ಒಟ್ಟು 1695 ಕಡೆಗಳಲ್ಲಿ , 103 ದಾಸರು , 1239 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಪಾಪುರನಿವಾಸ ಪ್ರಮಥರೇಶಾ ಪ ತ್ವಂ ಪಾಹಿ ಪಾಹಿ ತ್ರಿಪುರಾರಿ ತ್ರಿನೇತ್ರ ಅ.ಪ. ಕೈಲಾಸಸದ್ಮ ಚಿತಿಚೇಲ ಭೂಷಣ ಮನೋ ಮೈಲಿಗೆಯ ಪರಿಹರಿಸೊ ನೀಲಕಂಠ ಕಾಲ ಕಾಲಗಳಲ್ಲಿ ಕಾಲನಿಯಾಮಕನ ಲೀಲೆಗಳ ತುತಿಪ ಸುಖ ನಾಲಿಗೆಗೆ ಕೊಡು ಸತತ 1 ಪಾರ್ವತೀರಮಣ ನೀ ಮೋಹಶಾಸ್ತ್ರವ ರಚಿಸಿ ಶಾರ್ವರೀಚರರ ಮೋಹಿಸಿದೆ ಹಿಂದೆ ಶುಕ ವ್ಯಾಧ ಜೈಗೀಷ ರೂಪದಲಿ ಈರ್ವಗೆ ಚರಿಯದಲಿ ಹರಿಯ ಮೆಚ್ಚಿಸಿದೆ 2 ಸುರನದೀಧರ ನಿನ್ನ ಚರಿತೆಗಳ ವರ್ಣಿಸಲು ಸುರಪಮುಖ ಸುಮನಸಾದ್ಯರಿಗಸದಳಾ ಸ್ಮರನಪಿತ ಶ್ರೀ ಜಗನ್ನಾಥ ವಿಠ್ಠಲನ ಸಂ ಸ್ಮರಣೆಯನು ಕೊಟ್ಟು ಉದ್ಧರಿಸು ದಯದಿಂದ 3
--------------
ಜಗನ್ನಾಥದಾಸರು
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಮಪುರುಷ ಶ್ರೀ ರಾಮನ ಪದಯುಗ ಸಿರಿರಮಣ ನಿಜದಾಸನೆಂದೆನಿಸಿದ ವರ ಕದರುಂಡಲಿ ಹನುಮಂತ ಪ. ಒಂದೇ ಮನದಲಿ ತಂದೆ ನಿನ್ನಡಿಗಳ ಪೊಂದಿದೆ ಸಲಹೈ ಹನುಮಂತ ಕುಂದುಗಳೆಣಿಸದೆ ಕಂದನ ತೆರದಲಿ ಎಂದೆಂದಿಗು ಪೊರೆ ಹನುಮಂತ 1 ವಾರಿಧಿ ದಾಟುತ ಸೇರುತ ಅರಿಪುರ ಧಾರುಣಿಜೆಯ ಕಂಡೆ ಹನುಮಂತ ನಾರಿಚೋರನಪುರ ಸೇರಿಸಿ ಅನಲಗೆ ಸೇರಿದೆ ರಾಮನ ಹನುಮಂತ 2 ಕೃಷ್ಣನ ಸೇವಿಸಿ ದುಷ್ಟರ ಕೊಲ್ಲುತ ಮೆಟ್ಟಿದೆ ಖಳರನು ಹನುಮಂತ ದಿಟ್ಟತನದಿ ಸಾಮ್ರಾಜ್ಯವಾಳಿ ಜಗ- ಜಟ್ಟಿ ಎಂದೆನಿಸಿದೆ ಹನುಮಂತ 3 ಮಿತಿಯಿಲ್ಲದ ಅತಿಖತಿ ಮತಗಳನು ಹತಗೈಸುತ ನೀ ಹನುಮಂತ ಪ್ರತಿ ಗ್ರಂಥಗಳನ್ನು ಸ್ಥಾಪಿಸಿ ಸುರರಿಗೆ ಅತಿ ಹಿತ ತೋರಿದೆ ಹನುಮಂತ 4 ಇಷ್ಟ ಫಲಪ್ರದ ತುಷ್ಟಿಬಡಿಸೊ ನೀ ಕೊಟ್ಟೀಗಭಯವ ಹನುಮಂತ ದಿಟ್ಟ ನಿನ್ನಡಿಗಳ ಭಜಿಸುವೆ ಗೋಪಾಲ ಕೃಷ್ಣವಿಠ್ಠಲ ಪ್ರಿಯ ಹನುಮಂತ5
--------------
ಅಂಬಾಬಾಯಿ
ಪರಸಿರಿಗೆ ಕರಗುತಿಹುದು ಸರಿಯೇ ಯೋಚಿಸು ಪ ಹರಿಯು ಕರುಣದಿಂದ ಕೊಟ್ಟ ಸಿರಿಗೆ ತೃಪ್ತನಾಗದÀಂತೆ ಅ.ಪ ಉರಗನ ನೆರಳಲ್ಲಿ ಕಪ್ಪೆಯು ಚಿರಕಾಲ ಜೀವಿಸುವುದೇ ಧರೆತಲದಲಿ ನರರ ಸಿರಿಯು ಸ್ಥಿರವಲ್ಲವೆಂದರಿಯದಂತೆ 1 ಹಲವು ಜನುಮಗಳ ಕರ್ಮದ ಫಲವನರಿತು ಮೋಸವಿಲ್ಲದೆ ನಳಿನನಾಭ ನಾರಾಯಣನೊಲಿದು ಕೊಡುವನೆಂದರಿಯದೆ 2 ಎನ್ನದೆಂದು ನಿನ್ನದೆಂದು ಖಿನ್ನನಾಗುವುದು ಸರಿಯೆ ಸನ್ನುತ ಪ್ರಸನ್ನ ಹರಿಯು ತನ್ನ ಭಾಗ್ಯವನರಿತು ನೀಡಲು 3
--------------
ವಿದ್ಯಾಪ್ರಸನ್ನತೀರ್ಥರು
ಪರಿ ಪಾಲಿಸಿವಳಾ ಪ ಬುದ್ಧಿಯಲಿ ನೆಲಸಿದ್ದು | ವಿದ್ಯೆ ಪಾಲಿಸುತಾ ಅ.ಪ. ಏಸೊ ಜನ್ಮದ ಪುಣ್ಯಾ | ರಾಶಿವದಗಿತೊ ಕಾಣೆಆಶಿಸುತ್ತಿಹಳಿವಳು | ದಾಸದೀಕ್ಷೆಯನುಆಸು ಸ್ವಪ್ನದಲಿ ಕೈ | ಲಾಸ ವಾಸನಿಂದಲಿಲೇಸು ವರ ಪಡೆದಿಹಳು | ಮೇಶ ಮಧ್ವೇಶಾ 1 ಮಧ್ವ ರಮಣನೆ ಕೇಳೊ | ಮಧ್ವಮತ ಪದ್ಧತಿಯುಬುದ್ಧಿಯಲಿ ನಿಲ್ವಪರಿ | ತಿದ್ದಿ ಹೇಳುವುದೋ |ಶ್ರದ್ಧೆಯಲಿ ಹರಿ ಗುರೂ | ಶುದ್ಧ ಸೇವೆಲಿ ಭವದಅಬ್ಧಿಯನೆ ದಾಟಿಸೋ | ಸಿದ್ಧ ಮುನಿವಂದ್ಯಾ 2 ನಿತ್ಯ ಮಂಗಳನೇ 3 ಮಾವಿನೋದಿಯೆ ಹರಿಯೆ | ಕಾವ ಕರುಣೀ ಎಂದುಓದಿ ನಿನ್ನಡಿಗಳಿಗೆ | ಧಾವಿಸುತ್ತಿಹೆನೋ |ನೀವೊಲಿದು ಕನ್ಯೆಯನು | ಕೈ ಪಿಡಿದು ಪಾಲಿಪುದುದೇವ ದೇವೋತ್ತಮನೆ | ಲಕ್ಷ್ಮಿ ನರಹರಿಯೆ 4 ಕಾಕು ಜನಗಳ ಸಂಗನೀ ಕೊಡದೆ ಕಾಯೊ ಹರಿ | ಲೋಕೇಶ ವಂದ್ಯಾ |ಲೋಕ ಗುರು ಗೋವಿಂದ | ವಿಠಲ ಮದ್ಭಿನ್ನಪವನೀ ಕೊಟ್ಟು ಕನ್ಯೆಯನು | ಉದ್ಧರಿಸೊ ಹರಿಯೇ 5
--------------
ಗುರುಗೋವಿಂದವಿಠಲರು
ಪರಿಪರಿಯಲಿ ನೀ ಪಾಲಿಸೋ ನರಹರಿಯೆ ನಾನಾಪರಾಧಿ ಶ್ರೀ ನರಹರಿಯೇ ನಾನಪರಾಧಿ ಪ ಸತಿಸುತರು ಹಿತದವರೆಂದರಿತು ನಾ ಮತಿಯಗೆಟ್ಟು ಕ್ಷಿತಿಪತಿಯೇ ನಿನ್ನನು ಸ್ತುತಿಸದಾ ಅಪರಾಧಿ 1 ಪರ ನಿಂದೆಯಲ್ಲಿ ಗೋ- ವಿಂದ ನಿನ್ನನು ವಂದಿಸದಾ ಅಪರಾಧಿ 2 ತನುಮನಧನ ಕೊಟ್ಟಿರುವ ಶ್ರೀವರ ಹನುಮೇಶ ವಿಠಲನೆ ನಿನ್ನನು ನೆನೆಯದಾ ಅಪರಾಧಿ 3
--------------
ಹನುಮೇಶವಿಠಲ
ಪರಿಪಾಲಯ ಕಂಸಾರೆ ಪ ಕರಕಮಲದ್ವಯ ಕಟಿಯ ಮ್ಯಾಲೆಯಿಟ್ಟ | ಪರಮ ಪುರುಷ ಶೌರೇ ಮುರಾರೇ ಅ.ಪ. ಪಾದ ಜಲಜನಾಭನಾದ ಸುಲಲಿತ ಮಹಿಮ ಹರೇ ಮುರಾರೆ 1 ಪುಂಡಲೀಕ ವರದಾತ ಮುಕುಂದ ಕುಂಡಲಿಶಯನ ಹರೇ | ಕುಂಡಲಧರ ಹರೇ ಮುರಾರೇ 2 ದಿಟ್ಟತನದಿ ಹರಿಭಕ್ತ ಕೊಟ್ಟ ಇಟ್ಟಿಗಿ ಮೇಲೆ ನಿಂದ ದೇವ ದುಷ್ಟಕುಲಾಂತಕನೇ ಶ್ರೀ ಕೃಷ್ಣ 3
--------------
ವಿಜಯದಾಸ
ಪರಿಪಾಲಿಸುವುದು ಎಮ್ಮನು ಪರಮಾತ್ಮನ ರಾಣಿ ಕರುಣಾಕರನ ಪಾದಸ್ಮರಣೆಯನೆ ಕೊಟ್ಟು ಪ ಅಮರೇಶ ವಂದ್ಯಳೆ ಕಮಲಾಲಯೆ ನೀಬಂದು ಶ್ರಮವಿಲ್ಲದೆಯನ್ನೆಯ ಮಮತೆಯನು ಬಿಡಿಸು 1 ವಸುದೇವಸುತನ ರಾಣಿ ಅಸುರ ಸಂಹಾರಳೇ ನಿನ್ನ ವಶವಾದ ಮೇಲೆ ಅಂಭ್ರಣಿಯೆ ನಸುನಗುತ ಈಗ 2 ಮಂದರೋದ್ಧಾರಎನ್ನ ಸಂದುಸಂದಲಿ ಕಾರ್ಯವ ನಿಂದುಮಾಡಿಸುವಂಥದನ್ನು ಚಂದದೀಬೋಧವಕೊಟ್ಟು 3 ಮಂಗಳಾಂಗಿಯೆ ನಿನ್ನ ಮುಂಗಾಣದೆಸೊರಗಿದೆ ಅಂಗಜಪಿತನ ಜಾಯೇ ಭಂಗಪಡಿಸದೆಬೇಗಾ 4 ಪದ್ಮಸಂಭವನಮಾತೆ ಮುದ್ದುಮೋಹನವಿಠಲ ಪದ ಪದ್ಮಗಳನೀನೊಲಿದು ಹೃತ್ಪದ್ಮದಲಿ ಕಾಣಿಸುತ 5
--------------
ಮುದ್ದುಮೋಹನವಿಠಲದಾಸರು
ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪವಮಾನ ಸುತರ ಪದಕಮಲಗಳ ಸ್ತವನವು ಸಾಧನವು ಜವದಲಿ ಶ್ರೀ ಹರಿದಯ ಪಡೆವುದಕೆ ಪ ನವ ನವ ರೂಪದಿ ಅವನಿತಲದೊಳಗೆ ಭುವನಜನಾಭನ ವಿವರವನರುಹಿದ ಅ.ಪ ಶ್ರೀ ರಾಘವನಾಜ್ಞೆಯ ಶಿರದಲಿ ವಹಿಸಿ ವಾರಿಧಿಯನೆ ಲಂಘಿಸಿ ವಾರಿಜಲೋಚನೆ ಸೀತೆಯ ಕಂಡು ತೋರುವ ಭಕುತಿಯನು ಶೂರ ದಾಶರಥಿಯಂಗುಳಿಯವ ಕೊಟ್ಟು ಧೀರತನದಿ ಲಂಕೆಯ ಸೂರೆಯ ಮಾಡಿದ 1 ಪಾಂಡುಸತಿ ಮನುವನು ಜಪಿಸಲು ಜನಿಸಿ ಭೂ ಪಾಂಡು ತನುಜರೊಳು ಮಂಡನರೆನಿಸಿ ಪ್ರಚಂಡ ವಿಕ್ರಮರಾದ 2 ಬಾದರಾಯಣರೊಳು ಶ್ರವಣವ ಮಾಡಿ ಮೋದವ ಪೊಂದುತಲಿ ಸಾಧಿಸಿ ದ್ವೈತವ ಮೇದಿನಿಯಲಿ ಸಾಧುಗಳಿಗೆ ಶ್ರೀಹರಿ ಪಾದಕಮಲದಲಿ ಆದರ ನೀಡಿ ಸದಾ ಪ್ರಸನ್ನ ಪೂರ್ಣಬೋಧರೆಂದೆನಿಸಿದ 3
--------------
ವಿದ್ಯಾಪ್ರಸನ್ನತೀರ್ಥರು
ಪವಮಾನದೇವ ಪರಿಪಾಲಿಸೋ ತವ ಪಾದವಾ ನೆರೆನಂಬಿದೆ ನಾ ಮೂರು ಕೋಟಿರೂಪ ಮೂರು ನೇತ್ರ ನಮಿತ ಮೂರುವತಾರಿ ಭಾರತಿ ಕಾಂತ 1 ಕೃಷ್ಣಾಚಾರ್ಯರ ನಿಷ್ಟೆಗೊಲಿದು ಜ್ಞಾನವ ಕೊಟ್ಟು ಸಲಹಿದ ಶ್ರೇಷ್ಠ ಮೂರುತಿಯೆ 2 ಅಂಧಕೀವನ ಮಂದಿರಾಂಜನೇಯ ನಂದ ಜಾತ ಶಾಮಸುಂದರಾಂಘ್ರಿಪ್ರಿಯ 3
