ಒಟ್ಟು 11785 ಕಡೆಗಳಲ್ಲಿ , 132 ದಾಸರು , 6311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಟ್ಟು ಹೋಗೊ ಎನ್ನ ಸಾಲವ-ಕಣ್ಣ-|ಬಿಟ್ಟರಂಜುವನಲ್ಲ ಹೊರು ಕಲ್ಲ ಕೃಷ್ಣ ಪಕಾಲನೂರಿ ಅಡಿಯಿಟ್ಟರೆ-ಭೂ-|ಪಾಲನಾಣೆ ನರಸಿಂಗನೆ ||ಏಳು ವರ್ಷ ಬಡ್ಡಿ ಮೂಲಸಹಿತವಾಗಿ |ತಾಳುವನಲ್ಲವೊ ತಿರುಕ ಹಾರುವನೆ 1ಕೊರಳುಗೊಯ್ಕ ನೀನು ಸಾಲವ ತೆಗೆದು |ತಿರುಗುವುದುಚಿತವೆ ವನವನವ ||ಎರಡೇಳು ವರ್ಷಕೆ ಎನಗಿಂದು ಸಿಕ್ಕಿದೆ |ಒರಳಿಗೆ ಕಟ್ಟದೆ ಬಿಡುವೆನೆ ಕೃಷ್ಣ 2ಬತ್ತಲೆ ನಿಂತರೂ ಬಿಡುವೆನೆ ನಿನ್ನ |ಉತ್ತಮ ಗುಣಗಳ ತೋರಿದೆ ||ಹತ್ತಿದ್ದ ಕುದುರೆ ಸಹಿತವಾಗಿ ಹಿಡಿತಂದು |ಚಿತ್ತದಿ ಕಟ್ಟುವೆ ಪುರಂದರವಿಠಲ 3
--------------
ಪುರಂದರದಾಸರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಕೊಡುವಕರ್ತ ಬೇರೆ ಇರುತಿರೆ -<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಡುಬಿಡು ಚಿಂತೆಯನು ಪ.ಒಡೆಯನಾಗಿ ಮೂಜಗವನು ಪಾಲಿಪ |ಬಡವರಾಧಾರಿಯು ಭಕ್ತರ ಪ್ರಿಯನು ಅಪಕಲ್ಲಿನೊಳಗೆ ಇರುವ - ಕಪ್ಪೆಗೆ - |ಅಲ್ಲೆ ಉದಕಕೊಡುವ |ಎಲ್ಲ ಕೋಟಿ ಜೀವರಾಶಿಗಳನೆ ಕಾಯ್ವ |ವಲ್ಲಭಶ್ರೀಹರಿ ಎಲ್ಲಿಯು ಇರುತಿರೆ|1||ಆನೆಗೈದುಮಣದಾ - ಆಹಾರವ |ತಾನೆ ತಂದು ಕೊಡುವ |ದೀನರೊಡೆಯ ಶ್ರೀನಿವಾಸ ದಯಾನಿಧಿ |ಮಾನದಿಂದಲಿ ಕಾಯ್ವ ಭಾನುಕೋಟಿತೇಜ2ಸರಸಿಜಾಕ್ಷ ತನ್ನ - ಸೇರಿದ |ನರರನು ಬಿಡನಣ್ಣ |ಪರಮದಯಾನಿಧಿ ಭಕುತರ ಸಲಹುವ |ಪುರಂದರವಿಠಲನು ಪುಷ್ಪಶರನ ಪಿತ 3
--------------
ಪುರಂದರದಾಸರು
ಕೊಡುವುದೆಂದು ಎನ್ನ ಕೊಂಬುದೆಂದು-ಕೈ-|ಪಿಡಿವುದೆಂದು ನೀ ಒಲಿವುದೆಂದು ಪಕೊಡುಕೊಂಬ ಮಹದನುಗ್ರಹದವನೆಂದು ನಿ-|ನ್ನಡಿಗೆ ಸೇರಿದೆನಯ್ಯ ಬಡತನಕೌಷಧ ಅ.ಪಶ್ವಾನಸೂಕರ ಜನ್ಮ ನಾನುಂಬೆ ನನ್ನಲ್ಲಿ |ನೀನೇ ತತ್ತದ್ರೂಪನಾದೆಯಲ್ಲ ||ಹೀನರೊಳ್ ನಾನತಿ ಹೀನನಾಗಿ-ಅಭಿ-|ಮಾನಿಯಾಗಿ ಕಾಲಕಳೆದೆನಲ್ಲ ||ವಾನರನಂಗೈಯ ಮಾಣಿಕ್ಯದಂತೆನ್ನ |ಮಾನದಂತರ್ಯಾಮಿ ಸಿಕ್ಕೆಯಲ್ಲ ||ಏನೇ ಆದರು ನಿನ್ನೊಳೆನಗೆ ಮುಂದೆ ಭಕ್ತಿ-|ಙ್ಞÕನ-ವೈರಾಗ್ಯ ಭಾಗ್ಯಗಳನು ದೇವ 1ಕಾಡಿನ ಮೃಗವು ತಾ ಹಾಡಿದರೆ ನಂಬಿ |ಆಡುವುದಲ್ಲದೆ ಓಡುವುದೆ? ||ಕಾಡುವ ಪಶುವಿನ ಬಾಲವ ಕಟ್ಟಿಸಿ |ಕೂಡೆ ಪಾಲ್ಗರೆಯಲು ಒದೆಯುವುದೆ? ||ಆಡುವ ಶಿಶು ತಪ್ಪಮಾಡಲು ಜನನಿ-ಕೊಂ-|ಡಾಡುವಳಲ್ಲದೆ ದೂಡುವಳೆ ||ಮೂಢ ಬುದ್ದಿಯೊಳು ಕೆಟ್ಟಿನೆಂದು-ಕೋಪ |ಮಾಡಬೇಡ ದಯೆಮಾಡಿ ನೀಡಿಷ್ಟವ 2ಹಣ್ಣಾದ ಹೊತ್ತು ಬಾಯ್ ಹುಣ್ಣಾದ ತೆರನಂತೆ |ನಿನ್ನ ಸೇರುವ ಯತ್ನ ಬಿಟ್ಟು ನಾನು ||ಹೆಣ್ಣು ಹೊನ್ನು ಮಣ್ಣಿಗಾಗಿಯೆ ಭ್ರಮೆಗೊಂಡೆ |ಸುಣ್ಣಕಿಕ್ಕಿದ ನೀರಿನಂತಾದೆನು ||ಎನ್ನಪರಾಧವನಂತ ಕ್ಷಮಿಸು ನೀನು |ಮನ್ನಿಸದಿರಲಾರಿಗೆ ಪೇಳ್ವೆನು ||ಓಂ ನಮೋ ಶ್ರೀಹರಿಎಂಬ ಪೂರ್ಣಙ್ಞÕನ-|ವನ್ನು ಪುರಂದರವಿಠಲನ ಎನ್ನಪ್ಪನೆ 3
--------------
ಪುರಂದರದಾಸರು
ಕೊಂಬು ಕೊಳಲ ತುತ್ತೂರಿ ಊದುತಲಿಕ್ಕುಇಂಬುಕಸ್ತುರಿ ಪರಿಮಳ ಸೂಸುತ ||ಪೊಂಬಟ್ಟೆ ಚೆಲ್ಲಣ ಸೋಸಿದ ಮೊಸರಿನ |ಕುಂಭಒಡೆದು ಕೆಸರಾಗಿದೆಯಮ್ಮ2ಮಿಂಚಿನಂದದಿ ಹೊಳೆಯುತ ಬದಿಯಲಿದ್ದ |ಸಂಚಿತಾರ್ಥಗಳೆಲ್ಲ ಸೂರಾಡಿದ ||ವಂಚನೆಯಿಲ್ಲದೆ ಭಕ್ತರ ಸಲುಹಿದ |ಸಂಚುಕಾರ ಪುರಂದರವಿಠಲನಲ್ಲದೆ 3
--------------
ಪುರಂದರದಾಸರು
ಕೊಬ್ಬಿನಲಿರಬೇಡವೊ - ಏ ನಮ್ಮ ನನುಜಾಕೊಬ್ಬಿನಲಿರಬೇಡವೊ ಪ.ಸಿರಿಬಂದ ಕಾಲಕೆ ಸಿರಿಮದವೆಂಬರುಬಿರಿದು ಬಿರಿದು ಮೇಲಕೆ ಮಾಳ್ಪರುಸಿರಿಹೋದ ಮರುರಿನ ಬಡತನ ಬಂದರೆಹುರುಕು - ಕಜ್ಜಿಯ ತುರಿಸಿ ತಿರುಗುವರಯ್ಯಾ 1ಒಡವೆ ವಸ್ತುವನಿಟ್ಟುಬಡಿವಾರ ಮಾಳ್ಪರುನಡೆಯಲಾರನೆಂದು ಬಳುಕುವರುಸಿಡಿಲು ಎರಗಿದಂತೆ ಬಡತನ ಬಂದರೆಕೊಡವ ಹೊತ್ತನಾರ ತರುವರಯ್ಯ 2ವ್ಯಾಪಾರ ಬಂದಾಗ ವ್ಯಾಪಾರ ಮಾಳ್ಪರುಶಾಪಿಸಿಕೊಂಡರು ಬಡವರ ಕೈಲಿಶ್ರೀಪತಿ ಪುರಂದರವಿಠಲರು ಮುನಿದರೆಭೊಪಾರದೊಳಗೆಲ್ಲ ತಿರಿದು ತಿಂಬರಯ್ಯ 3
--------------
ಪುರಂದರದಾಸರು
ಕೋಮಲಾಮಲ ಗಾತ್ರನ ತಾಮರಸದಳ ನೇತ್ರನಸ್ವಾಮಿ ಸಿರಿನಿವಾಸನ ಕಂಡೆ ಹೇಮಗಿರಿ ವರದೀಶನ ಪ.ಕನ್ನೆ ಲಕುಮಿಯನೆತ್ತಿದಶುಭಚಿನ್ನವಕ್ಕಿಯ ಹತ್ತಿದರನ್ನದುಡುಗೆಗಳಿಟ್ಟನ ಸುವರ್ಣದಂಬರನುಟ್ಟನಕರ್ಣಕುಂಡಲ ಬೆಳಗಿನ ನುಣ್ಗೆನ್ನೆಲಲುಗುವ ಕುರುಳಿನಸಣ್ಣನಾಮದ ನೊಸಲಿನ ಶ್ರೀ ಚಿನ್ಮಯನ ಬಲು ಚೆಲುವನ 1ಕುಂದದಲರಿನ ಮಾಲೆಯ ಪ್ರಭೆಗುಂದದ ಮಕುಟಮೌಳಿಯಸ್ಯಂದನಾಂಗದರಾಭಯವರ ಹೊಂದಿದಮಲ ಸುಪಾಣಿಯಮುಂದೆ ನಾರದ ಹನುಮರ ಗಾಯನಾನಂದದಲಿ ತಾ ಕೇಳುವಹಿಂದೆಡಬಲದಿ ಛತ್ರವ ಪಿಡಿದಿಂದಿರೆಯರೊಳೊಪ್ಪುವ 2ತೋರ ಮುತ್ತಿನ ಹಾರದಕೇಯೂರಕೌಸ್ತುಭವಕ್ಷದಚಾರುಸ್ಮಿತ ಮುಖರೋಚಿಯ ದಯಾವಾರಿಧಿಯ ಮಹೋದಾರಿಯಸಾರಿದರ ಸುರತರುವಿನ ಸುರವೈರಿಕರಿಪಂಚಾನನಭೂರಿಪ್ರಸನ್ವೆಂಕಟೇಶನ ಹೃದಯಾರವಿಂದ ನಿವಾಸನ3
