ಒಟ್ಟು 12747 ಕಡೆಗಳಲ್ಲಿ , 128 ದಾಸರು , 5642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯವೇ ಸ್ನಾನ ಜಪ ನೇಮ - ಹೋಮ - ಅ - |ಸತ್ಯದಲಿ ನಡೆದುಮಾಳ್ಪದುವ್ಯರ್ಥಕರ್ಮಪ.ಅಪ್ಪಳಿಸಿ ಪರರ ದ್ರವ್ಯಗಳನ್ನು ತಂದುಂಡು |ಒಪ್ಪದಲಿ ಉಪವಾಸ ವ್ರತವ ಮಾಡಿ ||ತಪ್ಪದಲೆ ತಾ ಸ್ವರ್ಗ ಸೂರೆಗೊಂಬುವನೆಂಬ |ಸರ್ಪಗಳು ಮಾಡದಪರಾಧವೇನಯ್ಯ ? 1ಬಿಡದೆ ಮದ - ಮತ್ಸರಾಹಂಕಾರದೊಳು ಮುಳುಗಿ |ಒಡನೆ ಬೆರಳುಗಳೆಣಿಸಿ ಮೌನದಿಂದ ||ತಡೆಯದಲೆ ಪರಲೋಕ ಸುಖವನೈದುವೆನೆಂಬ |ಬಡ ಬಕವು ಮಾಡಿದಪರಾಧವೇನಯ್ಯ 2ಪರಸತಿಯು ಪರಧನವು ಪರನಿಂದೆ ಪರಹಿಂಸೆ |ಪರಮ ಪಾತಕದ ಕಾರಣವ ತೊರೆದು ||ಧರೆಗಧಿಕಪುರಂದರ ವಿಠಲನ ನೆರೆಭಜಿಸಿ |ವರವನು ಪಡೆಯೆ ಸಾಲೋಕ್ಯವನ್ನೀವ 3
--------------
ಪುರಂದರದಾಸರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು
ಸದರವಿಲ್ಲವೆ ನಿಜಯೋಗ |ಸಚ್ಚಿದಾನಂದ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗುರು ದಿನಂಬರನ ಸಂಯೋಗ ಪ.ಅಡಿಯನಂಬರ ಮಾಡದನಕ | ಅಗ್ನಿ |ಕಿಡಿಯೆದ್ದು ಮೇಲಣ ಕೊಡನುಕ್ಕದನಕ ||ಒಡನೆರಡೊಂದಾಗದನಕ | ಅಲ್ಲಿ |ಒಡಗೂಡಿಅಂಗನೆನುಡಿ ಕೇಳದನಕ1ನಾಡಿ ಹಲವು ಕಟ್ಟದನಕ | ಬ್ರಹ್ಮ |ನಾಡಿಯೊಳು ಪೊಕ್ಕು ಮುಳುಗಾಡದನಕಕಾಡುವ ಕಪಿ ಸಾಯದನಕ | ಸತ್ತಓಡಿನೊಳಗೆ ರಸ ಕಟ್ಟಿಕ್ಕದನಕ 2ಅರಿಕುಂಭ ಕಾಣದನಕ | ಅಲ್ಲಿ |ಸಾಧಿಸಿ ಭೇದಿಸಿ ಸವಿಯುಣ್ಣದನಕ ||ಭೇದವು ಲಯವಾಗದನಕ | ಬಡ |ದಾದಿಕೇಶವ ನಿಮ್ಮ ನೆಲೆಗಾಣದನಕ 3
--------------
ಪುರಂದರದಾಸರು
ಸದಾ ಪೂಜಿಪೆ ನಿನ್ನ ಸೌಭಾಗ್ಯಳೆ ಪಇಂದಿರಾದೇವಿಯೆ ಮಂದರೋದ್ಧರನ ರಾಣಿಇಂದೀವರಾಕ್ಷಿ ಆನಂದದಲಿ 1ಪದ್ಮಾಕ್ಷಿ ಎನ್ನ ಹೃತ್ಪದ್ಮದಿ ಹರಿಪಾದಪದ್ಮವ ತೋರಿ ಉದ್ಧರಿಸುವಳೆ 2ಅಂಬುಜಪಾಣಿಯೆ ಅಂಜುಜಾಕ್ಷನ ರಾಣಿಅಂಬುಧಿಶಯನನ ಪೊಂದಿರ್ಪಳೆ 3ಆದಿಕಾರಿಣಿ ಪತ್ರಾದಿ ರೂಪದಿ ಹರಿಯಆರಾಧಿಸುವಿ ಸರ್ವರಾಧಾರಿಯೆ 4ಹೆದರದೆ ಭೃಗುಮುನಿ ಒದೆಯೆ ಪಾದದಿಂದಕದನವ ಮಾಡಿದ ಕಲ್ಯಾಣಿಯೆ 5ಭಕ್ತಜನರು ನಿನ್ನ ಭಕ್ತಿಯಿಂ ಪೂಜಿಸಲುಮುಕ್ತಿ ಮಾರ್ಗವ ತೋರಿ ಸಲಹುವಳೆ 6ಸರಸಿಜಾಸನ ಮಾತೆ ಸ್ಮರಿಸುವೆ ನಿಮ್ಮಪಾದಸ್ಮರಣೆ ಮರೆಯದಂತೆ ಕರುಣಿಪುದು 7ಪಂಕಜನಾಭನ ಕಿಂಕರರನ್ನು ಕಾಯ್ವಬಿಂಕನಿನ್ನದು ಸರ್ವ ಅಲಂಕಾರಿಣಿ8ಕಮಲನಯನನೆ ಶ್ರೀ ಕಮಲನಾಭ ವಿಠ್ಠಲನಕ್ಷಣ ಬಿಡದಲೆ ತೋರು ನಮಿಸುವೆನು 9
--------------
ನಿಡಗುರುಕಿ ಜೀವೂಬಾಯಿ
ಸದಾಶಿವನೆ ರುದ್ರಾ | ಕಳೆವುದ ಭದ್ರಾ |ಸದಾಗತಿಯ ಪದ | ಮಧುಕರ ನೆನಿಸುತಸುಧಾ ರಸವನೆರೆ || ಭಜಿಸುವವರ ಪೊರೆ ಪಗಜಅಜಿನಾಂಬರ |ಭುಜಗಭೂಷವರವಿಜಯಗಿತ್ತೆ ಶರ |ವೃಜಿನವೃಂದ ಹರಬಿಜಯಿಸಿ ಮನದಿ | ರಜವ ಕಳೆಯೊ ತ್ವರ ಅ.ಪ.ಕೃತ್ತಿವಾಸನೆ | ಭಕ್ತರಾರ್ತಿಹ |ಚಿತ್ತದಲಿನೆಲೆ| ಸುತ್ತ ಪಾಲಿಸೋ ||ಎತ್ತೆ ಈಭವ| ತಪ್ತನಾಗಿಹ |ಗುತ್ತಮೋತ್ತಮ |ವಿತ್ತಕೊಡು ಹರ 1ರೂಪವೈಕೃತ |ರೂಪತೈಜಸ|ರೂಪತಾಮಸ| ಈ ಪರಿಯಕೊಂಡ||ಶ್ರೀಪ ಪದಕ | ಲಾಪದಲ್ಲಿಡು |ವೈಪರೀತ್ಯ ಪ್ರ | ಲಾಪಕಳೆಶಿವ 2ಹೇ ಪವನಜನೆ | ತಾಪಸ ಪ್ರಿಯ |ತಾಪಕಳೆ ಗೌ | ರೀಪನೇಭವಕೂಪಕಳೆವ ದ | ಯಾ ಪಯೋ ನಿಧಿ |ಗೋಪಗುರುಗೋವಿಂದ ವಿಠಲಾಪ್ತ 3
--------------
ಗುರುಗೋವಿಂದವಿಠಲರು
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು
ಸದ್ಗುರುವಿನ ಚಿಂತೆಯಲಿದ್ದವನೇ ಧನ್ಯಧನ್ಯನಾದವನೆ ಪುಣ್ಯಪಸತಿಯು ಕರೆಕರೆಯನು ಮಾಡೆಸುತನಲ್ಲದ ಸ್ಥಳದಲ್ಲಿ ಓಡ್ಯಾಡೆಅತಿ ಶತ್ರುಗಳು ತಾವೆಲ್ಲರೂ ಕೂಡೆಮತಿಯದು ಸೂಚಿಸದಿರಲು ನೋಡೆ1ಮನೆಯಲೆಲ್ಲರು ರೋಗದಿ ಬಿದ್ದಿರೆದಿನದಿನಕೆ ಅಶನಕೆ ದೊರಕದಲಿರೆತನಗೇ ಕೇಡನು ಬೇಡುತಲಿರೆಅನುಕೂಲ ಉದರಕ್ಕಿಲ್ಲದಿರೆ2ಮದುವೆಯ ಧಾವಂತದಲಿರಲುಮದಲಿಂಗನು ಈಗಾಗೆನಲುಅದರೊಳು ಮನದೆರೆಯು ಹೆಚ್ಚಿರಲುಚಿದಾನಂದನ ದಯತಾ ನಿಂತಿರಲು3
--------------
ಚಿದಾನಂದ ಅವಧೂತರು
ಸದ್ದು ಮಾಡಲು ಬೇಡವೊ _ ನಿನ್ನ ಕಾಲಿಗೆ |ಬಿದ್ದು ನಾ ಬೇಡಿಕೊಂಬೆ ಪನಿದ್ದೆಗೆಯ್ಯವರೆಲ್ಲ ಎದ್ದರೆ ನೀನು ಬಂ-|ದಿದ್ದದ್ದು ಕಂಡರೇನೆಂಬುವರೊ ರಂಗ ಅ.ಪಬಳೆ ಘಲ್ಲುಕೆನ್ನದೇನೊ-ಕೈಯ ಪಿಡಿದು |ಎಳೆಯದಿರೊ ಸುಮ್ಮನೆ ||ಮೊಲೆಗಳ ಮೇಲಿನ ಸೆರಗನೆಳೆಯಲು ಕೊ-|ರಳ ಪದಕಂಗಳು ಧ್ವನಿಗೆಯ್ಯವುವೊ ರಂಗ 1ನಿರುಗೆಯ ಪಿಡಿಯದಿರೊ - ಕಾಂಚಿಯದಾಮ|ಕಿರುಗಂಟೆ ಧ್ವನಿಗೆಯ್ಯದೆ? ||ಕಿರುದುಟಿಗಳ ನೀನು ಸವಿದು ಚಪ್ಪರಿಸಲು |ತರವಲ್ಲಗಂಡಮತ್ಸರವ ತಾಳುವನಲ್ಲ2ನಾಡ ಮಾತುಗಳೇತಕೊ - ಸಂಗೀತವ |ಪಾಡುವ ಸಮಯವೇನೊ ||ಗಾಡಿಕಾರಶ್ರೀ ಪುರಂದರವಿಠಲನೆ |ಪಾಡು ಪಂಥಗಳೆ ಒಡಗೂಡುವ ಸಮಯದಿ 3
--------------
ಪುರಂದರದಾಸರು
ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟಡಿಯಹರಿಗುರು ಪ್ರೀತಿಯ ದೊರಕಿಸು ಪ್ರಾಣಿಕಿರಿಯರಲ್ಲ್ಲ್ಯಮನವರು ಪ್ರಾಣಿ ಪ.ಪರದಾರ ಪರಸಿರಿ ಪರನಿಂದೆ ನಿರುತದಿಚಿರರತಿ ಬೆರತ್ಯಲ್ಲೊಪರಉಪಕಾರ ದಾರಿಯರಿಯದೆ ಬರಿ ಒಣಗರುವಿನಲಿರುವ್ಯಲ್ಲೊನರಹರಿ ಚರಣವಾದರಿಸದೆ ಸ್ಮರಿಸದೆನರರನುಸರಿಪ್ಯಲ್ಲೊಶರೀರ ಸಿಂಗರಿಸಿ ಸತ್ಕಾರ್ಯಬಾಹಿರನಾಗಿನಿರಯಕೆ ಗುರಿಯಾದ್ಯಲ್ಲೊ ಪ್ರಾಣಿ 1ಸುಖಗಳ ಕಕುಲತೆಗಖಿಳ ಸಾಧಕನಾದೆಭಕುತಿಗಳಿಕೆ ತೊರೆದುಬಕವೃತ್ತಿಯ ಕಲಿತು ಮುಖವ ಮುಸುಕಿದೆ ವಿರಕ್ತಿಸರಕುದೋರೈಲೋಕದ ಮೋಹಕ ಜ್ಞಾನಾಧಿಕನಾದೆ ಅಕಳಂಕಸುಖತೀರ್ಥವಾಕುದೋರೈಸಕಲಕಲೆ ಕಲಿತು ಸ್ತ್ರೀಕದಂಬ ಸಖನಾದೆಮುಕುತಿ ಹೊಂದಿಕೆ ತೋರೈ ಪ್ರಾಣಿ 2ಅಶನದುವ್ರ್ಯಸನಕೆ ನಿಶಿದಿನ ವಶನಾದೆಶ್ರೀಶ ಭೃತ್ಯೆನಿಸಿಕೊಳ್ಳೊಹುಸಿಉಪದೇಶಧ್ಯಾತ್ಮ ವೇಷದೊಳು ಘಾಸಿಯಾದೆದಶವ ವರಿಸಿಕೊಳ್ಳೈವಿಷಯ ಬಯಸಿ ವೃಥ ಮಸಿವರ್ಣೆನಿಸದೆ ನೀನ್ಯಶಸ ಕೂಡಿಸಿಕೊಳ್ಳೈಹಸಿತೃಷೆಗಸಣೆಗೆ ಬೇಸರದೆ ಪ್ರಸನ್ವೆಂಕಟೇಶನ ಒಲಿಸಿಕೊಳ್ಳೈ ಪ್ರಾಣಿ 3
--------------
ಪ್ರಸನ್ನವೆಂಕಟದಾಸರು
ಸಲಹು ವೆಂಕಟರಮಣ ದಯಾಂಬುಧಿಸಲಹು ವೆಂಕಟರಮಣ ಪ.ಮಸ್ತಕದೊಳೊಪ್ಪುವ ಮಾಣಿಕ ಮಕುಟದಕಸ್ತೂರಿನಾಮದ ಚೆಲುವವಿಸ್ತರ ಕದಪಿಲಿ ಹೊಳೆವಕುಂಡಲಪ್ರಶಸ್ತವದನಜಗಜೀವ1ಎಳೆನಗೆ ತಿಂಗಳ ಕಾಂತಿಲಿಹೃತ್ತಾಪಕಳೆವ ಕರುಣಿ ಸಿರಿಕಾಂತಗಳದೊಳು ವನಮಾಲೆವೈಜಯಂತಿಪದಕಗಳೊಲೆವ ಮಂಗಳಮೂರ್ತಿಮಂತ 2ಮುತ್ತಿನ ಸರ ಸರಪಳಿ ಭುಜಕೀರ್ತಿಯುಎತ್ತಿದ ಶಂಖಾರಿಪಾಣೆರತ್ತುನ ಮೇಲೊಡ್ಯಾಣ ಕಂಕಣ ಮುದ್ರೆಒತ್ತೆ ಅಭಯವರದನೆ 3ಉಟ್ಟು ಪೊಂದಟ್ಟಿ ಕಠಾರಿ ಕಟ್ಟಿರುವದುಷ್ಟರ ರಣಜಿತವೀರಇಟ್ಟ ವಜ್ರದ ಕಾಲಂದಿಗೆ ಪಾವುಗೆಮೆಟ್ಟಿದ ಸುರರಮಂದಾರ4ಅಗರುಚಂದನಕಪ್ಪುರ ಕೇಶರ ಸುರಭಿಗಳಿಗೆ ಅತಿಪ್ರಿಯ ಅಂಗಮಘಮಘಿಸುವ ಮಲ್ಲಿಗೆ ಸಂಪಿಗೆಯಮಾಲೆಗಳ ಪ್ರಸನ್ವೆಂಕಟ ರಂಗ 5
--------------
ಪ್ರಸನ್ನವೆಂಕಟದಾಸರು
ಸಲಹು ಸಲಹು ಗುರುರಾಯನೆ ನನ್ನಾಲಸದೆ ಪಾವನ್ನಕಾಯನೆ ನಾನುಹಲವು ದಿವಸ ನಿನ್ನ ನಂಬಿರೆದ್ವಿಜಕುಲಮಣಿ ಜನಾರ್ದನಾಚಾರ್ಯನೆ ಪ.ನಿನ್ನ ಶರಣು ಹೊಕ್ಕ ಭೃತ್ಯರು ತತ್ವಪೂರ್ಣರಾದರು ಪೂತರಾದರುನನ್ನ ಮನ್ನಿಸಲಾಗದೆ ದಾತನೆ ವಿದ್ಯೋನ್ನತ ವಿಶ್ವಕೆ ಪ್ರೀತನೆ 1ಆ ಬಾಲ್ಯದೊಳು ರಘುಪತಿಪಾದಭಜನಾದರ ನಿನಗುಂಟುಕೋವಿದಈ ಮೇದಿನಿಯಲಿ ಸುಧಾಸುರಸದಬಹು ಸ್ವಾದವ ಬಲ್ಲ ಇಷ್ಟಾರ್ಥದ 2ಅಜ್ಞಾನ ಕತ್ತಲೆ ಕವಿದಿದೆ ಅಭಿಜÕನ ಮಾಡಲಿ ಬಾರದೆ ನಿನ್ನಪ್ರಜÕತನದ ಪ್ರಸವನಿತ್ಯಆಜ್ಞಾಧಾರಕಗೀಯೊ ಜ್ಞಾನವ 3ಭಕ್ತಿ ವೈರಾಗ್ಯ ಸುಜ್ಞಾನ ಸಂಯುಕ್ತ ಮಂಗಳ ಗುಣಾಲಂಕೃತಯುಕ್ತಿ ಸಾಲದು ಹರಿಸೇವೆಗೆ ಸ್ವಪ್ನವ್ಯಕ್ತ ಬೋಧಿಸೆನಗೆ 4ತಂದೆ ತಾಯಿ ಆಪ್ತಮಿತ್ರ ನೀಗತಿಹೊಂದಿಪ ದುರಿತಘಹರ್ತ ನೀ ಗೋವಿಂದ ಪ್ರಸನ್ವೆಂಕಟೇಶನ ಹೃದಯಮಂದಿರದೊಳು ಪೂಜಾಶೀಲನೆ 5
--------------
ಪ್ರಸನ್ನವೆಂಕಟದಾಸರು
ಸಲ್ಲದು ಪುನರ್ಜನ್ಮ ಸಲ್ಲದು ಯೋಗಿಗೆಪರದವಲ್ಲಭತಾನಾಗಿನಿತ್ಯಸುಖಿಸುವಾತಾಂಗೆಪಬೀಜವದು ಹೋಗಿ ಅನ್ಯ ತೇಜದೊಳು ಬಿದ್ದ ಬಳಿಕಬೀಜವೆಂದು ಬಿತ್ತಲದು ಫಲಿತವಾಗುವುದೋಸಾಜಕರ್ಮಿಗಳು ಗುರುಕೃಪೆಯ ಪಡೆಯಲುಮುಕುತಿ ತಾನಲ್ಲದೆ ಪುನರ್ಜನ್ಮವೆಲ್ಲಿಯದೋ1ಕಾಷ್ಠವದು ಹೋಗಿ ಅಗ್ನಿ ಕುಂಡದಲಿ ಸುಟ್ಟ ಬಳಿಕಕಾಷ್ಠವೆಂದು ಕರೆಯಲದು ಕಾಷ್ಠವಹುದೇಶ್ರೇಷ್ಠವಾದ ಬ್ರಹ್ಮದೊಳು ವೇಷ್ಠಿತಾನಾದ ಬಳಿಕನಷ್ಟಮಾತಲ್ಲದೇ ಪುನರ್ಜನ್ಮವೆಲ್ಲಿಹುದು2ಕೀಟವದು ಹೋಗಿ ಭೃಮರದಾಟದೊಳು ಬಿದ್ದು ತನ್ನಕೀಟತನವಳಿದ ಮೇಲೆ ಕೀಟವಾಗುವುದೇಪಾಡಿ ಚಿದಾನಂದನೊಳು ಕೂಟವು ತಾನಾದ ಮೇಲೆಮುಕುತಿ ತಾನಲ್ಲದೆ ಪುನರ್ಜನ್ಮವೆಲ್ಲಿಯದು3
--------------
ಚಿದಾನಂದ ಅವಧೂತರು