--------------
ಶಾಮಸುಂದರ ವಿಠಲ
ಪವಮಾನವರದ ವಿಠಲ | ಇವನ ನೀಸಲಹೋ ಪ ಭವದೊಳಗೆ ಸಂತಪ್ತ | ತವಪಾದ ಶರಣನ ಅ.ಪ. ರಾಶಿಪುಣ್ಯವು ಫಲಿಸೆ | ದಾಸದೀಕ್ಷೆಗೆ ಒಲಿದುಆಶಿಸಲು ತೈಜಸನು | ಭಾಸುರಾಂಕಿತಕೇಸೂಸಿ ತನ್ನನುಗ್ರಹದ | ಭಾಷೆ ಅಸ್ತ್ವೆಂದೆನುತಲೇಸಾಗಿ ಪೇಳಲುಪ | ದೇಶಿಸಿಹೆ ಹರಿಯೇ 1 ಕರ್ಮ | ಸಂಚಿತಾದಿಗಳು 2 ತತ್ವರೊಲಿಮೆಯ ಕೊಡಿಸು | ತತ್ವಾರ್ಥಸ್ಪುರಿಸಿವಗೆಮೃತ್ಯುವೆನೆ ಗೆಲುವಂಥ | ಪಥವನ್ನೆ ತೋರಿಕರ್ತತಾನಲ್ಲೆಂಬ | ಉತ್ಕøಷ್ಟ ಮತಿಯಿತ್ತುಎತ್ತು ಭವದಿಂ ಹರಿಯೇ | ಉತ್ತಮೋತ್ತಮನೆ 3 ಸರ್ವತ್ರ ಸರ್ವದಾ | ಶರ್ವನೊಡೆಯನೆದೇವಸರ್ವಮಂಗಳ ನಿನ್ನ | ನಾಮಸುಧೆಯನ್ನುದರ್ವಿಜೀವಿಗೆ ಉಣಿಸಿ | ಭವಕಡಲ ಪ್ಲವನೆನಿಸೊಸರ್ವಾಂತರಾತ್ಮಕನೆ | ಉದ್ದರಿಸೊ ಇವನಾ 4 ಜೀವ ಅಸ್ವಾತಂತ್ರ | ದೇವ ನಿಜಸ್ವಾತಂತ್ರಜೀವ ಜಡರುಗಳೆಲ್ಲ | ದೇವರಾಧಿನಾಈ ವಿಧದ ಸುಜ್ಞಾನ | ಆವಾಗಲೂ ಕೊಟ್ಟುದೇವಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಪವಿತ್ರೋತ್ಸವ ಗೀತೆ ಪವಿತ್ರ ಉತ್ಸವವನ್ನು ನೋಡುವ ಬನ್ನಿ ಭಕ್ತರೆಲ್ಲಾ ಪ ವರಶುಕ್ಲಪಕ್ಷದ ಏಕಾದಶಿಯಲಿ ಅನೇಕಾ ಭರಣವ ಬಿಟ್ಟು ರಂಗ ವೈದೀಕನಂತೆ ವೈಜಯಂತಿ ಜನಿವಾರ ಕೌಸ್ತುಭಮಣಿಯು ಕೊರಳೊಳು ಹೊಳೆಯೆ ಓಲ್ಯಾಡುತಲೆ ಅರಳಿದಪುಷ್ಪದ ಮೇಲೆ ಯಾಗಶಾಲೆಗೆ ಬಂದರಂಗನ 1 ವೇದಘೋಷಗಳನ್ನು ವಿಪ್ರರು ಮೋದದಿಂ ಮಾಡುತಿರಲು ವೇದಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರುಅರವತ್ತು ಪೂಜೆಯನು ಮಾಡಿ ಮುದ್ದುರಂಗನಿಗೆ ಮಜ್ಜನವ ಮಾಡಿ ನಿಂದು ಹರುಷದಿ ಯಾಗಪೂರ್ತಿಯ ಮಾಡಿದ ರಂಗನ 2 ತಂದ ತಂಡುಲವರವಿಯೆ ಮಧ್ಯದಿ ಭಾಂಡಗಳ ತಂದಿರಿಸಿ ತಂಬಿ ಪವಿತ್ರವನು ಕಲ್ಪೋಕ್ತದಿಂದ ಪ್ರತಿಷ್ಠೆ ಮಾಡಿ ಒಂದು ಪವಿತ್ರವನು ಪ್ರದಕ್ಷಿಣೆಯಿಂದ ತಂದು ಧರಿಸಿ ಚಂದದಿಂ ವೈಯ್ಯಾರ ನಡೆ ಯಿಂದ ಮಂದಿರಕೆ ನಡೆತಂದ ರಂಗನ 3 ದ್ವಾದಶಿ ದಿವಸದಲಿ ಶ್ರೀರಂಗನ ಪೊಗಳೆ ವೇದಪಾಠಕರು ಅನಾದಿಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರು ಅರವತ್ತು ಮಂಗಳಾರತಿ ಮು ಕ್ತಿದಾಯಕಗೆತ್ತಿ ಪೂಜೆಗೊಂಡು ಪವಿತ್ರವನು ಧರಿಸಿ ವಿ ನೋದ ಸೇವೆಯ ತೋರಿದ ರಂಗನ 4 ಸಂಧ್ಯಾರಾಗದಿ ಇಂದಿರಾಪತಿ ಬಂದು ಮಂಟಪದಲಿ ಚಂದದಿಂದಲೆ ಪೂಜೆ ನೈವೇದ್ಯವ ಆ ನಂದದಿಂದ ಗ್ರಹಿಸಿ ದಿಂಧಿಮಿತೆಂಬ ವಾದ್ಯದಿ ಗೋ ವಿಂದ ತಾನೆ ಪೊರಟು ಚಂದದಿಂದ ಶಾರ್ದೂಲನಡೆ ಯಿಂದ ಮಂದಹಾಸದಿ ಬಂದ ರಂಗನ 5 ಸಪ್ತದಿವಸದಿ ಪವಿತ್ರದಾಭರಣವಿಟ್ಟು ಭಕ್ತವತ್ಸಲ ಕರ್ಪೂರದ ಚೂರ್ಣಾಭಿಷೇಕವ ಅರ್ಥಿಯಿಂದ ಗ್ರಹಿಸಿ ಪತ್ನಿಯರು ಸಹಜವಾಗಿ ಭತ್ತದಕೊಟ್ಟಿಗೆ ಎದುರೆ ಭತ್ತವಳಿಸಿಯೆ ನಿಂತ ಭಕ್ತವತ್ಸಲ ಮಿತ್ರರಎದುರಲಿ ನಿಂದ ರಂಗನ 6 ಒಂಭತ್ತು ದಿನದಲಿ ಅಂಬುಜನಾಭ ಆನಂದ ದಾಭರಣವಿಟ್ಟು ಕುಂದಣದ ಕೋಳಿಕೆಯನೇರಿ [ತುಂಬು ಚೆಲ್ವನಾ] ಚಂದ್ರಪುಷ್ಕರಿಣಿಯಲಿ ಶುಭ್ರತೀರ್ಥವ ಆನಂದದಿಂದಲಿತ್ತು ಬಂದು ಅವಭೃತ ಮಾಡಿಯೆನಿಂದ ಶ್ರೀನಿವಾಸರಂಗನ 7 ಉತ್ಸವದ ಮರುದಿನದಿ ಶ್ರೀರಂಗನು ತನ್ನ ಏಕಾಂತ ಭಕ್ತರಿಗೆ ಇತ್ತು ಪವಿತ್ರದಾಭರಣ ತೀರ್ಥಪ್ರಸಾದವನ್ನು ಮುಕ್ತಿದಾಯಕ ಮುನಿಗಳ ಮುಂದೆ ಚಂದ್ರನಂತೆ ಬ ರುತ್ತಿರಲು ಸುತ್ತ ತಾರಕೆಯಂತೆ ವೈಷ್ಣವರು ಒತ್ತಿ ಬರುವ ಅಂದಚಂದದ 8
--------------
ಯದುಗಿರಿಯಮ್ಮ
ಪಾಂಡು ರಂಗ ವಿಠಲ | ಪೊರೆಯ ಬೇಕಿವಳ ಪ ಕುಂಡಲಿಯ ಶಯ್ಯ ಬ್ರ | ಹ್ಮಾಂಡದೊಡಿಯಾ ಅ.ಪ. ಹಸುಳೆ ತನ ಸ್ವಾಪದಲಿ | ಎಸೆವ ನಂಜುಡೇಶದರ್ಶನಾಕಾಂಕ್ಷಿಸುತ | ನುಸುಳಿ ಗುಡಿ ಪೊಗಲೂಅಸಮ ಗುರು ಸುಧೀಂದ್ರ | ಶಿಷ್ಯರನು ತಾ ತೋರಿಎಸೆವ ಸದ್ಗತಿಗೆ ಗುರು | ದರ್ಶನವೆ ಪಥವೆಂದೇ 1 ಲೀಲೆಯೊಳ್ ತೈಜಸನು | ಮಾಲೆಧರ ದಂಪತಿಯಶೀಲ ರೂಪವ ತಾಳಿ | ಬಾಲಕಿಯ ಬಯ್ದೂ |ಏಳಲನ ಮಾಡದಲೆ | ಶೀಲ ಗುರು ಬಳಿ ಪೋಗಿಬಾಲಕಿಯು ಪರಮಾನ್ನ | ಮೆಲುವಂತೆ ಮಾಡ್ಡಾ 2 ಗುರು ಹಿರಿಯರಾ ಸೇವೆ | ಹರಿಯಲ್ಲಿ ಸದ್ಭಕುತಿವರಜ್ಞಾನ ಪಾಲಿಸುತ | ಮೆರೆಸೊ ಈ ಶಿಶುವವರ ಪ್ರದಯಕನಾಗಿ | ಸರುವ ಸದ್ಧಭಿಲಾಷೆಗರೆನು ಹರ್ಷವನೀಯೋ | ಮರುತಾಂತರಾತ್ಮಾ 3 ಕಲಿಹೆಚ್ಚದಾ ಯುಗವು | ಸತಿಮಂತ್ರ ತಂತ್ರಗಳುಫಲಿಸಲಾರವು ಹರಿಯೆ | ಜಲಜನಾಭಾಚೆಲುವ ತವನಾಮ ಸ್ಮøತಿ | ಘಳಿಗೆ ಬಿಡದಲೆ ಕೊಟ್ಟುಒಲಿಯೊ ಕಾರುಣ್ಯನಿಧಿ | ಬಾಲ ಗೋಪಾಲ4 ಪಾವನದ ಅಂಕಿತವ | ಓದಿ ಸೂಚಿಸಿದಂತೆತಾವಕಳಿಗಿತ್ತಿಹೆನು | ಶ್ರೀ ವರನೆ ಹರಿಯೇ |ದೇವ ದೇವೇಶಗುರು | ಗೋವಿಂದ ವಿಠ್ಠಲನೆನೀ ವೊಲಿದು ದಾಸತ್ವ | ಭಾವ ಸಿದ್ಧಿಪುದೋ 5
--------------
ಗುರುಗೋವಿಂದವಿಠಲರು
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