ಒಟ್ಟು 2197 ಕಡೆಗಳಲ್ಲಿ , 114 ದಾಸರು , 1773 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುರುಕರಿಲ್ಲದ ಮನೆ ದಿರದಿಮ್ಮನೆ ಪ ತುರಕರ ನೋಡದ ಕಣ್ಣು ಶಿಖಿಗರಿಗಣ್ಣು ಕರ್ಣ ತುರಕರುವಿನುಚ್ಛಿಷ್ಟ ಉಣ್ಣ ಬಾಯಿ ವಿಷಗಾಯಿ 1 ಜಿಹ್ವೆ ಅಧಮನ ಗುಂಹೆ ತುರಕರನೊದೆವ ಕಾಲು ಯಮನ ಪಾಲು 2 ತುರಕರ ಪ್ರಸಾದ ಉಣ್ಣದ ಹೊಟ್ಟೆ ಗೂಗಿನ ಮೊಟ್ಟೆ ತುರಕರನ ಚಿಂತಿಸದ ಮನ ಗಾರ್ಧಭ ಗಮನ ತುರಕರ ಕಾಯ್ದ ವಿಜಯವಿಠ್ಠಲರೇಯ ತುರಕರ ಕರುಣ ಪಡೆಯದವನು ಶುದ್ಧ ಶವನು3
--------------
ವಿಜಯದಾಸ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ತುಳಸೀ ಸ್ತುತಿ ಮಾಧವ ಹೃದಯೆ ಪ ಪೀತಾಂಬರಧರ ಶ್ರೀಹರಿಜಾಯೆ ಅ.ಪ [ಸುಂದರ] ಮಣಿಮಯಸದನೆ ಪರಮಪಾವನೆ ಇಂದೀವರದಳ ಕೋಮಲನಯನೆ 1 ಪ್ರೇಮರಸಾನ್ವಿತೆ ಗುಣಭರಿತೇ ಶ್ರೀಮಾಂಗಿರಿವರ ರಂಗಮಹಿತೇ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತೂಗಿದಳೆ ಸ್ಕಂದನಾ ಪಾರ್ವತೀ ದೇವಿ ಆಗಮಜ್ಞನ ಗುಹನಾ ಪ ನಿತ್ಯ ಭೋಗಿ ಭೂಷಣ ಜನ ಸಾಗರದಂತೆ ಗಂಭೀರನ ಜೋಯೆಂದು ||ತೂಗಿದಳೆ|| ಅ ಮುನಿವರ ವಂದಿತ ಜೋಜೋ | ಅನುಪಮ ಸದ್ಗುಣ ಚಿನುಮಯ ಸರ್ವಜ್ಞಅನಿಮಿಷ ವಂದಿಪ ಅನಘ ಜೋಜೋಯೆಂದು 1 ಭಕ್ತೋದ್ಧಾರ ಕುಮಾರ ಜೋಜೋ ನಾರದಾದಿ ಮುನಿವರ ವಂದಿತ ಮಾರನಾಕಾರದ ಧೀರ ಜೋಜೋಯೆಂದು 2 ಮೂರ್ತಿ ಜೋಜೋ | ಪಾವಂಜೆ ವಾಸನ ಸೇವಕ ದಾಸರ ಕಾವÀ ಮಹಾತ್ಮನನೋವಿ ಜೋಜೋಯೆಂದು ||ತೂಗಿದಳೆ|| 3
--------------
ಬೆಳ್ಳೆ ದಾಸಪ್ಪಯ್ಯ
ತೆರಳಿದರೋ ತಂದೆ ಮುದ್ದು ಮೋಹನರೂಮರಳಿ ಬಾರವ ಪುರಿ ನರಹರಿ ಪೂರಕೇ ಪ ತರಳತನಾರಭ್ಯ ದ್ವಾದಶ ವತ್ಸರಪರಿಸರಾಗಮ ಪಠಿಸಿ ನಿಪುಣನೆನಿಸೀ |ಇರಲು ಬಂದರು ಮುದ್ದು ಮೋಹನ್ನದಾಸರುಕರಿಗಿರಿ ನರಹರಿ ರಥವ ಉತ್ಸವಕೇ 1 ಕರಿಗಿರಿ ಸನಿಯದ ನರಸಿಪುರದೊಳಿದ್ದವರಸುಬ್ಬರಾಯಾಖ್ಯ ಭರದಿಂದ ಬರುತಾ |ಗುರು ಮುದ್ದು ಮೋಹನರ ಪದಪಾಂಸು ಶಿರದಲ್ಲಿಧರಿಸಿ ಬಿನ್ನವಿಸಿದರುಪದೇಶ ಕೊಂಡಿರೆಂದೂ 2 ಪರಿಕಿಸಲೋಸುಗ ಅರುಣ ಉದಯ ಮುನ್ನಕರಿಗಿರಿ ಪುರಬಿಟ್ಟು ತೆರಳಲು ಅವರೂ |ಭರದಿ ಅಡ್ಡೈಸುತ ಗುರುಪಾದದಲಿ ಬಿದ್ದುವರ ಉಪದೇಶವ ಕೈಗೊಂಡ ಧೀರಾ 3 ಶುಭ ಅಂಕಿತವಾ |ತಂದೆ ಮುದ್ದು ಮೋಹನ್ನ ವಿಠ್ಠಲನೆಂದುಛಂದೋಗಮ್ಯನೆ ದಿವ್ಯ ನಾಮವನಿತ್ತರು 4 ದಾಸ ದೀಕ್ಷೆಯ ಪೊತ್ತು ದಾಸ ಕೂಟವ ನೆರಸಿಶೇಷಗಿರೀಶನೆ ಸರ್ವೇಶನೆನುತಾಎಸೆವ ಅಂಕಿತ ಮಂತ್ರ ಉಪದೇಶಗೈಯ್ಯುತ್ತದಾಸರ ಕ್ಲೇಶವ ಹರಿಸೀದ ಗುರುವೇ 5 ವರಚೈತ್ರ ಪಂಚಮಿ ವರುಷವು ವಿಕ್ರಮಶರಣರ ಪೊರೆಯಲು ಕರಿಗಿರಿಯಲ್ಲೀ |ಗುರು ಮುಖ್ಯ ಪ್ರಾಣ ಪ್ರತೀಕವ ನಿಲಿಸುತಆರು ಮೂರನೆ ದಿನ ಹರಿಯ ಸೇರುವೆ ನೆನುತಾ 6 ನರಲೀಲೆ ಕೊನೆಗೈದು ಪರಮ ಪುರುಷಹರಿಶಿರಿಯರಸಗೆ ಪ್ರೀತೆ ಪಾತ್ರನೆನಿಪಾನೂ |ವರ ಗುರು ಗೋವಿಂದ ವಿಠಲನ ಚರಣವಸ್ಮರಿಸಿ ಹಿಗ್ಗುತ ಪೊರಟ ನೀರಿಕ್ಷಿಸುತಾ7
--------------
ಗುರುಗೋವಿಂದವಿಠಲರು
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ತೆರೆ ಬಾಗಿಲವ ಸುಗುಣೆ ಸುಂದರಿ ಮುಗಿವೆ ಕರವನುನಗಧರನ ಚರಣಕಮಲಯುಗಳ ನೋಳ್ಪೆನು ಪ ಪೇಳಿದವರು ಯಾರು ನಿನಗೆ ಕೀಲಿ ಹಾಕಲುಶೀಲಲಾಮನೊಬ್ಬನಾಜ್ಞೆ ಕೇಳಿ ನಡೆವಳು 1 ಹರಿಯು ಎಷ್ಟು ಸಾರೆ ನಿನಗೆ ತೆರೆಯ ಕೀಲಿಯೆಕರೆದು ಪೇಳಿದಾನೆ ಮಾತು ಸಿರಿಯೇ ಮರೆತೆಯಾ 