ಒಟ್ಟು 15585 ಕಡೆಗಳಲ್ಲಿ , 137 ದಾಸರು , 6785 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆಂಡತಿ ನೋಡಣ್ಣ ಈಕಿನ ನ್ನ್ಹೆಂಡತಿ ನೋಡಣ್ಣ ಪ ಮಂಡೆಮುಸುಕು ತೆಗೆದ್ಹಿಂಡುಜನರ ಮುಂದೆ ಬಂಡುಮಾಡಿ ಎನ್ನ ಬೈಲಿಗೆ ತರುವಳು ಅ.ಪ ಕಂಡದ್ದು ಬೇಡುವಳು ತರದಿರೆ ಗಂಡನಲ್ಲೆಂಬುವಳು ತಿಂಡಿಗಾಗಿ ಎನ್ನ ಕಂಡವರ ಕಾಲ್ಹಿಡಿಸಿ ಮಿಂಡೆ ಭಂಡ 1 ಮಾತುಮಾತಿಗಿವಳು ಎನ್ನನು ಕೋತ್ಯಂತೆ ಕುಣಿಸುವಳು ಸೋತೆನೆಂದ್ಹೇಳುತ ಪಾತಕದ್ಹಾಕೆನ್ನ ನೀತಿಗೆಡಿಸುವಳು ಭೀತಿಲ್ಲದ 2 ಒಯ್ಯಾರ ಮಾಡುವಳು ಬೈದರೆ ಬಾಯಿ ತೆರೆದಳುವಳು ಬಾಯಿ ಮುಚ್ಚೆಂದರೆ ಕೈಬಿಟ್ಟೋಡ್ವಳು ದಾಯಾದಿಗಳು ಮುಂದೆ ಹೊಯ್ಮಾಲಿ 3 ತೊಡರು ಬಿಡಳು ಒಡಲಿನ ಕೆಡಕುಗುಣವ ಕಡಿಯಳು ಅಡಿಗಡಿಗೆನ್ನನು ದುಡುಕು ನುಡಿದು ಮನ ಮಿಡುಕಿಸುವಳು ಬಾಯ್ಬಡಕಿ ಬಿಡಿಕಿ 4 ಒದಗಿಸಿ ನಾಂ ತರಲು ಅದರೊಳು ಕದಿದರ್ಧ ತಿನ್ನುವಳು ಪದುಮನಾಭ ನಮ್ಮ ಸದಯ ಶ್ರೀರಾಮನ ಪಾದ ಕೃಪೆಯ ಪಡೆಯದಧಮ 5
--------------
ರಾಮದಾಸರು
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ಪ ವಿತ್ತವುಳ್ಳವನ ಕುಲ ಎಣಿಸುವುದುಂಟೆಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ 1 ಅತ್ತೆಮನೆ ಸೇರುವಗೆ ಅಭಿಮಾನವುಂಟೆಬತ್ತಲೆ ತಿರುಗುವಗೆ ಭಯವು ಇನ್ನುಂಟೆ2 ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆಮತ್ರ್ಯದೊಳನ್ಯ ದೇವರು ಸರಿಯುಂಟೆ 3
--------------
ಕನಕದಾಸ
ಹೆದರದಿರ್ಪೇಳ್ವೆ ಹೇ ಜೀವಾ ಬ್ರಹ್ಮನಿಗಾನು ಮೊದಲು ಪೇಳಿದ ಮಾರ್ಗವ ಪಪದರವಾಗಿ ಲೋಕಗಳನೂ ಪಲವು ಜೀವರಾಶಿಗಳನೂ ಇದಿರಮಾಡಿ ತೋರಿಸಿಹೆನು ಇದಕೆ ನೀನು ಅ.ಪಏಕನಾಗಿದ್ದು ಮೊದಲು ಬಹಳವಾಗಬೇಕೆಂದು ಬುದ್ಧಿುಡಲುಈಕೆ ಮಾಯೆಯಾುದಳೆನ್ನ ುಚ್ಛೆುಂದಲಿಲ್ಲ ಮುನ್ನಸೋಕಿದಂತೀಗಿರ್ದಡಿದೇನು ಶೂನ್ಯಕೆ ನೀನು 1ರಜ್ಜು ಸರ್ಪನ ತೆರದಿ ತೋರಿದರದು ಬೆಜ್ಜರ ಭಾಂತ್ರಿ ಮೂಲದಿಸಜ್ಜಿಸಿದೆ ಮಾಯೆ ಹಾಗೆ ಭರ್ಜಿಸುವ ಬಗೆ ಹೇಗೆವರ್ಜಿತಕೆ ವಿಧಿಯೊಂದುಂಟೆ ವೋಹೋ ಕಂಗೆಟ್ಟೆ 2ಕನಸಿನ ಸಿರಿ ಕಷ್ಟವು ಎದ್ದವನಿಗೆ ನೆನಸಿದರುಂಟೆ ನಿಜವುಮನದ ಭ್ರಮೆುಂದ ಬಂದ ಮಿಥ್ಯಕುಂಟೆ ಮುಕ್ತಿ ಬಂಧಇನಿತ ನಾನೆ ತೋರಿಸಿಹೆನು ಇದಕೆ ನೀನು 3ತಿಳಿದರೂ ತಾನೆ ತೋರ್ಪುದು ಕೇಳ್ ಬಹುಕಾಲ ಬಳಸಿ ಬಂದುದು ಬಲಿದುಹೊಳೆದರೂ ತಾ ಜೀವನನ್ನು ಹೊದ್ದದುಣ್ಣುತಿದ್ದರದನುಕಳಚಿ ಹೋುತೆಂದೆ ನೀ ಕಾಣು ಕೊರತೆ ತಾನೇನು 4ಹುರಿದ ಬೀಜವ ನೋಡಲು ಆಕಾರವಾಗಿ ುರುವದು ುದ ಬಿತ್ತಲುತಿರುಗಿ ಪುಟ್ಟಿ ತೋರುವದೆ ತಿಳಿಯೆ ಮಾಯೆಯನ್ನು ಬಾಧೆಬರುವದೇನೈ ಭದ್ರವಾಗಿರು ಭೋಗಿಸುತಿರು 5ಹೋಗದೇತಕೆ ಹೋರುತಾ ಬಾಧಿಸುವದು ಯೋಗಿಗೂ ುದ್ದೆ ತೋರುತಾಸಾಗುವಂತೆ ಮುಂದೂ ತಾನು ಸಿದ್ಧವಾಗಿ ಮುಕ್ತರನ್ನುಭೋಗಿಗಳ ಮಾಡುತಿಹದು ಬಾಧಿತವಹುದು 6ತೋರಿದ ನಾನೆ ತೆಗೆವೆ ಇದಕೆ ನೀನು ಹೋರದಿರೆನ್ನ ನಿಜವೆಸೇರು ನನ್ನ ಚರಣವನು ದಾರಿದೋರ್ಪೆ ತಿರುಪತಿವಾರಿಜಾಕ್ಷ ವೆಂಕಟೇಶನು ಒಲಿವೆ ನಾನು 7ಓಂ ಪನ್ನಗಾಶನವಾಹನಾಯ ನಮಃ
--------------
ತಿಮ್ಮಪ್ಪದಾಸರು
ಹೆದರಿಕೆ ಬರುತದೆಲೋ ಪದುಮಾಕ್ಷ ನಿನ್ನ ಮುಂದೆ ಹೇಳಿಕೊಳ್ಳಲು ಎನಗೆ ಪ ಹೆದರಿಕೆ ಬರುತಿದೆ ಜಗದ ಜನರು ನಿನಗೆ ವಿಧವಿಧದಾಡುವ ಸುದ್ದಿಯ ಪೇಳಲು ಅ.ಪ ಹಳಿವರು ಹೆಳವನೆಂದು ಅಂಜದೆ ನಿನಗೆ ತಲೆಯಿಲ್ಲದವನೆನುವರು ಇಲ್ಲದೆ ಹೊಟ್ಟಿಗೆ ಹುಲ್ಲುಮೆದ್ದವನೆಂದು ಹಲವು ಬಗೆಯಲಿ ಹೀಯಾಳಿಪುದ್ಹೇಳಲು 1 ದೃಢದಿ ಭಕುತಜನರು ಬೇಡಿದ ವರವು ಕೊಡಬೇಕಾಗುವುದೆನುತ ಓಡಿ ಹಾವಿನಮೇಲೆ ಪವಡಿಸಿದ ಮಹ ಕಡುಲೋಭಿಯೆಂದೆಂಬ ನುಡಿನಿನ್ನೊಳ್ಪೇಳಲು 2 ಒದೆಸಿಕೊಂಡ್ವೊಯ್ಕುಂಠದಿ ಶೇಷಾಚಲದಿ ಸದನಗೈದನುಯೆಂಬರು ಇದು ಅಲ್ಲದತಿ ವಿಧವಿಧ ಲೋಕ ಸುಲಿದರ್ಥ ನಿಧಿಗಳಿಸಿದ ಚಿನಿವಾರೆಂಬದ್ಹೇಳಲು 3 ಕುದುರೆಮಾವುತನೆಂಬರು ಎಲವೋ ರಂಗ ಕದನಗಡಕನೆನುವರು ಹದಿನಾರು ಸಾವಿರ ಸುದತಿಯರೊಶನಾದ ಸುಧೆಗಳಜಾರನೆಂಬ ವಿಧಿಯನ್ನು ಪೇಳಲು 4 ವಿಪಿನವಾಸಿಕನೆನುವರು ನಿಷ್ಕರುಣದಿ ನೀ ಕಪಿವರನ ತರಿದೆನುವರು ಕಪಟ ತಿಳಿಯುವರಾರು ಅಪರೂಪಮಹಿಮನೆ ಕೃಪಾನಿಧಿ ಶ್ರೀರಾಮ 5
--------------
ರಾಮದಾಸರು
ಹೆದರಿಕೆ ಯಾತರದೋ ತ್ರಿಜಗದಿ ಪಾದ ಸದಮಲದಾಸರಿಗೆ ಪ ಗರುಡನ ಮಂತ್ರಕೆ ಉರಗನ ಭಯವುಂಟೆ ದುರಿತದಂಜಿಕೆಯುಂಟೆ ನರಹರಿಸ್ಮರಣೆಗೆ 1 ಬಿರುಗಾಳಿ ಬೀಸಲು ಗಿರಿ ನಡುಗುವುದುಂಟೆ ಪರಿಭವ ಬಂಧಮುಂಟೆ ಸಿರಿವರನರ್ಚಕರಿಗೆ 2 ಶ್ರೀರಾಮನಡಿವಾರಿಜಭಜಕರ್ಗೆ ಸಾರಮೋಕ್ಷಂಗಳು ದೂರವಿನ್ನುಂಟೆ 3
--------------
ರಾಮದಾಸರು
ಹೆಮ್ಮೆಯಾ ಬಿಡು ಬಿಡು ಮನುಜಾ ಪ ಬೊಮ್ಮ ದೂರ್ವಾಸಾದಿಗಳೆಲ್ಲಾ | ಸುಮ್ಮನೆ ತಲೆವಾಗಿ ಹೋದರೆಂಬುದ ಕೇಳಿ ಅ.ಪ ಕಡಲೊಳು ಕುಳಿತಿಹ ಬಕದಾಲ್ಭ್ಯನೊಳು ಗರ್ವ | ನುಡಿಯಲಿ ತಾ ವಾಯು ವಶದಿಂದಲಿ | ತಡಿಯದೆ ಬಹುಮುಖ ಕಮಲಾಸನ ಕಂಡು | ಒಡನೆ ಲಜ್ಜಿತ ಬ್ರಹ್ಮನಾದ ನೆಂಬುದು ಕೇಳಿ 1 ತುಚ್ಛ ಮಾಡಿದ ಇಂದ್ರನೆಂಬ ಗರ್ವದಿ ಬಂದು | ಮತ್ಸರಿಸಲು ಅಂಬೃಷಿಯೊಡನೆ | ಅಚ್ಯುತನಾಯುಧ ಬೆನ್ನಟ್ಟಿ ಬರಲಾಗ | ಹುಚ್ಚಿಟ್ಟು ದೂರ್ವಾಸ ಹೋದನೆಂಬುದ ಕೇಳಿ 2 ಮೇರು ಗಿರಿಯ ಸಮವಾಗಿ ಸೂರ್ಯನ ರಥಾ | ದಾರಿ ಕಟ್ಟುವೆನೆಂದು ಬೆಳೆಯುತಲಿ | ಧೀರಗಸ್ತ್ಯನ ನುಡಿ ಕೇಳಿ ವಿಂದ್ಯಾದ್ರಿ | ಧಾರುಣಿಯೊಳಗೇ ನಾದನೆಂಬುದ ಕೇಳಿ 3 ಯಕ್ಷರಾಕ್ಷಸದೇವ ದ್ವಿಜರೊಳೆಮಗಸಮ | ಕಕ್ಷದಿ ನಿಲುವ ರರೆನುತಾ | ಭಿಕ್ಷುಕ ಯೋಗಿಯನುತಾ ಶಿವನೆಣಿಸದೆ | ದಕ್ಷ ಮನ್ಮಥರೇನಾದರೆಂಬುದ ಕೇಳಿ 4 ನಹುಷಾದಿ ರಾಯರು ಮೂಢ ಪಂಡಿತರೆಲ್ಲಾ | ಬಹುತರು ನಮ್ರವೃತ್ತಿಯ ತ್ಯಜಿಸಿ | ಮಹಿಪತಿಸುತ ಪ್ರಭು ವಲುಮೆಗೆ ದೂರಾಗಿ | ಅಹಂಕಾರ ಬಲಿಯೊಳು ಕೆಟ್ಟರೆಂಬುದ ಕೇಳಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೆಳೆಲೆ ಸಖಿ ಘಮ್ಮನೆ ಸುಳಿದವನಾರೇ | ಕೇಳಮ್ಮ ಒಮ್ಮಿಂ ದೊಮ್ಮೆಲೆ ಕಂಡೆ ನಾನೀರೆ | ಒಲಿದು ಕರೆ ತಂದೆನಗಿನ್ನೊಮ್ಮೆ ದೋರೇ | ಚಲುವಿಕೆಯವನ ಉಸುರಲಾರೆ ಪ ಪದುಮ ಶಂಖ ಚಕ್ರಾಂಕಿ ತರುಣ ತಳದಾ | ಬಿದಿಗೆ ಚಂದ್ರಮನ ನೀಲಮಣಿಯಂತೆ ಹರಡಿನ ಪಾದಾ | ಚದುರ ನೂಪುರ ಗೆಜ್ಜೆ ರವದಾ 1 ಜಾನೂರು ಪೋಂಬಾಳೆ ಕಟಿ ತಟಾ | ಸುನಾಭಿ ತ್ರಿವಳಿಯ ಕೂಟಾ 2 ಕಿರಿಡೊಳ್ಳು ಮಧ್ಯ ಯಳೆ ವಾಸೆ ಹೃದಯಲಿ ಪದಕಾ | ಸಿರಿವತ್ಸ ಗ್ರೀವ ಕರ ಕಡಗ ತೋಳ ಬಂದಿ ಕುಂಡಲ ರನ್ನನೇಕಾ 3 ಕುರು ಮರಿಯಂದದಿ ಕದಪಿನಮುಖಾ | ಕಿರುನಗೆ ದಂತಾರ ನಯನ ಭ್ರೂತಿಲಕಾ | ನೊಸಲು ಕಸ್ತೂರಿ ತಿಲಕಾ 4 ತೆರಳಿದ ಬೆರಳುಂಗುರ ಸನ್ನೆ ಮಾಡುತಾ | ಗುರು ಮಹಿಪತಿ ನಂದನ ಪ್ರಭುನಿವಸತ್ಯ | ಧರಿಯೋಳಳಿವನ ಗಾಣಿ ಪರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೇ ದಯಾಸಾಗರ ಸ್ವಾಮಿ ವೇದ ಮಾಧವ ಮುಕುಂದ ಮನುಮುನಿ ಪ್ರೇಮಿ ಪ ವೇದಗೋಚರ ಸಾಧುಸನ್ನುತ ನಾದಪ್ರಿಯ ಭವಬಾಧೆರಹಿತ ಭೇದಹರ ಜಗ ಪಾದ ಭಜಿಸುವೆ ಪಾಲಿಸೆನ್ನ ಅ.