ಒಟ್ಟು 1102 ಕಡೆಗಳಲ್ಲಿ , 85 ದಾಸರು , 615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣನ ತಂಗಿಯರೆಂಬೊ ಗರವಿಲೆಇಷ್ಟು ನುಡಿದಾರೆ ಇವರುನಮ್ಮನೆಗೆ ಬಂದಿನ್ನೆಷ್ಟುನುಡಿದಾರೆ ಪ.ಕೃಷ್ಣನ ಮನದಿ ನೆನಸಿಮುಯ್ಯದ ಸುದ್ದಿ ಅಷ್ಟು ಲೋಕಕ್ಕ ಮೆರೆಸಿಅಷ್ಟದಿಕ್ಕಿನ ಶ್ರೇಷ್ಠರಾಯರ ಕರೆಸಿಇಟ್ಟಮುದ್ರಿಕೆತೆಗಿಸಿಧಿಟ್ಟೆಯರು ಮುಯ್ಯವಿರಸಿನ್ನೆಷ್ಟು ನುಡಿದಾರೆ ಇವರು 1ಹರಿಯ ತಂಗಿಯರೆಂದು ದ್ರೌಪತಿಭದ್ರ ಗರವಿಲೆ ಮುಯ್ಯ ತಂದುರಾತ್ರಿಲೆ ತಮ್ಮ ಕರೆಯ ಬರಲಿಲ್ಲವೆಂದುಭರದಿ ಕೋಪಿಸಿ ಬಂದುಸರಿಯವರುನಗತಾರೆಇನ್ನೆಷ್ಟು ನುಡಿದಾರೆ ಇವರು 2ಬೇಗನೆ ಮುಯ್ಯಾ ತಂದುರಂಗನ ಯಾವಾಗ ನೋಡೆವೆಂದುಸೋಗುಮಾಡುತಬಾಗಿಲೊಳುನಿಂದುಬೀಗವ ತೆಗೆಸಿರೆಂದು ಕೂಗಾಡಿದರಿನ್ನೆಷ್ಟು ನುಡಿದಾರೆ ಇವರು 3ಸುಳ್ಳು ಮುಯ್ಯವ ತಂದುಹರಿಯಲ್ಲೆ ಸ್ನೇಹ ಬಳ್ಳಿಯ ಸುತ್ತಿಕೊಂಡುಜನರೊಳು ಬಹಳ ಒಳ್ಳೆಯವರೆನಿಸಿಕೊಂಡುತಳ್ಳಿಮಾತಾಡಿಕೊಂಡುತಳಮಳತಾವೆಗೊಂಡುಇನ್ನೆಷ್ಟು ನುಡಿದಾರೆ ಇವರು 4ರಮ್ಮಿ ಅರಸನ ಎದುರುದ್ರೌಪತಿ ಭದ್ರೆ ಹೆಮ್ಮಿಲೆ ದೂರಿದರುಎಲ್ಲರು ನಗಲು ಜಮ್ಮನೆ ನಾಚಿಹರುನಮ್ಮನ ಕರೆಯದೆ ಒಳಗೆಗುಮ್ಮನಂತೆ ಅಡಗಿದೆರಿನ್ನೆಷ್ಟು ನುಡಿದಾರೆ ಇವರು 5
--------------
ಗಲಗಲಿಅವ್ವನವರು
ಕೊಡು ಕಂಡೆಯಾ ಹರಿಯೆ-ನಿನ್ನ ನಾಮ-|ಕೊಡು ಕಂಡೆಯಾ ಹರಿಯೆ ಪಬಡವ ನಾನೆಂದು ಕಾಡಲಿಲ್ಲ ಹರಿಯೆ ಅ.ಪಒಡಲುತುಂಬದು ಎಂದು ಬಳಲಿಸೆ ಬರಲಿಲ್ಲ |ಸಡಗರದಿಂ ಭಾಗ್ಯ ಬೇಡಲಿಲ್ಲ ||ಮಡದಿ-ಮಕ್ಕಳಿಗಾಗಿ ಕಡು ಮೋಹವೆನಗಿಲ್ಲ |ಬಿಡದೆ ನಾಮಸ್ಮರಣೆ ಕೊಡು ಒಂದೇ ಸಾಕೊ 1ಸ್ನಾನ-ಮೌನ ಜಪ-ತಪಗಳು ಎನಗಿಲ್ಲ |ನಾನಾಯೋನಿಗಳಲ್ಲಿ ಬಳಲಿ ಬಂದೆ ||ದೀನರಕ್ಷಕ ನೀನೆ ದಯದಿಂದಲೆನಗಿನ್ನು |ಧ್ಯಾನಸುಧೆಯನಿತ್ತು ಸಲಹಯ್ಯ ಹರಿಯೆ 2ಬಲೆಗೆ ಸಿಲುಕಿದ ಮೃಗದಂತೆ ಬಾಯ್ಬಿಡುತಲಿ |ಅಲಸಿ ಕೋಟಲೆಯ ಸಂಸಾರದಿಂದ |ತಲೆಹುಳಿತ ನಾಯಂತೆ ಬಯಲಾಸೆಗೆ ಸಿಲುಕಿದೆ |ಸಲಹೊ ದೇವರ ದೇವಪುರಂದರವಿಠಲ3
--------------
ಪುರಂದರದಾಸರು
ಗೆಲಿಸು ಭವವಗುರುಹನುಮಂತಖಳಜಲಧಿ ವಡವಾನಳ ಬಲವಂತ ಪ.ದಾಶರಥಿüಯ ಪದವನೆ ನಂಬಿ ಇತರಾಶೆಯಿಲ್ಲದೆ ಭಕ್ತಿರಸತುಂಬಿತೋಷವೃತ್ತಿಗೆ ಕಡೆಮೊದಲಿಲ್ಲ ಕ್ಷುದ್ರದೇಶ ಕೋಶದೆಣಿಕೆ ನಿನಗಿಲ್ಲ 1ಅಂಧಕಾತ್ಮಜ ತೃಣಸುರಧೇನುಗೋವಿಂದಾಂಘ್ರಿಬಿಸಜಮಧುಪನೀನುಸಂಧಕಾಯನ ಸದೆದ್ಯೈ ದೇವ ದಯಾಸಿಂಧುವೈಷ್ಣವಜನ ಸಂಜೀವ2ಶ್ರೀ ಸತ್ಯವತಿಜನ ನೇಮದಲಿಹರಿದ್ವೇಷಿಗಳನು ಗೆದ್ದೆ ಭೂಮಿಯಲಿಶ್ರೀಸುಖತೀರ್ಥಭೀಮ ಕಪಿವರದ ಸ್ವಾಮಿಪ್ರಸನ್ನವೆಂಕಟೇಶ ಭೃತ್ಯಗಣಮುದದ 3
--------------
ಪ್ರಸನ್ನವೆಂಕಟದಾಸರು
ಜಲದನೀಲಗಾತ್ರ ಏತರ ಚೆಲುವ ರುಕ್ಮಿಣಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಳಿಯ ಜಡೆಯ ಮೈಯ ಜೋಗಿಗೊಲೆದ ಪಾರ್ವತಿ ಪ.ಉದಕದೊಳಗೆ ವಾಸವೇಕೆ ಸದನವಿಲ್ಲವೆ |ಸುದತಿಸುಡುವ ಕಾಡಿಗಿಂತ ಲೇಸು ಅಲ್ಲವೆ1ಶೃಂಗಿಯ ಬೆನ್ನಿಲೆತ್ತಿದವನ ಸೊಗಸು ನೋಡಿದೆ |ಗಂಗೆಯ ಶಿರದಿ ಪೊತ್ತವನ ಗುರುವ ಕೇಳಿದೆ 2ವಸುಧೆ ನೆಗಹಿ ಬೇರೆ ಮೆಲುವ ಅಶನವಿಲ್ಲವೆ |ಹಸಿದು ವಿಷವ ಕುಡಿದ ಎಂತು ಸ್ವಾದವಲ್ಲವೆ 3ಕರುಳ ಕೊರಳ ಸರವು ಏಕೆ ಸರವು ದೊರಕದೆ |ಕೊರಳ ರುಂಡಮಾಲೆ ಏಕೆ ಕಾಂಚನವಿಲ್ಲದೆ 4ಧರಣಿ ಮೂರಡಿ ಬೇಡಲಿಕ್ಕೆ ದೊರೆಯು ಅಲ್ಲವೆನರಕಪಾಲ ಪಿಡಿವ ಜಗದ ಕರ್ತೃವಲ್ಲವೆ 5ಮಾತೆಶಿರವ ಅಳಿದವನ ಮಾಲೆ ಕೇಳಿದೆಯಾ !ತಾತನಾಚಿ ಸುತನ ಕೊಂದು ನೀತಿ ನೋಡಿದೆಯಾ 6ಕೋತಿಗಳನು ಕೂಡಲಿಕ್ಕೆ ಜಾತಿ ತನ್ನದೆ |ಭೂತಗಣಗಳಾಳುವುದಕೆ ಭೀತಿ ಇಲ್ಲವೆ 7ಹತ್ತಿರಿದ್ದ ವಾಜಿಬಿಟ್ಟು ಹದ್ದನೇರ್ವರೆ |ಎತ್ತಿನ ಬೆನ್ನ ನೇರಿದವರು ಉತ್ತಮರಾಹರೆ 8ಸುತ್ತಲಿದ್ದಬಾಲೆಯರೊಳು ಬತ್ತಲಿರುವರೆ |............... ಶಾಪ ಹತ್ತಲಿಲ್ಲವೆ 9ಹರಿಹರರೊಳು ಭೇದವೇನು ಹೇಳೆ ರುಕ್ಮಿಣಿಪುರಂದರವಿಠಲ ತಾನೆ ಬಲ್ಲ ಕೇಳೆ ಪಾರ್ವತಿ 10
--------------
ಪುರಂದರದಾಸರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ತಪ್ಪ ಪಾಲಿಸಯ್ಯ ತಿಮ್ಮಯ್ಯತಪ್ಪ ಪಾಲಿಸಯ್ಯ ಪ.ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳುಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆ ಅ.ಪ.ಜಲಜನಾಭ ನಿನ್ನ ಮಹಿಮೆಯನೆಲೆಯನರಿಯದೆನ್ನ ಮನವದುನೆಲೆಯಿಲ್ಲದ ಭವಜಲಧಿಯೊಳಾಡುತ್ತಲಲನಾ ವಿಷಯದ ಬಲೆಗೆ ಮೋಹಿಸಿ ಮನಸಿಲುಕಿ ಮಲಿನವಾಯ್ತು ತತ್ವದನೆಲೆಯನರಿಯದಾಯ್ತು ಹೀಗೆನ್ನುತಕಳೆದುಹೋಯ್ತು ವಿಂಶತಿ ವತ್ಸರಗಳುತೊಳಲಿ ಸಕಲ ಭವದೊಳಗಾರ್ಜಿತವಹ 1ಹಾಳು ಮನವು ಕೂಡಿ ನಾನಾಚಾಳಿ ಮಾಳ್ಪುದಾಡಿ ಬುದ್ಧಿಯಪೇಳಿದಷ್ಟು ದುಶ್ಯೀಲವೆ ಮಾಳ್ಪುದುತಾಳೆಂದರೆ ಒಂದು ವೇಳೆಗೆ ಸುಮತಿಯಆಲೋಚನೆಯೊಳಗೆ ಬಿದ್ದರೆಮೇಲಿಲ್ಲವು ಕ್ಷಣಕೆ ತನ್ನಯಶೀಲವನೆ ಸ್ವೀಕರಿಸುತಿರುವುದುಪೇಳಲೇನು ಕರುಣಾಳು ನೀ ಯೆನ್ನಯ 2ನಾನಾ ಕಷ್ಟಪಟ್ಟೆ ಇನ್ನಾದರುಮಾನಿಸಬೇಕಷ್ಟೆ ಎನ್ನೊಳುಊನ ಗ್ರಹಿಸಿ ಅನುಮಾನ ಸಾಧಿಸಿದರೆನಾನೆಂಬುವದೇನು ಸ್ವತಂತ್ರವಕಾಣೆನು ಎನ್ನೊಳಗೆ ಸಂತತನೀನೇ ಗತಿಯೆನಗೆ ಇದಕನು-ಮಾನವಿಲ್ಲ ಪಾದಾನತಜನರಾಧೀನನೆಂಬ ಬಿರುದಾನಬೇಕಾದರೆ 3ಅಪರಾಧಿಯೆ ನಾನು ಹೇಗೈಅಖಿಲಾತ್ಮನು ನೀನು ಹೃದಯದಿಕೃಪೆಯ ಬೀರಿ ತೋರಿಪ ಪರಮಾತ್ಮನೆಚಪಲನಾಗಿ ಎನ್ನುಪಮೆಗೆಯೊಡ್ಡಿದೆಸಫಲವಾಯ್ತು ಎನಗೆ ಕೀರ್ತಿಯುಅಪಕೀರ್ತಿಯು ನಿನಗೆ ಪಾದವಜಪಿಸುವಂತೆ ಕರುಣಿಪುದಿನ್ನಾದರೂಕಪಟವಾಯ್ತೆ ಸರೀಸೃಪಗಿರಿರಾಜನೆ 4ದೂಷಣಾರಿ ನಿನ್ನ ಪಾದದದಾಸಗೈಯ್ಯೊ ಎನ್ನ ಎನ್ನೊಳುದೋಷವಿಲ್ಲ ಜಗದೀಶ ಜನಾರ್ದನದಾಶರಥಿಯ ಕರುಣಾಶರಧಿಯೊಳಗೆಈಸಾಡಿದ ದಾಸ ಕಾರ್ಕಳಾಧೀಶ ಶ್ರೀನಿವಾಸ ರವಿಶತಭಾಸ ಶ್ರೀಲಕ್ಷ್ಮೀನಾರಾಯಣ ಸರ್ವೇಶ ಭಕ್ತಜನಪೋಷ ನೀಯೆನ್ನಯ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ದ್ರೌಪತಿ ಕೋಪ ‌ಘನವಾಯಿತಮ್ಮ ಪ.ಮೂಡಲಗಿರಿವಾಸ ನಾಡು ನಾಡಿನ ಜವಳಿಬೇಡಿದ ಪರಿಯು ತರಿಸಿದನಮ್ಮಬೇಡಿದಪರಿತರಿಸಿದನು ಧರ್ಮನನೋಡ ಬಂದವರಿಗೆ ಉಡುಗೊರೆಕೆಲದಿ1ಚಂದದ ಜವಳಿ ಕಂದರಿಗೊಸ್ತವುಇಂದಿರಾರಮಣ ತರಿಸಿದನಮ್ಮಇಂದಿರಾರಮಣ ತರಿಸಿದನಮ್ಮ ಧರ್ಮನಬಂದ ಜನಕೆಲ್ಲ ಉಡುಗೊರೆಕೆಲದಿ2ಲೆಕ್ಕವಿಲ್ಲದ ಜವಳಿ ಮಕ್ಕಳಿಗೊಸ್ತವುಲಕ್ಕುಮಿರಮಣ ತರಿಸಿದನಮ್ಮಲಕ್ಕುಮಿರಮಣ ತರಿಸಿದನಮ್ಮ ಧರ್ಮನಮಿಕ್ಕ ಜನಕೆಲ್ಲ ಉಡುಗೊರೆಕೆಲದಿ3ಏಸುರತ್ನದಹೇರುವಾಸುದೇವನು ತರಿಸಿರಾಶಿ ಸುರುವಿದ ಸಭೆಯೊಳುಕೆಲದಿರಾಶಿ ಸುರುವಿದ ಸಭೆಯೊಳು ಧರ್ಮನಆಸು ಜನಕೆಲ್ಲ ಉಡುಗೊರೆಕೆಲದಿ4ಫುಲ್ಲನಾಭನು ದ್ರವ್ಯ ಚಲ್ಲಿದ ಸಭೆಯೊಳುಎಲ್ಲ ನಾರಿಯರು ಬಳಕೊಳ್ಳಿರಮ್ಮಎಲ್ಲ ನಾರಿಯರು ಬಳಕೊಳ್ಳಿರಮ್ಮ ಎನುತಲೆಚಲ್ವ ರಾಮೇಶ ನಗುತಿಹನಮ್ಮ 5
--------------
ಗಲಗಲಿಅವ್ವನವರು
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು
ದಯಮಾಡು ದಯಮಾಡು ಶ್ರೀನಿವಾಸಭವಭಯ ನಿವಾರಣ ಭಜಕ ಭಕ್ತರಘನಾಶ ಪ.ನೇಮವೆನ್ನಲಿಲ್ಲ ನಾಮದರಿಕೆಯಿಲ್ಲನಾ ಮಹಾಪಾಪಿಯು ಸ್ವಾಮಿ ನೀನೊಲಿದು ಗಡ 1ಸದ್ಧರ್ಮ ಸರಕಿಲ್ಲ ಶುದ್ಧ ಬುದ್ಧಿಯಿಲ್ಲಉದ್ಧರಿಸೆನ್ನನಿರುದ್ಧಹರಿಕರುಣಿ2ಸತ್ಕುಲ ಹೊಂದೇನು ಸತ್ಕರ್ಮ ಮಾರ್ಗಿಲ್ಲಭಕ್ತರಕ್ಷಕ ಪಾಪಮುಕ್ತ ದೇವರ ದೇವ 3ಅವಗುಣದೆಣಿಕೆಯ ವಿವರ ನೋಡದೆ ಅಯ್ಯಜವನ ಬಲೆಯನು ತಪ್ಪಿಸುವ ಸರೀಸೃಪಶಯ್ಯ4ಅಜಾಮಿಳವ್ಯಾಧಆಗಜಅಹಲ್ಯೋದ್ಧರನಿಜ ಪ್ರಸನ್ವೆಂಕಟೇಶಸುಜನಪರಿಪೋಷ5
--------------
ಪ್ರಸನ್ನವೆಂಕಟದಾಸರು
ದಯೆಮಾಡಿ ಸಲಹಯ್ಯ ಭಯನಿವಾರಣನೆ |ಹಯವದನ ನಾ ನಿನ್ನಚರಣನಂಬಿದೆ ಕೃಷ್ಣಪಕ್ಷಣಕ್ಷಣಕೆ ನಾ ಮಾಡಿದಂಥ ಪಾಪಗಳೆಲ್ಲ |ಎಣಿಸಲಳವಲ್ಲಷ್ಟು ಇಷ್ಟು ಎಂದು ||ಫಣಿಶಾಹಿ ಅವಗುಣವ ನೋಡದೇಚರಣಸ್ಮ-ರಣೆಯ ಮಾಡುವಂಥ ಭಕುತಿಯನಿತ್ತು 1ಕಂಡ ಕಂಡ ಕಡೆಗೆ ಪೋಪ ಚಂಚಲಮನಸುಲಂಡತನದಲಿ ಬಹಳ ಭ್ರಷ್ಟ ನಾನು ||ಭಂಡಾಟದವನೆಂದು ಬಹಿರಂಗಕೆಳೆಯದೆ |ಕೊಂಡಾಡುವಂಥ ಭಕುತಿಯನಿತ್ತು ಸಲಹಯ್ಯ 2ಜಾತಿಧರ್ಮವ ಬಿಟ್ಟು ಅಜಮಿಳನು ಇರತಿರಲು |ಪ್ರೀತಿಯಿಂದಲಿ ಮುಕುತಿಕೊಡಲಿಲ್ಲವೆ ||ಖ್ಯಾತಿಯನುಕೇಳಿಮೊರೆಹೊಕ್ಕೆ ದಯಾನಿಧಿಯೆ -ಬೆ-|ನ್ನಾತು ಕಾಯಯ್ಯ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾರಿ ಏನಿದಕೆ ಮುರಾರಿ - ನೀ ಕೈಯ ಹಿಡಿಯದಿದ್ದರೆ-|ದಾರಿ ಏನಿದಕೆ ಮುರಾರಿ? ಪಕಷ್ಟ-ಕರ್ಮಂಗಳ ಎಷ್ಟಾದರು ಮಾಳ್ಪೆ |ಎಷ್ಟಾದರೂ ನುಡಿದೆ ಗುರುಹಿರಿಯರ ||ದುಷ್ಟರ ಸಂಗವ ಬಹಳ ಮಾಡಿದರಿಂದ |ಶಿಷ್ಟರ ಸೇವೆಯೆಂದರಾಗದೆನಗೆ 1ಪರರ ದೂಷಣೆ ಪರಪಾಪಂಗಳನೆಲ್ಲ |ಪರಿಪರಿಯಲ್ಲಿ ಆಡಿಕೊಂಬೆ ನಾನು ||ಹರಿನಾಮಾಮೃತವ ಹೇಳದೆ ಕೇಳದೆ |ಹರಟೆಯಲ್ಲಿ ಹೊತ್ತುಗಳೆದೆ ನಾ ಹರಿಯೆ 2ಪಾತಕಕರ್ಮಗಳ ಮಾಡಿದಜಾಮಿಳಗೆ |ಪ್ರೀತಿಯಿಂದಲಿ ಮುಕ್ತಿ ಕೊಡಲಿಲ್ಲವೆ? ||ನೂತನವೇಕಿನ್ನುಸೂರ್ಯಮಂಡಲ |ರೀತಿಯಾದನು ಸಿರಿಪುರಂದರವಿಠಲ 3
--------------
ಪುರಂದರದಾಸರು
ದೃಷ್ಟಿ ನಿನ್ನ ಪಾದದಲ್ಲಿ ನೆಡುವ ಹಾಗೆ - ಧರೆಯದುಷ್ಟ ಜನರ ಸಂಗಗಳನು ಬಿಡುವ ಹಾಗೆ ಪ.ಕೆಟ್ಟ ಮಾತ ಕಿವಿಯಿಂದ ಕೇಳದ ಹಾಗೆ ಮನವಕಟ್ಟು ಸದಾ ನಿನ್ನ ಧ್ಯಾನ ಬಿಡದ ಹಾಗೆ ಅಪದೃಷ್ಟನಾಗಿ ಕೈಯನೆತ್ತಿ ಕೊಡುವ ಹಾಗೆ ಶ್ರೀಕೃಷ್ಣ ನಿನ್ನ ಪೂಜೆಯನ್ನು ಮಾಡುವ ಹಾಗೆ ||ಭ್ರಷ್ಟನಾಗಿ ನಾಲ್ವರೊಳು ತಿರುಗದ ಹಾಗೆ ಬಲುಶಿಷ್ಟ ಜನರ ಸೇವೆಯನು ಮಾಡುವ ಹಾಗೆ 1ಪುಟ್ಟಿಸಿದ ತಾಯಿ - ತಂದೆಯಲ್ಲವೆ ನೀನು - ಒಂದುಹೊಟ್ಟೆಗಾಗಿ ದೈನ್ಯ ಪಡಬೇಕೇ ನಾನು ||ಪಟ್ಟೆ -ಪಟ್ಟಾವಳಿ ಬೇಡಲಿಲ್ಲ ನಾನು ಎನ್ನಗುಟ್ಟು ಅಭಿಮಾನಗಳ ಕಾಯೋ ನೀನು2ನಟ್ಟನಡು ನೀರೊಳೀಸಲಾರೆ ನಾನು ಎತ್ತಿಕಟ್ಟೆಯ ಸೇರಿಸಬೇಕಯ್ಯ ನೀನು ||ಬೆಟ್ಟದಷ್ಟು ಪಾಪ ಹೊತ್ತಿರುವೆ ನಾನು ಅದನುಸುಟ್ಟು ಬಿಡುಪುರಂದರ ವಿಠಲ ನೀನು3
--------------
ಪುರಂದರದಾಸರು
ದೇವರ ನಾಮ(ಶ್ರೀಶ ಸ್ತೋತ್ರ)38ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸಭಕುತವತ್ಸಲ ನಮೋ ಕಾರುಣ್ಯ ಶರಧೇ ಪಲೌಕೀಕ ವಿಷಯದಲಿ ಕಾಯಮನದಿಂಚರಿಸಿ |ಶ್ರೀಕರನೆ ನಿನ್ನನಾ ಸಂಸ್ಮರಿಸಲಿಲ್ಲಾಲೋಕ ಬಂಧುವೇ ಶರಣು ಶರಣು ಕರುಣಾಂಬುಧಿಯೇನೀಕಾಯಬೇಕೆನ್ನ ತಪ್ಪು ಎಣಿಸದಲೆ 1ನಾರಾಯಣವಾಸುದೇವಸಂಕರುಷಣಪ್ರದ್ಯುಮ್ನ ಅನಿರುದ್ಧ ಆತ್ಮಾಂತರಾತ್ಮಶ್ರೀ ಕೃಷ್ಣ ಕಪಿಲನೆ ಸರ್ವಕರ್ತನು ನೀನೆಸರ್ವ ಪ್ರೇರಕ ಸರ್ವ ಸ್ವಾಮಿ ಮಮ ಸ್ವಾಮಿ 2ವಿಶ್ವವಿಷ್ಣು ವಷಟ್ಕಾರ ಶ್ರೀಭೂರಮಣವಿಶ್ವತೋಮುಖ ಸರ್ವ ವಶಿ ವಿಶ್ವನಾಥವಿಶ್ವಪಾಲಕ ನಮೋ ಶ್ರೀರಾಮ ವಿಧಿತಾತವಿಶ್ವರೂಪನೇ ಶ್ರೀ ಪ್ರಸನ್ನ ಶ್ರೀನಿವಾಸ3
--------------
ಪ್ರಸನ್ನ ಶ್ರೀನಿವಾಸದಾಸರು