ಒಟ್ಟು 1223 ಕಡೆಗಳಲ್ಲಿ , 98 ದಾಸರು , 961 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾವಜನಯ್ಯ ನಿನಗೊಲಿದ ನಾರಿಯರುಗಳ ಲಾಲಿಸೋ ಪ ಇಂದೀವರಾಯತಾಕ್ಷಿಯೊಳು ತಾ ಮುನಿದಿರಲು ಕಂದರ್ಪಣೆರಾಯ ಕೇಳಿ ತನ್ನ ಚಂದಿರನು ದಳಪತಿಗೆ ನೇಮವನು ಕೊಟ್ಟು ನಲ- ವಿಂದ ಗಿಳಿತೇರನೇರಿ ಬರಲೂ ಮುಂದೆ ಉಗ್ಘಡದ ಕೋಗಿಲೆ ಪಾಡಿ ರಭಸ- ದಿಂದ ವಾದ್ಯಗಳು ಮೊಳಗೇ ಸಂದಣಿಸಿ ಝೇಂಕಾರಗೈದ ಭ್ರಮರಾಳಿಗಳ ವೃಂದದವರನೆಂತು ಬಣ್ಣಿಸುವರೆನ್ನಳವಲ್ಲ 1 ಅಗ್ಗದ ವಸಂತ ಮಾರುತರು ಒಗ್ಗಿ ನಲಿದಾಡುತ್ತ ಬರಲು ವೆಗ್ಗಳ ಸುಗಂಧ ಪರಿಮಳದ ಪೂವಲರುಗಳ ಒಗ್ಗಿನಲಿ ಕೂಡೆ ಬರಲೂ ತನ್ನ ಕಗ್ಗೊಲೆಗೆ ದಾಳಿಯಿಟ್ಟುದು ಕಾಮ ಪುಸಿಯಲ್ಲ ದಗ್ಗಡೆಯ ಮಾಡುವುದುಚಿತವೆ ನಿನ್ನ ಸಖಿಯಳನೂ 2 ಈ ತೆರದೊಳಿಹ ಪ ಕೊಳುವಳ್ ಕಳ ರಳ್ತೆ ಸಂಜೆ ಭಟರೊಗ್ಗಿನಲಿ ಭಾರಿಯಾಗಿ ಲಲೂ ಮತ್ತೆ ಕೆಂದಳಿರ ಸಂಪಗೆಯ ಕಿಡಿಯಲರುಗಳು ಒತ್ತಿ ಸೂಸುತ್ತ ಬರಲೂ ತನ್ನ ಬತ್ತಳಿಕೆಯೊಳಗೊಂದು ಕೂರಲಗ ತೆಗೆ ವೃತ್ತ ಕುಚದಬಲೆಯಳ ಮನ್ನಿಸದೆ ಸುರಪುರದ ಸುತ ಲಕ್ಷ್ಮೀಶನಹುದೆ ಭಳಿರೇ 3
--------------
ಕವಿ ಲಕ್ಷ್ಮೀಶ
ಭೀಮ ಶೈನನೆ ಸತ್ಯಭಾಮಾ ಪ್ರಿಯನ ಪರಮ ಪ್ರೇಮ ಪಾತ್ರನೆ ಪಾಹಿಮಾಂ ಪ ಭೂಮಿಯೊಳು ಶೇವಿಸುವರಿಗೆ ಸುರ ಭೂಮಿರುಹ ವೆಂದೆನಿಸಿ ಪೊರೆಯಲು ಗ್ರಾಮ ಮೋತಂಪಲ್ಲಿ ಕ್ಷೇತ್ರ ಸುಧಾಮರಿಪುಕುಲ ಭೀಮನೆನಿಸಿದ ಅ.ಪ ರಾಮಕಾರ್ಯವನು ನಿಷ್ಕಾಮದಿ ಸಾಧಿಸಿ ಧಾಮ ಕಿಂಪುರುಷದಲ್ಲಿ ಭೂಮಿಜಾವಲ್ಲಭನ ಶುಭಗುಣ ಸ್ತೋಮಗಾನದಿ ರಮಿಸುತಿರೆ ಬಡ ಭೂಮಿದೇವನ ಪ್ರಾರ್ಥನದಿ ಬಂದೀ ಮಹಾ ಶಿಲೆ ಯೊಳಗೆ ನೆಲಸಿಹ 1 ರಾಜಕುಲಜ ಪಾಂಡುರಾಜ ನಾತ್ಮಜ ಧರ್ಮರಾಜನನುಜನೆನಿಸಿ ರಾಜ ಸೂಯಾಗವನೆ ಮಾಡಿಸಿ ಪೂಜಿಸಿದಿ ಸಿರಿಕೃಷ್ಣನಂಘ್ರಿಯ ರಾಜ ಕೌರವ ಬಲವ ಮದಿಸಿ ವಿರಾಜಿಸಿದ ಸುರರಾಜ ನಮೋ ನಮೋ 2 ಪುಟ್ಟಿಮೇದಿನಿ ಸುರಸದ್ಮದಿ ಗಜ ಪಂಚಾಸ್ಯನೆನಿಸಿಸು ಜನಕತಿ ಮೋದನೀಡಿದ 3 ಗಣಕೆ ಗಂಧವಾಹನನೆನಸಿ ಶೇಷ ಗಿರೀಂದ್ರಯಾತ್ರೆಗೆ ವೃಂದ ಸಲಹುವಿ 4 ಶೇರಿದವನೆ ಧನ್ಯನೋ ಭಜಿಸಿ ವಿಮುಕ್ತನಾದನು ಸುರಋಷಿಯ ಪದವನು 5 ಸುವಿಶಾಲ ಮಂಟಪ ಮಧ್ಯದಿ ಕೈಕೊಳುತ ಭಕುತರ ಗುರುವರ ಪಾಲಿಸೆನ್ನನು 6 ಬಂಗಾರದಾಭರಣಂಗಳಿಂದೊಪ್ಪುತ ಶೃಂಗಾರದಿಂ ಶೋಭಿತ ಸರ್ವೇಷ್ಟದಾಯಕ ಪ್ರಥಮಾಂಗನೆನಿಸಿದ 7
--------------
ಕಾರ್ಪರ ನರಹರಿದಾಸರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೂಷಣ ಮಾಡಲು ಹಿಗ್ಗೇನೋ ಜನ ದೂಷಣಮಾಡಲು ದು:ಖೇನೋ ಪ ದೋಷನಾಶ ಜಗದೀಶ ಕೇಶ ತನ್ನ ದಾಸರಭಿಮಾನ್ಯೆಂದು ಶಾಶ್ವತರಿತವರಿಗೆ ಅ.ಪ ವಂದನೆಮಾಡಿ ಕೊಡುತಿಹ್ಯರೇನೋ ಮತ್ತು ನಿಂದೆಯನಾಡಿ ಕಸುಕೊಳ್ಳುವರೇನೋ ನಿಂದೆವಂದನಗಳೊಂದೇಯೆಂದು ಆ ನಂದನಕಂದನ್ನಾನಂದದಿ ಭಜಿಪರ್ಗೆ 1 ಸತಿಸುತರೊಲಿದರೆ ಬಂತೇನೋ ಮತ್ತು ಹಿತದಪ್ಪಿ ನಡೆದರೆ ಹೋಯ್ತೇನೋ ಗತಿಪ ಕ್ಷತಿಯ ಹಿತಾಹಿತಸ್ಥಿತಿ ಸಮವೆಂದು ಪತಿತಪಾವನ ಸತತದಿ ನುತಿಪರ್ಗೆ 2 ನೀತಿವಂತನೆನೆ ಬಂದ ಭಾಗ್ಯೇನೋ ಜಗ ಪಾತಕನೆನೆ ಬಂದ ಕುಂದೇನೋ ಪಾತಕಹರ ಭವಭೀತಿವಿನಾಶ ಜಗ ನ್ನಾಥ ಶ್ರೀರಾಮನ ಪ್ರೀತಿ ಪಡೆದವರಿಗೆ 3
--------------
ರಾಮದಾಸರು
ಭೋಜನ ಮಾಡೈಯ ಶ್ರೀರಾಮಚಂದ್ರ ಪ ರಾಜೀವಾನಯನ ಸ್ವರಾಜಾನುಜ ಮಹಾ ರಾಜ ವಂದಿತ ರಾಜಾರಾಜ ಸಖಾರ್ಚಿತ ಅ.ಪ ಉಪ್ಪು ಉಪ್ಪಿನಕಾಯಿ ಪಚ್ಚಡಿಗಳು ಗೊಜ್ಜು ಹಪ್ಪಳ ಸಂಡಿಗೆ ಶಾಖಗಳೂ ಒಪ್ಪುವ ರಸ ಕೂಟು ಹುಳಿ ಫಳಿದ್ಯವು ಸೂಪ ತುಪ್ಪ ಶಾಲ್ಯೋದನ ಚಿತ್ರಾನ್ನಗಳನ್ನು 1 ಹೊರೀಗೆ ಶಷ್ಕುಲಿ ಹೋಳಿಗೆ ಕಡುಬು ಮು- ಚ್ಚೋರೆಯು ಅತಿರಸ ಹೊಯಗಡಬೂ ಕೀರುಆಂಬೊಡೆ ಬೋಂಡ ಶಾವೀಗೆ ಹುಳಿದೋಸೆ ಕ್ಷೀರ ಶರ್ಕರ ಜೇನು ತುಪ್ಪವೆ ಮೊದಲಾಗಿ2 ಮಂಡೀಗೆ ಲಾಡು ಚಿರೋಟಿ ಘೀವರು ಪೇಣಿ ಬೆಂಡು ಸೋಮಾಶಿಬತ್ತಾಸು ಫೇಡಾ ಖಂಡ ಶರ್ಖರೆ ಕಬ್ಬು ಖರ್ಜೂರ ದ್ರಾಕ್ಷಿಗ- ಳುಂಡು ತ್ರಿಲೋಕಳುದ್ಧರಿಸುವ ಸ್ವಾಮಿ 3 ಪನಸು ಜಂಬೂ ಕದಳಿನಾರಂಗ ಎಳನೀರು ಪಾನಕ ತಕ್ರಬೆಣ್ಣೆಯು ಮೊಸರೂ ಸ್ವಾದೋದಕ ಮೊದಲಾಗಿ ಶ್ರೀ ಯರ್ಪಿಸುವಳು ಭಕ್ತಿಯಿಂದಾ ಕೈಕೊಂಡು ನೀ 4 ಸತ್ಯತಾಂಬೂಲ ವರ್ಪಿಸಲು ಯಥಾಶಕ್ತಿ ವಿತ್ತಸಮೇತವಾದಿದನು ಕೈಕೊಂಡು ನೀ 5 ಭೋಗದ್ರವ್ಯವು ಮುಕ್ತಚೂರ್ಣ ದಕ್ಷಿಣೆ ಸಹ ಈಗ ತಾಂಬೂಲ ವೊಪ್ಪಿಸಲು ಕೈಕೊಂಡು ನೀ6 ನವ್ಯ ಸುಗಂಧ ಪುನರ್ಧೂಪವರ್ಪಿಸಿ ಸೇವ್ಯಸೇವಕನಾಗಿ ಸೇವೆ ಕೈಕೊಳ್ಳೆಂದು ಭವ್ಯಚರಿತ ನಿನ್ನ ಪೊಗಳುತ್ತ ಕುಣಿವರು 7 ಅವ್ಯಯಾನಂತ ಜಗದ ಬದುಕು ನೀನೆಂದು ಸೇವ್ಯಸೇವಕನಾಗಿರುವೆ ಎಂದು ಭವ್ಯಚರಿತ್ರರು ಪೊಗಳುವರೈ ನಿನ್ನ ಸವ್ಯಸಾಚಿಯ ಸೂತ ಗುರುರಾಮ ವಿಠಲನೆ 8
--------------
ಗುರುರಾಮವಿಠಲ
ಭೋರನೆ ನಿಜಪರಿವಾರವೆಲ್ಲವೂ ಸೇರಿ ಪ. ಮಕರಕುಂಡಲಧರ ವಿಕಸಿತ ಮುಖಪದ್ಮ ಕೌಸ್ತುಭ ಶುಭ ವನಮಾಲಿ ಭಕುತ ವತ್ಸಲನೆಂಬ ಬಿರುದು ತೋರುತ ನಮ್ಮ ಶಕುತಿಗೆ ಸರಿಯಾದ ಸೇವೆ ಕೊಳ್ಳುವೆನೆಂದು 1 ಒಡೆಯನೀ ಗತಿಯೆಂಬ ಬಡವ ಭಕ್ತರನೆಲ್ಲು ಬಿಡನೆಂದು ಭವಸಿಂಧು ಪೊತ್ತನಿಂದು ತಡವ ಮಾಡದಲೆ ಸಂಗಡ ಬಂದೀ ನಿಲಯದಿ ನಡು ಮನೆಯಲಿ ನಿಂದು ಕೊಡುವೆ ಸೌಖ್ಯವನೆಂದು 2 ತುಳಸಿಧಾಮ ಸುಶೋಭಿತ ನಮಗೆ ಬೆಂ- ಬಲವಾಗಿರುವ ಸರ್ವ ಸ್ಥಳಗಳಲಿ ಅಲಸನಾಗದೆ ಶೇಷಾಚಲವಾಸನು ಶ್ರೀಭೂ- ಲಲನೆಯರೊಡಗೂಡಿ ನಲಿವ ಸಂಭ್ರಮದಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಮಂಗಳಂ ಮಂಗಳಂ ಬೆಟ್ಟದೊಡೆಯ ಹರಿಗೆ ಜಯ ಪ. ಮಂಗಳಂ ಕೊಳಲನೂದುವ ದೊರೆಗೆ ಮಂಗಳಂ ಶ್ರೀ ಶ್ರೀನಿವಾಸ ವೆಂಕಟನಿಗೆ ಮಂಗಳಂ ಶೇಷಾಚಲ ಹರಿಗೆ ಅ.ಪ. ವೈಕುಂಠದಲಿ ಬಂದವಗೆ ಆ ಕೋಲಗಿರಿಯಲಿ ನಿಂದವಗೆ ತಾ ಕಾಸುಕಾಸಿಗೆ ಬಡ್ಡಿಯ ಕೊಳುತಲಿ ಬೇಕಾದ ವರಗಳ ಕೊಡುವನಿಗೆ 1 ಬುತ್ತಿ ಪೊಂಗಲುಗಳ ಮಾರುವಗೆ ಮತ್ತೆ ದರ್ಶನ ಕೊಡದೆ ಒದೆಸುವಗೆ ನಿತ್ಯ ಸ್ವಾಮಿಪುಷ್ಕರಣಿ ತೀರದಿ ನಿಂತು ಭೃತ್ಯವರ್ಗಗಳನು ಪೊರೆವವಗೆ 2 ಶಂಖ ಚಕ್ರ ವರ ಹಸ್ತನಿಗೆ ಶಂಕೆಯಿಲ್ಲದೆ ಅಭಯ ಕೊಡುವನಿಗೆ ಶಂಕರಮಿತ್ರಗೆ ಪರಮಪವಿತ್ರಗೆ ಸಂಕೋಲೆ ಹನುಮಗ್ಹಾಕಿಸಿದವಗೆ 3 ವೃಂದಾವನದಲಿ ಮೆರೆದವಗೆ ಮಂದಗಮನೆಯರ ಮೋಹಿಪಗೆ ಚಂದದ ಪೊಂಗೊಳಲೂದಿ ಗೋಪಿಯರ ಕಾಯ್ದ ಗೋಪಿ ಕಂದನಿಗೆ 4 ನಾಗರಾಜನ ಗಿರಿ ನಿಲಯನಿಗೆ ಯೋಗಿಗಳಿಗೆ ನಿಲುಕದ ಹರಿಗೆ ಸಾಗರನಿಲಯ ಗೋಪಾಲಕೃಷ್ಣವಿಠ್ಠಲ ಭೋಗಿಶಯನ ಲಕ್ಷ್ಮೀಪತಿಗೆ 5
--------------
ಅಂಬಾಬಾಯಿ
ಮಂಗಳಂ ಶ್ರೀ ಗುರುವರ್ಯರಿಗೆ | ಮಂಗಳಾಂಗರಿಗೆ ಮಂಗಳಂ ಶ್ರೀ ಗುರುವರ್ಯರಿಗೆ ಪ. ರಂಗನಾಥನ ಪದ ಸರೋಜಕೆ ಭೃಂಗರೆನಿಸಿ ಮೆರೆಯುವರಿಗೆ ಅ.ಪ. ತಂದೆ ಮುದ್ದುಮೋಹನರೆಂ ತೆಂದು ಮೆರೆಯುತ ಮಂದಮತಿಯ ಬಿಡಿಸಿ ಎನ್ನ ತಂದೆಯಂತೆ ಪೊರೆಯುವರಿಗೆ 1 ನಾಗಶಯನ ಹರಿಯ ಭಜಿಪ ಭೋಗಿವರರಿಗೆ ಭಾಗವತರ ಸಂಘದೊಳಗೆ ಯೋಗಿಯಾಗಿ ಚರಿಸುವರಿಗೆ 2 ಪರಮಪ್ರಿಯರಾಗಿ ಹರಿಗೆ ಪರಮಪ್ರಿಯರೆಂದು ಕರೆಸಿಕೊಳುತ ನರಹರಿಯ ಚರಣ ಮನದಿ ಸ್ಮರಿಸುವರಿಗೆ 3 ಕರ್ಮಗಳನೆ ಕಡಿದು ಜ್ಞಾನ ಧರ್ಮಮಾರ್ಗದಿ ಧರ್ಮತತ್ವ ಬೋಧಿಸಿ ಅ- ಧರ್ಮಗಳನೆ ಬಿಡಿಸುವರಿಗೆ4 ಗೋಪಾಲಕೃಷ್ಣವಿಠ್ಠಲನ ರೂಪ ತೋರುತ ಪಾಪಗಳನೆ ತರಿದು ಭವ ಕೂಪದಿಂದ ಪೊರೆಯುವರಿಗೆ 5
--------------
ಅಂಬಾಬಾಯಿ
ಮಂಗಳಂ ಶ್ರೀ ರಾಮಚಂದ್ರನಿಗೆ ಕಂಗೊಳಿಪ ದೇವಗೆ ಪ. ಬಿಟ್ಟು ಪಟ್ಟ ತೊಟ್ಟು ವ್ರತವ ಮೆಟ್ಟಿ ವನವನೂ ದುಷ್ಟರನ್ನು ಕುಟ್ಟಿ ಬಂದು ಪಟ್ಟವಾಳ್ದ ಶ್ರೇಷ್ಠ ಮೂರ್ತಿಗೆ 1 ಸೀತೆ ಅನುಜರೊಡನೆ ವೆರಸಿ ವಾತತನಯನ ಪ್ರೀತಿ ಸೇವೆ ಕೊಳುತ ರಾಜ್ಯ ನೀತಿಯಿಂದ ನಡೆಸಿದವಗೆ 2 ಶ್ರೇಷ್ಠ ಭಕ್ತರೊಡನೆ ವೆರಸಿ ದಿಟ್ಟತನದಲಿ ಪಟ್ಟವಾಳಿ ಪ್ರಜರ ಪೊರೆದು ಇಷ್ಟ ಸಲಿಸಿ ಮುದವಿತ್ತವಗೆ 3 ರಾಮನಾಮ ಪಠಿಪ ಜನರ ಕಾಮಿತಾರ್ಥವ ಪ್ರೇಮದಿಂದ ಕೊಟ್ಟು ಪೊರೆವ ಸ್ವಾಮಿ ಸುಗುಣಧಾಮ ಹರಿಗೆ4 ಭೂಪರೊಳಗೆ ಶ್ರೇಷ್ಠ ರಾಮರೂಪ ಮಂಗಳಂಗೋಪಾಲಕೃಷ್ಣವಿಠ್ಠಲಗೆ ದೀಪದಾರತೀಯ ಬೆಳಗಿ 5
--------------
ಅಂಬಾಬಾಯಿ
ಮಂಗಳಾ ವರಯೋಗಿ ರಾಯಗೆ | ಮಂಗಳಾ ಪರಮ ಅವಧೂತಗೆ |ಮಂಗಳಾ ಪರಮಾತ್ಮ ಶ್ರೀ ಗುರು ಸಿದ್ಧ ಬಸವಂಗೆ | ಜಯ ಜಯ ಮಂಗಳಾ ಪ ಆದಿ ಮಧ್ಯಾವಸಾನವಿಲ್ಲದ ನಾದ ಬಿಂದು ಕಲಾ ಶೂನ್ಯಗೆ |ಸಾಧಿಸುವ ಸಿದ್ಧಾಂತ ಅಗಣಿತವಾದ ಬ್ರಹ್ಮವನು | ವೇದ ವೇದಾಂತವ ವಿಚಾರಿಸಿ ನಾದ ಋಷಿ ಅಪಾರ ಚಿಂತ್ಯನು | ಮೇದಿನಿಯ ಭಕ್ತರನುಗ್ರಹಕಿತ್ತ ಬಂದ ಬಸವರಾಜಯೋಗದಲಿ 1 ಮತ್ಸ್ಯ ಕೂರ್ಮ ವರಾಹನಾದ ಮಾಧವಗೆ 2 ಮಾಧವ ಕಲಿಯೊಳಗವತರಿಸಿದ ಬಳಿಕಾ ಬಾಲಕೃಷ್ಣಂಗೆ 3 ನೋಡಿದರೆ ದುರಿತವನು ಕೆಡುವನು, ಬೇಡಿದರೆ ಸಾಯೋಜ್ಯನೀವನು ಮಾಡಿ ಪಾದದ ತೀರ್ಥಕೊಂಡಡೆ ಮರಳಿ ಪುಟ್ಟಗಡ | ಖೇಡನಾಗದೆ ನಾಮಕೀರ್ತಿಯ ಮಾಡು ಮರುಳೆ ಆದಿಪುರುಷನರೂಢಿಯೊಳು ಈಡ್ಯಾಡಿ ಮೆರೆದ ಬಸವರಾಜಯೋಗದಲಿ 4 ಇಂತು ಭಕ್ತರ ಭಕ್ತಿಗೋಸುಗ ಅಚಿಂತ್ಯ ಮಹಿಮನು ಶರೀರವತಾ- ನಂತು ಧರಿಸಿಹನಿಲ್ಲದಿದ್ದಡೆ ದೇಹ ತಾನೇ ತಾ |ಕಂತು ಹರನವತಾರವಲ್ಲದೆ ಭ್ರಾಂತಿ ಬಿಡಿಸಿದ ಕೊಳಕೂರದಲಿಸಂತತವೆ ನೆಲೆಸಿಹನು ಬಸವರಾಜಯೋಗದಲಿ 5
--------------
ಭೀಮಾಶಂಕರ
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಂಜುಳನಾದವು ರಂಜಿಸಿತು ಕಂಜನಯನಕೃಷ್ಣ ಕೊಳಲನು ಊದಲು ಪ ಅಂಜಲಿಯಲಿ ಪುಷ್ಪಹಾರವ ಪಿಡಿಯುತ ಸಂಜೆಯ ತಿಂಗಳು ಬೆಳಗಿರಲು ಅ.ಪ ಕೈಯಲಿ ವೀಣೆಯ ನುಡಿಪ ಕನ್ನೆಯರು ಮೈಯಿನ ಗಂಧವ ಚೆಲ್ಲುತಲಿರಲು ಸುಯ್ಯಿ ಸುಯ್ ಸುಯ್ ಎಂದು ಚಲಿಸಲು ಎಲರು ಗೋಪಿ ವೃಂದವು ನಲಿಯಲು1 ಸರಿಗಮಪದನಿ ಸ್ವರಗಳ ರವದಲಿ ಸರಸ ಸಾಹಿತ್ಯವು ಉರುಳುತಲಿರಲು ಮುರಳಿಯ ಇಂಚರ ಸರಿಸಮ ತೂಗಲು ವರದ ಮಾಂಗಿರಿರಂಗ ನಸುನಗೆ ಬೀರಲು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್