ಸಲ್ಲದೋ ಕೃಷ್ಣ ಸಲ್ಲದೋಸಿರಿವಲ್ಲಭಇದನೋಡುಪಾಲಿಸಬೇಕೋಪಬಿತ್ತಿ ಬೆಳೆಸಿ ತಲೆಯೆತ್ತಿದ ಪೈರನುಮತ್ತೆ ತುರುವಿಂಡನು ಬಿಟ್ಟು ಮೆಲ್ಲಿಸುವುದು 1ಸಾವಿರ ಹೊನ್ನಿಕ್ಕಿ ಸದನವ ಸಾಧಿಸಿಪಾವಕನುರಿಗೆ ನೀನೊಪ್ಪಿಸಿ ಕೊಡುವುದು 2ಕುಶಲದಿ ಬಣ್ಣಿಸಿ ಬರೆದು ಚಿತ್ತಾರವಮಸಿ ಮಣ್ಣ ಮಾಡಿ ನೀ ಕೆಡಿಸುವುದು 3ಬಲುಕಾಲ ಮುದ್ದಿಸಿ ಕಲಿಸಿ ಮಾತುಗಳನುಗಿಳಿಯ ಸಾಕಿ ಬಾವುಗಗೆ ಒಪ್ಪಿಸುವುದು 4ಕರುಣಿಸುಸಿರಿಪುರಂದರವಿಠಲ ನಮ್ಮಹಿರಿದು ಮಾಡಿ ಮತ್ತೆ ಕಿರಿದು ಮಾಡುವುದು 5
--------------
ಪುರಂದರದಾಸರು
ಸಂಶಯವಾಯಿತೋ ನಮಗೆಸಂಶಯವಾಯಿತೊಕಂಸಾರಿನಿನಗೆ ಎರಗ ಬರಲುಹಂಸರೂಪ ಕಂಡು ಬೆದರಿ ಪ.ಮದನಜನಕ ನಿನಗೆ ನಾವುಮುದದಿ ಎರಗ ಬರಲುಬ್ಯಾಗಕುದುರೆರೂಪಕಂಡು ನಮಗೆಹೆದರಿಕೆ ಬಾಹೋದು ಕೃಷ್ಣ 1ಪ್ರದ್ಯುಮ್ನ ನಿನಗೆ ಎರಗಿ ನಾವುಸಿದ್ಧಿ ಪಡೆÀದೇವೆಂದು ಬರಲುಅರ್ಧನಾರಿ ರೂಪವ ಕಂಡುಗಡಗಡ ನಡುಗಿದೆವೊ ಕೃಷ್ಣ 2ಚಲ್ವ ರಾಮೇಶಗೆ ಎರಗಿಕಲಿಯಕಿಲ್ಬಿಷPಳೆದೆವೆಂದರೆÉಶಿಲೆಯ ಹೆಣ್ಣು ಮಾಡಿದ್ದು ಕಂಡುಬಲುಬಲು ಅಂಜಿದೆವೊ ಕೃಷ್ಣ 3
--------------
ಗಲಗಲಿಅವ್ವನವರು
ಸಂಸಾರ ದುಷ್ಟೆಂದು ತಿಳಿದ ಮಹಾತ್ಮರಸಂಸಾರ ಮಾಡುವುದು ಹ್ಯಾಗೆಸಂಸಾರದೊಳಗಿದ್ದು ಇಲ್ಲದ ವಿವರವಬರೆದೆನು ದೃಷ್ಟಾಂತವಾಗೆಪನಾರಿ ಪುತ್ರರೊಳಗೆ ತಾವು ಕಲೆತಿದ್ದುನಾಸ್ತಿಯಾಗಿಹರದು ಹ್ಯಾಗೆವಾರಿಯೊಳಗೆ ತಾವರೆಕರ್ಣ ತಾನಿರ್ದುನೀರಿಗೆ ಅಂಟದ ಹಾಗೆ1ಎಲ್ಲ ಪ್ರಪಂಚವ ಮಾಡುತ್ತ ನಿತ್ಯದಿಎರಡು ಆಗಿಹರದು ಹಾಗೆಹಲ್ಲೊಳಗೆ ನಾಲಗೆ ತಾನು ಇರುತಿರ್ದುಹಲ್ಲ ಬುಡಕೆ ಬೀಳದ್ಹಾಗೆ2ಶಿಷ್ಯ ಚಿದಾನಂದನಾಗಿ ಸಂಸಾರವಮುಟ್ಟಿಮುಟ್ಟದಿರು ಹ್ಯಾಗೆಹುಟ್ಟು ನಾನಾಕಾರಗಳನು ತೊಳಸಿಯೆಹುಟ್ಟು ರುಚಿಯ ಅರಿಯದ್ಹಾಗೆ3
--------------
ಚಿದಾನಂದ ಅವಧೂತರು