ಒಟ್ಟು 904 ಕಡೆಗಳಲ್ಲಿ , 93 ದಾಸರು , 639 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಯಾನನ ವಿಠಲಾ ನೀ ದಯದಿ ಸಲಹೊ ಇವಳಾ |ದಯಾಪಯೋನಿಧಿ ಎಂದು ನಿನಗೆ ಭಿನ್ನೈಪೇ ಪ ಕುಕ್ಷಿಯೊಳು ಜಗಧರಿಪ ಪಕ್ಷಿವಾಹನದೇವಲಕ್ಷಿಸದಲೇ ದೋಷ | ಲಕ್ಷವನು ಇವಳಾಈಕ್ಷಿಪುದು ಕರುಣಾಕಟಾಕ್ಷದಲ್ಲೆಂದೆನುತಲಕ್ಷ್ಮೀರಮಣನೆ ಹರಿಯೆ ಪ್ರಾರ್ಥಿಸುವೆ ನಿನಗೇ 1 ವಿನುತ | ಬಾಗಿ ಬೇಡುವೆನೋ |ಜಾಗುಮಾಡದೆಲೆ ವೈ | ರಾಗ್ಯ ಭಕ್ತಿಜ್ಞಾನಯೋಗ ಕೊಟ್ಟುದ್ದರಿಸು | ಸಾಗರಜೆ ರಮಣಾ 2 ವಾಚಾಮ ಗೋಚರನೆ | ನೀಚೋಚ್ಚಕ್ರಮ ತಿಳಿಸಿಮೋಚ ಕೇಚ್ಛೆಯ ಮಾಡೊ | ಪಾಚಕಸುವಂದ್ಯಾಪ್ರಾಚೀನ ಕರ್ಮಾಳಿ ಯೋಚಿಸಲು ಅಳವಲ್ಲಆಚರಿತ ಸಂಚಿತವ | ಮೋಚಿಸಾಗಾಮೀ 3 ಸಿರಿ | ನಲ್ಲ ನಿನಗೀಪರಿಯಸೊಲ್ಲ ಪೇಳುವುದುಚಿತೆ | ಚೆಲ್ವ ಹಯವದನಾಬಲ್ಲಿದನೆ ನೀನಾಗಿ | ಚೆಲ್ವ ರೂಪವ ತೋರೆಸಲ್ಲಲಿತ ಅಂಕಿತವ | ಸಲ್ಲಿಸಿಹೆ ದೇವಾ 4 ಭಾವುಕಾರ್ಜುನ ಬಂಡಿ | ಬೋವನಾಗುತ್ತ ಭವನೋವಕಳೆವೋಪಾಯ | ನೀವಲಿದು ಪೇಳೀತಾವಕರ ಪೊರೆದಂತೆ | ಭಾವುಕರ ಪೊರೆ ಬೇಡ್ವೆಗೋವುಗಳ ಪಾಲ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಹರಿ ನಿಮ್ಮ ಪದಕಮಲ ನಿರುತ ಧ್ಯಾನದಿ ಎನಗೆದೊರಕಿತೀ ಗುರುಸೇವೆ ಹರಿಯೆ ಪ ಮೂರ್ತಿ ನೀನಾಗಿಕರೆಯ ಸೇರಿಸಿದೆ ಶ್ರೀಹರಿಯೆಅ ಭವ ಬಂಧನವ ಬಿಡಿಸಿಹದನಕ್ಕೆ ನಿಲ್ಲಿಸಿದೆ ಹರಿಯೆ 1 ದೊರೆತನವ ಬಿಡಿಸಿ ಸುಸ್ಥಿರ ಮಾರ್ಗ ತೋರಿಸಿದೆನರಮಾತ್ರದವನೆನದೆ ಹರಿಯೆಗರುವದೊಳಗಿಹನೆಂದು ಅರಿತು ತವದಾಸರಿಗೆಇರದೆ ಅಡಿಯಾಗಿಸಿದೆ ಹರಿಯೆ 2 ಕನಕ ದಳದಲಿ ಬಂದು ಕಲೆತನೆಂದರೆ ಫೌಜುಕನುಕುಮನುಕಾಗುವುದು ಹರಿಯೆಮೊನೆಗಾರತನವೆಂಬ ಶನಿ ಬಿಡಿಸಿ ತವಪಾದವನಜವನು ಸೇರಿಸಿದೆ ಹರಿಯೆ 3 ಮನದೊಳಗೆ ಎರಡಿಲ್ಲ ಮದದಾನೆ ಮೇಲ್ಕಡಿವಮನವ ಹಿಮ್ಮೆಟ್ಟಿಸಿದೆ ಹರಿಯೆಘನವು ತಾಮಸಾಹಂಕಾರ ದುರ್ಮತಿ ದುರಿತಕನಜವನು ಕಿತ್ತೆಸೆದೆ ಹರಿಯೆ4 ಮದರೂಪು ಬಿಡಿಸಿ ಸನ್ಮುದ ರೂಪು ಧರಿಸೆಂದುಹೃದಯದೊಳು ನೀ ನಿಂತೆ ಹರಿಯೆಇದು ರಹಸ್ಯವು ಎಂದು ಹಿತವ ಬೋಧಿಸಿ ಎನಗೆಬದುಕಿಸಿದೆ ಬದುಕಿದೆನು ಹರಿಯೆ5 ದುರದಲ್ಲಿ ನಾಲ್ಕು ದಿಕ್ಕಲಿ ಹೊಕ್ಕು ಹೊಳೆವಂಥಬಿರುದು ಬಿಂಕವ ಕಳೆದೆ ಹರಿಯೆಪರಬಲವ ಕಂಡರೆ ಉರಿದು ಬೆಂಕಿಯಹ ಮನವಸೆರೆ ಹಾಕಿ ನಿಲ್ಲಿಸಿದೆ ಹರಿಯೆ6 ಪರಮ ಮೂರ್ಖನು ನಾನು ವರ ವೀರ ವೈಷ್ಣವರಚರಣವನು ಸೇರಿಸಿದೆ ಹರಿಯೆಕರೆ ಕಳಿಸಿ ಎನ್ನಲ್ಲಿ ಅಳವಿಲ್ಲದಿಹ ನಾಮಸ್ಮರಣೆ ಜಿಹ್ವೆಗೆ ಬರೆದೆ ಹರಿಯೆ 7 ಸ್ವಾರಿ ಹೊರಡಲು ಛತ್ರ ಭೇರಿ ನಿಸ್ಸಾಳಗಳುಭೋರೆಂಬ ಭೋಂಕಾಳೆ ಹರಿಯೆಧೀರ ರಾಹುತರಾಣ್ಯ ಭಾರಿ ಪರಿವಾರದಹಂ-ಕಾರ ಭಾರವ ತೊರೆದೆ ಹರಿಯೆ8 ಪಾದ ಹರಿಯೆಆರಿಗಂಜೆನು ನಾನು ಅಧಿಕಪುರಿ ಕಾಗಿನೆಲೆಸಿರಿಯಾದಿಕೇಶವ ದೊರೆಯೆ 9
--------------
ಕನಕದಾಸ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಕೃಷ್ಣ ವಿಠಲಾ | ಕರುಣಿಸಿವಳೀಗೆ ಪ ಕರುಣಾನಿಧಿ ಎಂದೆನುತ | ಮರೆಹೊಕ್ಕೆ ದೇವಾ ಅ.ಪ. ಜ್ಞಾನವರ್ಜಿತಳಾಗಿ | ಆಜ್ಞೆಳೆಂದೆನಿಸಿಹಳುಮಾನನಿಧಿ ನೀನಾಗಿ | ಜ್ಞಾನ ಸಾಧನವಾಸಾನುಕೂಲಿಸೆ ಕಾಯೊ | ಮೌನಿಜನ ಸದ್ವಂದ್ವನೀನೆಗತಿ ಎಂದೆನುತಾ | ತನುವನರ್ಪಿಪಳೊ 1 ಕತೃ ನೀನೆಂಬಂಥಾಉತ್ತಮದ ಮತಿಯಿತ್ತು | ಬೃತ್ಯಳನು ಪೊರೆಯೋ 2 ಕ್ಲೇಶಮೋದಗಳು ಸಮ | ಭಾಸವಾಗಲಿ ದೇವವಾಸವಾದ್ಯಮರನುತ | ವಾಸುದೇವಾ ಖ್ಯಏಸೇಸು ಜನ್ಮಗಳ | ರಾಶಿ ಪುಣ್ಯದ ಫಲದಿದಾಸ ದೀಕ್ಷೆಗೆ ಮನವ | ಆಶಿಸಿಹಳಯ್ಯಾ 3 ರಾಜೀವ ನಯನ ಹರಿಓಜಸ್ಸುಗಳ ಕೊಟ್ಟು ಕಾಪಾಡೊ ಇವಳಾ 4 ಸರ್ವಜ್ಞ ಸರ್ವೇಶ | ಸರ್ವಕಾರಣ ಮೂರ್ತಿಊರ್ವಿಯಾಳಿವಳೊಬ್ಬ | ದರ್ವಿಯಂತಿಹಳೋಸರ್ವದಾ ತವಸ್ಮರಣೆ | ಕೃಪೆಗೈದು ಪೊರೆ ಇವಳಾಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿಬಾಬು ರಾಮಚಂದ್ರ ಶೀತಾಪತೇ ಪ ದಶರಥನುದರದೊಳ್ ಶಿಶುವಾಗಿ ಪುಟ್ಟಿದೆ ದಶಕಂಠನಾಶನೇ ನೀನೆವೋಹರಿ ಶೀತಾಪತೇ 1 ತಾಪತ್ರಯಗಳಿಂದ ಪಾಪಿಯಾಗಿಹೆ ನಾನು ತಾಪವಿದಾರನೇ ನೀನೇವೋಹರಿ ಶೀತಾಪತೇ 2 ವಾಸುದೇವನೇ ನೀನು ದಾಸರ ಸಲಹುವ ಭೂಷಣ ಪೋಷಿಪ ನೀನೇವೋಹರಿ 3 ಆಶಾಪಾಶಗಳಿಂದ ಘಾಶಿಯಾದೆನು ನಾನು ದೋಷವಿದಾರನೇ ನೀನೇವೋಹರಿ 4 ಶಾಂತಿಪದದಲಿ ವಿಶ್ರಾಂತಿ ಕೊಟ್ಟಿನ್ನಾ ಭ್ರಾಂತಿಯ ತೋರಿಸುವ ನೀನೇವೋಹರಿ ಶೀತಾಪತೇ 5
--------------
ಶಾಂತಿಬಾಯಿ
ಹರಿಯಾ ಪಾದಕ ಶರಣೆನ್ನಿ | ಸ್ಮರಣೆಗೆ ಹರಿಯನು ಕರೆತನ್ನಿ ಪ ಅವನ ನಾಮವನೆನಿಯಲು ಭಕುತಿಲಿ | ಭವಭಯ ಮೂಲದಿ ನೀಗುವದು | ಆವಾಗ ಕಂಗಳ ಸಿರಿಸುಖ ದೋರುತ | ಜೀವನ ಗತಿನೆಲೆ ಹೊಂದುವದು 1 ಸಿಕ್ಕಿತ್ತು ನರದೇಹ ದೊರಿಯಲು ಪುಣ್ಯದಿ | ಸರ್ಕನೆ ಸಂತರ ಮೊರೆಹೊಕ್ಕು | ದಕ್ಕಿಸಿಕೊಳ್ಳದೇ ಬೋಧಾಮೃತವನು | ಪುಕ್ಕಟೆ ದಿನವನು ಗಳೆವರೇ 2 ತನುವಿದು ನೋಡಲು ನೆಚ್ಚಿಕೆ ಇಲ್ಲದ | ಮನಿಗಂಧರ್ವದ ಪುರದಂತೆ | ತನುವಿಗೆ ಹತ್ತಿದ ಸಂಸಾರ ಸುಖ | ಕನಸಿನ ಭಾಗ್ಯವ ತೆರೆದಂತೆ 3 ಇದರೋಳು ನಾ ನನ್ನದು ಎಂದೆನುತಲಿ | ಮದಮತ್ಸರವಾ ಬಗೆಯಲಿ | ಕುದಿಕುದಿದೇಳು ತಜ್ಞಾವಿಹೀನದಿ | ಉದರವ ಹೊರವುತ ತಿರುಗವರೇ 4 ಈಗಾಗಯನ್ನದೇ ಹರಿನಾಮವ | ನಾ | ಲಿಗೆ ಕೊನಿಯಲಿ ತಂದಿರಿಸೀ | ಭವ | ಸಾಗರ ಸುಳಿಯಿಂದಲಿ ತರಸೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ದಯಮಾಡು ಮಾಡು ಮಾಡು ಮಾಡು ಪ ಮರೆತು ಭವಾಟವಿಯಲ್ಲಿ ಬಹು ನೊಂದೆನು | ಕರುಣ ಕಟಾಕ್ಷದಿ ನೋಡು ನೋಡು ನೋಡು | ನೋಡು 1 ಹರಿಸಿ ತ್ರಿತಾಪವ ಸ್ವಸುಖ ಬೀರುವಾ | ಚರಣದ ಭಜನೆಯ ನೀಡು ನೀಡು ನೀಡು ನೀಡು 2 ಹೃದಯ ಮಂದಿರದೊಳಗಾಡು ಆಡು ಆಡು ಆಡು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹೂವ ಮುಡಿಸಿದ ಸ್ವಾಮಿ ರುಕ್ಮಿಣಿ ಭಾಮೇರಿಬ್ಬರಿಗೆ ರಂಗಯ್ಯ ಪ ಬಂದು ರುಕ್ಮಿಣಿ ಭಾಮೇರಿಂದತಿ ಸಂಭ್ರಮ್ಮದಿಂದ ರಂಗಯ್ಯ ಕುಂದಣದ ಹಸೆಮ್ಯಾಲೆ ಕುಳಿತಿರೆ ಚೆಂದದಲಿ ನಗುತ ಚಂದ್ರವದನ ತಾ ಚತುರ್ಭುಜದಿಂದಲಿ ಅಂಗನೆಯರ ಆಲಿಂಗನೆ ಮಾಡುತ 1 ಹೂವ ಮುಡಿಸುತ ವಾರಿಜಾಕ್ಷೇರ ವಾರೆನೋಟದಿ ನೋಡಿ ನಗುತ ರಂಗಯ್ಯ ಸಾರಸಮುಖಿ ಸಹಿತ ಸರಸ- ವಾಡುತ ನಾರದರು ನಮ್ಮಿಬ್ಬರ ಕದನಕೆ ಹೂಡಿದರೆ ಹುಚ್ಚಾದಿರೆಂದೆನುತ 2 ಮಲ್ಲೆ ಮಲ್ಲಿಗೆಮೊಗ್ಗು ಶಾವಂತಿಗೆ ಕಮಲ ರಂಗಯ್ಯ ಅರಳು ಮೊಗ್ಗುಗಳು ಝಲ್ಲೆ ಕುಸುಮಗಳು ಎಲ್ಲ ತನಕೈಯಲ್ಲಿ ಪಿಡಿದು ಚೆಲ್ವ ಭೀ- ಮೇಶ ಕೃಷ್ಣ ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ
ಹೆದರಿಕೆ ಬರುತದೆಲೋ ಪದುಮಾಕ್ಷ ನಿನ್ನ ಮುಂದೆ ಹೇಳಿಕೊಳ್ಳಲು ಎನಗೆ ಪ ಹೆದರಿಕೆ ಬರುತಿದೆ ಜಗದ ಜನರು ನಿನಗೆ ವಿಧವಿಧದಾಡುವ ಸುದ್ದಿಯ ಪೇಳಲು ಅ.ಪ ಹಳಿವರು ಹೆಳವನೆಂದು ಅಂಜದೆ ನಿನಗೆ ತಲೆಯಿಲ್ಲದವನೆನುವರು ಇಲ್ಲದೆ ಹೊಟ್ಟಿಗೆ ಹುಲ್ಲುಮೆದ್ದವನೆಂದು ಹಲವು ಬಗೆಯಲಿ ಹೀಯಾಳಿಪುದ್ಹೇಳಲು 1 ದೃಢದಿ ಭಕುತಜನರು ಬೇಡಿದ ವರವು ಕೊಡಬೇಕಾಗುವುದೆನುತ ಓಡಿ ಹಾವಿನಮೇಲೆ ಪವಡಿಸಿದ ಮಹ ಕಡುಲೋಭಿಯೆಂದೆಂಬ ನುಡಿನಿನ್ನೊಳ್ಪೇಳಲು 2 ಒದೆಸಿಕೊಂಡ್ವೊಯ್ಕುಂಠದಿ ಶೇಷಾಚಲದಿ ಸದನಗೈದನುಯೆಂಬರು ಇದು ಅಲ್ಲದತಿ ವಿಧವಿಧ ಲೋಕ ಸುಲಿದರ್ಥ ನಿಧಿಗಳಿಸಿದ ಚಿನಿವಾರೆಂಬದ್ಹೇಳಲು 3 ಕುದುರೆಮಾವುತನೆಂಬರು ಎಲವೋ ರಂಗ ಕದನಗಡಕನೆನುವರು ಹದಿನಾರು ಸಾವಿರ ಸುದತಿಯರೊಶನಾದ ಸುಧೆಗಳಜಾರನೆಂಬ ವಿಧಿಯನ್ನು ಪೇಳಲು 4 ವಿಪಿನವಾಸಿಕನೆನುವರು ನಿಷ್ಕರುಣದಿ ನೀ ಕಪಿವರನ ತರಿದೆನುವರು ಕಪಟ ತಿಳಿಯುವರಾರು ಅಪರೂಪಮಹಿಮನೆ ಕೃಪಾನಿಧಿ ಶ್ರೀರಾಮ 5
--------------
ರಾಮದಾಸರು
ಹೊಟ್ಟೆ ಎಲೆ ಹೊಟ್ಟೆ ಭ್ರಷ್ಟ ನಿನಗಾಗಿ ಜಗದೊಳು ನಾ ಕೆಟ್ಟೆ ಪ ಜನರ ಗೋಣು ಮುರಿದೆ ನಿನಗಾಗಿ ಪರರಿಗ್ಹಾನಿ ಬಯಸಿದೆ ನಿನಗಾಗಿ ಮಾನಹೀನಾದೆನು ನಿನಗಾಗಿ ಮಾಣದ ಅಪವಾದ ಕ್ಷೋಣಿಯೊಳ್ಹೊತ್ತು ನಾ ಕ್ಷೀಣಿಸುತಿರುವೆನು ಗೇಣ್ಹೊಟ್ಟೆ ನಿನಗಾಗಿ 1 ಬಹು ಸುಳ್ಳನಾಡಿದೆ ನಿನಗಾಗಿ ಮಹ ಕಳ್ಳನೆನಿಸಿದೆ ನಿನಗಾಗಿ ತೊರೆದೊಳ್ಳೆಗುಣವ ನಿನಗಾಗಿ ಗುರು ತಳ್ಳಿಬಿಟ್ಟೆನು ನಿನಗಾಗಿ ತಿಳಿಯದೆ ಕೆಟ್ಟೆನು ಇಳೆಯೊಳು ತಿರುಗುತ ಕಳವಳಿಸುತಲತಿಲೊಳ್ಳೊಟ್ಟಿ ನಿನಗಾಗಿ 2 ನಿನ್ನ ನಂಬಿ ಮರೆದೆ ರಾಮನಾಮ ನಿನ್ನ ನಂಬಿ ತೊರೆದೆ ನಿತ್ಯನೇಮ ನಿನ್ನ ನಂಬಿ ಪಡೆಯದ್ಹೋದೆ ಕ್ಷೇಮ ನಿನ್ನ ನಂಬಿ ಬಿಟ್ಟೆನು ಅತಿಶ್ರಮ ನಿನ್ನಿಂದ ಮತಿಗೆಟ್ಟೆ ನಿನ್ನಿಂದ ವ್ಯಥೆಪಟ್ಟೆ ನಿನ್ನಿಂದ ಗತಿಗೆಟ್ಟೆ ಸತತ ಭುವನದೊಳು 3
--------------
ರಾಮದಾಸರು
ಹೋದ್ಯಾ ಶೇಷಗಿರಿದಾಸ ಸುಲಭ ಹಾದಿಯನು ಮೆಟ್ಟಿ ನಮ್ಮನು ಭವಾಬ್ದಿಯೊಳಿಟ್ಟು ಪ ಸಲಹಿದೆನು ಸಾಕಿದೆನು ಕಾಲಕಾಲಕೆ ನೋಡಿ ತಿಳಿಸಿದೆನು ತತ್ವಗಳು ನಿರುತ ಬಿಡದೆ ಬಳಿವಿಡಿದು ತಿರುಗಿ ಉಣಿಸಿದೆನು ಉಡಿಸಿದೆನು