2 ಬಾರೋ ಎಂದು ನೀನೆ ಎಷ್ಟು ಸಾರಿ ಕರೆದೆಯಾನಾರಿಮಣಿಯೆ ಬಂದರ್ಹೀಗೆ ತೋರ್ಪೆ ರೀತಿಯಾ 3 ಇಂದು ಹರಿಯ ದ್ವಾರದಲ್ಲಿ ಬಂದು ನಿಂತಿಹೆಮಂದಗಮನೆ ಕೀಲಿನೀನು ಬಂಧ ಮಾಳ್ಪರೆ 4 ಇಷ್ಟು ನೋಡಿ ಇಂದಿರೇಶನ ಭೆಟ್ಟಿ ಭರದಲಿಕೃಷ್ಣೆ ಬಂದು ತೆರೆಯೆ ಕೀಲಿ ದೃಷ್ಟಿಯಾಗಲು 5
--------------
ಇಂದಿರೇಶರು
ತೋರು ನಿಜಜ್ಞಾನ ಸುಖವ ಮಾರನಯ್ಯ ಮರೆಯ ಬಿದ್ದೆ ಪ ಪಾರಮಾರ್ಥ ಪರಮ ಸವಿ ಚಾರಮೆನಿಪ ಪಾವನ ಸುಪಥ ಅ.ಪ ತೀರದಂಥ ಅಪಾರಭವದ ವಾರಧಿ ಈಸಿ ಘೋರಬಡುವೆ ನೀರಜಾಕ್ಷ ನಿಗಮವಿನುತ ಪಾರುಮಾಡು ಕಾರುಣ್ಯಶರಧಿ 1 ವಿಷಯಲಂಪಟ ಮುಸುಕು ಮುಸುಕಿ ವ್ಯಸನಚಿತೆಯೋಳ್ ಬಸವಳಿದೆ ಅಸಮಹಿಮ ತವಪಾದ ಕುಸುಮ ಮರೆದು ಕೆಟ್ಟೆನಭವ 2 ನಾಶಮತಿಯಿಂದಾಸೆಗೈದ ದೋಷಗಳನ್ನು ಕ್ಷಮಿಸಿ ಬೇಗ ಪೋಷಿಸಿಭವ ಶ್ರೀಶ ಶ್ರೀರಾಮ ದಾಸಜನರುಲ್ಲಾಸ ಪ್ರಭು 3
--------------
ರಾಮದಾಸರು
ತೋರುವ ಜಗದಯನೆ ಪ ಕ್ಷೀರಶರಧಿ ಸುಕುಮಾರಿಣಿ ಹರಿಸಹ ಚಾರಿಣಿ ಭುವನ ವಿದಾರಿಣಿ ರುಕ್ಮಿಣಿ ಅ.ಪ ಮಂದಹಾಸ ವಿಜಿತೇಂದುಕಿರಣೆ ಗಜ ಮಂದಗಮನೆ ಸಂಕ್ರಂದನ ವಂದಿತೆ 1 ಮಾರಜನನಿ ಕಂಸಾರಿಯ ರಾಣಿ 2 ಪಾಲಿಸು ಕಲ್ಯಾಣಿ ಲೀಲೆಯಿಂದ ವನಮಾಲಿಯುರದಿ ನಿ ತ್ಯಾಲಯಗೈದಿಹ ಬಾಲೆ ವರದನುತೆ 3
--------------
ವೆಂಕಟವರದಾರ್ಯರು
ತೋರೆನಗೆ ಶ್ರೀ ಕೃಷ್ಣ ತೋಯಜಾಂಬಕ ನಿನ್ನ ಶ್ರೀ ರಮೇಶನೆ ನಾನಾ ಗುಣನಾಮ ಮಾಲೆ ಪ. ವಾರಿಜಾಂಬಕನೆ ಶ್ರೀ ಗುರುಗಳ ರಚಿಸುತಲಿ ಹಾರಹಾಕಿಹರೊ ನಿನಗೆ ಹರಿಯೆ ಅ.ಪ. ಮೋಹನವಿಠ್ಠಲನೆಂಬಾ ಒದ್ದು ತಾಪತ್ರಯವನು ತಿದ್ದಿ ತಿಳಿಸುತಲಿ ಜ್ಞಾನ ಕರ್ಮ ತಿದ್ದಿ ತಿಳಿಸಿದ ಗುರುಗಳು ಇವರು 1 ಇಂದಿರಾಪತಿ ರಂಗನಾಥ ರಘುರಾಮ ಇಂದಿರೇಶ ದಯಾಪೂರ್ಣ ಸೀತಾಪತೇ ವೇದೇಶ ಯಾದವೇಂದ್ರ ಸ್ವಾಮಿ 2 ಇಂದಿರಾರಮಣ ಜಯ ಗೋಪಾಲನೆ ವರದೇಶ ಪ್ರಾಣನಾಥಾ ಪದ್ಮನಾಭ ಶ್ರೀನಾಥ ಜಗದೀಶನೆ ವರದ ಮೋಹನದೇವಾ 3 ಶ್ರೀಕಾಂತ ಪುರುಷೋತ್ತಮ ಪರಮಾನಂದ ಶ್ರೀ ಸುರೇಂದ್ರ ಕರುಣಾಕರ ವೆಂಕಟ ದಯಾಮಯನೆ ಭವತಾರಕ ಹರಿಯೆ 4 ವಸುದೇವ ಪಾರ್ಥಸಾರಥಿಯೆ ಪ್ರಾಣಪ್ರಿಯ ಪರಿಪೂರ್ಣ ಮಧ್ವವಲ್ಲಭಮುಕ್ತಿ ದಾಯಕ ಸತ್ಯೇಶನೆ ಪರಮಪಾವನ ರಮೇಶ ಕರುಣಾನಿಧೆ ಪುಂಡರೀಕಾಕ್ಷ ಸ್ವಾಮಿ 5 ಕಲ್ಯಾಣಗುಣಪೂರ್ಣ ಚಂದ್ರಹಾಸವರದ ಮಾಯಾಪತಿ ಉಪೇಂದ್ರ ಚಕ್ರಪಾಣಿ ಮುಕ್ತೇಶ ಬದರಿನಾಥಾ ಜಯಪ್ರದ ನಿರ್ಜರೇಶ ಜಾನಕೀಪತಿ ವಿಶ್ವನಾಥಾ ಸ್ವಾಮಿ 6 ಭುವನೇಶ ಗಜರಾಜವರದ ಜನಾರ್ಧನ ಮಧ್ವನಾಥ ಆನಂದ ಅರವಿಂದಾಕ್ಷ ಪುಂಡರೀಕವರದ ಶ್ರೀ ಕೃಷ್ಣಸ್ವಾಮಿ 7 ಮಾಧವ ಕಮಲಾನಾಥ ಕಮಲನಾಭ ಸದಮಲಾನಂದ ವೈಕುಂಠವಾಸ ಪದ್ಮೇಶ ಗುರು ಮಧ್ವೇಶ ಇಂದಿರಾಪತಿ ರಮೇಶ ಶ್ರೀಶÀ 8 ನಿಗಮ ಸಿರಿರಮಣ ಕಮಲಾಕಾಂತನೆ ಸರವ ಪೋಣಿಸಿ ಹಾಕುತ ಪರಮ ಪ್ರಿಯ ಶ್ರೀ ಗುರುಗಳು ಉಳಿದ ನಾಮಾ ಪೊರೆಯೋ 9
--------------
ಅಂಬಾಬಾಯಿ
ತೋರೋ ತೋರೋ ತವ ದಿವ್ಯ ಚರಣವ ಪ ತೋರಿಸು ಕರುಣಾವಾರಿಧಿ ಶರಜ ನೀ ತೋರೋ ಅ.ಪ ವಲ್ಲಿದೇವಿಯ ವಲ್ಲಭ ಸುರನುತ ಪಲ್ಲವಾಧರ ವಿಶ್ವದೊಲ್ಲಭ ಶರಜ ನೀ ||ತೋರೋ 1 ತಾರಕನ ಸಂಹಾರಿ ಕಾರ್ತಿಕೇಯಾ ಶೂರಪದ್ಮನ ಅಸು ಹೀರಿದ ಶರಜ ನೀ ||ತೋರೋ2 ಕಂಬುಕಂಧರ ಭಕ್ತರ್ಗಿಂಬೀವ ಶರಜ ನೀ ||ತೋರೋ 3 ಯೋಗಿವಂದಿತ ರಾಗಾದಿ ವಿರಹಿತ ಆಗಮಜ್ಞನೆ ಗುಣಸಾಗರ ಶರಜ ನೀ ||ತೋರೋ 4 ವಾಸೀ ಪಾವಂಜೆ ಶೇಷ ಶಾಯಿಯ ಸಖ ದಾಸರ ಪೋಷ ಸರ್ವೇಶ ಶರಜ ನೀ ||ತೋರೊ 5
--------------
ಬೆಳ್ಳೆ ದಾಸಪ್ಪಯ್ಯ
ತ್ತಾತ್ವಿಕವಿವೇಚನೆ ಏಕ ಪಂಚಾಶದ್ವರ್ಣವಾಚ್ಯ ಶ್ರೀಕಳತÀ್ರನೆ ಸರ್ವಶಬ್ದಗೋಚರನಯ್ಯ ಪ ಕಾಯ ಕಾರ್ಯಕಾರಣವನನುಸರಿಸಿ ತ್ರಿಕರಣದೊಳಗಿದ್ದು ಕ್ರಿಯವ ನÀಡೆಸುವ ದೇವಅ.ಪ ಅಜಾನಂದೇಂದ್ರೇಶ ಶಿರ ಮುಖ ನೇತ್ರದೊಳು ನಿಜರೂಪ ಉಗ್ರ ಊರ್ಜ ಕರ್ಣದೊಳು ನಿಜ ಋತುಂಬರ ಋಘನಾಸದಲ್ಲಿ ಲೃಶಾ ಲೃಜ ವರ್ಣವಾಚ್ಯ ಗಂಡ ಸ್ಥಳದಲ್ಲಿಪ್ಪ 1 ಅನಂತಾರ್ಥಗರ್ಭನೆ ನೀ ವಾಚಿಯಲ್ಲಿ 2 ಕಪಿಲ ಖಪತಿ ಗರುಡ ಘರ್ಮ ದಕ್ಷಿಣಭುಜದೊಳ್ ಅಪರಿಚ್ಛಿನ್ನನೇ ನೀನು ಸಂಧಿಗಳಲಿ ಸುಫಲದಾತನೆ ಙಸಾರನಾಮದಲಿದ್ದು ಅಂಗುಲ್ಯಾಗ್ರದಲ್ಲಿ ನೀ ನಿರುತರಲಿ ನೆಲಸಿರ್ಪೆ 3 ಝೂಟಿತಾರ ವರ್ಣವಾಚ್ಯವ ಮಾಡಿ ನಿರುತದಲಿ ವಾಮಭುಜ ಸಂಧಿಗಳಲ್ಲಿರುವೆ ಬೆರಳ ಅಗ್ರದಿ ಞಮನಾಮದಲಿ ನೆಲೆಸಿರುವೆ 4 ಟಂಕ ಠಲಕ ಡರೌಕ ಢರಣಣಾಕ್ಮಕ ನೀ ನಾ ಟಂಕ ರಹಿತ ದಕ್ಷಿಣ ಪಾದದಲ್ಲಿ ಬಿಂಕವಿಲ್ಲದೆ ತಾರ ಥಪತಿ ದಂಡಿ ಧನ್ವೀ ನಮ್ಯನಾಮನೆ ವಾಮಪಾದ ಸಂಧಿಗಳಲ್ಲಿ 5 ಪರಫಲಿ ವರ್ಣವಾಚ್ಯ ದೇಹದಪಾಶ್ರ್ವ ಬಲಿ ಭಗನಾಮ ಪೃಷ್ಟ ಗುಹ್ಯದಲಿ ನಿರುತ ಮನ ವರ್ಣವಾಚ್ಯ ನೆನಿಸಿಹೆ ದೇವ ತುಂದಿ ಸ್ಥಾನದಲಿ ಎಂದೆಂದು ನಿಂದೆ6 ಯಜ್ಞ ಹೃದಯದಿ ರಾಮ ತ್ವಕ್‍ಲಕ್ಷ್ಮೀಪತಿ ರುಧಿರ ಶಾಂತಸಂವಿತ್ ಮಾಂಸದಲ್ಲಿ ಸುಜ್ಞ ಷಡ್ಗುಣ ಮಜ್ಜ ಸಾರತ್ಮ ಅಸ್ತಿಯು ಹಂಸ ಸ್ನಾಯುಳಾಳುಕ ನೀ ಪ್ರಾಣದಲ್ಲಿ 7 ಕ್ಷಕಾರವಾಚ್ಚ ಶ್ರೀ ಲಕ್ಷ್ಮೀ ನರಸಿಂಹ ಕ್ಷರ ಜೀವರಾ ದೇವ ಸರ್ವ ಸ್ಥಳದಲ್ಲಿಪ್ಪ ಶ್ರೀಕರಾರ್ಚಿತ ನಿನ್ನ ವಾಕ್ ಮನೋರೂಪಗಳು ಸಕಲ ಸಚ್ಛಾಸ್ತ್ರಾಗಮಗಳಾಗಿಹವೋ 8 ಸ್ವರವರ್ಣ ಸಂಯುಕ್ತ ಶಬ್ದವಾಕ್ಯದಿ ಸಕಲ ಪುರಾಣಾಗಮದಿ ಶಾಸ್ತ್ರ ಸರ್ವದಿ ನಿತ್ಯ ನಿರುತ ನಿನ್ನನುದಿನದಿ ಪೊಗಳುತಿಹವೋ 9 ಸ್ವಪ್ರಯೋಜನಕಾಗಿ ವರ್ಣ ಭೇದದಿ ವಾಕ್ಯ ಅಪ್ರಕೃತವಾಗೆಷ್ಟೋ ನಾನುಚ್ಚರಿಸಿದೆ ಸ್ವಪ್ರಯೋಜನ ರಹಿತ ಶ್ರೀವೇಂಕಟೇಶ ಶ್ರೀ ಉರಗಾದ್ರಿವಾಸ ವಿಠಲ ಜಗದೀಶ10
--------------
ಉರಗಾದ್ರಿವಾಸವಿಠಲದಾಸರು
ದಂಡಿಸಬೇಡೈ ದಯೆದೋರೈ ಕರದಂಡದಳಾಂಬಕನೆಪ. ಕಂಡೀಶವಿನುತ ಬ್ರಹ್ಮಾಂಡಪಾಲ ಮಾ- ರ್ತಾಂಡಮಂಡಲಗ ಶುಂಡಾಲವರದಅ.ಪ. ಕ್ಷೇಮದಿ ಶ್ರೀಹರಿನಾಮವ ವರ್ಣಿಸೆ ನೇಮಾನುಷ್ಠಾನದೊಳಿರಲು ನಾ ಮಾಡಿದ ನಾನಾವಿಧ ಪಾಪವ ತಾಮಸಗೊಳಿಸುವ ಕಾಮಕ್ರೋಧಗಳಿಂ1 ಶಿಷ್ಟಾಚಾರದೊಳಿಷ್ಟನಾಗಿ ಪರ ಮೇಷ್ಠಿಜನಕ ಜಯ ಜಯವೆನಲು ಭ್ರಷ್ಟಾಲೋಚನೆ ಪುಟ್ಟಿಸಿ ಪಾಪದ ಬಟ್ಟಿಯ ಹೊದ್ದಿಪ ದುಷ್ಟಸಂಗದಿಂ2 ನಾರಾಯಣ ನರಹರಿಯೆನ್ನುವ ವ್ಯಾ- ಪಾರವ ನಾ ಮಾಡುತ್ತಿರಲು ಆರೋಹಣಾವರೋಹಣ ನಾದವಿ- ಕಾರಗೊಳಿಪ ಶಾರೀರಪ್ರಕೃತಿಯಿಂ 3 ಆರ್ಕಾರಣ ರಿಪುಗಳಿಗೈ ಸರ್ವ ದೇ- ವರ್ಕಳ ಮಸ್ತಕಮಣಿ ನೀನೈ ತರ್ಕಾಗಮ್ಯ ಲಕ್ಷ್ಮೀನಾರಾಯಣ ಅರ್ಕಾಮಿತಪ್ರಭ ಕಾರ್ಕಳಪುರವರ4
--------------
ತುಪಾಕಿ ವೆಂಕಟರಮಣಾಚಾರ್ಯ
ದಂತಿಗಮನೆಯರು ಹರುಷದಲಿ ನೀಲಕುಂತಳೆಯ ರತಿರೂಪ ವಂತೆಯರು ಸೊಬಗು ಶ್ರೀ ಕುಂಕುಮವ ಸಂತವಾಡಿದರೂ ಪ ಕಳಹಂಸ ಗಿಳಿವಿಂಡುಗಳ ತಂಡ ಮಧುರದಿಂ ಕೆಲವ ಕೋಗಿಲೆಯ ವಿಹಗಾಳಿಗಳ್ ಪೊಳೆವ ಚೆಂದಳಿರ ವನದೊಳು ಮಂಟಪವ ರಚಿಸಿ ಲಲನೆಯರು ಚೆಲುವಿನಲಿ ಕೊಳವ ಸಿಂಗರಿಸಿ ಜಲಜ ನೈದಿಲೆಯ ಪೂವಲಿಯದೊಲ್ಘೇಂಕರಿಪ ಬಳಸಿನಲಿ ಕೊಳಗುತಿಪ್ಪಳಿಗಳಿಂ ಶೋಭಿಸುವ ಸಲಿಲದೊಳು ಮಲಯಜ ಸುಲಲಿತ ಕುಂಕುಮವೆರಸಿ ಸಲೆ ಪ್ರಹುಡೆ ಕೆಳನಲಿದು ಸಂತಸದೀ 1 ಮಂದಗಮನೆಯರು ಪೂರ್ಣೇಂದುವದನೆಯರು ಶುಭ್ರ ಕುಂದರದನೆಯರು ಅರವಿಂದ ನೇತ್ರೆಯರು ಗೋ ವಿಂದನೈತರಲು ಪೊನ್ನಂದಣದಲಿದಿರುಗೊಳ್ಳೆ ಕುಂದಣದ ರತ್ನಗಳಲಿ | ಬಂದಿಸಲು ದಂಡೆಗಳ ಚೆಂದದಿಂ ಪಿಡಿದು ಮಕರಂದಮಂ ಪೂರಯಿಸಿ ಕಂದರ್ಪಜನಕನನು ಸಂದಣಿಸಿ ತಮತಮಗೆ ಮುಂದುವರಿದು ಲೋವಿಡಿದು ಆನಂದದಿ ಸೂಸಿದರೂ 2 ಪದುಮಗಂಧಿಯರು ಸನ್ಮøದು ಕೀರವಾಣಿಯರು ಚದುರೆಯರ್ತೊಂಡೆವಣ್ಣಧರೆಯರು ಪೇರ್ಮೈಯ ಮದದ ಮದ್ದಾನೆಯರು ಸುದತಿಯರು ಸೌಂದರ್ಯ ಪದಪು ಗಾತಿಯರು ಬಂದೊದಗಿ ಮೂದಲಿಸಿ ಮಧುಸೂದನನ ಬಿಡದಿದಕೋ ಪಿಡಿಪಿ ಮೋಹ ನದ ಬಲೆಯನು ಬೀಸೆನುತ ಯುವತಿಯರುಗಳು ಮುದದಿಂದ ಬೆಂಗೊತ್ತಿ ಪ್ರಣಯ ಕದನದಿಂ ಸೋಲಿಸುತ ಎದೆಗೆಡಿಸಿ ನವಪರಿಮಳದಿ ಮುಸುಕಿದರೂ 3 ಅಡಿಗಡಿಗೆ ಬಟ್ಟ ಪೊಂಗೊಡ ಮೊಲೆಗಳಲುಗುತ್ತ ಕಾ ರಡಿಗಳಂ ಪೋಲ್ವ ಪೇರ್ಮುಡಿ ಸಡಿಲೆ ಹಾರಗಳ ಜಡೆಯಲೊಯ್ಯನೆ ಸಣ್ಣ ನಡು ಬಳುಕೆ ಲಾವಣ್ಯ ವೆಡೆಬಿಡದೆ ಕೋಮಲೆಯರೊಡನೆ ತವದಕಲೀ ಸಡಗರದಿ ಕುಸುಮಗಳ ಎಡೆಬಿಡದೆ ಬೀರೆ ಸೊಂ ಪಡರ್ದಂಗಲತೆಗಳಿಗೆ ತೊಡದ ಮನ್ಮಥಶರವ ಪತಿ ವಿಡಿದು ಮಡದಿಯರು ಅಲರ್ದೊಡೆಯದೊಡಿಸಿದರೂ 4 ತೊರೆದು ಮುಂಬರಿಯೆ ಯೌವನದ ಪೀತಾಂ ಬರದ ನೆರಿಗಳೋಸರಿಸೆ ಮುಂಜೆರಗನೆಳೆವುತ ವಾಮ ಕರದಂಗುಳಿಗಳಿಂದ ಕುರುಳ ನೇವರಿಸುತಾ ತುರದ ತರುಣಿಯರು ಶ್ರೀಹರಿಯ ತರುಬಿದರೂ ಸರಸಿ ಜಾಂಬಕನ ಪೇರುರವ ಕುಚಗಳ ಕೊನೆಯ ಲಿರಿದು ನಿಲ್ಲಿಸಿ ನಿಲ್ಲು ಹೋಗಬೇಡೆನುತ ಯುವತಿಯರು ಧರೆಯೊಳತ್ಯಧಿಕ ಸುರಪುರದ ಲಕ್ಷ್ಮೀಪತಿಯ ಸರಸನೆ ವವಿಡಿದು ಮೇಲ್ವರಿಯೆ ವೊಲಿಸಿದರೂ 5
--------------
ಕವಿ ಲಕ್ಷ್ಮೀಶ
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು