ಒಟ್ಟು 959 ಕಡೆಗಳಲ್ಲಿ , 91 ದಾಸರು , 712 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿದಾಸರಿಗೆ ಕಿಂಚಿತ್ತಳಿವಿಲ್ಲ ಮನವೆ ಹರಿಯನ್ನು ನೆರೆನಂಬು ಸರಿಯಾರು ನಿನಗೆ ಪ ದುರಿತ ಕೋಟ್ಯಾಚರಿಸಿ ನರಕಿಯಾದಜಮಿಳಗೆ ಮರಣಕಾಲದಿ ಸಂಸ್ಮರಣ ಮಾತ್ರದಿ ನರಕದ ಭಯತಪ್ಪಿ ಸ್ಥಿರಮುಕ್ತಿಪದವಾಯ್ತು ಅರಿದು ನೀ ಗಟ್ಟ್ಯಾಗಿ ಸ್ಮರಿಸು ಮಾಧವನ 1 ಹರಿಸರ್ವೋತ್ತಮನೆಂಬ ತರಳನಿಗೆ ಹಿರಣ್ಯ ಹರಿಯೆಲ್ಲಿ ತೋರದಿರೆ ಶಿರಹಾರಿಸಿಕಪೆನೆನಲು ನರಹರಿಯ ರೂಪದಿಂ ಭರದಿ ಕಂಬದಿ ಬಂದು ಹಿರಣ್ಯಕನ ಶಿರತರಿದು ಪೊರೆದ ಪ್ರಹ್ಲಾದನ 2 ಲಲನೆ ದ್ರೌಪದಿ ಲಕ್ಷ್ಮೀನಿಲಯನ ದಯದಿಂದ ಉಳಿದಳು ಮಾನದಿಂ ಖುಲ್ಲನ ಸಭೆಯಲಿ ಅನುದಿನ ಚಲಿಸದೆ ಮನವಂ ತಿಳಿದು ನೀ ಭಜಿಸೆಲೊ ಸುಲಭ ಶ್ರೀರಾಮ 3
--------------
ರಾಮದಾಸರು
ಹರಿಹರಿ ಕೊಡು ನಿನ್ನಯಚ್ಚರನು ಶರಣವಾ ಧೃಡದಲಿ ಬಂದೆನಾನು ಪ ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1 ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2 ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ | ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3 ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ | ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4 ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಲವು ಹಂಬಲಿಸಿದಲ್ಲೇನೂ ಇಲ್ಲ ಜಲಜನಾಭನ ಕರುಣÉೂೀದಯವು ತಪ್ಪಿದ ವೇಳ್ಯಾ ಪ ಬರಿಗಂಟು ಅಪೇಕ್ಷೆ ಬಯಸುವುದೆಲ್ಲಾ ಪೂರ್ವಾಕೃತ ಇದ್ದದ್ದು ಬಿಟ್ಟದ್ದೆ ಇಲ್ಲ ಬಿರುದು ಬಾವಲಿ ದೇಹಾಭಂಗ ಬಡುವಾದೊಂದೆ ಪರಿ ವ್ಯಥೆಯಿಂದ ಫಲವೇನೊ ಇಲ್ಲ ಮುಂದಾ 1 ಬಿತ್ತಿದ ಬೀಜ ಎಷ್ಟು ಬೆಳೆಯ----ಲಿನೂ ಸುತ್ತಾ ದೇಶವು ತಿರುಗಿ ಸೂಸಿದರೇನೂ ಪತ್ರ ಬರೆದ ಬ್ರಹ್ಮ ಫಣಿಯ ಲಿಖಿತವಲ್ಲದೆ ಪ್ರತ್ಯೇಕ ನಿನಗೊಂದು ಬಾಹೋದು ಇನ್ನುಂಟೆ 2 ಅನುಭವ ಇದ್ದವಲ್ಲಾ ------ಇಲ್ಲಾ ಮನದಿ ತಿಳಿದು ಇನ್ನು ಮರಿಯದು ಎಲ್ಲಾ ಘನ್ನ 'ಹೊನ್ನೆ ವಿಠ್ಠಲ ನಾ ಕರುಣಾವಿಲ್ಲ ----- ಮನಸಿನೊಳಗೆ ಸ್ಮರಿಸಿ ಮುಕುತನಾಗೋದು ಬಿಟ್ಟು 3
--------------
ಹೆನ್ನೆರಂಗದಾಸರು
ಹಿಂಗದೆ ಮನದಣಿಯ ರಂಗನ ಭಜಿಸೊ ಪ ರಂಗನ ಭಜಿಸೊ ಕೃಷ್ಣನ ಭಜಿಸೊ ಅ ಯಾತಕೆ ಸುಮ್ಮನಿರುವೆಪಾತಕ ಹೆಚ್ಚಿ ಮೆರೆವೆನೀತಿಯ ತಪ್ಪಿ ನೀನಿರುವೆಭೂತಳ ಭೋಗ ಸ್ಥಿರವೆ 1 ಗೆಜ್ಜೆಯ ಕಟ್ಟಿ ಆಡೊಲಜ್ಜೆಯ ಬಿಟ್ಟು ಪಾಡೊಮುಜ್ಜಗನ ಕೊಂಡಾಡೊಸಜ್ಜನರ ಜೊತೆಗೂಡೊ2 ಪನ್ನಗರಾಜ ಶಯನನಪನ್ನಗಭೂಷಣ ನುತನಉನ್ನಂತ ಗುಣದವನಚೆನ್ನಾದಿ ಕೇಶವನ3
--------------
ಕನಕದಾಸ
ಹೆತ್ತವರಿಗೆರವಾಗಿ ಹೆರವರಿಗೆ ಮಗನಾಗಿ ಚಿತ್ತದೊಳು ನಲಿವವನೆ ಮತ್ತನಿವನೆ ತುಂಟತನದೊಳಗೆ ಸರಿಯುಂಟೆ ಈತಗೆ ಜಗದಿ ನಂಟರನು ಗೋಳಿಡುವ ತುಂಟನಿವನೆ ವಂಚಕರಿಗೆಲ್ಲರಿಗೆ ಸಂಚಕಾರವ ಕೊಡುವ ಚಂಚಲಾಕ್ಷಿಯರನ್ನೆ ವಂಚಿಸಿರುವ ಮಾನವರೊಳಿಂತಪ್ಪ ಮಾನಿಯಂ ನಾನರಿಯೆ ಮೀನಾಂಕ ಸಮರದೊಳ್ ಜಾಣನಿವನೆ ಜಾರರೋಳ್ ಕಡುಶೂರ ಮಾಯಕಾರ ಚೋರತನದೊಳು ವೀರ ಭಯವಿದೂರ ದಾರಿಕಾಯಲು ಧೀರ ಧೈರ್ಯಸಾರ ಮಾರಪಿತ ಶೇಷಗಿರಿವರನೆ ನೀರ
--------------
ನಂಜನಗೂಡು ತಿರುಮಲಾಂಬಾ
ಹೇಗೆ ಕಳೆಯಬೇಕೋ ಹೊತ್ತು ಹೇಗೆ ಕಳೆಯಬೇಕೋ ಪ ಹೇಗೆ ಕಳಿಲಿ ಭವಸಾಗರದಲಿ ಮನ ನೀಗದು ಚಂಚಲ ಸಾಗರನಿಲಯ ಅ.ಪ ಹುಟ್ಟಬಾರದಿತ್ತು ಇಹ್ಯದಿ ಹುಟ್ಟಿದ್ದೇ ತಪ್ಪಾಯಿತು ನಿಷ್ಠೆಲಿರಗೊಡದೆನ್ನ ದುಷ್ಟಮನಸು ಘಳಿ ಗಿಷ್ಟೆಲ್ಲ ಎಲ್ಲಿತ್ತು ಹುಟ್ಟದಿದ್ದರೆ ನಾನು 1 ಕ್ಷಣಕ್ಷಣಕೊಂದು ರೀತಿ ಮನಸಿನ ಗಣನೆಯಿಲ್ಲದ ಭ್ರಾಂತಿ ಜನಿಸಿದಂದಿನಿಂದ ಘನತರ ಕುಣಿಸ್ಯಾಡಿ ಜನರ ಸೇವೆಯೊಳು ದಣಿಸಿತು ಪಾಪಿ 2 ಅನುಗಾಲವು ಚಿಂತೆ ಜೀವಕೆ ಇನಿತು ಇಲ್ಲ ಸ್ವಸ್ಥ ತನುಮನಧನ ನಿನಗರ್ಪಿಸಿ ಬೇಡುವೆ ಘನ ಬೇಸತ್ತೆ ಪೊರೆ ಚಿನುಮಯ ಶ್ರೀರಾಮ 3