--------------
ಪ್ರಸನ್ನವೆಂಕಟದಾಸರು
ಕೋಲತರುವೆ ತಾಳೋ ನಿನಗೆ ಬಾಲ ಕೃಷ್ಣನೇ |ಪೇಳಿದ ಮಾತನು ಕೇಳುಶೂಲಿಮಿತ್ರನೇ ಪನಾರಿ ಜನರ ದೂರಕೇಳಿಗಾರುಗೊಂಡೆನೇ ||ಕೃಷ್ಣ||ಸೀರೆಗಳ್ಳನೆಂದು ಹೆಸರನಿಟ್ಟುಕೊಂಡೆನೇ 1ಸುದತಿಯರನು ಮೋಸಗೈವ ಹದನವರಿತೆನೇ ||ಕೃಷ್ಣ||ದಧಿಘೃತಚೋರನೆಂದು ಮೊದಲೆ ಕೇಳೆನೇ 2ಕಂಡು ಸಹಿಸಲೆಂತು ನಿನ್ನ ಭಂಡತನವನೇ ||ಕೃಷ್ಣ||ಕಂಡ ಹೆಂಗಳ ಮೇಲೆ ಬಿದ್ದು ಪುಂಡು ಮಾಳ್ಪನೇ 3ಅಂದು ಎನ್ನ ಉದರದಲ್ಲಿ ಬಂದು ಜನಿಸ್ಯಾನೇ ||ಕೃಷ್ಣ||ಸುಂದರ ಗೋವಿಂದನೆಂಬ ನಾಮಧರಿಸ್ಯಾನೇ 4
--------------
ಗೋವಿಂದದಾಸ
ಕೋಲೆಂದು ಪಾಡಿರೆಕೋಮಲೆಯರೆಲ್ಲಗೋಪಾಲರಾಯನಮಡದಿಯರುಕೋಲಪ.ಶ್ರೀದೇವಿಯರ ಕೂಡ ವಾದ ಸರಸವೆಆದರದಿ ಪಾದಕ್ಕೆರಗಿಕೋಲಮಾಧವನರಸಿಯರ ಮೋದದಿಕರೆಯೆ ವಿನೋದವ ನುಡಿದಾನುರಾಯ 1ಸರಿಯ ರಾಣಿಯರ ಕೂಡ ತರವೇನು ಸರಸವುಕರವಜೋಡಿಸಿ ಕಮಲಾಕ್ಷಿಕೋಲಎರಗಿ ದೇವಿಯರಿಗೆ ಕರಿಯೆ ಬ್ಯಾಗಎಂದುಹರದೆಯರಿಗೆ ನುಡಿದ ಭೀಮನು ಕೋಲ 2ಕೀರ್ತಿವಂತರ ಕೂಡ ಯಾತಕ್ಕೆ ಸರಸವುಮಾತಿನ ಸುಖದ ವಾಣಿಯರಕೋಲಸ್ತೋತ್ರವ ಮಾಡುತ ಪ್ರೀತಿಲೆ ಕರೆಯೆಂದುಪಾರ್ಥ ಮಾತಾಡಿದ ಸತಿಗೆ ಕೋಲ 3ಸಕಲ ಗುಣಾಢ್ಯರ ಸಖಳೆಂದು ಕರೆಸಿಕೊನಕಲಿ ಮಾತಾಡಬ್ಯಾಡಕೋಲಮುಖವ ನೋಡುತ ಅತಿ ಸುಖವ ಪಡಿರೆಂದುನಕುಲಮಾತಾಡಿದ ಸತಿಗೆಕೋಲ4ಇಂತು ರಾಮೇಶನ ಕಾಂತೆಯರ ಕರೆಯೆವೇದಾಂತ ವೇದ್ಯಳೆ ದ್ರೌಪತಿಕೋಲಪಂಥವ ಬಿಟ್ಟು ಸಂತೋಷದಿ ಕರೆಯೆಂದುಕಾಂತೆಗೆ ನುಡಿದ ಸಹದೇವ 5
--------------
ಗಲಗಲಿಅವ್ವನವರು
