ಒಟ್ಟು 2677 ಕಡೆಗಳಲ್ಲಿ , 120 ದಾಸರು , 1860 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಜೀವ ಕರ್ತೃತ್ವದ ಭ್ರಮೆಯ ಬಿಡಿಸೊ ಪ ಜೀವೇಶನೊಡೆಯ ಶ್ರೀ ವೇಣುಗೋಪಾಲ ಹರಿ ಅ.ಪ ಮಿಥ್ಯೆವೆಂಬುದು ಬಲ್ಲೆ ಕರ್ತೃತ್ವ ನಮಗಿಲ್ಲ ಪ್ರತ್ಯಕ್ಷಕಪವಾದದಲ್ಲಿ ಬಾಳ್ವೆ ವ್ಯರ್ಥಧಾವತಿಪಡುವೆ ಸರ್ವಕರ್ತನ ಮರೆದು ಯತ್ನಕೆ ವಶವಲ್ಲ ಮಿಥ್ಯೆ ಭಾವವು ಬಿಡಲು 1 ವಿಷಯ ವಿಷವದು ಬಲ್ಲೆ ತಲ್ಲೋಭ ಬಿಡಲರಿಯೆ ವಿಷಮಗತಿ ಪ್ರವಹದಲಿ ವಿವಶನಾಗಿ ಹುಸಿನಂಬಿ ತೆರಳುತಿಹೆ ಹರುಷ ಕಾಣದೆ ನಿಜದೆ ಕೃಶನಾದೆ ಹರಿಯೆನ್ನ ಕೈಪಿಡಿದು ಉದ್ಧರಿಸೊ 2 ಗುಣವಿಲ್ಲ ದೋಷಿಲ್ಲದೆಡೆಯಿಲ್ಲ ಎನ್ನಲ್ಲಿ ದನುಜಾರಿ ನಿನ್ನವರ ಕರುಣ ಉಂಟೊ ಪ್ರಣತಾರ್ಥಿ ಹರ ಶ್ರೀ ಜಯೇಶವಿಠಲನಲ್ಲಿ ವಿನುತ 3
--------------
ಜಯೇಶವಿಠಲ
ಜೋ ಜೋ ಜೋ ಜೋ ಜೋ ಕೃಷ್ಣ ಪರಮಾ- ನಂದ ಗೋಪಿಯ ಕಂದ ಮುಕ್ಕುಂದ ಜೋಜೋ ಪ ಪೆಟ್ಟಿಗೆಯೊಳಗಿದ್ದ ಪರಿಪೂರ್ಣ ಕಾಮಾ ಮುಟ್ಟಿ ಭಜಿಸೊ ಮಹಾಯತಿಗಳ ಪ್ರೇಮಾ ತೊಟ್ಟಿಲವೊಳಗೆ ಮಲಗಿದ್ದ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಸ್ತೋಮಾ 1 ಪಠವಳಿನುಟ್ಟು ಬಂದರು ಸುರರಾಗ ಘಟಣಿ ಬಿದ್ದೀತೆಂದು ಮಹಪುಣ್ಯವೀಗ ವಟಪತ್ರ ಕಲ್ಪನ್ನ ತೂಗಿರಿ ಬೇಗ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಪ್ರೇಮಾ2 ಪಾಕಶಾಸನ ಬಂದು ಮಳೆಗಳ ಕರೆಯೆ ಗೋಕುಲವನು ಕಾಯ್ದ ಮಹಿಮೆಯು ಸರಿಯೆ ಲೋಕದೊಳಜಭವರಿಗೆ ದೊಡ್ಡ ಧೊರೆಯೆ ಶ್ರೀಕಾಂತ ಸರ್ವೋತ್ಮ ನೀನೆ ಶ್ರೀಹರಿಯೆ 3 ಆಲದೆಲಿಮ್ಯಾಲೆ ಮಲಗಿರೊ ಕಂದಾ ಮ್ಯಾಲ ಕಲ್ಪವನು ದೃಷ್ಟಿಸಿದ್ಯೋ ನಿನ್ನಿಂದಾ ಬಾಲನ ಪಡದ್ಯೊ ನಾಭಿಕಮಲದಿಂದಾ ಪಾಲಾಬ್ಧಿ ಶ್ರೀರಮಣ ಮುಕ್ಕುಂದಾ 4 ಮಾಮುನಿ ಸತ್ಯಬೋಧರಾಯರಿಂದ ಪ್ರೇಮದಿಂದಲ್ಲೆ ತೂಗಿಸಿಕೊಂಬೊ ಛೆಂದಾ ಸ್ವಾಮಿ ಕದರುಂಡಲಗಿ ಹನುಮಯ್ಯಗಾನಂದ ಪ್ರೇಮದಿಂದಲ್ಲೆ ತೂಗಿದರು ಗೋವಿಂದ 5
--------------
ಕದರುಂಡಲಗಿ ಹನುಮಯ್ಯ
ಜೋ ಜೋ ಜೋ ಮಲಗೋ | ಮುಕುಂದಾ ಪ ಹಸನಾಗದು ಗೋಪಾಲ ||ಕೃಷ್ಣ|| 1 ಸೊಲ್ಲ ಲಾಲಿಸುವಿಯ ಕಂದ ||ಕೃಷ್ಣ|| 2 ತೊಟ್ಟಿಲ ತೂಗುತ ನಿಂತರೆ ಶ್ರೀದ - ವಿಠಲಾ ನಿನಗಾನಂದಾ ||ಕೃಷ್ಣ|| 3
--------------
ಶ್ರೀದವಿಠಲರು
ಜೋ ಜೋ ಜೋ ಶ್ರೀ ಆತ್ಮಾರಾಮಾ | ಜೋ ಜೋ ಜೋ ನೀ ಸುಖ ಧಾಮಾ | ಜೋ ಜೋ ಸಾಧು ಸಜ್ಜನ ಪ್ರೇಮಾ | ಜೋ ಜೋ ಸಾಧು ಸಿದ್ಧ ಜ್ಞಾನಿ ನಿಃಸೀಮಾ ಪ ಪಂಚಭೂತ ರತ್ನ ತೊಟ್ಟಿಲು ಮಾಡಿ | ಪಂಚ ವಿಂಶತಿ ತತ್ತ್ವ ನವಾರ ಹೂಡಿ | ಪಂಚಕೋಶವೆಂಬೊ ಹಾಸುಕೆ ನೋಡಿ |ಪಂಚ ತತ್ತ್ವಾತೀತ ಮೂರ್ತಿಯ ಪಾಡಿ | ಜೋ ಜೋ | 1 ನಿತ್ಯ ಪರ ಸಚ್ಚಿದಾನಂದ ಕೀರ್ತಿಪ್ರತಾಪ | ಉರುತರ ಮಹಿಮನೆ ವಿರಹಿತ ಪಾಪ |ಶರಣ ಧ್ಯಾನಿಪ ನಿಜ ಹೃದಯ ಚಿದ್ದೀಪ || ಜೋ ಜೋ 2 ನಿರುತ ಸಿಂಧುಗಿ ಸಖ ಯತಿರಾಜ ಪುಂಗ | ಪರಿಪರಿ ವರವೀವ ಸಾಮಥ್ರ್ಯಸಂಗ | ಕರುಣಿಸೊ ಬೇಗದಿ ಗುರು ಕುಲೋತ್ತುಂಗ | ಧರೆಯೋಳ್ಯಾಳಗಿ ಶ್ರೀ ಗುರುರಾಮಲಿಂಗ 3
--------------
ಗುರುರಾಮಲಿಂಗ
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ಜೋಜೋ ಕಂದÀರ್ಪಕೋಟಿ ಲಾವಣ್ಯಜೋಜೋ ವೃಂದಾರಕ ಶಿರೋರನ್ನ ಪ . ಜೋಜೋ ನಂದನ ಸುಕೃತದ ಫಲವೆಜೋಜೋ ಮುನಿಮನಮಧುಪ ಕಮಲವೆಅ.ಪ. ಪೊನ್ನ ತೊಟ್ಟಿಲ ಮೇಲೆ ಮಣಿಮಯವಾದ ವಿತಾನ್ನವ ಕಟ್ಟ್ಟಿ ಪಟ್ಟೆಯ ಮೇಲ್ವಾಸಿನಲಿಚಿನ್ನ ಶ್ರೀಕೃಷ್ಣನ ಮಲಗಿಸಿ ಗೋಕುಲದಕನ್ನೆಯರೆಲ್ಲ ತೂಗುತ ಪಾಡಿದರೆ 1 ಶಶಿಯ ಚೆಲುವ ಪೋಲ್ವ ಮೊಗದ ಚೆನ್ನಿಗನೆಎಸೆವ ಕಿರುಡೊಳ್ಳಿನ ಸೊಬಗ ಬಾಲಕನೆಪೊಸಕೆಂದಾವರೆಯಂದದಿ ಮೃದುಪದನೆಬಿಸರುಹನಯನ ಬಿಡದಿರೆಮ್ಮ ಕಂದ 2 ಪೂತನಿ ಅಸುವನೀಂಟಿದ ಪೋತ ಶಿಶುವೆವಾತದೈತ್ಯನ ಗೆಲಿದದುಭುತ ಬಾಲಭೂತಗಳನಂಜಿಸುವರ್ಭಕನೆಓತೆಮ್ಮ ಶಿಶುಗಳ ಸಲಹೊ ಶ್ರೀಹರಿಯೆ 3 ಅಮೃತವನೂಡಿ ಸುರರ ಬೆಳೆಸಿದನೆಭ್ರಮಿತನಾದ ಕರಿವರನ ಕಾಯ್ದವನೆಸುಮುಖತನದಿ ಪರೀಕ್ಷಿತನ ಪೊರೆದನೆಮಮತೆಯಿಂದೆಮ್ಮ ಶಿಶುಗಳ ನೀ ಸಲಹೊ 4 ಪೊಳೆÀವ ಮೂಲರೂಪದಿ ತೋರಿದೆ ನೀ-ನುಳಿದ ಶಿಶುಗಳಂತೆ ಶಿಶುವೆನ್ನಬಹುದೆಲಲನೆ ಬೇಡಿಕೊಳ್ಳೆ ತನ್ನ ತಾನೆ ಶಿಶು-ಗಳ ಭಾವವಿಡಿದೆಯೆಂದೆಂಬರು ನಿನ್ನ5 ಈ ಮಹಿಯೊಳು ಹರಿ ಶಿಶುವಾಗೆ ತನ್ನ ಮ-ಹಿಮೆಯ ತುತಿಸುವ ಶ್ರುತಿವನಿತೆಯರುವ್ಯಾಮೋಹದಿ ಬಂದು ಲಲನೆಯರಾದರುಆ ಮುಗ್ಧೆಯರು ಪಾಡುತ ತೂಗಿದರೆ 6 ನೀ. ಶಿಶುವಾದರೆ ನಿನ್ನುದರದೊಳಿರ್ದ ಶ್ರುತಿಮುಕ್ತರು ಶಿಶುಗಳೆಂತಾಹರೊವೇಷಧರನಾಗಿ ಶಿಶುಗಳ ವಾಸಿನೊಲಿದೆವಾಸುದೇವ ನಮ್ಮ ಬಿಡದಿರು ಶ್ರೀ ಕೃಷ್ಣ 7 ಆವಳಿಸಲು ನಿನ್ನ ಗರ್ಭದೊಳಗೆ ಭುವ-ನಾವಳಿ ಗೋಪಗೋಪಿಯರನ್ನು ತೋರಿದೆಶ್ರೀವರ ನೀನೆಲ್ಲರ ತಂದೆಯಲ್ಲದೆಭಾವಜ್ಞರ ಮತದಿ ಶಿಶುವೆಂತಪ್ಪೆ 8 ಹಯವದನನಾಗಿ ವೇದವÀ ತಂದುಪ್ರಿಯಸುತ ಚತುರಮುಖಗೆ ಪೇಳಿದಖಿಳ ವಿ-ದ್ಯೆಯ ಖನಿ ನೀನೀಗಳೇನೆಂದು ನುಡಿಯಲ-ರಿಯದ ಬಾಲಕನಾದ ಬಗೆ ಪೊಸತಯ್ಯ
--------------
ವಾದಿರಾಜ
ಜೋಜೋ ಜೋಜೋ ಜೋ ವೆಂಕಟೇಶ ಜೋಜೋ ಜೋಜೋ ಜೋ ಶ್ರೀನಿವಾಸ ಜೋಜೋ ಜೋಜೋ ಭಕ್ತರಘನಾಶ ಜೋಜೋ ಜೋಜೋ ಜೋ ಸ್ವಪ್ರಕಾಶ ಜೋಜೋ ಪ ನಂಬಿದೆ ತಂದೆ ಮುದ್ದು ಮೋಹನ್ನ ವಿಠ್ಠಲ ಸುಂದರ ಶ್ರೀ ಉರಗಾದ್ರಿವಾಸ ವಿಠ್ಠಲ ಸಿರಿ ಉರಗಾದ್ರಿವಾಸ ವಿಠ್ಠಲ ಇಂದಿರಾಪತಿ ತಂದೆ ವೆಂಕಟೇಶ ವಿಠ್ಠಲ 1 ಆನಂದಮಯ ಅಂತರಾತ್ಮವಿಠಲ ನವನೀತ ಧರ ತಾಂಡವ ಕೃಷ್ಣ ವಿಠ್ಠಲ ಜಯವೆಂದು ಪಾಡುವೆ ಜಯಾಪತಿ ವಿಠ್ಠಲ ಸರಿಯುಂಟೆ ನಿನಗಿನ್ನು ಶಾಂತೀಶ ವಿಠ್ಠಲ2 ಗಂಗಾಜನಕ ಶ್ರೀ ಗಜವರದ ವಿಠ್ಠಲ ಸಂಗರಹಿತ ಶೇಷಶಯನ ವಿಠ್ಠಲ ಹಯವನೇರುತ ಪೊರೆದೆ ಶ್ರೀಹರಿ ವಿಠ್ಠಲ ದಾನವೈರಿಯೆ ಧ್ರುವವರದ ವಿಠ್ಠಲ 3 ಗರುಡಗಮನ ಗುರುವಾಸುದೇವ ವಿಠ್ಠಲ ವರವ ಪಾಲಿಸು ವರದ ಲಕ್ಷ್ಮೀಶ ವಿಠ್ಠಲ ಪದ್ಮನಾಭನೆ ಕಾಯೊ ಪ್ರದ್ಯುಮ್ನ ವಿಠ್ಠಲ ವರಲಕ್ಷ್ಮೀರಮಣ ವರದ ವೆಂಕಟೇಶ ವಿಠ್ಠಲ4 ಸಜ್ಜನಪಾಲ ಶ್ರೀ ಸುಜ್ಞಾನ ವಿಠ್ಠಲ ಶಾಮಲಾಂಗನೆÀ ಕೃಷ್ಣ ಶ್ರೀನಾಥ ವಿಠ್ಠಲ ಭಾರತೀಶ ಪ್ರಿಯ ವಿಠ್ಠಲ ಪರಿಸರನೊಡೆಯ ಶ್ರೀವರಹ ವಿಠ್ಠಲ 5 ಜ್ಞಾನದಾಯಕ ಆನಂದಮಯ ವಿಠ್ಠಲ ಸಜ್ಜನ ಪರಿಪಾಲ ಶ್ರೀ ಪ್ರಾಜ್ಞ ವಿಠ್ಠಲ ಜಗವ ಮೋಹಿಪ ದೇವ ಜಗದ್ಭರಿತ ವಿಠ್ಠಲ ವಿಶ್ವ ವ್ಯಾಪಕ ವಿಜ್ಞಾನಮಯ ವಿಠ್ಠಲ6 ವಿಷ್ಣುಮೂರುತಿ ಕೃಷ್ಣದ್ವೈಪಾಯನ ವಿಠ್ಠಲ ಅಕ್ಷರೇಡ್ಯನೆ ಕಾಯೋ ಲಕ್ಷ್ಮೀಶ ವಿಠ್ಠಲ ಕಂಟಕ ಹರಿಸು ಶ್ರೀವೆಂಕಟೇಶ ವಿಠ್ಠಲ ಸಾರಿದೆ ಸಲಹೆನ್ನ ಶ್ರೀರಮಣ ವಿಠ್ಠಲ7 ದುರುಳರ ಮಡುಹಿದ ವರದ ವಿಠ್ಠಲ ಅಂಬುಧಿ ಶಯನಪನ್ನಂಗ ಶಯನ ವಿಠ್ಠಲ ದಾರಿ ತೋರಿಸೊ ದಾಮೋದರ ವಿಠ್ಠಲ ಕರುಣಿಸಿ ಪೊರೆ ಎನ್ನ ಕಮಲನಾಭ ವಿಠ್ಠಲ8 ಕಂಜದಳಾಕ್ಷ ಕಮಲನಾಥ ವಿಠ್ಠಲ ಮುರಮರ್ದನನೆ ಕಾಯೋ ಮುರಳೀಧರ ವಿಠ್ಠಲ ದಯದಿಂದ ಪಾಲಿಸು ದಯಾನಿಧೆ ವಿಠ್ಠಲ ಅಚ್ಚುತ ಹರಿ ಕೃಷ್ಣಕ್ಷೇತ್ರಜ್ಞವಿಠ್ಠಲ9 ಜ್ಞಾನಿಗಳರಸನೆ ಆನಂದ ವಿಠ್ಠಲ ಮೂಜಗದೊಡೆಯ ಭಾರ್ಗವೀಶ ವಿಠ್ಠಲ ಸರ್ವಕರ್ತೃ ಪುರುಷೋತ್ತಮ ವಿಠ್ಠಲ ಮಧುವೈರಿ ಪೊರೆಮಧುರನಾಥ ವಿಠ್ಠಲ10 ರಾಕ್ಷಸವೈರಿ ರಮಾಧವ ವಿಠ್ಠಲ ಕರುಣಿಗಳರಸನೆ ಕಾರುಣ್ಯ ವಿಠ್ಠಲ ಎದುರ್ಯಾರೋ ನಿನಗಿನ್ನು ಯದುಪತಿ ವಿಠ್ಠಲ ಉದ್ಧರಿಸೆನ್ನ ಉದ್ಧವವರದ ವಿಠ್ಠಲ11 ನಾಗಶಯನ ಕೃಷ್ಣಯೋಗೀಶ ವಿಠ್ಠಲ ಕುಂಭಿಣಿಪತಿ ಶ್ರೀಶ ಸಿಂಧುಶಯನ ವಿಠ್ಠಲ ಸುಜ್ಞಾನವೀವ ಪ್ರಾಜ್ಞಾನಿಧಿ ವಿಠ್ಠಲ ಸಂಕಟಹರಿಸು ಸಂಕರ್ಷಣ ವಿಠ್ಠಲ12 ಗೋಪಿಕಾಲೋಲ ಗೋಪೀನಾಥ ವಿಠ್ಠಲ ಪಾದ್ಯ ವೈಕುಂಠಪತಿ ವಿಠ್ಠಲ ಮಾತರಿಶೃಪ್ರಿಯ ಶ್ರೀಕಾಂತ ವಿಠ್ಠಲ ಧನ್ಯನಾದೆನೋ ದೇವ ಧನ್ವಂತ್ರಿ ವಿಠ್ಠಲ13 ಶ್ರೀಧರ ಪೊರೆ ವೇದವತೀಶ ವಿಠ್ಠಲ ಸಾಧುಗಳರಸನೆ ಭಕ್ತವತ್ಸಲ ಮೇದಿನಿಯೊಳು ನಿನ್ನ ಪೋಲುವರಿಲ್ಲ ಆದರದಿಂ ಕೇಳೊ ನೀ ಎನ್ನ ಸೊಲ್ಲ14 ರನ್ನ ಮಂಟಪದೊಳು ಚಿನ್ನದ ತೊಟ್ಟಿಲು ಕನ್ನೇರುತೂಗಿ ಪಾಡುವರೊ ಗೋವಿಂದ ಕರುಣಸಾಗರ ಕೃಷ್ಣ ಮಲಗಿ ನಿದ್ರೆಯ ಮಾಡೊ ಕಮಲನಾಭ ವಿಠ್ಠಲ ಪರಮದಯಾಳು 15
--------------
ನಿಡಗುರುಕಿ ಜೀವೂಬಾಯಿ
ಜ್ಞಾನ ಸಖೀಕೇಳೆ ಜ್ಞಾನಿಗಳಾರಾಧಿಸುವಾ | ಶ್ರೀನಿವಾಸನಾ ತಂದುತೋರೆ ತನುವಿನೋಳು ಪ ಹಲವು ಸಾದಿನದಿಂದ ಬಳಲಿ ಹಂಬಲಿಸಿದೆ | ಜಲ ಜಾಕ್ಷ ಮೈಯ್ಯ ದೋರನೇ 1 ಕಣ್ಣಿಗೆ ಕಣ್ಣಾಗದನಕಾ ಬಣ್ಣ ಬಣ್ಣದ ಚಿತ್ಸುಖಾ | ಕನ್ನಿಕಾ ರನ್ನಳೆ ತಂದು ತೋರೇ 2 ಸೋಹ್ಯ ಸೊನ್ನಿಯ ದೋರಿಸಿ ಬಾಹ್ಯರಂಗ ಮರೆಸಿ | ಸಹ ಜಾನಂದದ ಕೂಡಿಸೇ 3 ಗುರು ಮಹಿಪತಿ ಸ್ವಾಮಿ ಸ್ಮರಿಸುವರಂತರ್ಯಾಮಿ | ನೆರೆದು ತಾನೇ ತಾನಾದನೇ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನಶೂನ್ಯಗಾತ್ಮದನುಭವವ್ಯಾಕೆ ಹೀನ ಸಂಸಾರಿಗೆ ಪರದ ಸುದ್ದ್ಯಾಕೆ ಪ ಕತ್ತೆಗೆ ಬೆಲೆಯುಳ್ಳ ಉತ್ತಮ ಜೀನ್ಯಾಕೆ ಕೃತ್ರಾಮಗೆ ಸತತ ಸತ್ಪಥದ ಬೋಧ್ಯಾಕೆ ತೊತ್ತಿಗ್ಹೋಗುವಗರಸೊತ್ತಿಗಧಿಕಾರವ್ಯಾಕೆ ಮಿಥ್ಯೆಮತಿಗ್ಯಾತಕ್ಕೆ ಉತ್ತಮರ ನೆರೆಯು 1 ನಂಬಿಗಿಲ್ಲದವಗ್ಯಾಕೆ ಗುಂಭದ ಮಾತುಗಳು ಜಂಬಕೊಚ್ಚುವವಗ್ಯಾಕೆ ಗಂಭೀರತನವು ಅಂಬುಜಾಕ್ಷನ ಚರಿತ ಡಂಭನಿಗ್ಯಾತಕ್ಕೆ ಗೊಂಬೆಯಾಟಗಾರಗ್ಯಾಕೆ ತಂಬೂರಿ ತಬಲ 2 ದಾನಧರ್ಮದ ಮಹಿಮೆ ಜೀನನಿಗೆ ಏತಕ್ಕೆ ಗೋಣು ಮುರಿವವಗ್ಯಾಕೆ ದೈನ್ಯಮಾತುಗಳು ನಾನಾ ಬಯಕೆಯುಳ್ಳ ಮಾನವಗೆ ಭಕ್ತಜನ ಪ್ರಾಣ ಶ್ರೀರಾಮ ನಿಮ್ಮ ಧ್ಯಾನವಿನ್ಯಾಕೆ 3
--------------
ರಾಮದಾಸರು
ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ಡಂಗುರ ಹೊಡಿಸಿದ ಯಮನು | ಪಾಪಿ ಹೆಂಗೆಳೆಯವರ ತಂದು ಭಂಗಪಡೆಸಿದರೆಂದು ಪ ಮೃತಿಕೆ ಶೌಚÀದ ಗಂಧ ಪೋಗುವಂತೆ | ನಿತ್ಯದಲ್ಲಿ ಸ್ನಾನ ಮಾಡದೆ ಸುಮ್ಮನೆ || ತೊತ್ತು ಒಡತಿಯಾಗಿ ಮುಖವ ತೊಳಿಯದಿಪ್ಪ | ಕತ್ತೆ ಹೆಂಗಸರನು ಕಡಿದು ಕೊಲ್ಲಿರೊ ಎಂದು 1 ಪತಿಗೆರಗದೆ ಗೃಹಕೃತ್ಯ ಮಾಡುವಳ | ಮತಿವಿರದೆ ಚಂಚಲದಿಪ್ಪಳ || ವ್ರತಗೇಡಿ ಅನ್ಯರ ಮಾತಿಗೆ ಸೋಲುವ | ಪತಿತಳ ಎಳೆತಂದು ಹತವ ಮಾಡಿರೆಂದು 2 ಒಬ್ಬರಿಬ್ಬರ ಕೂಡ ಸಖತನ ಮಾಡುವಳ | ಒಬ್ಬೊಬ್ಬರಿಗೆ ಮೈಯಿತ್ತು ಪಾಡುವಳೆ || ಅಬ್ಬರದ ಸೊಲ್ಲನು ವಿಸ್ತರಿಸುವಳ | ದಬ್ಬಿರೊ ವೃಶ್ಚಿಕದ ಕುಂಡದೊಳಗೆ ಎಂದು 3 ವಸನವಿಲ್ಲದೆ ಮೈಯ ತೊಳಕೊಂಬೊ ಪಾಪಿಯ | ಅಶನ ಭಕ್ಷಿಸುವಾಗ ಅಳಲುವ ದುಃಖಿಯ ಪೆಸರಿಯ ತರೆ ಕೆಳಗಾಗಿ ಬಾಧಿಸರೆಂದು 4 ಬಿಗಿದು ಪುಟವ ಹಾಕಿ ಬದಿ ಬಗಲ ಮುಚ್ಚದೆ | ನಗುವಳು ಅವರಿವರೆಂದರಿಯದೆ || ಬಗೆ ಬಗೆ ವಯ್ಯಾರ ನಿಜವಾಗಿ ತೋರುವ | ಅಧಮ ನಾರಿಯೆ ತಂದು ಅರಿದು ಕೊಲ್ಲಿರೊ ಎಂದು 5 ಪಾಕದ ಪದಾರ್ಥ ನೋಡಿ ಇಡದವಳ | ಲೋಕವಾರ್ತೆಗೆ ಮನೆಯ ಜರಿದು ಪತಿಗೆ || ಬೇಕಾದವರ ಜರಿದು ಬಹುಪುಷ್ಪ ಮುಡಿದಿಪ್ಪ ಕಾಕಿಯ ಎಳೆತಂದು ಕಣ್ಣು ಕಳಿಚಿರೆಂದು 6 ಪಂಕ್ತಿ ಭೇದವ ಮಾಡಿ ಬಡಿಸುವ ಪಾಪಿಯ | ಕಾಂತ ಕರೆದಾಗ ಪೋಗದವಳ || ಸಂತರ ನೋಡಿ ಸೈರಿಸದಿಪ್ಪ ನಾರಿಯ | ದಂತಿಯ ಕೆಳಗೆ ಹಾಕಿ ತುಳಿಸಿ ಕೊಲ್ಲಿರೊ ಎಂದು 7 ವಿಧವೆಯ ಸಂಗಡ ಇರಳು ಹಗಲು ಇದ್ದು | ಕದನ ತೆರೆದು ನೆರಳು ನೋಡುವಳ || ಕದದ ಮುಂದೆ ಕುಳಿತು ತಲೆ ಬಾಚಿ ಕೊಂಬುವಳ | ಕುದಿಸಿ ಕಟಾಹದೊಳು ಮೆಟ್ಟಿ ಸೀಳಿರೊ ಎಂದು 8 ಆವದಾದರು ತೊರೆದು ಪತಿದೈವವೆಂದರಿದು | ಸೇವೆಯ ಮಾಡಿ ಸುಜನರಿಗೆ ಬೇಗ || ದೇವೇಶ ವಿಜಯವಿಠ್ಠಲ ತಿರುವೆಂಗಳ | ಕೈವಲ್ಯ ಕಲ್ಪಿಸಿ 9
--------------
ವಿಜಯದಾಸ
ತಗಲಿ ತಗಲದೆ ಈ ಜಗದೊಳು ಜೀವಿಸೊ ಕಮಲ ಪತ್ರದಲ್ಲಿಹ ಜಲದ ಕಣಗಳಂತೆ ಪ ತಗಲುತ ನಿರತ ಸುಖವನೀವ ಕರ್ಮಕ್ಕೆ ತಗಲದೆ ಭವದಲಿ ಬಿಗಿವ ವಿಷಯಗಳಿಗೆ ಅ.ಪ ಪರಿಪರಿ ಕ್ಷಣಿಕ ಸುಖದ ಮೋಹದೊಳತಿ ದುರಿತಗಳಿಗೆಳೆವ ದುರುಳರ ಅಗಲೆಲೋ ಹರಿದಾಸರ ಸಹವಾಸಕ್ಕೆ ತಗಲುತ್ತ ಹರಿಗುಣ ಪೊಗಳುವ ಪರಮ ಸುಖವ ಬಯಸೊ 1 ಸತಿ ಸುತರೆಲ್ಲ ಶ್ರೀಪತಿಯ ಸೇವೆಯೊಳತಿ ಹಿತ ತೋರಲು ಅವರೊಳಾಮತಿಯನು ತಗಲಿಸೊ ಕ್ಷಿತಿಯೊಳವರು ನಿನ್ನ ಭೋಗವಸ್ತುಗಳೆಂದು ಮಿತಿ ಮೀರಿರುವ ಮಮತೆಗೆ ತಗಲದಿರೊ 2 ದುರ್ಮಾರ್ಗದೊಳು ದುಷ್ಟಕರ್ಮಗಳನೆ ಮಾಡಿ ಹೆಮ್ಮೆಯಿಂದಲಿ ಪಾಪ ಫಲಗಳ ಬಯಸದೆ ಧರ್ಮದಿ ಸುಖಗಳನನುಭವಿಸುವುದಕೆ ಸಮ್ಮತಿ ಈ ಯುವ ನಮ್ಮ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ತಡವ ಮಾಡಲಿ ಬೇಡ ಹಡೆದವ್ವ ಎ ನ್ನೊಡೆಯನನು ಹುಡುಕಿ ತಾರೆ ಪಿಡಿವೆ ಪಾದವ ಪ ತಡವ ಮಾಡದೆ ಪೊಡವಿಯೊಳು ಕಡು ಸಡಗರಾರ್ಯನ ಹುಡುಕಿ ತಂದರೆ ಹಡೆದು ನಿನ್ನ್ಹೆಸರಿಸಿವುವೆನೆನ್ನವ್ವ ಸರಿಮಾಡ್ವೆನವ್ವ ಅ.ಪ ಜೀವದರಸನ ಹಂಬಲೆನಗವ್ವ ಅತ್ಯಧಿಕವಾಗಿ ಕಾಯಸೊರಗಿ ಕ್ಷೀಣವಾಯ್ತೆವ್ವ ಪ್ರಾಯಬಂದರೆ ಸುಮ್ಮನೆ ಹೋಗುತಾದವ್ವ ಪ್ರಾಯಕ್ಕೆ ತಕ್ಕ ಚಾಯಗಾರ ಕಂಡೇನ್ಹೇಗವ್ವ ಕಾಯರಹಿತ ಕಾರುಣ್ಯನಿಧಿ ಮಾಯತಿಳಿಯುವರಿಲ್ಲ ಆತನ ದಿವ್ಯಚರಿತ ನೆನೆದು ನೆನೆದು ಬಾಯ ಬಿಡುವೆನೆ ಆಯತಾಂಬಕಿ 1 ವಸ್ತೊಡೆವೈಷ್ಟಿರಲು ಏನವ್ವ ಅತಿಶೋಭೆಯೆನಿಪ ಮುತ್ತುಯಿಲ್ಲದ ಮೋರೆಯಾಕವ್ವ ಹತ್ತಿರಕೆ ಬರಗೊಡರವ್ವಾ ಮುತ್ತೈದೆರೆಲ್ಲರು ಅತ್ತ ಇತ್ತೆಂದೆಳೆಯುತಿಹ್ಯರವ್ವ ಮತ್ತೆ ಬೇಡಲು ದೊರೆಯದಂಥ ಹೊತ್ತು ಸುಮ್ಮನೆ ಹೋಗುತಿದೆ ಕರ್ತ ತುರ್ತು ದೊರೆಯದನಕ ಚಿತ್ತ ಸ್ವಸ್ಥವಾಗದವ್ವ 2 ಭೂಮಿತ್ರಯದೊಳಧಿಕ ಕೇಳವ್ವ ಆತನಹೆಸರು ಕಾಮಿತವನೀಗರಿತುಕೊಂಡೆನವ್ವ ನೇಮದಿಂದ ಭಜಿಸುತಿಹೆನವ್ವ ಎನ್ನಕಡೆಗಾತ ಪ್ರೇಮದಿಂದ ಸುಳಿಯದಿಹ್ಯನವ್ವ ಭಾಮೆಬಾರೆಂದು ಬದಿಲಿಕರೆದು ಪ್ರೇಮದಿಂದ ಅಪ್ಪಿ ನಿನ್ನಯ ಸ್ವಾಮಿ ಶ್ರೀ ರಾಮ ನಾನೆಂದ್ಹೇಳಲು ಕ್ಷೇಮ ಪಡೆದು ಬಾಳ್ವೆನವ್ವ 3
--------------
ರಾಮದಾಸರು
ತಡವ ಮಾಡುವಿಯಾಕೊ ಒಡೆಯ ಗೋವಿಂದ ಬಡವನ ಮೇಲಿನ್ನು ಮುನಿಸೆ ಮುಕುಂದ ಪ. ಕೆಟ್ಟ ಕೃತ್ಯಗಳತ್ಯುತ್ಕøಷ್ಟವಾದುದರಿಂದ ಮಂಡೆ ಕುಟ್ಟುವ ತೆರದಿ ಸಿಟ್ಟಿನಿಂದಲಿ ಬಹು ಕಷ್ಟಗೊಳಿಸಿದಿ ಕಟ್ಟ ಕಡೆಯಲಿ ನೀ ಕಟ್ಟ ಬಿಡಿಸಿದಿ 1 ದುಷ್ಟ ಬಾಧೆಯ ಮುರಿದಟ್ಟಿದಿ ದಯದಿ ಘಟ್ಟ ಬೆಟ್ಟಗಳನ್ನು ಮೆಟ್ಟಿ ನಾ ಭರದಿ ನಿಟ್ಟುಸುರಲಿ ಬಾರೆ ಕೃಷ್ಣ ನೀ ಕರುಣದಿ ತೊಟ್ಟಿಲ ಶಿಶುವಿನಂದದಲಿ ಪಾಲಿಸಿದಿ 2 ಜನರ ಸಹಾಯವ ಕನಸಿಲಿ ಕಾಣೆ ಧನಬಲವೆಂದೆಂದಿಗಿಲ್ಲ ನಿನ್ನಾಣೆ ವನರುಹೇಕ್ಷಣ ನಿನ್ನ ನಾಮ ಒಂದೆ ಹೊಣೆ ಯೆನುತ ನಂಬಿದುದರ ಫಲವಿನ್ನು ಕಾಣೆ 3 ಜಗದ ಸಜ್ಜನರಿದು ಮಿಗೆ ಮೀರಿತೆನಲು ಹಗೆಗಳೆಲ್ಲರು ಬಹು ಸೊಗಸಾಯಿತೆನಲು ನಗಲು ಎನ್ನನು ನೋಡಿ ನಗಧರ ನೀ ಬಂದು ಅಘಟಿತ ಘಟನ ಮಾಡಿದಿ ದೀನಬಂಧು 4 ಈ ಪರಿಯಲಿ ನಿರುಪಾಧಿಯೊಳೆನ್ನ ಕಾಪಾಡಿ ಕಡೆಯೊಳೀ ಕಷ್ಟಗಳನ್ನ ನೀ ಪರಿಹರಿಸಲೇಬೇಕು ಪ್ರಸನ್ನ ಶ್ರೀಪತಿ ಶೇಷಾದ್ರಿವಾಸ ಮೋಹನ 5
--------------
ತುಪಾಕಿ ವೆಂಕಟರಮಣಾಚಾರ್ಯ