ಒಟ್ಟು 24701 ಕಡೆಗಳಲ್ಲಿ , 138 ದಾಸರು , 9090 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು ಪ ಕಟ್ಟು ಮಾಡಿದ ಯಮನು ತನ್ನ ದೂತರಿಗೆಅ ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರಸಿರಿತುಳಸಿ ವನಮಾಲೆಯಿಂದೊಪ್ಪುವವರತಿರುಮಂತ್ರ ತೀರ್ಥಪ್ರಸಾದಕೊಳಗಾದವರತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ 1 ಬಡವರಾಗಲಿ ಭಾಗ್ಯವಂತರಾಗಲಿ ಅವರುಕಡು ಕರ್ಮಿ ಘೋರಪಾತಕರಾಗಲಿನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರಗೊಡವೆ ಬೇಡೆಂದು ಯಮಧರ್ಮ ಸಾರಿದನು 2 ವಾಸುದೇವನ ವಾಸರವನಾಚರಿಸುವವರಬೇಸರಿಸದೆ ಹರಿಪ್ರಸಂಗ ಮಾಳ್ಪವರಶೇಷಶಯನ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸರಾದವರ3
--------------
ಕನಕದಾಸ
ಮುಟ್ಟಲು ಮಾಯೆ ಹೋಯಿತು, ಗುರುರಾಯ ಪ ಜ್ಞಾನದ ಪ್ರಭೆಯು ತೋರಿತು ಅ-ಜ್ಞಾನ ನನ್ನದು ಹಾರಿತು 1 ಹರುಷಕೆ ಹರುಷವಾಯ್ತುನಿರಾಶೆಯು ಕಡೆಗಾಯಿತು 2 ಜ್ಞಾನಬೋಧನ ಪ್ರಭು ಯೋಗಿತಾನು ತಾನೆ ದಯವಾಗಿ3
--------------
ಜ್ಞಾನಬೋದಕರು
ಮುಟ್ಟಿಗಿಟ್ಟಿ ನೀ ನಮ್ಮ ಎಲೊ ಎಲೊ ಮುರಾರಿ ನೀ ನಮ್ಮ ಛೇಛುಮ್ಮ [?] ಎಲೊ ಎಲೊ ಪ ಮಡಿಯನುಟ್ಟು ಮೈತೊಳೆದು ಬಂದಿಹೆವೊ ಕೊಡಬ್ಯಾಡೆಂಜಲವ ನೀ ಬಹು ತುಂಟಾ 1 ನಿಜ ಪತಿವ್ರತೆಯರು ನಾವಲ್ಲವೇನೂ ಜಾರ ನೀ ಬಲು ಚೋರ 2 ಸೋದರತ್ತೆ ಮಗ ನೀ ನಮಗಲ್ಲ ಶ್ರೀದವಿಠಲ ಬಿಡು ಹಾದಿ ಸುಮ್ಮನೆ ಹೋದೀ 3
--------------
ಶ್ರೀದವಿಠಲರು
ಮುಟ್ಟು ದೋರಿತು ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ಒಂದಿಷ್ಟು ಕೊರತೆ ಕೃಷ್ಣನೆಂಬ ಅ.ಪ ಹೇಯಗುಣವಿಲ್ಲ ಮುನಿಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ 1 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ಮಿಥ್ಯಾವಚನಿಲ್ಲವೆಂಬೊಂದಿತ್ಯಧಿಕ ಕೊರತೆಯೆಂಬ 2 ಜ್ಷಾನವಂತನೆಯ ಬಹುಮಾನವಂತನಾದರೂ ಅ ಜ್ಞಾನಶೂನ್ಯನೆಂಬ ದೊಡ್ಡ ಹಾನಿಯೊಂದಿರುವುದೆಂಬ3 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ 4 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳನಪಹರಿಪ ದೀಪನಾ ಬಿಡದು ಎಂಬ 5 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರಿವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ 6 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ 7 ನಿತ್ಯತೃಪ್ತನಾದರೂ ನಿಜ ಭೃತ್ಯರನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನುನೀನಲ್ಲವೆಂಬ 8 ಕಷ್ಟಪಡಬೇಡವೆನ್ನೊಳೆಷ್ಟು ದುರ್ಗುಣಂಗಳಿಹ ವಷ್ಟನು ಒಪ್ಪಿಸಿ ನಿನಗಿಷ್ಟ ನಾಗಬೇಕೆಂಬ 9 ಕ್ಷೀರದಧಿನವನೀತ ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ 10 ಕೊರತೆಯೆಂಬಾ ಜನರಿಗೆಲ್ಲಾ ವರವನಿತ್ತು ಪೊರೆವೆನೆಂಬ ಸ್ಥಿರವಾಗಿ ಶ್ರೀ ವ್ಯಾಘ್ರಗಿರಿಯೊಳಿರುವ ವರದ ವಿಠಲನೆಂಬ11
--------------
ವೆಂಕಟವರದಾರ್ಯರು
ಮುಡಿದಿಹ ಕುಸುಮವ ಸಡಗರದಲಿ ನೀಡೆ ಮಡದಿ ತುಳಸಿ ಎನಗೆ ಕಡುದಯದಿಂದ ಪ. ಕಂಕಣ ಕಡಗವು ವಂಕಿ ಬಳೆಯನಿಟ್ಟು ಪಂಕಜಕರದಿಂದ ಶಂಕಿಸದಲೆ ಎನಗೆ 1 ಕುಸುಮ ಭವ ಶ್ರೀ ರಮೇಶನ ತೋರಿ 2 ತುಷ್ಟಳಾಗಿ ನೀಡೆ ಅಷ್ಟು ವಿಧದ ಕುಸುಮಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠಲನ ಸತಿ3
--------------
ಅಂಬಾಬಾಯಿ
ಮುತ್ತಿ ಎನಗೆ ಬಡಿತವ್ವ ಹರಿ ಭಕ್ತರ ಮನಿಯನ ದೆವ್ವ ಪ ಅತ್ತಿತ್ತಮಾಡಿ ಬೆನ್ನ್ಹತ್ತಿ ಬಿಡದೆ ಎನ್ನ ನೆತ್ತಿಕೊಂಡು ಓಡ್ಹೋಯ್ತವ್ವ ಅ.ಪ ಬಿದ್ದರೆ ಬೀಳಗೊಡಲಿಲ್ಲವ್ವ ಸುಮ್ಮ ನಿದ್ದರೆ ಇರಗೊಡಲಿಲ್ಲವ್ವ ಬುದ್ಧಿಭ್ರಮಿಸಿ ಬಲುಗದ್ದಲಮಾಡೆನ್ನ ಮುದ್ದಿಟ್ಟೆಬ್ಬಿಸಿಕೊಂಡ್ಹೋಯ್ತವ್ವ 1 ಉಟ್ಟದಟ್ಟಬಿಡಿಸೊಗಿತವ್ವ ಬಂದ ಎರವು ಮಾಡಿತವ್ವ ವೊಷ್ಟು ಬಿಡಿಸಿ ಎನ್ನ ಗಟ್ಟ್ಯಪ್ಪಿ ತಿರುಗದ ಬೆಟ್ಟಕ್ಕೆ ಎಳಕೊಂಡ್ಹೋಯ್ತವ್ವ 2 ಭೋರಿಟ್ಟತ್ತರು ಎನ್ನ ಬಳಗವ್ವ ಸಮೀ ಪಾರನು ಬರಗೊಡಲಿಲ್ಲವ್ವ ಸಾರಸೌಖ್ಯಕ್ಕಾಧಾರ ಶ್ರೀರಾಮಪಾದ ಸೇರಿಸಾನಂದಪದವೇರಿಸಿತವ್ವ 3
--------------
ರಾಮದಾಸರು
ಮುತ್ತಿನಾರತೀ ತಂದೆತ್ತಿಪಾಡುವೆ ಚಿತ್ತಜಾತ ಜನಕ ರಂಗನಾಥದೇವಗೆ ಪ. ಭೂಮಿಪಾಲಗೆ ಶ್ರೀ ಭಾಮೆಯರಸಗೆ ದಾತ ಮನೋ ಮೋಹನಾಂಗಗೆ 1 ಕಾಳೀಮಡುವನು ಕಲಕಿ ಬಂದಗೆ ಬಾಲನಾಗಿ ಗೋವುಗಳನು ಕಾಯ್ದ ಗೊಲ್ಲಗೆ 2 ಮುರವಿರೋಧಿಗೆ ಕರುಣವಾರ್ಧಿಗೆ ತರಳ ಧ್ರುವನಿಗೊಲಿದು ಬಂದ ವರದರಾಜಗೆ 3 ಶರಣರಕ್ಷಣೆ ಸರಸಿಜಾಕ್ಷಗೆ ಪರಮ ಪಾವನ ಶೇಷಶೈಲ ಶಿಖರ ಧಾಮಗೆ 4
--------------
ನಂಜನಗೂಡು ತಿರುಮಲಾಂಬಾ
ಮುತ್ತೂರೇಶ ಶ್ರೀ ಮರ್ಕಟಾ ತುಲಸÀದಲಾಯತಾಕ್ಷ ಶ್ರೀರಾಮದೂತಾ ಪ ಎತ್ತ ಚಲಿಸದಂತೆನ್ನ ಮನವ ತವ ಪಾದ ಸರೋಜದೊಳಿಟ್ಟು ಪತ್ತು ತಲೆಯನರಿಯಡಿದಾವರೆಯನು ನಿತ್ಯ ಭಜಿಸುವಂದದಿ ಮಾಡಯ್ಯ 1 ಆಂಜನೇಯಾ ಭೀಕರ ರೂಪಾ ದಾನವ ಘಾತಕರಾ ಸತಿ ಮೇದಿನಿ ಸುತೆಯಳ ಮಂಜುಮಾಡಿ ಖಲ ರಾವಣನೊಯ್ಯಲು ಅಂಜದಿರೆಂದವನಿಪ- ನಿಗಭಯವಿತ್ತು ಮಂಜುಂ ಕಾರ್ಯವ ನೆರೆದಪೆನೆಂದೀ 2 ಭಾರತೀಯ ಪವÀನತನಯ ಘನತರ ಕಾರ್ಯಕರ್ತಾ ಶ್ರೀರಾಮದೂತಾ ಘೋರತರದ ಅಪರಾರ್ಣವನು ಹಾರಿ ದಾಂಟಿ ಲಘು ದಶಮುಖಪುರವನು ವೀರರಾಘವನಂಘ್ರಿಗೆ ಎರಗಿದಿ ನೀ 3 ದಾನವನಾಶಾ ಜಾನಕೀತ್ರಾತ ದಶರಥಸುತ ಭಜಕಾ ಆನಂದತೀರ್ಥ ದಾನವ ಕೋಟಿಯ ನಡೆದು ಜವದಿ ನೀ ಮೌನಿ ಹರಿಗೆ ಸಹಾಯಾಗ್ರಣಿಯಾಗಿ ಹೀನ ರಕ್ಕಸ ದಶ- ಶಿರವನರಿಸಿ ನೀ ನರಸಿಂಹವಿಠಲನ ದಾಸನೆನಿಸಿದೀ 4
--------------
ನರಸಿಂಹವಿಠಲರು
ಮುದದಿ ನಕ್ರನ ಕೊಂದು ಸಲಹಿದ ಸದುಭಕುತರ ಬಂಧು 1 ನಾರಿಯು ತನ್ನ ಕರೆದಾ ಮಾತ್ರದಿ ಸೀರೆಯ ಮಳೆಗರೆದಾ ಕ್ರೂರ ಖಳರ ಮುರಿದಾ ಪಾಂಡವ- ರಾರಣ್ಯದಿ ಪೊರೆದಾ ನಾರಗೆ ಅಜಮಿಳ ನಾರಾಯಣನೆನೆ ಪಾರುಗಾಣಿಸಿದಪಾರಗುಣನಿಧಿಯಾ 2 ಒಂದು ಬಾರಿಗೆ ಶ್ರೀಶನ ನೆನೆದರೆ ದುರಿತ ನಾಶಾ ಬೆಂದದ್ದು ಬಹುಪಾಶಾ ಅವಗಿ- ನ್ನೆಂದಿಗಿಲ್ಲವೊ ಕ್ಲೇಶಾ ತಂದೆ ಕದರಂಡಲಗಿ ಹನುಮಯ್ಯನೊಡೆಯ ಗೋ- ವಿಂದನ ನೆನೆದವರೆಂದಿಗು ಧನ್ಯರು 3
--------------
ಕದರುಂಡಲಗಿ ಹನುಮಯ್ಯ
ಮುದದಿ ಪಾಲಿಸೊ ಮುದತೀರಥರಾಯಾ ಸದ್ಭುಧ ಜನಗೇಯಾ ಪ ಪದುಮನಾಭ ಪದ ಪದುಮ ಮಧುಪ ಸದಯಾ ಸದಮಲ ಶುಭಕಾಯಾ ಅ.ಪ ವದಗಿ ರಾಮಕಾರ್ಯದಿ ನೀ ಮನಸಿಟ್ಟಿ ಲಂಕಾಪುರ ಮೆಟ್ಟಿ ಹೆದರದೆ ದಿತಿಜರನೆಲ್ಲ ಕೊಂದುಬಿಟ್ಟೆ ಪುಚ್ಛದಿ ಪುರಸುಟ್ಟ ಕದನದಿ ಭೀಮ ವೃಕೋದರ ಜಗಜಟ್ಟಿ ಸಂನ್ಯಾಸತೊಟ್ಟಿ1 ಸೀತಾಶೋಕ ವಿನಾಶನ ಮಹಂತಾ ಮಹಬಲಿ ಹನುಮಂತ ವಾತಜ ವಾರಿಜ ಜಾತನಾಗುವಂತಾ ಖ್ಯಾತಿಯುಳ್ಳ ವಂಥಾ ಜಯವಂತಯತಿನಾಥನೆ ಶಾಂತಾ 2 ಶಿರಿಗೋವಿಂದ ವಿಠಲನ ಪ್ರೀತಿ ಕಂದಾ ಭೀಮನೆ ಆನಂದಾಗರಿದು ಮುರಿದು ಪರಮತವನೆ ಆನಂದಾ ಮುನಿ ರೂಪದಲಿಂದ ಬದರಿಗೆ ನಡೆತಂದಾ 3
--------------
ಅಸ್ಕಿಹಾಳ ಗೋವಿಂದ
ಮುದದಿ ಹರಿಯ ಧ್ಯಾನ ಮಾಡಿ ಸಾಧಿಸೊ ಸದಯ ಹೃದಯರಾದ ಸಂಗದೊಳಗೆ ನೀನು ಬೆರೆದು ಪ --ಕರ್ತನಾದ ದೇವ ಸದ್ಪಿಲಾಸನಾ ನಿಖರವಾಗಿ ಹೃದಯದಲ್ಲಿ ನಿಲ್ಲಿಸುವೆನಾ ಪ್ರಕಟಮಾಡಿ ಸ್ತುತಿಸುತಿರುವ ಬಿಡದೆ ಅನುದಿನ ಭಕುತಿಯಿಂದ ಕ--------ಭಕ್ತ ಜನರಕೂಡಿ 1 ಯೋಗಿಜನರ ಹೃದಯದೊಳು ನಿಖರವಾಗಿಇರುವ ಭೋಗಿಶಯನನಾಗಿ ಇರುವ ಪುಣ್ಯ ಪುರುಷನಾ ಸಾಗರಾನಸುತಿಯರಾಳ್ವ ಸಾರ್ವಭೌಮನ ಬೇಗ ಭಜಿಸಿ ಗತಿಯು ಕಾಣ್ವ ಭಾಗವತರ ಸಂಗದಲ್ಲಿ 2 ದುಷ್ಟ ಜನರ ಸಂಗವೆಂಬುದು ದೂರಮಾಡೋ ನೀ ಶಿಷ್ಟ ಜನರ ಪಾದ----------ಯಾಗೋ ನೀ ಇಷ್ಟದಿಂದ ವಿಷ್ಣು ಚಿಂತನೆ ಹಿತದಿ ಮನದಿ ನೀ ನಿಷ್ಠೆಯುಳ್ಳವನು ಆಗಿ ಕೃಷ್ಣ ಹೊನ್ನ ವಿಠ್ಠಲರಾಯನಾ 3
--------------
ಹೆನ್ನೆರಂಗದಾಸರು
ಮುದುಕನಾಗಿ ಬದುಕಿ ಫಲವೇನು ತನ್ನಯ ಪ್ರಾಣ ಪದಕವಾ ಕಂಡರಿಯದನಕಾ ಪ ಬದುಕಿ ಸಂಸಾರ ಸೆಲೆಯೊಳು ಅದಕಿದಕೆಂದು ಓಡ್ಯಾಡಿ ಮದಕೆ ಮಾಯೆಯೊಳು ಸಿಕ್ಕಿ ಬದರಿಕೊಳ್ಳುತ್ತಿರುವಾ ಮನುಜಾ ಅ.ಪ. ಸತ್ತು ಹುಟ್ಟು ಹುಟ್ಟು ಸಾವಿಗೆ ಅದಕೆ ತಕ್ಕ ಉತ್ತಮ ಶ್ರೀ ಗುರುಮಂತ್ರವನ್ನು ಚಿತ್ತದಿ ಧ್ಯಾನಿಸದೆ ಮುದಿ ಕತ್ತೆಯಂತೆ ಧರೆಯೊಳಗೆ ವ್ಯರ್ಥವಾಗಿ ಜನಿಸಿ ಮದೋ ನ್ಮತ್ತನಾಗಿ ಇರುವ ಮನುಜಾ 1 ಗುರೂಪದೇಶವನ್ನು ಪಡೆಯದೆ ಸಂಸಾರವೆಂಬ ಶರಧಿಯೊಳು ಈಸಾಡಿ ಬಳಲುತ್ತ ಹರಿಯಧಿಕ ಹರನಧಿಕನೆಂದು ವಾದಿಸುತ್ತ ಪರರ ಬರಿದೆ ನಿಂದಿಸಿ ಹೊಟ್ಟೆಯ ಮಂದ ಮನುಜಾ2 ಪರಿಪೂರ್ಣಾತ್ಮಕನನ್ನು ನೋಡದೆ ಪರಾತ್ಮರ ಗುರು ವಿಮಲಾನಂದನೊಳಾಡದೆ ಮರಗಳಲ್ಲಿ ಹಾರುವವಾ ನರನಂತೆ ಮನದೊಳು ಸಿಕ್ಕಿ ನರಳುತ್ತ ಪ್ರಾಯವು ಹೋದ ನರಿಯಂತೆ ಕೂಗುವ ಮನುಜಾ 3
--------------
ಭಟಕಳ ಅಪ್ಪಯ್ಯ
ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1 ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2 ಕರ ವಿಡಿದಿಂದುದ್ಫಸದಿಹದು ಬಾಹಳರದು 3
--------------
ರುಕ್ಮಾಂಗದರು
ಮುಂದೆನಗೆ ಗತಿಯೇನೋ ಇಂದಿರೇಶಾ ತಂದೆ ನೀನೆಂದೆನುತ ತಪ್ಪನೊಪ್ಪಿಸುವೇ ಪ ಶ್ರೀಕಾಂತನೇ ನಿನಗೆ ಅಭಿಷೇಕ ಮಾಡದೆಯೆ ನಾ ಕಂಠಪರಿಯಂತ ಕುಡಿದೆನೊ ಹಾಲ ಬೇಕೆಂದು ಹರಿವಾಸರಂಗಳಾಚರಿಸದೆಯೆ ಸಾಕೆಂಬವೊಲು ಸುಖವ ಸೂರೆಗೊಂಡೇ 1 ಅತಿಶಯದಿ ನಾನಿನ್ನ ಪೂಜೆಯನು ಮಾಡದೆಯೆ ಸತಿಸುತರೆ ಸರ್ವಸ್ವವೆಂದಿರ್ದೆನೋ ಹಿತಮಿತ್ರ ಬಾಂಧವರೊಳತಿ ವಂಚನೆಯಮಾಡಿ ಮತಿವಿಕಳನಾದೆನೋ ಪತಿತಪಾವನನೇ 2 ಕಲ್ಯಾಣ ಸಮಯದಲಿ ಕಲಹಗಳ ಹೂಡುತ್ತ ಉಲ್ಲಪದಿ ನಾಕುಳಿತು ನೋಡುತಿದ್ದೆ ಸಲ್ಲಲಿತ ವಾಕ್ಯಗಳನಾಡದೆಯೆ ಸರ್ವತ್ರ ಖುಲ್ಲುಮಾತುಗಳಾಡಿ ನೋಯಿಸಿದೆ ನರರ 3 ತಾರೆಂಬುದಕೆನಾನು ತೌರುಮನೆಯಾಗಿರುವೆ ಪಾರಮಾರ್ಥಕವಾಗಿ ಕೊಡುವುದರಿಯೆ ವೀರವೈಷ್ಣವರಲ್ಲಿ ವಂದಿಸದೆ ದೂಷಿಸುತ ಘೋರಪಾತಕಿಯಾಗಿ ಇರುವೆಯೀ ಜಗದಿ 4 ನರ್ಮದಾನದಿ ಸ್ನಾನ ನಿರ್ಮಲೋದಕಪಾನ ಧರ್ಮ ಮರ್ಮಗಳರಿತು ಮಾಡುವುದು ದಾನ ಪೆರ್ಮೆಯಂಶ್ರೀಹರಿಯ ಧ್ಯಾನ ನಿದಾನ ನೆಮ್ಮದಿಯ ಮಾರ್ಗದಿಂ ಪೊರೆ ನಾನು ದೀನ 5 ನಿತ್ಯ ಜೀವಿಸುವುದನ್ನು ಕಾಡದೆಯೆ ಕಡೆಯಲ್ಲಿ ಉಸಿರುಬಿಡುವುದನು ನೋಡುತ್ತ ಗುರುತರದ ಶ್ರೀಪತಿಯ ಪದಯುಗಕೆ ಗಾಢದಿಂ ಮುಡಿಯಿಕ್ಕಿ ಪಿಡಿವಂತೆ ಮಾಡು 6 ನೀನು ಒಲಿಯುವ ಪರಿಯದಾವುದನು ಮಾಡಿಲ್ಲ ಏನು ಮಾಡಲು ಎನಗೆ ಮನಸು ಬರದು ದೀನ ಪಾಲಕ ನಮ್ಮ ಹೆಜ್ಜಾಜಿ ಕೇಶವನೆ ಸಾನುರಾಗದಿ ನಿನ್ನ ಧ್ಯಾನಿಪುದ ನೀಡೈ7
--------------
ಶಾಮಶರ್ಮರು
ಮುದ್ದು ಕೃಷ್ಣ ಮುನಿ ಶರಣ ಉದ್ಧರಿಸು ನೀ ಉಡುಪಿ ರನ್ನ ಪ. ಮುದ್ದೆ ಬೆಣ್ಣೆ ಕೊಡುವೆ ಚೆನ್ನ ಮಧ್ವಮುನಿಯ ಮನ ಪ್ರಸನ್ನ ಅ.ಪ. ಲೀಲೆಯಿಂದ ಕೊಳಲನೂದಿ ಕಾಳಿಮಡುವ ಕಲಕಿ ನಿಂದ ಲೀಲೆ ಕೇಳೆ ಮನಕಾನಂದ 1 ನಿನ್ನ ಮಹಿಮೆ ಅಧಿಕವಾಗಿ ಎನ್ನ ಮನಕೆ ಹರುಷವಾಗಿ ಪನ್ನಗೇಂದ್ರಶಯನ ಸ್ವಾಮಿ ನಿನ್ನ ರೂಪ ತೋರೊ ಪ್ರೇಮಿ 2 ಪೊರೆ ಗೋಪಾಲಕೃಷ್ಣವಿಠ್ಠಲ ನಿರುತ ನಿನ್ನ ಚರಣ ಕಮಲ ಮೊರೆಯ ಹೊಕ್ಕೆ ಮರೆಯದೆನ್ನ ಕರುಣೆಯಿಂದ ಕಾಯೊ ಘನ್ನ 3
--------------
ಅಂಬಾಬಾಯಿ