ಒಟ್ಟು 4300 ಕಡೆಗಳಲ್ಲಿ , 124 ದಾಸರು , 3042 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಯ್ಯ ಕಂಜಲೋಚನ ದಯಲೆನ್ನ ಕರುಣಾ ದಯಲೆನ್ನ ಧ್ರುವ ಅಕ್ಷಯಾನಂದ ನೀ ಪೂರ್ಣ ಲಕ್ಷುಮೀ ರಮಣ ಸಗುಣಾ ಲಕ್ಷ್ಮೀರಮಣ ಪಕ್ಷಪಾಂಡವರ ಪ್ರಾಣ ರಕ್ಷಿಸೊ ನಾರಾಯಣ 1 ಅಣುರೇಣು ವೊಳನುಕೂಲ ಮುನಿಜನಪಾಲ ಲೋಲಾ ಘನಸುಖದ ಕಲ್ಲೋಳ ನೀನೆ ದೀನದಯಾಳಾ 2 ಕರುಣಾಸಾಗರ ಪೂರ್ಣ ಹೊರಿಯೊ ಮಹಿಪತಿಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಯ್ಯಾ ನೀ ಎನ್ನ ರನ್ನಾ | ದಯದಲಿ ಸಂಪನ್ನಾ ಪ ಮಂದರಧರ ದಶಕಂದರ ಹರಿ ಅತಿ- | ಸುಂದರ ಸದ್ಗುಣ ಮಂದಿರ ಈಶಾ | ಕುಂದರದನ ಕಂಬುಕಂದರ ಐದೊಂದು | ಕಂದರ ಪಿತ ಸಖ ಇಂದಿರೆಯರಸಾ 1 ತುಂಗ ವಿಕ್ರಮ ದನುಜಾಂತ ಮದಗಜಕ | ಹರಣ ರಂಗ ನಿಸ್ಸೀಮಾ | ಇಂಗಿತಜನ ಭವಭಂಗ ಕಮಲದಳ | ಕಂಗಳಲೊಪ್ಪುವ ಮಂಗಳ ಮಹಿಮಾ 2 ಅಂಬುಜ ಭವನುತ ಅಂಬುಧಿಜಾನನ | ಅಂಬುಜ ಸುಚಕೋರಾಂಬುಜ ಚರಣ | ಅಂಬುಧಿವಾಸ ವಿಶ್ವಂಭರ ಮಹಿಪತಿ- | ನಂಬಿದ್ದವರಿಗಿಂಬಾಗಿಹೆ ಕೃಷ್ಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಿ ಕಾಯಯ್ಯಾ | ಅನಾಥ ಬಂಧೋ ಪ ಶರಣರ ದುರಿತಪಹರಣ ಸುಪಾವನ | ಚರಣನೆ ಕೌಸ್ತುಭಾಭರಣ ಹೇಮಾಂಬರಾ | ತರಣಿ ಶತ | ಕಿರಣ ವಿರಾಜಿತ ಕರುಣಾ ಸಿಂಧೋ 1 ವಾರಣಭಯ ನಿವಾರಣ ಸುರಜನ | ತಾರಣ ದೈತ್ಯ ವಿದಾರಣ ಸೃಷ್ಟಿಯೆ | ಕಾರಣ ಚಿತ್ಸುಖ ಪೂರಣ ಮುನಿಜನ | ಪ್ರೇರಣ ಫಣಿಮದ ಹಾರಣ ಧೀರಾ2 ಚಕೋರ ಸು | ಚಂದಿರ ಸ್ಮರಚಿತ ಸುಂದರ ಸದ್ಗುಣ | ಮಂದಿರ ವಿಧಿಹರ ವಂದ್ಯ ಮುಕಂದನೇ | ತಂದೆ ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೆ ಕರುಣಾಂಬುಧಿಯೆ ತೋಯಜನಯನೆ ಪ ಕಾಯೆ ಕರುಣಿ ಗಿರಿರಾಯನ ಪಟ್ಟದ ಜಾಯೆ ಭವದಲಿ ನೋಯಗೊಡದಲೆನ್ನ ಅ.ಪ ಅಂಬುಜಾಂಬಕೆ ಅಂಭ್ರಣಿ ಸುಗುಣ ಸನ್ಮಣಿ ಕಂಬುಚಕ್ರಾಂಕಿತಪಾಣಿ ಅಂಬೆ ನಿನ್ನಯ ಪಾದಾಂಬುಜ ನಂಬಿದೆ ಬಿಂಬನ ಎನ ಹೃದಯಾಂಬರದಲಿ ತೋರೆ 1 ಕಾಮಿತಾರ್ಥ ಪ್ರದಾತೆ ಜಗದೊಳಗೆ ಖ್ಯಾತೆ ಕಾಮಿತ ಸಲಿಸೆನ್ನ ಮಾತೆ ಪ್ರೇಮದಿ ನಿನ್ನನು ನೇಮದಿ ಭಜಿಪೆನ್ನ ಧಾಮದೊಳಗೆ ನೀ ಕ್ಷೇಮದಿ ನಿಲಿಸೀ 2 ದೂತಜನಕತಿ ಪ್ರೀತೆ ಈ ಜಗಕೆ ಮಾತೆ ಸೀತೆ ಪಾಲ್ಗಡಲಾ ಸಂಭೂತೆ ದಾತ ಗುರುಜಗನ್ನಾಥ ವಿಠಲಗೆ ಪ್ರೀತ ಸತಿಯೆ ಸುಖವ್ರಾತವ ಸಲಿಸಿ ನೀ 3
--------------
ಗುರುಜಗನ್ನಾಥದಾಸರು
ಕಾಯೊ ಕರುಣ ಕೃಪಾಳ ಸದ್ಗುರು ಘನಲೋಲ ದ್ರುವ ಎನ್ನಹೊಯಿಲ ನಿಮಗೆಂತು ಮುಟ್ಟುವದಾನಂತಗುಣಮಹಿಮೆ ಚಿಣ್ಣ ಕಿಂಕರನಾದ ಅಣುಗಿಂದತ್ತಲಿ ಹೀನ ದೀನ ನಾ ಪರಮ ಖೂನತಿಳಿಯಲು ನಿಮ್ಮ ಕೃಪಾಸಿಂಧು ನಿಮ್ಮ 1 ಅನಂತಕೋಟಿ ಬ್ರಹ್ಮಾಂಡನಾಯಕನೆಂದೊದರುತಿಹಾನಂತ ವೇದ ಅನಂತಾನಂತಾನಂತ ಮಹಿಮರು ಸ್ತುತಿಸುತಿಹರು ಸರ್ವದ ಗುಹ್ಯ ಅಗಾಧ ತಿಳಿಯದು ಮಹಿಮ್ಯಂಗುಷ್ಠದ 2 ಮಾಡುವರಾನಂದ ಘೋಷ ದೋರುವ ಹರುಷ ತಾ ಶೇಷ ಸುರಮುನಿ ಜನರೆಲ್ಲ ಚರಣಕಮಲಕೆ ಹಚ್ಚಿದರು ನಿಜಧ್ಯಾಸ ಸಿರಿಲೋಲ ನೀ ಸರ್ವೇಶ 3 ಸಕಲಾಗಮ ಪೂಜಿತ ಸದ್ಗುರು ಶ್ರೀನಾಥ ಕಾಮಪೂರಿತ ಕರುಣಾನಂದಮೂರುತಿ ಯೋಗಿಜನ ವಂದಿತ ಜನರಿಗೆ ಸಾಕ್ಷಾತ 4 ಸಲಹುವದೋ ನೀ ಶ್ರೀಹರಿಯೆ ನೀ ಎನ್ನ ಧೊರೆಯೆ ಮುರ ಅರಿಯೆ ಸಕಲಪೂರ್ಣಸಿರಿಯೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಗುರುನಾಥತ್ರಯಗುಣಾತೀತ ಧ್ರುವ ಭಾನುಕೋಟಿ ಸುಪ್ರಭೆಯ ಅನುದಿನಕ್ಷಯ ಘನಮಹಿಮರ ಹೃದಯ ಆನಂದೋದಯ ಅನಾಥರಿಗೆ ಆಶ್ರಯ ನೀನಹುದೊನÀಮ್ಮಯ 1 ದೇಶಿಕÀರಿಗೆ ನೀ ದೇವ ಲೇಸಾಗಿ ಕಾವ ಋಷಿ ಮುನಿಗಳ ಸಂಜೀವ ವಾಸವಾಗಿವ್ಹ ವಿಶ್ವಾತ್ಮನಹುದೊ ಶ್ರೀದೇವ ಭಾಸುತಲಿವ್ಹ ಭಾಷೆಯ ಪಾಲಿಸುವ ಈಶ ನೀನೆ ಕೇಶವ 2 ಬಾಹ್ಯಾಂತ್ರ ನೀ ಸದೋದಿತ ಗುಹ್ಯಗುರುತು ಶ್ರೀಹರಿ ನೀನೆ ಸಾಕ್ಷಾತನಹುದೊ ಸ್ವಹಿತ ಇಹಪರ ನೀನು ದಾತಮಹಿಪತಿ ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಸುಗುಣ ಮಣಿಯೆ ಪ ಪ್ರೀಯ ಮುರಾರಿ ವಿನಾಯಕ ಸೋದರ ||ಅ|| ಅಘ ಪಾವನಮೂರ್ತಿ ಶರಣರ ರಕ್ಷಕ 1 ಕುಂದ ಕುಂದಕುಟ್ಮಲಪದನಾನಂದಿಧ್ವಜ ಸುತ ಸುಂದರ ಮೂರುತಿ | ಇಂದುವದನ ಮುನಿವೃಂದ ವಂದಿತ ಗುಹ 2 ಮಯೂರ ಧ್ವಜಾ | ಕ್ಲೇಶದಿ ನರಳುವ ದಾಸರ ರಕ್ಷ ಸ-ರ್ವೇಶಕರಜ ನಿರ್ದೋಷಿ ಸುಬ್ರಹ್ಮಣ್ಯ 3
--------------
ಬೆಳ್ಳೆ ದಾಸಪ್ಪಯ್ಯ
ಕಾಯೋ ಜಿತಾಮಿತ್ರ | ಯಮಿಕುಲ ನಾಯಕ ಸುಚರಿತ್ರ ಪ ಕಾಯೊ ಕಾಯೊ ಜಿತಕಾಯಜಾತ ಶಿತ ಕಾಯೊ ನಿನ್ನ ಪದ ತೋಯಜಕೆರಗುವೆ ಅ.ಪ ಅಭಯದಾತನೆಂದು ತ್ವತ್ಪದ | ಕಭಿನಮಿಸುವೆ ಬಂದು ಶುಭ ಗುಣನಿಧಿ ಗುರು | ವಿಭುದೇಂದ್ರಕರ ಅಬುಜ ಸಂಭೂತ 1 ಮೌನಿ ಕುಲಾಧೀಶ | ಪ್ರಾರ್ಥಿಪೆ ಭಾನಪ್ರಕಾಶ ದೀನಜ ನಾಮಕರ ಧೇನು ಪುರಾತನ ಗೋನದ ತರು ನಿಜ ತಾಣಗೈದ ಗುರು 2 ತುಂಗಮಹಿಮ ಭರತ | ಕುಮತ ದ್ವಿಜಂಗಮ ದ್ವಿಜನಾಥ ಮಂಗಳ ಕೃಷ್ಣ ತರಂಗಿಣಿ ಭೀಮಾ ಸಂಗಮದಲಿ ಸಲೆ | ಕಂಗೊಳಿಸುವ ಗುರು 3 ಶರಧಿ ದುರಿತ ಕದಳಿದ್ವಿರದಿ ದಿವಿಜ ಪರಿವಾರ ನಮಿತ ನಿಜ ಕರುಣಿ ನಂಬಿದೆನು ಮರಿಯದೆ ನಿರುತ4 ವಿನುತ | ಶಾಮಸುಂದರಾಂಘ್ರಿ ದೂತ ಪೊಂದಿದ ಜನರಘ ವೃಂದ ಕಳಿವ ರಘು ನಂದನ ಮುನಿಮನ ಮಂದಿರವಾಸ 5
--------------
ಶಾಮಸುಂದರ ವಿಠಲ
ಕಾಯೋ ನೀ ಅನಸೂಯಾ ಪುತ್ರನೇ ಜೀಯಾ ದತ್ತಾತ್ರೇಯ ದೇವನೇ ಪ ಪತ್ರೇಂದ್ರ ಗಮನಾ ಪರಮಾನಂದಾ ಶತ ಪತ್ರದಳ ನಯನಾ ಕೇಶವಾ ಮಿತ್ರ ಶತಕೋಟಿ ಪ್ರಕಾಶ ಸುರೇಶನೇ ಅತ್ರಿ ಗೋತ್ರ ಸಮುದ್ಭವಾ 1 ಸರ್ವಾಧಾರವ್ಯಯ ತ್ರಯ ಮೂರು ಸರ್ವ ಲೋಕ ವ್ಯಾಪ್ತನು ಚಾರು ತತ್ವರಿತ ಸರ್ವಾತೀತ ಮುಕುಂದನೇ 2 ಯೋಗಿ ಜನರ ಮಾನಸ ಹಂಸಾ ಸಂತ ಗುಣ ಸಂಪನ್ನನು ಅನಂತ ರೂಪ ಮಹಿಪತಿ ನಂದನ ಪ್ರಭು ಅನಂತ ಮಹಿಮ ಶ್ರೀ ಕೃಷ್ಣನೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಸಿದ್ದೇಶಾ ಪ ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ ಅಂಕುರವಿಲ್ಲಾ 1 ಸಾಧು ಜನಸಂಗ ಮಾಡೀ ನಿಜ ಬೋಧಾಮೃತ ಸವಿಯಲಿಲ್ಲಾ ವಾದ ಗುಣ ಹಿಂಗಲಿಲ್ಲಾ ಕಾಮ, ಕ್ರೋಧ ಸುಳಿಯಲಿ ಬಿದ್ದೆ2 ಪಂಥ ಪರಮಾರ್ಥದೋರೋ ಶ್ರೀ ಕಾಂತ ಗುರು ಮಹಿಪತಿ ಸುಖವ ನೀಡಬೇಕು ಸಿದ್ದೇಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರುಣ್ಯ ಮೂರುತಿ ಕರುಣಾಸಾಗರ ಪ ಘೋರದುರಿತ ಸಂಹಾರ ಜಗತ್ಕರ್ತ ಮಾರ ಜನಕ ಶ್ರೀ ಮನೋಹರನ ವಾರಿಜಾಂಬಕ ಕೃಷ್ಣ ವಾರಧಿ ಶಯನನ ಪಾರಿಮಾರ್ಥಿಕ ನರಿತು ಪರಮ ಹರುಷದಿಂದ 1 ಕುಂಭಿನೀ ಪತಿರಾಮ ಕೋದಂಡಧರ ಗುಣ ಗಂಭೀರ ಪುರುಷ ಶ್ರೀ ಘನ ಮಹಿಮನ ಶಂಬರಾರಿಯ ಕೊಂದ ಶಿವನ ರಕ್ಷಿಸಿದಂಥ ಕಂಬು ಕಂಧರ ಕನಕಾಂಬರ ಭೂಷಣನಾ 2 ಅಗಣಿತ ಚರಿತ ಅನಂತ ಅವತಾರನ ನಿಗಮಗೋಚರ ವಿಷ್ಣು ನಿಜ ನಾಮವು ಬಗೆ ಬಗೆಯಲಿ ಅತಿ ಭಕುತಿಯಿಂದಲಿ ಜಯ ಜಗದೊಡೆಯ ಹೆನ್ನ ವಿಠ್ಠಲನ ಜಿವ್ಹದಿ 3
--------------
ಹೆನ್ನೆರಂಗದಾಸರು
ಕಾರುಣ್ಯಸಾಗರನೇ ನಾ ಸೇರುವೆ ಮಾರನ ಪಡೆದವನೇ ಪ ಭಾವಾತೀತನೆ ಯೆನ್ನ ಅವಗುಣವೆನಿಸದೆ ಸೇವಕನಿಗೆ ನಿನ್ನ ಭಕ್ತಿಯ ನೀಡೋ 1 ದೇವಕಿ ಕಂದನೇ ಸನಕವಂದಿತನೇ ಸೇವೆಯ ಮಾಡುವೆ ಚರಣವ ನೀಡೋ 2 ಅಜನಿಗೆ ಪಿತನಾಗಿ ದ್ವಿಜರಿಗೊಡೆಯನಾಗಿ ಗಜನನ್ನು ಪೊರೆದ ಶ್ರೀ ಲಕ್ಷ್ಮೀ ಸೇವಿತನೇ 3 ಪಾದ ಯುಗ್ಮಗಳನ್ನು ಭಜಕನ ಸಲಹಯ್ಯ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