ಒಟ್ಟು 1094 ಕಡೆಗಳಲ್ಲಿ , 95 ದಾಸರು , 853 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಗಜಾನನನೆ ಶರಣು ಲಂಬೋದರನೆ ಶರಣು ಪಾರ್ವತಿ ಪುತ್ರ ಶುಭಗಾತ್ರ ಪ ಆದಿಯಲಿ ನಿನ್ನ ಪಾದಭಜನೆಯ ಮಾಡೆ ಸಾದರದಿ ಸಲಹುವೆ ಮೋದವಿತ್ತು ಮೇದಿನಿಯಲಿ ನಿನ್ನಾರಾಧನೆಯ ಮಾಡದವ ನ- ರಾಧಮನೆನಿಸುವನಿದು ಪುಸಿಯಲ್ಲ 1 ಆಖುವಾಹನನೆ ನೀ ಕಳೆ ವಿಘ್ನಗಳ ಸಾಕು ಲಾಲಿಸೆನ್ನ ಏಕದಂತ ಮಣಿ ಭೂಷಣ ಕಾಕುಜನ ಕುಠಾರ ಲೋಕೈಕ ವೀರ 2 ಸಿತಿಕಂಠ ವರಪುತ್ರ ಪ್ರತಿ ವಾಸರವು ನಾ ನುತಿಸಿ ಬೇಡುವೆ ನಿನ್ನ ಸತಿರಹಿತನೇ ಸಿರಿ ರಂಗೇಶವಿಠಲನ ಅತಿಪ್ರೀತಿಯಿಂದ ಭಜಿಪ ಮತಿಯ ನೀಡೋ 3
--------------
ರಂಗೇಶವಿಠಲದಾಸರು
ಶರಣು ಶರಣು ಶ್ರೀ ರಾಮಚಂದ್ರನೆ ಶರಣು ಸುರಮುನಿ ವಂದ್ಯನೆ ಪ. ಶರಣು ಶ್ರೀ ರಘುಕುಲಾಬ್ಧಿಚಂದ್ರನೆ ಶರಣು ಸದ್ಗುಣ ಸಾಂದ್ರನೆ ಅ.ಪ ಕಮಲನಾಭನೆ ಕಮಲನೇತ್ರನೆ ಅಮರವಂದಿತ ವಿಮಲಚರಿತನೆ ಕುಮುದಸಖಸಮಾನ್ಯನೆ 1 ಅಂಬುಜಾಸನ ಶಂಭುವಂದಿತ ಶಂಬರಾರಿಯ ಜನಕನೆ ಕಂಬುಕಂದರ ನಂಬಿ ಭಜಿಸುವೆ ಬೆಂಬಿಡದಲೆ ಪಾಲಿಸೈ 2 ಪಕ್ಷಿವಾಹನ ರಕ್ಕಸಾಂತಕ ಲಕ್ಷ್ಮೀರಮಣ ಶುಭಲಕ್ಷಣ ಲಕ್ಷ್ಮಣಾಗ್ರಜ ಸತ್ಯವಿಕ್ರಮ ರಕ್ಷಿಸೈ ಪುರುಷೋತ್ತಮ 3 ಪರಮಪಾವನ ಶೇಷಗಿರಿಯೊಳು ನಿರುತ ನೆಲೆಸಿಹ ಶ್ರೀಶಗೆ ಶರಣ ಜನರ ಸಚ್ಚರಿತೆಯೋದುವ ವರವ ಪಾಲಿಸು ದೇವನೇ 4
--------------
ನಂಜನಗೂಡು ತಿರುಮಲಾಂಬಾ
ಶರಣು ಶಾರದೆ ವಾಣೀ ಸರಸಿ ಜಾಸನ ರಾಣಿ ಶರಣು ವಿದ್ಯಾಂಬುಧಿಯೆ ಸರ್ವಗುಣಗಣನಿಧಿಯೇ ಶರಣು ಧೀನೋದ್ಫರಣಿ ಶುಭ್ರಾಂಬರಾವರಣಿ ಭವ ತಾರಣೀ ಶರಣಿ ಶೃತಿ ವಿಖ್ಯಾತೆ ಸಲೆ ಜಗತ್ರಯ ಮಾತೆ ಶರಣು ಶ್ರೀ ಧವಳಾಂಗೆ ಸುರವರಾರ್ಜಿತ ತುಂಗೆ ಶರಣು ಮಹಿಪತಿ ಕಂದ ನಾಸ್ಯದಿ ನೆಲಿಸಿಛಂದ ಸಲಹಮ್ಮ ಕರುಣದಿಂದ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗಣನಾಥ ಮೂಷಿಕೇಂದ್ರ ವರೂಢ ಶರಣು ವಿದ್ಯದ ಸತ್ರ ಲಂಬೋದರ ಶುಭಗಾತ್ರ ಶರಣು ವರದೋರ್ದಂಡ ಶುಂಡ ಮಂಡಿತ ಗಂಡ ಕುಂಡಲ ವಕ್ರತುಂಡಾ ಶರಣೂ ಸುರನರಧೇಯ ಸಿದ್ದೀಂದಿರಾ - ಪ್ರೀಯ ಶರಣು ವಿಘ್ನವಿನಾಶ ಏಕದಂತ ಪ್ರಕಾಶ ಶರಣು ಮಹಿಪತಿ ನಂದನಗ ನೀಡುವಾನಂದ ಶರಣು ಪಾರ್ವತಿಯ ಕಂದಾ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆಂಭೆ ತನುಮನದಿಂದ ಗಣರಾಯಾ ನರಮೃಗ ಕಾಯಾ ಸುರಾಸುರರ ಕೈಯ್ಯ ಸೇವೆ ಕೊಳುವ ಚರಣವನು ಮೊರೆಯ ಹೊಕ್ಕೆನು ಕೇಳಿ ಕೀರುತಿಯಾ ಕೊಂಡಾಡುವಂತೆ ಪದ ಪದ್ಯದಿ ನಿನ್ನ ಚರಿಯಾ ಶುಭ ಮುಖ ಕೊಡುಮತಿಯನಾ ಎಂದೆಂದು ನೊಡಲು ಅಪರಾಧಿನಾ ಮೊದಲು ಕುಂದನಾರಿ - ಸದೇ ನೋಡೆನ್ನ ಮ್ಯಾಲಿನ್ನಾ ಅಗಜ ನಂದನ ಗುರು ಮಹೀಪತಿ ಸುತ ಸ್ವಾಮಿ ಭಕುತ ರಕ್ಷಕ ಮುನಿಜನ ಪ್ರೇಮೀ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಧಿಸುತೆ ಮಾತೆ ಶರಧಿಸುತೆ ಮಾತೆ ಪ ಪೊರೆಯೇ ಜಗನ್ಮಾತೆ ಅ.ಪ ಸರಸಿಜಭವ ಶಿವ ಗರುಡ ಶೇಷ ಮುಖ ಸುಮನಸ ವಂದಿತ ಪದಯುಗಳೆ ಮನಸಿಜ ಜನಕನ ಕೋಮಲತಮ ಹೃತ್ಕಮಲದೊಳು ಸದಾ ನೆಲಸಿದ ಶುಭಗೆ 1 ವಂದಿಪೆ ನಿನ್ನಯ ಚರಣ ಕಮಲ ಎನಗೊಂದುಪಕಾರವ ದಯಮಾಡೆ ಒಂದನು ಅರಿಯದ ಭಕುತರೊಳಗೆ ಇವ ನೊಂದು ಎಂದು ಗೋವಿಂದನಿಗರುಹೆ 2 ತುಂಗಮಹಿಮನನು ಎಡಬಿಡದೆಲೆ ಅವ ನಿಂಗಿತವನು ನೀನರಿತಿರುವೆ ಮಂಗಳದೇವತೆ ಅದನರುಹಿ ಕೃಪಾ ಪಾಂಗವ ಬೀರೆ ಪ್ರಸನ್ನ ಸುವದನೇ 3
--------------
ವಿದ್ಯಾಪ್ರಸನ್ನತೀರ್ಥರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿರಿದೇವಿಯೆ ಪೊರಿಯುವದೆನ್ನನು ತಾಯೆ ಭಾ ಸ್ಕರ ಪುರ ನಿಲಯೆ ಪ ಧರಣಿಸುರವರÀನಿಗೊಲಿದು ಶ್ರೀಗಂಧದ ವರ ಶಿಲೆಯೊಳು ನೆಲಿಸಿರುವ ಶುಭಾಂಗಿಯೆ ಅ.ಪ ಲಕುಮಿಯೆ ತವ ದರುಶನ ವರುಷಂಪ್ರತಿ ಮಾಡುವ ನೇಮಾಸಕ್ತ ಶ್ರೀ ಲಕ್ಷ್ಮೀಕಾಂತ ತತ್ಕರಸಂಪೂಜಿತ ಸತಿ 1 ಪದ್ಮೇ ಪ್ರಣಮಾಮಿ ಭವತ್ಪದ ಪದ್ಮೆ ವಾರಿಜದಳ ಸದ್ಮೆ ಪದ್ಮಾನನೆ ಸ್ಮರಿಸುವೆ ಕರಧೃತ ಪದ್ಮೆ ವಾಸಯಿ ಮಮಸದ್ಮನಿ ಪದ್ಮಾವತಿ ಪದ್ಮಜನುತ ಪದಪದ್ಮೇ ಉದ್ಭವಿಸಿದ ಪದ್ಮದಿ ಪದ್ಮನಾಭ ಹೃತ್ಪದ್ಮನಿವಾಸಿನಿ 2 ಸಿಂಹಧ್ವಜ ಶೋಭಿತೆ ಸಾನುರಾಗದಿ ಭಜಿಸುವರಿಗೆ ಪ್ರೀತೆ ಕಾಮಿತ ಫಲದಾತೆ ಜ್ಞಾನಾ ಸದ್ಭಕುತಿಯು ಕರುಣಿಸು ಮಾತೆ ವರದಾಭಯಹಸ್ತೆ ರಾಣೆಯೆ ನಮಿಸುವೆ 3 ವಂದಾರುಜನ ಮಂದಾರಾಮಿಂದಿರಾ ಸುಂದರಾನನಾಂ
--------------
ಕಾರ್ಪರ ನರಹರಿದಾಸರು
ಶಿವಮಂಗಳಂ ಸದಾಶಿವ ಮಂಗಳಂಮಂಗಳಂ ರಜತಾದ್ರಿ ಮುಖ್ಯನಿಲಯಾಯ ಪಹಿಮಕರಾವತಂಸಾಯ ಹಿಮರುಚಿರಕಾಯಾಯಹಿಮರೂಪಗಿರಿಚಿತ್ತ ಹಾರಕಾಯಹಿಮಹರಾಮಿತಕಾಂತಿ ಸದೃಶಾಯ ಸೌಮ್ಯಾಯಹಿಮತಾಪರಹಿತಾಯ ಹೇಮವರ್ಣಾಯ 1ವರಜಟಾಮಕುಟಾಯ ವಾರಿಯುತಕೇಶಾಯಸ್ಫುರದಿನಾನಲಸೋಮಲೋಚನಾಯಗರನೀಲಕಂಠಾಯ ಕದ್ರುಸುತ ಹಾರಾಯಪರಶು ಮೃಗ ಶೂಲಾದಿ ಪರಮಾಯುಧಾಯ2ನಾಗೋಪವೀತಾಯ ನಾಗೇಶ ವಲಯಾಯನಾಗಧವಳಾಂಗಾಯ ನಾಯಕಾಯನಾಗವಾಹನ ಮುಖ್ಯ ನಾಕಜನನಾಥಾಯನಾಗಪರ್ಯಂಕಸ್ಥ ನಿತ್ಯಮಿತ್ರಾಯ 3ಗೌರೀಧೃತಾಂಗಾಯ ಗಂಧರ್ವಸೇವ್ಯಾಯಭೂರಿ ಗುಣಬ್ರಹ್ಮಾಂಡ ಭೂತಾಯಚಾರು ಕಟಿ ಶುಭ ಜಂಘಾಯನೀರಜಾಮಲ ಪೀಠ ನಿಹಿತ ಪಾದಾಯ 4ಮೃಗಚರ್ಮವಸನಾಯ ಮಂಜುಳ ಮಯೂಖಾಯಜಗದೇಕನಾಥಾಯ ಜೀವನಾಯಸುಗಮ ತಿರುಪತಿ ನಾಮ ಸದ್ಮಾಧಿನಾಥಾಯಗಗನಧುನಿ ಗಿರಿ ವಾಸ ಗಂಗಾಧರಾಯ 5 ಓಂ ನವನೀತನವಾಹಾರಾಯ ನಮಃ
--------------
ತಿಮ್ಮಪ್ಪದಾಸರು
ಶುಂಠನಿಗೆ ಉಂಟೆ ವೈಕುಂಠಾ | ಬಂಟನಿಗೆ ಉಂಟೆ ಒಡತನವು ಪ ಕಳ್ಳನಿಗೆ ಉಂಟೆ ಪರರು ಒಡವೆ ಗಳಿಸಿದ ಕಷ್ಟ | ಸುಳ್ಳನಿಗೆ ಉಂಟೆ ಮಿತಿಯಾದ ಭಾಷೆ|| ಕೊಲ್ಲುವನಿಗೆ ಉಂಟೆ ದಯಾದಾಕ್ಷಿಣ್ಯದ ಮಾತು | ಕ್ಷುಲ್ಲಕನಿಗೆ ಉಂಟೆ ಗುಣ ಭಾರಿ ಬುದ್ಧಿಗಳು 1 ಉಪವಾಸಿಗೆ ಉಂಟೆ ಅನ್ನ ಆಹಾರದ ಚಿಂತೆ | ತಪಸಿಗೆ ಉಂಟೆ ಇಹದ ವ್ಯಾಕುಲ || ಕೃಪಣನಿಗೆ ಉಂಟೆ ದಾನ-ಧರ್ಮದ ಚಿಂತೆ | ಚಪಳನಾರಿಗೆ ಉಂಟೆ ತನ್ನ ಮನೆವಾರ್ತೆ 2 ರುಚಿ | ಹಾದಿ ಬಿಟ್ಟವಗುಂಟೆ ಮನದ ಧೈರ್ಯ || ವೇದನೆಬಡುವಗುಂಟೆ ಅನ್ನಿಗರ ಸಂಧಾನ | ಕ್ರೋಧದವಗುಂಟೆ ಬಲು ಶಾಂತ ನೀತಿ 3 ಕಾಮಾತುರಗೆ ಉಂಟೆ ಭವಕುರಿತ ಲಜ್ಜೆಗಳು | ನೇಮ ನಿತ್ಯಗೆ ಉಂಟೆ ಮನದರೋಗ || ಹೇಮಾತುರಗೆ ಉಂಟೆ ಗುರು ಬಾಂಧವ ಸ್ನೇಹ | ತಾಮಸಿಗೆ ಉಂಟೆ ಶುಭಕರ್ಮ ಸದ್ಭಕ್ತಿ 4 ದಾನಿಗೆ ಉಂಟೆ ಇಂದಿಗೆ ನಾಳಿಗೆಂಬೋದು | ಜ್ಞಾನಿಗೆ ಹತ್ಯಾದಿ ದೋಷ ಉಂಟೆ | ಸಿರಿ ವಿಜಯವಿಠ್ಠಲ ಸ್ವಾಮಿಯ ಧೇನಿಸುವಗುಂಟೆ ದಾರಿದ್ರ್ಯ ದುಷ್ಕರ್ಮ5
--------------
ವಿಜಯದಾಸ
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶುಭ | ಮಂಗಳ ಶ್ರೀ ಲಕ್ಷ್ಮೀ ನರಸಿಂಹಗೇ | ಸಹಸ್ರ | ಮಂಗಳ ಭಕ್ತರ ಸಲಹುವಗೆ ಪ ಶರಣ ಪ್ರಲ್ಹಾದಗೆ ಪಟ್ಟಾಭಿಷೇಚನ | ಕರುಣದಿಮಾಡಿಸಿಸುರದಿಂದಲಿ | ಅರಸುತನವಕೊಟ್ಟು ಭಕ್ತಾಗ್ರಣಿ ಮಾಡಿ ವರಮುಕ್ತಿಗಳ ಸೂರಾಡಿದವಗೆ | ಮಂಗಳ .... 1 ಎನ್ನನು ನೆನೆಯಲಿ ನೆನೆಯದವರಿರಲಿ ಒಮ್ಮೆ | ನಿನ್ನ ನೆನೆದು ಘನ ಚರಿತೆಯನು || ಮನ್ನಿಸಿ ಒದುವ ಕೇಳುವ ಮನುಜರ | ಚೆನ್ನಾಗಿ ಕಾಯ್ವೆನೆಂದಭಯ ವಿತ್ತವಗೆ ಮಂಗಳ ..... 2 ಅಂದಿಗಿಂದಿಗೆ ತನ್ನ ದಾಸರಾದಾಸನಾ | ಮಂದಿರ ಸಾರಿದವಗೆ ದಯದೀ || ಚಂದಾಗಿ ತನ್ನ ಭಕುತಿ ಎಚ್ಚರವ ನೀವ | ತಂದೆ ಮಹೀಪತಿ ಸುತ ಪ್ರೀಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ಜಯತು ಶುಕಪ್ರೀಯಾಕಾಯಯ್ಯ ಕವಿಗೇಯ ಮಹರಾಯಾ ಪ ಜಗದೀಶ ಸಖನಾಗಿ ಶಸ್ತ್ರಾಸ್ತ್ರವನೆ ಕೈಗೊಂಡುಜಯಶೀಲನೆಂದೆನಿಸಿ ಜಗದೊಳಗೆ ಮೆರೆದೆ ಜಯ ಭೀಮರಾಯನು ಈ ಮೇದಿನೀ ಸ್ಥಳಕ್ಕೆ ಬರಲು ಅಸಮ ಪಶು ಎಂದೆನಿಸಿ ಸೇವಿಸಿದಿ ನಿತ್ಯಾ ಸತ್ಯಾ 1 ಮಣಿ ಸರ್ವಜ್ಞರಾಯರು ವಿರಚಿಸಿದ ಗ್ರಂಥಗಳನಿರೇ ಸಜ್ಜನರಿಗೆ ಸುಜ್ಞಾನವನು ತೋರಿ ಸುಜ್ಞಾನಿಗಳವಾಗ್ಬಾಣದಿಂದರಿದ್ಯೋ ತರಿದ್ಯೊ 2 ಶಿರಿದೇವಿ ವರಬಲದಿ ಆಗಮಾದ್ರಿಯ ಮಥಿಸಿಸತ್ಸುಖಾ ತೆಗೆದು ಸಾಧುಗಳಿಗಿತ್ತೇಮಳಾಪುರಿನಿಲಯ ಪವನೇಶತಂದೆವರದಗೋಪಾಲವಿಠ್ಠಲನ ದೂತಾ ಖ್ಯಾತಾ ದಾತಾ 3
--------------
ತಂದೆವರದಗೋಪಾಲವಿಠಲರು
