭಭೋಕ್ತನಹೆ 2 ಸುರರು ಕಂಗಳಲ್ಲಿ ಭಾಗ್ಯಲಕ್ಷ್ಮಿಉಂಗುಷ್ಠದಿ ಲೋಕಪಾವನೆ ಗಂಗಾದೇವಿಯುಹಿಂಗದೆ ನಿನ್ನಲ್ಲಿರಲು ತುಂಗಗುಣ ಪರಿಪೂರ್ಣರಂಗವಿಠಲ ನೆಲೆಯಾಗಿ ಮಂಗಳಾಂಗನೆ ಮನ್ನಿಸುವೆಯೊ3
--------------
ಶ್ರೀಪಾದರಾಜರು
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನಿನ್ನ ಮನಸಿಗೆ ಬಂತೆ ಪ್ರಾಣನಾಥಾ ಚಿಣ್ಣನೆಂದು ನೋಡದಲೆ ಕರಿಯಲಟ್ಟಿದೆ ವೇಗ ಪ ಸಾಕಿದೆನು ನಿನ್ನ ದಾಸನೆಂದು ತಿಳಿದು ವಿ- | ವೇಕದಿಂದಲಿ ಉಪನಯನ ಮಾಡೀ | ಲೋಕದೊಳಗೆ ಬೆಳಸಿ ಮುದುವೆಯ ಮಾಡಿ ಅ- ನೇಕ ತೀರ್ಥಯಾತ್ರೆ ತಿರುಗಿದವನಾ ಇಂದೆ 1 ಉದ್ಧಾರವಾಗುವೆನು ಕುಲಕೋಟಿ ಸಹಿತೆಂದು ಪದ್ದಿಟ್ಟುಕೊಂಡಿವೈ ಈ ತರಳನ ಸುದ್ದಿ ತಿಳಿಯಗೊಡದೆ ವಿಯೋಗ ಮಾಡಿಸಿದೆ ಇಂದು 2 ಪಾದ ಭಜಿಸುವರಿಗೆ ಭಾಗ್ಯ ಹೆಚ್ಚುಗೊಡದಿಪ್ಪನೆಂದು ಬಿರುದು ಧರಿಸಿ ನಿಚ್ಚ ಮೆರೆವಾ ಮಹಿಮ ವಿಜಯವಿಠ್ಠಲರೇಯ ಅಚ್ಚ ಭಕುತರ ಪ್ರಿಯ ವೈಕುಂಠಕೆ ಇಂದೆ 3
--------------
ವಿಜಯದಾಸ
ನಿನ್ನ ಮರೆದೆನೊ ರಂಗ ನಿನ್ನ ಮರೆದೆ ಅನ್ಯರನ್ನಕೆ ಸಿಲುಕಿ ಅನುಗಾಲ ಮರುಳಾಗಿ ಪ ಊಟಕ್ಕೆ ಬರುವಲ್ಲಿ ತನುವುಬ್ಬಿ ಎನ್ನ ಮನ ನಾಟುವುದು ಅವರ ಕಡೆ ಅನುರಾಗದಿ ನೀಟಾದ ಭೋಜನವ ಬಯಸುವೆನು ಯಮರಾಯ ಭಂಗ ಕೇಳಿ ಎಚ್ಚರಿಯದಲೆ1 ಮತ್ತೆ ಕರೆಯಲು ಬರಲು ಉತ್ಸವ ಪಿಡಿಯಲೊಶವೆ ಹೊತ್ತು ಹೊತ್ತಿಗೆ ಅವರ ಕೊಂಡಾಡುತ ಹೆತ್ತವರಿಗಿಂತಲೂ ಅಧಿಕ ನಮಸ್ಕರಿಸುವೆನು ಚಿತ್ತಜನಪಿತ ನಿನ್ನ ಸ್ತೋತ್ರ ಪಠಿಸದಲೆ2 ಎಡೆಯ ಮುಂದೆ ಕುಳಿತು ಎಲ್ಲ ಕಾಲಗಳಿಂದ ಬಿಡದೆ ಮಾಡಿದ ಪುಣ್ಯಪಾಪಗಳೆದು ಎಡಬಲದವರ ಪಙÉ್ತ ನೋಡಿಕೊಳ್ಳುತ ದುಃಖ ಪಡುವೆನೋ ಎನಗಿಷ್ಟು ಕಡಿಮೆ ಹಾಕಿದರೆಂದು3 