ಕೌತುಕಲಕುಮಿನಾಥನು ಒಲಿದದ್ದುಭೂತಳದೊಳಗÀಂಜೋದ್ಯಾತರ ಮಾತಿದು ಪ.ವೇದ ತಂದಾತನ ಪಾದವ ನೋಡಿ ನೋಡಿಮೋದಬಟ್ಟನುಬೊಮ್ಮಮಾಧವಅಂಜಿದ್ದು1ಮಂದಾರಗಿರಿಎತ್ತಿ ತಂದ ಅಮೃತವನ್ನುಆನಂದ ಬಟ್ಟನುಬೊಮ್ಮಇಂದೈವರು ಅಂಜಿದ್ದು2ಧರಣಿ ತಂದಾತನ ವರಹಾ ಸುರರರಿಗೆ ಸುಖವಿತ್ತುದೊರೆ ಧರ್ಮನ ಕಂಡುಪರಮಭೀತನಾದ3ನರಸಿಂಹ ದೈತ್ಯನ ವಧಿಸಿಬಿಟ್ಟನೆಂದುಹರುಷವಾದನುಬೊಮ್ಮಅರಸ ಅಂಜಿದ್ದು4ವಾಮನ ರೂಪಕ್ಕೆ ಕಾಮ ಮೋಹಿತರಾಗಿಶಾಮ ವರ್ಣನ ಕಂಡು ಭೀಮ ಭೀತನಾದ 5ಜ್ಞಾನಿಗಳು ಭಾರ್ಗವನ ಧೇನಿಸಿ ನಮಿಸೋರು ಏನೆಂಬೆಪಾರ್ಥನು ತಾ ನೋಡಿ ಅಂಜಿದ್ದು 6ಚಲ್ವರಾಯನಗುಣಎಲ್ಲ ಮೋಹಿಸಬೇಕುನಲ್ಲಿ ದ್ರೌಪತಿದೇವಿಯ ವಲ್ಲಭರಂಜಿದ್ದು 7ಕೃಷ್ಣಾವತಾರಗೆ ಎಷ್ಟು ಮೋಹಿಸುವವರುಧಿಟ್ಟ ನಕುಲರಾಯ ಇಷ್ಟೊಂದು ಅಂಜಿದ್ದು 8ಬೌದ್ಧನ್ನ ಧೇನಿಸಿ ಸಿದ್ಧಿ ಪಡೆದವರೆಷ್ಟುರುದ್ರಾದಿ ವಂದ್ಯಗೆ ಬುದ್ದಿವಂತರು ಬೆದರ 9ಚಲುವ ರಂಗಯ್ಯನು ಕುದುರೆ ಏರಿ ಬರಲುಬುದ್ಧರು ನಮಿಸುವರು ಹೆದರ ಸಹದೇವನು 10ತಂದೆ ರಾಮೇಶನ ಕೊಂಡಾಡೊ ಗುಣವಿಲ್ಲಪುಂಡರಿಕಾಕ್ಷಗೆ ಪಾಂಡವ ರಂಜಿಸಿದ್ದು 11
--------------
ಗಲಗಲಿಅವ್ವನವರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಕ್ಷುಲ್ಲರಿಗೊದಗದು ಫುಲ್ಲನಾಭನ ಪದಅಲ್ಲ್ಲ್ಯವಧಾರಣ ಬುದ್ಧಿಗಳುಬಲ್ಲಿದಸುಖತೀರ್ಥರುಲ್ಲಾಸದಪಥದಲ್ಲಿಹರಿಗೆ ಪರಸಿದ್ಧಿಗಳು ಪ.ಆಡುವುದಮಿತವು ಮಾಡುವುದಹಿತೀಶಾಡುವದಾಶೆಗಳಬ್ಧಿನಾಡವಚನ ಉಪಗೂಡಿಸಿ ಠಾಳಿಪಮೂಢರ್ಗೆ ವಿಷಯದ ಲುಬ್ಧಿರೂಢಿಯೊಳಿವ ತನುಗೂಡಿದ ಬಯಕೆಯ ನೀಡಾಡಿದರೆ ಸುಖ ಲಬ್ಧಿಹಾಡಿ ಹರಿಯ ಕೊಂಡಾಡ್ಯನುದಿನಕೋಲ್ಯಾಡಲು ಒಲಿವ ದಯಾಬ್ಧಿ 1ಹೀನ ಶ್ರದ್ಧದಿಘನಸ್ನಾನ ಸುರಾರ್ಚನೆನಾನಾಡಂಬರಕುದಿಸುವ ಗಳಿಕೆಮೌನವೆ ವಧು ಹಣ ಧ್ಯಾನದಾರೋಹಣಜ್ಞಾನದೊಳಜ್ಞಾನದ ಬಳಕೆಏನೊಂದರಿಯರು ಮಾನುಭವಾರ್ಯರುಮಾನಪಮಾನ್ಗಳ ವೆಗ್ಗಳಿಕೆಶ್ರೀನಾಥಪದಕೊಪ್ಪು ಪ್ರಾಣವನೊಪ್ಪಿಪಜಾಣರ್ಗೆ ಮುಕುತಿಯ ಕಳವಳಿಕೆ 2ತರ್ಕಕೆ ನಿಶಿದಿನಕರ್ಕಶಭಾವದವರ್ಕಡು ಪಾತಕರ್ಬಾಧಕರುಮರ್ಕಟ ಮುಷ್ಟಿಯೊಳು ಮೂರ್ಖ ಪ್ರತಿಷ್ಠೆಯೊಳುನರ್ಕಪದೇ ಪದೇ ಸಾಧಕರುಆರ್ಕೂಡ ಮುಕ್ತರು ಶರ್ಕರ ಸೂಕ್ತರುಅರ್ಕಸುತೇಜ ಮುಖಾಧೀಶರುತರ್ಕೈಪರು ಸಂತರ್ಕಳಖಳಸಂಪರ್ಕಕೆ ಹೆದರುವ ಭೇದಕರು 3ಶಾಸ್ತ್ರ ವಿಚಾರಿಸಿ ಪ್ರಸ್ತಾರದೋರಿ ಸ್ಮರಾಸ್ತ್ರಕೆ ಮಗ್ಗುತ ಸೋಲುವರುಸ್ವಸ್ಥ ಮನಿಲ್ಲದೆ ದುಸ್ತರಬೋಧಸಮಸ್ತರೊಳಗೆ ಬೋಧಿಪರವರುವಿಸ್ತರ ತತ್ವ ಪ್ರಶಸ್ತ ಬೀರುತ್ತ ಪರಸ್ತ್ರೀ ಜನನಿಸಮನೆಂಬುವರುಅಸ್ತಮಯೋದಯದಿ ವ್ಯಸ್ತವಿದೂರ ಹೃದಯಸ್ಥ ಹರಿಯನೆ ಚರಿಸುವರು 4ಒಂದರಿದವರು ನೂರೊಂದನರಿತವರಾರೆಂದತಿಶಯಮದ ವಿಹ್ವಲರುಕುಂದುಕುಚೇಷ್ಟೆ ವಿನಿಂದೆಯ ಧೃಷ್ಟ ಮುನೀಂದ್ರ ದ್ರೋಹದಗುಣಸಂಕುಲರುಮಂದರಧರನವರಂದನುಭವದಿವನೊಂದನರಿಯರತಿ ನಿರ್ಮಳರುತಂದೆ ಪ್ರಸನ್ವೆಂಕಟೇಂದ್ರನಕಿಂಕರರೆಂದೆಂದಿಗಪವಾದಕೊಳಗೊಳರು 5
--------------
ಪ್ರಸನ್ನವೆಂಕಟದಾಸರು
ಖ್ಯಾತಿಯಿಂದಪುರುಹೂತಸಹಿತ ಸುರ |ವ್ರಾತವು ನಿನ್ನನು ಒತ್ತಿ ಓಲೈಸಲು ||ಭೂತಳದೊಳು ಸಂಪ್ರೀತಿಗೆ ಸಿಲುಕಿ ನೀ |ಪಾರ್ಥನ ರಥಕೆ ಸೂತನಾದ ಮೇಲೆ 2ಪರಮಪುರುಷ ಪರಬೊಮ್ಮ ನೀನೆನುತಲಿ |ನಿರುತದಿ ಶ್ರೂತಿಯು ಕೊಂಡಾಡುತಿರೆ ||ವರಪಾಂಡವರರ ಮನೆಯೊಳುಊಳಿಗ|ಕರೆಕರೆದಲ್ಲಿಗೆ ಪೋದಪೋದ ಮೇಲೆ 3ಧುರದಲಿ ಪಣೆಯನೊಡೆದ ಭೀಷ್ಮನ ಸಂ- |ಹರಿಪೆನೆನುತ ಚಕ್ರವ ಪಿಡಿಯೆ ||ಹರಿನಿನ್ನ ಕರುಣದ ಜೋಡು ತೊಟ್ಟಿರಲವ- |ನಿರವ ಕಾಣುತ ಸುಮ್ಮನೆ ತಿರುಗಿದ ಮೇಲೆ 4ತರಳನು ಕರೆಯಲು ಭರದಿ ಕಂಬದಿ ಬಂದು |ನರಮೃಗರೂಪ ಭಕ್ತರ ತೆತ್ತಿಗನೆ ||ವರದ ಪುರಂದರವಿಠಲರಾಯ ನಿನ |ಸ್ಮರಿಪರ ಮನದಲಿ ಸೆರೆಯು ಸಿಕ್ಕಿದ ಮೇಲೆ 5
--------------
ಪುರಂದರದಾಸರು
ಗಂಗಾಧರ ಸುಮತಿ ಪಾಲಿಸೋ | ಪಾಂಡು |ರಂಗನ ಚರಣಾಬ್ಜ ಭಜನೆಮಾಡುನಿತ್ಯ ಪವೈಕಾರಿಕಾದಿತ್ಯರೂಪದನುಜರಿಗೆ |ಶೋಕಕೊಡುವದು ನಿರಂತರದಿ ||ಲೌಕಿಕವೆಲ್ಲ ವೈದಿಕವಾಗಲೆನಗೆ ಮೈನಾಕೀ |ಹೃತ್ಕಮಲಮಾರ್ತಾಂಡಭಕ್ತ ವತ್ಸಲ 1ವಾಸವಾದ್ಯಮರ ವಂದಿತನೆ ಪದ್ಮಜ ಸುತ |ನೀ ಸಲಹುವದೋ ಕೈಲಾಸವಾಸ ||ಕ್ಲೇಶಮೋದವು ಸಮ ತಿಳಿಸೋ ಅಶ್ವತ್ಥಾಮ |ದೋಷರಹಿತನೆ ದಕ್ಷಾಧ್ವ ರನಾಶಕ 2ಪವಮಾನತನಯನಿನ್ನವರಲ್ಲಿ ಕೊಡು ಸ್ನೇಹ |ದಿಙ ವಸನಾದಿಯಲ್ಲಿ ಎನ್ನಿರವ ಬಲ್ಲಿ ||ಅವಲೋಕಿಸದೆ ಎನ್ನನೇಕ ಪಾಪಗಳನ್ನು |ತವಕಉದ್ಧರಿಸೋ ವಿಯತ್ಪತಿ ಜನಕ 3ಸಾಮಜಾಜಿನ ವಸ್ತ್ರ ಭಸ್ಮ ಭೂಷಿತ ದೇವ |ಸೋಮಶೇಖರನೆ ಬಿನ್ನಪವ ಕೇಳು ||ಪ್ರೇಮದಿಂದಲಿ ಭಾಗವತರ ಸಂಗತಿನಿತ್ಯ|ಶ್ರೀ ಮನೋರಮನ ಚರಿತೆ ಪಾಡಿಸುವದಯ್ಯ 4ಶ್ರೀಕಂಠ ನೀ ಪೇಳಿದನ್ಯಶಾಸ್ತ್ರಕೆ ಬುದ್ಧಿ |ಸೋಕದೆಗುರುಮಧ್ವ ಮುನಿಮತವೇ ||ಬೇಕು ಜನುಮ ಜನುಮಕ್ಕೆನಿಸೋ ತ್ರಿಯಂಬಕ |ನಾ ಕೈಯ್ಯ ಮುಗಿವೆ ಪ್ರಾಣೇಶ ವಿಠಲದಾಸ 5
--------------
ಪ್ರಾಣೇಶದಾಸರು