ಶುಭ ಪ ಬ್ರಹ್ಮರೂಪದಿ ಜಗವನು ಪುಟ್ಟಿಸಿ ಬ್ರಹ್ಮಜನಕನ ನೆತ್ತಿಲಿ ರಕ್ಷಿಸಿ ಬ್ರಹ್ಮ ಮೂರುತಿ ಬಾಲಬ್ರಹ್ಮದಿ ಚರಿಸಿದಾತಂಗೆ ಮಹಾ | ಬ್ರಹ್ಮಾಂಡಕೋಟಿ ಉದರದೊಳಿರಿಸಿ | ಬ್ರಹ್ಮನ ಸ್ತುತಿಗೆ ನಿಲುಕದ ಅವಿನಾಶಿ ಬ್ರಹ್ಮಾದಿ ಸುರವಂದಿತ ರುದ್ರನಾಗಿ ಸಂಹರಿಸಿ 1 ಜಗವನುದ್ಧರಿಸಲು ದೇಹವನು ಜಗದೀಶ್ವರನು ಅವತರಿಸಿ ಬಂದಿಹನು | ಜಗ ಮೃಗಜಲವೆಂದು ತಿಳಿದಿರೆ ಜಗದೊಳಾಡುವಗೆ || ಬಗೆ ಬಗೆಯಲಾಡುತ ಗಗನ ಗಟ್ಟಿಹನು | ನಿಗಮಕೆ ನಿಲ್ಕದೆ ನಿತ್ಯನೆನಿಸುವನು ಝಗಝಗಿಸುವ ಆರತಿಯ ಬೆಳಗಿರೆ ಜಗದ ಜನಕನಿಗೆ 2 ಛಪ್ಪನ್ನ ದೇಶಕೆ ಶೋಭಿಸುವ ಒಪ್ಪುವ ಕೋಳಕೂರೆಂದೆನಿಸುವ ದಿಕ್ಕು ದಕ್ಷಿಣಾ ಭೀಮಾತೀರದಿ ಥಳಥಳದಿ ಹೊಳೆವ |ಶ್ರೀ ಮಹಾಗುರು ಇಪ್ಪತ್ತೊಂದು ಸಮಾಧಿಯೊಳಿರುವತಪ್ಪದೆ ರಾಮಾತ್ಮಜನಾಗಿರುವ | ಸೊಪ್ಪೆರಾಯನು ಸಹಜಾನಂದ ತಾ ಯೋಗಿಯಾಗಿ ಮೆರೆವ 3
--------------
ಭೀಮಾಶಂಕರ
ಶುಭ ಮಂಗಲಂ |ಮಂಜುಕರ ಲಾಲಿತ ಕುರಂಗಗೆ ||ಮಂಗಲ ಮೌನಿ ಮಾನಸ ಸಂಗಗೆ |ಮಂಗಲಂ ಮಂದಿರೀಕೃತ ಶೈಲಶೃಂಗಗೆಮಂಗಲಂ ಮಲ್ಲಿಕಾರ್ಜುನ ಲಿಂಗಗೆ ಪ ಚಾರು ಕಪರ್ದಿಗೆ ಗುಹ ಗಣಾಧಿಪ ಗುರುಗೆ | ಗೋರಾಜ ವಾಹನಗೆ |ಗಿರಿಜಾಂತರಂಗ ವಾರಿಜಭೃಂಗಗೆ 1 ಕರ್ಪೂರ ಗೌರಗೆ ಕಲ್ಪಾಂತವೀರಗೆ | ಕಾಲಾಗ್ನಿ ಕಿಲಕಾಲಿತ ಮಾರಗೆ |ಕಾಕೋಲ ಕಂಧರಗೆ ಕಾಶೀ ವಿಹಾರಗೆ |ಕಾಕೋದರಾಭರಣ ಕಮನೀಯಗೆ 2 ವಿಧು ಶಕಲಾಧಾರಿಗೆ ವಿಶ್ವಹಿತಕಾರಿಗೆ ವಿಯದಟನ ವಿಕಟ ಪುರ ಸಂಹಾರಿಗೆ | ವಿಮಲ ವಿದ್ಯಾನಿಧಿಗೆ |ವಿಧಿವಂದ್ಯ ರುಕ್ಮ ಪಾಡುಕ ಪಾದಗೆ 3 ಮಾಧವ |ಮಂಗಳ ಕರತರಂಗನ | ಅರಿತತಿ ಭಂಗವ ಬಿಡಿಸುತಕಂಗಳ ಸದೋದಿತ ರುಕ್ಮ 4
--------------
ರುಕ್ಮಾಂಗದರು