ಒಟ್ಟು 680 ಕಡೆಗಳಲ್ಲಿ , 81 ದಾಸರು , 601 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನಭಂಗವಮಾರಿ ಮೇಲುಪಚಾರವ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಏನ ಮಾಡಿದರಿಲ್ಲಿ ಇರಬಾರದಯ್ಯ ಪ.ಕುಂದುಗಳನಾಡಿ ಕುಚೋದ್ಯಗಳನೆ ಮಾಡಿಕಂದ ಬಾಯೆಂದು ಬಣ್ಣಿಸಿ ಕರೆಯಲುಹಿಂದೆ ಮುಮ್ಮೊಳೆಯಿಟ್ಟು ಮುಂದೆ ಬಣ್ಣಿಸಿ ಕರೆದುಮುಂದಲೆಯನು ಕೊಯ್ದು ಮಂಡೆಗೆ ಹೂವ ಮುಡಿಸಿದಂತೆ 1ನಗಗೇಡಿ ಮಾಡಿ ನಾಲುವರೊಳಗೆ ಕೈಯಮುಗಿವೆ ಬಾಯೆಂದು ಬಣ್ಣಿಸಿ ಕರೆಯಲುಮಿಗಿಲಾದ ವಸ್ತ್ರಭೂಷಣವಿತ್ತು ಮನ್ನಿಸಲುತುದಿಮೂಗ ಕೊಯ್ದು ಚಿನ್ನದ ಮೂಗನಿಟ್ಟಂತೆ 2ಆರ್ಥ ಹೋದರು ಪ್ರಾಣ ಹೋದರೂಮಾನವ್ಯರ್ಥವಾಗದ ಹಾಗೆ ಕಾಯಬೇಕುಕರ್ತೃ ಶ್ರೀಹರಿ ನಮ್ಮ ಪುರಂದರವಿಠಲನಭಕ್ತರಿಲ್ಲದ ಸ್ಥಳ ಬಿಡಬೇಕು ಹರಿಯೆ 3
--------------
ಪುರಂದರದಾಸರು
ಮಾಯಾಮಯ ಜಗವೆಲ್ಲ ಇದ-ರಾಯತ ತಿಳಿದವರಿಲ್ಲ ಪ.ಕಾಯದಿಂ ಜೀವನಿಕಾಯವ ಬಂಧಿಸೆನೋಯಿಸುವಳು ಸುಳ್ಳಲ್ಲ ಅ.ಪ.ತಿಳಿದು ತಿಳಿಯದಂತೆ ಮಾಡಿ ಹೊರ-ಒಳಗಿರುವಳು ನಲಿದಾಡಿಹಲವು ಹಂಬಲವ ಮನದೊಳು ಪುಟ್ಟಿಸೆನೆಲೆಗೆಡಿಸುವಳೊಡಗೂಡಿ 1ಯೋಷಿದ್ರೂಪವೆ ಮುಖ್ಯ ಅ-ಲ್ಪಾಸೆಗೆ ಗೈವಳು ಸಖ್ಯದೋಷದಿ ಪುಣ್ಯದವಾಸನೆತೋರ್ಪಳುಜೈಸಲಾರಿಂದಶಕ್ಯ 2ಕರ್ತಲಕ್ಷ್ಮೀನಾರಾಯಣನಭೃತ್ಯರ ಕಂಡರೆ ದೂರಚಿತ್ಪ್ರಕೃತಿಯಿಂದ ಪ್ರೇರಿತಳಾಗಿ ಪ-ರಾರ್ಥಕೆ ಕೊಡಳು ವಿಚಾರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾವಗೆ ನೀ ಮತ್ತೆ ಮಾವನಾದೆಯೊ ರಂಗ |ಮಾವನ ಮಗಳ ನೀ ಮದುವೆಯಾದೆಯೊ ರಂಗ ||ಭಾವಗೆ ನೀ ಮತ್ತೆ ಭಾವನಾದೆಯೊ ರಂಗ |ಭಾವಜವೈರಿಗೆ ಸಖನಾದೆಯೊ ರಂಗ 2ಅತ್ತೆಯ ಅರ್ಥಿಯಿಂದಾಳಿದೆಯೋ ರಂಗ |ಅತ್ತೆಯ ಮಗಳ ನೀ ಮದುವೆಯಾದೆಯೊ ರಂಗ ||ಮತ್ತೊಬ್ಬರಿಗುಂಟೆ ಈಪರಿಮಹಿಮೆಯು |ಕರ್ತೃ ಶ್ರೀ ಪುರಂದರವಿಠಲನಿಗಲ್ಲದೆ3
--------------
ಪುರಂದರದಾಸರು
ಮುಖ್ಯಪ್ರಾಣಾ ಎನ್ನ ಗುರುವೇ ಪರಕ್ಕಸಾಂತಕ ಶ್ರೀ ರಾಮನ ನಿಜದಾಸ ಅ.ಪತಂದೆ ನೀನೆ ಎನಗೆ ತಾಯಿ ನೀನೆ | ಬಂಧು ನೀನೆಎನಗೆ ಬಳಗ ನೀನೇ |ಎಂದೆಂದಿಗೂ ನಮ್ಮೆಲ್ಲರ ರಕ್ಷಪನು ನೀನೇ 1ತಾತನೀನೇ ಎನಗೆಕರ್ತನೀನೇ |ವಿತ್ತನೀನೆಎನಗೆವಿಭವನೀನೆ |ಸತ್ಯ ನೀನೇ ಸದಾಚಾರವು ನೀನೇ 2ಸುಖವು ನೀನೇ ಎನಗೆ ಸುಲಭ ನೀನೇ |ಏಕಾಂತ ಶ್ರೀಪುರಂದರವಿಠಲನ ಭಕುತ ನಿಜವು ನೀನೇ3
--------------
ಪುರಂದರದಾಸರು
ಯೋಗ ಯೋಗಗಳೆಂದು ಕಸಿವಿಸಿ ತಾನೇಕೆಯೋಗವು ತಾನದೆ ಬಂಧಯೋಗವ ಬಿಟ್ಟು ತನ್ನನೆ ಬ್ರಹ್ಮನೆಂದೆನೆಯೋಗವೆ ರಾಜಯೋಗವೆಂದಪವ್ರತನೇಮ ಶೌಚದಿ ಮುಕ್ತಿಯು ಎಂದನೆವ್ರತನೇಮ ಶೌಚವು ಬಂಧಪ್ರತಿಯಿಲ್ಲದಾ ವಸ್ತು ತಾನೆಂದು ಚಿಂತಿಸೆಅತಿರಾಜಯೋಗವೆಂತೆಂದ1ಮೂರ್ತಿಧ್ಯಾನಷ್ಟಾಂಗದಲಿ ಮುಕ್ತಿಯೆಂದನೆಮೂರ್ತಿಧ್ಯಾನಷ್ಟಾಂಗ ಬಂಧಕರ್ತೃನಾ ಸರ್ವ ಕಾರಣವೆಂದು ಚಿಂತಿಸೆಕರ್ತೃರಾಜಯೋಗವೆಂದ2ಲಯ ಲಕ್ಷದಿಂದ ಮುಕ್ತಿ ಎಂದೆನೆಲಯ ಲಕ್ಷ ತಾನದು ಬಂಧಸ್ವಯಂ ಬ್ರಹ್ಮವೆಂದು ತಾನೆ ಚಿಂತಿಸಿನಿಯಮವು ರಾಜಯೋಗವೆಂದ3ಖೇಚರಿ ಭೂಚರಿಯಲಿ ಮುಕ್ತಿ ಎಂದೆನೆಖೇಚರಿ ಭೂಚರಿ ಬಂಧವಾಚಾತೀತ ವಸ್ತು ತಾನೆಂದು ಚಿಂತಿಸೆಗೋಚರ ರಾಜಯೋಗವೆಂದ4ಎರಡಕ್ಕೆ ತಾವಿಲ್ಲ ಇಹನೊಬ್ಬನೇ ತಾನೇಎರಡಾಗಿ ಕಾಂಬುದೊಂದೇ ಬಂಧಗುರುಚಿದಾನಂದನ ಸಾಕ್ಷಾತ್ಕಾರವೆಂದೆನೆಗುರಿಯದು ರಾಜಯೋಗವೆಂದ5
