ಒಟ್ಟು 5861 ಕಡೆಗಳಲ್ಲಿ , 131 ದಾಸರು , 3745 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಪೇಳಲಿ ಹರಿಯ ಚರ್ಯ ಎಂತು ಪೊಗಳಲಿ ಪ ಗಾನಲೋಲ ಜ್ಞಾನಪೂರ್ಣ ಶ್ರೀನಿವಾಸನ ಅ.ಪ ಭಾರ ಪೊತ್ತನ ಖಳನ ಮಡುಹಿ ವೇದರಾಶಿ ಅಜಗೆಯಿತ್ತನ 1 ಕರದಿಕೊಡಲಿ ಪಿಡಿದು ಅಡವಿ ಚರಿಸಿದಾತನ 2 ಪುಣ್ಯ ಮೂರುತಿ ಕಲ್ಕಿ ಗುರುರಾಮವಿಠಲನ 3
--------------
ಗುರುರಾಮವಿಠಲ
ಏನು ಬಂದ್ಯೋ ಜೀವವೆ ಶರೀರದೊಳು ವ್ಯರ್ಥವಾಗಿಪ. ದಾನಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞÁನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳಸನ್ನಿಧಿಯಲ್ಲಿರಲಿಲ್ಲ ನಿರ್ಮಲಮನದಲಿ ಒಂದುದಿನವಿರಲಿಲ್ಲ 1 ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲಯತಿಯಾಗಿ ತೀರ್ಥಯಾತ್ರೆ ಮಾಡಲಿಲ್ಲಶ್ರುತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲಮೃತವಾಗೋಕಾಲ ಬಂತು ಬರಿದೆ ಮುಪ್ಪಾದೆನಲ್ಲ 2 ಉಂಡು ಸುಖಿ ಅಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆಮೊಂಡಜೋಗಿಗುಣಂಗಳ ಬಿಡಿಸೊ ಹಯವದನ 3
--------------
ವಾದಿರಾಜ
ಏನು ಬರುವುದೊ ಸಂಗಡೇನು ಬರುವುದೊ ಪ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜಅ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ1 ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ2 ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು ಮಾಡಿ ಹೊತ್ತುಗಳೆವರುಸತ್ತರಿಲ್ಲ ಅತ್ತರಿಲ್ಲ ಹೊತ್ತುಕೊಂಡು ಹೋಹರಿಲ್ಲಿಮತ್ತೆ ದೇಹ ಮಣ್ಣುಗೂಡಿದಂತೆ ಕೆಡಲು ಬೇಡ ಮನುಜ3 ಬಟ್ಟೆ ನಿನಗೆ ಹೊಂದಲಿಲ್ಲಕಟ್ಟ ಕಡೆಗೆ ದೃಷ್ಟಿ ನೋಟ ಬಟ್ಟ ಬಯಲು ಆಗುತಿಹುದು 4 ಕಾಲ ಕಳೆದೆ - ಮುಂ-ದರಿದು ನೋಡು ನರರ ತನುವು ದೊರಕಲರಿಯದುನೆರೆ ಮಹಾಮೂರ್ತಿ ಒಡೆಯ ಬಾಡದಾದಿಕೇಶವನಲಿಟ್ಟು ಭಕುತಿಚರಣ ಭಜಿಸಿ ಚಂಚಲಳಿಸಿ ವರವ ಪಡೆದು ಹೊಂದು ಮುಕುತಿ 5
--------------
ಕನಕದಾಸ
ಏನು ಬಲ್ಲಿದನೋ ಹನುಮಂತ ನೀನು ಏನು ಬಲ್ಲಿದನೋ ಪ ಏನು ಬಲ್ಲಿದನಯ್ಯ ನೀನು ಜ್ಞಾನಮೂರುತಿ ಜಾನಕೀಶನ ಧ್ಯಾನ ಸುಖಸಾಮ್ರಾಜ್ಯದಲ್ಲಿ ಲೀನನಾಗಿ ಸುಖಿವೆ ಬಲವಂತ ಅ.ಪ ಶರಧಿ ಜಿಗಿದವನೋ ಭರದಿ ದುರುಳನ ಪುರವ ಸೇರಿದನೋ ನಿರುತ ದೊರೆಮಾತೆ ದರುಶನಾದನವನೋ ಪರಮವೀರನೋ ಧರೆಯ ಮಾತೆ ಕೃಪಾಪಾತ್ರನಾಗಿ ಪರಮಪಾವನ ವರವ ಪಡೆದು ಮರಳಿ ದುರುಳನ ವನವ ಸೇರಿ ಧುರವ ಜೈಸಿದಿ ಧೀರಮಾರುತಿ 1 ತಿರುಗಿ ಅಂಗದನ ಬಲವನ್ನು ಸೇರಿ ಸಾರ ಕಥನವನ್ನು ಅರುಹಿ ಮುಂದೆ ಪರಮಪಾವನನ ಚರಣಕಂಡಿನ್ನು ಇರಿಸಿ ಹರಿಯಾಜ್ಞಂಗೀಕರಿಸಿ ತ್ವರದಿ ದಕ್ಷಿಣಶರಧಿ ಹೂಳಿಸಿ ಭರದಿ ಲಂಕೆಗೆ ಮುತ್ತಿಗಿತ್ತಯ್ಯ 2 ಬುದ್ಧದೇಹದ ಕುಂಭಕರ್ಣನ ಕ್ಷುದ್ರ ಇಂದ್ರಜಿತುನ ಮತ್ತವನ ತಂದೆ ಬುದ್ಧಿಹೀನನ್ನ ಹತ್ತು ತಲೆಯವನ ಯುದ್ಧದಿಂದ ಬದ್ಧರಕ್ಕಸ ರೊದ್ದು ಬೇಗನೆ ಛಿದ್ರ ಮಾಡಿ ಜ ಗದ್ರಕ್ಷ ಶ್ರೀರಾಮ ಪಾದಪದ್ಮಕ್ಕೆ ಮುದ್ದು ಮುಖಿಯನು ತಂದುಕೊಟ್ಟೆಯ್ಯ 3
--------------
ರಾಮದಾಸರು
ಏನು ಮಹಿಮರೊ ನಮ್ಮ ಶ್ರೀ ಗುರುಗಳು ಶ್ರೀನಿಧಿಗೆ ಪರಮ ಪ್ರಿಯರೆನಿಸಿ ಮೆರೆಯುವರು ಪ. ಶಾಂತತ್ವವೆಂತೆಂಬ ಕವಚವನೆ ತೊಟ್ಟಿಹರು ದಾಂತತ್ವದಾ ನಡುಕಟ್ಟು ಕಟ್ಟಿಹರು ಸಂತೋಷ ಸುಖದಲಿ ಅಂತರಂಗದಿ ಹರಿಯ ಚಿಂತನೆಯ ಮಾಡುತಲಿ ಮುಕ್ತಿಪೊಂದಿಹರು 1 ವೈರಾಗ್ಯವೆಂತೆಂಬ ಆಯುಧವ ಧರಿಸಿಹರು ಸೇರಿದವರನು ಪೊರೆವ ಕಂಕಣವ ಕಟ್ಟಿ ನಾರಸಿಂಹನ ನಾಮ ಕರ್ಣಭೂಷಣ ಧರಿಸಿ ನಾರಾಯಣನ ಗುಣದ ಹಾರ ಧರಿಸಿಹರು 2 ಪರರಿಗುಪಕಾರವನೆಸಗುವ ಭುಜದ ಕೀರುತಿಯು ವರತತ್ವ ಅರುಹುವ ವನಮಾಲಿಕೆಯು ಸಿರಿ ಭಕ್ತಿಗುಣಗಳೆಂತೆಂಬೊ ವಸನಗಳು ಧರಿಸಿರುವ ಮಹಿಮರ ಸರಿಗಾಣೆ ಜಗದಿ 3 ಕುಂದದೆ ಭಕ್ತರನು ಪೊರೆಯುವ ಭಾರದ ಅಂದದಾ ಮುಕುಟ ಶಿರದಲ್ಲಿ ಧರಿಸಿ ತಂದೆ ಮುದ್ದುಮೋಹನದಾಸರೆಂದೆನಿಸುತ ಮಂದಜ್ಞ ಮನ ಪಾಪ ಪಾದುಕೆಯ ಮೆಟ್ಟಿಹರು 4 ಎಷ್ಟು ಹೇಳಲು ಸಾಧ್ಯ ಶ್ರೇಷ್ಠ ಗುರುಗಳ ಚರಿತೆ ಪಟ್ಟವಾಳ್ವರು ಜ್ಞಾನ ಸಾಮ್ರಾಜ್ಯವ ಕೆಟ್ಟ ಭವರೋಗವನು ಸುಟ್ಟು ಭಸ್ಮವ ಮಾಡಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ತೋರ್ವರು5
--------------
ಅಂಬಾಬಾಯಿ
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನು ಮಾಡಿದರೇನು ಫಲವೊ ಪ ನೀನು ಮಾನಸ ವೃತ್ತಿ ತಿದ್ದುವತನಕ ಅ.ಪ ಪೂಜೆ ಮಾಡಿದರೇನು ತೇಜಸ್ವಿ ಇರಲೇನು ರಾಜಧಿರಾಜ ಸಂಪೂಜ್ಯನೆನಿಸಲೇನು ರಾಜತಾಸನದಲ್ಲಿ ಕುಳಿತರೂ ರಾಜಿಸದ ಮಾನಸದ ವೃತ್ತಿಯು ಜೂಜಿನಲಿ ಪಣ ಕಟ್ಟಿದಂತಿದೆ 1 ಭಾರಿ ಪಲ್ಲಕ್ಕಿಯ ಏರಿದ ಅನುಭವ ನೂರು ಜನರು ಸ್ತುತಿ ಕೇಳಿದ ಅನುಭವ ಕೀರುತಿಯ ಪರಮಾವಧಿಯನು ಸೇರಿದೆನು ನಾನಿನ್ನ ಕರುಣದಿ ತೂರುವಂದದಿ ತೂರುತಿಹುದೊ 2 ವರಗಳ ಕೊಟ್ಟಾಯ್ತು ಹಿರಿಯನೆಂದೆನಿಸ್ಯಾಯ್ತು ಅರಿತು ಶಾಸ್ತ್ರಾರ್ಥವ ಗುರುತನ ಪಡೆದಾಯ್ತು ಮನದಲಿ ತೋರುತಿಹುದೋ ಕರದಲಿರುವ ಪ್ರಸನ್ನನೇ ಹೃತ್ಸರಸಿಜದಿ ನೆಲಿಸೆಲೊ ನಿರಂತರ 3
--------------
ವಿದ್ಯಾಪ್ರಸನ್ನತೀರ್ಥರು
ಏನು ವೈಭವವೊ ಶ್ರೀನಿವಾಸ ಧೊರೆಯೆನಿನ್ನದೇನು ವೈಭವವೊ ಪ ಸಿರಿಯು ತಾನೆ ನಿಂತು ನಿನ್ನನಿರುತ ಸೇವೆ ಗೈಯ್ಯುತಿಹಳೊಸರಸಿಜಾಸನಾದಿ ಸುರರುಕರವ ಮುಗಿದು ತುತಿಸುತಿಹರೂ 1 ನಾಗರಾಯ ದಿವ್ಯಾಸನನಾಗಿ ಹೆಡೆಯ ಛತ್ರ ಪಿಡಿವಯೋಗಿ ನಾರದ ತುಂಬುರಾರುರಾಗ ಮಾಡಿ ಹಾಡುತಿಹರೊ 2 ಗರುಡ ವಾಯು ಸುತರು ನಿನ್ನಪರಮ ವಾಹನರಾಗಿ ಬಹರುಸುರಮುನಿಗಳು ಸಕಲ ನರರುನಿರುತನಾಮ ಜಪಿಸುತಿಹರು 3 ಮಂಗಳ ವಾದ್ಯಗಳು ಮೊಳಗಿಮಂಗಳಾರುತಿಯಾಗಿ ಬೆಳಗಿತಿಂಗಳು ನೇಸರರು ದಿವ್ಯಮಂಗಳ ದೀವಟಿಗರಾಗಿ 4 ಅಮೃತ ನಿನ್ನ ಪಾನತೋರ ಭಕುತರಾಳೆ ಗದಗುವೀರನಾರಾಯಣನೆ ನಿನ್ನದೇನು ವೈಭವವೊ 5
--------------
ವೀರನಾರಾಯಣ
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನು ಸುಕೃತವ ಮಾಡಿ ಜನಿಸಿದಳೊ ಯಶೋದೆ ದೀನಪಾಲಕ ನಿನ್ನ ಮಗನೆಂದು ಮನದಣಿಯೆ ಸೇವಿಪೆಳೊ ಪ. ಅನುದಿನ ಜಪತಪಾನುಷ್ಠಾನದಿಂದಿರುತಾ ಪಾದ ಸೇವಿಪ ಮುನಿಗಳಿಗೆ ದೊರೆಯುವ ವನಜನಾಭನೆ ನಿನ್ನ ವನರುಹಾನನ ನೋಡಿ ದಿನದಿನದಿ ಸುಖಿಸುವ ಘನ ಪುಣ್ಯ ಗಳಿಸಿದಳೋ 1 ದುಷ್ಟರನು ಸಂಹರಿಸಿ ಮೈ ಎಷ್ಟು ನೋವೊ ಎಂದು ದಿಟ್ಟೆ ಬಿಸಿನೀರೆರೆಯುವಳೊ ಇಷ್ಟ ಮೂರುತಿ ನಿನ್ನ ಶ್ರೇಷ್ಠತರ ಆಭರಣ ದಿಟ್ಟ ಕೃಷ್ಣ ನಿನಗಿಟ್ಟು ನೋಡುವಳೊ 2 ಕಸ್ತೂರಿ ತಿಲಕವನು ಶಿಸ್ತಿನಲಿ ಶೃಂಗರಿಸಿ ಕಸ್ತೂರಿರಂಗ ಶ್ರೀ ಶ್ರೀನಿವಾಸ ನಿನ್ನೆತ್ತಿ ತೊಡೆಯಲ್ಲಿ ಸ್ವಸ್ಥದೊಳು ಮಲಗೆಂದು ಪೊಂಬಟ್ಟಲೊಳು ಕ್ಷೀರವನು ಹಸ್ತಿವರದನೆ ಕುಡಿಯೆಂದು ಜೋಗುಳವ ಪಾಡುವಳೊ 3
--------------
ಸರಸ್ವತಿ ಬಾಯಿ
ಏನು ಸುಕೃತವ ಮಾಡಿದಳೊ ಯಶೋದೆಶ್ರೀನಿಧಿಯಾದ ಕೃಷ್ಣನ್ನ ಕರೆದು ಮುದ್ದಿಸುವಳಂತೆಪ ಗಂಗಾಜನಕನಿಗೆ ಗಡಿಗೆನೀರೆರೆವಳಂತೆಮಂಗಳಾಂಗಗೆ ಭಾಮೆ ಶೃಂಗರಿಸುವಳಂತೆತುಂಗ ಭೂಧರನ್ನ ತೊಟ್ಟಿಲೊಳು ತೂಗುವಳಂತೆಕಂಗಳಿಗಗೋಚರನ ಕರೆದಪ್ಪಿಕೊಂಬಳಂತೆ1 ನಗವನೆತ್ತಿದವನ ಮಗುವೆಂದೆತ್ತುವಳಂತೆನಿಗಮಗೋಚರನ ತಾ ನಿಟ್ಟಿಪಳಂತೆಅಗಣಿತ ಸತ್ವನ್ನ ಹಗ್ಗದಿ ಕಟ್ಟುವಳಂತೆಮಿಗೆ ನಿತ್ಯತೃಪ್ತಗೆ ಪಾಲನೆರೆವಳಂತೆ 2 ಬಹುಮುಖನಿಗೆ ಭಾಮೆ ಮುದ್ದುಕೊಡುವಳಂತೆಅಹಿತಲ್ಪನಿಗೆ ಹಾವತುಳಿದೀಯೆಂಬಳಂತೆಮಹಾದೈತ್ಯದಲ್ಲಣನಿಗೆ ಬಹು ಭಯವ ತೋರುವಳಂತೆಮಹಿಮ ನರಸಿಂಹಗೆ ಗುಮ್ಮನ ತೋರುವಳಂತೆ 3 ಚತುರ್ಮುಖಪಿತನ ಸುತನೆಂದೆತ್ತುವಳಂತೆಶ್ರುತಿವಿನುತಗೆ ಜೋಗುಳ ಪಾಡುವಳಂತೆಶತರವಿತೇಜಗಾರತಿಯನೆತ್ತುವಳಂತೆಗತಭೀತನಿಗೆ ಭಾಮೆ ರಕ್ಷೆಯಿಕ್ಕುವಳಂತೆ 4 ಕಡೆಗೋಲ ನೇಣ ಕೈಯಲಿ ಪಿಡಿದೊಲವಿಂದಪಡುಗಡಲತಡಿಯ ದ್ವಾರಕೆನಿಲಯಬಿಡದೆ ನೆಲೆಸಿದ ಹಯವದನ ಮುದ್ದುಉಡುಪಿನ ಕೃಷ್ಣನ ಉಡಿಯೊಳೆತ್ತುವಳಂತೆ5
--------------
ವಾದಿರಾಜ
ಏನು ಸೇವಿಸಿದೆ ಗುರು ಯೆಲೊ ಮಾರುತಿ | ಭಾನು ವಂಶೋತ್ತಮನೆ ನಿರುತ ಧಾರ್ಮಿಕನೆಂದು ಪ ಉದಧಿ | ಭೀತಿ ಇಲ್ಲದೆ ಹಾರಿ ಲಂಕಾಪುರವ ದಹಿಸಿ | ಸೀತೆ ವಾರ್ತೆಯ ತÀಂದು ಪೇಳಿದಕೆ ಸುಫಲಾ 1 ವನಧಿ ಭೂತಳವ ತಿರುಗಿ ಪ್ರತಾಪದಿಂದ | ಗೋತುರೋನ್ನತ ತಂದು ತಡಿಯದೆ ಪ್ರಖ್ಯಾತದಿ | ಸೇತುವಿಯ ಕಟ್ಟಿ ಕುಣಿದಾಡಿದದುಕೇನು ಫಲಾ 2 ಅಂದು ವಿಂಶತಿ ಹಸ್ತ ರಣದೊಳಗೆ ರಥವೇರಿ | ಬಂದಿರಲು ನೋಡಿ ಈ ಧನುರ್ಧಾರಿಯಾ ನಿಂದು ಚಾಲ್ವರಿದು ಬೊಬ್ಬಿರಿದದುಕ್ಕೇನು ಫಲಾ 3 ಒಂದೇ ಹಾರಿಕಿಯಲಿ ಜಿಗಿದು ಕುಪ್ಪಳಿಸಿ ನೀ | ಗಂಧಮಾದನಗಿರಿಯ ಕಿತ್ತು ತಂದು | ಅಂದದಲಿ ದೇವತತಿ ಕೊಂಡಾಡುತಿರೆ ಕಪಿ | ವೃಂದವೆಬ್ಬಿಸಿ ಖಳರ ಮಡುಹಿದದುಕ್ಕೇನು ಫಲಾ 4 ಅಪರಿಮಿತ ಉಪಕಾರ ಮಾಡಿದಲ್ಲದೆ ನಿನ್ನ | ಕೌಪೀನ ಬಿಡಿಸಲಿಲ್ಲಾ | ವನಧಿ ನಿಜವೆಂದು ತುತಿಸಿದದುಕ್ಕೇನು ಫಲಾ 5
--------------
ವಿಜಯದಾಸ
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು
ಏನುಂಟೇನಿಲ್ಲ ಗುರುಕೃಪೆಯಿಂದ ತನುಮನಿಟ್ಟದೇ ಪಡಕೊಂಬುದು ಚಂದ ಧ್ರುವ ಸುಖ ಸುರುತದೆ ನೋಡಿ ಬಲುಬ್ರಹ್ಮಾನಂದ ಪ್ರಕಟಸಲಿಕ್ಕೆ ಬಾರದು ಮುಖದಿಂದ ಸಕಲವೆಲ್ಲಕೆ ಮೇಲು ತಿಳಿಯಬೇಕಿದೊಂದೆ ಶುಕಾದಿ ಮುನಿಗಳದಾರಿದರಿಂದೆ 1 ಸಿದ್ಧ ಬುದ್ಧ್ದರಿಗೆ ಸಾದ್ಯವದೆ ಸಿದ್ಧ ನೋಡಿ ಬುದ್ಧಿವಂತರಿಗೆ ಒಲಿದುಬಾಹುದು ಕೈಗೂಡಿ ಸನ್ಮಾರ್ಗ ಸುಪಥವಿದೆ ಸದ್ಗುರು ಸೇವೆಮಾಡಿ ಸದ್ಭ್ಬಾವದಿಂದಲಿ ಸ್ವಸುಖವೆ ಸೂರ್ಯಾಡಿ 2 ಭಾಸ್ಕರ ಗುರುದಯದವಗಿನ್ನೇನು ಭಾಸುತೀಹ್ಯದಾವಗಿನ್ನು ನಿಜಕಾಮಧೇನು ವಿಶ್ವದೊಳಗವನೊಬ್ಬ ಸಿದ್ಧತಾನು ದಾಸಮಹಿಪತಿಗಿದೇ ಅಭಿನವಧೇನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು