ಒಟ್ಟು 2161 ಕಡೆಗಳಲ್ಲಿ , 110 ದಾಸರು , 1442 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾ ನೋಡಿ ಬಂದೆ ಕೇಳಮ್ಮ ಗೆಳತಿ ಪ ನಾನಿಲ್ಲ ನೀನಿಲ್ಲ ಏನಂದರೇನಿಲ್ಲ ಕಾಣುವ ಮಾತಲ್ಲ ಜಾಣೆ ಸುಳ್ಳಲ್ಲ ಅ.ಪ ಹಸುರಿಲ್ಲ ಕೆಂಪಿಲ್ಲ ಪಶುವಿಲ್ಲ ಪಕ್ಷಿಲ್ಲ ವಸುಧಿಲ್ಲ ಉದಧಿಲ್ಲ ವ್ಯಸನಿಲ್ಲ ಬಂಧವಿಲ್ಲ ಹಸಿವಿಲ್ಲ ತೃಷೆಯಿಲ್ಲ ದೆಸೆಯಿಲ್ಲ ದಿಕ್ಕಿಲ್ಲ ನಿಶೆಯಿಲ್ಲ ದಿವಯಿಲ್ಲ ಕುಸುಮಾಕ್ಷಿ ಸುಳ್ಳಲ್ಲ 1 ಜಲವಿಲ್ಲ ಗಗನಿಲ್ಲ ನೆಲವಿಲ್ಲ ಗಿರಿಯಿಲ್ಲ ಕುಲವಿಲ್ಲ ಚಲವಿಲ್ಲ ಮಲಿನಿಲ್ಲ ಶೀಲಿಲ್ಲ ಜಳಕಿಲ್ಲ ಊಟಿಲ್ಲ ಬೆಳಕಿಲ್ಲ ಕಾಳಿಲ್ಲ ತಳಿಯಿಲ್ಲ ತಮಯಿಲ್ಲ ಲಲನೆ ಸುಳ್ಳಲ್ಲ 2 ಕೃಪೆಯಿಲ್ಲ ಕಪಟಿಲ್ಲ ಜಪವಿಲ್ಲ ತಪವಿಲ್ಲ ಗುಪಿತಿಲ್ಲ ಬೈಲಿಲ್ಲ ನೆಪ್ಪಿಲ್ಲ ಮರೆವಿಲ್ಲ ವಿಪಿನಿಲ್ಲ ಸದನಿಲ್ಲ ರಿಪುವಿಲ್ಲ ಸ್ನೇಹವಿಲ್ಲ ಅಪ್ಪಯಿಲ್ಲ ಅವ್ವಯಿಲ್ಲ ನಿಪುಣೆ ಸುಳ್ಳಲ್ಲ 3 ರಾಗಿಲ್ಲ ರಚನಿಲ್ಲ ಯಾಗಿಲ್ಲ ಯಜ್ಞಿಲ್ಲ ತ್ಯಾಗಿಲ್ಲ ತ್ಯಜನಿಲ್ಲ ಭೋಗಿಲ್ಲ ಭಾಗ್ಗ್ಯಿಲ್ಲ ರೋಗಿಲ್ಲ ಶ್ರಮವಿಲ್ಲ ಬೈಗಿಲ್ಲ ಬೆಳಗಿಲ್ಲ ಯಾಗಿಲ್ಲ ಪಾಪವಿಲ್ಲ ಭಗಿನಿ ಸುಳ್ಳಲ್ಲ 4 ಹೋಮವಿಲ್ಲ ವಿಪ್ರಿಲ್ಲ ಧೂಮವಿಲ್ಲ ಧೂಳಿಲ್ಲ ಭೂಮಿಲ್ಲ ಜನನಿಲ್ಲ ಕಾಮಿಲ್ಲ ಮರಣಿಲ್ಲ ನೇಮಿಲ್ಲ ಕ್ರಿಯವಿಲ್ಲ ನಾಮಿಲ್ಲ ರೂಪಿಲ್ಲ ಸ್ವಾಮಿ ಶ್ರೀರಾಮ ಬಲ್ಲ ಭಾಮೆ ಸುಳ್ಳಲ್ಲ 5
--------------
ರಾಮದಾಸರು
ನಾ ಪೊಗಳೆಲು ನಿನ್ನಾಗಾನಾ ಪರಿಪೂರ್ಣಾ ಸತ್ಯಜ್ಞಾನಾ ಗುರುಮೂರ್ತಿ ಎನಗೆ ದಾನಾ ನೀಡಿದೆ ನೀ ದಿವ್ಯಜ್ಞಾನಾ ಅವಿಚಾರದಿಂದ ತೊಳಲಿ ಭವಭಾಧೆಯಿಂದ ಬಳಲಿ ಕಿವಿಗೊಡದೆ ನಿನ್ನನುಡಿಗೆ ಭುವನದಲಿ ದುಃಖಿಯಾದೆ ಶಿವ ನೀನೆ ಎಂದು ಪೇಳಿ ಸವನಿಸಿದೆ ಮೋಕ್ಷಪದವಾ ಏನೆಂದು ಪಾಡಲಯ್ಯಾ ನಾನೆಂಬ ಭಾವವಡÀಗಿ ನೀ ನಾನೆ ಎಂಬ ತಿಳಿವು ಘನವಾಗಿನೆಲಿಸಿತೀಗ ಏನೊಂದು ತೋರದಯ್ಯಾ ನಾನಾತ್ವವೆಂಬ ಭಾವ ಈ ಸೋಹವೆಂಬ ಪದವ ಲೇಸಾಗಿ ಬೋಧಿಸಿದ ನೀ ಆಶಾನಿವಾಸೆ ನೀಗಿ ನಾ ಶಾಂತನಾದೆ ಮನದಿ ನೀ ಸಚ್ಚಿದಾತ್ಮಗುರುವೇ ಶಂಕರನೆ ಕಲ್ಪತರುವೆ
--------------
ಶಂಕರಭಟ್ಟ ಅಗ್ನಿಹೋತ್ರಿ
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಡ ದೈವಗಳ ಪೂಜೆಯನು ಮಾಡಿದರೆ | ಕೇಡಲ್ಲದೆ ಮತ್ತೆ ಕೈವಲ್ಯವುಂಟೇ ಪ ಕೊಳಚಿ ನೀರನು ದಾಟಲರಿಯದ ಮನುಜಗೆ ನಿಲವುದ್ದ ದ್ರವ್ಯ ಕೊಡುವೆ ಎನ್ನ ನಾ- | ಜಲನಿಧಿಯ ಉತ್ತರಿಸಿಕೊಂಡು ಎಂದರೆ ಅವನು | ಅಳಿಯದಂತೆ ದಡಕೆ ತರಬಲ್ಲನೇ 1 ಕತ್ತಲೆಗಂಜುವನ ಕರೆತಂದು ಶೃಂಗರಿಸಿ | ಉತ್ತಮದ ವಾಜಿವಾಹನವ ಮಾಡಿ || ಕತ್ತಿಯನು ಕರದಲ್ಲಿ ಕೊಟ್ಟು ರಿಪುಪರಿವಾರ- | ದತ್ತ ಒಂದಡಿಯಿಟ್ಟು ಬರಬಲ್ಲ್ಲನೇ 2 ತನಗೆ ಬಂದಾವಸ್ತು ಪರಿಹರಿಸಿಕೊಳ್ಳದೆ ಪರ- | ಮನ ವಿಡಿದು ಭಜಿಸಿದರೆ ಏನಾಗದೊ || ಬಿನಗು ದೈವರಗಂಡ ಶ್ರೀ ವಿಜಯವಿಠ್ಠಲನ | ವನಜಪದ ನೆನೆದರೆ ಮುಕುತಿಯುಂಟು 5
--------------
ವಿಜಯದಾಸ
ನಾಥದೀನಾನಾಥ ಸದ್ಗತಿ|ದಾತ ನೋಡಿರೋ|ಭವ| ಭೀತರ ಪತಿತರೆ ಪುನೀತಮಾಡುವ ನೀತನೆ|ರಘು| ಪ ಹವಣದಿ ತಾನಾರೆ ಸವಿಧ್ಹಣ್ಣುಗಳನ್ನು| ತವಕದಿ ಜಾನಕಿಧಮಗರ್ಪಿತವೆನೆ| ಅವನಿಲಿ ಶಬರಿಗೆ ಘವಿಘವಿಸುತ್ತಿಹ| ಅವಿರಳ ಪದದನುಭವ ನೀಡಿದ|ರಘು...... 1 ದಾವನ ಶ್ರುತಿಗಳು ಭಾವಸಿ ನುಡಿಯಲು| ದೇವನ ಹಿತಕುಜ ಕೇವಲ ವನಜರ| ಜೀವರೊಳಾಡುತ ಸೇವೆಗೆ ನಲಿಯುತ| ಕೈವಿಡಿದಿತ್ತನು ಕೈವಲ್ಯವ|ರಘು...... 2 ಕುಂದದೆ ಬಾಂಧವ ನಿಂದಿಸಿ ನೂಕಲು| ನೊಂದುವಿಭೀಷಣ ಬಂದರೆ ಶರಣವ| ತಂದೆ ಮಹೀಪತಿ ನಂದನ ಪ್ರಭು ಆ| ನಂದದ ಸ್ಥಿರಪದ ಹೊಂದಿಸಿದಾ|ರಘು..... 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾದನಾದ ಸುನಾದವ ತಿಳಿದವ ನಾದ ಮೂರುತಿ ನಿಜನಾದ ಪ ಆರು ಅರಿಗಳು ಅವರನು ಗೆಲುವೊಡೆ ಆಶ್ರಯ ತಾನಿದೆ ನಾದಧೀರತನದಲಿಹ ನಾಲ್ವರ ಸಾಧಿಸೆ ದಿಟವು ತಾನಿದೆ ನಾದ 1 ಅಷ್ಟಮದಂಗಳನೆಲ್ಲವ ತಿಳಿವೊಡೆ ಆದಿಯಹುದು ಈ ನಾದದುಷ್ಟರು ಐವರ ದೃಢವನು ಕೆಡಿಸಲು ದೃಷ್ಟಿಗೆ ತಾನಿದೆ ನಾದ 2 ಮೂರು ಮೂರು ಮೂರೆನಿಸುವ ತ್ರಿಪುಟಿಯ ಮೂಲನಾಶವಿದೆ ನಾದಚೋರರು ಸಪ್ತಾ ಸಪ್ತರು ಎಂಬರ ಭೇದಿಸೆ ತಾನಿದೆ ನಾದ3 ಎರಡರ ಭೇದವನೆಲ್ಲವನಳಿವೊಡೆ ಎಡೆದೆರಪಿಲ್ಲದ ನಾದಭರಿತವನಂದಾನಂದವ ತುಳುಕುವ ಭಾಗ್ಯವು ತಾನಿದೆ ನಾದ 4 ನಾದದಿ ನಿತ್ಯವು ಬೆರೆತಿಹ ಪುರುಷನೆ ನಾದ ಚತುರ್ಮಖನಾದವಾದರಹಿತ ಚಿದಾನಂದ ಗುರುವಿನ ಪಾದದೊಳಗೆ ಅವನಾದ 5
--------------
ಚಿದಾನಂದ ಅವಧೂತರು
ನಾದವನಾಲಿಸೋ ನಿತ್ಯದಿ ನಾದದೊಳಗಿನ ನಾದ ಸುನಾದಓಂಕಾರ ನಾದವನರಿವನೆ ಧನ್ಯ ಯೋಗೀಶ ಪ ನಾದದಿಂದಲಿ ಅಷ್ಟಪಾಶವಿಕ್ಕಡಿಯಹುದುನಾದದಿಂದಲಿ ಮದಗಳೆಂಟುಡುಗಿ ಹೋಗುವವುನಾದದಿಂದಲಿ ಅರಿಗಳರುವರೂ ತೊಲಗುವರುನಾದದಿಂದಲಿ ಕರ್ಮವು ದೂರಹುದುನಾದದಿಂದಲಿ ಧರ್ಮವು ವೃದ್ಧಿಪುದುನಾದದಿಂದಲಿ ಬ್ರಹ್ಮವು ಯೋಗೀಶ 1 ನಾದದಿಂದಲಿ ಮೌನ ತನಗೆ ತಾನಾಗುವುದುನಾದದಿಂದಲಿ ಚತುಸ್ಸಾಧನವು ದೊರಕುವುದುನಾದದಿಂದಲಿ ಸಪ್ತ ಭೂಮಿಕೆಗಳಾಗಿಹವುನಾದದಿಂದಲಿ ಜ್ಞಾನವು ಸ್ಥಿರವಹುದುನಾದದಿಂದಲಿ ಚಿತ್ರವಚಲವಹುದುನಾದದಿಂದಲಿ ಸರ್ವರು ಯೋಗೀಶ 2 ನಾದದಿಂದಲಿ ಬುದ್ಧಿ ನಿರ್ಮಲವಾಗುವುದುನಾದದಿಂದಲಿ ಮನವು ಹಿಡಿತದಲಿರುತಿಹುದುನಾದದಿಂದಲಿ ದೃಕ್‍ದೃಶ್ಯ ಸಾಧನವಹುದುನಾದವೆ ಬ್ರಹ್ಮವಹುದುಚಿದಾನಂದನಾದವನ ತೋರಲು ಬಹುದು ಅವನಲಿಭೇದವಿಲ್ಲದೆ ಕೂಡಲುಬಹುದು ಯೋಗೀಶ 3
--------------
ಚಿದಾನಂದ ಅವಧೂತರು
ನಾನೀಯದಿದ್ದರೆ ನೀನೇನನೀವೆ ಪ ನಾನು ಎಂಬುದು ಮಾತ್ರ ನಾ ನಿನಗಿತ್ತರೆ ಏನನೀಯುವೆ ರಂಗ ದೀನದಯಾಳು ಅ.ಪ ಅವಲಕ್ಕಿಯನು ತಂದವಗೆ ಭಾಗ್ಯವನಿತ್ತೆ ನವಫಲವನಿತ್ತವಳಿಗೆ ಒಲಿದೆ ನವನೀತವಿತ್ತರ್ಗೆ ಸುವಿಲಾಸಗಳನಿತ್ತೆ ಭುವಿಯೆಲ್ಲವಿತ್ತಂಥವನ ಬಾಗಿಲಕಾಯ್ದೆ 1 ಗಜರಾಜನಂದು ಪಂಕಜವೊಂದನಿತ್ತಂದು ಅಜಗರನನು ಕೊಂದು ಸೌಜನ್ಯವನಿತ್ತೆ ಭುಜದ ಮೇಲೆ ನಿನ್ನನಂಗಜ ಪೊತ್ತು ತಿರುಗಲು ರಜತಪದವಿಯನಿತ್ತು ವಿಜಯ ನೀ ಗೈದೆ 2 ಮಡದಿಮಣಿಯು ತಾನುಟ್ಟ ಪೀತಾಂಬರ ದೆಡ್ಡೆಯ ಹರಿದು ನಿನ್ನ ಅಡಿಗೆ ಕಟ್ಟಲ್ಕೆ ಮಡದಿಗೆ ಅಕ್ಷಯದುಡುಗೆಯ ನೀನಿತ್ತೆ ಮೃಡನು ತಾನೇನು ಕೊಡಲೋ ಗೋವಿಂದಾ 3 ಜಗಜಟ್ಟಿ ಹನುಮನು ಬಗೆದು ನಿನ್ನಯ ದುಗುಡವ ಬಿಡಿಸಿದ ಬಗೆಯ ನೀನÀರಿತೂ ಜಗದೊಳು ಸರಿಯಾದುಡುಗರೆಯಿಲ್ಲದೆ ನಗುತ ನಿನ್ನನು ನೀನೆ ಸೊUಸಿನಿಂದಿತ್ತೆ 4 ನಾನೆಂಬುದಲ್ಲದೆ ಏನುಂಟು ಎನ್ನೊಳು ನೀನೀವೆನಿದ ಮಾತ್ರ ಶ್ರೀನಾಯಕೇಶ ಏನನಾದರೂ ಸರಿ ನೀನೀಯೋ ಮುರವೈರಿ ನಾನು ನನ್ನದು ನಿನ್ನಧೀನ ಮಾಂಗಿರಿರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನು ನಿನ್ನ ಏನು ಅಂದೆನೊ ರಂಗರಾಯಾ ನಾನು ನಿನ್ನ ಏನು ಅಂದೆ ನಾಲ್ಕು ದಿಕ್ಕಿನೊಳಗೆ ನಿಮ್ಮ ಧ್ಯಾನಪಥವು ದೊಡ್ಡದೆಂದು ದೃಢವು ಮಾಡಿ ಹೇಳ್ದೆನಲ್ಲದೆ ಪ ಕುಂಡಲೀಶ ಶಯನನಾದ ಪುಂಡಲೀಕವರದ ಬ್ರ ಹ್ಮಾಂಡವೆಲ್ಲ ನಿಮ್ಮ ಉದರ ಅಂಡದಲ್ಲಿ ಇರುವುದೆಂದೆ ಮಂಡಿಗೊರಳನು ಇದೆವೆಂದನೆ ಮತ್ತೆ ಮತ್ತೆ ಕುಂಡಗೊಳರ [ಪುಂಡಗೊಲ್ಲರ] ಕುಲದೈವವೆಂದೆನೆ ಹಿಂಡುಲೋಕಗಳಿಗೆಲ್ಲ ಹಿರಿಯ ನೀನೆಯಂದೆನಲ್ಲದೆ 1 ಸಕಲಯೋಗಿ ಜನರ ಹೃದಯ ನಿಖರವಾಗಿ ನಿಂತು ಎಲ್ಲ ಭಕುತರನ್ನು ರಕ್ಷಿಸುವ ಲಕುಮಿರಮಣಾನಂದೆ ನಲ್ಲದೆ ಕಕುಲಾತಿಯ ಮಾಡೆನೆಂದೆನೆ ಅಕಳಂಕ ಮಹಿಮನಾದ ಆದಿ ಮೂರುತಿ ಎಂದೆನಲ್ಲದೆ 2 ಬೊಟ್ಟಿನಿಂದ ಧರೆಯನೆತ್ತಿ ಚೇಷ್ಟೆಜನರ ಉರಳಿಸಿದ ಕೃಷ್ಣ ಮೂರುತಿನೀನೆಯೆಂದು ಇಷ್ಟದಿಂದ ಪಾಡುವೆನಲ್ಲದೆ ಸೃಷ್ಟಿನೀಟಗೊಲ್ಲನೆಂದೆನೆ ನಿನ್ನ ಮಗನ ಸುಟ್ಟು ಅವನ ಮಿತ್ರನೆಂದೆನೆ ಸೃಷ್ಟಿಗಧಿಕವಾದ `ಹೊನ್ನವಿಠ್ಠಲ' ರಾಯನಂದೆನಲ್ಲದೆ 3
--------------
ಹೆನ್ನೆರಂಗದಾಸರು
ನಾನೇನಿನಗಂದೆನೋ ಬಿಡದೆ ಪವ ಮಾನ ಪಾಲಿಸೋ ಎನ್ನನು ಪ ದೀನರ ಪಾಲಿಪ ದಾನವಾಂತಕ ಎನ್ನ ಜ್ಞಾನಾನಂದದ ನಾಮ ಧ್ಯಾನವಗೈದೆನೊ ಅ.ಪ ಶರಧಿ ಲಂಘಿಸಿ ರಘು ವರನ ಕುಶಲವಾರ್ತೆಧರೆಜಾತೆಗೆ ಅರುಹಿ ದಶಾಶ್ಯನ ಪುರವ ದಹಿಸಿದಂಥ ಪರಮಸಮರ್ಥನೆಂದರಿತ ಕೊಂಡಾಡಿದೆನಲ್ಲದೆ || ತರು ಚರುವರನೆಂದಿನೆ | ಶಿರದಿ ಕಲ್ಲು ಧರಿಸಿ ತಂದವನೆಂದಿನೆ | ಬ್ರಹ್ಮಾಸ್ತ್ರಕೆ ಭರದಿ ಸಿಲ್ಕಿದಿ ಎಂದೆನೆ ಭಕ್ತೀಲಿ ಭಾವಿ ಸರಸಿಜಾಸ್ರನನೆಂದು ಸ್ಮರಿಸಿದೆನಲ್ಲದೆ 1 ಕೃತಯುಗದಲಿ ಕುಂತಿಸುತನಾಗಿ ಜನಿಸುತ ಪತಿ ಪಿತನಂಘ್ರಿ ಭಜಿಸುತಲಿ ಕ್ಷಿತಿ ಭಾರಕೆ ಖಳ ತತಿಯ ಸಂಹರಿಸಿದಾ ಪ್ರತಿಮಲ್ಲ ನೀನೆಂದು ಸ್ತುತಿಸಿದೆ ನಲ್ಲದೆ ಖತಿವಂತ ನೀನೆಂದಿನೆ ದುನುಜಾತೆಗೆ ಪತಿಯಾದವನೆಂದಿನೆ ಅವಳ ಕೂಡಿ ಸುತನ ಪೆತ್ತವನೆಂದನೆ ಯಾಮಿನಿಯಲಿ ಸತಿಯೆನಿನದವ ನೆಂದೆನೇ ನಿನ್ನನು ಬಿಟ್ಟು ಗತಿನಮಗಿಲ್ಲೆಂದು | ನುತಿಸಿದೆ ನಲ್ಲದೆ 2 ನಡುಮನಿಸುತನಾ ಪೊಡವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸಂದರನ ಧೃಡವಾಗಿ ಸ್ಥಾವಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿಸುತನಾಗಿ ಪೊಡೆವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸುಂದರನ ಧೃಡವಾಗಿ ಸ್ಥಾಪಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿ ಎಂದು ನುಡಿದೆನಲ್ಲದೆ ಹುರಳಿಮೆದ್ದ ಬಡದ್ವಿಜ ಶಿಶುವೇದಿನೆ | ಎತ್ತಿನ ಬಾಲ ಪಿಡಿದೋಡಿ ದವನೆಂದಿನೆ | ಬೆಸರದಿಂದ ಮಡದಿ ಬಿಟ್ಟವ ನೆಂದಿನೆ ಕಡಿಗೆ ಬೋರಿ ಗಿಡವ ಸೇರಿದಿ ತೋರೆಂದು ಅಡಿಗಳಿಗೆರಗಿದೆ ನಲ್ಲದೆ 3
