ಒಟ್ಟು 2767 ಕಡೆಗಳಲ್ಲಿ , 121 ದಾಸರು , 1936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಕ್ಕವನೇನೆ ಮಿಕ್ಕಾದಂಥ | ಮಕ್ಕಳಿಲ್ಲೇನೆ, ನಿಮ್ಮವರೊಳು ||ದಿಕ್ಕಿಲ್ಲವೇನೆ, ಇವಗೆ ತಕ್ಕ |ಬುದ್ಧಿಯ ಕಲಿಸುವವರಿನ್ನು ಪ ತಂಡ ತಂಡದಿ ಬರುತಿಹ ನಮ್ಮನ |ಕಂಡು ಆಡುವ ಆಟಕಿಯ ಬಿಟ್ಟು ||ಚೆಂಡು ಪುಟಿದು ಬಂತು ಬಚ್ಚಿಟ್ಟಿರ್ಯಾಕೆಂದು |ದುಂಡ ತೋಳಗಳೆತ್ತಿ ಭಂಡು ಮಾಡುವನಿವ 1 ಶಿಶುವೆಂದು ಎತ್ತಪ್ಪಿಕೊಂಡು ಮುದ್ದಿಡಲು |ದಶನಗಳಿಂದಧರ ನೋಯಿಸಲು ||ಆಶೆಯಲಸುವ ಪೀರಿದವನಿವನೆಂದಂಜಿ |ಸೊಸಿಯನ್ನಬ್ಬರಿಸಿ ಬೀದಿಯೊಳಂದು 2 ಆರಿಲ್ಲದಾಗೊಬ್ಬವನನ್ನು ಬಾಲಕನೆಂದು |ದ್ವಾರವಿಕ್ಕಿ ನೀರೆ ಮೇಲಿರಿಸಿ ||ಬಾರಯ್ಯ ಮುದ್ದು ಕೊಡಯ್ಯ ಎನೆ ಹದಿ- |ನಾರು ವರುಷದವನಾದ ರುಕ್ಮಭೂಷಾ 3
--------------
ರುಕ್ಮಾಂಗದರು
ಚಿಂತಾಮಣಿಗಮಿತ ಚಿಂತಾಮಣಿ ಚಿಂತಲವಾಡಿ ಶ್ರೀ ನೃಸಿಂಹಸ್ವಾಮಿ ಪ ಕಂತುಪಿತ ಕೊಟ್ಟರುವ ಸಾಮಥ್ರ್ಯದಿಂದಲೇ ಐಹಿಕ ವಸ್ತುವೀವುದು ಅನಂತ ಶ್ರೀಪತಿ ಚಿಂತಲವಾಡಿ ಕರುಣಿ ಸ್ವ - ತಂತ್ರನು ಇಹಪರದಿ ಐಶ್ವರ್ಯವ 1 ಕಾಕುಮನ ವಾಕ್ಕಾಯ ಶುದ್ಧ ಮಾಡುವ ದೇವಿ ಶ್ರೀ ಕಾವೇರಿ ತೀರದಲಿ ಕುಳಿತು ಸರ್ವ ಭಕುತರಿಗೆ ವರವೀವ ಶ್ರೀಕಾಂತ ನರಸಿಂಹ ಸುಖಜ್ಞಾನಮಯ ದೋಷದೂರ ಗುಣನಿಧಿಯು 2 ಮಮಕಾರ ಅಹಂಕಾರ ಡಂಭತನವನು ಬಿಟ್ಟು ಮಮಸ್ವಾಮಿ ಸರ್ವರಿಗೂ ಪರಮೈಕಸ್ವಾಮಿಯು ಸುಮನಸಾರ್ಚಿತ ಕುಸುಮಸಂಭವನ ತಾತನು ರಮಾಪತಿ ಪ್ರಸನ್ನ ಶ್ರೀನಿವಾಸ ನಮೋ ಎನ್ನಿ 3
--------------
ಪ್ರಸನ್ನ ಶ್ರೀನಿವಾಸದಾಸರು
ಚಿಂತೆ ಮಾಡುವುದ್ಯಾಕೆ ಮನವೆ ನೀನು ಕರ್ಮ ಎಂದಿಗಾದರೂ ಬಿಡದು ಪ ಮಗÀನಾರು ನೀನಾರು ಪೇಳೊ ಸಿದ್ಧ ನಿಗಮಾರ್ಥಗಳಿಂದ ಸಜ್ಜನರ ಕೇಳೊ ತಗಿದು ಕಳಿ ಶೋಕದ ಗೋಳು ನಿತ್ಯ ನಗಧರನ ಭಕ್ತಿಯಲಿ ಸುಖದಲ್ಲಿ ಬಾಳೋ 1 ಸಾಹನಶಕ್ತಿಯನ್ನು ಮಾಡೊ ಬರಿದೆ ಸ್ನೇಹ ಮಾಡಿದರಿಂದ ಜ್ಞಾನಕ್ಕೆ ಕೇಡು ತಾಹಾದು ಸ್ಥಿರವೆಂದು ನೋಡೊ ನೀನೂ ಮಾಹಪದವಿಗೆ ಬಂದೆ ಸುದೃಢವೆ ಬೇಡು2 ವಿರಕ್ತಿ ತೊಡು ತೊಡು ಬಿಡದೆ ಎಂದು ಸಾರಿದೆ ಪೇಳಿ ಧರ್ಮದಲಿನ್ನು ನುಡಿದೆ ವಾರವಾರಕೆ ಹೀಗೆ ಕೆಡದೇ ಶ್ರಿಂ ಗಾರ ಶ್ರೀ ವಿಜಯವಿಠ್ಠಲಲೆನ್ನು ದು:ಖಬಡದೆ 3
--------------
ವಿಜಯದಾಸ
ಚಿಂತೆಯಾತಕೆ ಮನವೆ ಗುರುಗಳ ಪಾದ ಚಿಂತನೆಯನು ಮಾಡದೆಪ ಸಂತತ ಬಿಡದಲೆ ಚಿಂತನೆ ಮಾಳ್ಪರ ಅಂತರಂಗವ ತಿಳಿವರು ಗುರುವರರು ಅ.ಪ ಉದಯ ಕಾಲದಲಿವರ ಧ್ಯಾನವ ಮಾಡೆ ಮದಗರ್ವ ಪರಿಹರವು ಮುದದಿಂದ ಮೂರು ವೇಳೆಗಳಲ್ಲಿ ಸ್ಮರಿಸಲು ಹೃದಯ ತಾಪವ ಕಳೆವರು ಗುರುವರರು1 ದೇಶದೇಶವ ತಿರುಗಿ ತನುಮನಗಳ ಬೇಸರಗೊಳಿಸಲೇಕೆ ಪೋಷಿಪ ಗುರುಗಳಪಾದ ನಂಬಿದ ಮೇಲೆ ವಾಸುದೇವನೆ ನಲಿವ ಮುಂದೊಲಿವ 2 ವೇದವಾದಿಗಳೆಲ್ಲರೂ ವಾದವ ಮಾಡಿ ಮಾಧವನನು ಕಾಣಿರೊ ಮೋದತೀರ್ಥರ ಮತಬೋಧನೆ ಮಾಡುವ ಸಾಧು ಗುರುಗಳನೆ ಕೂಡು ಸಂಶಯಬಿಡು3 ಚಿತ್ತದಿ ಸ್ಮರಿಸುವರು ಹರಿ ಮಹಿಮೆಯ ಭಕ್ತಿಲಿ ನಲಿಯುವರು ಚಿತ್ರಗಾಯನ ನೃತ್ಯಗಾನಗಳಿಂ ಪುರು- ಷೋತ್ತಮನನೊಲಿಸುವರು ಹರುಷಿತರು4 ಕತ್ತಲೆ ಮನೆಗಳಲ್ಲಿ ಅಡಗಿಹ ವಸ್ತು ಲಕ್ಷಪರಿಮಿತಿ ಇದ್ದರು ಹಸ್ತದಿ ಜ್ಯೋತಿಯನೆತ್ತಿ ತೋರುವ ಪರಿ ಭಕ್ತರ ಸಲಹುವರು ಗುರುವರರು 5 ಸರಸೀಜಾಕ್ಷನ ನಾಮವು ಹಗಲಿರುಳು ಬಿಡದೆ ಧ್ಯಾನಿಸುತಿರ್ಪರು ಸಿರಿನಾರಾಯಣನನ್ನು ಸ್ಮರಿಸುತ್ತ ಮನದೊಳು ಪರಮಸಂಭ್ರಮ ಪಡುವರು ಗುರುವರರು 6 ಕರುಣದಿ ಸಲಹುವರು ಶಿಷ್ಯರ ಮನ ವರಿತು ವರಗಳನೀವರು ವರ ಕಮಲನಾಭವಿಠ್ಠಲನ ಧ್ಯಾನಿಪಉರಗಾದ್ರಿವಾಸ ವಿಠ್ಠಲದಾಸರನೆ ನಂಬು7
--------------
ನಿಡಗುರುಕಿ ಜೀವೂಬಾಯಿ
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ಚಿನ್ಮನೆಂದುಪೇಕ್ಷಿಸದೇ ದತ್ತಾತ್ರೇಯಾ ಪ ಸರಸಿರುಹ ಸಖ ಶತಕೋಟಿ ತೇಜಾ ಪರಭಕ್ತ ಜನ ಸುರ ಭೂಜಾ ಕರುಣಾ ಸಾಗರ ಅತ್ರಿ ತನುಜಾ ಮೊರೆ ಹೊಕ್ಕವರ ರಾಜಾಧೀರಾಜಾ 1 ಪತಿತ ಜನರ ಮಾಡುತಿಹೆ ಉದ್ಧಾರಾ ಚತುರ್ದಶ ಭುವನಾಧಾರ ಅತಿಕೀರ್ತಿ ಸು ಶೋಭಿತ ದಿಗಂಬರಾ ನುತಗುಣ ಮಂಡಿತ ಮುನಿ ಮನೋಹರಾ 2 ಪರಮ ಪುರುಷ ಸದ್ಗುರು ಸಿರಿಲೋಲಾ ಸರಸಿಜ ನೇತ್ರ ದಯಾಳಾ ಧರಿಯೊಳನೇಕ ರೂಪವ ದೋರ್ಪೆ ಘನಲೀಲಾ ಗುರುವರ ಮಹಿಪತಿ ನಂದನ ಪಾಲಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಿರಶಾಂತಿಯ ಪಡೆವುದಕೆ ಮನ ತ್ಯಾಗಮಾಡು ಜೀವಾ ಮನವೇ ಭವಬಂಧನಕೆ ಘನಕಾರಣವೈ ಜೀವಾ ಪ ತಿಳಿ ಈ ಮನದಾ ನಾಶಾ ಆದಾಗಲೆ ನಿಜಮುಕುತಿ ಮನ ಮೋಕ್ಷದ ಸಾಧನವೈ ಅನುಮಾನಿಸದಿರು ಜೀವಾ 1 ಮನವಿಲ್ಲದ ಆ ಸ್ವರೂಪ ಅದು ತಾನೆ ನಿರ್ವಿಕಲ್ಪ ಅದೆ ನಾನಿಹೆನೆಂದರಿಯೈ ಇದೆ ಮನದ ತ್ಯಾಗ ಜೀವಾ 2 ಪರಮ ಪದ ಆನಂದ ವೇದಾಂತದ ಘನಬೋಧಾ ಗುರುಪುಂಗವ ಶಂಕರನಾ ಪರಮಾರ್ಥ ಬೋಧಸಾರ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಚೈತ್ರದುತ್ಸವ ಗೀತೆ ಚೈತ್ರಮಾಸದ ಕೃಷ್ಣಪಕ್ಷ ಷಷ್ಠಿಯಲಿ ಕಟ್ಟಿ[ದರು] ಕಂಕಣವನು ಸೃಷ್ಟಿಗೀಶ್ವರಗೆ ಪ. ಮೊದಲು ದಿವÀಸದಿ ಧ್ವಜಪಟವನೇರಿಸಿ ಸುರರು 1 ಯಾಗಶಾಲೆಯ ಪೊಕ್ಕು ಯಾತ್ರದಾನವ ಬೇಡಿ ಸೂತ್ರ ಧರಿಸಿದರು 2 ಸರ್ಪಮೊದಲಾದ ಅಲ್ಲಿರ್ಪ ವಾಹನವೇರಿ ಕಂ ದರ್ಪನಪಿತ ಬಂದ ಚಮತ್ಕಾರದಿಂದ 3 ಬೆಂಡಿನ ಚಪ್ಪರ ಬೆಳ್ಳಿಕುದುರೆಯನೇರಿ ಪುಂಡರೀಕಾಕ್ಷ 4 ರೇವತಿ ನಕ್ಷತ್ರದಲಿ ಏರಿ ರಥವನ್ನು [ತಾ] ವೈಯ್ಯಾರದಿಂದಲೆ ಬಂದ ವಾರಿಜನಾಭ 5 ಗೋವಿಂದ ಗೋವಿಂದಯೆಂದು ಪ್ರಜೆಗಳು [ತಾವಾ]ನಂದದಿಂದ ನೋಡಿ ಪಾಡುತ್ತ 6 ಗೋವುಗಾಣಿಕೆಯನ್ನು ಗೋಪಾಲರು ತಂದು ನೀ ಲಾವರ್ಣನಿಗಿತ್ತರು ನೇಮದಿಂ ಪೂಜೆಯ 7 ಧ್ವಜಮಂಟಪದಲ್ಲಿ ಹರಿಭಜನೆಗಳ ಮಾಡು[ತ್ತಿರೆ] ಭುಜಗಶಯನನು ವರವಿತ್ತು ಕಳುಹಿದನು 8 ಸಪ್ತಾವರಣವ ಸುತ್ತಿ ತೀರ್ಥವನಿತ್ತು ಅರ್ಥಿಯಿಂದಲೆ ಬಂದ ಭಕ್ತವತ್ಸಲನು 9 ಬೊಂಬೆ ಅಂದಣವೇರಿ[ದ] ಅಂಬುಜನಾಭ ಕುಂಭಿಣಿಗಧಿಕವೆಂತೆಂಬ ಶ್ರೀರಂಗ 10 ಚಿತ್ರರಥ[ದ] ವಿಚಿತ್ರಮೂರುತಿಯ ನೋಡಿ ಪ ವಿತ್ರರಾದರು ಧಾತ್ರಿ[ಯ] ಉತ್ತಮರೆಲ್ಲ 11 ಬಂದ ಪ್ರಜೆಗಳು ಎಲ್ಲ ಆನಂದದಿ ಪೋಗೆ ಬಂದು ಆಸ್ಥಾನದಿ ನಿಂದ ಶ್ರೀರಂಗ 12 ಸೃಷ್ಟಿಯಲಿ ಪುಟ್ಟಿದ ದುಷ್ಟಪ್ರಾಣಿಗಳ [ನೆಲ್ಲ] ಶ್ರೇಷ್ಠ ಮಾಡಲಿ [ನಮ್ಮ] ವೆಂಕಟರಂಗ 13
--------------
ಯದುಗಿರಿಯಮ್ಮ
ಚೋದ್ಯ ಚೋದ್ಯ ಸರ್ವದ ವೇದ ವೇದ್ಯ ನಂಬಿದ ಭಕ್ತ ಜನರಿಗಾಗುವ ಸುಖಸಾಧ್ಯ ಪ. ಶ್ರೀ ಮಹೀಶ ಸತ್ಯಭಾಮೆಯರರಸ ಸು- ಧಾಮ ತಂದವಲಕ್ಕಿ ಪ್ರೇಮದಿಂದಲಿ ಮೆದ್ದ 1 ಅಂಡಜವಾಹ ಬ್ರಹ್ಮಾಂಡಗಣಾತತ ಪಾಂಡುಕುವರನಿಗಾದನು ಭಂಡಿಸೂತ 2 ಆದರೀ ಕೃತಮಾಯ ಕೃತ್ಯಕದಂಡ ಸ- ನ್ಮುದದಿಂದ ವಿದುರನ ಮನೆಯ ಪಾಲುಂಡ 3 ಶ್ರೀವರೀವರಿಯಿಂದ ಸರಸಮಾಡುತಲಿರೆ ಗೋಪಿಯರಿಗೆ ಮೆಚ್ಚಿ ಗೋವುಗಳ ಕಾಯ್ದ 4 ಗೊಲ್ಲರ ಹುಡುಗರ ಪೆಗಲೇರಿ ಮೆರೆದ 5 ಘೋರ ಸಂಸಾರಪಹಾರಿ ನಾರದ ವಂದ್ಯ ಜಾರ ಚೋರ ಕೃತ್ಯ ತೋರಿದ ವರದ 6 ಮಾನವ ದೈತ್ಯ ಗಣರಿಗಾಧಾರ ಮ- ತ್ತಾವ ಕಾಲಕು ಭೇದಭೇದವ ಸೇರಾ 7 ತೇಜಸ್ತಿಮಿರಾದಿ ಸೋಜಿಗ ಶಕ್ತಿಮ- ಹೋಜಸನೀತ ಪರಾಜಯ ರಹಿತಾ 8 ಪರದೇಶಿಯ ಮೇಲೆ ಕರುಣ ಕಟಾಕ್ಷದಿ ಸಿರಿಯೊಡಗೂಡಿ ಬಂದಿರುವ ಶೃಂಗಾರ 9 ಸರ್ವಕಾಲದಿ ತನ್ನ ನೆನವಿತ್ತು ದುಷ್ಕøತ ಪರ್ವತಗಳ ಪುಡಿ ಮಾಡುವ ಧೀರ 10 ತನಯನ ಕಲಭಾಷೆ ಜನನಿ ಲಾಲಿಸುವಂತೆ ಸಾರ 11 ಪೋರಭಾವವ ಶುಭವೇರಿಸುವನು ತುಷ ವಾರಿಯು ಗಂಗೆಯ ಸೇರುವಾಕಾರ 12 ವಿದ್ಯ ಬುದ್ಧಿಗಳಿಲ್ಲದಿದ್ದರು ದಾಸರ ನಿರವದ್ಯ ಬೇಗದಲಿ 13 ಸನ್ನುತ ಕರ್ಮವ ಮನ್ನಿಸನೆಂದಿಗು ಮುರನರಕಾರಿ 14 ಚಿಂತಾಕ್ರಾಂತಿಗಳಿರದಂತೆ ಸರ್ವದ ನಿ- ರಂತರ ಪೂಜೆಗೊಂಬರ ಚಕ್ರಧಾರಿ 15 ನಿರುಪಮಾನಂದ ನಿರ್ಭರ ಪುಣ್ಯಮೂರ್ತಿ ಶ್ರೀವರ ಶೇಷ ಭೂಧರವರನ ಸತ್ಕೀರ್ತಿ 16
--------------
ತುಪಾಕಿ ವೆಂಕಟರಮಣಾಚಾರ್ಯ
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಛೀ ಛೀ ಛೀ ಛೀ ಪ ಬಿಟ್ಟು ಕೊಡೋ ನೀ ಸಂಸಾರ ಭ್ರಾಂತಿ | ಎಷ್ಟು ಸೋಸುವಿ ದುಃಖದ ಪಂಥಿ | ಅಷ್ಟು ಪಾಶದೀ ಬಿಗಿದಿಹ ಗ್ರಂಥಿ | ಕಷ್ಟ ಪಟ್ಟಿನ್ನು ಮಾಡುವಿ ಚಿಂತಿ 1 ಸತಿ ಸುತರೆಲ್ಲಾ | ಘನ್ನಸ್ನೇಹವ ಮಾಡುವರಲ್ಲಾ | ಧನ ಯೌವನ ಕೊರತ್ಯಾಗಿ ಸೊಲ್ಲಾ | ತೃಣ ಸಮಮಾಡಿ ಬಗೆವರು ಖುಳ್ಳಾ 2 ಹಳೆದಾಯಿತು ತಾಳಿದ ಕಂಥೀ | ಬಲವಿಂದ್ರಿಯ-ವಾದವು ಶಾಂತಿ | ಬಲು ನೆರೆಯಿತು ರೋಗದ ಸಂತಿ | ಕೆಳಗಾಯಿತು ಪೌರುಷ ಖಂತಿ 3 ಹಿರಿಕಿರಿಯರು ಸರಿಕರು ನಿನ್ನಾ | ಸರಿದ್ಹೋಗುದು ಕಾಣಲಿಲ್ಲÁ ಕಣ್ಣÁ | ಅರಿತು ವಿವೇಕವ ಪಡಿಯದೆ ಘನ್ನಾ | ಮರೆದಾಗುರೆ ನೀ ಮಸಿಮಣ್ಣಾ 4 ಒಂದಾಗಲು ಮತ್ತೊಂದಾಶೆ | ಸಂಧಿಸುವದು ವಾಸನೆ ಸೂಶಿ | ತಂದೆ ಮಹಿಪತಿ ನಂದನು ಹೇಸಿ | ಇಂದು ಸಾರಿದಾ ಹರಿನಾಮ ಸ್ಮರಿಸಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಛೀ ಯಾತರ ಬುದ್ಧಿ | ಸೊಕ್ಕಿನ ಮಾತಿಲಿ ಬಲು ನÉೂಂದಿ ಪ ಗುರುಹಿರಯರ ಅನುಸರಿಸದೇ | ಹರಿಚರಣವ ಕೊಂಡಾಡದೇ | ಬರಡಾ ನಾಲಿಗೆ ಮಾಡಿದಿ ಬರಿದೇ 1 ವಳ್ಹವ ಹೊಲ್ಲವರಿಯದೇ | ಯಳ್ಳಿನಿತು ನೀ ವಿಚಾರಿಸದೇ | ನಿಲ್ಲದೇ ಮಾಡುವಿ ಬಗಳುವದೇ 2 ಕೆಂಡವ ಕಂಡು ನೆರೆ | ಮಂಡಿಯಾ ತುರಿಸುವರೆ | ತುಂಡತನ ಗುಣ ಬಿಡು ಇನ್ನಾರೆ 3 ಪೊಡವಿ ದೇವತೆಯ ಕೋಣಾ | ಯಡಬಲ ನೋಡದಿರಲೇನು | ಕಡೆಯಲಿ ಕೆಡುವರು ಒಂದಿನಾ 4 ಮಹಿಪತಿಸುತ ಪ್ರಭು ದಾಸರ ಕೈ | ಅಹುದೆನಿಸಿಕೊಂಬುದೆ ಸ್ವರ್ಗಯ್ಯ | ವಿಹಿತಲ್ಲೆಂಬುದೇ ನರ್ಕದಾಶ್ರಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ ಪ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ 1 ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ 2 ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ 3 ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು 4 ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ 5 ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು 6 ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ 7
--------------
ಕನಕದಾಸ
ಜಂಗಮರು ನಾವು ಲಿಂಗಾಂಗಿಯಾರುಮಂಗಳಾವಂತರು ಭವಿಗಳಂತಲ್ಲಾ ಪ ಶಿವ ಗುರುದೈವ ಕೇಶವ ನಮ್ಮ ಪರದೈವಭುವನ ಜೀವನ ನಮ್ಮ ಗುರು ಶಾಂತನೂ ||ಶಿವನ ದ್ರೋಹವ ಮಾಡುವನೆ ಅಪರಾಧಿಅವನೆ ಅದ ತಿಳಿಯುವನು ಶ್ರುತಿ ಸಮ್ಮತಾ 1 ಮಜ್ಜನ ಉಂಟುಸೌಭಾಗ್ಯವಿಹ ಮಹಾಂತನ ಮಠದವರೂ 2 ವಿರಕ್ತರಾವು ಸುಶೀಲವಂತರು ನಾವುವೀರಭದ್ರನ ಪ್ರೀಯ ಭಕ್ತರಾವೂ ||ಕಾರಣಾ ಕರ್ತ ಶ್ರೀ ಮೋಹನ ವಿಠಲನೆಕಾರುಣ್ಯ ಮಾಡು ದಮ್ಮಯ್ಯ ಎಂಬುವರಾವು 3
--------------
ಮೋಹನದಾಸರು