ಒಟ್ಟು 14849 ಕಡೆಗಳಲ್ಲಿ , 135 ದಾಸರು , 6533 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಿಗೂ ಕೊಟ್ಟು ನಾನ್ಹುಟ್ಟಿಲ್ಲ ಸ್ವಾಮಿಹಾರೈಸಲೆಂತೀಯ್ವಿ ಭಕ್ತಜನ ಪ್ರೇಮಿ ಪವಸನಕಾಣದೆ ಪೋಗಿ ದೆಸೆ ಬತ್ತಲೆ ಬಂದುಬಸವಳಿದು ಬಾಯಾರಿ ದೆಸೆಗೆಟ್ಟು ಬೇಡುವರಕುಶಲಂಗಳರಿಯದೆ ಹಾಸ್ಯಗೈಯುತ ನಕ್ಕೆವಸನನಾಂ ಬಯಸಲೆಂತೊಸೆದು ನೀಂ ಕೊಡುವಿ1ಧನವಂತನಾಗಿ ನಾ ಧನವಿಲ್ಲದವರಿಗೆಶುನಕನಂದದಿ ಕೂಗುತಣಕವಾಡಿದೆನುಕನಸು ಮನಸಿನಲಿ ವಿನುತಧರ್ಮವನರಿಯೆರಿಣಕಳೆದು ಹರಿಯೆನೆ ನಿನಗೆ ಕರುಣೆಂತು 2ಮೂರುದಿನವಾಯಿತು ಘೋರಬಡುವೆನು ತುಸು ಆಹಾರ ಹಾಣದೆ ಕೃಪೆ ದಾರಿಗೆ ಬರದೆನುತಭೋರಿಟ್ಟು ಕೂಗ್ವುದ ಸಾರಿ ಕೇಳುತ ನಾನುದೂರ್ಹೋದೆ ಎನ್ನ ತಪ್ಪು ಕ್ಷಮಿಸು ಶ್ರೀರಾಮ 3
--------------
ರಾಮದಾಸರು
ಆರು ಒಲಿದರೇನು ನಮಗಿನ್ನಾರು ಮುನಿದರೇನುಕ್ಷೀರಸಾಗರ ಶೇಷಶಯನನ ಒಲುಮೆಯುಳ್ಳ ಹರಿದಾಸರಿಗೆಪ.ಪಡೆದ ತಾಯಿ - ತಂದೆ ನಮ್ಮೊಳು ಅಹಿತವ ಮಾಡಿದರೇನುಮಡದಿ ಮಕ್ಕಳು ನೆಂಟರಿಷ್ಟರುಮುನಿಸು ಮಾಡಿದರೇನುಒಡೆನೆ ತಿರುಗುವ ಗೆಳೆಯರು ನಮ್ಮೊಳು ವೈರವ ಬೆಳಸಿದರೇನುಕಡಲ ಶಯನನ ಕರುಣಾಂಬುಧಿಯ ಒಲುಮೆಯುಳ್ಳ ಹರಿದಾಸರಿಗೆ 1ಊರನಾಳುವ ದೊರೆಗಳು ನಮ್ಮನು ಹೊರಗೆ ನೂಕಿದರೇನುಮಾರಿಯಹಿಂಡು ಮುಸಲರ ದಂಡು ಮೈಗೆ ಮುತ್ತಿದರೇನು ||ಅರಣ್ಯದಿ ಹರಿದಾಡುವ ಮೃಗಗಳು ಅಡ್ಡಗಟ್ಟಿದರೇನುವಾರಿಜನಾಭನ ವಸುದೇವಸುತನ ಒಲುಮೆಯುಳ್ಳ ಹರಿದಾಸರಿಗೆ 2ಕಾನನದೊಳು ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನುಜೇನಿನಂದದಿ ಕ್ರೀಮಿಕೀಟಂಗಳು ಚರ್ಮಕೆ ಮುತ್ತಿದರೇನು ||ಭಾನು ಮಂಗಳಬುಧ ಶುಕ್ರಂಗಳ ಬಲುವು ತಪ್ಪಿದರೇನುಮಾಣದೆ ಭಜಿಸುವ ಪುರಂದರವಿಠಲನಒಲುಮೆಯುಳ್ಳ ಹರಿದಾಸರಿಗೆ 3