--------------
ಚಿದಾನಂದ ಅವಧೂತರು
ಯೋಗಧರತಾತಕಘ ಲೋಕಪತಿ ದೇವಸಿರಿ|ಯೋಗ ನಿನ ಪದಕೆ ಶರಣೆಂಬುವೆನೊ ಕಾಯೋ ಪಯೋಗಾಂಡದೊಳ ಹೊರಗೆ ವ್ಯಾಪ್ತನೆ ಗುಣರಹಿತನೆ |ಯೋಗಾಂಬರ ಧರ ಘ-ಮುಖ ಜನಕ ||ಯೋಗಗಾತ್ರಷ ದೂರ ವರ್ಗದ್ವಯ ಅವತಾರ |ಯೋಗ ಪಾಣೀ ಸುತ ಪ್ರಿಯ ಸುಮತಿ ಕೊಡು ಜೀಯ 1ಯೋಗರಾಯಗೆ ಅದೇಪದವಿಕರುಣಿಸಿ ಕೊಟ್ಟೆ |ಯೋಗೇಶಣಾಸ್ತ್ರ ಪಿತದಂತಿವರದ||ಯೋಗದಲಿ ಮನಸು ನಿಶ್ಚೈಸೊ ಹಾ ಕರ್ತೃತ್ವ |ಯೋಗಫಲ ಸ್ವೀಕರಿಸುತಿಹ ಕಂಜನಾಭ 2ಯೋಗನಾಗೆಯೋ ದುರ್ಮತಿಗಳಿಗೆಂದಿಗೂ ನೀನು |ಯೋಗಿಜನ ವಂದ್ಯ ಹಾ ನಾರೀಪತಿ ನಿನ್ನ ||ಯೋಗ ಸೇವಕರೊಳಿಡೋ ಪ್ರಾಣೇಶ ವಿಠ್ಠಲನೇ |ಯೋಗ ಹ್ರಾಸ ವಿವರ್ಜ ಘಟಜ ಕರಪೂಜ್ಯ 3
--------------
ಪ್ರಾಣೇಶದಾಸರು
ರÀಕ್ಷಿಸು ರಕ್ಷಿಸು ದೇವವಿಶ್ವಕುಕ್ಷನೆ ಭಕ್ತ ಸಂಜೀವಪಕ್ಷಿಗಮನ ಕಾಯೊದಾತಭೃತ್ಯಪಕ್ಷನೆ ಶ್ರೀ ಪ್ರಾಣನಾಥ ಪ.ಜಾರಿದ ಶ್ರ್ರುತಿಯ ತಂದವನೆ ಉದಾರಿವಿಕ್ರಮತಮಹರನೆವಾರಿಧಿಯೊಳುದಿಸಿದನೆ ಮಂದರಗಿರಿಯನೆತ್ತಿದನೆ1ರಂಭೆಗೆ ತತ್ವ ಹೇಳಿದನೆ ಹೇಮಾಂಬಕನ ಚುಚ್ಚಿದವನೆಕಂಬವ ಸೀಳಿ ನಿಂದವನೆ ಆದಂಭೋಳಿವೈರಿಬಾಲಪನೆ2ಪದ್ಮಜಾಂಡವನೊಡೆದವನೆಬಲಿಸದ್ಮವ ಬಿಡದೆ ಕಾಯ್ದವನೆಛದ್ಮಿ ಪಾರ್ಥಿವರ ಸಂಹರನೆಕರಪದ್ಮದಿ ಪರಶು ಪಿಡಿದವನÉ 3ಅಡವಿ ಪ್ರಾಣಿಗಳನಾಳುವನೆ ಹತ್ತುಹೆಡಕಿನವನ ತಲೆಕಡಿದವನೆಮಡದಿಗೆ ಗಿಡವನಿತ್ತವನೆ ಭೀಮಮಡದಿಯ ಲಜ್ಜೆ ಕಾಯ್ದವನೆ 4ಮಿಥ್ಯದಹೊಲಬುಹೇಳಿದನೆಖಳದೈತ್ಯರ ವಶವ ಮಾಡಿದನೆಮತ್ತಕಲಿವಪುಹರನೆ ನನ್ನಕರ್ತಪ್ರಸನ್ವೆಂಕಟ ನೀನೆ5
--------------
ಪ್ರಸನ್ನವೆಂಕಟದಾಸರು
