ಒಟ್ಟು 718 ಕಡೆಗಳಲ್ಲಿ , 97 ದಾಸರು , 636 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಒರಳುಕಲ್ಲು ಪೂಜೆಯ ಪದ)ಜಯ ಹನುಮಂತ ಭೀಮ | ಜಯ ಸರ್ವಜ್ಞಾಚಾರ್ಯ |ಜಯ ಭಾರತೀಶಾ ನಿರ್ದೋಷಾ || ನಿರ್ದೋಷ ಶ್ರೀ ವ್ಯಾಸಲಯನೆ ನಿನ್ನಂಘ್ರೀಗೆರಗೂವೆ | ಸುವ್ವಿ ಸುವ್ವೀ ಸುವ್ವಾಲಾಲೆ ಪಮುದದಿಂದಾ ಶ್ರೀ ಹರಿಯಾ | ಮದಿವಿ ಹಮ್ಮೀಕೊಂಡು |ಪದುಮಾಕ್ಷಿಯರೆಲ್ಲಾ ಒರಳೀಗೇ || ಒರಳಿಗಕ್ಕಿ ಹಾಕಿಪದ ಪಾಡಿದದನೂ ಬಣ್ಣೀಪೇ1ದೇವಕಿ ಯಶೋದೆ ಶ್ರೀ | ದೇವಭೂತೇ ಕೌಸಲ್ಯ ಸ- |ತ್ಯವತಿ ನೀವೆಂಥ ಧನ್ಯರೇ || ಧನ್ಯಾರೆ ಪಡದು ಶ್ರೀ |ದೇವೇಶಗೆ ಮೊಲಿಯಾ ಕೊಡುವೀರಿ 2ಅಕ್ಷರಳೆ ಪರಮಾತ್ಮನ | ವಕ್ಷ ಸ್ಥಳ ಮಂದಿರೆ |ಲಕ್ಷೂಮಿದೇವಿ ಜಯಶೀಲೆ || ಜಯಶೀಲೆ ಎಮ್ಮನು |ಪೇಕ್ಷಿಸಿದೆ ಕಾಯೇ ವರವೀಯೇ 3ಅಚ್ಛಿನ್ನ ಭಕ್ತರು ನೀವಚ್ಯುತಗೆ ಮುಕ್ತಿಯಾ |ತುಚ್ಛವೆಂಬುವಿರೆ ಸರಸ್ವತೀ || ಸರಸ್ವತಿಭಾರತಿ|ನಿಶ್ಚೈಸಿ ಒರಳೀಗೊದಗೀರೆ 4ಅಕ್ಕಿ ಥಳಿಸಲಿ ಬಾರೆ | ಅಕ್ಕ ಸೌಪರಣಿ ಶ್ರೀ |ರಕ್ಕಸಾ ವೈರೀ ಮದುವೀಗೇ || ಮದುವೀಗೆವಾರುಣಿತಕ್ಕೊಳ್ಳೆ ಕೈಲಿ ಒನಕೀಯಾ 5ಕೂಸಾಗಿ ಇದ್ದಾಗ ಆ ಶಿವನೆ ಬರಲೆಂದು |ಪೋಷಿಸಿದೆ ದೇಹಾ ತಪಸೀದೆ || ತಪಸೀದೆ ಪಾರ್ವತಿನೀ ಶೀಘ್ರ ಬಾರೇ ಒರಳೀಗೆ6ಇಂದ್ರ ಕಾಮನಸತಿಯಾರಿಂದು ಬನ್ನಿರಿ ನಮ್ಮ |ಮಂದರೋದ್ಧರನಾ ಮದಿವೀಗೇ || ಮದುವೀಗೆ ಒರಳಕ್ಕಿ |ಛಂದದಿಂದಲಿ ಪಾಡಿ ಥಳಿಸೀರೇ 7ಶತರೂಪಿ ನೀ ಪ್ರೀಯ ವ್ರತ ಮೊದಲಾದವರನ್ನ |ಪತಿಯಿಂದ ಪಡದೂ ಅವನೀಯಾ || ಅವನೀಯ ಪಾಲಿಸಿದಪತಿವ್ರತೀ ಒನಕೀ ಕೈಕೊಳ್ಳೇ8ದೇವರಂಗನಿಯರಿಗೆ ಸಾವಧಾನದಿ ಜ್ಞಾನ |ನೀ ವರದೇ ಎಂಥಾ ಗುಣವಂತೇ || ಗುಣವಂತೆ ಕರುಣಾಳೆಪ್ರಾವಹೀ ಪಿಡಿಯೇ ಒನಕೀಯಾ 9ಅರುವತ್ತು ಮಕ್ಕಳನಾ ಹರುಷದಿಂದಲಿ ಪಡದು |ವರನೋಡಿ ಕೊಟ್ಟೀ ಪ್ರಸೂತೀ || ಪ್ರಸೂತಿ ನೀನುಹಂದರದ ಮನಿಯೊಳೂ ಇರಬೇಕೂ 10ಗಂಗಾದೇವಿ ಯಂಥ ಇಂಗಿತಜÕಳೆ ನೀನು |ಹಿಂಗಿಸಿದೆ ವಸುಗಳಪವಾದಾ || ಅಪವಾದ ತ್ರಯ ಜಗ-ನ್ಮಂಗಳೇ ಪಿಡಿಯೇ ಒನಕೀಯಾ 11ಅನಿರುದ್ಧಾಶ್ವಿನಿ ಚಂದ್ರ ಇನಕಾಲಾ ಸುರಗುರು |ವನತಿಯರೆ ಉಳಿದಾ ನವಕೋಟೀ || ನವಕೋಟಿ ಸುರರಮಾನಿನಿಯೇರು ಬಂದೂ ಥಳಿಸೀರೇ 12ಅನ್ಯರನ ಪಾಡಿದರೆಬನ್ನಬಡಿಸುವ ಯಮನು |ವನ್ನಜಾಂಬಕನಾಶುಭನಾಮಾ || ಶುಭನಾಮ ಪಾಡಿದರೆಧನ್ಯರಿವರೆಂದೂ ಪೊಗಳೂವಾ13ಈ ವ್ಯಾಳ್ಯದಲಿ ನೋಡಿ ನಾವು ಥಳಿಸೀದಕ್ಕಿ |ಪಾಪನ್ನವಾಗೀ ತ್ವರದಿಂದಾ || ತ್ವರದಿಂದ ನಮ್ಮ ಶ್ರೀಗೋವಿಂದನ ಶಾಸೀಗೊದಗಲೀ 14ಹೆಚ್ಚಿನಂಬರ ಉಟ್ಟು ಅಚ್ಚಿನ ಕುಪ್ಪುಸ ತೊಟ್ಟು |ಪಚ್ಚಾದಿ ರತ್ನಾಭರಣಿಟ್ಟೂ || ಇಟ್ಟು ಸುಸ್ವರಗೈದುಅಚ್ಯುತನ ಪಾಡೋರಿನಿತೆಂದೂ 15ಲಕ್ಕೂಮಿ ಪತಿಯಾಗಿ ಬಹು ಮಕ್ಕಳನ ಪಡದಿದ್ದಿ |ಇಕ್ಕೊಳ್ಳಿ ಈಗಾ ಮದುವ್ಯಾಕೇ || ಯಾಕೊನತರಾನಂದಉಕ್ಕೀಸುವದಕೆ ರಚಿಸೀದ್ಯಾ16ಎಂಂದಾಗೆದೊ ಶ್ರೀ ಮುಕುಂದ ನಿನ್ನಾ ಮದುವಿ |ಹಿಂದಿನಾ ಬ್ರಹ್ಮರರಿತಿಲ್ಲಾ || ರರಿತಿಲ್ಲಅವಿಯೋಗಿಎಂದು ಕರಸುವಳು ಶೃತಿಯೋಳೂ 17ಶೀಲಿ ಸುಂದರಿ ನಿನ್ನ ಆಳಾಗಿ ಇರುವಳು |ಶ್ರೀ ಲಕ್ಷ್ಮೀ ನೀನು ಸ್ವರಮಣಾ || ಸ್ವರಮಣನಾಗೆವಳಮ್ಯಾಲೆ ಮದುಪ್ಯಾಕೊ ಭಗವಂತಾ18ಆರು ಮಹಿಷಿಯರು ಹದಿನಾರು ಸಾವಿರ ಮ್ಯಾಲೆ |ನೂರು ನಾರಿಯರೂ ಬಹುಕಾಲಾ || ಬಹುಕಾಲ ಬಯಸಿದ್ದುಪೂರೈಸಿ ಕೊಟ್ಯೋ ದಯಸಿಂಧು 19ವೇದನೆಂಥಾ ಪುತ್ರ ವೇದನಂತಾ ಬಲ್ಲ |ವೋದುವಾ ನಿರುತಾ ನಿನ ಪೌತ್ರಾ || ಪೌತ್ರೌ ನಿಮ್ಮಣ್ಣ ಸ್ವ-ರ್ಗಾಧಿಪತಿ ಎಂದೂ ಕರಸೂವ 20ಜಗವ ಪಾವನ ಮಾಳ್ಪ ಮಗಳೆಂಥ ಗುಣವಂತಿ |ಅಗಣಿತಜ್ಞಾನವಂತಾರೊ || ಜ್ಞಾನವಂತರೊ ನಿನ್ನಯುಗಳಸೊಸಿಯರೂ ಪರಮಾತ್ಮಾ21ಈ ವಸುಧಿಯೊಳಗೆಲ್ಲಾ ಆವಶುಭಕಾರ್ಯಕ್ಕೂ |ದೇವೇಶ ನಿನ್ನಾ ಸ್ಮರಿಸೋರೋ || ಸ್ಮರಿಸುವರೊ ನಿನ ಮದುವಿ-ಗಾಂವೀಗ ನಿನ್ನೇ ನೆನೆವೇವೊ 22ಅಕ್ಲೇಶಾ ಅಸಮಂಧಾ ಶುಕ್ಲಶೋಣಿತದೂರಾ |ಹಕ್ಲಾಸುರಾರೀ ದುರಿತಾರೀ || ದುರಿತಾರಿ ಅಸಮ ನಿ-ನ್ನೊಕ್ಲಾದವರಗಲೀ ಇರಲಾರೀ 23ವೇದವೆಂಬದು ಬಿಟ್ಟು ಭೂ ದಿವಿಜಾರಮರಾರು |ಮಾಧವನ ಗುಣವಾ ಪೊಗಳೂವಾ || ಪೊಗಳುವಾ ಸುಸ್ವರವಾಶೋಧಿಸೀ ಕೇಳೂತಿರುವಾರೂ 24ಕಾಮಾದಿಗಳ ಬಿಟ್ಟು ಸೋಮಪರ ರಾಣಿಯರು |ಸ್ವಾಮಿಯ ವಿವಾಹಾ ನಾಳೆಂದೂ || ನಾಳೆಂದರಿಷಿಣದಕ್ಕೀಹೇಮಾಧರಿವಾಣಕ್ಕಿರಿಸೋರೂ25ಜಯ ಮತ್ಸ್ಯಾ ಕೂರ್ಮಾಕಿಟಿಜಯ ನರಸಿಂಹಾ ಋಷಿಜ |ಜಯ ರಾಮಕೃಷ್ಣಾ ಶ್ರೀ ಬುದ್ಧಾ || ಶ್ರೀಬುದ್ಧಕಲ್ಕಿ ಜಯಜಯ ದತ್ತಾತ್ರಯಶುಭಕಾಯಾ 26ಆನಂದಾದಿಂದಾ ಸುರ ಮಾನಿನಿಯಾರಾಡೀದ |ಈ ನುಡಿಯಾ ಪಾಡೀದವರೀಗೆ || ಅವರಿಗಿಹಪರದಲ್ಲಿಪ್ರಾಣೇಶ ವಿಠಲಾ ಒಲಿವೋನೂ 27
--------------
ಪ್ರಾಣೇಶದಾಸರು
(ಬಪ್ಪನಾಡಿನ ದೇವಿಯನ್ನು ಕುರಿತು)ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆ ಪ.ದಯಮಾಡೆ ಕೇವಲ ಭಯವಿಹ್ವಲನಲ್ಲಿದಯಸಾಗರೆ ಸೌಭಾಗ್ಯಸಂಪದವನ್ನು ಅ.ಪ.ವೇದಾಂತವೇದ್ಯೆ ನಿಖಿಳಜಗದಾದಿವಿನೋದೆಭೂಧರಾತ್ಮಜೆ ಸರ್ವಾಧಾರಶಕ್ತಿ ಕಲಾಧರೆಮಧುರಬಿಂಬಾಧರೆ ನಿನ್ನಯಪಾದವನು ಮರೆಹೊಕ್ಕೆ ಮನಸಿನ ಭೇದವನುಪರಿಹರಿಸಿ ಸರ್ವಾಪ-ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆಗಂಭೀರೆ ಮೇರು ನಿತಂಬೆಸಿಂಹಮಧ್ಯೆಲಂಬೋದರಪರಿರಂಭಕರಾಂಬುಜೆಕುಂಭಿಕುಂಭಪಯೋಜೆ ಶೋಭಿಪ ಕಂಬುಕಂಠಿಮುಖೇಂದುಪದ್ಮ ದ-ಳಾಂಬಕಿ ಎನಗಿಂಬುದೋರೆರೋಲಂಬಕುಂತಳೆಶುಂಭಮರ್ದಿನಿ2ಸಿಂಧೂರನಯನೆ ನಿಖಿಲಾಮರವಂದಿತಚರಣೆಸುಂದರಾಂಗಿ ಸುಮಗಂಧಿವಿಬುಧಮುನಿವೃಂದಸೇವಿತೆನಿತ್ಯಾನಂದಪ್ರಕಾಶಿನಿಅಂಧಕಾಸುರವೈರಿಹೃದಯಾನಂದಪಾರಾವಾರಪೂರ್ಣಮಿ-ಚಂದ್ರೆ ಸದ್ಗುಣಸಾಂದ್ರೆಸುರಥನರೇಂದ್ರವರದೆ ಮೃಗೇಂದ್ರವಾಹಿನಿ 3ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆನಿಜದಿ ನಿನ್ನಯ ಪಾದಂಬುಜವ ನಂಬಿದೆ ತ್ರಿಜಗವಂದಿತೆಮಹಾಗಜಗೌರಿ ಶಂಕರಿತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ-ವ್ರಜವಿದಾರಿ ಮುನೀಂದ್ರ ಮನನೀರಜದಿವಾಕರೆ ಮಾನಿತೋದ್ಧರೆ 4ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರಸರ್ಪಶಯನ ಲಕ್ಷ್ಮೀನಾರಾಯಣಪ್ರೀತಿಯಪ್ಪಂತೆ ದಯೆ ಗೈಯೆಜಗದಾದಿಮಾಯೆಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ-ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬಪ್ಪನಾಡಿನ ಪಂಚದುರ್ಗೆ)ಮಂಗಲಂ ಶ್ರೀಪಂಚದುರ್ಗೆಗೆ ಜಯಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆ ಪ.ಶಂಖಚಕ್ರಶೂಲಾಂಕುಶಪಾಣಿಗೆಶಂಕರನಂಕಾಲಂಕಾರಿಗೆಕುಂಕುಮಬೊಟ್ಟಕಸ್ತೂರಿ ಲಲಾಟೆಗೆಪಂಕಜಗಂಧಿ ಶ್ರೀಪಾರ್ವತಿಗೆ 1ಕೋಕಿಲಗಾನೆಗೆ ಕೋಕಪಯೋಜೆಗೆಶ್ರೀಕಂಠನರ್ಧಾಂಗಿ ಶ್ರೀಗೌರಿಗೆಏಕದಂತನ ಜನನಿಗೆ ಜಗದಂಬೆಗೆಲೋಕನಾಯಕಿ ಶ್ರೀಮಹಾಕಾಳಿಗೆ 2ಕಂಜದಳಾಕ್ಷಿಗೆ ಕಲಧೌತಗಾತ್ರೆಗೆಕುಂಜರಗಮನೆಕಂಧರಜಾತೆಗೆಮಂಜೀರನೂಪುರರಣಿತಪದಾಬ್ಜೆಗೆನಂಜುಂಡನ ಮನಮಂಜುಳೆಗೆ 3ಅಂಗಜರೂಪೆಗೆ ಮಂಗಲದಾತೆಗೆಭೃಂಗಕುಂತಳೆ ಸರ್ವಮಂಗಲೆಗೆಬಂಗಾರಮಕುಟೋತ್ತಮಾಂಗದಿ ಧರಿಸಿದಸಂಗೀತಲೋಲೆಗೆ ಶರ್ವಾಣಿಗೆ 4ರೂಢಿಗಧಿಕ ಬಪ್ಪನಾಡಿಗೊಡತಿಯಾಗಿಮೂಡಿತೋರಿದ ಶ್ರೀಮುಕಾಂಬಿಕೆಗೆಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆಬೇಡಿದಿಷ್ಟವನೀವ ಸರ್ವೇಶೆಗೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಮೂಲ್ಕಿಯ ಮಹಾಲಿಂಗೇಶನನ್ನು ನೆನೆದು)ಪಿಡಿಯೆನ್ನ ಕೈಯ ಜಗನ್ಮಯಪಿಡಿಯೆನ್ನ ಕೈಯ ಪ .ಪಿಡಿಯೆನ್ನ ಕೈಯ ನಿನ್ನಡಿದಾವರೆಯಲ್ಲಿದೃಢವಾದ ಮನವ ಬೆಂಬಿಡದೆನಗೀಯಯ್ಯ ಅ.ಪ.ಪಾಮರಮತಿಯ ಪಾಪಾತ್ಮರ ಸೀಮಾಧಿಪತಿಯಕಾಮುಕಪರದಾರಭ್ರಾಮಕತಾಮಸ-ಧಾಮನ ಕಪಟವಿಶ್ರಾಮ ಕುಧೀಮನವ್ಯೋಮಕೇಶಭಗತ್ಪದಾಶ್ರಿತನ ಮಮಕಾರದಲಿ ಪಾಲಿಸುಹೈಮವತಿಪತಿ ಕಾಮಹರ ಸುತ್ರಾಮವಂದಿತ ಸೋಮಶೇಖರ 1ದುಷ್ಟದುರ್ಜನನ ದುರಾಚಾರ ಭ್ರಷ್ಟಜೀವನನಮೆಟ್ಟಿದ ನೆಲಮುನಿಯುವನ ಕೃತಘ್ನ ಕ-ನಿಷ್ಟಕಾಯುಷ್ಯದ ಘಟ್ಟಿಚೇತನನೆನ್ನತಟ್ಟನೆ ದಯವಿಟ್ಟು ಸರ್ವಾಭೀಷ್ಟದಾಯಕನಾಗಿ ಕರುಣಾ-ದೃಷ್ಟಿಯಿಂದಲಿನೋಡುಸನ್ಮನವಿಷ್ಟರಸ್ಥ ಶಿವಾಷ್ಟಮೂರುತಿ2ಸತ್ಯಬಾಹಿರನ ಪ್ರಪಂಚ ಪ್ರ-ವೃತ್ತಿಯೊಳಿಹನಅತ್ಯಂತ ಪಾಪಿ ಕುಚಿತ್ತ ಮದಾಂಧನು-ನ್ಮತ್ತ ಮಾತಂಗವಿರಕ್ತಿವಿಹೀನನಎತ್ತಿ ಎನ್ನತ್ತಿತ್ತ ನೋಡದೆ ಮತ್ತೆಕಾವಸಮರ್ಥರಾರೈಸತ್ತ್ವನಿಧಿಸುರಮೊತ್ತ ಪೂಜಿತ ಮೃತ್ಯುಹರ ಶ್ರೀಕೃತ್ತಿವಾಸನೆ 3ಎಣಿಸಲು ಬೇಡ ಎನ್ನಪರಾಧ ಗಣಿತಕ್ಕೆ ಕೂಡಗುಣಗಣನಿಧಿ ಲಕ್ಷ್ಮೀನಾರಾಯಣಸಖದಣಿಯಲೊಲ್ಲೆ ದಯಮಾಡೆನಗೀಗಲೆಫಣಿಪಕುಂಡಲ ಪಾರ್ವತೀಪತಿ ಪ್ರಣತಜನಮಂದಾರ ನಿರ್ಮಲಪ್ರಣವರೂಪನೆ ಮೌಕ್ತಿಕಾಪುರ ಮಣಿಮಹಾಲಿಂಗೇಶ ಬೇಗನೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಆಗಬಲ್ಲದೆ ಹೀಗಾಗಬಲ್ಲದೆಯೋಗಿಜನವಂದ್ಯನವರಿಗ್ಹೀಗೆ ಯಮನ ಮನೆಯ ಬಾಧೆ ಪ.