--------------
ಪುರಂದರದಾಸರು
ಆರು ಒಲಿದರೇನು ನಮಗಿನ್ನಾರು ಮುನಿದರೇನುಕ್ಷೀರಸಾಗರ ಶೇಷಶಯನನ ಒಲುಮೆಯುಳ್ಳ ಹರಿದಾಸರಿಗೆಪ.ಪಡೆದ ತಾಯಿ - ತಂದೆ ನಮ್ಮೊಳು ಅಹಿತವ ಮಾಡಿದರೇನುಮಡದಿ ಮಕ್ಕಳು ನೆಂಟರಿಷ್ಟರುಮುನಿಸು ಮಾಡಿದರೇನುಒಡೆನೆ ತಿರುಗುವ ಗೆಳೆಯರು ನಮ್ಮೊಳು ವೈರವ ಬೆಳಸಿದರೇನುಕಡಲ ಶಯನನ ಕರುಣಾಂಬುಧಿಯ ಒಲುಮೆಯುಳ್ಳ ಹರಿದಾಸರಿಗೆ 1ಊರನಾಳುವ ದೊರೆಗಳು ನಮ್ಮನು ಹೊರಗೆ ನೂಕಿದರೇನುಮಾರಿಯಹಿಂಡು ಮುಸಲರ ದಂಡು ಮೈಗೆ ಮುತ್ತಿದರೇನು ||ಅರಣ್ಯದಿ ಹರಿದಾಡುವ ಮೃಗಗಳು ಅಡ್ಡಗಟ್ಟಿದರೇನುವಾರಿಜನಾಭನ ವಸುದೇವಸುತನ ಒಲುಮೆಯುಳ್ಳ ಹರಿದಾಸರಿಗೆ 2ಕಾನನದೊಳು ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನುಜೇನಿನಂದದಿ ಕ್ರೀಮಿಕೀಟಂಗಳು ಚರ್ಮಕೆ ಮುತ್ತಿದರೇನು ||ಭಾನು ಮಂಗಳಬುಧ ಶುಕ್ರಂಗಳ ಬಲುವು ತಪ್ಪಿದರೇನುಮಾಣದೆಭಜಿಸುವ ಪುರಂದರವಿಠಲನ ಒಲುಮೆಯುಳ್ಳ ಹರಿದಾಸರಿಗೆ3
--------------
ಪುರಂದರದಾಸರು
ಆರು ಬಾರರು ಸಂಗಡಲೊಬ್ಬರು |ನಾರಾಯಣನ ದಿವ್ಯನಾಮ ಒಂದಲ್ಲದೆ ಪಹೊತ್ತು ನವಮಾಸಪರಿಯಂತಗರ್ಭದಲಿ |ಅತ್ಯಂತ ನೋವು ಬೇನೆಗಳ ತಿಂದು ||ತುತ್ತು ಬುತ್ತಿಯ ಕೊಟ್ಟು ಸಲಹಿದ ತಾಯಿಯು |ಅತ್ತು ಕಳುಹುವಳಲ್ಲದೆ ಸಂಗಡ ಬಾಹಳೆ 1ನೆರೆದಿದ್ದ ಪುರಜನ ವಿಪ್ರರಗ್ನಿಯ ಸಾಕ್ಷಿ |ಕರವಿಡಿದು ಕೈಧಾರೆ ಎರಸಿಕೊಂಡ ||ತರುಣಿ ತನ್ನಯ ಗಂಡನನು ಮುಟ್ಟಲಮ್ಮದೆ |ನೆರೆಏನುಗತಿತನಗೆ ಹೇಳಲಮ್ಮಳಲ್ಲದೆ2ಮನೆ-ಮಕ್ಕಳಿವರೆನ್ನ ತನುವು ಒಡವೆ ಎರಡು |ಘನವಾಗಿ ನಂಬಿರೆ ನನ್ನವೆಂದು |ಅನುಮಾನವೇತಕೆ ಜೀವ ಹೋದಬಳಿಕ |ಘನಹೊತ್ತು ಮನೆಯಲಿ ಇರಿಸಿಕೊಳ್ಳರೊ ದೇವ 3ಆತ್ಮ ಬಳಲಿದಾಗ ಬಂಧುಗಳು ಬಂದು |ಹೊತ್ತು ಹೊರಗೆ ಹಾಕು ಎಂತೆಂಬರು ||ಹೊತ್ತುಕೊಂಡು ಹೋಗಿ ಅಗ್ನಿಯಲ್ಲಿ ಬಿಸುಟು |ಮತ್ತೆ ಬೆನ್ನನು ತಿರುಗದಲೆ ಬಾಹೋರಲ್ಲದೆ 4ಹರಣಹೋಗದ ಮುನ್ನ ಹರಿಯ ಸೇವೆ ಮಾಡಿ |ಪರಲೋಕಸಾಯುಜ್ಯಪಡೆದುಕೊಂಡು |ಕರುಣಿ ಕೃಪಾಳು ಶ್ರೀ ಪುರಂದರವಿಠಲನ |ನೆರೆನಂಬಿ ಭಜಿಸಿ ನೀ ಸುಖಿಯಾಗೊ ಮನುಜಾ 5
--------------
ಪುರಂದರದಾಸರು
ಆರು ಹಿತವರು ಮನವೆ ಮೂರು ಮಂದಿಗಳೊಳಗೆನಾರಿಯೋ ಧಾರಿಣೀಯೊಧನದಬಲು ಸಿರಿಯೊ ?ಪ.ಅನ್ಯರಲಿ ಜನಿಸಿರ್ದ ಅಂಗನೆಯ ಕರೆತಂದುತನ್ನ ಮನೆಯಲ್ಲಿ ಯಜಮಾನಿಯೆನಿಸಿಭಿನ್ನವಿಲ್ಲದೆ ಅರ್ಧ ದೇಹವೆನಿಸುವ ಸತಿಯುಕಣ್ಣಿನಲಿ ನೋಡಲಂಜುವಳು ಕಾಲನೊಯ್ವಾಗ 1ಮುನ್ನ ಶತಕೋಟಿ ರಾಯರುಗಳಾಳಿದ ನೆಲನತನ್ನದೆಂದು ಶಿಲೆಯ ಶಾಸನವ ಬರೆಸಿಬಿನ್ನಾಣದಿ ಮನೆಗಟ್ಟಿ ಕೋಟೆ - ಕೊತ್ತಳಿವಿಕ್ಕಿಚೆನ್ನಿಗನೆ ಅಸುವಳಿಯ ಊರ ಹೊರಗಿಕ್ಕುವರು 2ಉದ್ಯೋಗ - ವ್ಯವಹಾರ ನೃಪಸೇವೆ ಮೊದಲಾಗಿಕ್ಷುದ್ರತನ ಕಳವು ಪರದ್ರೋಹದಿಂದಬುದ್ಧಿಯಿಂದಲಿ ಧನವ ಗಳಿಸಿಕ್ಕಿ ಅಸುವಳಿಯಸದ್ಯದಲಿ ಆರುಂಬವರು ಹೇಳು ಮನುಜಾ 3ಶೋಕಗೈದಳುವವರುಸತಿ - ಸುತರು ಭಾಂದವರುಜೋಕೆ ತಪ್ಪಿದ ಬಳಿಕ ಅರ್ಥವ್ಯರ್ಥಲೋಕದಲಿ ಸ್ಥಿರವಾದ ಕೀರ್ತಿ ಅಪಕೀರ್ತಿಗಳುಸಾಕಾರವಾಗಿ ಸಂಗಡ ಬಾಹುವಲ್ಲದೇ ? 4ಅಸ್ಥಿರದ ದೇಹವನು ನೆಚ್ಚಿ ನೀ ಕೆಡಬೇಡಸ್ವಸ್ಥದಲಿ ನೆನೆಕಾಣೊ ಪರಮಾತ್ಮನಚಿತ್ತಶುದ್ದಿಯಲಿ ಶ್ರೀ ಪುರಂದರವಿಠಲನಭಕ್ತಿಯಿಂದಲಿ ನೆನೆದು ಮುಕ್ತಿಪಡೆ ಮನವೆ 5
--------------
ಪುರಂದರದಾಸರು
ಆರುಮುನಿದರು ಮುನಿಯಲಿ ಎನ್ನಪಾರು ಮಾಡುವಹರಿನಿನ್ನ ದಯವಿರಲಿಪವಾರಿಜಾಕ್ಷನೆ ನಿನ್ನ ಕರುಣವೆಂಬಾಲಯಸೇರಿ ಕೊಂಡವರಿಗೆ ಆರಂಜಿಕಿನ್ನೇನು ಅ.ಪಬಿರುಗಾಳಿ ಭರದಿಂದ ಬೀಸೆ ಮಹಗಿರಿಯು ನಡುಗಿ ಅದರಿಂದಾಗ್ವುದೆಘಾಸಿನರಿಗಂಜಿ ಹುಲಿ ಸ್ಥಳ ತ್ಯಜಿಸಿಮರೆಯಾಗೋಡುವದೇನರಹರಿ ತವಪಾದ ಸ್ಮರಿಪ ದಾಸರುನರಗುರಿಗಳಿಗ್ಹೆದರುವರೇನು 1ದಿನಕರನಿಗೆ ಕುಂದ್ಹೊರಿಸಿ ಇಂಥಬಿನುಗರು ಜರೆದರೆ ಆಗುವನೆ ಮಸಿವನಜಾಕ್ಷನೊಳು ಮನ ನಿಲಿಸಿದಿನ ದಿನ ಘನವಾಗಿ ನೆನೆವ ಭಕ್ತರಮನ ಮಣಿಯುವುದೇನಯ್ಯಬಿನುಗರ ಕೃತಿಗಿನ್ನು 2ಬರುವುದೆಲ್ಲವು ಬಂದು ಬಿಡಲಿ ಎನ್ನಸರುವರು ಪರಿಪರಿ ಜರಿದುನೋಡಲಿಸಿರಿವರ ನಿನ್ನ ದಯವಿರಲಿಮರಿಯಾದ್ಹಾಳಾಗಲಿ ಸ್ಥಿರಸುಖ ಪ್ರಾಪ್ತಿಸಲಿವರದ ಶ್ರೀರಾಮ ನಿನ್ನಸ್ಮರಣೆಯೊಂದೆನಗಿರಲಿ 3
--------------
ರಾಮದಾಸರು
ಆರೆಅವನಾರೆಲೆ ಜಾಣೆಆರೆಅವನಾರೆವೀರಹಕ್ಕಿಯನೇರಿ ನಿರುತದಿ ಧ್ವನಿಗೈದುವ ಶ್ರೀಪತಿ ಕಾಂಬೆ ಪ.ಬಾಹಭಾವವ ನೋಡೆ ಕರುಣಿಯ ಬಾಹುಬಂದಿಯ ನೋಡೆದೇಹ ಮಾಟವ ನೋಡೆ ಕರುಣಾಬ್ಧಿ ಸ್ನೇಹ ನೋಟವ ನೋಡೆಆಹೇಮಾಂಬರನೋಡೆ ಮುಕುಟವಿಟ್ಟಿಹಕುಂಡಲನೋಡೆರೂಹ ನೋಡಿ ಮೈ ಮರೆವ ಮುನಿಸಮೂಹದೆಡಬಲದರ್ಥಿಯ ನೋಡೆ 1ಆಭರಣದ ಕಾಂತಿ ಕಂಡ್ಯಾ ಮೃಗನಾಭಿ ತಿಲಕವ ಕಂಡ್ಯಾಶೋಭಿಸುವ ನಾಮ ಕಂಡ್ಯಾಕೌಸ್ತುಭಶ್ರೀವತ್ಸ ಕಂಡ್ಯಾತ್ರಿಭುವನ ಗರ್ಭ ಕಂಡ್ಯಾ ತ್ರಿವಳಿಯ ನಾಭಿ ಚೆಲ್ವಿಕೆ ಕಂಡ್ಯಾಶ್ರೀ ಭುಜಂಗವೇಣಿ ಲಕುಮಿಯಳ ತಾ ಬಿಗಿದಪ್ಪೊವಕ್ಷವÀ ಕಂಡ್ಯಾ 2ಸ್ವಾಮಿಗೆ ಮನಸೋತೆನೆ ಭಕ್ತಪ್ರೇಮಿಗೆ ಮನಸೋತೆರಾಮನಿಗೆ ಮನಸೋತೆ ನಾ ಘನಶ್ಯಾಮನಿಗೆ ಮನಸೋತೆವಾಮನಗೆ ಮನಸೋತೆನೆ ಪೂರ್ಣಕಾಮನಿಗೆ ಮನಸೋತೆಶ್ರೀ ಮನೋಹರ ಪ್ರಸನ್ವೆಂಕಟೇಶನ ನಾಮಕೆ ಮೆಚ್ಚು ಬಿದ್ದುಮನಸೋತೆ 3
--------------
ಪ್ರಸನ್ನವೆಂಕಟದಾಸರು
ಆರೇನ ಮಾಡುವರು ಆರಿಂದಲೇನಹುದುಪೂರ್ವಜನ್ಮದ ಕರ್ಮವಿಧಿ ಬೆನ್ನಬಿಡದು ಪಐದು ವರುಷದತರಳ ತಾನೆತ್ತ ತಪವೆತ್ತ |ಬೈದು ಮಲತಾಯಿ ಅಡವಿಗೆ ನೂಕಲು ||ಸುಯ್ದು ಕೋಪಾಗ್ನಿಯಲಿ ಪೊರಮಟ್ಟು ಪೋಪಾಗ |ಐದೆ ಬಂಧುಗಳಿದ್ದು ಏನ ಮಾಡಿದರು1ನೃಪರೊಳಗೆಅತಿ ಶ್ರೇಷ್ಠ ಬಲವಂತ ರಘುರಾಮ |ಅಪರಿಮಿತ ಶೂರ ಲಕ್ಷ್ಮಣದೇವರು |ಚಪಲಾಕ್ಷಿ ಸೀತೆಯನು ಖಳನು ಕದ್ದೊಯ್ವಾಗ |ವಿಪರೀತ ವೀರರಿದ್ದೇನ ಮಾಡಿದರು ? 2ಪಾಪಿ ದುಶ್ಯಾಸ ದ್ರೌಪದಿಯ ಸೀರೆಯ ಸೆಳೆದು |ಕೋಪದಿಂ ಮಾನಭಂಗವ ಮಾಡಲು ||ಆಪತ್ತು ಬೆನ್ನಟ್ಟಿ ಹಾ ಕೃಷ್ಣ | - ಎನುವಾಗ |ಭೂಪತಿಗಳೈವರಿದ್ದೇನ ಮಾಡಿದರು ? 3ರಣದೊಳಗೆ ಅಭಿಮನ್ಯು ಚಕ್ರವ್ಯೂಹವ ಪೊಕ್ಕು |ಸೆಣಸಿ ಷಡುರಥದೊಡನೆ ಹೊಯ್ದಾಡಲು ||ಅಣಕವಿಲ್ಲದೆ ಕಾದಿ ಅಸುವಳಿದು ಪೋಪಾಗ |ತ್ರಿಣಯಸಖಿ ಪಾರ್ಥರಿದ್ದೇನ ಮಾಡಿದರು 4ಬ್ರಹ್ಮಶಿರ ಕರಕಟ್ಟಿ ಶಿವನ ಪೀಡಿಸುತಿರಲು |ಸುಮ್ಮನೇ ಜಗವನೆಲ್ಲವ ತಿರುಗಿದ ||ಬೊಮ್ಮಮೂರುತಿಯಾದ ಪುರಂದರವಿಠಲನೇನಮ್ಮಅಳವಲ್ಲ ವಿಧಿಮೀರಿ ಬಾಳುವರೆ5
--------------
ಪುರಂದರದಾಸರು
ಆರೋಗಣೆಯ ಮಾಡೇಳಯ್ಯ ಶ್ರೀಮನ್ನಾರಾಯಣಭೋಗ ಸ್ವೀಕರಿಸಯ್ಯಪ.ಸರಸಿಜಭವಾಂಡದ ಮೇರು ಮಂಟಪದಿ ದಿನಕರಕರ ದೀಪ್ತ ಜ್ಯೋತಿಶ್ಚಕ್ರವು ||ತರಣಿ ಮಂಡಲ ಪೋಲುವ ರತುನದ ಹೊನ್ನಹರಿವಾಣದಲಿ ದೇವಿ ಬಿಡಿಸಿಹಳಯ್ಯ 1ಅಲ್ಲ ಹೇರಳೆ ಲಿಂಬೆ ಯಾಲಕ್ಕಿ ಮೆಣಸು ಕಾಯ್ನೆಲ್ಲೆ ಅಂಬಟೆಕಾಯಿ ಚೆಲ್ವ ಮಾಂಗಾಯಿ ||ಬೇಲ ಮಂಗರೋಳಿ ಹುಣಸೆ ಪಾಪಟೆಕಾಯಿಎಲ್ಲ ಧರಾದೇವಿ ಅಣಿಗೊಳಿಸಿಹಳಯ್ಯ 2ಹಪ್ಪಳ ಸಂಡಿಗೆ ವಿವಿಧ ಶಾಕಂಗಳುತುಪ್ಪ ಸಕ್ಕರೆ ಹಣ್ಣು-ಹಂಪಲವು ||ಕರ್ಪೂರ ಕಸ್ತೂರಿ ಬೆರಸಿದ ಸಿಖರಿಣಿಒಪ್ಪದಿ ಶ್ರೀದೇವಿ ಬಡಿಸಿಹಳಯ್ಯ 3ಎಣ್ಣೂರಿಗತಿರಸ ಚೆನ್ನಾದ ಮಂಡಿಗೆಅನ್ನಕ್ಷೀರಾನ್ನ ಪರಮಾನ್ನಗಳು ||ಸಣ್ಣ ಸೇವೆಗೆ ಶಾಲ್ಯನ್ನವ ನಿಮಿಷದಿಚೆನ್ನೆ ದುರ್ಗಾದೇವಿ ಬಡಿಸಿಹಳಯ್ಯ 4ನೀ ನಿತ್ಯತೃಪ್ತನಹುದು ನಿನ್ನ ಉದರದೊಳುನಾನಾ ಜನರು ಬಂದು ಉಣ್ಣಬೇಕೋ ||ಶ್ರೀನಾಥ ಗದುಗಿನ ವೀರನಾರಾಯಣಅನಾಥ ಬಂಧು ಶ್ರೀ ಪುರಂದರವಿಠಲ 5
--------------
ಪುರಂದರದಾಸರು
ಆರೋಗಣೆಯ ಮಾಡೋ ಎನ್ನಯ್ಯಆರೋಗಣೆಯ ಮಾಡೋ ಪ.ನಾರದಾರ್ಚಿತಪಾದ ನಾರಾಯಣ ಸ್ವಾಮೀ ಅ.ಪಸರಸಿಜಾಲಯೆ ಲಕ್ಷ್ಮಿ ಸರಸ್ವತಿಭಾರತಿಪರಿಪರಿ ಅಡಿಗೆಯ ಸಿದ್ದ ಮಾಡಿಹರೊ ||ಪರಿಮಿತಿಯಿಲ್ಲದ ರುಚಿಯ ಪದಾರ್ಥವಪರಮಪುರುಷ ಉಂಡು ದಯ ಮಾಡೋ ಸ್ವಾಮಿ1ಅಂಬುಜಮುಖಿ ಲಕ್ಷ್ಮಿ ತಾಂಬೂಲ ಕೊಡುವಳುಕಂಬುಕಂಧರನೇ ನೀ ಕೈಕೊಳು ಬೇಗ ||ರಂಭೆ ಊರ್ವಸಿ ಮೇನಕೆ ಮೊದಲಾದವರುಸಂಭ್ರಮದಿ ಬಂದು ನಾಟ್ಯಕೆ ಕಾದಿಹರೊ ಸ್ವಾಮಿ 2ಸರಸಿಜಭವನಯ್ಯ ಪುರಂದರವಿಠಲಸರುವಭೋಗಭುಂಜಿಪ ನರರ ಪಾಲಿಸೊ ದೇವಾ3
--------------
ಪುರಂದರದಾಸರು