--------------
ರಾಮದಾಸರು
ಹೇಮಾಂಬರ ಕದಂಬ ವೆಂಕಟರಾಯಾ ಅ.ಪಎಷ್ಟೆಂದುಸುರೆ ಕೋಟಲೆಗಳಇಷ್ಟ ಮೂರುತಿಯೆ ಅಟ್ಟಿ ಬರುತ 'ಷಹುಟ್ಟು ಹೊಂದುಗಳೆಂಬ ಕಷ್ಟವ ಬಿಡಿಸೊ 'ಶಿಷ್ಟ ವೆಂಕಟರಾಯಾ1ದಂದುಗದಿಂದಾ ಎನ್ನಯಮನ ಕಂದಿಕುಂದುತಿದೆ ಇಂದು ನೀ ಬೆದರದಿರೆಂದಭಯವನಿತ್ತು ಬಂಧವ ಕಳೆಯೆನ್ನತಂದೆ ವೆಂಕಟರಾಯಾ 2ಕಡು ಮನೋವ್ಯಥೆಯಾ 'ಭಾಡಿಸುನುಡಿಯಾಲಿಸಯ್ಯಾ ಬಿಡದೆ ನೀ ಎನ್ನ ಕೈಪಿಡಿದು ಸಂಸøತಿಯೆಂಬ ಕಡಲ ದಾಂಟಿಸೊ ಎನ್ನೊಡೆಯ ವೆಂಕಟರಾಯಾ 3ಗತಿ ನೀನೆಯೆಂದು ಸಾರಿದೆ ನಿನ್ನನತಿ ದೀನ ಬಂಧು ಪತಿತ ಪಾವನ ನೆಂದತಿಶಯದಿಂ ಶೃತಿ ನುತಿಸುತಲಿದೆ ತಿರುಪತಿಯ ವೆಂಕಟರಾಯ 4ಅಪರಾಧ ಶತವಾ ಮಾಡಿದೆ ನಾನುಕೃಪೆುಂದ ಕ್ಷ'ುಸೈ ಜಪತಪವರಿಯದಚಪಲ ಚಿತ್ತನು ನಾನು 'ಮಲಪರಾನಂದನಿಪುಣ ವೆಂಕಟರಾಯಾ 5'ಪ್ರವತ್ಸಲನೆ ಯನಗೆ ನೀನುಸುಪ್ರೀತನಾಗೈ ತಪ್ಪುಗಳೆಲ್ಲವನೊಪ್ಪುಗೊಳ್ಳುತ ಸಲಹಪ್ಪ ನಿಚ್ಚಲು ತಿಮ್ಮಪ್ಪ ವೆಂಕಟರಾಯಾ 6ದುರಿತ ಭಂಜನನೆ ಮಹಾಪುಣ್ಯಚರಿತ ರಾಜಿತನೆ ನೆರೆ ನಂಬಿದರ ಪತಿಕರಿಸುವ ಬಿರುದುಳ್ಳ ಪರಮಾತ್ಮ ಮೂಡಲಗಿರಿಯ ವೆಂಕಟರಾಯಾ 7ವಾರಿಜನಾಭ ಮಹೋನ್ನತವಾರಣಾಧಾರಾ ಗಾರುಗೊಳಿಸುವ ಸಂಸಾರ ದುಃಖವನಿದನಾರಿಗುಸುರುವೆ ಕೊನೇರಿ ವೆಂಕಟರಾಯಾ 8ಮಂಗಳಾತ್ಮಕನೆ ಸೀತಾಕಾಂತಮಂಗಳ ಮ'ಮ ಮಂಗಳಗಿರಿ ನರಸಿಂಗರಾಘವ ರಘುಪುಂಗವ ಅಲಮೇಲುಮಂಗ ವೆಂಕಟರಾಯಾ9
--------------
ತಿಮ್ಮಪ್ಪದಾಸರು
ಹೊಂದಿ ಭಜಿಸಿರೆಲೋ ಹರಿನಾಮ ದಯ ಸಿಂಧು ಭಜಕಬಂಧು ಹರಿನಾಮ ಪ ಬಂಧನಿವಾರಣ ಹರಿನಾಮ ಬಹ ಕುಂದು ನಿಂದೆ ದೂರ ಹರಿನಾಮ ಅ.ಪ ವಿಷಯಲಂಪಟಹರ ಹರಿನಾಮ ಮಹ ವ್ಯಸನ ಕಳೆದು ಕಾಯ್ವ ಹರಿನಾಮ ಅಸಮಸೌಖ್ಯಜ್ಞಾನ ಹರಿನಾಮ ಮಾಯಾ ಮುಸುಕು ನಿವಾರಣ ಹರಿನಾಮ 1 ಬೇಡಿದ್ದು ಕೊಡುವುದು ಹರಿನಾಮ ಮಹ ಕೇಡು ತಪ್ಪಿಸುವುದು ಹರಿನಾಮ ಗಾಢಪದವಿನೀಯ್ವ ಹರಿನಾಮ ತಾ ಕೂಡಿ ಅಗಲದಿಹ್ಯ ಹರಿನಾಮ 2 ಗಾನಲೋಲಾನಂದ ಹರಿನಾಮ ಮಹ ದೀನ ದಯಾಪರ ಹರಿನಾಮ ಧ್ಯಾನದಾಯಕ ನಿಜ ಹರಿನಾಮ ಮಮ ಪ್ರಾಣದೊಡೆಯ ಶ್ರೀರಾಮನಾಮ 3
--------------
ರಾಮದಾಸರು
ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ಪ ಭಾಗವತರ ಸಂಗ ಬೇಗದಿಂದಲಿ ಇತ್ತು ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ ಬಾಲೇರ ಸಲುವಾಗಿ ಕೀಳು ಜನರಲ್ಲಿ ಶೀಲ ಜರಿದು ಯಾಚಿಸಿ ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1 ಅಂಗಜನಾಟಕೆ ಹಗಲಿರುಳೆನ್ನದೆ ಪರ ಅಂಗನೆರ ಕೂಡಿ ಮಂಗಳಮಹಿಮ ತುರಂಗ ವದನ ದೇವ ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2 ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ ಕಾರುಣ್ಯದಲಿ ಭಕ್ತನ ಅರಿಷಟ್ಕರನೆ ಕೊಂದು ಕರಿವರದನೆ ಘೋರ ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3
--------------
ಪ್ರದ್ಯುಮ್ನತೀರ್ಥರು
ಹ್ಯಾಗೆ ಕಾಂಬೆನು ಹಂಸಯೋಗಗಮ್ಯನೆ ನಿನ್ನ ವಾಗೀಶಪಿತ ದಯವಾಗೋ ಮೋಹನ ಪ. ಮನವು ನಿನ್ನಯ ಸೇವೆಗನುವಾಗಿ ನಿಲದು ಸ- ಜ್ಜನ ಸಂಗ ಸಲ್ಲಾಪವನು ಮಾಡಗೊಡದು ಘನಮೋಹಕೊಳಗಾದ ತನುವ ಪಿಡಿವುದು ಶ್ರೀ- ವನಿತೆಯರಸ ನಿನ್ನ ನೆನವೆಂತು ಬಹುದೊ 1 ಹಂಚಿ ದುರ್ವಿಷಯಕ್ಕೆ ವಂಚನೆಗೊಳಿಸಿ ಪ್ರಪಂಚದೋಳಿರಿಸಿ ಪಂಚಬಾಣನ ಶುಕಚುಂಚುವೇದದಿ ತ್ವಂಚ ಹಂಚಗೊಳಿಸಿ ಮೋಹ ಮಿಂಚಿಕೊಂಡಿಹುದೊ 2 ದೀರ್ಘಾದಿ ಸಹಿತಾದಿ ವರ್ಗಗಳನು ಗೆಲುವ ಮಾರ್ಗ ಕಾಣದೆ ದುಸ್ಸಂಸರ್ಗದಿ ಸಿಲುಕಿ ಭರ್ಗ ವಂದ್ಯನೆ ಗುಣಸರ್ಗದ ಬಲೆಯಿಂದ ನಿರ್ಗಮಗೊಂಡಪವರ್ಗವೆಂತಹುದೊ 3 ದಿನದಿನದೊಳಗಾಹತನುವ ನೋಡಲು ಮುಂದಿ ನನುಭವವನು ಕಾಂಬದನು ನಾನೇನರಿಯೆ ಜನರ ರಕ್ಷಾದಿಕರ್ತನೆ ನೀನೆ ಬಲ್ಲಿ ಮುಂ- ದಿನ ಕಾರ್ಯವಹದೆಂತೊ ವನಜಲೋಚನನೆ 4 ಸತಿ ಸುತಾದಿಗಳೆಲ್ಲ ಹಿತರೆಂದು ಗ್ರಹಿಸುವ ಮತಿಹೀನ ಜನಕೆ ದುರ್ಗತಿಯು ತಪ್ಪುವದೆ ಅತುಳ ಮಹಿಮ ಭಕ್ತಹಿತನಾದ ವೆಂಕಟ ಪತಿ ನೀನೆ ಎನಗೆ ಸದ್ಗತಿ ತೋರೊ ಹರಿಯೆ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಧರ್ಮಸ್ಥಳ ಮಂಜುನಾಥನನ್ನು ನೆನೆದು)ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥಲೋಕೇಶಮಾಡುನಿರ್ಭಯಪ.ಪಾಕಹಪ್ರಮುಖದಿವೌಕಸಮುನಿಜನಾ-ನೀಕವಂದಿತಪದಕೋಕನದಕೋವಿದಅ.ಪ.ಪಾಪಾತ್ಮಪಾಪಸಂಭವ ನಾನೆಂಬುವದಕಾ-ಕ್ಷೇಪವೇನಿಲ್ಲೋಮಾಧವಶ್ರೀಪರಮೇಶ್ವರ ಕೋಪಕಲುಷಹರತಾಪತ್ರಯಶಮನಾಪದ್ಭಾಂಧವಗೋಪತುರಂಗ ಮಹಾಪುರುಷ ಗಿರೀಶ 1ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ-ನಾಮ ಪಾಪವಿಮೋಚನವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮಕಾಮಾರಿ ನಿನ್ನ ನಾ ಮರೆಹೊಕ್ಕೆನುಹೇ ವiಹಾದೇವ ಸೋಮಚೂಡಾಮಣಿ 2ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ-ಬ್ರಹ್ಮ ಸುಜ್ಞಾನದಾಯಕನಿರ್ಮಲನಿತ್ಯಸತ್ಕರ್ಮಪ್ರೇರಕ ಗಜ-ಚರ್ಮಾಂಬರಧರ ದುರ್ಮತಿಪ್ರಹರಭರ್ಮಗರ್ಭಜಭವಾರ್ಣವತಾರಕ3ಕಪ್ಪಕಾಣಿಕೆಗಳನು ತರಿಸುವರ-ಣ್ಣಪ್ಪದೈವವೆ ದೂತನುತಪ್ಪದೆ ಚಂದಯ ಹೆಗ್ಗಡೆಯರ ಮನದೊಳಿಪ್ಪ ದಧಿಮಥನ ತುಪ್ಪದಂತೆಸೆವಕರ್ಪೂರಗೌರ ಸರ್ಪವಿಭೂಷಣ 4ಪೊಡವಿಗಧಿಕವಾಗಿಹ ಕುಡುಮಪುರ-ಕ್ಕೊಡೆಯ ಭಕ್ತಭಯಾಪಹಕಡಲಶಯನ ಲಕ್ಷ್ಮೀನಾರಾಯಣಗತಿ-ಬಿಡೆಯದವನು ನಿನ್ನಡಿಗೆರಗುವೆವರಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬಪ್ಪನಾಡಿನ ದೇವಿಯನ್ನು ಕುರಿತು)ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆ ಪ.ದಯಮಾಡೆ ಕೇವಲ ಭಯವಿಹ್ವಲನಲ್ಲಿದಯಸಾಗರೆ ಸೌಭಾಗ್ಯಸಂಪದವನ್ನು ಅ.ಪ.ವೇದಾಂತವೇದ್ಯೆ ನಿಖಿಳಜಗದಾದಿವಿನೋದೆಭೂಧರಾತ್ಮಜೆ ಸರ್ವಾಧಾರಶಕ್ತಿ ಕಲಾಧರೆಮಧುರಬಿಂಬಾಧರೆ ನಿನ್ನಯಪಾದವನು ಮರೆಹೊಕ್ಕೆ ಮನಸಿನ ಭೇದವನುಪರಿಹರಿಸಿ ಸರ್ವಾಪ-ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆಗಂಭೀರೆ ಮೇರು ನಿತಂಬೆಸಿಂಹಮಧ್ಯೆಲಂಬೋದರಪರಿರಂಭಕರಾಂಬುಜೆಕುಂಭಿಕುಂಭಪಯೋಜೆ ಶೋಭಿಪ ಕಂಬುಕಂಠಿಮುಖೇಂದುಪದ್ಮ ದ-ಳಾಂಬಕಿ ಎನಗಿಂಬುದೋರೆರೋಲಂಬಕುಂತಳೆಶುಂಭಮರ್ದಿನಿ2ಸಿಂಧೂರನಯನೆ ನಿಖಿಲಾಮರವಂದಿತಚರಣೆಸುಂದರಾಂಗಿ ಸುಮಗಂಧಿವಿಬುಧಮುನಿವೃಂದಸೇವಿತೆನಿತ್ಯಾನಂದಪ್ರಕಾಶಿನಿಅಂಧಕಾಸುರವೈರಿಹೃದಯಾನಂದಪಾರಾವಾರಪೂರ್ಣಮಿ-ಚಂದ್ರೆ ಸದ್ಗುಣಸಾಂದ್ರೆಸುರಥನರೇಂದ್ರವರದೆ ಮೃಗೇಂದ್ರವಾಹಿನಿ 3ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆನಿಜದಿ ನಿನ್ನಯ ಪಾದಂಬುಜವ ನಂಬಿದೆ ತ್ರಿಜಗವಂದಿತೆಮಹಾಗಜಗೌರಿ ಶಂಕರಿತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ-ವ್ರಜವಿದಾರಿ ಮುನೀಂದ್ರ ಮನನೀರಜದಿವಾಕರೆ ಮಾನಿತೋದ್ಧರೆ 4ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರಸರ್ಪಶಯನ ಲಕ್ಷ್ಮೀನಾರಾಯಣಪ್ರೀತಿಯಪ್ಪಂತೆ ದಯೆ ಗೈಯೆಜಗದಾದಿಮಾಯೆಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ-ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
3 ಆತ್ಮ ನಿವೇದನೆ190ಅಂಜಿಕ್ಯಾಕೆನಗಂಜಿಕೆಕಂಜನಾಭಶ್ರೀನಿವಾಸನ ದಯವಿರಲುಪ.ಅಶನವಸನವನ್ನು ಕುಳಿತಲ್ಲೆ ನಡೆಸುವನಿಶಿದಿನ ನೀಚರಾಧೀನ ಮಾಡದೆಹಸನಾಗಿ ತನ್ನಂಘ್ರಿ ನೆರಳೊಳು ಬಚ್ಚಿಟ್ಟುಕುಶಲದಿ ಸಾಕುವ ದೊರೆಯ ನಂಬಿದ ಬಳಿಕ 1ಹುಲ್ಲು ಕಚ್ಚಿ ಕಲ್ಲು ಹೊತ್ತು ಧನವನುಳ್ಳಕ್ಷುಲ್ಲ ಜೀವರನೆಲ್ಲ ಕಾಯುವ ಶಕ್ತಿಎಲ್ಲ ವ್ಯವಹಾರವ ಮಾಡುವ ಬಲ ನನಗಿಲ್ಲೆಂದು ಆಯಾಸಬಡಲೀಸದವನಿರೆ 2ಆವಾವ ಕಾಲದಿ ಆವಾವ ದೇಶದಿಸೇವೆಗೆ ನಾ ತಪ್ಪೆ ಕೃಪೆ ತಪ್ಪಿಸಭಾವಿಕರೊಡೆಯ ಪ್ರಸನ್ವೆಂಕಟಾದ್ರೀಶಸಾವು ಕಳೆದು ಜೀವಕಾಶ್ರಯನಾಗಿರೆ 3
--------------
ಪ್ರಸನ್ನವೆಂಕಟದಾಸರು