ಅನ್ನವಿತ್ತವನ ಪಾಪಗಳು ನಿರಂತರದಿ ಅನ್ನದಾಶ್ರಯ ಮಾಡಿಕೊಂಡಿಪ್ಪವು ಚೆನ್ನಾಗಿ ತಿಳಿಯದಲೆ ಚಾತುರ್ಯದಿಂದಲಿ ಧನ್ಯನಾದೆನು ನಾನು ಪರರ ಪಾಪವ ಭುಜಿಸಿ 4 ಒಬ್ಬರೆಡೆ ನೋಡಿಕೊಳಲಧಿಕವಾಗಿದ್ದರೆ ಉಬ್ಬುವೆನು ಊರು ಕೇರಿ ಹಿಡಿಸದಂತೆ ಸುಬ್ಬನ ಸೂರೆಯಂತೆ ಪರರ ಅನ್ನವನುಂಡು ಮೊಬ್ಬಿನಲಿ ದಿನಗಳೆದೆ ದೀನ ಮನಸಿನಲಿ 5 ಒಡಲಿಗೆ ಬಿದ್ದರಸ ಮೂರು ಭಾಗಗಳಾಗಿ ಕಡೆಗೆ ಪೋಗುವುದೊಂದು ನಿಲುವುದೊಂದು ತಡೆಯದಲೆ ಸಂತಾನ ಪಡೆವುದೊಂದೀತೆರ ಕಡೆಗಾಣಲಿಲ್ಲ ಪರರಲಿ ಉಂಡ ಋಣಕೆ6 ಆವಾವ ಬಗೆರುಚಿ ಜಿಹ್ವಗೆ ತೋರುತಿದೆ ಆವಾವ ಬಗೆ ನರಕ ಬೇರೆಯುಂಟು ಮಣಿ ಸರ್ವೇಶ ವಿಜಯವಿಠ್ಠಲ ಸ್ವಾಮಿ ಈ ಜೀವ ಹಿತವಾಗುವಂತೆ ಮಾರ್ಗವ ತೋರು 7
--------------
ವಿಜಯದಾಸ
ನಿನ್ನ ವಲಿಸುವ ಭಾಗ್ಯ ನಿನ್ನ ಭಕ್ತರಿಗೆ ನೀ ಕೊಟ್ಟು ಸನ್ನುತ ಚರಿತರಿಗೀವೆಯಲ್ಲದೆ ನಿನ್ನ ಮಹಿಮೆಯ ತೋರುವ ಅನ್ಯರಿಗೆ ಈ ಭಾಗ್ಯವುಂಟೆ ನಿನ್ನ ವಲಿಸಲು ಸಂಪನ್ನ ಶ್ರೀ ಶ್ರೀನಿವಾಸ 1 ಸೂರ್ಯ ತೇಜಕೆ ಪ್ರತಿ ಕೋಟಿಸೂರ್ಯ ತೇಜ ಧರಿಸಿ ಆರ್ಯ ರಾಮರಾಯರಾ ಕರಗತದಿ ಮೆರೆದೊ ಜಗತ್ಸಿರಿಯೆ ಆ ಆರ್ಯರಾ ಮಡದಿ ಸೀತಾಬಾಯಿ ಎಂಬುವರಾ ಆ ಈರ್ವರಾ ಸೇವೆಯಲಿ ಮೆರೆದ ಸುರತರುವೆ ಶ್ರೀ ಶ್ರೀನಿವಾಸ 2 ನಿನ್ನ ಸೇವಾಕಾರ್ಯ ಆವಾವುದೆಂದ್ಯೋಚಿಸದೆ ನಿನ್ನ ಸೇವಾಕಾರ್ಯದಲಿ ನಿರುತ ತಪವನೆಗೈಯೆ ಮಾನವ ವೇಷಧಾರಿಣಿಯರಾಗಿ ಪುಟ್ಟಿಹರೂ ಜಗದಿ ಬಕುಳಾವತಿಯ ತೆರದಿ ನಿನ ಸೇವ ನಿರತದಿ ಶ್ರೀ ಶ್ರೀನಿವಾಸ 3 ಸಾರ ಗುರುಮುಖದಿಂದ ತಿಳಿದು ನಿ ಲಕುಮಿ ಆವಾಹಿಸಿದ ಬಿಲ್ವರÀಸವ ನಿನಗರ್ಪಿಸಿ ಅಕಳಂಕ ಮಹಿಮರು ಸೇವಿಸಿ ಸೌಳ ವರುಷ ತಪವಗೈದಿಹರೊ ಗುರುವಾಜ್ಞೆಯಲಿ ನಿನ್ನ ಸೇವಿಸೆ ಶ್ರೀ ಶ್ರೀನಿವಾಸ 4 ನಿನ್ನ ಸೇವಕರಾದ ಆ ಮಾನುನಿಯರನುದ್ಧರಿಶೆ ನಿನ್ನ ಇಂಥ ಆಟಗಳ ಗೋಪಿಗೆ ಕೃಷ್ಣ ತೋರಿದಂದದಲಿ ಸನ್ನುತಾಂಗನೆ ತೋರಿ ಭಕ್ತರಭೀಷ್ಟವನು ಉನ್ನತದಿ ಸಲಿಸೆ ಜಗದಿ ಘನ್ನ ಸಂಪನ್ನ ಲೀಲೆನೋಡಲು ಶ್ರೀ ಶ್ರೀನಿವಾಸ 5 ಗಂಗಾಜನಕನೆ ನಿನ್ನುಂಗುಟದಿಂ ಬಂದ ಗಂಗೆಯ ಕೇಸರಿತೀರ್ಥದಾ ಸೊಬಗೇನೆಂದು ಬಣ್ಣಿಪೆನೊ ಶ್ರೀ ರಂಗನಾಥಾ ಸರ್ವರಿಗೆ ದಾತಾ ರಂಗನಾಥನೇ ನಿನ್ನ ಪಂಚಾಮೃತದ ಅಭಿಷೇಕ ಕಂಗಳಿಗ್ಹಬ್ಬವೊ ಜಗದ ಜಂಗುಳಿ ಭಕ್ತರಿಗೆನುತೆ ಶ್ರೀ ಶ್ರೀನಿವಾಸಾ 6 ತನ್ನ ತೊಡೆಯೊಳಗಿಟ್ಟು ಉನ್ನತದ ಆಭರಣ ಗೋಪಿ ಇಡುವ ತೆರದಿ ಇನ್ನು ನಿನಗಲಂಕಾರ ಮಾಡುವದೇನ ಬಣ್ಣಿಪೆನೋ ಸನ್ನುತ ಚರಿತರವರೈಸೇ ನಿನ್ನ ನೇವೇದ್ಯ ಘನ್ನ ಮಂಗಳಾರುತಿ ಬೆಳಗಿ ನಿನ್ನ ಸ್ತುತಿ ಮಾಡುತ್ತ ನಿನ್ನ ತೀರ್ಥವನ್ಹಂಚುವರೊ ಭಕ್ತರಿಗೆಲ್ಲ ಶ್ರೀ ಶ್ರೀನಿವಾಸ 7 ಏನು ಸುಕೃತವ ಮಾಡಿ ಈ ಮಾನುನೀಯರು ಪುಟ್ಟಿಹರೊ ಗಾನಲೋಲನೆ ನಿನ್ನ ಲೀಲೆ ಜಗಕೆ ಬೇರೆ ತೋರೆ ಮನಸಾರೆ ಸಾನುರಾಗದಿ ಬಂದು ನಿನ್ನ ಭಕ್ತರಾ ಮಂದಿರಕೆ ದೀನನಾಥನೆ ನಿನ್ನ ಸಹಿತದಲಿ ಮಾನುನಿಯು ದಾನವಾಂತಕ ನಿನ್ನ ಮಹಿಮೆ ತೋರುವರೊ ಏನೆಂದು ಬಣ್ಣಿಸಲಿ ಎನ್ನಳವೇ ಶ್ರೀ ಶ್ರೀನಿವಾಸ 8 ಒಬ್ಬೊಬ್ಬ ಭಕ್ತರಲಿ ಒಂದೊಂದು ಮಹಿಮೆಯನು ಅಬ್ಬರದಿ ತೋರುವರೊ ನಿನ್ನ ಮಹಿಮೆಯ ದೇವ ಮತ್ತೊಬ್ಬರಾ ಮನೆಯಲ್ಲಿ ಪ್ರಸಾದದಾ ಮಹಿಮೆಯನು ಮತ್ತೊಬ್ಬರಾ ಮನೆಯಲಿ ತೀರ್ಥದಾ ಮಹಿಮೆ ತೋರಿ ಅಬ್ಬರದಿ ಮೆರೆಸುವರೋ ಶ್ರೀ ಶ್ರೀನಿವಾಸ 9 ಗಾನ ಪ್ರಿಯನೆ ನಿನ್ನ ಕಲ್ಯಾಣದುತ್ಸವವು ಏನೇನು ಮಾಡುವ ಕಾರ್ಯ ನಿನ್ನದೇ ಎಂದು ಆನಂದದಿಂದ ಮಾಡುವರೊ ಹರಿಯೆ ದೋರೆಯೆ ದೀನನಾಥ ಎನ್ನ ಹೃದಯದಲಿ ನೀನಿಂತು ನುಡಿದಂತೆ ನುಡಿದಿರುವೆ ಅನಾಥ ಬಂಧು ಶ್ರೀ ಶ್ರೀನಿವಾಸಾ ಶ್ರೀಶಾ 10
