ಒಟ್ಟು 13912 ಕಡೆಗಳಲ್ಲಿ , 138 ದಾಸರು , 7210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರ ಪ ಧರೆಯನಾಳಿದ ತ್ರಿಶಂಕು ದೊರೆಯು ತಾನೆಲ್ಲಿಹರಿಶ್ಚಂದ್ರ ಮೊದಲಾದ ಚಕ್ರವರ್ತಿಗಳೆಲ್ಲಿಶರಧಿ ಮಧ್ಯದೊಳಿದ್ದ ರಾವಣಾಸುರನೆಲ್ಲಿಸಿರಿಯುಳ್ಳ ಕೌರವರು ಪಾಂಡವರು ತಾವೆಲ್ಲಿಧರೆಗಿಳಿದು ಪೋದಾತ ವಾಲಿಯು ತಾನೆಲ್ಲಿಸುರರೊಡನೆ ಹೋರಿದಾ ಬಲಿಯು ತಾನೆಲ್ಲಿ 1 ದಶರಥ ಮೊದಲು ಷೋಡಶ ರಾಯರುಗಳೆಲ್ಲಿಅಸಹಾಯ ಶೂರ ವೀರ ವಿಕ್ರಮರೆಲ್ಲಿಅಸಮಬಲ ವಸುಮತಿಯ ಹಿರಣ್ಯಾಕ್ಷನೆಲ್ಲಿವಸುಧೆಯೊಳಗಿದ್ದ ಹದಿನಾರು ಸಾವಿರರೆಲ್ಲಿಕುಸುಮ ಬಾಣನ ಪಡೆದ ದೇವ ತಾನೆಲ್ಲಿಸುಶರೀರ ಎನಿಸಿದ ಅಭಿಮನ್ಯು ತಾನೆಲ್ಲಿ 2 ಈ ಪರಿಯೆ ಈ ಧರೆಯನಾಳಿ ಹೋದವರೆಷ್ಟುಈ ಪರಿಯೆ ಸ್ವರ್ಗಕ್ಕೆ ಇಂದ್ರಾದಿಗಳು ಎಷ್ಟುಈ ಪರಿಯೆ ಹರಬ್ರಹ್ಮರಾದವರು ತಾವೆಷ್ಟುಈ ಪರಿಯೆ ಯುಗಪ್ರಳಯವಾಗಿ ಹೋದವು ಎಷ್ಟುಈ ಪರಿಯೆ ಜಲ ಪ್ರಳಯವಾಗಿ ಹೋದವು ಎಷ್ಟುಶ್ರೀಪತಿ ಕೇಶವನಲಿಡು ಭಕುತಿ - ಕೊಡುವ ಮುಕುತಿ 3
--------------
ಕನಕದಾಸ
ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಸಾರ ಬಂದೆ ಪ ಚಕ್ರಧರ ಧುರಧೀರ ನಾರಸಿಂಹ ನಾನು ಬಂದೆ ನಾನು ಬಂದೆ ಅ ಕಲ್ಲೊಳು ವಿಷಯ ಪುಟ್ಟಿಸಿದನಾ ಶುಭವಲ್ಲದ ದಿವಸದೊಳಿರಾ ನೋಡಿಇಲ್ಲದ ಬಯಲ ನಿಂದೆಯ ಪೊತ್ತು ಶುಕಾಮಲ್ಲರೊಡನೆ ಕಾದಿ ಮಲೆತ ಸಾಲ್ವರ ಕೊಂದುಮಡದಿಗೆ ರತ್ನ ತಂದುದರಿಂದ 1 ಮಡದಿಯ ಮನೆಯ ಅರ್ಭಕನಾಗಿ ಬಲುಗಡಿಯ ದಾನವನ ಕೊಂದನ ಸೂನುಬಡನಡುವಿನ ಠಾವಿಗೆ ಸಿಲ್ಕಿ ಸುಖಪಡದಿರೆ ರಾಯನಾ ಹಿಡಿದು ತೋಳು ಕಟ್ಟಿದುದರಿಂದ 2 ಮೂಲ ವೃಕ್ಷದಾಲಾರ ಮುಂದೆಯ ದಾನವರಿರ್ದಾಲಯ ದಹಿಪನೆಂಬುದಯ್ಯನಬಲಮಾಡಿ ಬಲಗೆ ಇಂದುರುಹಿದೆ ಕಾಗಿನೆಲೆಯಾದಿ ಕೇಶವ ಖಳನ ಗರ್ಭವಿಚ್ಛನ್ನಪ್ರಹ್ಲಾದಗೆ ಪ್ರಸನ್ನವಾದುದರಿಂದ 3
--------------
ಕನಕದಾಸ
ಸಾರ ಸರ್ವಸ್ವವನುತಿಳಿಯಾದ ಭಾಷೆಯಲಿ ತಿಳಿಸಿದ ಸಮರ್ಥನಿಗೆ 1ಪಾಂಡಿತ್ಯ ಮದದಿ ಸ್ವೋತ್ತವರ ದ್ರೋಹವಮಾಡಿತತ್ಫಲವನುಂಡು ಮನಗಂಡು ಬೆಂದುಬೆಂಡಾಗಿಬಂದು ಶರಣೆಂದು ಪಾದಕೆಬೀಳೆ'ಜಯ ಗೋಪಾಲ ದಾಸರು ಅನುಗ್ರ'ಸಿದರು 2ಸದ್ಭಕ್ತ ಸುಜ್ಞಾನ ವೈರಾಗ್ಯ ಆಯುಷ್ಯದಯಪಾಲಿಸಿದು ದಾಸ ದ್ವಯರಿಗೆವೈರಾಗ್ಯ ಒಡಮೂಡಿ ಪಾಂಡಿತ್ಯ ಮದ ಓಡಿಹರಿದಾಸ ದಿಕ್ಷೆಯನು ಪಡೆದಾಗ ಶ್ರೀನಿವಾಸಚಾರ್ಯ ಹರಿದಾಸ ನಾದ 3ಗುರು ಆಜ್ಞೆ ಕೊಡಲು ಪಂಢರಿಗೆ ಹೋದರು ಅಲ್ಲಿರುಕ್ಮಿಣಿ ಪಾಂಡುರಂಗನ ಔತಣಚಂದ್ರಭಾಗಿಯಲಿ 'ಜಗನ್ನಾಥ'ಠಲ'ನೆಂಬ ಅಂಕಿತವು ದೊರಕಿತು ಸ್ನಾನಕಾಲದಲಿ 4ನಿತ್ಯ ಹರಿನಾಮ ಸಂಕೀರ್ತನವು ಹಗಲಿರಳು ನಿತ್ಯನೂತನ ಪದ ಸುಳಾದಿಗಳ ಸುಗ್ಗಿನಿತ್ಯ ಸದ್ಭಕತರಿಗೆ ಪಾಠ ಪ್ರವಚನಭಕ್ತರಾಧೀನ ಭೂಪತಿ'ಠ್ಠಲನು ಕುಣಿದ 5
--------------
ಭೂಪತಿ ವಿಠಲರು
ಸಾರವೆಂದು ನಂಬಬ್ಯಾಡವೋ ಸಂಸಾರ ಸಾರವೆಂದು ನಂಬಬ್ಯಾಡವೋ ಪ ಸಾರವೆಂದು ನಂಬದೇ ಸಂಸಾರ ಸುಖವೆಲ್ಲ ಅ ಕಂಸಾರಿ ಚರಣ ಸಾರಿರೋ ಅ.ಪ ಇಂದ್ರಜಾಲ ದೊಡ್ಡವಣ ಗಂಧರ್ವ ಪುರದ ಮಾಟಾ ಸಾಂದ್ರಜಲ ಪೂರಾ ಛಂದವಿದು ನೋಡಿರ್ಯೋ ಕನಸಿನಲಿ ಕೆಂಯ್ಯಾ ಬೆಳೆಯ ಘನವಕಂಡು ನೆಚ್ಚಿ ತನ್ನ ಮನಿಯೊಳಿಹ ಧಾನ್ಯವೆಲ್ಲಾ ಜಿನುಗು ಮಾಡಿದಂದದಿ 1 ತನುವುತನ್ನನಳಿದರೆ ತನು ಸಂಬಂಧಿಗಳಾರು ಕ್ಷಣಿಕವಾದಾ ಸತಿಸುತ ಧನದ್ರವ್ಯ ಕಾಣಿರ್ಯೋ ಮರ್ಕಟವು ಕೀಲುದೆಗೆದು ಪುಕ್ಕಟೆವೆಸಿಕ್ಕಿದಂತೆ ಅಕ್ಕರದ ಸುಖವೆಲ್ಲಾ ದುಃಖ ರೂಪ ಕಾಣಿರ್ಯೋ 2 ಕುತ್ತಿನ ಮಡಹು ತಾಪತ್ರಯ ತಾರುಮನೆ ಮೃತ್ಯುಬಾಯ ತುತ್ತುರೋಗ ಹುತ್ತವಿದು ಕಾಣಿರ್ಯೋ ಮರಹು ನೀಗಿ ಹರಿಯಭಕ್ತಿ ಬೆರೆದು ನಿತ್ಯರಾಗಿರೆಂದು ಗುರು ಮಹಿಪತಿ ಭೋದಗರೆದ ವಾಕ್ಯನೋಡಿರ್ಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಸ ಚರಣವ ತೋರೋ ನಿನ್ನ [ಪಾರ] ಕರುಣಾಮೃತವನು ಬೀರೋ ಪ ಮುರಳೀಧರ ಕೃಷ್ಣ ಬಾರೋ ಎನ್ನ ಹೃದಯ ಮಂದಿರವನು ಸೇರೋ ಅ.ಪ ನಿನ್ನ ಹೊರತು ಕೈ ಹಿಡಿಯುವರಾರೋ ಎನ್ನ ಭವಗಳ ಹರಿಸುವರಾರೋ ಎನ್ನಪರಾಧವ ಮನ್ನಿಸಿ ಬಾರೋ ಪನ್ನಗಶಯನ ನೀ ನಸುನಗೆದೋರೋ 1 ನಿನ್ನ ದರ್ಶನಕಾಗಿ ಹಾತೊರೆಯುವೆನೋ ನಿನ್ನ ಸೇವೆಗೆ ಎನ್ನ ತೆತ್ತಿಹೆನೋ ನಿನ್ನ ಪರೀಕ್ಷೆಗೆ ಫಲ ನಿನಗೇನೋ ಚೆನ್ನ ಮಾಂಗಿರಿರಂಗ ಮುನಿಸೆನ್ನೊಳೇನೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾರಸ ನಯನ ಶ್ರೀರಾಮಚಂದ್ರನ ಚರಿತೆ ಸಾರ ಹೃದಯ ಶ್ರೀ ಪ ಭವ ಮುಖರರ ಮೊರೆಯ ಕೇಳಿ ಧಾರುಣಿಯೊಳಗವತಾರ ಮಾಡಿದನಮ್ಮಾ ಅ.ಪ. ದಶರಥ ಸುತನೆನಿಸಿ ವಸುಧೆಯೊಳವತರಿಸಿ ಕುಶಿಕಸುತನ ಯಜ್ಞವ ನೆರೆಪಾಲಿಸಿ ಅಶಮವಾಗಿದ್ದ ಅಹಲ್ಯೆಯ ಶಾಪ ಪರಿಹರಿಸಿ ವಸುಧೀಶ ಜನಕನಾಸ್ಥಾನ ಪ್ರವೇಶಿಸಿ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯನೊಲಿಸಿ ಅಸಮ ಭಾರ್ಗವನೊಡನೆ ಸರಸವ ನೆಸಗಿ ಜಗದೊಳು ಲೀಲೆ ತೋರಿದ 1 ಜನಕನಾಜ್ಞೆಯ ತಾಳಿ ಜನಕ ಸುತೆಯ ಸಹಿತ ಅನುಜನೊಡನೆ ಹೊರಟು ವನವಾಸಕೆ ಘನಭಕ್ತಿ ಭರಿತ ಶ್ರೀ ಭರತಗೆ ಪಾದುಕೆ ನೀನು ಕರುಣಿಸಿ ಮುಂದೆ ವನದಂಡಕವ ಪೊಕ್ಕು ದುರುಳ ವಿರಾಧಮುಖರನು ಹನನಗೈದಾ ಬಳಿಕ ಶರಭಂಗ ಮುನಿಗೆ ಸದ್ಗತಿಯಿತ್ತಗಸ್ತ್ಯನ ವಿನುತ ಅಸ್ತ್ರಗಳನು ಪಡೆದನಾ 2 ಪಂಚವಟಿಯೊಳಗೆ ಸಂಚುಗೈಯುತ ಬಂದ ಕಾಂಚನಮೃಗವನು ಪಂಚಕಗೊಳಿಸಿ ಕುಂಚಿತ ಮತಿಯ ದ್ವಿಪಂಚಶಿರನು ಬರಲು ವಂಚನೆಯಿಂದಪರಿಹರಿಸಲು ಸೀತೆಯ ಸಂಚುಕಾಣದೆ ವನವನದೊಳು ಸಂಚರಿಸುತಲಿ ಶೋಕ ತೋರುತ ಪಂಚಶರಹತನಂತೆ ಬಳಲುತ ಪಂಚಶರ ಪಿತ ಬಂದ ಪಂಪೆಗೆ 3 ಮಾರುತಸುತನ ವಿನಯಭರಿತ ವಾಕ್ಯಕೆ ಮೆಚ್ಚಿ ತರಣಿಸುತನ ಕೂಡೆ ಸಖ್ಯವ ಬೆಳೆಸಿ ದುರಿತವಗೈದ ವಾಲಿಯ ನಿಗ್ರಹಿಸಿ ಕಪಿ ವರ ಸುಗ್ರೀವಗೆ ರಾಜ್ಯಕರುಣಿಸಿದಾ ಬಳಿಕ ಪರಮ ವಜ್ರಶರೀರಿ ಪವನಜ ಶರಧಿಯ ಲಂಘಿಸಿ ಧರಣಿತನಯಳಿ ಗರುಹಿ ಕುಶಲವ ಮುದ್ರಿಕೆಯನಿತ್ತು ಉರುಹಿ ಲಂಕೆಯ ಬರಲು ಒಲಿದನು 4 ಭಕ್ತ ವಿಭೀಷಣನಿಗೆ ಇತ್ತು ಅಭಯವನು ಶರಧಿ ಬಂಧಿಸಿ ದಾಟಿ ಹತ್ತು ತಲೆಯವನ ಪುರವ ಪ್ರವೇಶಿಸಿ ದೈತ್ಯಶೂರರನ್ನೆಲ್ಲ ಮೃತ್ಯು ವಶವ ಮಾಡಿ ಮತ್ತೆ ಕುಂಭಕರ್ಣೇಂದ್ರಜಿತ್ ಮುಖ ದೈತ್ಯರನು ಸಂಹರಿಸಿ ರಣದೊಳು ಶತ್ರು ಭಯಂಕರನಾಗಿ ಮೆರೆದನು ಸ್ತುತ್ಯ ಮಹಿಮ ಶ್ರೀ ಕರಿಗಿರೀಶನು 5
--------------
ವರಾವಾಣಿರಾಮರಾಯದಾಸರು
ಸಾರಸದಳ ನಯನೆ-ಸಲಹೆಮ್ಮನು ತೋರುವ ಜಗದಯನೆ ಪ ಶರಧಿ ಸುಕುಮಾರಿಣಿ ಹರಿ ಸಹ ಚಾರಿಣಿ ಭುವನ ವಿದಾರಿಣಿ ರುಕ್ಮಿಣಿ ಅ.ಪ. ಮಂದಹಾಸ ವಿಜಿತೇಂದು ಕಿರಣಿ ಗಜ ಮಂದಗಮನೆ ಸಂಕ್ರಂದನ ವಂದಿತೆ 1 ನೀರಜಸಮಪಾಣಿ ನೀ ಲಾಲಿಸು ಕೀರಮಧುರ ವಾಣಿ ತಾರಹಾರ ಶೃಂಗಾರತರಂಗಿಣಿ- ಮಾರಜನನಿ ಕಂಸಾರಿಯ ರಾಣಿ 2 ನೀಲಭುಜಗವೇಣಿ-ನೀನೇಗತಿ ಪಾಲಿಸು ಕಲ್ಯಾಣಿ ಬಾಲೆ ವರದ ವಿಠಲ ರಮಣಿ 3
--------------
ಸರಗೂರು ವೆಂಕಟವರದಾರ್ಯರು
ಸಾರಸನಯನ ನಮೋ ನಮೋ ಪ ನಾರಾಯಣ ಗೋವಿಂದ ನಮೋ ಅ.ಪ. ದೀನ ಜನಾವನ ದಾನವ ಮಥನ ಶ್ರೀ ನಿಕೇತನ ಕೌಸ್ತುಭಾಭರಣ 1 ದಾಮೋದರ ದುರಿತಾರಿ ಪರಾತ್ಪರ ಹೇಮಾಂಬರಧರ ವನಮಾಲಾಧರ 2 ಸಾರಸಾಪ್ತನು ಸಾರುತಿಹನು ತವ ಸಾರಸಪಾದದ ಚಾರುದರುಶನಕೆ 3 ಮಾರ್ತಾಂಡನ ಬಲು ಚಂಡಕಿರಣವೆಮ್ಮ ನೇತ್ರಪಟುತ್ವ ಕುಂದಿಸುವುದು ಕೇಳ್ 4 ತರಣಿ ಪ್ರಕಾಶದಿ ತಪಿಸುತಿಹೆವು ನಾವ್ ಪೊರೆವುದೆಮ್ಮನು ಕರಿಗಿರೀಶನೆ 5
--------------
ವರಾವಾಣಿರಾಮರಾಯದಾಸರು
ಸಾರಿ ದೂರಿ ಹೇಳುತೇನೆ ಕೆಟ್ಟಿ ಕಂಡ್ಯ ಬಡ್ಡಿ ಮನವೆ ಪ ದೂರೋ ಬುದ್ಧಿ ಮಾಡಬೇಡ ಕೈಯೊಳಿಕೋ ಕಡ್ಡಿನಿನ್ನ ಕೈಯೊಳಿಕೋ ಕಡ್ಡಿ ಅ ಕೋಪವನ್ನೆ ಮಾಡದಿರು ಪಾಪಕೆ ಗುರಿಯಾಗದಿರುಶ್ರೀಪತಿಯ ನಾಮವನು ನೀ ಪಠಿಸುತಲಿರು ಮನವೆ 1 ಅಷ್ಟಮದದಿ ಮೆರೆಯದಿರು ನಷ್ಟಕೆ ಗುರಿಯಾಗದಿರುದುಷ್ಟಸಂಗವನ್ನು ಮಾಡಿ ಭ್ರಷ್ಟನಾಗಬೇಡ ಮನವೆ 2 ಸಿರಿಯ ಮೆಚ್ಚಿ ಮೆರೆಯದಿರು ಬರಿದೆ ಹೊತ್ತ ಕಳೆಯದಿರುಪರರ ನಿಂದೆಯನ್ನು ಮಾಡಿ ನರಕಿಯಾಗಬೇಡ ಮನವೆ 3 ಕಾಯವನ್ನು ನಂಬದಿರು ಮಾಯಕೆ ಮರುಳಾಗದಿರುಸ್ತ್ರೀಯರನ್ನು ಕಂಡು ನೀನು ಬಯಸದಿರು ಮರುಳು ಮನವೆ 4 ನಿನ್ನ ನಿಜವ ನಂಬದಿರು ಉನ್ನತಾಸೆ ಮಾಡದಿರುಚೆನ್ನಾದಿಕೇಶವನ ಪಾದವನ್ನು ನೀನು ನಂಬು ಮನವೆ 5
--------------
ಕನಕದಾಸ
ಸಾರಿ ಧ್ಯಾನ ಒಂದಿದ್ದರೆ ಸಾಕೆಲೊ ಸಂ ಸಾರ ತ್ಯಜಿಸುವುದ್ಯಾಕೊ ಪ ಹಿಂಸೆಗುಣಗಳನ್ನು ತ್ಯಜಿಸಿ ಸತತ ಅ ಹಿಂಸೆಯೆಂಬ ಧರ್ಮ ಗಳಿಸಿದರಾಯ್ತೆಲೊ ಅ.ಪ ಜಡಭವತೊಡರನು ಕಡಿದುರುಳಿಸುತ ದೃಢದೆ ಬಿಡದೆ ಕಡುಸತ್ಯ ನುಡಿಯುತ ಅಡಿಗಡಿಗೊಡಲೊಳು ಜಡಜನಾಭ ಜಗ ದೊಡೆಯನಡಿಯ ಧ್ಯಾನಿವಿದ್ದರದೊಂದೆ ಸಾಕೊ 1 ಮೋಸ ಠಕ್ಕು ಕ್ಲೇಶಗುಣ ಕಳೆದು ಭವ ಮೋಸದ ಫಾಸಿಯ ಮೂಲವ ತುಳಿದು ಆಸೆನೀಗಿ ಮನ ಬೆರಿಯದೆ ಜಗ ದೀಶನ ಸಾಸಿರನಾಮ ಧ್ಯಾಸದಿರೆ 2 ಶುನಕನ ಕನಸಿನ ಪರಿಭವನೆನುತ ತನುಮನಧನವೀಡ್ಯಾಡುತ ಅನುದಿನ ಮನಸಿಜನ ಶ್ರೀರಾಮನ ಚರಣವ ಘನತರಭಕುತಿಲಿ ನೆನೆಯುತ ಕುಣಿಯಲು 3
--------------
ರಾಮದಾಸರು
ಸಾರಿ ಭಜಿಸಿರೋ | ವಿಜಯ ಗುರುಗಳೆಂಬರಾ ಪ ಚಾರು | ಚರಣ ತೊರ್ಪರಾ ಅ.ಪ. ಸತ್ರಯಾಗದೀ ಗಂಗೆ | ಕ್ಷೇತ್ರ ತೀರದಿಭ್ರಾತೃವರ್ಗವೂ ಅವರ ತುತಿಸಿ ಕಳುಹಲೂ 1 ಗಿರಿಜೆ ರಮಣನಾ ಪುರವ | ಸಾರಿ ಬೇಗನೇಮಾರ ಕೇಳಿಯಾ ನೋಡಿ | ಗಿರಿಯ ತ್ಯಜಿಸಿದಾ 2 ಚತುರವದನನಾ ದಿವ್ಯ | ಸತ್ಯಲೋಕವಾಚತುರ ಸೇರುತಾ ಅವನ | ಸ್ತುತಿಯ ಮಾಡಿದ 3 ವೇದ ಪಠಿಸುತಾ | ಬಧಿರನಂತಿರೇವದಗಿ ಸಾಗಿದಾ | ನಾರ್ದ ದೂತನೂ4 ಹರಿಯೆ ಕಾಣುವೆ ಎಂದು | ತ್ವರದಿ ಬಂದನೂಹರಿಯ ಮಾಯವಾ ಜಗದಿ | ಯಾರು ಅರಿವರು 5 ನಿದ್ರೆ ಬಂದವಾ | ನಂತೆ ಮಲಗಿಹಾಭದ್ರ ಮೂರ್ತಿಯಾ ತಾನು ಕಾಲಿಲೊದ್ದನು 6 ಪಾದ ಒತ್ತುತಾಮೋದ ಬಡಿಸಿದಾ ತಾನು | ಸಾಧು ಮುನಿಯನು 7 ಹರಿಯೆ ಪರನೆಲ್ಲಾ | ಹರಿಯ ಸರ್ವಜ್ಞಾಹರಿಗಿನ್ನಿಲ್ಲವೋ | ಸಮರು ಅಧಿಕರವಾ 8 ಎಂದು ಸ್ಥಾಪಿಸೀ | ತಾನು ಬಂದು ನಿಂತನುಛಂದದಿಂದಲಿ ಯಜ್ಞ | ಸಾಂಗಗೈಸಿದಾ 9 ಪದಸುಳ್ಹಾದಿಯಾ | ರಚಿಸಿ ಮೋದದಿಂದಲೀವೇದ ಸಾರವಾ | ಜನಕೆ ಬೋಧಿಸೀರುವಾ 10 ಪವನನಯ್ಯನಾ ಗುರು | ಗೋವಿಂದ ವಿಠಲನಾಸ್ತವನ ಮಾಡುತ ತಾನು | ಭವವ ಕಳದನಾ 11
--------------
ಗುರುಗೋವಿಂದವಿಠಲರು
ಸಾರಿ ಸಾರಿ ಹೇಳು ತೀನಿ ಕಡ್ಡಿ ಮುರಿದು ನಾನು ಬಾರಿ ಬಾರಿಗೆ ಸತ್ತು ಹುಟ್ಟತಲಿಹೆ ನೀನು ಪ ಇರುಳು ವಿಷಯದೊಳಗೆ ಮನವ ನಿರಿಸಿ ಮಡದಿ ಮಕ್ಕಳೆಂಬಲೆಯಲಿ ಪರಿಯನರಿಯದಿದು ಇನ ಸುತನ ದೂತರೊಡನೆ ಕೊಲಿಸಿ ಕೊಳದಿರು 1 ನೀನು ಹುಟ್ಟಿ ಬರುವ ಮುನ್ನ ಇವರಿಗೆಲ್ಲ ವಾಸವೆಲ್ಲಿ ನೀನದೆಲ್ಲಿ ನಟ್ಟನಡುವೆ ಬಂದ ಸಿರಿಯಿದು ಕಾನ ಕಪಿಗಳಂತೆ ನೆರೆದು ಮಡದಿ ಮಕ್ಕಳೆಂದು ಈಗ ಪ್ರಾಣವನ್ನು ತಿನಲು ಬಂದ ನರಿಗಳಿವದಿರು 2 ದಾರಿ ಹೋಕರಿವರು ನಿನ್ನ ಋಣವು ತೀರಿ ಹೋದ ಬಳಿಕ ಯಾರಿಗಾರು ಇಲ್ಲ ನಿನಗೆ ನೀನದಲ್ಲದೆ ವೈರಿ ಕೋಣೆಲಕ್ಷ್ಮೀಪತಿಯ ಸೇರಿ ನಾಮ ಸ್ಮರಣೆಯಿಂದ ಮುಕ್ತಿ ಪಡೆದಿರು 3
--------------
ಕವಿ ಪರಮದೇವದಾಸರು
ಸಾರಿದ ಡಂಗುರ ಯಮನು ಪ ಅಘ ನಾರೇರ ಎಳತಂದು ನರಕದಲ್ಲಿಡಿರೆಂದು ಅ.ಪ. ಹೊತ್ತಾರೆ ಎದ್ದು ಪತಿಗೆ ಎರಗದವಳ ಮೃತ್ತಿಕೆ ಶೌಚ ಮಾಡದೆ ಇಪ್ಪಳಾ ಬೆತ್ತಲೆ ಕುಳಿತು ಮೈದೊಳೆವಳ ನಾದಿನಿ ಅತ್ತೆ ಮಾವನ ಬೈವವಳೆಳೆದು ತನ್ನೀರೆಂದು 1 ತಿಲಕಾಯುಧವ ಬಿಟ್ಟು ಕುಂಕುಮವಿಡುವಳ ಬೆಳಗಾದ ಕಾಲಕ್ಕೂ ಮಲಗಿಪ್ಪಳ ಮಲಿನ ವಸ್ತ್ರದಲಿ ಪತಿಯ ಬಳಿಗೆ ಪೋಗುವಳ ಕಲಹಕಾರಿಯ ಹಿಡಿದೆಳೆದು ತನ್ನಿರಿಯೆಂದು 2 ಉತ್ತಮ ಗುರುಹಿರಿಯರನು ನಿಂದಿಸುವಳ ಪೆತ್ತ ಮಕ್ಕಳ ಮಾರಿ ಬದುಕುವಳ ಪ್ರತ್ಯೇಕ ಶಯ್ಯದಿ ಮಲಗಿ ಇಪ್ಪಳ ಪಿಡಿ ದೆತ್ತ ಎಳೆದು ತಂದು ನರಕದಲ್ಲಿಡಿರೆಂದು 3 ಜಲ ಜಕ್ಕಿ ಸಾಳಿ ಕಂಬಳಿ ಬೋಳಿ ಬಕ್ಕಿ ಗೊಂ ಡಳಿ ಮೊದಲಾದವು ದೈವವೆಂದು ತಿಳಿದು ಪಿಶಾಚಿ ಎಂಜಲ ಉಂಡು ಹಿಗ್ಗುವ ಲಲನೇರಾ ಸೆಳೆದು ತನ್ನಿರೋ ಎಂದು 4 ನಾಗೇಂದ್ರ ಶಯನನ ದಿನದುಪವಾಸದ ಜಾಗರ ಮಾಡದೆ ಮಲಗಿಪ್ಪಳಾ ಭಾಗವತ ಸಚ್ಛಾಸ್ತ್ರ ಕೇಳದೆ ಉನ್ಮತ್ತ ಳಾಗಿರುವಳ ಎಳೆದು ತನ್ನಿರೆಂದು 5 ಗಂಡ ನಿರ್ಧನಿಕನೆಂದಪಮಾನ ಮಾಳ್ಪಳ ಉಂಡ ಶೇಷಾನ್ನುವನುಣಿಸುವಳಾ ಕೊಂಡೆ ಮಾತುಗಳಾಡಿ ಕಳವಳಗೊಳಿಪಳ ಮಂಡೆಗೊದಲು ಹಿಡಿದು ಎಳೆದು ತನ್ನಿರಿ ಎಂದು6 ಉಡಲಿಲ್ಲ ಉಣಲಿಲ್ಲ ಇಡಲಿಲ್ಲ ತೊಡಲಿಲ್ಲ ಸುಡಲಿಗಂಡನ ಒಗೆತನವೆನ್ನುತಾ ಹಡೆದವರನು ನುಡಿನುಡಿಗೆ ಬಯ್ಯುತಿಪ್ಪಂಥ ಕಡು ಪಾಪಿಗಳ ಹೆಡ ಮುಡಿಗಟ್ಟಿ ತನ್ನಿರಿ ಎಂದು7 ಸಾಲೆಡೆಯಲಿ ಭೇದ ಮಾಡಿ ಬಡಿಸುವಳ ನೀಲಾಂಬರವನುಟ್ಟು ಮಡಿಯೆಂಬಳ ಬಾಲಕರ ಬಡಿದಳಿಸುತಿಪ್ಪಳ ಹಿಂ ಗಾಲ ತೊಳೆಯದವಳ ಎಳೆದು ತನ್ನಿರೋ ಎಂದು8 ಪತಿಗೆ ಬೇಕಾದವರ ಅಪಮಾನ ಮಾಳ್ಪಳ ಮೃತವತ್ಸ ಗೋವಿನ ಪಾಲುಂಬಳಾ ಹುತವಾದ ಅಗ್ನಿ ತೊಳೆದು ನಂದಿಸುವಳ ಮತಿಗೇಡಿಯ ಬಿಡದೆಳೆದು ತನ್ನಿರೋ ಎಂದು 9 ಒಲಿವ ಔಷಧ ಮಾಡಿ ಪತಿಯ ಬಳಲಿಸುವಳ ಮಲಮಕ್ಕಳೊಳು ಮತ್ಸರಿಸುತಿಪ್ಪಳಾ ಕಳವಿಲಿ ಕಾಂತನ ಧನವ ವಂಚಿಸುವಳ ಗಳಕೆ ಪಾಶವ ಕಟ್ಟ ಎಳೆದು ತನ್ನಿರೋ ಎಂದು 10 ಮಿಥ್ಯಾವಾದಿಯ ಕೂಡ ಸ್ನೇಹ ಮಾಳ್ಪಳಾ ವೃತ್ತಿಲಿ ಬದುಕುವಳೆಳೆದು ತನ್ನಿರೋ ಎಂದು 11 ಲಶನು ವೃಂತಕಾದಿಗಳನು ಭಕ್ಷಿಸುವಳಾ ಸೊಸೆಯರೊಡನೆ ಮತ್ಸರಿಸುತಿಪ್ಪಳಾ ಹಸಿದು ಬಂದವರಿಗೆ ಅಶನವಿಲ್ಲೆಂಬಳಾ ಉಸಿರು ಬಿಡದಂತೆ ಎಳೆದು ತನ್ನಿರೊ ಎಂದು 12 ತುಲಸಿ ವೃಂದಾವನಕಭಿನಮಿಸದವಳ ಜಲವ ಸೋಸದೆ ಪಾನವ ಮಾಳ್ಪಳಾ ಫಲ ಧಾನ್ಯಾದಿಗಳ ನೋಡದೆ ಪಾಕ ಮಾಳ್ಪಳ ಮಳೆ ಗಾಳಿ ನಿಂದಿಪಳ ಎಳೆದು ತನ್ನಿರೋ ಎಂದ 13 ಮೀಸಲು ಮಡಿ ಎನ್ನದೆ ಭಕ್ಷಿಸುವಳ ಕೇಶಿಯೊಡನೆ ಗೆಳೆತನ ಮಾಳ್ಪಳ ದಾಸೆರಿಂದಲಿ ಪಾಕ ಪಾತ್ರೆ ಮುಟ್ಟಿಸುವಳ ನಾಸಿಕ ಬಂಧಿಸಿ ಎಳೆ ತನ್ನಿರೋ 14 ಬಾಲಕರನು ತೊಟ್ಟ್ಟಿಲೊಳಿಟ್ಟು ತೂಗುತ ಪಾಲೆರೆವುತ ಬೀಸುತ ಕಟ್ಟುತಾ ಆಲಯದೊಳು ಕೆಲಸಗಳ ಮಾಡುತ ಲಕ್ಷ್ಮೀ ಲೋಲನ ಗುಣವ ಪಾಡುವರ ಮುಟ್ಟದಿರೆಂದು15 ಅರಿಷಣ ಕುಂಕುಮ ಪುಷ್ಟಾಂಜನ ವಸ್ತ್ರಾ ಸರಸವಾಡುತ ಸುಖ ಹರಿಗೆ ಅರ್ಪಿತವೆಂಬ ಹರಿದ್ದೇರಿದೆಡೆಗೆ ಕೈಮುಗಿದು ಬನ್ನಿರಿ ಎಂದು16 ಅಗಣಿತ ಮಹಿಮ ಶ್ರೀ ಜಗನ್ನಾಥ ವಿಠಲನ್ನ ಬಗೆಬಗೆಯಿಂದ ಪಾಡುತಲೀ ಹೊಗಳುವ ದಾಸರ ಬಗೆಯ ನೇಮಿಸಿ ಕಾಯ್ವ ಸುಗುಣೇರಿದ್ದೆಡೆಗೆ ಕೈಮುಗಿದು ಬನ್ನಿರೆಂದು 17
--------------
ಜಗನ್ನಾಥದಾಸರು
ಸಾರಿದ ಸಿರಿವರ ಸಡಗರದಿಂದಲಿ ಕೌರವಪುರಕೆ ಪ ಧೀರ ಪಾಂಡವರ ಕೋರಿಕೆ ಸಲ್ಲಿಸಲು ಸಾರಸ ನಯನನು ಅ.ಪ. ಪ್ರಾತರಾಹ್ನೀಕವ ತಾ ತೀರಿಸಿ ವರ ಪೀತ ವಸನ ಧರಿಸಿ ವೀತರಾಗ ಸಂಪ್ರೀತಿಯಲಿ ಫಾಲದಿ ತಾ ತಿಲಕವ ಧರಿಸಿ ಹೇಮ ಮಕುಟೋತ್ತಮಾಂಗದಿ ಧರಿಸಿ ಜ್ಯೋತಿರ್ಮಯಗತಿ ಪ್ರೀತಿಯಿಲಿ ತರುಣಿರಾ ರುತಿ ಬೆಳಗಲು ತಾ ಸುಮುಹೂರ್ತದಿ 1 ಅಂಡಜಾಧಿಪನು ಪ್ರಕಾಂಡ ಪೀಠನುದ್ದಂಡರಥವ ತರಿಸಿ ಚಂಡಗದಾ ಕೋದಂಡಾದ್ಯಾಯುಧ ಬಂಡಿಗೆಯೊಳಗಿರಿಸಿ ಮಾರ್ತಾಂಡನಂತೆ ಮೆರೆಸಿ ಹಿಂಡುಬಳಗಗಳ ಕಂಡಾದರಿಸುತ ಪಾಂಡುಸುತರ ಬೀಳ್ಕೊಂಡು ಭರದಲಿ 2 ಸುಖದಿ ಪ್ರಯಾಣ ಬೆಳಸಿ ಪ್ರಕಟ ಪಥದಿ ಮುನಿನಿಕರಂಗಳ ಮನವಿಕಸಿತಗೊಳಿಸಿ ಶುಕಪಿಕಾದಿ ಖಗಪಿಕರಂಗಳರವ ಸುಖವ ಮನದಿ ನಿಲಿಸಿ ಸಕಲಾಂತರ್ಗತ ಕರಿಗಿರೀಶ ತಾ ಯುಕುತಿಯಿಂದ ಸಂಧಾನವ ನಡೆಸಲು 3
--------------
ವರಾವಾಣಿರಾಮರಾಯದಾಸರು