ಪ ಮದಗಜ ಮುದದಿಂದ ಪೊರೆದಿ ಪ್ರಭುವೆ ಮದಗಜಗಮನೆಯ ಮಾನದಿಂ ಕಾಯ್ದೆ ಪದುಮವದನೆಶಾಪ ಕಳೆದೆ ಕರುಣಿ ಸದಮಲಬಾಲನ ತಪಕೆ ನೀನೊಲಿದಿ ಸುದಯಹೃದಯ ಸುಸದನಪಾಲ್ಸಿದಿ ಸದಮಲಾಂಗನೆ ಪದುಮವದನ ಮುದದಿ ನಿಮ್ಮಡಿ ಪದುಮಗಳು ಎ ನ್ಹøದಯ ಮಂದಿರದಿರಿಸಿ ರಕ್ಷಿಸು 1 ಗರುಡಂಗೆ ವರಮೋಕ್ಷ ನೀಡ್ದಿ ನಿನ್ನ ಸ್ಮರಿಪರಿಗೆ ದರುಶನಕೊಡುತಲಿ ನಡೆದಿ ತರುಣಿಯ ಎಂಜಲ ಸವಿದಿ ವನ ಚರನಿಗೆ ವಶನಾಗಿ ಅಭಯ ಪಾಲಿಸಿದಿ ಭರದಿ ದಕ್ಷಿಣಶರಧಿ ಹೂಳಿಸಿ ಮೆರೆವ ಲಂಕಾಪುರವ ಮುತ್ತಿದಿ ದುರುಳರ್ಹಾವಳಿ ದೂರಮಾಡಿ ಧರೆಯ ಭಾರವ ನಿಳುಹಿದಯ್ಯ 2 ನುಡಿಸಿದರೆನ್ನಿಂದಲಾವ ವಚನ ನುಡಿಸಿದ ಬಳಿಕದನು ನಡೆಸಿಕೊಡಭವ ನುಡಿಯಂತೆ ನಡೆಯೆನಗೆ ಸ್ಥಿರವ ಕೊಟ್ಟೆ ನ್ನೊಡಲೊಳಗದಂತೆಯಿರು ಅನುದಿನವು ಪೊಡವಿ ಮೂರನು ಒಡಲೊಳಿಟ್ಟಿಡೆ ಬಿಡದೆ ಆಳುವ ಒಡೆಯ ಶ್ರೀರಾಮ ದೃಢದಿ ನಿಮ್ಮಯ ಅಡಿಯ ನಂಬಿದೆ ಬಿಡಿಸು ಎನ್ನಯ ಮಂದಜ್ಞಾನವ 3
--------------
ರಾಮದಾಸರು
ಹೇ ಮುರಾರೆ ಹೇ ಮುಕುಂದ ಪ ಪ್ರೇಮ ವೀಕ್ಷಣದಿಂದ ಪೊರೆಯೊಅ.ಪ ಈ ಮಹಾ ಕುತಾಪಗಳಲಿ ನಾಮ ಕೀರ್ತನೆಯೊಂದೆ ಎನಗೆ ಕ್ಷೇಮಕರವೆಂದರಿತು ವದನದಿ ರಾಮ ರಾಮನೆಂದು ಕೂಗುವೆ 1 ನೋಡಿದೆನೋ ಈ ಭವದ ಭೋಗವ ಬೇಡದಾಯಿತೊ ನಿನ್ನ ದಯದಿ ಈಡನರಿಯೆನೊ ನಿನ್ನ ಗುಣಗಳ ಪಾಡಿ ಹಿಗ್ಗುತ ಕುಣಿಯುವುದಕೆ 2 ಆಸೆ ಎನ್ನನು ಮೋಸ ಮಾಡಿತೊ ಕ್ಲೇಶ ಬಿಡದೊ ಈಶ ನಿನ್ನಯ ಭಜನೆಯೊಂದೆ ಲೇಸೊ ಲೇಸೊ ಹೇ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಹೇಗೆ ಕಳಕೋಬೇಕೋ ಹರಿಹರಿ ನೀನೆ ಕಳೆಯಬೇಕೊ ಪ ಹ್ಯಾಗೆ ತೊಳಕೋ ಬೇಕು ತಿಳಿಯದು ಎನಗಿದು ನೀಗದಂಥ ಈ ಅಗಾಧ ರಿಣಮುಟ್ಟು ಅ.ಪ ಹೆತ್ತಮುಟ್ಟು ಅಲ್ಲ ತೊಳಕೊಳ್ಳ ಲ್ಸತ್ತ ಸೂತಕಲ್ಲ ಭವ ಸುತ್ತಿಸುತ್ತಿ ಬೆ ನ್ನ್ಹತ್ತಿ ಬಿಡದೆ ಕಾಡುತ್ತ ನೋಯಿಪ ರಿಣ1 ನಿಶ್ಚಲಯಿರಗೊಡದು ಜಗದೊಳು ತುಚ್ಛನ ಮಾಡುವುದು ಮುಚ್ಚು ಮರಿಯಾದೆಯ ಬಿಚ್ಚಿಟ್ಟು ಬಯಲಿಗೆ ಹಚ್ಚಿ ಮಾರುವಂಥ ಉಚ್ಚಿಷ್ಠ ರಿಣಮುಟ್ಟು 2 ಭಕ್ತವತ್ಸಲರಾಮ ನೀನೆ ಮುಕ್ತಿಪಥಕೆ ಸೋಮ ನಿತ್ಯ ನಿರ್ಮಲಮನ ಭಕ್ತನಿಗಿತ್ತು ರಿಣ ಮುಕ್ತನ ಮಾಡಿ ಬೇಗಂತಃಕರಣ ನೀಡೊ 3
--------------
ರಾಮದಾಸರು
ಹೇಗೆ ಕಳೆಯಬೇಕೋ ಹೊತ್ತು ಹೇಗೆ ಕಳೆಯಬೇಕೋ ಪ ಹೇಗೆ ಕಳಿಲಿ ಭವಸಾಗರದಲಿ ಮನ ನೀಗದು ಚಂಚಲ ಸಾಗರನಿಲಯ ಅ.ಪ ಹುಟ್ಟಬಾರದಿತ್ತು ಇಹ್ಯದಿ ಹುಟ್ಟಿದ್ದೇ ತಪ್ಪಾಯಿತು ನಿಷ್ಠೆಲಿರಗೊಡದೆನ್ನ ದುಷ್ಟಮನಸು ಘಳಿ ಗಿಷ್ಟೆಲ್ಲ ಎಲ್ಲಿತ್ತು ಹುಟ್ಟದಿದ್ದರೆ ನಾನು 1 ಕ್ಷಣಕ್ಷಣಕೊಂದು ರೀತಿ ಮನಸಿನ ಗಣನೆಯಿಲ್ಲದ ಭ್ರಾಂತಿ ಜನಿಸಿದಂದಿನಿಂದ ಘನತರ ಕುಣಿಸ್ಯಾಡಿ ಜನರ ಸೇವೆಯೊಳು ದಣಿಸಿತು ಪಾಪಿ 2 ಅನುಗಾಲವು ಚಿಂತೆ ಜೀವಕೆ ಇನಿತು ಇಲ್ಲ ಸ್ವಸ್ಥ ತನುಮನಧನ ನಿನಗರ್ಪಿಸಿ ಬೇಡುವೆ ಘನ ಬೇಸತ್ತೆ ಪೊರೆ ಚಿನುಮಯ ಶ್ರೀರಾಮ 3
--------------
ರಾಮದಾಸರು
ಹೇಗೆ ಮಾಡಬೇಕು ಭಜನೆಯನು ಹೇಗೆ ಮಾಡಬೇಕುಬೇಗ ಜ್ಞಾನ ಭಕ್ತಿ ವೈರಾಗ್ಯ ಬರುವಂತೆ ಭಜನೆಮಾಡಬೇಕು ಪಆಧ್ಯಾತ್ಮಿಕ 'ಷಯದಲಿ ಮೊದಲು ಬಲು ಶುದ್ಧಜ್ಞಾನ ಬೇಕುಮಹಾತ್ಮ್ಯದ ಸುಜ್ಞಾನ ಪೂರ್ವಕ ಸುಧೃಡ ಸ್ನೇಹಬೇಕುದೇಹದೌಲತ್ತಿನ ಸ್ವರೂಪವರಿತು ವೈರಾಗ್ಯ ಹುಟ್ಟಬೇಕುಈ ಮೂರು ಮನಸಿನಲಿ ಮೂಡುವಂತೆ ನಾವು ಭಜನೆ ಮಾಡಬೇಕು 1ನಾನು ನನ್ನದೆಂಬ ಅಹಂಕಾರ ದಿನದಿನಕೆ ಅಳಿಯಬೇಕುಮಾನಾಪಮಾನವು ಆದರೆ 'ಗ್ಗದೆ ಕುಗ್ಗದೆ ಇರಬೇಕುಹೆಣ್ಣು ಹೊನ್ನು ಮಣ್ಣುಗಳ 'ಷಯದಲಿ ತ್ಯಾಗ ವೈರಾಗ್ಯ ಬುದ್ಧಿಬೇಕುಪುಣ್ಯ ಪಾಪಗಳನರಿತ ಸದ್ಭಕ್ತರ ಸಂಗತಿ ಇರಬೇಕು 2ಮಧ್ವಮತದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಶುದ್ಧಮನದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಬುದ್ಧಿಗೇಡಿ ದುರ್ದೈ' ದುಷ್ಟರನು ದೂರದಲಿ ಇಡಬೇಕುಶ್ರದ್ಧೆುಂದ ಭೂಪತಿ'ಠ್ಠಲನನು ಭಜಿಸಿ ಕುಣಿಯಬೇಕು ನ
--------------
ಭೂಪತಿ ವಿಠಲರು
ಹೇಮದ ತೊಟ್ಟಿಲ ಭಾಮೆಯರ್ಹೂಡಿ ಕೋಮಲ ಕಾಂಚನಧಾಮವ ಮಾಡಿ ಕಾಮಜನಕನೊಳು ಕಾಮಿತ ಬೇಡಿ ಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1 ಚೆನ್ನಿಗರರಸ ಮೋಹನ್ನ ಸುಶೀಲ ಕನ್ನಡಿ ಕದಪಿನ ಕಮನೀಯ ಬಾಲ ಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲ ನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2 ಕೆಂದಾವರೆಯಂತೆ ಚೆಂದುಳ್ಳ ಚರಣ ಚಂದಿರವದನ ಗೋವಿಂದನ ಶರಣ ಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣ ಕಂದ ಕಂದರ್ಪನ ಸುಂದರಾಭರಣ ಜೊ ಜೋ 3 ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣ ನ್ಯಾಯ ನೀತಿ ಸದುಪಾಯ ಸಂಪನ್ನ ಪ್ರೀಯನೆ ಕರ್ಣಾಂತಾಯತನಯನ ಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ4
--------------
ತುಪಾಕಿ ವೆಂಕಟರಮಣಾಚಾರ್ಯ
ಹೇಳಯ್ಯಾ ಶ್ರೀ ಗುರುವೇ ಬಾಳುವೆನದರಂದವಿ ಸುರ ತರುವೇ ಪ ಹೀನ ಯೋನಿಯ ಮುಖದಲಿ ಬಂದು ನಾನಾ ತಾಪತ್ರಯದಿ ಬಹುನೊಂದು ನೀನೆ ಗತಿಯನುತ ಬಂದೆ ನಿಂದು ನಾನು ಭವದಿಂದ ತರಿಸುವ ಉಪಾಯವ ವಂದು 1 ಕೇಳಯ್ಯಾ ನೀ ಕಂದಾ ಹೇಳುವ ನುಡಿ ಗ್ರಹಿಸಲಾನಂದಾ ಆದಿಯಲಿ ದುರ್ಜನ ಸಂಗವಳಿದು ಸಾಧುಜನಸಂಗವನೇ ಬೆರೆದು ಬೋಧೆಯಂದಲಿ ಮನನವ ಬಲಿದು ಸಾಧಕನ ಉದ್ಯೋಗಿಸ ಸಿದ್ಧಿಯಹುದು2 ಸ್ವಾಮಿ ಸಜ್ಜನ ಸಂಗವನೇ ಬಯಸಿ ಪ್ರೇಮದಿರಬೇಕು ಇದೇ ನಿತ್ಯವೆನಿಸಿ ತಾಮತ್ತರ ಘಳಿಗಿಯೊಳು ವಲಿಸಿ ಭ್ರಮಿಸುತಿಹಿದು ಅದು ಏನೆಂದು ವಿಸ್ತರಿಸಿಹೇ3 ಕೇಳಯ್ಯಾ ಲೋಕವೆಲ್ಲಾ ಛಲನೆ ಮಾಡುವುದು ವಿಕಲ್ಲುಳ್ಳದು ನೋಡುಮನವದು ನಾಕು ತೆರದೊಳಿಸಿ ಕೊಳ್ಳಲದು ಬೇಕಾದುದನು ವಸ್ತು ಇದಿರಿಡುತಲಿಹುದು4 ನಳಿನ ಜಪರಾಸುರಗಳಿಗೆ ಛಲಿಸಲಿಕೆ ಮನ ಅಂಗನಿಗೆ ಬಲಿ ವಿಡಿದು ಮೋಹಿಸಿದ ರಾಗ ಇಳಿಯೊಳಗ ವಶಯಂತಹುದು ಮನುಜಗ5 ಕೇಳಯ್ಯಾ ಶುಕನಾರದ ಭೀಷ್ಮರ ನೋಡಾ ವಿಕಳಿಗೊಳ್ಳದೆ ಮನಕೂಡಾ ಸಕಲಗೆದ್ದರು ಅತಿಗಾಢಾ ಯುಕುತಿಲೆ ಮನೊಲಿಕೊವೈರಾಗ್ಯದಿಂದ ಧೃಡಾ6 ಹೇಳೈಯ್ಯಾ ಜ್ಞಾನಸಾಧನವೆಂಬುದನರಿಯೇ ಎನಗೆಂತಹದಿಂತಿದು ಧೋರಿಯೇ ನೀನೇ ತಾರಿಸುದಯದೆನ್ನ ಸಿರಿಯೇ ನಾನು ಎಂದೆಂದು ತವಪಾದಸ್ಮರಣಿ ಮರಿಯೆ7 ಎಂದು ಬಾಗುವ ಕಂದನನು ನೋಡಿ ಕರ ನೀಡಿ ಛಂದದಲಿ ತರಿಪಂತೆ ಮಾಡಿ ಬಂದು ಧನ್ಯ ಗೈಸಿದ ಗುರು ಮಹಿಪತಿ ಕೈಯ್ಯಗೂಡಿ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೇಳುವುದು ಬೇಡ | ಜನರ ನುಡಿ ಕೇಳದಿರಲೋ ಮೂಢ ಪ ಶ್ರೀಲೋಲನ ಕಿಂಕರರ ಬಾಗಿಲಲಿ ಬೀಳುನಾಯಿಯಂದದಲಿ ಕೆಲಕಾಲ ಅ.ಪ ದ್ರವ್ಯದಾಸೆಗಾಗಿ | ನಾರಕೀ ಭವಿತವ್ಯರಲ್ಲಿಗೆ ಹೋಗಿ ಕಾವ್ಯನಾಟಕ ಸ್ತುತಿ ಪದ್ಯಗಳನು 1 ನಾನು ಯೋಗ್ಯನೆನ್ನುತ | ತೋರಿಸಿ ಮಾನವಾಗಿದಿರದಲ್ಲಿ ನಿನಗೆ ದುರಭಿ- ಮಾನಿಯಾಗಿ ನೀ ಕೆಡುವೆಯೊ ನಿಜ ನಿಜ 2 ಕೊಂಚ ಬೇಡಬೇಕು ವಂಚನೆಯಿಲ್ಲದೆ ಭಜಿಸು ರಹಸ್ಯವ 3
--------------
ಗುರುರಾಮವಿಠಲ