--------------
ಶಾಮಸುಂದರ ವಿಠಲ
ನಾನೇನು ನಿನ್ನಯ ಚರಣವ ಮಾಣೆನು ಪ ಮಾನವ ಕಾಯ್ವರನನ್ಯರ ಕಾಣೆನು ಅ.ಪ. ಕಣ್ಣನು ಬಿಡುತಲಿ ಬಿರಿಬಿರಿ ನೋಡುತಿಣ್ಣನೆ ಬೆಟ್ಟದ ಮೇಲೆ ಬಿಸಾಡುಮಣ್ಣನುಗ್ಗಲು ಹಲ್ಲಲ್ಲಿ ತೋಡುಸಣ್ಣನ ಉಗುರಿಲಿ ಹರಿಕೊಂಡು ನೋಡು 1 ಕಾಲಲಿ ತಲೆಯನು ತುಳಿಯುತೋಡಾಡುಮೇಲಾಗಿ ಕೊಡಲಿಯನೊಗೆದು ಈಡಾಡುಬಾಲದ ಮಂಗನ ಕರಡಿಯ ಛೂಬಿಡುಸೋಲಿಸಲಾವುದೆ ತಂತ್ರವ ಹೂಡು 2 ಮೃದು ನುಡಿಯಲಿ ಅವಮಾನಿಸಿ ನೂಕುಕುದುರೆಯ ತಂದೆನ್ನ ಮೈಮೇಲೆ ಹಾಕುಗದುಗಿನ ವೀರನಾರಾಯಣ ಸಾಕುಪದಗಳ ಸೇವೆಯು ನಿತ್ಯದಿ ಬೇಕು 3
--------------
ವೀರನಾರಾಯಣ
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1 ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2 ದುರಿತ ಮಾಯಾ ಶರೀರಿ ನಾನು 3 ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4 ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5
--------------
ಕನಕದಾಸ
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣ ಅವತಾರ್ದೋಳು ಸ್ವಾಮಿ ನೀ ಗಿರಿಯಾನೆತ್ತಿ ಗೋಗಳ ಕಾಯ್ದದ್ದು ಮರತೇನೋ ಪಾವನಾತ್ಮನೆ ಪ ಶ್ರೀರಾಮ ಅವತಾರ್ದೋಳು ಸ್ವಾಮಿ ನೀ ಶಿಲೆಯಾಮೆಟ್ಟಿ ಪೆಣ್ಣನು ಮಾಡಿದ್ದು ಮರೆತೇನೋ ದೇವ ದೇವಾನೆ 1 ನರಸಿಂಹವಿಠ್ಠಲ ಕೇಳು ಸ್ವಾಮಿ ನಾ ಪಾದದಾಸ ನಿರುತದಿ ಪೊರೆವದು ಮರತೇನೋ ಜೀವರಕ್ಷಕನೆ 2
--------------
ನರಸಿಂಹವಿಠಲರು