ಕಾಮನಯ್ಯನರಮನೆಯಪ್ರೇಮದ ದಾಸಿಗೆ ಮಹಾಪಾಮರರಾಕ್ಷಸ ಕ್ರೂರಕಾಮುಕರ ಸಂಯೋಗವಾಗಬಲ್ಲದೆ 1ಸಜ್ಜನರರಸನÀ ಮನೆಯವಜ್ರಪಂಜರದ ಗಿಣಿಯುಮಜ್ಜಿಗೆ ಕಾಣದ ಮುದಿಮಾರ್ಜಾಲನ ಬಾಯಿತುತ್ತಿಗಾಗಬಲ್ಲದೆ 2ರಾಜಾಧಿರಾಜನ ಮನೆಯರಾಜಹಂಸವು ಕುಣಪಭೋಜಕನಾದ ವೃಕನಭೋಜಕನ ಅನುಕೂಲವಾಗಬಲ್ಲದೆ 3ಹರಿಯ ಬೇಂಟೆಯ ಮನೆಯಹರಿಣಗಣಗಳಿಗೆಗಿರಿಯ ಹಳುವದ ಹುಲಿಯಗರಜರದ ಘಸಣೆಯಾಗಬಲ್ಲದೆ 4ಪ್ರಸನ್ನವೆಂಕಟನ ಮನೆಯಕಸಕಡ್ಡಿಯೆಲ್ಲವುವಜ್ರವಿಷಮ ಯಮಬಂಟರೆಂಬಮುಸಲಕೆ ಹುಡಿ ಹಿಟ್ಟು ಆಗಬಲ್ಲದೆ 5
--------------
ಪ್ರಸನ್ನವೆಂಕಟದಾಸರು
ಆತನ ಪಾಡುವೆನನವರತ |ಪ್ರೀತಿಯಿಂದಲಿ ತನ್ನ ಭಕುತರ ಸಲಹುವ ಪಆವಾತನ ಕೀರ್ತಿಯನುಪರೀಕ್ಷಿತ ಕೇಳೆ |ಪಾವನನಾದನು ಮೂಜಗವರಿಯೆ ||ಭಾವಶುದ್ಧಿಯಲಿ ಶುಕನಾರನು ಪೊಗಳುವ |ಆವಗಂ ಪ್ರಹ್ಲಾದನಾದವನ ನೆನೆವನಯ್ಯ 1ಶಿಲೆಯ ಬಾಲೆಯ ಮಾಡಿದ ಪಾದವಾರದು |ನಳಿನ ಸಂಭವನನು ಪೆತ್ತವನಾರು ||ಕಲಿಯುಗದ ಮನುಜರಿಗೆ ಆರನಾಮವುಗತಿ |ಇಳೆಯ ಭಾರವನಿಳುಹಿ ಸಲಹಿದರಾರಯ್ಯ 2ದ್ರುಪದನ ಸುತೆಯ ಮಾನರಕ್ಷಕನಾರು |ನೃಪಧರ್ಮನಿಗೆ ಸಂರಕ್ಷಕನಾರು |ಕೃಪೆಯಿಂದ ವಿದುರನ ಮನೆಯಲುಂಡವನಾರು |ಆಪತ್ಕಾಲದಿ ಗಜವ ಸಲಹಿದರಾರಯ್ಯ 3ಅತಿಶಯದಿಂದ ಅರ್ಜುನಗೆ ಸಾರಥಿಯಾಗಿ |ರಥವ ಪಿಡಿದು ನಡೆಸಿದವನಾರೊ ||ಪೃಥಿವಿಯೆಲ್ಲವಬಲಿ ಆರಿಗೊಪ್ಪಿಸಿದನು |ಮತಿವಂತ ಧ್ರುವನ ರಕ್ಷಕನಾರು ಪೇಳಯ್ಯ 4ಸಾಗರನ ಮಗಳಿಗೆ ಆರ ನಾಮವೆಗತಿ |ಯೋಗದಿ ನಾರದನಾರ ಭಜಿಪನಯ್ಯ ||ರಾಗರಹಿತ ಹನುಮಂತನೊಡೆಯನಾರು |ಭಾಗವತರ ಪ್ರಿಯ ಪುರಂದರವಿಠಲ 5
--------------
ಪುರಂದರದಾಸರು
ಇನ್ನೇಕೆ ಯಮನ ಬಾಧೆಗಳು? |ಎನ್ನ ಜಿಹ್ವೆಯೊಳಗೆ ಹರಿನಾಮವಿರಲು ಪಪತೀತ ಪಾವನನೆಂಬ ನಾಮ-ಸಕಲ |ಶ್ರುತಿತತಿಗಳಿಗೆಲ್ಲ ನಿಲುಕದೀ ನಾಮ ||ಕ್ರುತುಕೋಟಿ ಫಲ ಒಂದೇ ನಾಮ-ಸದ್ |ಗತಿಗೆ ಸಂಗಡ ಬಾಹೋದಲೆ ದಿವ್ಯನಾಮ1ಮುನ್ನ ಪ್ರಹ್ಲಾದನೆ ಸಾಕ್ಷಿ - ನಮ್ಮ |ಕನ್ಯಾಶಿರೋಮಣಿ ದ್ರೌಪದಿ ಸಾಕ್ಷಿ ||ಚೆನ್ನ ಅಜಮಿಳನೊಬ್ಬ ಸಾಕ್ಷಿ ಆ |ಉನ್ನಂತ ಲೋಕವಾಳುವ ಧ್ರುವ ಸಾಕ್ಷಿ 2ಹದಿನಾಲ್ಕು ಲೋಕವಾಳುವ - ನಮ್ಮ |ಮದನಜನಕನಾಗಿ ಮಹಿಮೆ ತೋರುವ ||ಪದುಮನಾಭನಾಗಿ ಮೆರೆವ- ನಮ್ಮ |ಪುರಂದರವಿಠಲನ ಹರುಷದಿ ಕರೆವ 3
--------------
ಪುರಂದರದಾಸರು
ಇರಬೇಕು - ಹರಿದಾಸರ ಸಂಗವರಜ್ಞಾನಿಗಳ ದಯ ಸಂಪಾದಿಸಬೇಕು ಪ.ಅತಿಜ್ಞಾನಿಯಾಗಿ ಹರಿಕಥೆಯ ಕೇಳಬೇಕುಯತಿಗಳ ಪಾದಕ್ಕೆ ಎರಗಬೇಕುಸತಿ ಸುತರಿದ್ದು ಮಮತೆಯನು ಬಿಡಬೇಕುಗತಿಯೆಂದು ಬಿಡದೆ ಹರಿಯ ಪೋಪರಸಂಗ 1ನಡೆ ಯಾತ್ರಿಯನಬೇಕು ನುಡಿ ನೇಮವಿರಬೇಕುಬಿಡದೆ ಹರಿಯ ಪೂಜೆಯ ಮಾಡಬೇಕುಅಡಿಗಡಿಗೆ ಬಂದು ಹರಿಗಡ್ಡ ಬೀಳಬೇಕುಬಿಡದೆ ಹರಿಭಜನೆಯ ಮಾಡುವರ ಸಂಗ 2ಹರಿ - ಹರ -ವಿರಂಚಿಯರ ಪರಿಯ ತಿಳಿಯಬೇಕುತರತಮದಿ ರುದ್ರ - ಇಂದ್ರಾದಿಗಳಅರಿಯದಿದ್ದರೆ ಗುರುಹಿರಿಯರ ಕೇಳಬೇಕುಪರಮಾನಂದದಲಿ ಓಲಾಡುವರ ಸಂಗ 3ಷಟ್ಕರ್ಮ ಮಾಡಬೇಕು ವೈಷ್ಣವನೊಲಿಸಬೇಕು ಉ -ತ್ಕಷ್ಟ ವೈರಾಗ್ಯಬೇಕು ದುಷ್ಟಸಂಗ ಬಿಡಬೇಕುವಿಷ್ಣುವಿನ ದಾಸರ ದಾಸನಾಗಲುಬೇಕುಎಷ್ಟು ಕಷ್ಟಬಂದರೂ ಹರಿಯ ಭಜಿಪರ ಸಂಗ 4ಏಕಾಂತ ಕುಳ್ಳಿರಬೇಕು ಲೋಕವಾರ್ತೆ ಬಿಡಬೇಕುಲೋಕೈಕನಾಥನ ಭಜಿಸಬೇಕುಸಾಕು ಸಂಸಾರವೆಂದುಕಕ್ಕುಲತೆ ಬೀಡಬೇಕುಶ್ರೀಕಾಂತಪುರಂದರವಿಠಲರಾಯನ ಸಂಗ5
--------------
ಪುರಂದರದಾಸರು
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂದು ಬಹನಮ್ಮ ಯಾದವರರಸನುಎಂದು ಬಹನಮ್ಮ ಪ.ತಂದು ತೋರೆಲೆ ಗಜಗಾಮಿನಿ ಯದುಕುಲ ತಿಲಕನಕಂದುಗೊರಳಗೊಲ್ಲ ಚಂದದಿಎಂದಿಗೆ ಅವ ನಮ್ಮ ಕಾಡುವಇಂದುವದನೆಪೋಗೆ ಬ್ಯಾಗೆ1ಯಾಕೆ ಗೋಕುಲ ನಮಗ್ಯಾಕೆ ವೃಂದಾವನಸಾಕುವರ್ಯಾರಮ್ಮ ನಮ್ಮನುಶ್ರೀಕಾಂತನಿಲ್ಲದೆ ನಿಮಿಷ ಯುಗವಾಯಿತುಪೋಕನಲ್ಲವೆ ಕ್ರೂರ ಅಕ್ರೂರ 2ಮುಡಿಗೆ ಮಲ್ಲಿಗೆಭಾರಕಣ್ಣಿಗೆ ಅಂಜನಭಾರನಡುಮಧ್ಯಕೆ ನಿರಿಭಾರವೆಅಡಿಗೆಅಂದುಗೆಭಾರನುಡಿವ ಕೀರವಉರಜಡಿವಸಮೀರಸಖಿಯೆ ಸಖಿಯೆ3ಬೆಳದಿಂಗಳೆನಗೆ ಬಿಸಿಲಾಗಿ ತೋರುತಲಿದೆ ಬಗೆ ಬಗೆ ಪುಣ್ಯದ ಮಾಲಿಕೆಯುಅಲ್ಲೆ ಪಿಕಗಾನವು ಕಿವಿಗತಿಕಠಿಣವುಒಲ್ಲೆಅಗರುಚಂದನಲೇಪತಾಪ4ಯಾಕೆ ಕಸ್ತೂರಿ ಗಂಧ ನಮಗ್ಯಾಕೆ ಚಂಪಕಮಾಲೆಲೋಕನಾಯಕ ತಾನಿಲ್ಲದೆಶ್ರೀಕಾಂತನಿಲ್ಲದೆ ನಿಮಿಷ್ಯುಗವಾಯಿತು ಕಂಡಿದ ಪ್ರಸನ್ವೆಂಕಟ 5
--------------
ಪ್ರಸನ್ನವೆಂಕಟದಾಸರು
ಎನಗೂ ಆಣೆ- ನಿನಗೂ ಆಣೆ |ಎನಗೂ ನಿನಗೂ ಇಬ್ಬರಿಗೂ ಭಕ್ತರಾಣೆ ಪನಿನ್ನನು ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ-ರಂಗ |ಎನ್ನನು ನೀ ಕೈ ಬಿಟ್ಟು ಪೋದರೆ ನಿನಗೆ ಆಣೆ 1ತನು-ಮನ-ಧನದಲಿ ವಂಚಕನಾದರೆ ಎನಗೆ ಆಣೆ-ರಂಗ-|ಮನಸು ನಿನ್ನೊಳು ನಿಲಿಸದಿದ್ದರೆ ನಿನಗೆಆಣೆ 2ಕಾಕುಮನುಜರ ಸಂಗವ ಮಾಡಿದರೆನಗೆ ಆಣೆ-ರಂಗ-|ಲೌಕಿಕವನ್ನು ಬಿಡಿಸದಿದ್ದರೆ ನಿನಗೆ ಆಣೆ 3ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ-ರಂಗ-|ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ 4ಹರಿನಿನ್ನಾಶ್ರಯ ಮಾಡದಿದ್ದರೆ ಎನಗೆ ಆಣೆ-ರಂಗ-|ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ 5
--------------
ಪುರಂದರದಾಸರು
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು