ಒಟ್ಟು 24701 ಕಡೆಗಳಲ್ಲಿ , 138 ದಾಸರು , 9090 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾರಿ ಬೇರೆಂದೇಕೆ ಹಲುಬುವರು ಜಗದಿ ನಾರಿಯೇ ಮಕ್ಕಮಾರ್ಯೆಂದೆನ್ನಬಾರದೆ ಪ ಹಿತದೋರಿ ಮನಸೆಳೆದು ಮತಿಗೆಡಿಸಿ ವಿಧವಿಧ ದು ಷ್ಕøತ ಪೇಳಿ ಬಂಧುಗಳ ಹಿತವನೆ ಮರೆಸಿ ಸತತ ಬೆನ್ನ್ಹತ್ತಿ ಬಿಡದೆ ಕ್ಷಿತಿಮೇಲೆ ಅತಿಯಾಗಿ ವ್ಯಥೆಬಡಿಪ ಮಾರಿ ನಿಜಸ್ಥಿತಿ ವಿಚಾರಿಸದೆ 1 ಮನೆ ಧನ ಗುಣ ಸುಲಿದು ಘನತೆಯನು ಕೆಡಿಸಿ ಮ ತ್ತನುಕೂಲವನು ಇತ್ತು ತನುಶಕ್ತಿ ಹೀರಿ ಕುಣಿಕುಣಿಸಿ ಜಗದೊಳಗೆ ಬಿನಗುರಲಿ ಬಿನುಗೆನಿಸಿ ಘನ ಬಾಧಿಸುವ ಮಾರಿದಿನಿಸು ಕಾಣದಲೆ 2 ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರೆನಿಸಿ ಭುವಿಯೊಳು ಮುಕ್ತಿಕಾಮಿನಿಯ ತೊರೆಸಿ ನೇಮವಿಲ್ಲದ ಕಷ್ಟ ನೇಮಿಯೊಳಳಿಸಲಿಕೆ ಯಮನೊಶಕೆ ಕೊಡುವಂಥ ಈ ಮಾರಿನೊದೆಯದೆ 3
--------------
ರಾಮದಾಸರು
ಮಾರುತನ ನಿಜ ಜಾಯೆ ಪ ಬಾರಿ ಬಾರಿಗೆ ನಿನ್ನ ಚರಣವ ಸ್ಮರಿಸುವೆ ಚಾರುಮತಿಯನೀಯೆ ಅ.ಪ. ಮೂರನೆ ಯುಗದಲಿ ಧೀರ ದ್ರುಪದನಧ್ವರದೊಳುದಿಸಿ ಶೂರ ಪಾಂಡವರೈವರ ವೀರಪತ್ನಿಯು ನೀನೆನಿಸಿ ಕೌರವನ ಸಭೆಯಲಿ ಸೀರೆಯನು ಸೆಳೆಯಲು ನೀ ಮಾರಪಿತನ ಭಜಿಸಿ ಭೂರಿವಸನ ಪೊಂದಿದೆ ಧೀರೆ 1 ವೀರ ಮಾರುತಿಯ ಗದೆ ಕುರುಪನ ಊರು ಮುರಿಯಲೆಂದು ವಾರಿಧಿ ಮಿತಿ ಮೀರುತಿರೆ ನೀ ಸಾರಿದೆ ಪತಿಗಳ ಗಂಭೀರೆ 2 ಆ ರಣಾಗ್ರದಿ ಕ್ರೂರ ದುಶ್ಶಾಸನ ಸಾರಿ ಬರುವುದ ನೋಡಿ ದಾರಿ ಹಿಡಿದಪ್ಪಳಿಸವನ ದೋರೆ ಕರುಳ ಹಿರಿದೀಡ್ಯಾಡಿ ಮೋರೆಯಿರಿದು ಪಲ್ಮುರಿದು ಹಂಗಿಸಿದಂಥ- ಸತಿ 3
--------------
ರಂಗೇಶವಿಠಲದಾಸರು
ಮಾರುತಿ ನಿನ್ನಾ ನಿರುತದಿ ಭಜಿಪೆ ತ್ವರಿತದಿ ಹÀರಿ ಸರ್ವೋತ್ತಮನೆಂಬುವ ಸರಸ ವಿಜ್ಞಾನವ ಸರಿ ಇಲ್ಲದೆ ಇತ್ತು ಪರಿಪಾಲಿಸು ಎಂದು ಶಿರಸದಿ ನಮಿಪೆ ಆರಿಸಿ ನೋಡಲು ಆರಾರು ಇಲ್ಲವೊ ಕಾರುಣ್ಯಸಾಗರ ಕರುಣಿಸೆ ನೀ ಎನ್ನಾ ಹರಿ ತಾ ಕರುಣಿಪನೆಂದು ಅರಿತು ನಿನ್ನಯ ದಿವ್ಯ ಚರಣ ಸೇರಿದೆನಯ್ಯಾ ಸರಿಬಂದದ್ದು ಮಾಡೋ ಹರಿ ಕುಲಾವರಿಯಾನೆ ಪರಿಪರಿ ಜನರನ್ನು ಪಾಲಿಸಿ ಎನ್ನನು ದೂರದಿ ಇಟ್ಟರೆ ದೊರೆತನವೇನಯ್ಯಾ ಸಾರುವೆ ಸಾರುವೆ ಸರಸಿಜನಾಭನ ಸುತನೆ ಆರುಮೂರೆರಡೊಂದು ಸಾವಿರಾ ಮೂರೆರಡು ಶತಶ್ವಾಸ ಜಪಗಳನು ಮೂರುಜೀವರಲ್ಲಿ ನೀರಜಜಾಕಲ್ಪ ಪರಿಯಂತರ ಮಾಡಿ ಅವರವರ ಗತಿಯಾ ಮರಿಯದೆ ನೀಡುವಿ ಗಿರಿಶಾನುತಪಾದ ಗುರುಜಗನ್ನಾಥ ವಿಠಲನ್ನ ಅರಿವಂತೆ ಮಾಡೋ ಧೀರಾ ಕರುಣಿಯೇ
--------------
ಗುರುಜಗನ್ನಾಥದಾಸರು
ಮಾರುತಿ ಪ್ರಾಣ ಮೂರುತಿಪ ಸಾರುವೆ ತವಶ್ರುತಿ ಧೀರ ಭಾರತೀಪತಿ ಅ.ಪ ಭರದಿ ಸಾಗರ ಹಾರಿ ದುರುಳನ ಪುರ ಸೇರಿ ವರಮಾತೆಗುಂಗುರ ತೋರಿ ವನಗೈದಿ ಸೆರೆ ಶೂರ 1 ಸೊಕ್ಕಿನಿಂದ ಮೆರೆವಂಥ ರಕ್ಕಸರನು ಪಂಥ ಇಕ್ಕಿ ನೀ ಗೆಲಿದಂಥ ಅಃಭಾಪುರೆ ಹನುಮಂತ 2 ಸಿರಿಯ ರಾಮನಿಗಿತ್ತ ವರ ಸೀತಾವೃತ್ತಾಂತ ವರ ಸದ್ಭಕ್ತರ ಪ್ರೀತ ಪಾಲಿಸೊ ವಿಖ್ಯಾತ 3
--------------
ರಾಮದಾಸರು
ಮಾರುತಿಪಾದವ ಸ್ಮರಿಸಿರೋ ಸಾರದುರಿತ ಪರಹರಿಸ್ಪೊರೆಯುವ ಧೀರ ಪ ದುರುಳದಾನವನ ವರನಗರುರುಹಿತಾ ಪರತರ ವಿಭೀಷಣನೊರ ಕರುಣದಿ ಕಾಯ್ದ 1 ಬುವಿಯಂ ಕೈಲಾಸಕ್ಕೆ ಜವದಿ ಜಿಗಿದು ವೀರ ಭವಭಯಹರ ವರ ಶಿವನ ಚಿತ್ತರಿದಂಥ 2 ಭಕ್ತವತ್ಸಲ ವರ ಮುಕ್ತಿಕರ್ತ ಗುರು ದತ್ತ ಶ್ರೀರಾಮನ ಭೃತ್ಯನೆನಿಸಿಕೊಂಡ 3
--------------
ರಾಮದಾಸರು
ಮಾರುತೀ ಕೊಡು ಭಕುತಿ ನುಡಿಸು ಕೀರ್ತಿ ಪ ತೋರೊ ನಿನ್ನೊಳು ಇಹ ನಿರ್ಮಲ ಮೂರುತಿಯಅ.ಪ ಶ್ರವಣಮಾಡಲು ಭಕುತಿ ಆವಕಾಲಕು ಇತ್ತು ತವಪದದಾಸರ ದಾಸ್ಯ ಕೊಡಿಸೋ ದೇವ 1 ಕೀರ್ತನದೊಳು ಹರಿಕೀರ್ತಿ ಕೊಂಡಾಡೆ ಸಂ ಕೀರ್ತನ ಭಕುತಿಗೆ ಕರ್ತದಾತ ನೀನೆ2 ಸ್ಮರಣೆಯು ಹರಿಯಲ್ಲಿ ನಿರುತವು ನಿನ್ನಲ್ಲಿ ಕರುಣಿಸಿ ಪೊರೆಯೊ ಗುರುವರ ಸುಂದರ 3 ಪಾದ ಸೇವೆಯ ಕೊಡು ಸಾದರದಿಂದಲಿ ಶ್ರೀಧರನಾ ಕೃಪಾಪಾತ್ರನೆಂದೆನಿಸಯ್ಯ 4 ಅಚ್ಯುತನಿಗೆ ನೀನಚ್ಚುಮೆಚ್ಚಾಗಿಹೆ ನಿಚ್ಚದಿ ಹರಿಪಾದರ್ಚನೆ ಮಾಡಿಸಯ್ಯ 5 ವಂದನಾಭಕುತಿ ಎನ್ನಿಂದ ನೀ ಮಾಡಿಸಿ ನಂದನಂದನಗಾನಂದಪಡಿಸೊ ದೇವ 6 ದಾಸಭಕುತಿ ಭಾಗ್ಯ ಆಶಿಸುವೆನು ನಿನ್ನ ವಾಸುದೇವನ ನಿಜದಾಸನೆ ಸರ್ವದಾ 7 ಸಖ್ಯಭಕುತಿ ಕೊಡೋ ಮುಖ್ಯಪ್ರಾಣೇಶನೆ ಮುಖ್ಯಕಾರಣ ಹರಿಯ ಮುಖ್ಯ ಪ್ರೇಮಪಾತ್ರ 8 ಆತ್ಮನಿವೇದನ ಭಕುತಿಯನ್ನು ಪರ ಮಾತ್ಮನಲ್ಲಿತ್ತು ನಿರ್ಮಲಾತ್ಮನೆಂದೆನಿಸೊ 9 ನವವಿಧ ಭಕುತಿಯ ಕೊಟ್ಟು ಸಲಹೋ ದೇವ ಅವಕಾಲಕು ಪವಮಾನ ನೀನೆ ಗತಿ 10 ಸಂಕಟ ಹರಿಪ ಶ್ರೀ ವೇಂಕಟೇಶನ ದೂತ ಭಂಟನೆಂದೆನಿಸೆನ್ನ ಸಂಕಟ ಹರಿಸಯ್ಯ11
--------------
ಉರಗಾದ್ರಿವಾಸವಿಠಲದಾಸರು
ಮಾರ್ಗ ನಡಿಬೇಡಾ ಪ ಸೇವೆಯ ಮಾಡಬೇಡ ಮಾಡದಿರಬೇಡ 1 ನೀ ಬೀಳಬೇಡ ಒಳಗಾಗಿ ಕೆಡಬೇಡ 2 ಜ್ಞಾನಿಗಳ ಸಂಗ ಬಿಡಬೇಡ ಅಜ್ಞಾನಿಯ----ಇರಬೇಡ ಮನ್ನಿಸದಿರಬೇಡ 3 ತಪ್ಪಿನಡೆ ನುಡಿಬೇಡಾ ಹಿರಿಯರ ಬುದ್ಧಿ ಬಿಡಬೇಡಾ 4 ಅನ್ಯಜಾತಿಗೊಳಗಾಗಬೇಡಾ ನಿನ್ನ ಜಾತಿಧರ್ಮ ಬಿಡಬೇಡಾ ಸ್ಮರಿಸದಿನಿರು ಬೇಡಾ 5
--------------
ಹೆನ್ನೆರಂಗದಾಸರು
ಮಾರ್ಗದರ್ಶಕೆ ದೇವಿ ಮಾರ್ಗ ತೋರಮ್ಮ |ಸರ್ವ ಪೂರ್ವದಿ ಕವ್ಯ ಬಾಲನೆಂಬನ ಮಗಳೇ ಪ ಹರಿದೀಕ್ಷೆ ಹರಿತತ್ವ ನಿರ್ಣಯಾದಿಗಳಿರುವನರರು ಕಲಿಯುಗದಲ್ಲಿ ದುರ್ಲಭರು ಎಂದು |ಪರಿಪರಿಯ ಚಿತ್ರಿಸುತ ಸದ್ಬೋಧ ಮಾಡಿರುವೆಹರಿ ಪದಾಬ್ಜದಿ ಭಕುತಿ ಎಷ್ಟಿಹುದೊ ನಿನ್ನಲ್ಲಿ 1 ಶೇಷಾಚಲಕೆ ಬಂದು ಆ ಸುತೀರ್ಥವು ಕಪಿಲಲೇಸಾಗಿ ಮಜ್ಜನವಗೈದು ತಪವಾ |ಸಾಸಿರೊರ್ಷವು ದಿವ್ಯ ಏಕ ಚಿತ್ತದಿ ಗೈದುಭಾಸುರ ಸ್ತೋತ್ರದಿ ಹರಿಯ ತೋಷಿಸಿದೇ 2 ತಂದೆ ತಾಯಿಯು ನೀನು ಬಂಧು ಬಳಗವು ನೀನುಎಂದೆಂದಿU5ಭ್ರಾತ ವಲ್ಲಭನು ನೀನೇ |ಇಂದಿರೇಶನ ಹೊರತು ಮಂದಿ ಬೇರಿಲ್ಲೆನಗೆಎಂದು ನೀತುತಿಸಿ ಹರಿ ಸಂದರ್ಶನವ ಪಡೆದೇ 3 ದ್ವಾಪರದಲಾ ಕವ್ಯ 5À್ನಜಿತು ನೃಪನಾಗೆರೂಪಲಾವಣ್ಯಾತಿಶಯಗಳಿ5 |ಭೂಪ ಕುವರಿಯು ಆಗಿ ನೀಲಾಖ್ಯೆ ಎನಿಸುತ್ತಶ್ರೀ ಪತಿಯ ಕೈ ಪಿಡಿಯೆ ಮನವ ನೀ ಮಾಡ್ಡೇ 4 ದೈತ್ಯ ಸಪ್ತಕರೇವೆ ಗೂಳಿಗಳು ತಾವಾಗಿಸತ್ಯ ಹರಿ ದ್ವೇಷವನೆ ಸಾಧಿಸುವೆವೆಂದೂನಿತ್ಯ ಪುಷ್ಟಾಂಗದಲಿ ಬೆಳೆಯುತ್ತ ನೃಪನಲ್ಲಿಕೃತ್ಯ ಸ್ವಯಂವರ ಕೇಳಿ ಹರ್ಷಿತರು ಆಗೀ 5 ವಿಪರೀತ ಮತಿಯುಳ್ಳ ಅಪರಿಮಿತ ಬಲತೋರ್ವಸಪುತ ಗೂಳಿಗಳನ್ನೆ ಆರು ಬಂಧಿಪರೋ |ನೃಪನೆಂದ ಸುತೆ ನೀಲೆ ಕನ್ಯೆ ಕೊಡುವೆನು ಅವಗೆನೃಪ ನಿಂತು ಪಣತೊಟ್ಟ ಕೌತುಕವ ಕೇಳೀ 6 ಆರು ಬಂದವರೆಲ್ಲ ಹೋರಿಗಳ ಪಿಡಿಯಲ್ಕೆವೀರ್ಯ ಸಾಲದೆ ಮರಳಿ ಹೋಗುತಿರಲೂ |ಮಾರ ಪಿತ ಶಿರಿ ಕೃಷ್ಣ ಹೋರಿ ನಾಸಿಕಗಳಿಗೆದಾರಗಳ ಬಿಗಿಯುತ್ತೆ ಬಂಧವನ ಗೈದಾ 7 ದೇವಿ ಸುಂದರಿ ನೀಲೆ ದಿವ್ಯ ಹಾರವ ಪಿಡಿದು ದೇವ ದೇವೇಶ ಶಿರಿ ಕೃಷ್ಣ ಕಂಠದಲೀಹಾವ ಭಾವದಿ ಬಂದು ಅರ್ಪಿಸಲು ತಕ್ಷಣದಿದೇವ ವಾದ್ಯವು ಮೊರೆಯೆ ಪೂವ ಮಳೆ ಬಿತ್ತು8 ಕೃಷ್ಣ ಮಡದಿಯರಾರು ಮಂದಿಯೊಳು ನೀಲಾಖ್ಯೆಲಗ್ನದುತ್ಸವ ಕೇಳ್ದ ಭಕುತ ಜನರಾ |ಭಗ್ನ ಗೈಸುತ ಪಾಪ ಮಗ್ನವಾಹುದು ಮನವುಕೃಷ್ಣ ಗುರು ಗೋವಿಂದ ವಿಠಲ ಪದದಲ್ಲೀ 9
--------------
ಗುರುಗೋವಿಂದವಿಠಲರು
ಮಾರ್ಗವೇ ಕಾಣಿಸದು ವೈಕುಂಠಕೆ ಪೇರ್ಗಿರಿಗಳ ದಾಂಟಲಾರ್ಗಳವೋ ಕಾಣೆ ಪ ಭೋರ್ಗರೆವುದು ಬಲಮಾರ್ಗದಿ ಜಲನಿಧಿ ಕಾರ್ಗಡಲು ಎಡ ಮಾರ್ಗದಿ ಕಗ್ಗತ್ತಲೆ ಅ.ಪ ಹಿಂದೆ ಮೃಗಂಗಳ ಸಂದಣಿಯಾರ್ಭಟ ದಿಂದ ಮನದ ದೈರ್ಯಕುಂದಿದುದಕಟ ಮ ಹಾಂಧಕೂಪದೊಳೆನ್ನ ಎದೆ ಕುಸಿದು ಬಂಧಿಸಿತೆನ್ನ ಕಾವ ಬಂಧುಗಳಿಲ್ಲ 1 ಕೂಪದಿ ಕ್ರಿಮಿಗಳು ಕೋಪಿಸಿ ತನುವನು ಈ ಪರಿಯೆಲ್ಲವು ತಾಪತ್ರಯಂಗಳ ಧೂಪ ದೀಪಗಳ ಪಾಪದ ಫಲವೋ 2 ದಡವನು ಕಾಣದೆ ತಡಬಡಿಸುವೆನೋ ಮೃಡನು ತಾ ಮಾಂಗಿರಿಯೊಡೆಯ ಶ್ರೀರಂಗ ಕಡುಪಾತಕಿಯ ಕೈಹಿಡಿದೆತ್ತಿ ಕೃಪೆಯಿಂದ ತಡಿಗೆ ಸೇರಿಸಿ ನಿನ್ನ ಅಡಿಯಪಿಡಿಸೋ ದೇವಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಲೆ ಧರಿಸಿಕೊಂಡೆ ಮಾಧವನೆಂಬ ಮಣಿ ಮಾಲೆ ಧರಿಸಿಕೊಂಡೆ ಪ ಮಾಲೆ ಧರಿಸಿಕೊಂಡೆ ನೀಲಶಾಮನದಿವ್ಯ ಲೀಲೆ ಮೂಲೋಕಕ್ಕೆ ಮೇಲುಮೇಲುಯೆಂಬ ಅ,ಪ ಭವದೂರ ಪಾದವಂದನೆಂಬ ಮುಕುಟ ಧರಿಸಿಕೊಂಡೆ ಮಾದಮರ್ದನನಂಘ್ರಿಸ್ಮರಣೆಂಬ ಕರ್ಣಕುಂಡಲಿಟ್ಟುಕೊಂಡೆ ಭುವನತ್ರಯದ ಮೇಲೆ ಜವನ ನಿರ್ಭಯಕೇಶವನ ದಯವು ಎಂಬ ಭವದೊಳಗೆ ಹೊಕ್ಕು 1 ಜಡಜನಾಭನಚರಣ ದೃಢವೆಂಬ ಮಡಿಯನುಟ್ಟುಕೊಂಡೆ ಕಡಲಶಯನನಡಿಯ ಭಕ್ತೆಂಬ ಕವಚ ತೊಟ್ಟುಕೊಂಡೆ ಪೊಡವಿಗಧಿಕ ಓರ್ವ ಒಡೆಯ ಹರಿ ಅಹುದೆಂಬ ದೃಢನಿಶ್ಚಯದ ಮೇಲ್ಮಾಡಿನೊಳಗೆ ಕೂತು 2 ಅಂಗಜಪಿತನೆಂಬ ಬಂಗಾರ ಕಂಕಣಿಟ್ಟುಕೊಂಡೆ ರಂಗ ಕೃಷ್ಣನೆಂಬ ರತ್ನದ ಉಂಗುರಿಟ್ಟುಕೊಂಡೆ ಮಂಗಲಮಯ ನೀಲಾಂಗ ಶ್ರೀರಾಮನಾಮ ಚಂದ್ರಹಾರ ಹಾಕಿಕೊಂಡು ಶೃಂಗಾರನಾಗಿ ನಿಂತೆ 3
--------------
ರಾಮದಾಸರು
ಮಾಲೆಯ ಹಾಕುವೆ ಲೀಲೆಯಿಂ ತಳೆವುದು ಶ್ರೀಲಲನಾವರ ಪಾಲಿಸು ಕಂಠವ ಪ ಸಂಪಿಗೆ ಮಲ್ಲಿಗೆ ಮೊಲ್ಲೆಗುಲಾಬಿಯು ಸೊಂಪಿನ ಪಚ್ಚೆಯ ಇಂಪಿನಿಂ ಕಟ್ಟಿದ 1 ಮರುಗ ಸೇವಂತಿಗೆ ಪಾದರಿ ಹೂವಿನ ಮೆರೆವ ಮಂದಾರದ ಪಾರಿಜಾತದ ಸುರ 2 ಸುರಗಿ ಸುಗಂಧರಾಜ ಸುರಹೊನ್ನೆ ದವನವು ಪರಮಗುಣಾಕರ ವರದಹೆಜ್ಜಾಜಿಯ 3
--------------
ಶಾಮಶರ್ಮರು
ಮಾವನ ಮನೆಯೊಳಗೆ ಇರಬಹುದೆ ಕೋವಿದರು ಪ ಹರಣ ನೀಡಲು ಬಹುದುಬೇವ ಕಿಚ್ಚನು ಹಿಡಿದು ನುಂಗಬಹುದುಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತಸಾವುದೇ ಲೇಸು ಅಭಿಮಾನಿಗಳಿಗೆ1 ಪರರ ಸೇರಲು ಬಹುದು ಪತಿತರಲ್ಲಿರಬಹುದುಕೊರಳ ಘಾತಕಂಗೆ ಶಿರ ಒಪ್ಪಿಸಬಹುದುತರುಣಿಯಳ ತೌರು ಮನೆಯಲಿ ಇರುವುದಕಿಂತತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು 2 ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದುಹೇವವನಿಕ್ಕಿ ಚೂರ್ಣವ ಮಾಡಲುಆವಾಗ ನೋಡಿದರು ಎನಗೆ ಹಿತರಿಲ್ಲೆಂದುಮಾವ ಹೊರಗಾಡುವನು ಚಿಕ್ಕ ನುಡಿಗಳನು 3 ಬಂದೊಂದು ತಿಂಗಳೊಳು ಬಹುಮಾನ ನಡತೆಗಳುಬಂದೆರಡು ತಿಂಗಳೊಳಗೆ ಹಿತವಾದವುಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವುಸಂದೇಹವೇಕೆ ಸಂಸಾರಿಗಳಿಗೆ4 ಈ ಪರಿಯಲುಂಬಂಥ ಅಳಿಯ ಭೋಜನಕಿಂತಗೋಪಾಳ ಲೇಸು ಅಭಿಮಾನಿಗಳಿಗೆಶ್ರೀಪತಿ ನೆಲೆಯಾದಿಕೇಶವನ ಚರಣ ಸ-ಮೀಪದಲಿ ವಾಸಿಪುದೆ ವಾಸಿ ಮನವೆ 5 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಮಾವನ ಮರ್ದನ ಜಗದ ಜೀವನ ಪ ಸೇವಕಜನ ಭಾವದೊಳಿಹ್ಯ ದೇವದೇವ ದೇವಕಿ ಕಂದನೋ ಅ,ಪ ನವನೀತ ಜಾರತನದಿ ಮೀರಿದವನ ನಿರಂಜನ 1 ಅಂಗನೆಯರ ಭಂಗಿಸಿದ ಅಂಗನೆಯಾಗಿ ಸಂಗರವ ಗೆಲಿದ ಪಿಂಗದಿವನಮಹಿಮಾರಿಂದಂಗಜಾರಿ ವಂದ್ಯನೋ 2 ನಾಮರೂಪಿಲ್ಲದವನು ನಾಮಧಾರಿ ಎನಿಸಿದನೆ ಸ್ವಾಮಿ ರಾಮನ ಮಹಿಮೆ ಈ ಕಾಮಿಜನಗಳು ಬಲ್ಲರೇ 3
--------------
ರಾಮದಾಸರು
ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ 3 ನಮ್ಮೂರ ದ್ಯಾವರೇ ಬೊಮ್ಮನಪ್ಪನು ಎಂದು ಹೊಯ್ಸಿರೋ ಡಂಗುರವನು ಪ ನಿಮ್ಮ ನೆಂಟರಿಗೆಲ್ಲ ನಿಮ್ಮ ಮಕ್ಕಳಿಗೆಲ್ಲಾ ರಂಗಪ್ಪನವನೆಂದು ಸಾರಿಸಾರಿ ಅ.ಪ ಭೋರಪ್ಪನೆಂದರೂ ತಿಮ್ಮಪ್ಪನೆಂದರೂ ಈರಪ್ಪನೆಂದರೂ ಒಬ್ಬನಣ್ಣ ಸಾರಿ ಡಂಗುರವನು ಹೊಯ್ಸಿರಣ್ಣ 1 ಕುರಿಕೋಳಿ ಕೋಣಗಳ ಶಿರವ ತರಿಯಲು ಬೇಡಿ ನರರಂತೆ ಜೀವಿಗಳು ಅವುಗಳಣ್ಣ ಬರಿಯ ಭಕ್ತಿಯೇ ಸಾಕು ಗುರುಡವಾಹನನವನು ಪರಮಾತ್ಮನವನೆಮ್ಮ ಕಾಯ್ವನಣ್ಣ 2 ರಂಗ ನರಶಿಂಗನು ಗಂಗೆಯನು ಹೆತ್ತನೂ ಗಂಗೆಯನು ಹೊತ್ತವನೂ ಒಬ್ಬನಣ್ಣ ಶಿಂಗರದ ಗೋಪಾಲ ಮಾಂಗಿರಿಯ ರಂಗನೂ ಒಬ್ಬನೇ ತಾನೆಂದು ತಿಳಿಯಿರಣ್ಣ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್