ಒಟ್ಟು 930 ಕಡೆಗಳಲ್ಲಿ , 97 ದಾಸರು , 695 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರಸ ನಯನ ಶ್ರೀರಾಮಚಂದ್ರನ ಚರಿತೆ ಸಾರ ಹೃದಯ ಶ್ರೀ ಪ ಭವ ಮುಖರರ ಮೊರೆಯ ಕೇಳಿ ಧಾರುಣಿಯೊಳಗವತಾರ ಮಾಡಿದನಮ್ಮಾ ಅ.ಪ. ದಶರಥ ಸುತನೆನಿಸಿ ವಸುಧೆಯೊಳವತರಿಸಿ ಕುಶಿಕಸುತನ ಯಜ್ಞವ ನೆರೆಪಾಲಿಸಿ ಅಶಮವಾಗಿದ್ದ ಅಹಲ್ಯೆಯ ಶಾಪ ಪರಿಹರಿಸಿ ವಸುಧೀಶ ಜನಕನಾಸ್ಥಾನ ಪ್ರವೇಶಿಸಿ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯನೊಲಿಸಿ ಅಸಮ ಭಾರ್ಗವನೊಡನೆ ಸರಸವ ನೆಸಗಿ ಜಗದೊಳು ಲೀಲೆ ತೋರಿದ 1 ಜನಕನಾಜ್ಞೆಯ ತಾಳಿ ಜನಕ ಸುತೆಯ ಸಹಿತ ಅನುಜನೊಡನೆ ಹೊರಟು ವನವಾಸಕೆ ಘನಭಕ್ತಿ ಭರಿತ ಶ್ರೀ ಭರತಗೆ ಪಾದುಕೆ ನೀನು ಕರುಣಿಸಿ ಮುಂದೆ ವನದಂಡಕವ ಪೊಕ್ಕು ದುರುಳ ವಿರಾಧಮುಖರನು ಹನನಗೈದಾ ಬಳಿಕ ಶರಭಂಗ ಮುನಿಗೆ ಸದ್ಗತಿಯಿತ್ತಗಸ್ತ್ಯನ ವಿನುತ ಅಸ್ತ್ರಗಳನು ಪಡೆದನಾ 2 ಪಂಚವಟಿಯೊಳಗೆ ಸಂಚುಗೈಯುತ ಬಂದ ಕಾಂಚನಮೃಗವನು ಪಂಚಕಗೊಳಿಸಿ ಕುಂಚಿತ ಮತಿಯ ದ್ವಿಪಂಚಶಿರನು ಬರಲು ವಂಚನೆಯಿಂದಪರಿಹರಿಸಲು ಸೀತೆಯ ಸಂಚುಕಾಣದೆ ವನವನದೊಳು ಸಂಚರಿಸುತಲಿ ಶೋಕ ತೋರುತ ಪಂಚಶರಹತನಂತೆ ಬಳಲುತ ಪಂಚಶರ ಪಿತ ಬಂದ ಪಂಪೆಗೆ 3 ಮಾರುತಸುತನ ವಿನಯಭರಿತ ವಾಕ್ಯಕೆ ಮೆಚ್ಚಿ ತರಣಿಸುತನ ಕೂಡೆ ಸಖ್ಯವ ಬೆಳೆಸಿ ದುರಿತವಗೈದ ವಾಲಿಯ ನಿಗ್ರಹಿಸಿ ಕಪಿ ವರ ಸುಗ್ರೀವಗೆ ರಾಜ್ಯಕರುಣಿಸಿದಾ ಬಳಿಕ ಪರಮ ವಜ್ರಶರೀರಿ ಪವನಜ ಶರಧಿಯ ಲಂಘಿಸಿ ಧರಣಿತನಯಳಿ ಗರುಹಿ ಕುಶಲವ ಮುದ್ರಿಕೆಯನಿತ್ತು ಉರುಹಿ ಲಂಕೆಯ ಬರಲು ಒಲಿದನು 4 ಭಕ್ತ ವಿಭೀಷಣನಿಗೆ ಇತ್ತು ಅಭಯವನು ಶರಧಿ ಬಂಧಿಸಿ ದಾಟಿ ಹತ್ತು ತಲೆಯವನ ಪುರವ ಪ್ರವೇಶಿಸಿ ದೈತ್ಯಶೂರರನ್ನೆಲ್ಲ ಮೃತ್ಯು ವಶವ ಮಾಡಿ ಮತ್ತೆ ಕುಂಭಕರ್ಣೇಂದ್ರಜಿತ್ ಮುಖ ದೈತ್ಯರನು ಸಂಹರಿಸಿ ರಣದೊಳು ಶತ್ರು ಭಯಂಕರನಾಗಿ ಮೆರೆದನು ಸ್ತುತ್ಯ ಮಹಿಮ ಶ್ರೀ ಕರಿಗಿರೀಶನು 5
--------------
ವರಾವಾಣಿರಾಮರಾಯದಾಸರು
ಸಿರಿದೇವಿ ಹರಿಯ ದಯವು | ಆವಾವ ಪರಿ ಪಾಲಿಸೆ ಪ ಆಲದೆಲೆಯಲಿ ಅಂದು | ನಿನ್ನಯ ಮ್ಯಾಲೆ ಮಲಗಿಪ್ಪ ಹರಿಯ ತೋಳು ಬಿಗಿದಾಲಂಗಿಸಿ | ಸೃಷ್ಟಿಯ ಲೀಲೆಯನು ಮಾಡಿಸಿದ ತಾಯೆ 1 ವಕ್ಷವಾಲಯವ ಮಾಡಿದೆ | ಆವಾಗ ದಕ್ಷಣಾದೇವ್ಯೆನಿಸಿದೆ ಲಕ್ಷ್ಯವಿಲ್ಲದೆ ಭಾಗ್ಯವ | ಭಕ್ತರಿಗೆ ವೀಕ್ಷೆಯಿಂದಲ್ಲಿ ಈವೆ 2 ದೇವತಾಜನ ಸ್ತುತಿಸೆ | ನೀ ಎನ್ನ ಭಾವ ಹರಿಯಲಿ ನಿಲ್ಲಿಸೆ ಕಾವ ಭಾರವು ನಿನ್ನದೆ | ಶ್ರೀ ವಾಸು ದೇವವಿಠಲನ್ನ ರಾಣಿ 3
--------------
ವ್ಯಾಸತತ್ವಜ್ಞದಾಸರು
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸೀಸ ಪದ್ಯ ರಘುನಾಯಕ ನಿನ್ನ ರಾತ್ರಿ ಹಗಲು ನೆನೆವೆ ರಾಘವಾ ಕೈಪಿಡಿದು ಸಲಹನ್ನನು ಪ ಸೀತಾ ಮನೋಹರಾ | ಶ್ರೀ ರಾಮಚಂದಿರಾ ಪಾತಕಾಮೃಗವಳಿದು | ಪರಮಧೀರಾ 1 ಶಬರಿ ಫಲಗಳ ತಿಂದು | ಶಾಶ್ವತಾ ಫಲವಿತ್ತು ಅಗಣಿತಾಗುಣಧಾಮ | ಆನಂದ ರಾಮ 2 ಸೇತು ಮಾರ್ಗದೊಳಿಂದ | ಆತ ರಾವಣನ ಕೊಂದ ಸೀತೆಯನು ತಂದ ಪ್ರಖ್ಯಾತಮಹಿಮಾ 3 ಲೋಕದೊಳು ನೇಮ ನಿನ್ನ | ಪಾಪಹರ ನಾಮ ವಾಲ್ಮೀಕಿ ಜಪಿಸಿದಾ ಶ್ರೀ ರಾಮನಾಮ 4 ಶ್ರೀ ಕಾಂತ ನರಸಿಂಹ ವಿಠಲಾ | ಸ್ವೀಕರಿಸೈಗಂಧವಾದೇವ 5
--------------
ಓರಬಾಯಿ ಲಕ್ಷ್ಮೀದೇವಮ್ಮ
ಸುಕೃತ ಫಲಿಸಿತೆನಗೆ ಕೋವಿದಾಗ್ರಣಿ ವ್ಯಾಸತತ್ವಜ್ಞರ ಕಂಡೆ ಪ ಜೀವ ಸಾಮಾನ್ಯವೆಂದರಿಯದಿಲಿ ಶಾಸ್ತ್ರಗಳ ನಾವಲೋಕನದಿ ಪೇಳ್ವರು ನಿತ್ಯದಿ ದೇವಾಂಶರಿವರು ಸಂಶಯವು ಬಡಸಲ್ಲ ಮಾ ಯಾ ವಲ್ಲಭನು ಇವರ ಹೃದಯದೊಳಗಿರುತಿಪ್ಪ 1 ಕವಿ ಭರಿಡಿತ ಮಹಾಮುನಿ ವ್ಯಾಸಕೃತ ಸುಭಾ ಗವತಾದಿ ಗ್ರಂಥ ವ್ಯಾಖ್ಯಾನ ನೋಡಿ ಭುವನೇಂದ್ರರಾಯರ ಕರುಣದಲಿ ತುರೀಯಾ ಶ್ರ ಮನವಿತ್ತು ವ್ಯಾಸತತ್ವಜ್ಞ ರಹುದೆಂದು 2 ಈ ಜಗತ್ರಯ ದೊಳಗೆ ಪೂಜ್ಯ ಪೂಜಕರ ನಿ ವ್ರ್ಯಾಜದಲಿ ತಳುಪಿದನು ಭಕ್ತಜನಕೆ ಶ್ರೀ ಜಗನ್ನಾಥ ವಿಠಲನೊಬ್ಬ ಪೂಜ್ಯ ಪಂ ಭವ ಭವರು ಪೂಜಕರೆಂಬುವರ ನೋಡ್ಡೆ 3
--------------
ಜಗನ್ನಾಥದಾಸರು
ಸುಖವಿಲ್ಲ ಆತ್ಮಕೆ ಈ ದೇಹದಿಂದ |ಸುಖವ ಪಡೆವುದು ದೇಹ ಈ ಆತ್ಮದಿಂದ ಪ ಕರ್ಮದೊಳು ಜನಿಸಿ ಬಂದದ್ದು ಈ ದೇಹ |ಕರ್ಮಕ್ಕೆ ಅನುಕೂಲವಾಗುವದು ಈ ದೇಹ |ಕರ್ಮವನು ಕಡೆ ತನಕ ಮಾಡುತಿರುವದು ದೇಹ 1 ನಾಮರೂಪದಲ್ಲಿ ನಿಲಿಸಿಹುದು ಈ ದೇಹ |ನೇಮನೀತಿಯನ್ನು ನಡೆಸುವದು ಈ ದೇಹ ||ಕಾಮ ಕ್ರೋಧದಲ್ಲಿ ಕುಂದಿ ಕುಂದಿ ಬೆಂದು |ಪ್ರೇಮದಲಿ ವೈರಾಗ್ಯ ತೊರೆ ತೊರೆದು 2 ಹಿಂದೆ ಬಂದಿದ್ದು ಈ ದೇಹ ಮುಂದೆ ನಿಂತಿದ್ದು ಈ ದೇಹ |ಎಂದೆಂದೂ ಬಿಡನು ಜೀವನು ಈ ದೇಹ ||ತಂದೆ ಗುರು ಭವತಾರಕನ ಪಾದಾರವಿಂದವ |ಹೊಂದಿದವರಿಗೆ ಇಲ್ಲೋ ಈ ನಾಲ್ಕು ದೇಹ 3
--------------
ಭಾವತರಕರು
ಸುಗುಣಾಬ್ಧಿಯತಿ ರಾಯಾ ನಿನ್ನಯ ಪಾದಯುಗಳ ನಂಬಿಹರಯ್ಯ ಪ. ನೀನೆಲ್ಲಿಯಿರುವೆಯೊ ತಾನಲ್ಲಿ ಬರುವನು ಶ್ರೀನಿವಾಸನು ದಯದಿ ಯೀ ನುಡಿ ನಿಜವೆಂದು ಧ್ಯಾನಿಸುವದಕನುಮಾನವಿಲ್ಲವು ಜಗದಿ ಭಾನುತನುಜನ ತ್ರೇತೆಯೊಳು ಪರಮಾನುರಾಗದಿ ಪೊರೆದವನು ಕ ರ್ಣಾನುಜನ ದ್ವಾಪರದಿ ಸೇರಲಿಕೇನುಫಲ ಪವಮಾನ ಪೇಳೆಲೊ 1 ಇದರಿಂದ ನಿನ್ನಯ ಪದ ಕಮಲವ ಸೇರಿ ಬದುಕುವೆನೆಂಬಾಸೆಯಾ ಹೃದಯದಿ ದೃಢವಾಗಿ ವಹಿಸಿರುವೆನು ಬೇಗ ಒದಗಿ ರಕ್ಷಿಸು ಭಾಷೆಯ ಹರಿಯು ಕೃಪೆ ಮಾಡುವಂದದಿ ಜಲನಿಧಿ ಸೇರುವಂದದಿ 2 ಮಂದಮತಿಯ ಮತದಿಂದ ಸಂಗರದೊಳಗಿಂದ್ರಾರಿತವಕ- ದಿಂದಾ ಮಹಾಸ್ತ್ರವ ಬಂಧಿಸೆ ಬೇಗದಿಂದಾ ಆ ಲಂಕೆಯಿಂದಾ ಒಂದೇ ಹಾರಿಕೆಯಿಂದಾಲೌಷಧಿ ತಂದು ಹರಿಗಳ ಕಾಯ್ದ ಪೂರ್ಣ- ನಂದ ರಾಮಾವತಾರಿ ಶೇಷಗಿರೀಂದ್ರ ಕರುಣವ ಸೂರೆಗೊಂಡಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸುಗುಣಿಯರಿಬ್ಬರು ಬಂದು ಹಗರಣವ ಮಾಡಿದರವ್ವ ಹಗರಣವ ಮಾಡಿದರವ್ವನಗÀಧರನ ಮುಂದೆ ನಾಚಿಕೆ ಇಲ್ಲವ್ವ ಪ. ಸಿಟ್ಟಿಲೆ ತನ್ನೆದೆಯ ಗಟ್ಟಸಿದಳವ್ವತಾ ಗಟ್ಟಿಸಿದಳವ್ವಕಷ್ಟದಿ ಭೀಷ್ಮಿಯುನಿಟ್ಟುಸಿರು ಹಾಕಿದಳವ್ವ1 ಇತ್ತ ದೂತೆಯು ತಾಥಟ್ಟನೆ ಬಂದಳವ್ವತಾ ಥಟ್ಟನೆ ಬಂದಳವ್ವಇಷ್ಟ ಏನೆಂದು ನೆಟ್ಟನೆ ಕೇಳಿದಳವ್ವ2 ಎಷ್ಟು ಹೇಳಲಿ ಈಕೆಎದೆಗಿಚ್ಚಿನವಳವ್ವಭಾವೆ ಎದೆಗಿಚ್ಚಿನವಳವ್ವÀ ಕೃಷ್ಣಗೆ ಕರೆದು ಕೊಟ್ಟಳು ವೀಳ್ಯವವ್ವ 3 ಕೆಟ್ಟ ರುಕ್ಮಿಣಿಯು ಕಲಹಗಾರುತಿಯವ್ವಬಲು ಕಲಹಗಾರುತಿಯವ್ವಅಗ್ಗಿಷ್ಟಿಗೆ ಆದಳು ಅತಿ ಸಿಟ್ಟಿನ ಹುಲಿಯವ್ವ4 ಚಿಕ್ಕ ಚೇಳೆಂದು ಬಲು ಅಕ್ಕರೆ ತೋರಿದೆನವ್ವ ಬಲು ಅಕ್ಕರೆ ತೋರಿದೆನವ್ವಭಾವೆಯ ಉಕ್ಕುಹೇಳಲು ಎನಗೆ ಶಕ್ಯ ಇಲ್ಲವ್ವ5 ಉರಗ ಹಿರಿಯದೆಂದು ಎರಗೊದೇನವ್ವಅದಕೆ ಎರಗೋದೆನವ್ವ ಉರವಣಿಗೆ ರುಕ್ಮಿಣಿಯಮುರಿಯಲಿಲ್ಲವ್ವ 6 ಕೆಂಜಿಗ ಕಚ್ಚಲು ಅಂಜೋರೇನವ್ವಅದಕಂಜುವರೇನವ್ವಭಾವೆಯ ಮಂಜುಳವಾಣಿ ಮೂಲೆಗೆ ಬೀಳಲೆವ್ವ 7 ಹದ್ದುಕುಕ್ಕಿದರೆ ಗದ್ದರಿಸೋರೇನವ್ವಅಂಜಿ ಗದ್ದರಿಸುವರೇನವ್ವರುಕ್ಮಿಣಿಯ ಮುದ್ದು ಮಾತುಗಳಸದ್ದಡಗಲಿಲ್ಲವ್ವ 8 ಒಳ್ಳೆಯವಳಲ್ಲ ಭಾವೆಮುಳ್ಳಿನಂಥವಳವ್ವಬಲುಮುಳ್ಳಿನಂಥವಳವ್ವಇವಳ ತಳ್ಳಿ ಮಾತುಗಳ ತಾಳಲಾರೆನವ್ವ9 ಸುಳ್ಳಿ ರುಕ್ಮಿಣಿ ಶೂಲದಂಥವಳವ್ವಬಲು ಶೂಲದಂಥವಳವ್ವಕಳ್ಳ ಮಾತುಗಳೆಷ್ಟುಕಲಿತಾಡುವಳವ್ವ10 ಮಸೆದ ಕತ್ತಿಯಂತೆ ಎಸೆವಳು ಭಾವೆಯವ್ವಬಲು ಎಸೆವಳು ಭಾವೆಯವ್ವಇವಳ ಹೆಸರು ಅಡಗÀಲಿಎನ್ನ ಉಸಿರು ಮುಟ್ಟಿಲಿಯವ್ವ11 ಬಾಲೆ ರುಕ್ಮಿಯು ಶೂಲದಂಥವಳವ್ವಬಲು ಶೂಲದಂಥವಳವ್ವಕಾಲು ಕೆದರಿಎನ ಮ್ಯಾಲೆ ಬಂದಿಹಳವ್ವ 12 ವೈರಿ ಸವತಿಯುಎನ್ನ ಸರಿಯಳೇನವ್ವ 13 ಶ್ರೇಷ್ಠಳಾದರೆ ನೀಉಚಿತವ ಇಟ್ಟುಕೊಳ್ಳವ್ವನೀ ತೊಟ್ಟುಕೊಳ್ಳವ್ವಇಷ್ಟೊಂದು ಸೊಕ್ಕುಕಟ್ಟಿಡಿಸುವೆನವ್ವ 14 ಸೊಕ್ಕು ಸೊಕ್ಕೆನಲಿಕ್ಕೆ ತಕ್ಕವಳೇನೆ ಭಾವೆಇವಳು ತಕ್ಕವಳೇನೆ ಭಾವೆಇವಳ ಚಕ್ಕಂದಕ್ಕೆ ಹರಿಯುಅಕ್ಕರ ಬಡುವನವ್ವ15 ಅಕ್ಕಸದ ಮಾತು ಕೇಳಲಾರೆನವ್ವನಾ ಕೇಳಲಾರೆನವ್ವಇವಳ ಉಕ್ಕಸಕೆ ಕೃಷ್ಣಧಕ್ಕನೆ ನಾಚಿದನವ್ವ16 ಮುಂಜೆರಗು ಹಿಡಿದು ಗುಂಜಿಸಿ ಎಳೆವೆನವ್ವನಾ ಎಳೆವೆನೆವ್ವಪಂಜರದ ಗಿಳಿಯಂತೆಅಂಜಲಿ ಇವಳವ್ವ17 ಕೈ ಹಿಡಿದು ಕೆಳಗೆ ಎಳೆವೆನವ್ವನಾ ಕೆಳಗೆ ಎಳೆವೆನವ್ವಭಯವೇನವ್ವ ರುಕ್ಮಿಣಿಯ ಭಯವೇನವ್ವಅಯ್ಯೊ ಅಂಜಲ್ಯಾತಕೆ ಸೈ ಸೈಯವ್ವ18 ಎಷ್ಟು ಫಾತುಕಳೆ ನಷ್ಟಳು ಭಾವೆಯವ್ವಬಲು ನಷ್ಟಳು ಭಾವೆಯವ್ವಕೃಷ್ಣನ ತೊಡೆಬಿಟ್ಟು ಇಳಿಸುವೆನವ್ವ19 ಭಾಳೆ ಘಾತುಕಳು ರುಕ್ಮಿಣಿಯವ್ವನೀ ಕೇಳೆ ರುಕ್ಮಿಣಿಯವ್ವಗೈಯ್ಯಾಳಿಯ ತೊಡೆಬಿಟ್ಟು ಇಳಿಸುವೆನವ್ವ20 ಚಂದ್ರನಿಲ್ಲದ ಚಿಕೆÀ್ಕ ಚಂದವೇನವ್ವಅದು ಚಂದವೇನವ್ವನಿಜಳೆ ಎನ್ನಮ್ಯಾಲೆಬಂದಿಹಳ್ಯಾತಕವ್ವ21 ದಾರ ಮಲ್ಲಿಗೆ ನಡುವೆ ತೋರಿದಂತವ್ವಅದು ತೋರಿದಂತವ್ವಇವಳ ಹಿರಿತನವೆಲ್ಲವಅರಿಯೆನವ್ವ22 ಸಿರಿರಮಿ ಅರಸಗೆ ಸರಿಯಿಬ್ಬರು ನೀವÀವ್ವನೀವು ಸರಿಯಿಬ್ಬರವ್ವಬರಿಯೆ ಕರಕರೆಯಹಿರಿಯರಲ್ಲವ್ವ 23
--------------
ಗಲಗಲಿಅವ್ವನವರು
ಸುಬ್ಬರಾಯ ಸುಜನಪ್ರಿಯ ಕರ್ಬುರಾಂತಕ ನಿರ್ಭಯವನು ಪಾಲಿಸಯ್ಯ ನಿರ್ಗತಮಾಯ ಪ. ಗೌರೀಕುಮಾರ ಪಾರಾವಾರಗಭೀರ ಮಾರನವತಾರ ತಾರಕಾರಿ ಶ್ರೀಕರ1 ಪಂಕಜಾಕ್ಷ ಪಾಹಿಮಾಂ ಶ್ರೀಶಂಕರಾತ್ಮಜ ಕುಂಕುಮಾರುಣವರ್ಣ ಪೂರ್ಣಾಲಂಕೃತ ವಿರಜ2 ಪೃಥ್ವಿಗುತ್ತಮ ಪಾವಂಜಾಖ್ಯ ಕ್ಷೇತ್ರಮಂದಿರ ಕರ್ತ ಲಕ್ಷ್ಮೀನಾರಾಯಣಭೃತ್ಯ ಸುಂದರ3
--------------
ತುಪಾಕಿ ವೆಂಕಟರಮಣಾಚಾರ್ಯ
ಸುವ್ವಿ ಶ್ರೀ ಗುರುನಾಥ ಸುವ್ವಿ ಸದೋದಿತ ಸುವ್ವಿ ಸಾಯೋಜ್ಯದೊಡೆಯನೆ ಸಾಯೋಜ್ಯದೊಡಿಯ ಸದ್ಗುರು ನಮ್ಮಯ್ಯ ಸುವ್ವೆಂದು ಪಾಡಿ ಸಜ್ಜನರೆಲ್ಲ ಧ್ರುವ ಮನವ ಕಣಕವ ಮಾಡಿ ಗಣಪತಿಯ ಬಲಗೊಂಡು ಅನುಮಾನೆಂಬೆಳ್ಳ ಚಿಗಳಿಯ ಅನುಮಾನೆಳ್ಳ ಚಿಗಳಿ ನೆನವು ನೆನಗಡಲಿಯ ಗಣನಾಥಗಿಟ್ಟು ಬಲಗೊಂಡು 1 ಮನವೆಂಬ ಕಣಕವ ಘನವಾಗಿ ಕುಟ್ಟುತ ಜ್ಞಾನ ವೈರಾಗ್ಯದೊಡಗೂಡಿ ಒಡಗೂಡಿ ಕುಟ್ಟುತ ಪ್ರಾಣದ ಸಖಿಯರು ಅನಂದ ಘನವ ಬಲಗೊಂಡು 2 ನಿರ್ಗುಣಾನಂದನು ಸುಗುಣವ ತಾಳಿದ ಅಗಣಿತಗುಣ ಪರಿಪೂರ್ಣ ಪರಿಪೂರ್ಣವಾಗಿಹ ಅಗಮ್ಯನುಪಮ ನಿಗಮ ಗೋಚರನ ಬಲಗೊಳ್ಳಿ 3 ಉತ್ಪತ್ತಿ ಸ್ಥಿತಿ ಲಯ ವಿಸ್ತಾರದೋರಲು ಮತ್ತೆ ತ್ರಿಗುಣವ ತಾಳಿದ ತಾಳಿದ ಸತ್ವ ರಜ ತಮವು ತ್ರಿಮೂತ್ರ್ಯದ ನಿತ್ಯ ನಿರ್ಗುಣನ ಬಲಗೊಳ್ಳಿ 4 ಭಕ್ತರ ಹೊರಿಯಲು ಪೃಥ್ವಿಯೊಳಗಿನ್ನು ಹತ್ತವತಾರ ಧರಿಸಿದ ಭರಿಸಿ ಪೃಥ್ವಿಯೊಳು ಮುಕ್ತಿ ಸಾಧನವಿತ್ತು ಪತಿತಪಾವನನ ಬಲಗೊಳ್ಳಿ 5 ಅನಾಥಜನರ ದೈನ್ಯ ಹರಿಸಲಾಗಿ ಆನಂದದಿಂದ ಪುಟ್ಟಿಹ್ಯ ಪುಟ್ಟಹ್ಯಾನಂದದಿ ಘನ ಗುರುಮೂರ್ತಿಯ ಜ್ಞಾನದಲೊಮ್ಮೆ ಬಲಗೊಳ್ಳಿ 6 ಕುಸುವ ನಿಶ್ಚಯ ಒನಕಿಯ ಕುಸುವ ನಿಶ್ಚಯದ ಒನಕಿ ಹಸ್ತದಿ ಪಿಡಿದು ಹಸನಾಗಿ ಕಣಕ ಕುಟ್ಟುತ 7 ಹಸನದಿಂದ ಕುಟ್ಟಿ ನಾದಿ ಉರಳಿ ಮಾಡಿ ಮದನ ಮೋಹನಗ ಮದುವೀಗ ಮದುವಿಯ ಮನೆಯಲ್ಲಿ ಮುದದಿ ಮೂವತ್ತಾರು ಮೊದಲಾದ ಗುರಿಯ ಮುತ್ತೈದೇರು 8 ಚದುರತನದಲಿ ಒದಗಿ ಮುತ್ತೈದೇರು ಯದುಕುಲೋತ್ತಮನ ನೆನವುತ ನೆನವುತ ಹದನದಿಂದಲಿ ಮನವಿಡುತ ಆದಿ ತ್ರಿಮೂರ್ತಿ ಬಲಗೊಂಡು 9 ಅಸಿಯ ಕಲ್ಲಿ ಒನಕೆ ಉಸಲಾರಗೊಡದೆ ಹಸನಾಗಿ ಕಣಕ ಕುಟ್ಟುತ ಕುಟ್ಟುತ ಮನವೆಂಬ ಕಣಕ ಹಸನವು ಮಾಡಿ ವಿಶ್ವ ವ್ಯಾಪಕನ ಮದುವಿಗೆ 10 ಕುಟ್ಟಿದ ಕಣಕವು ಘಟ್ಟಿಸಿಹ ಮಾಡಿ ಒಟ್ಟಿ ಉನ್ಮನೆಯ ಮುದ್ರಿಯಲಿ ಮುದ್ರಿಲೆ ಒಟ್ಟಲು ದಿಟ್ಟ ಮುತ್ತೈದೇರು ಕೊಟ್ಟ ಸದ್ಗುರು ಹರುಷವ 11 ಜ್ಞಾನ ವೈರಾಗ್ಯವೆಂಬ ಅನಾದಿ ಶಕ್ತ್ಯರು ಕಣಕವ ಕುಟ್ಟಿ ದಣಿದರು ಮನವೆಂಬ ಕಣಕದ ಉರಳೆ ಉನ್ಮನಿಲಿಟ್ಟು ಮೌನ್ಯ ಮೋನದಲಿ ಮುಸುಕಿರೆ 12 ಹಸನಾದ ಕಣಕಲಿ ಹೊಸಪರಿ ಭಕ್ಷ್ಯವು ಹೆಸರಿಟ್ಟು ಏಸು ಪರಿಯಿಂದ ಪರಿಯಿಂದ ಮಾಡುತ ಬೀಸೋರಿಗಿಗಳು ವಾಸುದೇವನ ಮದುವಿಗೆ 13 ಅಡಿಗಿಯ ಮಾಡಿದ ಸಡಗರ ಪೇಳಲಿ ಪೊಡವಿಯೊಳಿನ್ನು ಅಳವಲ್ಲ ಅಳವಲ್ಲದಡಗಿಯ ಕೂಡಿ ಮುತ್ತೈದೇರು ಎಡಿಯು ಮಾಡಿದರು ತಡೆಯದೆ 14 ಒಂದೆ ಸಾಲದಲಿ ಕುಳಿತರು ಕುಳಿತು ಸಾಧು ಜನರ ಮುಂದೆ ಎಡಿ ಮಾಡಿ ಒಂದೊಂದು ಪರಿಯ ಬಡಿಸುತ 15 ಹಪ್ಪಳ ಸೊಂಡಿಗಿ ಉಪ್ಪು ಮೆಣಸುಗಳು ಒಪ್ಪದಿಂದ ಬಡಿಸುತ ಬಡಿಸುತ ತಪ್ಪದೆ ಉಪ್ಪಿನೆಸರಗಳು ಶ್ರೀಪತಿ ಪ್ರಸ್ತದೆಡಿಯಲಿ 16 ಪ್ರಸ್ತದ ಎಡಿಯಲಿ ಪತ್ರ ಶಾಖೆಗಳು ಮತ್ತೆ ಅನೇಕ ಪರಿಯಾದ ಪರಿಯಾದ ಶಾಖವು ಸುತ್ತ ಪಂಕ್ತಿಯಲಿ ಆತ್ಮದಿಂದ ಬಡಿಸುತ 17 ಪರಮಾನ್ನಗಳ ತಂದು ಹಿರಿಯ ಮುತ್ತೈದೇರು ಸರಿಯಾಗಿ ಎಡಿಯ ಬಡಿಸುತ್ತ ಬಡಿಸುತ ಅನ್ನ ಪರಮಾನ್ನ ಅನುಭವದ ಅನಂದದಿಂದ ಬಡಿಸಿದೆ 18 ಮನೋ ಅನುಮಿಷದ ಎಣ್ಣೋರಿಗಿಗಳು ಎಣಕಿಲ್ಲದಿಹ ಭಕ್ಷ್ಯವು ಭಕ್ಷ್ಯದ ಜಿನಸ ಅನೇಕ ಪರಿಯಲಿ ಘನದೊಲುವಿಂದ ಬಡಿಸುತ 1 9 ಸಖರಿ ತುಪ್ಪವು ಭಕ್ತಿಭಾವದಲಾದ ಬಡಿಸುತ ನಡೆದರು ಅಖರದಿಂದಲಿ ಏಕಶಾಂತನ ಮದುವಿಗೆ 20 ಮೊಸರು ಮಜ್ಜಿಗಿಯು ಸುವಾಸದಿಂದಾದ ಲೇಸಾಗಿ ದಣಿಯಬಡಿಸಿರೆ ಬಡಿಸಿದ ಷಡುರಸಾನ್ನವನುಂಡಿನ್ನು ಕಡುಬೇಗ ಪ್ರೇಮ ಉಕ್ಕಿತು 21 ಉಂಡುವೀಳೆಯುವ ಕೊಂಡು ಸಾಧುಸಭೆ ಮಂಡಲದೊಳು ಪೊಗಳಿತು ಪೊಗಳಿತಾ ಮಂಡಲದೊಳು ಪ್ರಚಂಡನ ಮದುವಿ ಅಖಂಡ ಹರುಷದಿ 22 ಗಂಧ ಕಸ್ತುರಿಯ ತಂದೆ ಗುರುಕೃಪೆಯ ಚಂದವಾಗಿಟ್ಟು ಮೆರೆದರು ಮೆರೆದು ಮೇದಿನಿಯೊಳು ಗುರುದಯ ಕರುಣಾದಿ ಪರಮ ಸುಪಥವ ಪಡೆದರು 23 ಮದುವಿ ಮುತ್ತೈದೇರು ಮುಕ್ತಿಸಾಧನ ಕಂಡು ಸುಖಸೂರೆಕೊಂಡಿನ್ನು ಶ್ರೀಮಂತಕರದೊಳು ಬೆರೆದು ಹರುಷವ ಪಡೆದರು24 ಸರಿ ಇಲ್ಲದ ಪ್ರಸ್ತ ಧರೆಯೊಳಗಾಯಿತು ಪರಮಾನಂದದ ಹರುಷಲಿ ಹರುಷವ ಕಂಡಿನ್ನು ಕರುಮುಗಿದು ಮಹಿಪತಿ ಹೃತ್ಕಮಲದಲ್ಲಿ ಸ್ತುತಿಸಿದ 25 ಶ್ರೀಪತಿ ಮದುವಿಯ ಸ್ತುತಿ ಪಾಡಿದವರಿಗೆ ಪಾತಕವಿಲ್ಲ ಭಯವಿಲ್ಲ ಭಯವಿಲ್ಲ ಕ್ಷಿತಿಯೊಳು ಗುರುಭಕ್ತಜನರಿಗೆ ಸಂತತ ಸುಖವ ಪಡೆವರು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸುಳಾದಿ ಧ್ರುವತಾಳ ಜಿಹ್ವೆ ಸಿರಿ ಗೋಪಾಲವಿಠಲಮೂರ್ತಿಮಂತನಾಗಿ ಇಪ್ಪ ಎಲ್ಲ ಸ್ಥಳದಿ 1 ಮಠ್ಯತಾಳ ಧನವೋದನವು ಇನ್ನು ಧನದೊಳಗಿಪ್ಪನ್ನನೆನೆದು ತೆಗೆದುಕೊ ಶೋಧನಮಾಡಿ ನೋಡಿತನುವಿಗೆ ಕೆಲಸವಿಡು ತನುಬಂಧುಗಳ ನೋಡುಎಣಿಕೆಗೆ ತಂದು ಭಾಗವನು ಮಾಡು ನಾಲ್ಕುಎಣಿಸುತಲ್ಲಲ್ಲಿ ನೆನೆ ಎಲ್ಲ ಸ್ಥಳದಿಗುಣ ಹರಿಯದೆಂದು ಗುಪ್ತನಾಗಿ ಇನ್ನುಅಣುಘನಪರಿಪೂರ್ಣ ಗೋಪಾಲವಿಠಲಅನಿಮಿತ್ತ ಬಂಧ್ವೆಂಬ ಗುಣವುಂಟವನಿಗೆ2 ರೂಪಕತಾಳ ಒಂದು ಅರ್ಥವು ನಿನಗೆ ದೊರಕಿದಡಾಯಿತೆಚಂದದಿ ಚಿಂತಿಸು ಅನಂತಪರಿಯಲ್ಲಿಒಂದುಭಾಗ ದೇವಸಮುದಾಯಕ್ಕೆ ಕೊಡುಒಂದುಭಾಗ ಪಿತೃಗಳಿಗೆ ಇನ್ನು ಮಾಡುಒಂದುಭಾಗ ಪರಿವಾರ ಬಂಧುಗಳಿಗೆಚಂದದಿ ಕೊಟ್ಟು ಆನಂದ ಉಣುಕಂಡ್ಯನಂದಗೋಪನ್ನ ಕಂದ ಗೋಪಾಲವಿಠಲನ್ನಚಂದದಿ ನಿನ್ನ ಮನಮಂದಿರದೊಳು ತಿಳಿ 3 ಝಂಪೆತಾಳ ಜ್ಞಾನವೆ ಮುಖ್ಯಸಾಧನ ನಿನಗೆ ನೋಡುಏನು ಧನದಿಂದಾಗೊ ಕರ್ಮವದರೊಳಗುಂಟುಪ್ರಾಣಹಿಂಸರಹಿತಕರ್ಮ ಮಾಡು ನಿತ್ಯಶ್ರೀನಿವಾಸನು ಅದಕೆ ಮೆಚ್ಚುವನುಜ್ಞಾನಮಯಕಾಯ ಗೋಪಾಲವಿಠಲರೇಯಕಾಣಿಸುವ ನಿನಗೆ ಕರುಣವಮಾಡಿ ನಿರುತ 4 ತ್ರಿಪುಟತಾಳ ತನುವು ಮಂಟಪಮಾಡು ಮನವೆ ಪೀಠವ ಇಡುನೆನೆದು ಕುಳ್ಳಿರಿಸು ನಿನ್ನ ಒಳಗಿದ್ದ ಮೂರ್ತಿಯಧ್ಯಾನ ಆವಾಹನಾದಿಗಳ ನೆನೆದು ಅಲ್ಲಿಪ್ಪಅಣುಮಹಾಮೂರ್ತಿಗೆ ಅಭಿಷೇಕ ಮಾಡಿಸುಗುಣಮೂರರೊಳಗಿದ್ದ ಹರಿಯ ನೆನೆದುಜಿನಸು ವಸನಾಭರಣ ಧೂಪದೀಪವ ಮಾಡಿನೆನಸು ಗಂಧ ಪುಷ್ಪವನು ಮಿಕ್ಕಾದದ್ದೆಲ್ಲಗುಣ ಮೂರುವಿಧದ ಪದಾರ್ಥಗಳನ್ನೆಲ್ಲನಿನಗೆ ಒಂದು ಉದಕಮಾತ್ರ ದೊರಕಿದರೆಇನಿತು ಪರಿಯು ಎಲ್ಲ ಅದರಿಂದ ಚಿಂತಿಸೊಧನದ ಪೂಜೆಗೆ ಅತ್ಯಾಯಾಸಪಡಲಿಬೇಡಘನದೈವ ನಮ್ಮ ಗೋಪಾಲವಿಠಲರೇಯನಿನಗೆಷ್ಟುಪರಿಯಲ್ಲಿ ಪೊರೆವನವನ ತಿಳಿ 5 ಅಟ್ಟತಾಳ ಒಳಗೆ ಬಂದರೆ ನಿನ್ನ ಒಳಗೆ ಇರುತಲಿಪ್ಪಸುಳಿಯುತಿಪ್ಪ ನಿನ್ನ ಸುತ್ತ ಬಿಡದೆ ಬೆನ್ನಹಲವುಪರಿಕರ್ಮ ನಿನಗಾಗಿ ಮಾಡುತ್ತಚೆಲುವ ನಿರ್ಲಿಪ್ತನ್ನ ತಿಳಿಯದೆ ಕೆಡುವಿ ಯಾಕೆಸುಲಭವಾಗಿ ಕರತಳದಲ್ಲಿದ್ದಂಥಫಲವ ನೀ ಕಾಣದೆ ಬಲು ದಣಿಸುವುದೇನೊಗೆಳೆಯನಾಗಿ ಪಾರ್ಥಗೊಲಿದ ನಮ್ಮ ಸ್ವಾಮಿಚೆಲುವ ಗೋಪಾಲವಿಠಲರೇಯನ ನೀನುಗಳಿಗೆ ಮರೆಯಬೇಡ ಬಲುಪ್ರಿಯಾ ಬಲುಪ್ರಿಯಾ 6 ಆದಿತಾಳ ಸೂರ್ಯ ಅಧಿಷ್ಠಾನದಲ್ಲಿದ್ದುದೇವನ ಸ್ಮರಣೆಯು ಬರುತಿರಲಿ ಕಂಡ್ಯಾಕಾವನು ಬಿಡನಿನ್ನು ಗೋಪಾಲವಿಠಲ 7 ಜತೆ ಗೃಹಮೇಧಿ ಮಾಡಿ ನಿನ್ನ ಗೃಹದೊಳಗಿಪ್ಪಂಥಶ್ರೀಹರಿ ಗೋಪಾಲವಿಠಲನ್ನ ನೆನೆಕಂಡ್ಯಾ
--------------
ಗೋಪಾಲದಾಸರು
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸುಳಾದಿ ಧ್ರುವತಾಳ ಹರಿಪದವ ನೆನೆವಂಗೆ ನರಕದ ಭಯವಿಲ್ಲ ಹರಿಪದವ ನೆನೆವಂಗೆ ಮಾಯೆಯ ಭಯವಿಲ್ಲ ಹರಿಪದವ ನೆನೆವಂಗೆ ವಿಷದ ಭಯವಿಲ್ಲ ಹರಿಪದವ ನೆನೆವಂಗೆ ಭವದ ಭಯವಿಲ್ಲ ಹರಿಪದವ ನೆನೆವಂಗೆ ಜನನದ ಭಯವಿಲ್ಲ ಹರಿಪದವ ನೆನೆವಂಗೆ ಮರಣದ ಭಯವಿಲ್ಲ ಬರಿಯ ಮಾತೇ ಅಲ್ಲ ಅಕುತೋಭಯನೆಂದು ವರದ ಹಯವದನನ ಪದಪದುಮವ ನಂಬು 1 ಮಠ್ಯÀತಾಳ ಧ್ರುವನ ನೋಡು ಸುರಲೋಕದಿ ಭುವಿ ವಿಭೀಷಣನ್ನ ನೋಡಿರೊ ಅವನಿಯ ಕೆಳಗೆ ಬಲಿಯ ಉತ್ಸಹವ ನೋಡಿ ಮನುಜರೆಲ್ಲರು ಭುವನ ತೃತೀಯದವರೆ ಸಾಕ್ಷಿ ಹಯವದನನ ಭಜಕರಿಗೆ 2 ತ್ರಿಪುಟತಾಳ ಹತ್ತಾವತಾರದಿ ಭಕ್ತರ ಭಯಗಳ ಕಿತ್ತು ಭೃತ್ಯರ ಕಾಯ್ವ ಕಥೆÉಯ ಕೇಳ್ವರು ಮತ್ತೆ ಮೃತ್ಯುಗಳ ಭೀತÀನೆಂಬುವುದ್ಯಾಕೆ ಹೆತ್ತ ತಾಯಿಯಿಂದ ತತ್ವವ ಕೇಳಯ್ಯ ಕರ್ತೃ ಹಯವದನನೆ ಭಕ್ತರ ಭಯಕ್ಕೆ ಕತ್ತಲೆಗಿನನಂತೆ ಹತ್ತು ಎಂಬುದು ನಂಬು3 ಝಂಪೆತಾಳ ಕರಿಯ ಕಾಯ್ದವನ ಪಾದವ ನಂಬು ಉರಿಯ ನುಂಗಿದವನ ಪಾದವ ನಂಬು ಸಿರಿ ಹಯವದನನೆ ಭಕ್ತರ ಭಯ ಸಂ- ಹರಣನೆಂಬುದಕ್ಕಿನ್ನು ಸಂಶಯವಿಲ್ಲ 4 ರೂಪಕÀತಾಳ ದ್ರೌಪದಿಯ ಭಯ ಪರಿಹರಿಸಿದವನಾರೈ ಆ ಪರೀಕ್ಷಿತನ ಭವಭಂಜನನಾರೈ ತಾಪಸರಿಗಸುರರಿಂದ ಬಂದ ಪರಿಪರಿಯ ಆಪತ್ತುಗಳನೆಲ್ಲ ಖಂಡಿಸಿದನಾರೈ ಶ್ರೀಪತಿ ಹಯವದನನೊಬ್ಬನೆ ತನ್ನವರ ತಾಪತ್ರಯವ ಬಿಡಿಸಿ ತಕ್ಕೈಸಿಕೊಂಬ 5 ಅಟ್ಟತಾಳ ವಿಷನಿಧಿಯನೊಂದು ದಾಟಿ ವ್ಯಸನಗಳನೆಲ್ಲ ಖಂಡಿಸಿ ಬಿಸಜವನಿತೆಯ ಕಂಡು ಬಂದ ಅಸಮ ಹನುಮನ ನೋಡಯ್ಯ ಕುಸುಮವನು ತರಪೋಗಿ ಅಸುರರ ಕುಸುರಿದರಿದುದ ನೋಡಯ್ಯ ಬಿಸಜಾಕ್ಷ ಹಯವದನ ತನ್ನ ಹೆಸರುಗೊಂಡರೆ ಭಕ್ತರ ವಶÀಕ್ಕಿಪ್ಪುದು ಪಾರ್ಥನ ಯಶವ ಪಸರಿಸಿದ ಅಚ್ಚುತ 6 ಪೂರ್ವಕಾಲದಿ ತೀರದ ಕಥೆಗಳ ನಿ- ವಾರಿಸಿ ಜರಿದುದ ನರರೆಲ್ಲ ಕಾಣರೆ ಶರೀರವೆರಸಿದವರಿಗೆ ಸ್ವರ್ಗಗತಿಯುಂಟೆ ಕರುಣಾಕರ ಕೃಷ್ಣನ ಕಂಡವರಿಗೆ ಭಯವುಂಟೆ ಈರೇಳು ಲೋಕದೊಳಗೆ ಈ ಹಯವದನನಂತೆ ಶರಣಾಗತಜನರ ಸಲಹುವರುಳ್ಳರೆ 7 ಜತೆ ಸುರಾಸುರಚಕ್ರವರ್ತಿ ಅಸುರಮದಭೇದನ್ನ ಸಿರಿ ಹಯವದನನ್ನ ಚರಣವೆ ಗತಿಯೆನ್ನು
--------------
ವಾದಿರಾಜ
ಸುಳಾದಿ ರಾಗ :ಸಾರಂಗ ಧ್ರುವತಾಳ ಬಿನ್ನಪವ ಮಾಡುವೆ ಯಜ್ಞ ಶ್ರೀನಿವಾಸ ನಿನ್ನ ಶರಣಗೆ ಹಲವು ಹಂಬಲ ಸಲ್ಲ ಇನ್ನು ತಾನೊಮೊಮ್ಮೆ ಬಯಸಿದೇ ಭಕುತಿಗೆ ಅನ್ಯಥಾವಾಗದಂತೆ ಬಯಸಿಕೊಳಲಿ ಮನ ಚಿನ್ನರ್ಗೆ ಫಲವಿತ್ತೆ ಓದು ಪೇಳುವ ತೆರ ಚನ್ನಾಗಿ ನೀನೆವೇ ಫಲವನ್ನು ಒಲಿದಿತ್ತ ವಾಕು ಆದರಿಸೊ ವಾಸುದೇವವಿಠಲ 1 ಮಟ್ಟತಾಳ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ ದಿಂಡೇರ ಕೈಯಿಂದ ನೋಯಗೊಳಿಸದಿರೊ ಅಂಡಜವಾಹನ ಬಿರುದು ನಿನ್ನದು ನೋಡು ಕೊಂಡಾಡುವೆ ವಾಸುದೇವವಿಠಲರೇಯ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ 2 ತ್ರಿವಿಡಿ ತಾಳ ಆವಾವ ಆಶ್ರಮವನ್ನು ಒಲಿದಿತ್ತು ನೀನೇವೆ ಆವಾವ ಬಗೆಯಲ್ಲಿ ಸಾಧನ ಮಾಡಿಸೊ ಆವಾವ ಬಗೆಯಲ್ಲಿ ಬಲ್ಲ ಸರ್ವಜ್ಞನೆ ಆವಾವ ವಿಧದಿಂದ ಬಿನ್ನೈಪುದೇನೆಲೊ ಕಾವ ಕರುಣಿ ವಾಸುದೇವವಿಠಲರೇಯಾ ಆವಾವ ಬಗೆಗಳ ಬಿನ್ನೈಪುದೇನಯ್ಯಾ 3 ಅಟ್ಟತಾಳ ಕೊಡಗೈಯ್ಯ ದೊರೆ ಎಂದು ನಂಬಿಲ್ಲಿಗೆ ಬಂದ ಬಡನಡವಳ ನೀನು ಕಡೆಗೆ ನೋಡುವರೇನೊ ತೊಡರುಗಳಿದ್ದರು ಬಿಡಿಸುವ ಬಗೆ ಬಲ್ಲ್ಯೋ ತಡೆಕೊಡುವ ದೋಷ ಒಡೆಯ ನಿನ್ನೆದುರಿಗೆ ಅಡರಿ ನಿಲ್ಲುವದುಂಟೆ ಆವಾವ ಕಾಲಕ್ಕೆ ಪೊಡವಿಯ ತಳದಲ್ಲಿ ಪುಟ್ಟಿ ಸಾಧನಗಳು ಪಡಿಯಲಿಬೇಕೆಂಬ ಭಕುತ ಜನರುಗಳು ಕಡಿಮೇನೊ ಅವರೊಶ ಮಾಡಿಸೊ ಭಕ್ತರ ಬಿಡಿಯ ಬಿರುದಿನ ವಾಸುದೇವವಿಟ್ಠಲ 4 ಆದಿತಾಳ ಒಂದೊಂದು ಕೊಡಲು ಮತ್ತೊಂದು ಕೊಡಲಿ ಎಂದು ಸಂದಣಿಸುತಲಿವೆ ವಿಷಯಗಳೊಂದು ತಂದೆ ತಡಮಾಡಬೇಡವೊ ಅದರಿಂದ ಒಂದೆ ಸಾಧನ ಬಹಳಾಗುವದೊ ಇಂದಿರೇಶ ಬಯಸಿದೆ ನಿನ್ನಲ್ಲಿ ಬಂದು ಒದಗಿಸೊ ವಾಸುದೇವವಿಠಲ 5 ಜತೆ ಕರುಣಾಳು ಸ್ವಾತಂತ್ರ ವಾಸುದೇವವಿಠಲ ಸರ್ವಜ್ಞ ನಿನಗೆ ಮೊರೆ ಇಡೊದಿದೆ ಚಿತ್ರ 6
--------------
ವ್ಯಾಸತತ್ವಜ್ಞದಾಸರು