ಆವ ಕುಲವಾದರೇನು ಪ.ಭಾವದ ಎಲ್ಲಾನ ತಿಳದವನಿಗೆ ಮತ್ತೇ ಅಪಅಸುಡೊಂಕು ಕಬ್ದು ಇರಲು - ಅದರೊಳಗಿದ್ದರಸ ತಾನು ಡೊಂಕೇನಲೊ - ಮರುಳೆವಿಷಯಭಾವನೆ ಬಿಟ್ಟು ನೀ ಹೋಗಿ ಗುರುಗಳಹಸನಾಗಿ ಕೇಳು ಕಾಣೋ - ಮನುಜಾ 1ನಾನಾವರ್ಣದ ಆಕಳ - ಕ್ಷೀರದಲಿನಾನಾವರ್ಣಗಳಹುದೆ - ಮನುಜಾಹೀನ ಭಾವನೆಗಳನಿಂದಿಟ್ಟು ನೀ ಪೋಗಿಜ್ಞಾನಿಗಳ ಕೇಳು ಕಾಣೋ - ಮನುಜಾ 2ಶರಧಿಯೊಳ ತೆರೆನೊರೆಗಳಾ - ಪರಿಯಂತೆಶರೀರವಲ್ಲದೆ ಬೇರಿಹುದೇ ?ವರಪುರಂದರವಿಠಲನ ಸ್ಮರಿಸುತಿರಲು ನಿನಗೆಸಿರಿಯನು ಮುಕುತಿಯಹುದು - ಮನುಜಾ 3
--------------
ಪುರಂದರದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಆವಗಂ ನೆನೆಮನವೆ ಸಕಲ ಚಿಂತೆಯ ಕಡಿದು |ಕಾವುದಿದು ಕೃಷ್ಣನಾಮ ಪ.ಭಾವಿಸಲು ಯಮದೂತ ಮದಕರಿಗೆ ಕೇಸರಿಯು |ಶ್ರೀಕೃಷ್ಣ ದಿವ್ಯನಾಮ ಅಪವರವೇದ - ಶಾಸ್ತ್ರಗಳ ವ್ಯಾಸಮುನಿ ಮಥಿಸಲು ಸುಧೆಯಾದ ಕೃಷ್ಣನಾಮ |ಪರಮಭಕುತರು ಸವಿದು ಉಂಡು ಮುನಿಗಳ ಕಿವಿಗೆ ಎರೆದ ಶ್ರೀ ಕೃಷ್ಣನಾಮ ||ಗುರುದ್ರೋಣ - ಭೀಷ್ಮ - ಅಶ್ವತ್ಥಾಮ - ಜಯದ್ರಥನ ಜಯಿಸಿತೈ ಕೃಷ್ಣನಾಮ |ಕುರುಸೇನೆಶರಧಿಯನು ಪಾಂಡವರ ದಾಟಿಸಿತು ಶ್ರೀ ಕೃಷ್ಣ ದಿವ್ಯನಾಮ 1ದ್ರೌಪದೀ ದೇವಿಯಭಿಮಾನವನು ಕಾಯ್ದುದಿದು ಶ್ರೀಕೃಷ್ಣದಿವ್ಯ ನಾಮ |ಆಪತ್ತು ಪರಿಹರಿಸಿ ಕುಕ್ಷಿಯೊಳು ಪರಿಕ್ಷೀತನ ರಕ್ಷಿಸಿತು ಕೃಷ್ಣನಾಮ ||ಗೋಪವನಿತೆಯರೆಲ್ಲ ಕುಟ್ಟುತಲಿ - ಬೀಸುತಲಿ ಪಾಡುವುದು ಕೃಷ್ಣನಾಮ |ತಾಪಸನು ಸಾಂದೀಪ ಮುಚುಕುಂದರಿಗೆ ಮನೋ - ರಥವು ಶ್ರೀಕೃಷ್ಣನಾಮ 2ಸುಖದ ಅವಸಾನದಲಿ ಈ ನಾಮ ಗಾಯನವು ಶ್ರೀಕೃಷ್ಣದಿವ್ಯನಾಮ |ದುಃಖಾವಸಾನದಲಿ ಈ ನಾಮವೇ ಜಪವು ಶ್ರೀ ಕೃಷ್ಣದಿವ್ಯನಾಮ ||ಸಕಲ ಸುಖಗಳ ಕೊಟ್ಟು ಸದ್ಗತಿಯ ನೀವುದಿದು ಶ್ರೀ ಕೃಷ್ಣದಿವ್ಯನಾಮ ||ಸುಖವನಧಿ ಅರವಿಂದನಾಭ ಪುರಂದರವಿಠಲ ನೊಲುಮೆಯಿದು ದಿವ್ಯನಾಮ 3
--------------
ಪುರಂದರದಾಸರು
ಆವಾವಾಗಲಿ ರಾಮನ ನೆನೆವನವ ಜಾಣ ಪ.ಸಚೇಲ ಸ್ನಾನ ಮೋನಗಳ್ಯಾಕೆಶುಚಿ ಇಲ್ಲೆಂಬನುಮಾನಗಳ್ಯಾಕೆಉಚಿತಾನುಚಿತ ಕಾಲವದ್ಯಾಕಘಪಚನ ಮಾಡುವ ಹರಿನಾಮಾಗ್ನಿ 1ಅಮಲ ಸ್ಥಾನವು ಬರಲಿನ್ಯಾಕೆಕ್ರಮದಕ್ಷರ ಮಾಲಿಕೆ ಬೇಕ್ಯಾಕೆರಮಣೀಯಾಸನ ಬಯಸುವದ್ಯಾಕತಿಕ್ರಮವಾಹುದು ಭವಕೋಟಿಯ ವಾರ್ತೆ 2ಆಲಸ್ಯದೆ ಅವನ ಮರೆಯಲಿನ್ಯಾಕೆಪಾಲಿಪ ಕರುಣಿಯ ಬಿಟ್ಟಿರಲ್ಯಾಕೆನಾಲಿಗೆಲವನಿರೆ ಕಾಲನ ದೂತರಹಾಳುಮಾಡುವ ಪ್ರಸನ್ವೆಂಕಟ ದಾತಾರ 3
--------------
ಪ್ರಸನ್ನವೆಂಕಟದಾಸರು
ಆಳಬೇಕೈ ಸುಮತಿ ಪತಿವ್ರತೆಯಜಾಳಿಸಬೇಕೈ ಕುಬುದ್ಧಿಯ ಬುಧರು ಪ.ನಾಗರಕ್ಷಕನಪಾದಹೊಂದಿ ವಿಷಯ ಸ್ವಾರ್ಥನೀಗಿಹ ಮಡದಿಯ ಕೂಡಬೇಕೈಭಾಗವತರನು ಮಲಿನಿಪ ಮೋಹಿಯಮೂಗು ಮುಂದಲೆ ಮೊಲೆ ಕೊಯಿದಟ್ಟಬೇಕೈ 1ಶೀಲವಿಡಿದು ನವನಾರೇರ ಸಖ್ಯದಲಿಆಲಯನಡೆಸುವಳಿರಲಿಬೇಕಯ್ಯಆಲಿಕುಣಿಸಿ ನವ ಪುರುಷರ ಕಂಡು ತಾಮ್ಯಾಲೆ ಬೀಳುವಳಜಿಹ್ವೆಸೀಳಬೇಕೈ2ಷಂಡಗಂಡಗೆ ಹಿತ ಹೇಳಿ ಅಂಗವದಂಡಿಸಿ ಕೊಳುವಳ ನಂಬಬೇಕೈಕಂಡ ಬೀದಿಲಿ ಸಾಧು ಕೊಂಡೆಯಾಡುವಳಮಂಡೆಬೋಳಿಸಿ ಕತ್ತೆನೇರಿಸಬೇಕೈ3ಮನೆಗೆಲಸದಲಿಟ್ಟು ಮಹಾತ್ಮರ ಸೇವೆಗೆಂದೂದಣಿಯದ ರಂಭೆಯ ಒಲಿಸಬೇಕುಅಣಕಿಸಿ ಒಲಿದರ ನೀಚಾನುಕೂಲೆಯಾದತನಗಲ್ಲದವಳ ಹೊಳೆ ನೂಕಬೇಕೈ 4ಶಶಿರವಿರಾಶಿ ಮೈ ಹೊಳವಿಲಿ ಮೆರೆವಕುಶಲಗೆ ಮನವಿಟ್ಟ ಜಾಣೆ ಬೇಕೈಪ್ರಸನ್ನವೆಂಕಟಪತಿಯಾಕಾರ ನೋಡಿ ತಾಅಶರೀರನೆಂಬಳ್ಗೆ ವಿಷವಿಕ್ಕಿರೈ 5
--------------
ಪ್ರಸನ್ನವೆಂಕಟದಾಸರು