ರಕ್ಷಿ ರಕ್ಷಿ ರಕ್ಷಿಸಯ್ಯ ಚಿದಾನಂದ ಸ್ವಾಮಿರಕ್ಷ ಶಿಕ್ಷ ಕರ್ತನಾದ ದಯದಿಂದಪದಾಸ ನಿಜವಲ್ಲವೆನೆ ಸಾಕ್ಷಿ ಬೇಕೆ ನಿನ್ನದಾಸರ ದಾಸನಾಗಲಿಕೆಏಸುಕಾಲ ಪರೀಕ್ಷೆ ನಿನ್ನ ನೋಡಲಿಕೆ ಎನ್ನಲೇಸುಹೊಲಬುನಿನ್ನನು ಬಿಡದು ಜೋಕೆ1ನಿನ್ನ ನೋಡೆ ನಾನು ಬೇರೆಯಲ್ಲವಯ್ಯಇದು ಮಾಡಿ ಬಂದ ಸುಕೃತವೇಯೆಲ್ಲನಿನ್ನವನ ನೀನೆ ಕೈವಿಡಿದೆಲ್ಲ ಕೇಳುನಿನ್ನೊಳಗೆನ್ನೊಳಗೆ ಭೇದವೇನೂ ಇಲ್ಲ2ಖೂನವಿಲ್ಲದ ಖೂನದಿಂದ ನಿನ್ನ ಕಂಡೆ ನಾಖೂನವಿದ್ದೂ ವಿಲ್ಲದಂತೆ ಬಲಗೊಂಡೆಧ್ಯಾನ ಮೌನವೆಲ್ಲವ ನಾ ಕಳಕೊಂಡೆಧ್ಯಾನವೆಂತು ನಿನ್ನನೆ ಭಜನೆಗೊಂಡೆ3ನಿನ್ನ ಪಾದವ ನಂಬಿಯೆ ಸಂತೋಷನಾದೆ ನಾನಿನ್ನ ಪಾಡಿ ಪೊಗಳಿ ವಿಶೇಷನಾದೆನಿನ್ನ ಲೀಲೆ ನೆನೆದು ನಾನೀಶನಾದೆನಿನ್ನ ನೋಡಿಯೆ ಕಂಡು ಜಗದೀಶನಾದೆ4ಕೋಟಿ ಶತಶಶಿ ಪ್ರಭೆಯ ತಾಳ್ದ ಅಂದವನ್ನುಪಾಟಿಸಿ ಪೊಗಳಬಲ್ಲೆನೆ ಮುಂದಾನೀಟೆನಿಪದೇವಗುರುಚಿದಾನಂದ ನಿನ್ನನೀಟಿನಂತೆ ನಿಲ್ಲಿಸು ಕರುಣದಿಂದ5
--------------
ಚಿದಾನಂದ ಅವಧೂತರು
ರಕ್ಷಿಸು ಶ್ರೀ ಲಕ್ಷ್ಮೀವೆಂಕಟರಮಣ ರಾಕ್ಷಸ ಸಂಹರಣಪಕ್ಷೀಂದ್ರವಾಹನ ವಾಸುಕಿಶಯನ ವಾರಿಜದಳನಯನ ಪ.ತ್ರ್ಯಕ್ಷಾದಿ ವಿಬುಧಪಕ್ಷಪರಾತ್ಪರಸುಕ್ಷೇಮನಿಧಿ ಕೃಪೇಕ್ಷಣದಿಂ ಸದಾ ಅ.ಪ.ವೇದಬಾಹಿರರಾಗಿ ಖಲರು ಬಹು ಬಾಧಿಸುವರುಸಾಧನೆಯೆಲ್ಲ ಕೆಡಿಸುವರು ರಿಪುಗಳಾರ್ವರುಆದಿಮೂರ್ತಿ ತವಪಾದಾಶ್ರಯ ಸು-ಬೋಧಾಮೃತರಸ ಸ್ವಾದುಗೊಳಿಸುತಲಿ 1ಸರ್ವಾಪರಾಧಂಗಳ ನೀ ಕ್ಷಮಿಸು ಸುಜನರನುದ್ಧರಿಸುಪೂರ್ವಾರ್ಜಿತ ಪಾಪಂಗಳ ಪರಿಹರಿಸು ಸದ್ಭಕ್ತಿಯೊಳಿರಿಸುಸರ್ವತ್ರ ವ್ಯಾಪ್ತ ಸಂತಕೃತ ಸ್ತೋತ್ರದುರ್ವಾರದುರಿತದುರ್ಗನಿಗ್ರಹನೆ2ಸತ್ಯಾತ್ಮ ಪಾವನಪಂಕಜನಾಭನೀಲಾಭ್ರದಾಭಸತ್ವಾದಿಗುಣವರ್ಜಿತ ಮಹಾಶೋಭ ಶರಣಾಗತ ಸುಲಭಚಿತ್ತವಾಸ ಶ್ರೀವತ್ಸಾಂಕಿತ ಪರ-ಮಾರ್ಥಬೋಧ ಮಹತ್ತತ್ತ್ವನಿಯಾಮಕ 3ಪವಮಾನಾಂತರ್ಗತ ಪಾಪ ವಿನಾಶ ಪೊರೆಯೊ ಜಗದೀಶಅವಿಕಾರ ಲೀಲಾನಂತವಿಲಾಸ ಶತಸೂರ್ಯ ಪ್ರಕಾಶಕವಿಜನಾನಂದಭವನ ಭವಭಯಾ-ರ್ಣವ ಬಾಡಬಮಾಧವಮಧುಸೂದನ4ಚಿತ್ರಾಖ್ಯಪುರಮಂದಿರ ಸುಖರೂಪ ಯಾದವ ಕುಲದೀಪಕರ್ತಾಕಾರಯಿತ ಸುಗುಣಕಲಾಪಪರಮಪ್ರತಾಪಸುತ್ರಾಣಲಕ್ಷ್ಮೀನಾರಾಯಣಪರವಸ್ತು ಶಾಶ್ವತ ಪವಿತ್ರ ಚರಿತ್ರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಮ ರಾಮ ರಘುನಾಥನೆ ಸುರಸ್ತೋಮತಿಲಕ ವಿಶ್ವಕರ್ತನೆ ದಿವ್ಯಸ್ವಾಮಿ ಪುಷ್ಕರತೀರವಾಸನೆ ನನ್ನಸ್ವಾಮಿವರಾಹವೆಂಕಟೇಶನೆಪ.ಕಾಯೊ ಕಾಯೊ ಮಧುಮರ್ದನಭವಸಾಯಕದೂರ ಜನಾರ್ದನ ಯದುನಾಯಕಧೃತಗೋವರ್ಧನ ನಾರಾಯಣ ನಿಜಜನವರ್ಧನ 1ಹೊಂದಿದಭಟಕಲ್ಪವೃಕ್ಷನೆ ನನ್ನತಂದೆ ತಾಯಿ ವಿಶ್ವಕುಕ್ಷನೆಕ್ಷೀರಸಿಂಧುಮಂದಿರ ಅಧ್ಯಕ್ಷನೆ ನಿನ್ನಿಂದಾರುಗತಿ ಪದುಮಾಕ್ಷನೆ 2ಅಡಿಗಡಿಗೊದಗದ ತಪ್ಪನೆ ಇಕ್ಕಡಿಮಾಡುದೇವ ತಿಮ್ಮಪ್ಪನೆಮಾಯಾಸಡಕ ತಪ್ಪಿಸು ಸುಪ್ರದೀಪನೆನಿತ್ಯಬಿಡದೆ ಕ್ರೀಡಾದ್ರಿಯೊಳಿಪ್ಪನೆ 3ಲೇಶಭಕ್ತಿಗೆ ಮನ ಹಾರಿತು ವಿಷಯಾಸೆಯಟವಿಯನೆ ಸೇರಿತು ಈಹೇಸಿ ಚಂಚಲಚಿತ್ತ ಹೋರಿತು ತವದಾಸರ ಸಂಗಕೆ ಜಾರಿತು 4ಕುಸುಮಶರನಂತ:ತೇಜನೆ ಮಹಮಿಸುನಿವೆಟ್ಟದ ಕಲ್ಪಭೂಜನೆ ಅಜÕನಿಶಾಕುಲ ಉಡುಗಣರಾಜನೆ ಶ್ರೀಪ್ರಸನ್ವೆಂಕಟ ರಾಜಾಧಿರಾಜನೆ 5
--------------
ಪ್ರಸನ್ನವೆಂಕಟದಾಸರು