--------------
ಸರಸ್ವತಿ ಬಾಯಿ
ನಿನ್ನ ಸೇವೆಯನೊಂದನಿತ್ತು ಸಲಹೋಎನ್ನ ಮನ ನಿನ್ನಲ್ಲಿ ನಿಲುವಂತೆ ಮಾಡಿ ಪ ಅನ್ನವನು ಬೇಡಿಕೊಂಬುವದೆಂತು ವಿಪುಳ ವಿಷವನ್ನು ಕುಡಿದಿಹ ನೀಲಕಂಠನೊಡನೆಸನ್ನುತಾಂಬರವ ಬೇಡುವುದೆಂತು ಕರಿಚರ್ಮ-ವನ್ನು ಪೊದೆದಿಹ ದಿಗಂಬರನೊಡನೆ ಶಂಭೋ 1 ಮಿರುಗುವಾಭರಣಗಳ ಬೇಡಿಕೊಂಬುದೆಂತುಉರಗಕುಂಡಲಹಾರ ವಲಯನೊಡನೆಪರಮ ಭಾಗ್ಯವ ಬೇಡಿಕೊಂಡೆ ನಾನೆಂತು ವಿಧಿಶಿರದಿ ಭಿಕ್ಷವ ಬೇಡಿ ತಿರಿದುಂಡನೊಡನೆ 2 ಕರಿತುರಗ ಮುಖ್ಯವಾಹನವ ಬೇಡುವುದೆಂತುನಿರುತ ಬಸವನ ಮೇಲೆ ಚರಿಪನೊಡನೆಕರುಣದಿಂದೆನಗೆ ಕೊಡಲೇನುಂಟೊ ಕೆಳದಿಪುರ-ದೆರೆಯ ರಾಮೇಶ ಶ್ರೀಕರ ಪಾರ್ವತೀಶ 3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ಸೊಬಗಿದೇನೊ ಶ್ರೀಹರಿ ವಿಭವ ಚನ್ನಕೇಶವಾ ಪ ಸತಿ ಸಿರಿದೇವಿಯು ಅತಿ ಚಂಚಲೆಯು ಸುತಮದನ ತಾನನಂಗನೂ ಸುತೆ ಬಾಗೀರಥಿ ವಕ್ರಮಾರ್ಗಳೋ ಅತಿಶಯ ಮೈದುನ ಕ್ಷಯರೋಗಿ 1 ಇರುವ ಮಂದಿರವು ಸಾಗರ ಮಧ್ಯವು ಉರಗನ ಮೇಲೆ ಪವಡಿಸಿಹೆ ಗರುಡನೇರಿ ಗಗನದಿ ತಿರುಗಾಡುವೆ ನೆರೆ ತುಲಸಿಯ ಮಾಲೆಯ ಹಾಕಿರುವೆ 2 ದಾನಕೊಟ್ಟವನ ಭೂಮಿಗೆ ತುಳಿದೆ ಧ್ಯಾನ ಗೈದವನ ಶಿರವರಿದೆ ಮಾನಿನಿ ಕೊಟ್ಟ ಸವಿಫಲಭಂಜಿಸಿ ಕೂರ್ಮ ವರಹನು ನೀನಾದೆ 3 ಹೀಗಿದ್ದರೂ ಸತ್ಸತಿಸುತ ಬಾಂಧವ ಭೋಗ ಭವನ ಭಾಗ್ಯಗಳಿತ್ತು ರಾಗದಿ ರಕ್ಷಿಪೆ ಶರಣರ ನಿರುತವು ಭಾಗವತಪ್ರಿಯ ಜಾಜಿಕೇಶವಾ 4
--------------
ಶಾಮಶರ್ಮರು
ನಿನ್ನದೇ ಸಕಲ ಸೌಭಾಗ್ಯ ಸಾಧನವು ಹರಿಯೆ ಪ ನಿನ್ನದೆಂಬಭಿಮಾನ ಲವಲೇಶ ಸಲ್ಲದಯ್ಯಾ ಅ.ಪ. ನಿನ್ನ ಪ್ರೇರಣೆ ಹೊರತು ತೃಣವೊಂದು ಚಲಿಸದು ನಿನ್ನಿಚ್ಛೆಗನುಸಾರ ಸಕಲ ಜಗವು ನಿನ್ನ ಚಿತ್ತಕೆ ಬಾರದಿಹುದೇನು ನಡೆಯುವುದೋ ನಿನ್ನ ನಂಬಿದವರನು ನೀನಾಗೆ ಸಲಹುವೆಯೊ 1 ಸರ್ವತಂತ್ರ ಸ್ವತಂತ್ರ ಸರ್ವಾಂತರಾತ್ಮಕನೆ ಸರ್ವಜಗದಾಧಾರ ಸರ್ವೇಶನೆ ಅಘ ದೂರ ಸರ್ವಕಾಲದಲೆನ್ನ ಗರ್ವರಹಿತನ ಮಾಡೊ 2 ಸತ್ಯಚಿತ್ತನೆ ನಿನ್ನ ಚಿತ್ತವೆನ್ನಯ ಭಾಗ್ಯ ಕರ್ತೃತ್ವದಭಿಮಾನ ಕಳೆದು ಕಾಯೊ ಮತ್ತೇನು ಬೇಡುವೆನು ಪರತಂತ್ರ ನಾನಯ್ಯ ಮುಕ್ತಿದಾಯಕ ಶ್ರೀಶ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿಲ್ಲದೆ ವೈರಿಗಳುನಿನ್ನ ಮ್ಯಾಲೆ ಬಂದರೆ ಬಿಲ್ಲುಕೆಳಗಿಟ್ಟು ಬೇಡಿಕೊಂಡೆಲೊ ಪಾರ್ಥಸಾಕೊ ಸಾಕೊ ನಿನ್ನ ಹೋಕೆ ಬಡಿವಾರವುಸಾಕು ಜನರು ನಗರೆ ಪ. ನಿನ್ನ ಪುಣ್ಯವ ಪಾರ್ಥ ಬಣ್ಣಿಸಲೊಶವಲ್ಲಇನ್ನು ಸುಭದ್ರಾ ಒಲಿಯಲು ಇನ್ನು ಸುಭದ್ರಾ ಒಲಿಯಲು ಸುಖದಿಂದ ಮಾನ್ಯವಾಗಿದ್ಯೊ ಜನರೊಳು 1 ಕನ್ಯೆ ಸುಭದ್ರೆ ನಿನ್ನ ಮದುವ್ಯಾಗಿಅನ್ನ ವಸ್ತ್ರದ ನೆಲಿಗಂಡ್ಯೊಅನ್ನ ವಸ್ತ್ರದ ನೆಲಿಗಂಡ್ಯೊ ಎಲೊ ಪಾರ್ಥನಿನ್ನ ಭಾಗ್ಯವನ್ನೆ ಅರಿಯಲೊ ಪುರುಷ 2 ಗಿಳಿ ಮಾತಿನ ಜಾಣ ಹೊಳೆವು ಎಷ್ಟೆ ್ಹೀಳಲ್ಯೊಬಳೆಯನಿಟ್ಟದ್ದು ಮರೆತೇನೊಬಳೆಯನಿಟ್ಟದ್ದು ಮರೆತೇನೊ ಸುಭದ್ರಾತಿಳಿಯದೆ ನಿನ್ನ ಬೆರೆದಳೊ ಎಲೊ ಪಾರ್ಥ 3 ಹೆರಳು ಹಾಕಿಸಿ ಕೊಂಡು ತಿಳಿಯಲಿಲ್ಲವೊ ಬುದ್ದಿಇಳೆಯೊಳು ಇದು ಅಪವಾದ ಇಳೆಯೊಳಗಿದು ಅಪವಾದ ಬಲರಾಮ ಹಳಿಯದೆ ನಿನ್ನ ಬಿಡವೋನೆ ಎಲೊ ಪಾರ್ಥ4 ದನಗಾಹಿ ನೀನೆತ್ತ ವನಜಕುಸುಮಳೆತ್ತಕನಕ ಕಬ್ಬಿಣಕೆ ಸರಿಯೇನೊಕನಕ ಕಬ್ಬಿಣಕೆ ಸರಿಯೇನೊ ಸುಭದ್ರೆಗೆಅಣಕವಾಡಿದನೆ ರಮಿಯರಸು5
--------------
ಗಲಗಲಿಅವ್ವನವರು
ನೀ ಕೈಯ ಬಿಡಬೇಡವೋ ನರಹರಿ ಪ ನೀ ಕೈಯ ಬಿಡಬೇಡ ನಾಕೆಟ್ಟರೂ ಬೇಡ ನೀ ಕೊಟ್ಟ ಫಲವಿನ್ನು ಸಾಕೋ ಮಾಂಗಿರಿರಂಗ ಅ.ಪ ನನ್ನ ಕಾಯುವ ಭಾಗ ನಿನ್ನದಾಗಿರಲಯ್ಯ ಇನ್ನಾವುದನು ಕೇಳ್ವುದೆನ್ನ ಭಾವದೊಳಿಲ್ಲ ಸನ್ನುತಾಂಗ ಕೃಷ್ಣ ಪನ್ನಗಶಯನ [ಉನ್ನತದಿ ಸದಾ ಭಜಿಸುವೆನು ನಿನ್ನ] 1 ಆಡುವಾ ನುಡಿಗಳು ನೋಡುವಾ ನೋಟವು ಮಾಡುವ ಕಾರ್ಯವು ನಿನ್ನದಾಗಿರಲು ಮೂಡಿಸು ಮನದಲ್ಲಿ ತವಪಾದಭಕ್ತಿಯ ಜೋಡಿಸಿ ಕೈಗಳ ಮುಗಿವೆನೋ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ನೋಡಿದರೆ ಏನಾÀಗಲೊಲ್ಲದೊ ಪ ಶ್ರೀ ನಿಕೇತನ ನಾನೇ ನಿದರ್ಶನ ಅ.ಪ ಪೂಜೆಯ ಮಾಡಿದ ಪುಣ್ಯದ ರಾಶಿಯು ರಾಜಿಸುತಿರುವುದೊ ಎನ್ನಯ ಶಿರದಲಿ1 ಸಾಕಲು ಹೆದರಿದ ಪರಿವಾರವನು ವ್ಯಾಕುಲವಿಲ್ಲದ ಗೋಕುಲ ಮಾಡಿದಿ 2 ಈ ಮಹಾಭಾಗ್ಯವು ನಿನ್ನದೋ ಶಿಷ್ಯರ ಪ್ರೇಮದ ಕವಚವ ಧಾರಣೆ ಮಾಡಿದೆ 3 ಪಾತ್ರನು ನಿನ್ನಯ ಕರುಣಕೆ ನಾನಿರೆ ಶತ್ರುಗಳೆಲ್ಲರು ಮಿತ್ರರಾಗಿರುವರೋ 4 ನಗುವೆನು ಕುಣಿವೆನು ನಗಿಸುವೆ ಕುಣಿಸುವೆ ಸೊಗಸನು ನೋಡಿ ನೀ ನಗೆಲೋ ಪ್ರಸನ್ನನೆ 5
--------------
ವಿದ್ಯಾಪ್ರಸನ್ನತೀರ್ಥರು
ನೀನಹುದೋ ಶ್ರೀ ಹರಿ ಮುನಿಜನರ ಸಹಕಾರಿ ಅನಾಥÀರಿಗಾಧಾರಿ ನೀನೆವೆ ಪರೋಪರಿ ಧ್ರುವ ಪತಿತ ಪಾವನ ಪೂರ್ಣ ಅತಿಶಯಾನಂದ ಸುಗುಣ ಸತತ ಸುಪಥ ನಿಧಾನ ಯತಿ ಜನರ ಭೂಷಣ1 ಬಡವರ ನೀ ಸೌಭಾಗ್ಯ ಪಡೆದವರಿಗೆ ನಿಜ ಶ್ಲಾಘ್ಯ ದೃಢ ಭಕ್ತರಿಗೆ ಯೋಗ್ಯ ಕುಡುವದೇ ಸುವೈರಾಗ್ಯ 2 ಭಾಸ್ಕರ ಕೋಟಿ ಲಾವಣ್ಯ ಭಾಸುತಿಹ್ಯ ತಾರ್ಕಣ್ಯ ದಾಸ ಮಹಿಪತಿ ಜನ್ಮ ಧನ್ಯ ಲೇಸುಗೈಸಿದಿ ನಿನ್ನ ಪುಣ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು