ಒಟ್ಟು 908 ಕಡೆಗಳಲ್ಲಿ , 97 ದಾಸರು , 731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸ ನಿನಗೆ ನಾ ಮಣಿದು ಫಲವೇನೊ ಕಾಣಿಸದೊ ನಿನಗೆನ್ನ ಕಷ್ಟ ಪ. ಜಾಣತನವಿದನೆಲ್ಲಿ ಮಾನನಿಧಿ ಕಲಿತೆಯೊ ಗಾನವಿಲೋಲ ಸ್ವಾಮಿ ಪ್ರೇಮಿ ಅ.ಪ. ಎಷ್ಟು ಕೂಗಲು ದಯವು ಪುಟ್ಟಲಿಲ್ಲವೊ ನಿನಗೆ ಕೃಷ್ಣಮೂರುತಿಯೆ ಕೇಳೊ ಕಷ್ಟಪಡಿಸುವುದೀಗ ದಿಟ್ಟತನವೇ ನಿನಗೆ ಶ್ರೇಷ್ಠ ನೀನೆನಿಸಿಕೊಂಡು ಪಟ್ಟವ್ಯಾತಕೆ ನಿನಗೆ ಮೂರು ಲೋಕದ ರಾಜ್ಯ ಬಿಟ್ಟು ಬಿಡು ನೀನೀಗಲೆ ದೃಷ್ಟಿಯಿಂದಲಿ ನೋಡಿ ನಿನ್ನ ತೋರೆಂದೆನಲು ಸೊಟ್ಟ ತಿರುಹಿರುವೆ ಮುಖವ ದೇವ 1 ತೋರೊ ಮೋರೆಯನೆನಲು ನೀರ ಪೋಗುವೆ ಬೆನ್ನು ಭಾರ ಪೊತ್ತು ಕೋರೆ ತೆರೆವೆ ಘೋರ ರೂಪವ ತೋರಿ ಈ ರೀತಿ ಬೆದರಿಸುವೆ ದಾರಿ ಎನಗಿನ್ನಾವುದೊ ನಾರಿಯನೆ ಪೆತ್ತು ನೀ ನಾರಿಯನೆ ಕೊಂದು ನಿನ್ನ ನಾರಿ ಚೋರನ ವಧಿಸಿದೆ ನಾರೆರೋಸ್ತ್ರವ ಕದ್ದು ನಾರಿಯರ ವ್ರತ ಕೆಡಿಸಿ ಏರಿ ಓಡಿದೆ ಕುದುರೆಯ ಜೀಯಾ 2 ಈ ಪರಿಗೈದರೆ ಕಾಪಾಡುವವರ್ಯಾರೊ ಭೂಪರೈವರ ಪೊರೆದನೆ ತಾಪಪಡುವುದು ನಿನಗೆ ತೋರ್ಪುದಿಲ್ಲವೆ ದೇವ ಪಾಪಿ ಎಂದೆನಬೇಡವೊ ನೀ ಪಾರುಗೊಳಿಸಬೇಕೀಪರಿಯ ಬವಣೆಗಳ ಶ್ರೀಪತಿಯೆ ಶ್ರೀನಿವಾಸ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದೆಕಾಪಾಡುವವರನರಿಯೆ ದೊರೆಯೆ 3
--------------
ಅಂಬಾಬಾಯಿ
ಶ್ರೀನಿವಾಸ ಪೂರಿಸಭಿಲಾಷ ಪ್ರಾಣ ಪಾಲೇಶ ಏನಿದು ಸಾವಕಾಶ ಪ. ಹಿಂದಿನ ಪ್ರಹ್ಲಾದ ಮೈಥಿಳ ಮತ್ತಜಾಮಿಗಳ ಭಾರತ ಕುಂಡಗೋಳ- ಗಾಂದಿನೀಸುತ ಧ್ರುವ ಪಾರ್ಶದಿ ಅಂಬರೀಷಾದಿ ಭಕ್ತರುಗಳಂತೆ ಎಂದೀ ಶ್ರುತಿ ಪುರಾಣಗಳ ಆದರೆ ನನ್ನನು ಬರಿದೆ ಇದು ರೀತಿಯೆ ನಿನಗೆ1 ಬಂದಡಿಗಡಿ ಇಡುತ ಸಾಮಜವಾಹನ ಬೇಡಿದಭೀಷ್ಟ ನೀಡಿದ ಬಳಿಕಾತನು ನುಡಿದ ಒಂದನಾದರು ಮನಕೆ ಅಭಯವನಿತ್ತು ಪೊರೆದೆ ನಾ ಮಾಡಿದಪರಾಧವು ಅತಿ ಸ್ವಲ್ಪವು ಅದಕೆಣೆಯಾಗದಿರಲು ಪಾಲಿಪರ ಕಾಂಬೆನೆಲ್ಲಿ 2 ಪಾರ್ಥಗೆ ಸಾರಥಿಯೆನಿಸುತ ರಥ ನಡಸುತ ಕುರುಸೇನೆಯೊಳಿರುತ ಗಾಂಗೇಯ ನಗುತ ಶೋಣಿತವ ಹರಿಸಲು ನಿಯಮದ ತೊರಿದೆ ಭಕ್ತವತ್ಸಲತೆಯ ತೋರಿದೆ ಸುಖವಾರಿದ ವೆಂಕಟಾದ್ರಿಯೊಳ್ಮೆರೆದೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ಭಕ್ತಪೋಷಣಭೂಷ ಮನ್ಮಂದಿರವಾಸ ಶ್ರೀನಿವಾಸ ಪಾದಾತನ ಜನರನು ಸಾನುರಾಗದೊಳ್ಮಾನಿಸಿ ಸಲಹುವ ಪ. ಬಾಲತ್ವದಿಂದ ಬಹುವಿಧವಾದ ಭಕ್ತಿಯನಿತ್ತು ಲಾಲಿಸಿ ಪೊರೆದ ಪೂಜ್ಯಪಾದ ಈ ಮಧ್ಯದೊಳಾದ ಧಾಳಿಗಳನು ನಿರ್ಮೂಲಗೈದ ಕರು- ಣಾಳು ರಾಜ ನಿನ್ನಾಳಾಗಿಹೆನು 1 ಪಂಚಭೌತಿಕವಾದ ತನುವಿಂದ ಆಗುವ ತಪ್ಪ ಕಿಂಚಿನ ವರದ ನೀ ದಯದಿಂದ ಕ್ಷಮಿಸೈ ಗೋವಿಂದ ವಂಚಿಸಿ ದಾನವದಿತಿಜರ ಸುರರಿಗೆ ಹಂಚಿದಿ ಸುಧೆಯನು ಶುಭಕರದಿಂದ 2 ಕಮಲಾಬ್ಜಭವರುದ್ರೇಂದ್ರಾದಿಗಳು ಪಾದಯುಗ ಕಲ್ಪ ದ್ರುಮ ನಿನ್ನ ನೆಳಲನಾಶ್ರೈಸಿಹರು ಕರುಣಾರಸದೋರು ನಮಿಸುವೆ ಎಂಬೀ ಮಮತೆಯಿಂದ ಎ- ನ್ನಮಿತಪರಾಧವ ಕ್ಷಮಿಸುವ ಹರಿಯೆ 3 ಇಂದ್ರಿಯಂಗಳ ಭಾವನೆ ಬಹುಘೋರ ಅದರಲ್ಲಿ ಮುಳುಗಿದ- ರಿಂದಿರಾಧವ ನೀನೆ ಬಹುದೂರ ಆ ರೀತಿಯ ಭಾರ ಹೊಂದಿದ ದಾಸರಿಗೆಂದು ತಾರಾ- ಮಂದರಾದ್ರಿಧರಾ ಮಾಧವಧೀರ 4 ಚರಣ ಸಂಸ್ಮರಣೆ ಮಾತ್ರ ಬೇಕು ಇದರಿಂದ ಸರ್ವ ಪುರುಷಾರ್ಥ ಲಬ್ಧಿಗಿನ್ನು ಸಾಕು ಇರುವುದೆ ಈ ನಾಕು ಉರಗ ಗಿರೀಂದ್ರನ ಶಿರದಲಿ ಮಂಡಿಸಿ ಮೆರೆವ ಸುಖಾಂಬುಧಿ ಸುರವರ ನಾಥ5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಮತ್ ತಂದೆವರದಗೋಪಾಲದಾಸ ರಾಯಾವೃಂದದಿಂದಲಿ ನಿಮಗೊಂದಿಸುವೆನೋ ಜೀಯಾ ಪ. ಇಂದಿನವರೆಗೆ ನಾನಿಂದ್ಯ ಜನರೊಳು ಕೂಡಿನಿಂದ್ಯ ಮಾಡುತ ಪರರ ಡಂಭತನದಲಿ ಮೆರೆದೆನೊಕಂದನಾ ಕುಂದುಗಳ ಒಂದನೆಣಿಸದೆ ಗುರುವೇಮಂದಜನ ರಾಶಿಯೊಳು ಬೆಂದುಹೋಗುವುದನು ಕಂಡುಅಂದದಲಿ ನೀ ಹಿಡಿದೆಳೆತಂದೂ 1 ಮುಂದೆ ಪೇಳುವೆ ಕೇಳೋಚಂದ್ರಮೌಳಿಯೆ ನಿನ್ನ ಪ್ರೀತಿಪಾತ್ರನಾದಸುಂದರಾಂಗನ ಮುಖದೀ ನೀನಿಂದು ಅಘವೃಂದಗಳ ಹೊಡೆದೋಡಿಸೀಮಿಂಚಿನಿಂದಕ್ಷ ರ, ಯ, ಮ ಎಂಬಕ್ಷರಗಳ ಕಲ್ಪಿಸಿಎಂದಿಗೂ ಮರೆಯದಂಥ ತಂದೆವರದವಿಠಲನೆಂಬಅಂಕಿತದಿಂದ ಬಂಧನವ ಮಾಡಿ ಭಾವ ಸಂವತ್ಸರಫಾಲ್ಗುಣ ಶುದ್ಧ ತ್ರಯೋದಶಿಚಂದ್ರವಾರ ಅರುಣೋದಯ ಕಾಲದೀಕಡೆಕೋಳ ಶ್ರೀ ವೆಂಕಟೇಶನ ಸನ್ನಿಧಾನದಿಅನುಗ್ರಹಿಸಿದೆಯೋ ಮಹಾರಾಯಾಮಂದಮತಿ ನಾ ನಿಮ್ಮ ಮಹಿಮೆಯನು ಪೇಳಲೆನ್ನಳವೆತವಪಾದಾರವಿಂದದಿ ಅನವರದ ಜ್ಞಾನ ಭಕುತಿವೈರಾಗ್ಯವನಿತ್ತು ರಕ್ಷಿಸಬೇಕೋತಂದೆವರದವಿಠಲದೂತಾ ಮನೋ ನಿಯಾಮಕ ದೊರೆಯೇ
--------------
ಸಿರಿಗುರುತಂದೆವರದವಿಠಲರು
ಶ್ರೀರಂಗ ಯಾತ್ರೆಯನು ಮಾಡಿಬಾರೆಂದೆನ್ನ ಈ ರೀತಿಯನುವ ಮಾಡಿದೆಯ ಸ್ವಾಮಿ ಪ ಕಾರುಣ್ಯನಿಧಿಯೆ ವೇಲಾಪುರಾಧೀಶ್ವರನೆ ಆರುಣ್ಯದೊಳು ಕೆಡಹಿದೆಯ ಸ್ವಾಮಿ ಅ.ಪ ದಾರಿಯನು ತೋರಲೈತಂದ ಶ್ರೀವೈಷ್ಣವನು ಸೇರಿಸಿದ ನೀಯಡವಿಯಸ್ವಾಮಿ ಕಾರುಗತ್ತಲೆ ಸುರಿವ ಮಳೆಯ ಸಿಡಿಲಿನ್ನೆಲ್ಲಿ ಸೇರುವೆನು ಈ ಗಿರಿಯೊಳೂ ಸ್ವಾಮಿ 1 ನಾರಿ ಮಕ್ಕಳು ಭೃತ್ಯರೆಲ್ಲಿ ಪೋದರೋ ಯೇನು ಕಾರಣಬಂದೆನಯ್ಯ ಸ್ವಾಮಿ ಭೂರಮಣ ತ್ರಿಭುವನಾಧಾರ ನೀ ನಲ್ಲದಿ ನ್ನಾರು ಕಾವರೆನ್ನನು ಸ್ವಾಮಿ 2 ಘುಡಿಘುಡಿಸುತಲಿವೆ ಪುಲಿ ಕರಡಿ ಸುತ್ತಲು ಭೋ ರಿಡುತಲಿವೆ ಭಕ್ಷಿಸುವಡೇ ಸ್ವಾಮಿ ಬಿಡದೆ ಕರಿಗಳು ಕೂಗಿ ಕಂಗೆಡಿಸುತಲಿವೆ ಇದೇ ಕಡೆಗಾಲವಾಯಿತೆಲ್ಲೋ ಸ್ವಾಮಿ 3 ನಡೆವರೆಡೆಗಾಣೆ ಇಲ್ಲಿರುವುದಾಗ ದಾಗದು ಕಷ್ಟ ಬಡುವುದಕೆ ಗುರಿಯಾದೆನೇ ಸ್ವಾಮಿ ಎಡಬಲಕ್ಕೊಲೆಯೆ ಕಪ್ಪು ಕಲ್ಲು ಮುಳ್ಳುಗಳಿದೆಕೋ ಒಡೆಯ ಕೈವಿಡದೆ ಸಲಹು ಸಲಹೋ ಸ್ವಾಮಿ 4 ಒಂದೆಸಗಲೇಳಡಸಿತೆಂದು ಪೇಳುವ ನುಡಿಗೆ ಸಂದು ಬಸವಳಿದೆನೆಲೋ ಸ್ವಾಮಿ ಇಂದು ಸಂಧ್ಯಾ ಗಾಯತ್ರಿ ಕರ್ಮವುಳಿದುದರ ವಿಂದಾಕ್ಷ ಸುಮ್ಮನಿಹರೇ ಸ್ವಾಮೀ 5 ಎಂದೆಂದು ಮಾತನಾಡುವನಾಥರಕ್ಷಕನೆ ಬಂದುದೀಗೇನು ಸಿರಿಯು ನಿನಗೇ ಬಂಧನವ ಬಿಡಿಸು ದುರ್ಮರಣದಲಿ ಕೊಲ್ಲದಿರು ತಂದೆ ವೈಕುಂಠ ರಮಣಾ ಸ್ವಾಮೀ 6
--------------
ಬೇಲೂರು ವೈಕುಂಠದಾಸರು
ಶ್ರೀರಂಗನಾಥ ನಂಬಿದೇ ನಿನ್ನ ನಾನೇ ಅನಾಥ ಪ ಅನಾಥರಕ್ಷಕ ಎನ್ನಾ ಪ್ರೀತಿಯಿಂದಲೆ ಕಾಯೊ ಲೋ ಕನಾಥನೆಂದು ಬಂದು ನಂಬಿದೆ ನಿನ್ನ ಅ.ಪ ನಿಮ್ಮ ರಘುಪತಿ ನಿಮ್ಮ ವಿಭೀಷಣಗೆ ಕೊಡಲು ತಾಮುನ್ನಾ ಶ್ರೀರಂಗಕ್ಷೇತ್ರದಿ ನೆಲಸಿ ಸಂತೋಷದಿ ಧರ್ಮವರ್ಮಾದಿ ಚೋಳೇಂದ್ರ ಪೂಜಿತಪಾದ 1 ಕಂದ ಪ್ರಹ್ಲಾದ ಕರೆಯೆ ಕಂಬದಿಂದಲೆ ಬೇಗ ಬಂದು ಅವನ ತಂದೆಯನು ಸಂಹರಿಸಿದೆ ಕಂದನ ಕಾಯ್ದ ಗೋವಿಂದ ರಕ್ಷಿಸೊ ಎನ್ನ 2 ಅಜಮಿಳ ಕರೆಯೆ ಆಪತ್ತಿಗೆ ಬಂದು ನೀನೊದಗೆ ನಿಜಸ್ಮರಣೆ ಮಾತ್ರದಲವನ ದುರಿತವೆಲ್ಲವ ಕಳೆದು ನಿಜ ಪಾದವನಿತ್ತೆ ಕರುಣದಿಂದಲೆ ರಂಗ 3 ಕಂದ ಧ್ರುವ ತಾನು ಅಡವಿಯಲಿ ನಿಂತು ತಪವನು ಚಂದದಿ ಮಾಡಲು ಬಂದು ಸೇವೆಯನಿತ್ತೆ ಆ ನಂದಪದವನಿತ್ತ ಸುಂದರಾಯನೆ ನೀನು 4 ಅರ್ಕಸುತನಾಗ ನಿಮ್ಮನ್ನು ಸೇರಿ ಸೌಖ್ಯವ ಬೇಗ ಮಾಡೆ ಸೊಕ್ಕಿದ ವಾಲಿಯನೊಂದು ಬಾಣದಿಂ ಕೊಂದು ಮರ್ಕಟಗೆ ರಾಜ್ಯವನಿತ್ತ ರಂಗಯ್ಯ ನೀನು5 ಮಕರಿ ಕಾಲ್ಪಿಡಿಯೆ ಮತಂಗಜ ನಿಮ್ಮನು ಕರೆಯೆ ನಕ್ರವ ಕೊಂದು ಚಕ್ರದಿ ಅತಿವೇಗದಿಂ ಕರಿಯ ರಕ್ಷಿಸೆ ಬಂದೆ ಕರುಣದಿಂದೆ 6 ಭವಕೆ ನಾ ಬೆದರಿ ಬಂದೆನೊರಂಗ ಕಾಯೋ ನೀ ಭವದಿ ಈಶಣತ್ರಯವನ್ನು ಬಿಡಿಸಿ ನಿನ್ನಯ ಪಾ ದವಾಸವ ಮಾಡಿಸೊ ವಾಸುಕಿಶಯನನೆ 7 ಆರುಜನ ಕಳ್ಳರು ಎನ್ನಲಿ ಸೇರಿ ಬಾಧಿಸುತಿಹರು ದೂರಮಾಡವರನ್ನು ಸೇರಿಹೃದಯದಲ್ಲಿ ಶ್ರೀನಿವಾಸನೆ ನಿಮ್ಮ ಪಾದದೊಳಿರಿಸೆನ್ನ 8
--------------
ಯದುಗಿರಿಯಮ್ಮ
ಶ್ರೀರಾಘವೇಂದ್ರರ ಸ್ತೋತ್ರ ವಿನಯಾದಿಂದಲಿ ನಮಿಸುವೆನಾ ವೃಂದಾ ವನದಿ ರಾಜಿಪ ರಾಘವೇಂದ್ರ ಗುರವಿನ ಪ ದುರಿತವಾರಣ ಪಂಚಾನನನ ನರ - ಹರಿರೂಪಸ್ತಂಭದಿ ಪ್ರಕಟಗೈಸಿದನ ಹರಿಭಕ್ತಾಗ್ರಣಿಯೆಂದೆನಿಪನ ನಾರ - ದರ ಉಪದೇಶಗರ್ಭದಿ ಕೈಕೊಂಡಿಹನ 1 ಸಿರಿವ್ಯಾಸತೀರ್ಥರೆನಿಪನ ಪುರಂ - ದರ ದಾಸಾರ್ಯರಿಗು ಪದೇಶ ಗೈದವÀನ ವರಚಂದ್ರಿಕಾ ರಚಿಸಿದನ ದುಷ್ಟ ಪರಮಾದ್ರಿಗಳಿಗೆ ಕುಲಿಶನೆನಿಪನ 2 ಶ್ರೀ ಸುಧೀಂದ್ರ ಕರಾಬ್ಜಜನ ದಿವ್ಯ ಭಾಸುರ ಪರಿಮಳ ಗ್ರಂಥ ಕರ್ತರನ - ಮೀಸಲ ಮನದಿ ಭಜಿಪರನ ದೋಷ - ನಾಶನ ಗೈಸಿ ಪೋಷಿಸುವ ಶಕ್ತರನ3 ವರಮಂತ್ರ ಸದ್ಮನಿಲಯನ ಶ್ರೀ - ಗುರು ಮಧ್ವಮತ ದುರಂಧರದೆನಿಸುವನ ಹರಿಪ್ರೀತಿ ಪೂರ್ಣಪಾತ್ರರನ ಈ ಧರಿಯೊಳು ಬಹುಪರಿ ಮೆರೆವ ಮುನಿಪನ 4 ತುಂಗಭದ್ರಾತೀರವಾಸನ ಶುಭ ಮಂಗಲಚರಿತ ಕಮಂಡಲಧರನ ರಂಗವರದೇಶ ವಿಠಲನ ಪದ ಭೃಂಗ ಯತಿಕುಲ ಕಂಜಾರ್ಕ ಸನ್ನಿಭನ 5
--------------
ವರದೇಶವಿಠಲ
ಶ್ರೀರಾಮ ನಿನ್ನ ಪದಕೆರಗಿ ನಮಿಸಿವೆನು ತೋರೆನಗೆ ನಿಜರೂಪ ಪರಿವಾರ ಸಹಿತ ಪ. ಶ್ರೀ ಗುರುಗಳಿಗೆರಗಿ ಅವರ ಕರುಣಾಬಲದಿ ಈಗ ಈ ಜನ್ಮದಲಿ ನಿನ್ನ ಭಜಿಪೆ ನಾಗಶಯನನೆ ನಿನ್ನ ಜನ್ಮಕರ್ಮದ ದಿನದಿ ಬೇಗ ಬಂದೆನ್ನೊಳಗೆ ನೆಲಸಿದೆಯೊ ದೇವ 1 ನಿನ್ನ ದರುಶನಕೆಂದು ಘನ್ನ ಯೋಗಿಗಳು ಬರೆ ಮನ್ನಿಸೆ ಇರುತಿರಲು ದ್ವಾರಪಾಲಕರು ಇನ್ನವರ ಶಾಪದಲಿ ದೈತ್ಯಕುಲದಲಿ ಜನಿಸೆ ಮುನ್ನವರ ಪೊರೆಯಲು ಭೂಮಿಯೊಳು ಬಂದೆ 2 ದಶರಥಗೆ ಸುತನಾಗಿ ತಾಟಕಿಯ ಸಂಹರಿಸಿ ಅನುಜ ಕುಶಲದಿಂದಲಿ ಶಿಲೆಯ ಹೆಣ್ಣುಗೈಯುತ ಬಂದು ಶಶಿಮುಖಿ ಸೀತೆಯನು ಕರಪಿಡಿದ ದೇವ 3 ಧನುವ ಮುರಿದುದ ಕೇಳೀ ಜಮದಗ್ನಿ ಕುವರನು ನಿನ ಸಂಗಡದಲಿ ಕಾಳಗಕೆ ಬರಲು ದನುಜರಿಗೆ ಭ್ರಮೆಗೊಳಿಸಿ ಕನಲುತಿಬ್ಬರು ಕಾದಿ ಘನಬಲ ಗೆಲಿದಂಥ ಅನುಗುಣನೆ ರಾಮ 4 ಅನುಜ ಸೀತೆ ಸಹಿತದಿ ವನಕೆ ಪ್ರೀತಿಯಿಂದಲಿ ಪೋದೆ ನೀತಿಯನು ತಿಳಿದು ಪಾತಕವ ಹರಿಸುವ ಪರಮ ಪಾವನ ಮೂರ್ತಿ ಈ ತೆರದ ಲೀಲೆಯನು ತೋರಿದೆಯೊ ಜಗಕೆ 5 ಕಂಡು ಮಾಯಾಮೃಗವ ಅಂಡಲೆದು ಅದರೊಡನೆ ಭಂಡ ರಾವಣ ಬಂದು ಭಿಕ್ಷುಕನ ತೆರದಿ ಲಂಡನತದಲಿ ಸೀತೆಯನು ಕದ್ದು ಓಡಲು ಕಂಡು ನಿರ್ಜನ ಗೃಹವ ಬೆಂಡಾದ ರಾಮ 6 ಅನುಜನೊಡನೆ ವನವ ಅಲೆದಲೆದು ಕಂಗೆಟ್ಟು ಘನ ಪಕ್ಷಿಯಿಂದಲಿ ವಾರ್ತೆ ತಿಳಿದು ಹನುಮ ಸುಗ್ರೀವರಿಗೆ ಒಲಿದು ವಾಲಿಯ ಕೊಂದು ವನಿತೆ ಸೀತೆಯನರಸೆ ವಾನರರ ಕಳುಹಿದೆ 7 ಹನುಮನಿಂದಲಿ ಸುಟ್ಟು ದನುಜಪುರ ಉಂಗುರವ ವನಿತೆ ಸೀತೆಗೆ ಕೊಟ್ಟು ವಾರ್ತೆ ತರಿಸಿ ವನಧಿಗೆ ಸೇತುವೆಯ ಕಟ್ಟಿ ವಾನರರೊಡನೆ ದನುಜ ರಾವಣ ಸಹಿತ ರಕ್ಕಸರ ಕೊಂದೆ 8 ಅಗ್ನಿಯಿಂ ಸೀತೆಯನು ಶುದ್ಧಳೆನಿಸಿ ಗ್ರಹಿಸಿ ವಿಘ್ನವಿಲ್ಲದ ಪದ ವಿಭೀಷಣಗಿತ್ತು ಮಗ್ನನಾಗಿರೆ ಭರತ ನಿನ್ನ ಪದಧ್ಯಾನದಲಿ ಅಗ್ನಿಸಖಸುತನೊಡನೆ ವಾರ್ತೆ ಕಳುಹಿಸಿದೆ 9 ಬಂದೆದುರುಗೊಳ್ಳೆ ಭರತನು ಸಕಲ ಪರಿವಾರ ಬಂದಯೋಧ್ಯೆಗೆ ಸಕಲ ಸನ್ನಾಹದಿ ಅಂದು ಸಿಂಹಾಸನದಿ ಪಟ್ಟಾಭಿಷೇಕವಗೊಂಡು ಬಂದ ಭಕ್ತರಿಗೆ ಇಷ್ಟ್ಟಾರ್ಥ ಸಲಿಸಿದೆಯೊ 10 ಕೊಟ್ಟು ಕಪಿಗೆ ಬ್ರಹ್ಮಪಟ್ಟದ ಪದವಿಯನು ಶ್ರೇಷ್ಠನೆನಿಸಿದೆಯೊ ಜಗಕೆ ಬೆಟ್ಟದೊಡೆಯ ಇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಎನಗೆಕೆಟ್ಟ ಸಂಸೃತಿ ಬಿಡಿಸಿ ಕೊಟ್ಟಭಯ ಸಲಹೊ 11
--------------
ಅಂಬಾಬಾಯಿ
ಶ್ರೀವೇದವ್ಯಾಸತೀರ್ಥರು ನಮಿಸುವೆನು ನಮಿಸುವೆನು ಮುನಿವರ್ಯರೇ ಪ ಅಮಮ ನಿಮ್ಮಯ ಮಹಿಮೆಯ ಪೊಗಳಲೆನ್ನಳವೇ ಅ.ಪ. ಭಾವ ಬೋಧಾರ್ಯ ವಿಮಲ ಸತ್ಕರಜಾತಭಾವಿ ಬೊಮ್ಮನ ಮತದಿ ಪೂರ್ಣ ವಿಖ್ಯಾತಧಾವಿಸಿ ನಿಮ್ಮಡಿಗೆ ಓವಿ ನಮಿಪರ ತ್ರಾತಕಾವುದೆಮ್ಮನು ಬಿಡದೆ ಪಾವಮಾನಿಯ ಪ್ರೀತ 1 ಇಂದ್ರಗ ವರಜನಾಮ ಮಂದವಾಹಿನಿ ತಟದಿಚೆಂದುಳ್ಳ ಮಹತೆನಿಪ ವೃಂದಾವನದೊಳು |ಇಂದಿರೇ ರಮಣ ಶಿರಿ ರಾಮಚಂದ್ರನ ಮನದಿಛಂದಾಗಿ ಧ್ಯಾನಿಸುತ ನಿಂದ ಯತಿವರ್ಯಾ 2 ಮೋದ ಮುನಿ ಸದ್ಭಾವ ಬೋಧಿಸುತ ಶಿಷ್ಯರಿಗೆವೇದ ವ್ಯಾಸರ ಪ್ರೀತಿ ಆದರದಿ ಗಳಿಸೀ |ಮೋದ ದಾಯಕನೆನಿಸಿ ಸಾಧುಗಳ ಸಲಹುತ್ತಸಾಧಿಸಿದೆ ಸತ್ಕೀರ್ತಿ ರಾಜ ಸನ್ಮಾನ್ಯ 3 ತಿಮಿರ ಪಾದ ನೀ ತೋರೊ ಮುನಿಪ 4 ಬ್ರಹ್ಮಚರ್ಯಾಖ್ಯ ಮಹ ಮಹಿಮೆ ಪರಿಕಿಸಲು |ಸನ್ಮನದಿ ನೃಪನೆನ್ನ ನಿಮ್ಮ ಕೌಪೀನವಾ |ಒಮ್ಮನದಿ ಅಗ್ನಿಗಿಡೆ ದಹಿಸಲಾರದೆ ಪೋದಸನ್ಮಹಿಮ ವೇದೇಶ ಸನ್ನುತನೆ ಪೊರೆಯೋ 5 ಹರಿಭಕ್ತ ಸುರತರುವೆ ವರ ಸು ಚಿಂತಾಮಣಿಯೆಪರಮ ಸೇವಾಸಕ್ತ ಶರಣ ಸುರಧೇನು |ಹರಿಯ ಸರ್ವೋತ್ತಮತೆ ಸ್ಥಿರ ಪಡಿಸೆ ಸಂಚರಿಸಿಮೆರೆದ ವೇದವ್ಯಾಸ ತೀರ್ಥ ಸದ್ದಭಿಧಾ 6 ಘನಗಿರಿ ನರಹರಿಯ ಪದವನುಜ ಸಂಜಾತಮಿನುಗುತಿಹ ವಾಮನಾ ನದಿಯ ಸಂಗಮದಿಗುಣಪೂರ್ಣನಾದ ಗುರು ಗೋವಿಂದ ವಿಠ್ಠಲನ |ಮನದಿ ಧ್ಯಾನಾಸಕ್ತ ಪೊರೆಮಹ ವಿರಕ್ತ 7
--------------
ಗುರುಗೋವಿಂದವಿಠಲರು
ಶ್ರೀಶೈಲದೊಳಗಿಪ್ಪ ಸ್ವಾಮಿ ಪುಷ್ಕರಣಿ ಇತಿ ಹಾಸವ ದಿಲೀಪನೃಪ ಬೆಸಗೊಳಲು ಕೇಳಿ ದು ಕೇಳಿ ಸಂತೋಷಿಸುವುದು ಪ ಮುನಿಕುಲೋತ್ತಮ ನೆನಿಸಿ ದುರ್ವಾಸಋಷಿ ದಿಲೀ ಪನ ಸದನವೈದಿರಲು ಕೇಳಿ ಸಂತೋಷದಲಿ ಮುಗಿದು ವಿಜ್ಞಾಪಿಸಿದನು ಋಷಿಗೆ ಅನಿಮಿಷೇಶಾ ವೆಂಕಟನ ನಾಮಧೇಯ ಕುಂ ಭಿಣಿ ಯೊಳಿಪ್ಪಾಖ್ಯಾನ ತೀರ್ಥಗಳ ವೈಭವಗ ದುರ್ವಾಸ ಪೇಳೊದಗಿದಿ 1 ಕೇಳು ರಾಜೇಂದ್ರ ವೆಂಕಟ ಪರ್ವತನು ಮೇರು ಶೈಲಾತ್ಮಜನು ವಾಯು ಶೇಷರ ಸುಸಂವಾದ ಸ್ವರ್ಣ ಮುಖರೀ ತೀರದಿ ಬೀಳಲ್ಕೆ ನೊಂದು ಪ್ರಾರ್ಥಿಸಿದ ಶೇಷನು ಎನ್ನ ಮ್ಯಾಲೆ ಮಲಗಿಪ್ಪ ತೆರದಂತೆ ದಯದಿಂ ನೀನೆ ಶೇಷಾದ್ರಿಯೆನಿಸುತಿಹುದು 2 ಈ ನಗೋತ್ತಮದಾದಿ ಮಧ್ಯಾವಸಾನ ಪ್ರ ಸೂನು ಫಲ ಸಂಯುಕ್ತ ಸಾನುಗಳ ಸುರುಚಿಕೋ ಪುಷ್ಕರಣಿ ತೀರ್ಥದ ತಟದಲಿ ಶ್ರೀನಿವಾಸನು ಬಂದು ನಿಂತ ಕಾರಣವೆನಗೆ ನೀನರುಪುವುದು ಯೆಂದು ಬೆಸಗೊಳಲು ದುರ್ವಾಸ ನೃಪಗೆ ಹರುಷೋದ್ರೇಕದಿ 3 ತೀರ್ಥೋತ್ತಮತ್ವ ಸಾಪೇಕ್ಷಿಯಿಂದಲಿ ಬ್ರಹ್ಮ ಪತ್ನಿ ಪೂರ್ವದಲಿ ಬ್ರಹ್ಮಾವರ್ತ ದೇಶದೊಳ ಪುಲಸ್ತಾಖ್ಯ ಮುನಿಪ ತತ್ತೀರದಲಿ ತಪವಗೈವೆನೆಂದೆನುತ ಬರೆ ಪುತ್ರನೆಂದರಿದು ಮನ್ನಿಸದಿರಲು ಕೋಪದಲಿ ನಿಷ್ಫಲವಯೈದಲೆಂದು ನುಡಿದ 4 ನದ್ಯೋತ್ತಮತ್ವ ಜಾಹ್ನವಿಗಿರಲಿ ಗುಣಗಳಿಂ ಸ್ವರ್ಧುನಿಯು ನೀಚಳಾದರೆಯು ಸರಿ ಲೋಕ ಪ್ರ ಪಾದ ಪ್ರಸಾದದಿಂದ ವಾಗ್ದೇವಿ ನುಡಿಗಳು ಭ ವದ್ವಂಶರೆಲ್ಲ ರಾಕ್ಷಸರಾಗಿ ಬಹಳ ವಿ ಪದಕೆರಗಿ ಬಿನ್ನೈಸಿದ 5 ಅನಭಿಜ್ಞ ಲೋಕೋಪಕಾರ ತಪವೆಂದರಿಯ ದನುಚಿತೋಕ್ತಿಗಳನಾಡಿದೆ ಮಯಾಕೃತದೋಷ ಮುನಿವರನು ಸಂಪ್ರಾರ್ಥಿಸೆ ಪುನರಪಿ ವಿಶಾಪವಿತ್ತಳು ಪ್ರಸನ್ಮುಖಳಾಗಿ ಜನಿಸಲೀ ಭವದ ಪ್ರಾಂತಕ್ಕೆವರ ವಿಭೀ ಭಗವದ್ಧ್ಯಾನಪರಳಾದಳು 6 ತೀರ್ಥೋತ್ತಮತ್ವ ಸಾಪೇಕ್ಷಯಿಂ ವಾಗ್ದೇವಿ ಮತ್ತು ತಪದಿ ಪ್ರೀತಿಗೊಳಿಸಲ್ಕೆ ದೇವದೇ ಬಿನ್ನೈಸಿದಳು ವಾಂಛಿತವನು ವ್ಯರ್ಥವಾಯಿತು ತಪವು ಬಹ್ಮ ಶಾಪದಲಿ ತೀ ರ್ಥೋತ್ತಮತ್ವವು ಕರುಣಿಸೆಂದು ಕೇಳ್ದುದಕೆ ಪ್ರ ಇನಿತೆಂದು ಕಾರುಣ್ಯಸಿಂಧು 7 ನದಿಯರೂಪಕೆ ಬ್ರಹ್ಮಶಾಪ ನಿನಗಾಯಿತ ಲ್ಲದೆ ಸರೋವರಕೆ ಬ್ಯಾರಿಲ್ಲ ಪುಷ್ಕರಣಿಗಳೊ ಸ್ವಾಮಿ ಪುಷ್ಕರಣಿ ಎನಿಸಿ ವಿಧಿಪತ್ನಿ ಶೇಷನೋದ್ದೇಶ ತ್ವತ್ ಸನ್ನಿಧಾ ನದಿ ವಾಸವಾಹೆ ಸಂದೇಹವಿಲ್ಲಿದಕೆ ಸ ಸಜ್ಜನರಿಗಖಿಳಾರ್ಥವೀವೆನೆಂದ 8 ಮೂರುವರೆ ಕೋಟಿ ತೀರ್ಥಗಳು ಭುವನತ್ರಯದೊ ಳಾರಾಧಿಸಿದರೆಯೆನ್ನ ಸ್ವಸ್ವ ಪಾಪೌಘ ಪರಿ ಧನುರ್ಮಾಸ ಸಿತಪಕ್ಷದ ಈರಾರುದಿನದಲರುಣೋದಯಕೆ ತೀರ್ಥ ಪರಿ ವಾರನೈದಿರಿ ಶುದ್ಧರಾಗುವಿರಿಯೆಂದು ತ ಪ್ರೇಷ್ಯತ್ವ ವಾಣಿಗಿತ್ತ 9 ವಾಣಿದೇವಿಯು ತೀರ್ಥರೂಪಳಾಗಲು ಕೃಷ್ಣ ವೇಣಿಸಮ ಬಕುಳ ಮಾಲಿಕೆ ತೀರ್ಥ ಭೂಮಾಭಿ ಹರಿಗೆ ನೈವೇದ್ಯರಚಿಸಿ ಪಾನೀಯ ಧೀ ಭೋಗ ಪತ್ನಿ ಪೂರ್ವದಿ ಸನ್ನಿ ಧಾನದಲ್ಲಿಪ್ಪೆನೆಂದೆನುತ ಪ್ರಾರ್ಥಿಸೆ ಶೇಷ ತಾನಿತ್ತ ಕಮಲಾಕಾಂತನು 10 ಸ್ವಾಮಿ ಪುಷ್ಕರಣಿ ನವತೀರ್ಥಮಾನಿಗಳಿಗೆ ಸು ಧಾಮವೆನಿಸುವಳು ತತ್ತನ್ನಾಮಗಳು ಪೇಳ್ವೆ ಅಗ್ನಿಯನು ಋಣವಿಮೋಚನಿ ಈ ಮಹಾ ವಾಯು ತೀರ್ಥಗಳ ಸುಸ್ನಾನಲ ಕ್ಷ್ಮೀ ಮನೋಹರನ ದರುಶನ ತತ್ವ್ರಸಾದಾತ್ರ ಅಲ್ಪಾಧಿಕಾರಿಗಳಿಗೆ 11 ಕವಿಭಿರೀಡಿತ ಪೂಜ್ಯನೆನಿಸುವನು ಪದ್ಮಸಂ ಭವನು ಪೂಜಕನೆನಿಪ ನೈವೇದ್ಯಕರ್ತೃ ಭಾ ಶರ್ವಶಕ್ರಾರ್ಕ ಮುಖ್ಯ ದಿವಿಜಗಣವಿಹರೆಂದು ಚಿಂತಿಸದೆ ಮರೆದು ಮಾ ನವರೆ ವರ್ತಿಪರೆಂದು ತಿಳಿವವನು ಘೋರ ರೌರವ ಧರಾತಳದೊಳೆಂದ 12 ಮೇರುನಂದನ ವೈಕುಂಠಾದ್ರಿಶತಯೋಜನದ ಮೇರೆಯೊಳು ಪುಣ್ಯತೀರ್ಥಗಳಿಪ್ಪವಲ್ಲೆಲ್ಲ ಮುಖ್ಯಾಮುಖ್ಯ ಭೇದದಿಂದ ನೂರೆಂಟು ತೀರ್ಥಗಳು ಮುಖ್ಯವೆನಿಸುವುವಿದರೊ ಳಾರುತ್ತಮೋತ್ತಮವುಗಳ ನಾಮ ಪೇಳ್ವೆನು ಕು ತುಂಬರ ಆಕಾಶಗಂಗ 13 ವಸುರುದ್ರ ಕಾಣ್ವಗ್ನಿ ಮನ್ವಿಂದ್ರಯಮ ಸೋಮ ಬಿಸರುಹ ಪ್ರೀಯ ನವಪ್ರಜ ಆಶ್ವಿನಿಗಳು ಶುಕ ಜಗಜ್ಜಾಡ್ಯಹರ ಬಾರ್ಹಸ್ವತಿ ದಶಪ್ರಚೇತಸ ಗರುಡ ಶೇಷವಾಸುಕಿಯು ಹೈ ಬ್ಬಸುರ ನಾರದ ವೈಶ್ವದೇವ ಸ್ವಾಹಾಸ್ವಧಾ ಹಸ್ತಿ ನಾರಾಯಣಾದಿ ಪಂಚ 14 ಶಿವರೂಪಿ ದೂರ್ವಾಸ ಪೇಳ್ದನಿನಿತೆಂದು ಜಾ ಹ್ನವಿಯೊಳಬ್ದ ಸ್ನಾನಫಲ ಧನುರ್ಮಾಸದೊಳು ವಾಗ್ದೇವಿ ಶುಕ್ಲಪಕ್ಷ ದ್ವಾದಶಿ ದಿವಸದಿ ಶುಚಿರ್ಭೂತನಾಗಿ ಸಂತೋಷದಲಿ ವಿವರಾಗ್ರಜೋದಯದಿ ಸ್ನಾನವನು ಮಾಡೆ ಐ ಶಿಷ್ಯನೆಂದರಿದು ದಯದಿ 15 ನಾರದ ಮುನೀಂದ್ರನುಪದೇಶದಿಂ ದಕ್ಷನ ಕು ಮಾರಕರು ಸಾಹಸ್ರ ತಮ್ಮ ತಮ್ಮಾಶ್ರಮದ ದಾಕ್ಷಣ್ಯವೆನಿಸುತಿಹ್ಯದು ಭೈರವಾಷ್ಟ ತೀರ್ಥ ಸಿದ್ಧಿಪ್ರದಾಯಕ ಕು ಮಾರಧಾರಿಕ ಪಶ್ಚಿಮದಲಿಹವು ಎಂಟಧಿಕ ತೀರ್ಥಾದ್ರಿಯೆನಿಸುತಿಹುದು 16 ತಾ ತಿಳಿ ಪುದಿತಿಹಾಸ ಶೌನಕಾದ್ಯರಿಗೆ ವರ ಪುಷ್ಕರಣಿಮಹಿಮೆ ಪ್ರೀತಿಯಿಂದಲಿ ತಿಳಿದು ಪಠಿಸುವವರಿಗೆ ಜಗ ನ್ನಾಥ ವಿಠಲ ಮನೋವಾಂಛಿತಗಳಿತ್ತು ಪುರು ಹೂತ ಲೋಕದಲಿ ಸುಖಬಡಿಸಿ ಪ್ರಾಂತಕೆ ತನ್ನ ಪುರವನೈದಿಪ ಕೃಪಾಳು17
--------------
ಜಗನ್ನಾಥದಾಸರು
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಂಕರ್ಷಣನ ರಾಣಿ ವೀರದುರ್ಗೆ ಕಿಂಕರರ ಪಾಲಿಸು ಖೂಳ ಜನ ಸಂಹಾರಿ ಪ ಅಮಿತ ಸದ್ಗುಣರಾಶಿ ಕುಜನಾರಿ ಸುಗನಾಪ್ತೆ ಕಾಯೆ ತಾಯೆ ಅ.ಪ ಮನದ ಖಳರಾ ಭೀತಿ ಬಹು ವೇಗ ಕೇಳಮ್ಮ ಪ್ರಣಿತ ಜನರ ಪಾಲೆ ಕೊಲ್ಲೆ ಅವರ ತನುಮನದಿ ನೆಲೆಸಿದ್ದು ಅನುದಿನವು ಪೊರೆ ನಮ್ಮ ಗುಣಪೂರ್ಣ ನಿನ್ನ ಪತಿಧ್ಯಾನ ಒದಗಿಸಿ ನಲಿಯೆ 1 ಪತಿವ್ರತವು ನೀ ಧರಿಸಿ ಪತಿವೈರಿಗಳ ಅರಿವೆ ಪತಿಹಿತರ ಕಾವ ಕಂಕಣವ ಕಟ್ಟಿ ಪತಿ ಪ್ರೀತಿಪಡಿಸುವೆ ವೀರವ್ರತ ದೀಕ್ಷೆಯಲಿ ಪತಿತಪಾವನೆ ನೀನೆ ಕಾವಲಮ್ಮಾ ನಮಗೆ2 ಕಲಿಯಲ್ಲಿ ಖಳಕೂಟ ಬಲು ಪ್ರಬಲ ಅತಿಕ್ರೂರ ಉಳಿಯಲೀಯರು ದೇವಿ ಸುಜನರನ್ನು ಬಲುಹೀನರೆಂತೆಂದು ಬಲು ಬಾಧೆಪಡಿಸುವರು ಪ್ರಳಯಗೈಸವರನ್ನು ಪಾಲಿಸು ನಿನ್ನವರ 3 ಜ್ಞಾನಮನ ತನುಕರಣ ಆಲಯದ ಅರಿಗಳ ಆಸಕ್ತಚಾರಿಗಳ ಬಿಡದೆ ಮಡುಹಿ ಆನಂದಮುನಿ ತಾಯೆ ಜಯೇಶವಿಠಲನ ಆನಂದ ನಿಜಕರುಣ ಬೆರಿಸಮ್ಮ ನಮ್ಮಲ್ಲಿ 4
--------------
ಜಯೇಶವಿಠಲ
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸತ್ಕವೀಂದ್ರ ಬಾಬೇಂದ್ರೆ ಸುಗುಣಸಾಂದ್ರ ಪ. ನಮ್ಮ ಮಾನವಿ ಸ್ಥಳದಿ ಅಚ್ಚಗನ್ನಡ ನುಡಿಯ ಸಮ್ಮಿಲನ ಸಾಗಿಸಲು ನಿಶ್ಚಯಿಸಿದೆ ನಿಮ್ಮ ಬರುವಿಗೆ ಬಯಕೆ ಇಮ್ಮಡಿಸಿದೆಮಗೆ ಸಮ್ಮತಿಸಿ ಬಾರಯ್ಯ ಸತ್ಕವೀಂದ್ರ ಶ್ರೀ ಬೇಂದ್ರೆ ಸುಗುಣೇಂದ್ರ 1 ಅಚ್ಚಗನ್ನಡ ತಾಯಿಗಚ್ಭದ ಮನೆಂದು ಹೆಚ್ಚಾಗಿ ನಿಮ್ಮನ್ನು ಮೆಚ್ಚುವೆವೋ ಮುಚ್ಚುಮರಿಯಾಕೆ ಈ ಉತ್ಸವಕೆ ಬರದಿರೆ ವಾಗ್ದೇವಿ ಸತ್ಕವೀಂದ್ರ 2 ದಾತರಾದವರಾರ್ತರಾತುರದಿ ತ್ವರದಿಂದ ಪ್ರೀತಿಯಲಿ ಪೂರ್ತಿಸಲು ಒಪ್ಪಿರೆಂಬಾ ನೀತಿ ಮಾತನು ನೀ ತಿಳಿಯದಾತನೆ ಹಾತೊರೆಯುತಿದೆ ಮನವು ಸತ್ಕವೀಂದ್ರ 3 ಕನ್ನಡದ ನುಡಿ ಸುಧೆಯ ಕನ್ನಡಿಗರಿಗೆ ಬೀರಿ ಕನ್ನಡ ನಾಡೆಂಬ ಪಾಲ್ಗಡಲಕೆ ಜೇನ್ನೊಡಲನೆಂದೆನಿಸಿ ಕನ್ನಡಿಗರಿಂ ಮನ್ನಣೆಯ ಪಡೆದಂಥ ಸತ್ಕವೀಂದ್ರ 4 ಉಸಿರಲೆನ್ನಯ ಮತಿಗೆ ವಶವಲ್ಲವೈನಿನ್ನ ರಸವತ್ಕವಿತಾ ಪ್ರತಿಭಾಚಾರ್ತುರ್ಯವಾ ಹೊಸಗನ್ನಡ ನುಡಿ ರಸದ ಮಾಧುರ್ಯಮಂ ರಸಿಕರಿಗೆ ನೀ ನೀಡು ಸತ್ಕವೀಂದ್ರಾ 5 ಕನ್ನಡ ನುಡಿ ಸಾರಿ ಕನ್ನಡಕುಪಕಾರಿ ಕನ್ನಡದ ಜಯಭೇರಿ ಹೊಡೆದ ನಗಾರಿ ಕನ್ನಡದ ಹೊಸ ಸಿರಿಯು ಕನ್ನಡ ರಸಝರಿಯು ನಿನ್ನಿಂದ ಲಭಿಸಿತೈಸತ್ಕವೀಂದ್ರಾ6 ನಿನ್ನಿಂದ ಕನ್ನಡದ ಮ್ಲಾನತೆಯು ದೂರಾಯಿತು ನಿನ್ನಿಂದ ನಮಕವನ ಕವಲೊಡೆದು ಸರ್ವತ್ರ ಉನ್ನತೆಯ ನೈದಿತೈ ಸತ್ಕವೀಂದ್ರಾ 7 ವೃತ್ತಪತ್ರಿಕೆಗಳಲಿ ಮತ್ತೆ ಸಮ್ಮೇಳನದಿ ನಿತ್ಯ ಓದುವ ಮನೆ ಶಾಲೆಯಲ್ಲಿ ಚಿತ್ತಪೂರ್ವಕ ನಿನ್ನ ಉತ್ತಮೋತ್ತಮ ಕವನ ಮತ್ತೆ ಪೇಳುವರು ಸತ್ಕವೀಂದ್ರಾ8 ನುಡಿಯಣ್ಣನೊಲುಮೆಯೋ | ನುಡಿಯೊಡೆಯನನುಗ್ರಹವೋ ಪಡೆದ ಮಾತೆಯ ಜೀತನೋಪಿ ಫಲವೋ ಕಡು ಸರಳ ಬಿಡಿವೃತ್ತ ಸಡಗರದಿ ರಚಿಸುತ್ತ ಪೊಡೆವಿಯೊಳು ಪಸರಿಸಿದ ಸತ್ಕವೀಂದ್ರಾ 9 ಪ್ರೇಮದಿಂದಲಿ ನಿನ್ನ ಪ್ರೇಮಿತಾರ್ಥವಗರೆದು ಶಾಮಸುಂದರವಿಠಲ ಸಲಹೋ ಎಂದು ನಾ ಮುದದಿ ಪ್ರಾರ್ಥಿಸುವೆ ನೀಮಾಡ್ವ ಉಪಕಾರ 10
--------------
ಶಾಮಸುಂದರ ವಿಠಲ
ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆನಿತ್ಯ ಜ್ಞಾನಿಯಾದ ಮೇಲೆ ಚಿಂತೆಯಾತಕೆ ಪ ಕಾಲ ಬದುಕಲ್ಯಾತಕೆಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ 1 ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆನೀತಿಯರಿತು ನಡೆಯದಿರುವ ಬಂಟನ್ಯಾತಕೆಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ 2 ಸನ್ನೆಯರಿತು ನಡೆಯದಿರುವ ಸತಿಯು ಯಾತಕೆಮನ್ನಣಿಂದ ನಡೆಸದಿರುವ ದೊರೆಯು ಯಾತಕೆಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ 3
--------------
ಕನಕದಾಸ