ವೆ- ಗ್ಗಳವಾಗಿ ನೋಡಿ ಸುಖಿಸಿದೆನೊ ಮಾತಾಡಿ 1 ನಿನ್ನ ಮ್ಯಾಲಿನ ಕರುಣ ಕಮಲಾಕ್ಷ ವೇಗದಲಿ ಎನ್ನಮ್ಯಾಲೆ ಇನ್ನು ಮಾಡಲಿಲ್ಲ ಮುನ್ನೆ ಸಾಧನ ಪೂರ್ತಿ ನಿನಗಾಯಿತೇನೋ ಸಂ ಪನ್ನಮತಿ ಉಳ್ಳವನೆ ಸಜ್ಜನ ಶಿರೋಮಣಿ 2 ಧಿಕು ಎನ್ನ ಜನುಮ ನಿನ್ನಂಥ ಪ್ರಿಯನ ಬಿಟ್ಟು | ಅಕಟಕಟ ಭೂಮಿಯೊಳು ಬದುಕುವದೂ | ಸಿರಿ ವಿಜಯವಿಠ್ಠಲ ನಿನ್ನ ಭಕುತಿಗೆ ಮೆಚ್ಚಿ ತಡಮಾಡದಲೆ ಕರದೊಯ್ದು 3
--------------
ವಿಜಯದಾಸ
ಹ್ಯಾಂಗೆ ಉದ್ಧಾರ ಮಾಡ್ಯಾನೋ ಶ್ರೀಹರಿ ಹೀಗೆ ದಿನಗಳಿವಂಗನಿಗೆ ಪ ಬ್ಯಾಗ ಪತಿಗೆ ತಾ ಬಾಗದನುಕೂಲವಾಗಿರದೆ ತಿಳಿದ್ಹಾಗೆ ನಡೆವಳ ಅ.ಪ. ಉದಯದಲೆದ್ದತಿ ಸಜಮಲಳಾಗಿ ತಾ ಮುದದಿ ಪತಿಗೆ ನಮಿಸದವಳಿಗೆ ಪದುಮಾಕ್ಷಿ ತುಳಸಿಯ ಪೂಜಿಸಿ ಮನದಿ ಮಾಧವನ ಭಕ್ತಿಲಿ ಸ್ತುತಿಸದವಳಿಗೆ ಪದುಮನಾಭನೇ ಸರ್ವಪರನೆಂದು ಅರಿಯದೆ ಅಧಮ ಶಾಸ್ತ್ರವ ಕೇಳಿ ಅದರಂತೆ ನಡೆವಳ 1 ಹರಿದಿನದಲಿ ಉಂಡು ಹರಿಯನ್ನದಲೇ ಊರ ತಿರುಗಿ ಹೊತ್ತು ಕಳೆವಳಿಗೆ ಸರಸದಿ ನರಹರಿ ನಾಮ ಸಂಕೀರ್ತನೇ ಇರುಳು ಜ್ಯಾಗರ ಮಾಡದವಳಿಗೆ ದೊರಕಿದಷ್ಟರಲೇ ತಾ ಹರುಷ ಪಡೆದೇ ಧನ ಪತಿ ಹೊರಗ್ಹಾಕ್ವಳ 3 ಗುರು ಹಿರಿಯರ ಅತ್ತೆಮಾವರ ಜರಿದು ತಾ ಹಿರಿಯಳು ಮನಿಗೆ ನಾನೆನುತಿರ್ಪಳು ಪರರ ನಿಂದಿಸಿ ಭೂಸುರರು ಬಂದರೆ ಅನ್ನ ದೊರಕದೆನುತ ಹೇಳಿ ಕಳಹುವಳ ಸರಸ ಮೃಷ್ಟಾನ್ನವ ಹರುಷದಿ ಪತಿದ್ವಾರಾ ಹರಿಗರ್ಪಿಸದಲೇ ತ್ವರದಿ ತಾ ತಿನ್ವಳ 3 ಪತಿ ಅಂತರ್ಯಾಮಿ ಶ್ರೀ ಪತಿಯನರಿದು ತನ್ನ ಪತಿಯ ಸೇವೆ ಮಾಡದಿರುವಳಿಗೆ ಪತಿ ಮುಕ್ತಿ ಪಥವೆಂದು ಪತಿಹಿತದವನೆಂದು ಅರಿಯದೇ ಪತಿ ನೋಡ್ವಳಿಗೆ ಪತಿಯಿಂದಲಂಕೃತವಾಗಿಹ ಮಂಗಳಸೂತ್ರವೇ ಸಕಲ ಭೂಷಣವೆಂದರಿಯದವಳಿಗ್ಹಾಂಗೆ 4 ಪರಮ ಅತ್ತೆಯ ಮಾತು ಶಿರದಿ ಸ್ವೀಕರಿಸಿ ಐವರ ಕೂಡ ಧಾರೆಯರೆಸಿಕೊಂಡಾ ಪರಮ ಪಾವನಳಾದ ಭಾರತೀ ದೇವೇರ ಸ್ಮರಿಸದೇ ಅದರಂತಾಚರಿಸದೆ ಇರುವಳಿಗ್ಹ್ಯಾಂಗೆ 5 ವನವಾಸದಲಿ ಪಾಂಡು ತನಯರ ಕೂಡ ತಾ ಧನ ಸುಖ ಬೇಡದೆÀ ಪೋದವಳು ಘನ ಹಸಿವುತೃಷೆಯಿಂದ ಅನ್ನ ಬೇಡಿದ ದುರ್ವಾಸಾದಿಗಳನು ಆದರಿಸಿದವಳಾ ಆಜನನಿ ದೃಪವ ನಂದನಿಯ ಕೃತ್ಯಗಳನ್ನು ನೆನೆದು ತನ್ನಯ ಮನವನ್ನು ತೊಳೆಯದವಳು 6 ಮರುತಂತರ್ಗತ ಸ್ವಾಮಿ ಸಲಹೆನ್ನದೇ ಪರರಿಗೊಂದೆಡೆ ಇಕ್ಕಿ ಪಂಕ್ತಿ ಭೇದವ ಮಾಡಿ ಕರ್ಮ ಮಾಡ್ವಳಿಗೆ ಪರಮ ಪಾವನನಾದ ಹನುಮೇಶವಿಠಲನ ನೆರೆ ನಂಬದಲೇ ದೇಹ ಸ್ಥಿರವೆಂದು ತಿಳಿವಳಿಗ್ಹ್ಯಾಂಗ 7
--------------
ಹನುಮೇಶವಿಠಲ
ಹ್ಯಾಗೆ ಕಾಂಬೆ ನಿನ್ನ ಪಾದವ ಶ್ರೀನಿವಾಸ ಯೋಗಿ ಗಮ್ಯ ರೂಪ ಮಾಧವಾ ರಾಗ ರೋಗ ಸಾಗರಸ್ತನಾಗಿ ಮುಳುಗಿ ಬಾಯ ಬಿಡುವೆ ನಾಗರಾಜಗೊಲಿದ ತೆರದಿ ಬೇಗಲೊದಗಿ ಬಂದು ಕಾಯೊ ಪ. ಮನಸು ಎನ್ನ ವಶಕೆ ಬಾರದೆ ಭಕ್ತಿ ಸಾ- ಧನಗಳೆನಗೆ ಸೇರಿ ಬಾಹದೆ ನೆನಸಿಕೊಳುವ ಕಾರ್ಯ ದೊರೆಯದೆ ಸರ್ವಕಾಲ ತನುವ ಕೆಡಿಸಿ ವ್ಯರ್ಥಮಾಡಿದೆ ಕನಲಿ ಕೂಗುತಿರುವ ಶಿಶುವ ಜನನಿ ಕರದೊಳೆತ್ತುವಂತೆ ಮೂರ್ತಿ ದೋರೊ 1 ಕಲಿಯ ಬಾಧೆಯಿಂದ ನೊಂದೆನು ಮಲಿನ ಮೋಹದೊಳಗೆ ನಿಂದೆನು ತ್ಯಾಜ್ಯವಾದ ಫಲಗಳೆಲ್ಲ ತಂದು ತಿಂದೆನು ಗಾಳಿಗೆ ಸಿಲುಕಿದೆಲೆಯ ತೆರದಿ ಹೊರಲುಗಾಣೆನೀ ದೇಹ ಪಾದ ನೆಳಲ ಬಯಸಿ ಬೇಡಿಕೊಳುವೆ 2 ಗಣನೆಯಿಲ್ಲವಾದ ಮರಗಳು ಇರಲು ಪುರು ತನುವಿನಂತೆ ಮುಖ್ಯವಾವದು ಅನುಭವಾತ್ಮ ಸುಖವನೀವದು ಆದರೇನು ಕನಸಿನಂತೆ ಕಾತಿರುವುದು ಪಾದ ವನಜಯುಗವನಿತ್ತು ಎನ್ನ ಮನದೊಳದಯವಾಗು ಮಾರಜನಕ ಮೂಡಲದ್ರಿವಾಸ3
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