ಒಟ್ಟು 1795 ಕಡೆಗಳಲ್ಲಿ , 107 ದಾಸರು , 1426 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಲ್ಲೆಯರು ನಮೋ ಎಂಬೆವು ಸುರರಎಲ್ಲರ ಬಲಗೊಂಬೆವು ಪ. ಚಲ್ವೆ ಕಂಗಳೆಯರಿಗೆ ಹೊಲ್ಲವು ಎನುತಿರೆಹೊಲ್ಲ ತನವೆಲ್ಲ ಹೊರಗ್ಹಾಕಿ ಬಾಹೊಅ.ಪ. ಅಗಣಿತ ಮಹಿಮ ಹೌದೆಂದುಅಗಣಿತ ಮಹಿಮಎನುತಿರೆಮಗನ ಮುಂದಾಗಿ ಬಲಗೊಂಬೆ1 ಸಾಗರಶಯನಗೆ ಆಗುವ ಹಾಸಿಗೆ ಬ್ಯಾಗನೆ ವರವ ಕೊಡುವೋನುಬ್ಯಾಗನೆ ವರವ ಕೊಡುವ ನಾಗೇಂದ್ರನಮೋ ಎಂಬÉ ನಮ್ಮ ಗೆಲಿಸೆಂದು 2 ನಂದಿವಾಹನ ಶಿವನ ಮುಂದಾಗಿ ಬಲಗೊಂಬೆ ಇಂದಿಗೆ ಪಂಥಗೆಲಿಸೆಂದುಇಂದಿಗೆ ಪಂಥಗೆಲಿಸೆಂದು ಬ್ರಹ್ಮನ ಕಂದನ ಮೊದಲೆ ಬಲಗೊಂಬೆ 3 ಸೌಪರ್ಣವಾರುಣಿ ಅಪರ್ಣ ದೇವಿಯರು ಸೌಕರ್ಯದಿಂದ ನಮ್ಮ ಪಂಥಸೌಕರ್ಯದಿಂದ ನಮ್ಮ ಪಂಥಗೆಲಿಸೆಂದುಕರವ ಮುಗಿವೆವು ಕ್ಷಣಕ್ಕೊಮ್ಮೆ 4 ಇಂದು ರಾಮೇಶನನುಗಾಲ ನೆನೆಯುತ ಮುಂದಕ್ಕೆ ಹೆಜ್ಜೆನಿಡುವೋಣ5
--------------
ಗಲಗಲಿಅವ್ವನವರು
ನವರತ್ನದ ಮಂಟಪದಿ ಮೆರೆವೊ ಸುಖಾಸನಕೆ ಈಗ ನವಮೋಹನ ರಘುರಾಮನೆ ನೀನು ಬಾ ಬೇಗ ಪ. ದಶರಥನುದರದಿ ಜನಿಸಿ ಅಸುರ ತಾಟಕಿಯನು ಸಂಹರಿಸಿ ಋಷಿಗಳ್ಯಾಗವ ಕಾಯ್ದದು ನೀನು ಋಷಿ ಪತ್ನಿಯರನು ಉದ್ಧರಿಸೀ ಪತಿವ್ರತೆಯೆನಿಸಿದ ಅತುಳ ಮಹಿಮ ಶ್ರೀರಾಮ ಬಾ ಬೇಗ ಅತುಳ ಮಹಿಮ ಶ್ರೀರಾಮ ಬಾ ಬೇಗ1 ಶಿವಧನುವೆತ್ತಿದ ಧೀರ ಸೀತಾದೇವಿಯ ಕರವನೆ ಪಿಡಿವಾ ತವಕದಿ ಮುರಿದಾಯೋಧ್ಯಯಾಳಿದ ಶ್ರೀ ಶ್ರೀನಿವಾಸನೆ ನೀನು ಬಾ ಬೇಗ ಸುಖಾಸನಕೆ 2
--------------
ಸರಸ್ವತಿ ಬಾಯಿ
ನಾ ನಿನ್ನ ಮರೆತರೆ ನೀ ಯನ್ನ ಮರೆವರೆ ದೀನ ವತ್ಸಲ ರಂಗ ದಾನವಾಂತಕ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಧ್ಯಾನ ದೊಳಿಟ್ಟೆನ್ನ ಮಾನದಿಂದಲಿ ಕಾಯೋ ಶ್ರೀನಿವಾಸ ಪ್ರಭುವೆ ಅ.ಪ. ದಿನಕರನ ಜನರು ನೆನೆಯದೆ ಬಿಟ್ಟರೆÉ ಜನರನ್ನು ಬೆಳಗದೆ ದಿನಕರ ಬಿಡುವನೆ ಹೀನವಿಷಯದಿ ಮುಳುಗಿ ತೇಲುವ ಎನ್ನ ನೀನಾಗಿ ಪೊರೆದರೆ ಘನತೆಯಲ್ಲವೆ ದೇವಾ 1 ಪೆತ್ತ ಮಕ್ಕಳು ಬಲು ಕತ್ತೆಗಳಾದರು ಹೆತ್ತ ತಾಯಿಯು ತಾನು ಎತ್ತದೆ ಬಿಡುವಳೆ ಮತ್ತನಾನಾದರು ಉತ್ತಮೋತ್ತಮಸ್ವಾಮಿ ವಾತ್ಸಲ್ಯತೋರಯ್ಯ ಹಸ್ತಿವರದ ಧೊರೆಯೇ 2 ಗೋವತ್ಸಹಾಲಿಗೆ ಗೋವಿನಗುದ್ದಲು ತವಕದಿ ಉಣಿಸದೆ ಗೋವು ಬಿಡುವುದೇ ತವಪಾದ ಕಮಲದಿ ಅವಿನೀತನಾದರೆ ಸುವಿವೇಕ ಜ್ಞಾನವ ಈಯದಿರುವರೇನೋ 3 ಕರಿ ಧೃವ ಭಕ್ತರ ಪೊರೆಯಲಿಲ್ಲವೆ ನೀನು ಘೋರಪಾಪಗಳ ತರಿದೆ ಅಜಾಮಿಳಗೇ ವರವಿತ್ತು ವ್ಯಾಧಗೆ ವರಕವಿಯೆನಿಸಿದೇ ಭಾರವೆ ನಾನಿನಗೆ ಕರುಣಾಸಾಗರ ರಂಗ 4 ಜಯಮುನಿ ಅಂತರ ವಾಯುವಿನೊಳಗಿಪ್ಪ ರಾಯ ಶ್ರೀಕೃಷ್ಣವಿಠಲನೆ ನಂಬಿದೆ ಕಾಯವಚ ಮನದಿ ಜೀಯನೆ ಗತಿಯೆಂಬೆ ನೋಯಿಸದೆ ಭವದಿ ದಯಮಾಡಿ ಸಲಹಯ್ಯ 5
--------------
ಕೃಷ್ಣವಿಠಲದಾಸರು
ನಾನೀಯದಿದ್ದರೆ ನೀನೇನನೀವೆ ಪ ನಾನು ಎಂಬುದು ಮಾತ್ರ ನಾ ನಿನಗಿತ್ತರೆ ಏನನೀಯುವೆ ರಂಗ ದೀನದಯಾಳು ಅ.ಪ ಅವಲಕ್ಕಿಯನು ತಂದವಗೆ ಭಾಗ್ಯವನಿತ್ತೆ ನವಫಲವನಿತ್ತವಳಿಗೆ ಒಲಿದೆ ನವನೀತವಿತ್ತರ್ಗೆ ಸುವಿಲಾಸಗಳನಿತ್ತೆ ಭುವಿಯೆಲ್ಲವಿತ್ತಂಥವನ ಬಾಗಿಲಕಾಯ್ದೆ 1 ಗಜರಾಜನಂದು ಪಂಕಜವೊಂದನಿತ್ತಂದು ಅಜಗರನನು ಕೊಂದು ಸೌಜನ್ಯವನಿತ್ತೆ ಭುಜದ ಮೇಲೆ ನಿನ್ನನಂಗಜ ಪೊತ್ತು ತಿರುಗಲು ರಜತಪದವಿಯನಿತ್ತು ವಿಜಯ ನೀ ಗೈದೆ 2 ಮಡದಿಮಣಿಯು ತಾನುಟ್ಟ ಪೀತಾಂಬರ ದೆಡ್ಡೆಯ ಹರಿದು ನಿನ್ನ ಅಡಿಗೆ ಕಟ್ಟಲ್ಕೆ ಮಡದಿಗೆ ಅಕ್ಷಯದುಡುಗೆಯ ನೀನಿತ್ತೆ ಮೃಡನು ತಾನೇನು ಕೊಡಲೋ ಗೋವಿಂದಾ 3 ಜಗಜಟ್ಟಿ ಹನುಮನು ಬಗೆದು ನಿನ್ನಯ ದುಗುಡವ ಬಿಡಿಸಿದ ಬಗೆಯ ನೀನÀರಿತೂ ಜಗದೊಳು ಸರಿಯಾದುಡುಗರೆಯಿಲ್ಲದೆ ನಗುತ ನಿನ್ನನು ನೀನೆ ಸೊUಸಿನಿಂದಿತ್ತೆ 4 ನಾನೆಂಬುದಲ್ಲದೆ ಏನುಂಟು ಎನ್ನೊಳು ನೀನೀವೆನಿದ ಮಾತ್ರ ಶ್ರೀನಾಯಕೇಶ ಏನನಾದರೂ ಸರಿ ನೀನೀಯೋ ಮುರವೈರಿ ನಾನು ನನ್ನದು ನಿನ್ನಧೀನ ಮಾಂಗಿರಿರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನೆಂತರಿವೆನೈ ನಿನ್ನಂತರಂಗವ ಸಾನಂದಗೋವಿಂದ ನೀನಿಂದು ದಯೆದೋರು ಪ ಆದಿ ಮೂರುತಿಯೆ ನಾನೀದೀನ ನರ ಭೇದರಹಿತನೇ ಅದರ ಹಾದಿಯರಿಯೆನೊ ವೇದ ವಂದ್ಯನು ನೀನು ಓದನರಿಯದ ನಾನು ಸಾಧುರಕ್ಷಕ ಸ್ವಾಮಿ ಬೇದಯ ತಿಳಿಸೊ 1 ಜ್ಞಾನಪ್ರಕಾಶ ನಾ ಮಾನಾಭಿಮಾನಿ ಮೌನಿರಕ್ಷಕನೇ ಆಂ ಹೀನನಡೆಯವ ದಾನಿಪರಮಾತ್ಮನು ದೀನ ತಾಪತ್ರಿಯೆನು ನೀನಮೃತದವನೈ ನಾನು ಮತ್ರ್ಯನು 2 ಸರುವಲೋಕೇಶಾ ನಾಪರದೇಶಿಯಹುದೋ ಸಿರಿದೇವಿಯರಸಾ ದಾಸ ತಿರಿದುಂಬೊತಿರುಕ ಶರಣಸುಧಾರಕ ಬಿರುದಿನಿಂ ಮೆರೆಯುವ ವರದ ಜಾಜೀಶ ಪೊರೆ ಶ್ರೀನಿವಾಸ 3
--------------
ಶಾಮಶರ್ಮರು
ನಾನೆಲ್ಲಿ ಜ್ಞಾನಿಯು ನಾನೆಲ್ಲಿ ಸುಜನನು ಹೀನ ವಿಷಯಗಳುಂಬ ಶ್ವಾನನಂತಿರುವೆ ಪ ಗಾತ್ರ ಬಳಲಿಸಿ ಮದನಸೂತ್ರ ಬೊಂಬೆಯು ಎನಿಸಿ ನೇತ್ರದಿಂದಪಾತ್ರದವರನು ನೋಡಿ ಸ್ತೋತ್ರಮಾಡುತ ಹಿಗ್ಗಿರಾತ್ರೆ ಹಗಲು ಕೆಟ್ಟ ವಾರ್ತೆಯಲ್ಲಿರುವೆ 1 ಧನದಾಸೆ ಘನವಾಗಿ ಅಣು ಮಹತ್ಕಾರ್ಯದೊಳುತಣಿಸಿ ದಣಿಯಲು ತೃಣವು ದೊರೆಯದಿರಲುಮನೆ ಮನೆಗೆ ಬಾಯ್ದೆರೆದು ಶುನಕನಂತೆ ದಿನಗಳೆವೆಮನುಜ ಪಶುವಿಗೆ ಇನ್ನು ಮುನಿಯೆಂಬಿರೆಂತೋ2 ನಾಲಗೆಯ ರುಚಿಯಿಂದ ಸಾಲದಾಯಿತು ಬಯಕೆಕಾಲ ಕಾಲಕೆ ನೆನಸಿ ಹಾಳಾದರೂಶೀಲಗಳ ಕಳಕೊಂಡು ಚಾಲುವರಿಯುತ ಪರರಆಲಯದ ಉಚ್ಚಿಷ್ಠ ಮೇಲಾದ ಸವಿಯ3 ಸ್ನಾನಧ್ಯಾನವನರಿಯೆ ಸಾನುರಾಗದಿ ಭಕ್ತಿಕೂನ(ಗುರುತು)ವಿಲ್ಲದೆ ಡಂಭ ಮೌನಿಯೆನಿಸಿನಾನಾ ವಿಷಯ ಮನದಿ ನಾ ನೆನೆಸುವೆ ನಿತ್ಯಏನಾದರೂ ಕಷ್ಟ ಕಾಣದಂತಿರುತಿಪ್ಪೆ 4 ಪತಿತರೊಳು ಎನ್ನಂಥ ಪತಿತರೊಬ್ಬರ ಕಾಣೆಗತಿಯು ನೀನಲ್ಲದೆ ಅನ್ಯರಿಲ್ಲಪತಿತ ಪಾವನನೆಂಬೊ ಬಿರುದುಂಟುಮಾಡುವಕ್ಷಿತಿಪತಿ ಶ್ರೀಕೃಷ್ಣರಾಯ ನೀನಹುದೋ5
--------------
ವ್ಯಾಸರಾಯರು
ನಾನೇನಿನಗಂದೆನೋ ಬಿಡದೆ ಪವ ಮಾನ ಪಾಲಿಸೋ ಎನ್ನನು ಪ ದೀನರ ಪಾಲಿಪ ದಾನವಾಂತಕ ಎನ್ನ ಜ್ಞಾನಾನಂದದ ನಾಮ ಧ್ಯಾನವಗೈದೆನೊ ಅ.ಪ ಶರಧಿ ಲಂಘಿಸಿ ರಘು ವರನ ಕುಶಲವಾರ್ತೆಧರೆಜಾತೆಗೆ ಅರುಹಿ ದಶಾಶ್ಯನ ಪುರವ ದಹಿಸಿದಂಥ ಪರಮಸಮರ್ಥನೆಂದರಿತ ಕೊಂಡಾಡಿದೆನಲ್ಲದೆ || ತರು ಚರುವರನೆಂದಿನೆ | ಶಿರದಿ ಕಲ್ಲು ಧರಿಸಿ ತಂದವನೆಂದಿನೆ | ಬ್ರಹ್ಮಾಸ್ತ್ರಕೆ ಭರದಿ ಸಿಲ್ಕಿದಿ ಎಂದೆನೆ ಭಕ್ತೀಲಿ ಭಾವಿ ಸರಸಿಜಾಸ್ರನನೆಂದು ಸ್ಮರಿಸಿದೆನಲ್ಲದೆ 1 ಕೃತಯುಗದಲಿ ಕುಂತಿಸುತನಾಗಿ ಜನಿಸುತ ಪತಿ ಪಿತನಂಘ್ರಿ ಭಜಿಸುತಲಿ ಕ್ಷಿತಿ ಭಾರಕೆ ಖಳ ತತಿಯ ಸಂಹರಿಸಿದಾ ಪ್ರತಿಮಲ್ಲ ನೀನೆಂದು ಸ್ತುತಿಸಿದೆ ನಲ್ಲದೆ ಖತಿವಂತ ನೀನೆಂದಿನೆ ದುನುಜಾತೆಗೆ ಪತಿಯಾದವನೆಂದಿನೆ ಅವಳ ಕೂಡಿ ಸುತನ ಪೆತ್ತವನೆಂದನೆ ಯಾಮಿನಿಯಲಿ ಸತಿಯೆನಿನದವ ನೆಂದೆನೇ ನಿನ್ನನು ಬಿಟ್ಟು ಗತಿನಮಗಿಲ್ಲೆಂದು | ನುತಿಸಿದೆ ನಲ್ಲದೆ 2 ನಡುಮನಿಸುತನಾ ಪೊಡವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸಂದರನ ಧೃಡವಾಗಿ ಸ್ಥಾವಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿಸುತನಾಗಿ ಪೊಡೆವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸುಂದರನ ಧೃಡವಾಗಿ ಸ್ಥಾಪಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿ ಎಂದು ನುಡಿದೆನಲ್ಲದೆ ಹುರಳಿಮೆದ್ದ ಬಡದ್ವಿಜ ಶಿಶುವೇದಿನೆ | ಎತ್ತಿನ ಬಾಲ ಪಿಡಿದೋಡಿ ದವನೆಂದಿನೆ | ಬೆಸರದಿಂದ ಮಡದಿ ಬಿಟ್ಟವ ನೆಂದಿನೆ ಕಡಿಗೆ ಬೋರಿ ಗಿಡವ ಸೇರಿದಿ ತೋರೆಂದು ಅಡಿಗಳಿಗೆರಗಿದೆ ನಲ್ಲದೆ 3
--------------
ಶಾಮಸುಂದರ ವಿಠಲ
ನಾಮಧ್ಯಾನವ ಮಾಡಿರೋಪ ನಾಮಧ್ಯಾನವ ಮಾಡಿ | ಕಾಮಿತಾರ್ಥವ ಬೇಡಿ || ಶ್ಯಾಮಸುಂದರ ಸು | ಪ್ರೇಮಿ ಶ್ರೀರಾಮನ ಅ.ಪ ಸತಿ | ಹೈಮಾವತಿಯು ಸದಾ|| ಪ್ರೇಮದಿ ಜಪಿಸುವ | ರಾಮಚಂದ್ರನ ಗುಣ 1 ಶಿವನ ಧನುವ ಮುರಿ| ದವನಿಜೆ ಗೊಲಿದಾ|| ರವಿವಂಶಾಬುಧಿ ಸೋಮ| ಭುವನ ವಿಖ್ಯಾತನ 2 ಕಡುಭಕ್ತಿಯಿಂದಿತ್ತ | ಶಬರಿಯುಚ್ಛಿಷ್ಟವ|| ಬಿಡದೆ ಸ್ವೀಕರಿಸಿದ | ಪ್ರಭು ರಾಮಚಂದ್ರನ 3 ಕರಗಳ ಕಡಿದು ಕ| ಬಂಧನ ಶಾಪವÀ|| ಪರಿಹಾರ ಗೈದ ವ| ಸುಂಧರಪಾಲನ4 ಬ್ರಹ್ಮಪದವಿಯನ್ನು | ಅಂಜನೆಸುತಗಿತ್ತ ಬ್ರಹ್ಮಾಂಡನಾಯಕ | ಕಂಜಾಕ್ಷ ರಾಮನ 5
--------------
ವೆಂಕಟ್‍ರಾವ್
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಹರಿಯೇಅ.ಪ. ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1 ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2 ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3 ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4 ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ
ನಿಖಿಳ ಯಾದವರೊಳಗೆಮಾನಾಭಿಮಾನವೆಳ್ಳನಿತಿಲ್ಲ ಕೃಷ್ಣ ಪ ದೇವಕೀದೇವಿಯುದರದಿ ಜನಿಸಿ ಬಾಲ್ಯದಲಿಓವಿ ಮೊಲೆ ಕುಡಿಸಿದಳ ಅಸುವ ಸೆಳೆದುಮಾವ ಕಂಸನ ಕೊಂದು ಮನುಜ ವೇಷದಲಿ ಗಾಂ-ಡೀವಿಯ ಮನೆಯ ಬಂಡಿ ಬೋವನಾದೆ1 ಸುರನದಿಯ ಸುತನು ಪಾಂಡವರಿಗಾಪ್ತನು ನಿನಗೆಪರಮಭಕ್ತನು ಸ್ವಯಿಚ್ಛಾ ಮರಣಿಯುಧುರದೊಳಗೆ ಪೂರ್ವ ವೈರದ ಶಿಖಂಡಿಯ ತೋರಿಶರಮಂಚದೊಳುಪಾಯದಲಿ ಮಲಗಿಸಿದೆ 2 ಸೋದರತ್ತೆಯ ಸೊಸೆಯ ಮಗ ನಿನಗೆ ಭಾವಿಸಲುಸೋದರಳಿಯನು ಮೂರು ಲೋಕವರಿಯೆಸಾಧಿಸಿಯೆ ಅಸಮ ಚಕ್ರವ್ಯೂಹವನು ರಚಿಸಿಸೋದರನ ಷಡುರಥರ ಕೈಲಿ ಕೊಲ್ಲಿಸಿದೆ 3 ಕುರುಪತಿಯ ಮೈದುನನ ಕೊಲ್ಲ ಬಗೆದವನ ಸಂ-ಗರದೊಳೇರಿಸಿ ನುಡಿದ ನುಡಿಯ ಕೇಳಿ ಮೈ-ಗರೆಯೆ, ರವಿ ಮಂಡಲಕೆ ಚಕ್ರದಿ ಮರೆಯ ಮಾಡಿನರನ ಕೈಯಿಂದ ಸೈಂಧವನ ಕೊಲ್ಲಿಸಿದೆ 4 ಶಪಥದಲಿ ರಣದೊಳರಸನ ಹಿಡಿವೆನೆಂಬವಗೆತಪಸಿಗಳ ತಂದು ತತ್ತ್ವವ ಬೋಧಿಸಿಕಪಟವರಿಯದ ನೃಪನ ಕೈಯೊಳನೃತವ ನುಡಿಸಿಉಪಮೆಯಲಿ ಶಸ್ತ್ರ ಪಂಡಿತನ ಕೊಲ್ಲಿಸಿದೆ 5 ಯಮಳರನು ಪಡೆದ ತಾಯಿಗೆ ಸಹೋದರನ ಭೂರಮಣರೊಳಗಗ್ಗಳೆಯನತಿ ಧೈರ್ಯನುಸಮರದಲಿ ರವಿಸುತನ ರಥಕೆ ಸೂತನ ಮಾಡಿಯಮಸುತನ ಕೈಲಿ ಮಾವನ ಕೊಲ್ಲಿಸಿದೆ 6 ಜನವರಿಯದಂತೆ ಜೀವನದೊಳಡಗಿರ್ದವಗೆಮನಕೆ ಖತಿಗೊಳಿಸಿ ಬರ ಸೆಳೆದು ನಗುತಅನುವರದೊಳಾಯತದ ತೊಡೆಯ ಸನ್ನೆಯ ತೋರಿಅನಿಲಜನ ಕೈಲಿ ಕೌರವನ ಕೊಲ್ಲಿಸಿದೆ7 ಉರಿಯೊಳಗೆ ಜನಿಸಿದಂಗನೆಯ ನಿಜಸುತರು ಮಂ-ದಿರದೊಳೈವರು ನಿದ್ರೆಗೈಯುತಿರಲುನರವೃಕೋದರ ಧರ್ಮನಂದನರನಗಲಸಿಯೆಗುರು ಸುತನ ಕೈಲಿ ಬಾಲಕರ ಕೊಲ್ಲಿಸಿದೆ 8 ಈ ವಿಧದೊಳವರ ಸುರಲೋಕದಲಿ ನೆಲೆಗೊಳಿಸಿಭಾವ ಮೈದುನರೈವರನು ರಕ್ಷಿಸಿಭೂವಲಯದೊಳು ಕೀರ್ತಿಯನು ಪಡೆದೆಸೆವ ನಮ್ಮದೇವ ನೆಲೆಯಾದಿಕೇಶವ ವೆಂಕಟೇಶ 9
--------------
ಕನಕದಾಸ