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊ ಪ.ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲುಭಂಗವ ಪಡುವುದ್ಯಾಕೆಮಂಗಲದಾತ ನರಸಿಂಗನ ನಾಮವಹಿಂಗದೆ ನೆನೆದರಿಷ್ಟಂಗಳ ಕೊಡುವ 1ಉಪವಾಸ ಮಾಡಲ್ಯಾಕೆ ಕಪಟದೊಳುಗುಪಿತದಿ ಕುಳ್ಳಲ್ಯಾಕೆಉಪಮೆರಹಿತ ಶ್ರೀಪತಿ ಕೃಷ್ಣರಾಯನಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ 2ಧ್ರುವನು ಸದ್ಗತಿ ಪಡೆದ ಕರುಣದಿಂದಪವಮಾನಿಗೆ ಒಲಿದಭುವನಈರಡಿಮಾಡಿ ಬಲಿಯನ್ನು ಸಲಹಿದಬವರದೊಳಗೆ ದಾನವರನ್ನು ಮಡುಹಿದ 3ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತುತೀರ್ಥಸ್ನಾನಗಳ್ಯಾತಕೋಕರ್ತುಮಾಧವಶತಪತ್ರನಾಭನ ಸಂ-ಕೀರ್ತನಾದಿಗಳೆ ಪರತ್ರಸಾಧನವಲ್ಲೊ 4ಭೂರಿಯಾಯಾಸವ್ಯಾಕೋ ಬರಿದೆ ಸಂ-ಸಾರವ ನಂಬಲ್ಯಾಕೋಮಾರಾರಿಸಖ ಲಕ್ಷ್ಮೀನಾರಾಯಣನನ್ನುಸೇರಿ ಭಜಿಪರ ಉದ್ಧಾರಮಾಡುವ ಶ್ರೀ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಮನ ಮಹಿಮೆ ರಾಮನೆ ಬಲ್ಲಪಾಮರಜನಲುಕು ತೆಲಿಯುಟತಲ್ಲ ಪಸುಗುಣ ನಿರ್ಗುಣವೆಂದು ನಿಗಮಗಳ್ಕೂಗುಅಗಣಿತಕಲ್ಯಾಣಗುಣಮುಲುಬಾಗು1ನಿರತಜನನಸ್ಥಿತಿ ಲಯಗಳಕರ್ತಸಿರಯುರಮುನಗಲ ಧರಣಿಜ ಭರ್ತ 2ಒಳಗೆ ಹೊರಗೆ ವ್ಯಾಪೀ ಪರಿಪೂರ್ಣಮೂರ್ತಿಸುರಮುನಿವರುಲಕು ಧೋರಯನು ಕೀರ್ತಿ 3ಮೂರುನು ಬಿಡಿಸಿ ಮೂರನು ಕೆಡಿಸಿಜೇರುನುನಮ್ಮಿ ಸವಾರಿನಿಕಲಸಿ 4ಸಿರಿಗಿರಿ ಶಿಖರದೊಳ್ ಇರುತಿಹದೇವಧರನು ತುಲಸಿರಾಮದಾಸುನಿ ಬ್ರೋವಾ 5
--------------
ತುಳಸೀರಾಮದಾಸರು
ರುದ್ರದೇವರ ಹರಿಹರಸ್ತೋತ್ರ127ಶರಣು ನಿನ್ನಚರಣಕಮಲಗಳಿಗೆ ಶಿವಶಿವಾ |ಕರವಪಿಡಿದು ಸುಮತಿಯಿತ್ತು ಪೊರೆಯೊ ಶಿವಶಿವಾ ಪದಂತಿಚರ್ಮ ಹೊದ್ದ ಭಸ್ಮಭೂಷ ಶಿವಶಿವಾ |ಚಿಂತಿ ರಹಿತ ಲಯಕೆ ಕರ್ತೃನಾದ ಶಿವಶಿವಾ ||ಸಂತರಿಂದ ಸತತ ಸೇವೆಗೊಂಬ ಶಿವಶಿವಾ |ಕಂತುಪಿತನ ಪೂರ್ಣ ಪ್ರೀತಿಪಾತ್ರ ಶಿವಶಿವಾ 1ಮಂದಮತಿಯ ತಪ್ಪಿನೆಣಿಸಬ್ಯಾಡ ಶಿವಶಿವಾ |ಕುಂದುನಿನಗೆ ಎಂದಿಗೆಂದಿಗಿಲ್ಲ ಶಿವಶಿವಾ ||ಮಂದಗಮನೆ ನಿನ್ನ ಮನದೊಳಿಲ್ಲೆ ಶಿವಶಿವಾ |ತಂದುಕೊಂಡ ದಕ್ಷ ವೃಥ ಕುವಾರ್ತಿ ಶಿವಶಿವಾ 2ಹೀನರಂತೆ ನಿನಗೆ ಕೋಪ ಸಲ್ಲ ಶಿವಶಿವಾ |ಮಾಣು ಯಜÕ ಸಹಯನಾಗು ದಯದಿ ಶಿವಶಿವಾ ||ಏನುಪಾಯ ಇದಕೆ ಚಿಂತಿಸುವದು ಶಿವಶಿವಾ |ಪ್ರಾಣೇಶ ವಿಠಲ ನಿನ್ನ ವಶದೊಳಿಹನು ಶಿವಶಿವಾ 3
--------------
ಪ್ರಾಣೇಶದಾಸರು
ರೂಹ ಹೇಳುವೆ ಕೃಷ್ಣನ ಕೃಪೆಯಲ್ಲಿನವೀನ ಜನನ ಮೃತ್ಯು ಭಯವೆಲ್ಲಿ ಪ.ಕುಶತಲ್ಪ ತಂತ್ರಸಾರಾರ್ಚನೆಯೆತ್ತಖಳಪ್ರಸರದ ಗೊಂದಣದಾರಿಯೆತ್ತಹೊಸಮಲ್ಲಿಗೆಯ ಹಾರ ಸುರಭ್ಯೆತ್ತ ಮಲಕಶ್ಮಲರತ ಗ್ರಾಮಸೂಕರೆತ್ತ 1ಚಕ್ರಪಾಣಿ ಒಲುಮೆ ವಿರತರಿಗುಂಟುಕರ್ತವಿಕ್ರಮವಾದಶೀಲಗೆ ಮತ್ತ್ಯೆಲ್ಲುಂಟುತಕ್ರಭಿನ್ನ್ವಾದರೆ ಹಾಲ ಹೋಲಲಿಲ್ಲ ಭಕ್ತಿವಕ್ರನೆಂದೆಂದಿಗೆ ಭಾಗವತನಲ್ಲ 2ಡಂಬರ ಶ್ರದ್ಧೆಗೆಹರಿಮೆಚ್ಚಲಿಲ್ಲ ಸಲೆಡೊಂಬ ರಾಷ್ಟ್ರ ತಿರುಗೆ ಭೂ ಪ್ರದಕ್ಷಿಣೆಯಲ್ಲಅಂಬುಜಾಕ್ಷನನ್ನು ನಂಬದವ ಕ್ಷುಲ್ಲ ಗತಅಂಬಕನ ನೋಟ ಬದಿಯ ಧನದಲಿಲ್ಲ 3ಇಂದಿರೇಶಮಹಿಮೆ ಮತಿಮಂದಗೇನು ದೀಪಹೊಂದಟ್ಟೆ ಭೋಜನಸುಖ ಶ್ವಾನಗೇನುಎಂದೂ ಸಾಧುಸಂಗಸೌಖ್ಯ ಕುಹಕಗಿಲ್ಲ ಕೆಚ್ಚಲೊಂದಿದ ಉಣ್ಣೆಗೆ ಕ್ಷೀರಸ್ವಾದವಿಲ್ಲ 4ಪೂರ್ವಕೃತಪುಣ್ಯ ಒದಗದೆಂದಿಗಿಲ್ಲ ಯತಿಸರ್ವಜÕರಾಯನ ಮತ ಸುಲಭವಲ್ಲಉರ್ವಿಯೊಳು ಸಮೀರಮತಸ್ಥರಕಾವತಂದೆಸರ್ವೇಶ ಪ್ರಸನ್ನವೆಂಕಟಾಧಿದೇವ 5
--------------
ಪ್ರಸನ್ನವೆಂಕಟದಾಸರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು