ಒಟ್ಟು 923 ಕಡೆಗಳಲ್ಲಿ , 87 ದಾಸರು , 595 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೋಕ್ಷೋಪಾಯಕಾನಂದ ಮುನೀಂದ್ರನಶಿಕ್ಷಾ ಮಾರ್ಗಹುದಯ್ಯಲಕ್ಷ್ಷ್ಯಶ:ಲಕ್ಷಣವಾರ್ಹೇಳೇನುಲಕ್ಷದಿ ಗುಣವಿಲ್ಲಯ್ಯ ಪ.ಸುಕೃತತಾನಾದರೆ ಚಿರಕಾಲಕೆ ಒಮ್ಮೆಧಿಕೃತವಾಹುದು ಭವತುಷ್ಟಿಸುಖವೆಂಬುದು ಸ್ವರೂಪಾನಂದಾನುಭವವಿಕಸವಾಗುವ ಜ್ಞಾನದೃಷ್ಟಿ ಆಸುಖವಾಪೇಕ್ಷಿಸಿ ಪ್ರಕೃತವುದಾಸಿಪದಖಿಳ ಮಹಾತ್ಮರಭೀಷ್ಟಿಸಕಳಾನಿಷ್ಟವ ಸಾಗಿಸುವ ಶ್ರೀಸುಖತೀರ್ಥರ ಶುಭಗೋಷ್ಟಿ 1ಕಿವಿಯಲಿ ಸತ್ಶಾಸ್ತ್ತ್ರವಕೇಳಿಧ್ಯಾನಮನನವ ಸಾಧಿಪುದೆ ದೇವಸಾರ್ಥಿಕುವಲಯಪ್ರಿಯಕುಲತಿಲಕನು ಮೆಚ್ಚಿಹನವಭಕುತಿಯಪಥಕೀರ್ತಿಅವಿರಳ ಎದೆಗದ್ದಿಗೆಯೊಳು ಮೆರೆವನಸವಿಗುಣ ನಿರ್ಣಯವಾರ್ತಿವಿವರಿಸಿ ವಾರಂವಾರ ವರದ ಮದ್ಧವ ಜಗದ್ಗುರು ವರಮೂರ್ತಿ 2ಈಶ್ವರ ಸಾಕ್ಷಾತ್ಕಾರದ ಭೇದರಹಸ್ಯ ವಿಚಾರವಂತಯೋಗಿನಶ್ವರಾನಶ್ವರವರಿತ ವೈರಾಗ್ಯದಐಶ್ವರ್ಯಾನ್ವಿತಭೋಗಿಶಾಶ್ವತ ಪ್ರತ್ಯಕ್ಷಾದಿ ತ್ರಿಪ್ರಮಾಣಭಾಷ್ಯಕ ಶ್ರೀಪದಯೋಗಿವಿಶ್ವದೊಡೆಯ ಪ್ರಸನ್ವೆಂಕಟಪತಿ ಪದವಿಶ್ವಾಸಿಕ ಮುನಿಯೋಗಿ 3
--------------
ಪ್ರಸನ್ನವೆಂಕಟದಾಸರು
ರÀಕ್ಷಿಸು ರಕ್ಷಿಸು ದೇವವಿಶ್ವಕುಕ್ಷನೆ ಭಕ್ತ ಸಂಜೀವಪಕ್ಷಿಗಮನ ಕಾಯೊದಾತಭೃತ್ಯಪಕ್ಷನೆ ಶ್ರೀ ಪ್ರಾಣನಾಥ ಪ.ಜಾರಿದ ಶ್ರ್ರುತಿಯ ತಂದವನೆ ಉದಾರಿವಿಕ್ರಮತಮಹರನೆವಾರಿಧಿಯೊಳುದಿಸಿದನೆ ಮಂದರಗಿರಿಯನೆತ್ತಿದನೆ1ರಂಭೆಗೆ ತತ್ವ ಹೇಳಿದನೆ ಹೇಮಾಂಬಕನ ಚುಚ್ಚಿದವನೆಕಂಬವ ಸೀಳಿ ನಿಂದವನೆ ಆದಂಭೋಳಿವೈರಿಬಾಲಪನೆ2ಪದ್ಮಜಾಂಡವನೊಡೆದವನೆಬಲಿಸದ್ಮವ ಬಿಡದೆ ಕಾಯ್ದವನೆಛದ್ಮಿ ಪಾರ್ಥಿವರ ಸಂಹರನೆಕರಪದ್ಮದಿ ಪರಶು ಪಿಡಿದವನÉ 3ಅಡವಿ ಪ್ರಾಣಿಗಳನಾಳುವನೆ ಹತ್ತುಹೆಡಕಿನವನ ತಲೆಕಡಿದವನೆಮಡದಿಗೆ ಗಿಡವನಿತ್ತವನೆ ಭೀಮಮಡದಿಯ ಲಜ್ಜೆ ಕಾಯ್ದವನೆ 4ಮಿಥ್ಯದಹೊಲಬುಹೇಳಿದನೆಖಳದೈತ್ಯರ ವಶವ ಮಾಡಿದನೆಮತ್ತಕಲಿವಪುಹರನೆ ನನ್ನಕರ್ತಪ್ರಸನ್ವೆಂಕಟ ನೀನೆ5
--------------
ಪ್ರಸನ್ನವೆಂಕಟದಾಸರು
ರಕ್ಷಿಸೆನ್ನ ರಕ್ಷಿಸೆನ್ನನು ಸುರಯಕ್ಷರಕ್ಷಕ ಮಹಾದಕ್ಷ ಯತಿ ಮುನಿ ಪಕ್ಷ ವಿರೂಪಾಕ್ಷಕುಕ್ಷಿಯೊಳು ನೀ ನೆಲಸಿ ಎನ್ನ ಕೃಪೇಕ್ಷಣದಿ ಕೈವಿಡಿದುರಕ್ಷಿಪಅಕ್ಷಯರಾಕ್ಷಸಾಂತಕ ಪಕ್ಷಿವಾಹನ ದೇವಪ್ರಿಯಪವೇದವೇದ್ಯಸುಜನರಕ್ಷ ನಾದಭೇದ್ಯಸಾಧನ ನಾಲ್ಕನು ಸಾಧಿಪ ಸಾಧಕನಾದ ದೇವನೆ ನಿನ್ನ ಪಾದವ ಸ್ತುತಿಪೆನುವೇದ ಸ್ಮøತಿಗಳು ಆದಿಶೇಷನುಸಾಧಿಸುತ ಭೇದಿಸಿಯೆ ನಿನ್ನನುಹಾದಿ ಕಾಣದು ಪೊಗಳ್ವಡೆನಗೆ ಅರಿಯದಾ-ಗಿದೆ ಅನಾದಿ ಮೂರುತಿ1ಹಾರಹೀರ ಫಲಿಸಿದಂಥಾ ಶೂರ ವೀರಸಾರವಿಲ್ಲದ ಸಂಸಾರ ದೂರ ವಿ-ದೂರ ಭಯ ಜರ್ಜರ ಕರುಣಾಕರಸಾರಪೂರಿತಕಾರಣಾತ್ಮಕಮಾರವೈರಿಯೆ ಧೀರ ಜಗದುದ್ಧಾರ ಎನಗೆತೋರಿ ಶಕುತಿಯಸಾರಹೃದಯನೆಗೌರಿ ವಲ್ಲಭನೆ2ಪರಮಪುರುಷ ಪಾರ್ವತೀಪ್ರಿಯಶರಣ ಹೃದಯ ನಿರುತ ಪಾಲಿಪ ಶಂಭುಹರಪಿನಾಕಿಶಿವವರಚಿದಾನಂದಗುರುಅವಧೂತಾತ್ಮ ನಿರುಪಮ ನಿರ್ಮಾಯನಿರವಯ ನಿರುತಪರಮಶಿವ ವಿಶ್ವಹೃದಯಪರತರಾತ್ಮಕಪರಮಮಂಗಳಪರಮಚೈತನ್ಯಾತ್ಮ ವಸ್ತುವೇ3
--------------
ಚಿದಾನಂದ ಅವಧೂತರು
ರಾಮ ಗೋವಿಂದ ಹರೇ ಕೃಷ್ಣ ಗೋವಿಂದದಾಮೋದರಹರಿವಿಷ್ಣು ಮುಕುಂದಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮಚ್ಛವತಾರದೊಳಾಡಿದನೆ -ಮಂದರಾಚಲ ಬೆನ್ನೊಳಾಂತವನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚಿ ಹಿರಣ್ಯಕನ ಸೀಳಿದನೆ1ಬಲಿಯೊಳು ದಾನವ ಬೇಡಿದನೆ - ಕ್ಷಾತ್ರಕುಲವ ಬಿಡದೆ ಕ್ಷಯ ಮಾಡಿದನೆಜಲನಿಧಿಗೆ ಬಿಲ್ಲ ಹೂಡಿದನೆ - ಕಾಮ-ಗೊಲಿದು ಗೊಲ್ಲತಿಯೊಳಾಡಿದನೆ2ಸಾಧಿಸಿ ತ್ರಿಪುರರ ಗೆಲಿದವನೆ - ಪ್ರತಿ-ವಾದಿಸಿ ಹಯವೇರಿ ನಲಿದವನೆಭೇದಿಸಿ ವಿಶ್ವವ ಗೆಲಿದವನೆ - ಬಾಡದಾದಿಕೇಶವರಾಯ ನಮಗೊಲಿದವನೆ3
--------------
ಕನಕದಾಸ
ರಾಮ ರಾಮ ರಘುನಾಥನೆ ಸುರಸ್ತೋಮತಿಲಕ ವಿಶ್ವಕರ್ತನೆ ದಿವ್ಯಸ್ವಾಮಿ ಪುಷ್ಕರತೀರವಾಸನೆ ನನ್ನಸ್ವಾಮಿವರಾಹವೆಂಕಟೇಶನೆಪ.ಕಾಯೊ ಕಾಯೊ ಮಧುಮರ್ದನಭವಸಾಯಕದೂರ ಜನಾರ್ದನ ಯದುನಾಯಕಧೃತಗೋವರ್ಧನ ನಾರಾಯಣ ನಿಜಜನವರ್ಧನ 1ಹೊಂದಿದಭಟಕಲ್ಪವೃಕ್ಷನೆ ನನ್ನತಂದೆ ತಾಯಿ ವಿಶ್ವಕುಕ್ಷನೆಕ್ಷೀರಸಿಂಧುಮಂದಿರ ಅಧ್ಯಕ್ಷನೆ ನಿನ್ನಿಂದಾರುಗತಿ ಪದುಮಾಕ್ಷನೆ 2ಅಡಿಗಡಿಗೊದಗದ ತಪ್ಪನೆ ಇಕ್ಕಡಿಮಾಡುದೇವ ತಿಮ್ಮಪ್ಪನೆಮಾಯಾಸಡಕ ತಪ್ಪಿಸು ಸುಪ್ರದೀಪನೆನಿತ್ಯಬಿಡದೆ ಕ್ರೀಡಾದ್ರಿಯೊಳಿಪ್ಪನೆ 3ಲೇಶಭಕ್ತಿಗೆ ಮನ ಹಾರಿತು ವಿಷಯಾಸೆಯಟವಿಯನೆ ಸೇರಿತು ಈಹೇಸಿ ಚಂಚಲಚಿತ್ತ ಹೋರಿತು ತವದಾಸರ ಸಂಗಕೆ ಜಾರಿತು 4ಕುಸುಮಶರನಂತ:ತೇಜನೆ ಮಹಮಿಸುನಿವೆಟ್ಟದ ಕಲ್ಪಭೂಜನೆ ಅಜÕನಿಶಾಕುಲ ಉಡುಗಣರಾಜನೆ ಶ್ರೀಪ್ರಸನ್ವೆಂಕಟ ರಾಜಾಧಿರಾಜನೆ 5
--------------
ಪ್ರಸನ್ನವೆಂಕಟದಾಸರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು
ವರತೀರ್ಥರಾಜ ಪ್ರಯಾಗವೆನಿಸುವ ಕ್ಷೇತ್ರ - |ದೊರೆ ಮಾಧವನ ಭಜಿಸಿರೈ 3ಆ ಮಾಘಮಾಸದತಿಶಯವಾದ ಸ್ನಾನವನು |ಈ ಮಹಾನದಿಯೊಳಗೆ ಮಾಡಲೋಸುಗಬೊಮ್ಮ |ಸೋಮಶೇಖರ ಮುಖ್ಯ ದೇವತೆಗಳೈತಹರು |ಪ್ರೇಮದಿಂದಲಿ ನಿರುತ ||ನೇಮವಿದು ದ್ವಿಜಕುಲೋತ್ತಮರಾದವರುಕೇಳಿ |ಕಾಮ - ಕ್ರೋದವ ಜರಿದ ಪ್ರಾಯಾಗ ಕ್ಷೇತ್ರದಲಿ |ರಾಮಣೀಯಕ ಸ್ನಾನನುಷ್ಠಾನ ತೀರ್ಥವಿಧಿ |ಹೋಮಗಳ ಮಾಡಿರಯ್ಯ 4ಆರ್ಯವರ್ತದ ಬ್ರಹ್ಮವರ್ತ ದೇಶದ ಮಧ್ಯೆ |ಧಾರ್ಯವಾದಲೆ ಪುಣ್ಯವಾರಾಣಾಸೀ ಕ್ಷೇತ್ರ |ಕಾರ್ಯವಿಶ್ವೇಶತಾರಕ ಮಂತ್ರವುಪದೇಶಿ |ಸೂರ್ಯಚಂದ್ರಾಗ್ನಿನಯನ||ತ್ವರ್ಯುಗ್ರನೆನಿಪಭೂತೇಶ ಭೈರವನಲ್ಲಿ |ವೀರ್ಯದಿಂದಘಾಕಾರಿ ಜೀವಿಗಳ ಶಿಕ್ಷಿಸುವ |ಶೌರ್ಯಅಗಣಿತ ಮಹಿಮ ಶ್ರೀ ಬಿಂದು ಮಾಧವಗೆ |ಕಾರ್ಯದೊರೆತನವು ಅಲ್ಲಿ 5ಅರ್ತಿಯಲಿ ಪಂಚಗಂಗೆಯಲಿ ಮಜ್ಜನಮಾಡಿ |ನಿತ್ಯ ನೈಮಿತ್ತ್ಯ ಕರ್ಮಂಗಳನು ಪತಿಕರಿಸಿ |ಸುತ್ತಿ ಅಂತರ್ವೇದಿಯನ್ನು ಪಂಚಕ್ರೋಶ - |ಯಾತ್ರೆಗಳ ಮಾಡಿ ಬಳಿಕ ||ಮತ್ತೆ ಶ್ರೀ ವಿಶ್ವೇಶ್ವರಗೆ ಪ್ರದಕ್ಷಿಣೆ ಮಾಡಿ |ಭಕ್ತಿಪೂರ್ವಕವಾಗಿ ಅಲ್ಲಲ್ಲಿ ಇಹ ವೈಷ್ಣ - |ವೋತ್ತಮರಿಗೆರಗಿ ಸದ್ಧರ್ಮಗಳ ಮಾಡಿ -ಕೃತ ಕೃತ್ಯರೆಂದೆನಿಸಿದರಯ್ಯ 6
--------------
ಪುರಂದರದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಿಧಿನಿಷೇಧವು ನಿನ್ನವರಿಗೆಂತೊ ಹರಿಯೇ ಪವಿಧಿನಿನ್ನ ಸ್ಮರಣೆಯು ನಿಷೇಧ ವಿಸ್ಮøತಿಯೆಂಬವಿಧಿಯನೊಂದನೆ ಬಲ್ಲರಲ್ಲದೇ ಮತ್ತೊಂದು ಅ.ಪಮಿಂದದ್ದೆ ಗಂಗಾದಿ ಪುಣ್ಯತೀರ್ಥಂಗಳುಬಂದದ್ದೆ ಪುಣ್ಯಕಾಲ ಸಾಧುಜನರು ||ನಿಂದದ್ದೆ ಗಯೆ ವಾರಣಾಸಿ ಕುರುಕ್ಷೇತ್ರಸಂದೇಹವೇಕೆ ಮದದಾನೆ ಪೋದುದೆ ಬೀದಿ 1ಕಂಡಕಂಡಲ್ಲಿ ವಿಶ್ವಾದಿ ಮೂರುತಿಯು ಭೂಮಂಡಲದಿ ಶಯನವೆ ನಮಸ್ಕಾರವು ||ತಂಡತಂಡದ ಕ್ರಿಯೆಗಳೆಲ್ಲ ನಿನ್ನಯ ಪೂಜೆಮಂಡೆಬಾಗಿಸಿ ನಮಿಪಭಾಗವತಜನಕೆ 2ನಡೆದ ನಡಿಗೆಯು ಎಲ್ಲ ಲಕ್ಷ ಪ್ರದಕ್ಷಿಣೆಯುನುಡಿವ ನುಡಿಗಳು ಎಲ್ಲ ಗಾಯತ್ರಿ ಮಂತ್ರ ||ಕೊಡುವುದೆಲ್ಲವು ಅಗ್ನಿಮುಖದಲ್ಲಿ ಆಹುತಿದೃಢಭಕ್ತರೇನ ಮಾಡಿದರದೇ ಮರ್ಯಾದೆ 3ನಷ್ಟವಾದುದು ಎಲ್ಲ ಸಂಚಿತದ ಕರ್ಮವುಮುಟ್ಟಲಂಜುವುವೆಲ್ಲ ಆಗಾಮಿಕರ್ಮ ||ಸ್ಪಷ್ಟವಾಗಿರುವ ಪ್ರಾರಬ್ಧ ಕರ್ಮವ ಮೀರಿಸೆಟ್ಟಿಮೆಟ್ಟಿದ್ದೆ ಪಟ್ಟಣವೆಂಬುದೇ ನಿಜವು 4
--------------
ಪುರಂದರದಾಸರು
ವಿಷಯ ಸಂಗದಲಿಂದ ಕುಶಲವನು ಬಯಸಿದರೆಅಸಮಜ್ಞಾನಿಗಳ ಧೀಯು ಮಸಳಿ ಮರುಳಾಗುವುದುಭರತರಾಯನನೋಡುಹರಿಣ ಕುಣಪನು ಪೋಗೆಮೌನಿ ವಿಶ್ವಾಮಿತ್ರ ತಾನು ಊರ್ವಶಿ ಕೂಡಿವಿಪುಳಮತಿಯಾದ ಸೌಭರಿಯು ದೃಢ ಮನಸಿನಲಿಲೇಸಾದ ಕುಲದಲ್ಲಿ ಸಂಜನಿಸಿದಜಮಿಳನುಅಂದಣವನೇರಿದ ನಹುಷರಾಯನನೋಡುವಿಷಯದಲಿ ಮನ ಸನ್ನಿಕರ್ಷವಾದರೆ ನಿನ್ನವಿವಿಧ ಸಾಂಸಾರಿಕ ದುಃಖ ದರುಶನವಾಗೆಈಷಣತ್ರಯನಿನಗೆ ಮೋಸಗೊಳಿಸಿ ಕಡೆಗೆಕ್ರಿಮಿ ಭಸ್ಮ ಮಲವಾಗಿ ಪೋಪದೇಹಕೆ ಬಹಳಇಂತುಮಹಾಂತದೃಷ್ಟಾಂತ ತೋರಿದೆ ನಿನಗೆದ್ರವ್ಯಕಾರಕ ಕ್ರಿಯಭ್ರಮವೆಂಬ ಭ್ರಮಣದಲಿ
--------------
ಗೋಪಾಲದಾಸರು
ವೀಣಾಸ್ವರವನು ಕೇಳುತಲಿರುವನ ವಿಶ್ವಾತ್ಮಕನೆಂದೆಂಬೆವೀಣಾಸ್ವರ ಕೇಳಲು ದುರ್ಗುಣವುಡಗಿ ಪೋಗುವುವು ಎಂದೆಂಬೆಪನಾದಬ್ರಹ್ಮವನಾಲಿಸುತಿಹನನು ನರನಲ್ಲವು ನಾನೆಂಬೆನಾದಬ್ರಹ್ಮವನಾಲಿಸುತಿರಲಿಕೆ ನಾನಾಗುಣವು ಲಯವೆಂಬೆ1ಘಂಟಾ ಸ್ವರವನು ಕೇಳುತ ಸುಖವನು ಅನುಭವಿಸುವನ ಗುರುವೆಂಬೆಘಂಟಾಘೋಷದಿಜನನ ಮರಣವು ಮುಳುಗಿಹವು ಎಂದೆಂಬೆ2ಭೇರಿನಾದವ ಕೇಳುತಲಿರುವನ ಭಾಗ್ಯವಂತನು ಎಂಬೆಧೀರ ಚಿದಾನಂದ ಸದ್ಗುರುನಾದದಿ ಲಯವಿಹನು ಎಂದೆಂಬೆ3
--------------
ಚಿದಾನಂದ ಅವಧೂತರು
ವೆಂಕಟಾಚಲ ವಾಸ ವಂದಿಪೆನೋ ತವ ಪದ |ಪಂಕಜವ ನಿರ್ದೋಷ ವಾರಾಶಿಜಾದ್ರುಹಿಣ|ಶಂಕರ ಪ್ರಮುಖ ಪೋಷ ಶ್ರೀ ಶ್ರೀನಿವಾಸ ಪವೆಂಕಟ ಗದಾ ಸುದರುಶನವಿಜಯ|ಅಂಕಿತನೆಗಾಂಗೇಯಚೈಲತ- |ಳಂಕ ನನುಜ ಪಾಲಿಪುದು ಯನ್ನ ಮೀ |ನಾಂಕ ಜನಕ ಶಶಾಂಕ ಭಾಸ ಅ.ಪ.ಸ್ವಾಮಿ ಹೇ ನಿರಪೇಕ್ಷಝಷಕೂರ್ಮವರಾಹ|ಹೇಮಕಶ್ಯಪು ತೀಕ್ಷವಟುಭೃಗು ಕುಲೋದ್ಭವ ||ರಾಮ ಪಾಂಡವಪಕ್ಷ ತ್ರಿಪುರಾರಿ ಕಲ್ಕಿ |ಭೀಮವಂದಿತ ತ್ರ್ಯಕ್ಷಸಖವ್ರತತಿಜಾಕ್ಷ ||ಕಾಮಿತಪ್ರದ ಕೈರವದಳಶ್ಯಾಮಸುಂದರ ಕೋಟಿಮಾರಸು- |ಧಾಮಪ್ರಿಯ ಭಯವಿಪಿನವಹ್ನಿಸು ||ತ್ರಾಮ ನಂದನ ಪ್ರಾಣರಕ್ಷಕ |ಭೂಮಿಯೊಳು ದುರುಳರಿಪು ಸಾಲಿ ||ಗ್ರಾಮ ಮಂದಿರ ಲಕುಮೀ ಮನೋಹರ |ಸಾಮಜೇಂದ್ರನ ಪೊರೆದ ಸಹಸ್ರನಾಮ ಕಾಳೀಮದಾಹ ದೇವತ್ರ ||ಈಮಾಯಾತೃಣಕಾಷ್ಠಾದಿ ವ್ಯಾಪುತ |ಚಾಮೀಕರಭೂಷಣ ಶೋಭಿತ ||ಹೇಮಾಚಲ ಮಂದಿರ ಮುನಿಗಣಸೋಮಾರ್ಚಿತ ಕರುಣಿಸು ತ್ವರ್ಯಾ 1ನೀರಚರನಗಧರಕಿಟಿನೃಹರಿ ವಾಮನ |ಧರಣಿಪ ಸಂಹರ ಕೋದಂಡಕರ ಸ- ||ತ್ಯಾರಮಣಅಂಬರವರ್ಜಿತ |ತುರಂಗಮವೇರಿಕುಂಭಿಣಿಭಾರವಿಳುಹಿದ ಉದಾರ ||ಪರಾಶರ ಸುತ ಕಪಿಲರೂಪಿ ಸ- |ಮೀರ ವಂದ್ಯ ಅನಸೂಯವರಕುಮಾರ ಪು- ||ಷ್ಕರ ಕೇಶನನುಜ ಮಂದಾರನತ ಜನವಿಶ್ವ|ಧರಣ ಶರೀರವ್ಯೋಮಸಂತ್ಪತಿ ನಘ ತು- ||ಷಾರ ಗಣ ವೈದುವರೊ ನಿನ್ನಯಾ |ಪಾರಮಹಿಮೆಯ ತಿಳಿಯಲಾರರುನೀರಜಾಕ್ಷ|| ಯ ||ಪಿತಾಮಾತಾ ಮಹಿಮಯ ||ಕ್ಕಾರಿಂದೊಶ ಅಗ್ನಿಭಯ ನಿವಾರಣ ||ಸಾರೆಗರೆದು ಪೂರೈಸಭಿಲಾಷೆಯ |ಘೋರಿಸುತಿಹ ತಾಪತ್ರಯ ಬಿಡಿಸೊ ರ- |ಮಾರಮಣನೇ ಪ್ರಣತಾರ್ಥಿ ಪರಿಹರ 2ವೇದೋದ್ಧರಕೂರ್ಮಈ ಕ್ಷಿತಿಯ ಮಾಯದಲೊ- |ಯ್ದದುರ್ಮತಿ ಭರ್ಮ ಲೋಚನರತರಳಪ್ರ- ||ಹ್ಲಾದ ವರದ ಸುಕರ್ಮಸ್ಥಿತ ಮಾತೃಹಿಂಸಕ |ನಾದ ನಿರಶ ಸುಶರ್ಮ ಪ್ರಮುಖರನ ಮರ್ಮ ||ಭೇದಿಸೇಳಿದ ಭೈಷ್ಮೀವಲ್ಲಭ|ಶ್ರೀದಬುದ್ಧಖಳಕುಲಭಂಜನ||ಬಾದರಾಯಣನಿಗಮವೇದ್ಯನೆ |ಮೋದಮಯ ಪ್ರಾಣೇಶ ವಿಠ್ಠಲ ||ಕಾದುಕೋ ನಿನ್ನವರನು ಎಂದಾದಿಮಧ್ಯ |ವಿದೂರ ಯನ್ನ ವಿಷಾದಗುಣಗಳೆಣಿಸದೆ ಕುಬುಜೆಗೆ ||ಮೋದತೋರಿದ ದೀನಬಂಧು |ಶ್ರೀಧರಕೌಸ್ತುಭವಕ್ಷಸ್ಥಳ ||ದ್ವಾದಶವಪು ಸನ್ನಿಭ ನಿನ್ನಯ ಕ್ರೋಧಿಗಳೊಳು ಸ್ನೇಹವ ಪುನರಪಿ |ಮೇದಿನಿಯೊಳು ಜನ್ಮವ ಕೊಡದಿರು 3
--------------
ಪ್ರಾಣೇಶದಾಸರು
ವೆಂಕಟೇಶನ ಮಹಿಮೆಯ ಹೊಗಳುವಕಿಂಕರಧನ್ಯನಯ್ಯಪ.ಇಳೆಯ ಭಕ್ತರ ನೋಡಿದ ವೈಕುಂಠದಿಂದಿಳಿದು ಶ್ರೀಸಹಿತ ಬಂದಸಲೆ ಸುವರ್ಣಮುಖರಿಯ ತೀರವಒಲಿದು ನಿಂತನು ತಿಮ್ಮ್ಮಯ್ಯ 1ಭೂವರಾಹ ಸ್ವಾಮಿಯ ಸನ್ನಿದಶ್ರೀವತ್ಸಲಾಂಛನಿಹಶ್ರೀವಿಮಾನಸಹಿತ ದೇವಾಧಿದೇವ ತಾನಿಲ್ಲಿ ನಿಂತ 2ಸ್ವಾಮಿ ಪುಷ್ಕರಿಣಿಯೆಂಬ ತೀರ್ಥದನಾಮದ ಮಹಿಮೇನೆಂಬೆಆ ಮಹಾ ದುಷ್ಕøತವು ಸ್ನಾನದನೇಮದಲ್ಲೋಡುವುದು 3ರಾಜಾಧಿರಾಜನಿತ್ಯಉಪಚಾರಪೂಜೆ ಲೋಕಾರ್ಥದೊಳು ತಾಮೂಜಗಕಾನಂದವವರಕರುಣಾಜಲಧಿ ಕೊಡುವ 4ನಿತ್ಯಸ್ವಾರಿಗೈದುವಸುರಋಷಿಮೊತ್ತದಿ ಚರಿಪದೇವಮತ್ತೆ ಆ ಲಕ್ಷ್ಮಿಯ ಕೂಡ ಮುನಿವದೊಂದರ್ತಿಯ ಬುಧರು ನೋಡಿ 5ನುಡಿವ ಸಾವಿರ ಪೇರ್ಗಂಟೆ ಉಬ್ಬುಬ್ಬಿಹೊಡೆವರ್ಯೊಡೆ ಜಾಗಟೆಬಡಿವ ಕರಡೆ ಭೇರಿಯು ಮುಂದೆ ಉಗ್ಗಡಿಪ ಸಾಮಗಾನವು 6ಚಿತ್ರವರ್ಣದ ಸತ್ತಿಗೆ ಸಾಲ್ಗಳುಸುತ್ತಲು ಕೈ ದೀವಿಗೆಉತ್ತಮ ವಾಹನವೇರಿ ವಿಶ್ವದಕರ್ತಬಂದನು ಉದಾರಿ7ಉದಯ ತೋಮಾಲೆ ಸೇವೆ ಪುಳುಕಾಪುಮೊದಲಾದ ದಿವ್ಯಸೇವೆಒದಗಿದವಸರಂಗಳು ನೈವೇದ್ಯಮೃದುಭಕ್ಷ್ಯವರಪೊಂಗಲು8ಅತಿರಸ ಮನೋಹರವುದಧ್ಯನ್ನಅತಿರುಚಿ ಅನ್ನವಾಲವುಕ್ಷಿತಿಯ ಮೇಲಿಹ ಭಕ್ತರು ಶ್ರೀಲಕ್ಷ್ಮೀಪತಿಗೆ ಅರ್ಪಿಸುತಿಹರು 9ಹೂವಿನಂಗಿಯ ತೊಡುವಮೃಗಮದಲಾವಣ್ಯ ತಿಲಕಿಡುವಕಾವನಂತರ ತೇಜವ ಗೆಲ್ಲುವಸಾವಿರ ಹೆಸರ ದೇವ 10ತಪ್ಪದೆ ನುಡಿವಂದನು ಮುಡಿಪಿನಕಪ್ಪವೆಣಿಸಿ ಕೊಂಬನುಚಪ್ಪನ್ನ ದೇಶಸ್ತರು ಬಂದು ಸಮರ್ಪಣೆ ಮಾಡುವರು 11ಕೊಟ್ಟ ವಾಕ್ಯಕೆ ತಪ್ಪನು ವರಭಯವಿಟ್ಟು ಸಾಕುತಲಿಪ್ಪನುಇಷ್ಟಾರ್ಥದಾತನಯ್ಯ ವಿಶ್ವದಶಿಷ್ಟರೊಡೆಯ ತಿಮ್ಮಯ್ಯ 12ಕಿರೀಟ ಕುಂಡಲವಿಟ್ಟನು ತಿಮ್ಮಯ್ಯಕರುಣ ನೋಟದ ಚೆಲ್ವನುಅರಿಶಂಖವನು ಧರಿಸಿದ ಹಾರಕೇಯೂರ ಕೌಸ್ತುಭದಲೊಪ್ಪಿದ 13ತೋಳಬಂದಿಯು ಕಂಕಣಮುದ್ರಿಕೆಕೀಲುಕಡಗಒಡ್ಯಾಣನೀಲಮಾಣಿಕ ಪಚ್ಚದ ಮುತ್ತಿನಮಾಲೆಗಳಿಂದೊಪ್ಪಿದ 14ಮಣಿಮಯ ಕವಚ ತೊಟ್ಟ ಗಳದಲಿಮಿನುಗುವಾಭರಣವಿಟ್ಟಕನಕಪೀತಾಂಬರವು ಕಟಿಯಲ್ಲಿಅಣುಗಂಟೆಗಳೆಸೆದವು 15ರನ್ನದಂದುಗೆಯನಿಟ್ಟಿಹ ಪಾದಕೆಪೊನ್ನಹಾವುಗೆಮೆಟ್ಟಿಹಘನ್ನ ದೈತ್ಯರ ಸೋಲಿಪ ಬಿರುದಿನಉನ್ನತ ತೊಡರಿನಪ್ಪ 16ದಿನಕೆ ಸಾವಿರ ಪವಾಡ ತೋರುವಜನಕೆ ಪ್ರತ್ಯಕ್ಷ ನೋಡಘನಶಾಮ ತಿರುವೆಂಗಳ ಮೂರ್ತಿಯಮನದಣಿಯೆ ಹೊಗಳಿರೆಲ್ಲ 17ಭೂವೈಕುಂಠವಿದೆಂದು ಸಾರಿದಭಾವಿಕ ಭಕ್ತ ಬಂಧುಶ್ರೀ ವಾಯುಜಾತ ವಂದ್ಯ ಶ್ರೀನಿವಾಸಗೋವಿಂದ ನಿತ್ಯಾನಂದ 18ಸೇವಕಜನರಪ್ರಿಯಅರುಣರಾಜೀವಲೋಚನ ತಿಮ್ಮಯ್ಯದೇವಶಿಖಾಮಣಿಯು ಬ್ರಹ್ಮಾದಿದೇವರಿಗೆ ದೊರೆಯು 19ಕಶ್ಚಿಜ್ಜೀವನೆನ್ನದೆ ನನ್ನನುನಿಶ್ಚಯದಲಿ ಹೊರೆವನುಆಶ್ಚರ್ಯಚರಿತ ನೋಡಿ ಶರಣರವತ್ಸಲನ ಕೊಂಡಾಡಿ 20ಆರಾಶ್ರಯಿಲ್ಲೆನಗೆ ದ್ರಾವಿಡವೀರನೆ ಗತಿಯೆನಗೆಭೂರಿಪ್ರಸನ್ವೆಂಕಟಪತಿ ಸುಖತೀರಥವರದ ನಮೊ 21
--------------
ಪ್ರಸನ್ನವೆಂಕಟದಾಸರು
ಶರಣು ಶರಣು ಜಯ ಮುನಿರಾಯ ಸ್ವಾಮಿಶರಣಾಗತ ತಾತ್ವಿಕ ಪ್ರಿಯ ಪ.ಶ್ರೀ ಮಧ್ವಗುರು ದಯವನು ಪಡೆದು ಅದೇ ಮಹಿಮನ ಮನೆಯೊಳು ಬಂದುನೇಮದಿ ತುರ್ಯಾಶ್ರಮ ಬಲಿದೆ ಈಭೂಮಿಗಿಂದ್ರನಪರಿ1ಅಶ್ರುತ ಪ್ರಭೆ ಬುಧರೊಳು ಬೀರಿ ನಾನಾ ಶ್ರುತಿಯರ್ಥ ಪ್ರಕಟದೋರಿಶಾಶ್ವತಕ್ಷಾದಿ ತ್ರಿಪ್ರಮಾಣವ ನಿಜಾಶ್ರಿತರಿಗೆ ಪೇಳಿದೆ ಅನುವ 2ವೇದಾಂಬುಧಿಯೊಳು ಸುಧೆದೆಗೆದೆ ರಾಮಪಾದಕರ್ಪಿಸಿ ಬುಧಜನಕೆರೆದೆಕೈದುಗಳಂತೆ ಪ್ರಮೇಯಾರ್ಥವಿಡಿದೆ ಜಯನಾದದಿಂ ದುರ್ವಾದಿಗಳನ್ಯೆಚ್ಚಿದೆ 3ಮರುತಮತದ ವಿಬುಧರ ನೆರಹಿಸಿಮೂರೇಳರಿ ಬಲವ ಜರಿದಟ್ಟಿದೆಅವರಬಿರುದು ಸೀಳಿದೆ ಈ ಧರೆಯ ವೈಷ್ಣವರಭಯವ ಕಳೆದೆ4ಈ ಕ್ಷೋಣಿಯೊಳು ಪ್ರತಿವರ್ಜಿತನೆ ಶ್ರೀಅಕ್ಷಯಪ್ರಜÕ ಕೃಪಾನ್ವಿತನೆಅಕ್ಷೋಭ್ಯತೀರ್ಥರ ತನಯನೆವಿಶ್ವಕುಕ್ಷಿಪ್ರಸನ್ನವೆಂಕಟಪ್ರಿಯನೆ5
--------------
ಪ್ರಸನ್ನವೆಂಕಟದಾಸರು