ಒಟ್ಟು 12179 ಕಡೆಗಳಲ್ಲಿ , 134 ದಾಸರು , 5885 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕಪಾಲಕರು96-1ಪೂರ್ಣ ಸುಗುಣಾಂಬೋಧಿಅನಘಲಕ್ಷ್ಮೀರಮಣಜ್ಞಾನಾದಿನಿಖಿಳಸೌಭಾಗ್ಯದನೆ ಸ್ವಾಮಿಅನವರತಸರ್ವ ದಿಕ್ಪಾಲಕರೊಳಿದ್ದು ನೀಎನ್ನ ರಕ್ಷಿಪ ವಿಭುವೆ ಶರಣು ಮಾಂಪಾಹಿಪಇಂದ್ರಾಗ್ನಿ ಯಮ ನಿಯಯತಿ ವರುಣ ವಾಯುಚಂದ್ರ ನಿಧಿಪತಿ ಈಶಾನಫಣಿಬ್ರಹ್ಮಇಂದಿರಾಪತಿ ಸದಾ ನಿಮ್ಮೊಳು ನಿಂತು ಆನಂದ ಸರ್ವೇಷ್ಟಗಳಈವಸ್ಮರಿಪರಿಗೆ1ವಾಮ ಹಸ್ತದಿ ವಜ್ರಬಲ ಕರವು ಅಭಯದವುಹೇಮವರ್ಣನೆ ಸಹಸ್ರಾಕ್ಷಸುರರಾಜಕಾಮಿತಾರ್ಥವನೀವೆ ಐರಾವತಾರೂಢನಮೋ ಶಚೀಪತಿ ಇಂದ್ರ ಶ್ರೀಶಪ್ರಿಯತರನೆ 2ಹೇಮವರ್ಣಾಂಗನೆ ಸಪ್ತಕರ ಸಪ್ತಾರ್ಚಿನಮೋ ಸ್ವಾಹಾಪತಿ ಅಗ್ನಿ ಮೇಷವಾಹನನೆಕಾಮದನೆ ದುರಿತಹನೆ ಹರಿಣೀಶಪ್ರಿಯಕರನೆನಮೋ ಶ್ರುವಾಶಕ್ತ್ಯಾದಿಧರ ಅಭಯಹಸ್ತ 3ಜ್ಞಾನಸುಖಮಯ ವಿಷ್ಣುಯಜÕನಿಗೆ ಪ್ರಿಯತರನೆಕೃಷ್ಣವರ್ಣನೆ ಲೋಕಕರ್ಮಫಲಪ್ರದನೆದಂಡಧರ ಅಭಯದನೆ ಮಹಿಷವಾಹನ ಯಮನೆಎನ್ನ ಮನ್ನಿಸಿಪೊರೆಇಲಾಪತಿಯೆ ಶರಣು4ಅಸುರರಿಗೆ ಭೀಕರ ಕರಾಲ ವಿರೂಪಾಕ್ಷನೆಅಸಿಧರನೆ ಅಭಯದನೆ ಶರಣು ಮಾಂಪಾಹಿನೃಸಿಂಹಪ್ರಿಯತರನೆ ಕಾಳಿಕಾಪತಿ ಊಧ್ರ್ವಕೇಶ ನಿಋಋತಿನೀಲನರವಾಹ ನಮಸ್ತೆ5ಮೀನ ವಡವಕಮಠಕ್ರೋಡನಿಗೆ ಪ್ರಿಯತರನೆಸ್ವರ್ಣವರ್ಣನೆ ವರುಣ ಪದ್ಮಿನೀರಮಣವನಪತಿಯೆ ಮಕರವಾಹನ ಹವಳಭೂಷಣನೆನಿನಗೆ ನಮೋ ಪಾಶಧರ ಅಭಯದನೆಪಾಹಿ6ನಿಯಮನ ಸುಕರ್ತಾ ಶ್ರೀ ಪುಂಡರೀಕಾಕ್ಷನಿಗೆಪ್ರಿಯತರನೆ ಹರಿಣವಾಹನ ಮೋಹಿನೀಶಶ್ಯಾಮವರ್ಣನೆ ವಾಯು ಜಗತ್ ಪ್ರಾಣರೂಪನೆಕಾಯೆನ್ನ ದಯದಿ ಗದಾಪಾಣಿ ಅಭಯದನೆ 7ಸಾರಾತ್ಮ ಹಯಮುಖ ಧನ್ವಂತರಿ ಪ್ರಿಯತರನೆಸೂರಿಜನ ಚಿಂತ್ಯ ನೀ ಸಿತಕಾಂತಿಕಾಯಪೊರೆಎನ್ನ ಅಭಯದನೆ ರೋಹಿಣೀಪತಿಸೋಮಪುರುಟಭೂಷಣ ಸುಖದ ಕುಮುದಸದ್ಮಸ್ಥ 8ಸೌಭಾಗ್ಯ ಸಾರಾತ್ಮ ಶ್ರೀಯಃಪತಿಗೆ ಪ್ರಿಯತರನೆವಿಪರತ್ನನಿಭ ಯಕ್ಷವೈಶ್ರವಣಪಾಹಿಕುಬೇರ ನಿಧಿಪತಿ ಧನಧಾನ್ಯಾಧಿಪತೇ ನಮೊಸೌಭಾಗ್ಯ ಧನ ಧಾನ್ಯ ಸಮೃದ್ಧಿ ಎನಗೀಯೊ 9ಮನುಜವಾಹ್ಯವು ವರವಿಮಾನದಿ ಕುಳಿತಿಹೆಅನಲಾಕ್ಷಶಂಖಗದಾಧರ ನಮೋಕಿರೀಟಿಎನ್ನ ತಪ್ಪುಗಳನ್ನು ಮನ್ನಿಸಿ ಹರಿಭಕ್ತಿಧನಧಾನ್ಯ ಆರೋಗ್ಯ ಸೌಂದರ್ಯವೀಯೊ 10ನಿರ್ದೋಷಸುಖಮಯ ಜಯೇಶನಿಗೆ ಪ್ರಿಯತರನೆನೀ ದಯದಿ ಸಲಹೆನ್ನ ಈಶಾನಶೂಲಿಸದಾಶಿವನೆ ಭಕ್ತರಿಂ ಅಚ್ಛಿನ್ನ ಸೇವ್ಯನೆಸದಾಅಭಯಎನಗಿತ್ತು ಪೊರೆಯೊ ಗೌರೀಶ11ಆನಂದರೂಪ ಸಂಕರ್ಷಣ ಅನಂತನಿಗೆಅನಂತ ನೀ ಪ್ರಿಯತರನು ಶುಕ್ಲವರ್ಣನಿನ್ನಸತಿವಾರುಣೀಸಮೇತ ಅಭಯದನಾಗಿಎನ್ನಪೊರೆಕೃಷ್ಟಿಧರ ನಮೋ ನೀಲವಾಸ12ಜಗದೀಶ ಭೂರಮಣ ಕೇಶವ ಸುಪ್ರಿಯತಮನೆಜಗದಾದ್ಯ ಬ್ರಹ್ಮ ಸರಸ್ವತೀಸಮೇತಖಡ್ಗಧರ ಅಭಯದನೆ ನಮೋ ರಕ್ತವರ್ಣನೆಮುಗಿದುಕರಶರಣಾದೆಪೊರೆಪಿತಾಮಹನೆ13ಐಶ್ವರ್ಯ ಆಯುಷ್ಯ ನೀತಿ ಜಯ ಅಪಿಪಾಸಪಾವಿತ್ರ್ಯ ಸುಖವಿತ್ತಜ್ಞಾನವಿಜ್ಞಾನಈವೋರು ಇವು ಸರ್ವ ಶ್ರವಣ ಪಠಣವ ಮಾಡೆವಿಶ್ರವ ಕಾಶ್ಯಪ ಲೋಕಪಾಲಕರು ದಯದಿ 14ಇಂದ್ರಾಗ್ನಿ ಯಮ ನಿಋಋತಿ ವರುಣ ಪ್ರವಹಸ್ಥಚಂದ್ರ ವೈಶ್ರವಣ ಈಶಾನ ಅನಂತಸ್ಥಮಂದಜಾಸನಪಿತ ಪ್ರಸನ್ನ ಶ್ರೀನಿವಾಸನುಕುಂದದ ಸೌಭಾಗ್ಯವನುಈವಕರುಣಾಳು15
--------------
ಪ್ರಸನ್ನ ಶ್ರೀನಿವಾಸದಾಸರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು
ವಂದಿಸಿದರೆ ವಂದ್ಯರು ಪೂಜಿತರು ಮುಕುಂದಗೋವಿಂದ ಶ್ರೀಹರಿಯನ್ನುಎಂದೆಂದು ಕುಂದದಾನಂದವೈದಿಸುವಇಂದಿರೆಯರಸ ಭವಬಂಧಮೋಚಕನ ಪ.ಹತ್ತಶ್ವಮೇಧಾವಭೃಥಸ್ನಾನ ಮಾಡಲುಮತ್ರ್ಯರ್ಗೆ ಪುನರ್ಜನ್ಮಗಳಿಲ್ಲವೊಸತ್ಯಭಾಮಾಧವನಿಗೆ ನಿಷ್ಕಾಮದಿ ನಮಿಸಿಮತ್ತೊಮ್ಮೆ ನಮಿಸೆ ಮುಕ್ತಿಗೆ ಸಾಧನ 1ಕೋಟಿಸಹಸ್ರ ತೀರ್ಥಗಳಲಿ ಮಿಂದುಕೋಟಿಸಹಸ್ರ ವ್ರತಗಳಾಚರಿಸೆಕೋಟಿ ಭಾಂತಕಗೆ ನಮಿಸಿದ ಫಲಕೆ ಸರಿ ಪಾಸಟಿಷೋಡಶಕಳೆಯೊಳೊಂದಲ್ಲ2ಹೇಳೆನೆ ಇಂದಾದರು ನಮಿಸಿ ಶ್ರೀಲೋಲಶಾಙ್ರ್ಗಪಾಣಿಯನಸಾಲು ಜನ್ಮದಘವ ಹಾಳುಮಾಡಿ ಮುಕ್ತಿಓಲಗಕೆ ಕರೆವ ವೈಷ್ಣವ ಜನರ 3ಉರಶಿರದೃಷ್ಟಿಲಿ ಮನವಾಚದಲಿಚರಣಕರಗಳಲಿ ಜಾನುಗಳಲಿಧರೆಯಲಿ ಅಷ್ಟಾಂಗಪ್ರಣಾಮ ಮಾಳ್ಪರ್ಗೆಹರಿದು ಹೋಗೆ ಪಾಪವರ ಮುಕ್ತಿಈವ4ಸರುವಾಂಗವ ಧರೆಗೊಂದಿಸಿ ಭಕುತಿಲಿಹೊರಳಾಡಿ ಭೂಮಿಲಿ ಪರವಶದಿಹರಿಗೆ ನಮಿಸಲು ಮೈಗೊರೆದ ಧೂಳಿಯ ಕಣಾಪರಿಮಿತ ಸಹಸ್ರಾಬ್ದ ಪರಮಾಣ ಪದವಕ್ಕು 5ಸಿರಿಅಜಭವೇಂದ್ರಸುರರುಮಹಾಮುನಿನಿಕರನೃಪಮನುಜೋತ್ತಮರೆಲ್ಲಪರಮಭಕುತಿಲಿ ನಮಿಸೆ ಹರಿವಶನಾಗುವಹರಿಜನಕೆ ಮುಕ್ತಿಪಥಕಿದೆ ಪಾಥೇಯ 6ಅರ್ಚಿತ ಕೃಷ್ಣನ ನೋಡುತಾನಂದಾಶ್ರುಹುಚ್ಚನಂತೆ ನಮಿಸಿ ನಗುತ ಸುರಿಸಿಅಚ್ಯುತಾನಂತ ಸದ್ಗುಣನಿಧಿ ಭಕ್ತಪ್ರಿಯನಿಚ್ಚಪ್ರಸನ್ವೆಂಕಟನೆಂದುಚ್ಚರಿಸಿ7
--------------
ಪ್ರಸನ್ನವೆಂಕಟದಾಸರು
ವಂದಿಸಿದವರೆ ಧನ್ಯರು - ನಮ್ಮ - |ಇಂದಿರಾಪತಿಗಡ್ಡ ಬೀಳುತಲೊಮ್ಮೆ ಪ.ಒಂದೊಂದು ಸ್ತೋತ್ರದಿ ಒಂದೊಂದು ಮಂತ್ರದಿ |ಒಂದೊಂದು ನಾಮವ ನೆನೆಯುತಲಿ ||ಮಂದರೋದ್ಧರನನು ಕುಂದದೆ ಪೂಜಿಸಿ |ವಂದಿಸುವಾನಂದದಿಂದ 1ಬಿಟ್ಟು ಲಜ್ಜೆಯನು ದೃಷ್ಟಿಸಿ ನೋಡುತ |ವಿಟ್ಠಲ ವಿಟ್ಠಲ ಎನುತ ಮನ - ||ಮುಟ್ಟಿ ಮಾಡುವ ಭಕ್ತಿ - ಸ್ತೋತ್ರ - ಸ್ತುತಿಗಳಿಂದ |ಅಷ್ಟಾಂಗದಲಿ ವಂದನೆಯ ಮಾಡುತಲಿ 2ಸಿರಿಲಕ್ಷ್ಮೀಪತಿ ಶರಣಾಗತರನು |ಕರುಣಿಸೆಂದೆನುತಕರವ ಮುಗಿದು ||ಹರುಷ ಪುಳಕದಿಂದ ಹೊರತ ದೇಹವನು ಶ್ರೀ - |ಪುರಂದರವಿಠಲರಾಯನ ಚರಣಕೆ 3
--------------
ಪುರಂದರದಾಸರು
ವನಜನಾಭನ ಧಾಳಿ ಘನವಾಯಿತಿಂದಿಲಿಂದಮನೆಯೊಳು ನಿಲ್ಲಲಾರೆವಮ್ಮ ಪಚಿನ್ನನ ಸುದ್ದಿನಿತ್ಯಹೇಳುವರು ಹತ್ತರಗೂಡಾ |ಹನ್ನೊಂದೆನ್ನ ಬೇಡವಮ್ಮ ||ಅನ್ಯಾಯದ ಮಾತುಹುಸಿಹುಟ್ಟಿಸಿಯಾಡಿದರೆ ನಮ್ಮ |ಸಣ್ಣವರಾಣೆ ಗೋಪೆಮ್ಮ 1ಪೋರರಾಟಿಕೆಯಾದರೆ ಜನನೋಡೆ ನಿರ್ಭಯದಿ |ಕ್ಷೀರವ ಕುಡಿಯಬೇಕಮ್ಮ ||ಆರೂ ಮನೆಯೊಳಿಲ್ಲದ ಸಮಯದಲ್ಲಿ ಪಾಲು |ಸೋರೆ ಕದ್ದೊಯ್ಯುತಿದ್ದನಮ್ಮ2ಚಿಕ್ಕವರನ್ನು ರಂಬಿಸಿ ಸಕ್ಕರೆ ಕೊಟ್ಟು ಕದ್ದು |ರೊಕ್ಕವ ತನ್ನಿರೆಂಬುವನಮ್ಮ ||ಮಕ್ಕಳಾಟಿಕೆ ಆದರಾಯಿತೆ ನಿನ್ನ ಕಂದ |ರೊಕ್ಕವನೇನು ಮಾಡ್ಯಾನಮ್ಮ 3ಏಕಾಂತ ಮನೆಯೊಳು ಸರು ಹೊತ್ತಿನಲ್ಲಿ ಬಂದು |ಶ್ರೀಕಾಂತನಡಗಿದ್ದನಮ್ಮ ||ಹೇ ಕಾಂತೆ ನಿನ್ನ ಸಲಿಗಿಲ್ಲದೆಂತು ಬಂದನೆಂದು |ಆ ಕಾಂತ ಸಂಗ ಬಿಟ್ಟನಮ್ಮ 4ನೀರೊಳು ನೆರಳೆಂದು ತಿಳಿಯದ ಮಗುವಿಗೆ |ಪೋರನೆಳೆದು ತಾಯಂಬೊನಮ್ಮ ||ಹಾರುತಿರಲು ಸ್ವಾಮಿಯ ದಯೆಯಿಂದ ಕಂಡು ಒಬ್ಬ |ನಾರಿ ಕರಕೊಂಡು ಬಂದಳಮ್ಮ 5ತರಳರಿಗೆಲ್ಲ ಇದರಂತೆ ಹತ್ತಿರೆಂದು ಹೇಳಿ |ಹರಿವಂದು ಹತ್ತಿಕೊಂಬೊನಮ್ಮ ||ಕರುಗಳೆಲ್ಲವು ಹೀಗೆ ಹತವಾಗಿ ಪೋಪವು |ತುರುಗಳ ಗಡಹವಮ್ಮ6ಬಾಲನ ಮನೆಯೊಳಗಿರ ಹೇಳಿ ಉದಕವ |ವಾಲಯಕೆ ತರಹೋದೆನಮ್ಮ ||ಮೂಲೇಶ ಹುಡುಗನ ಕೈಯಕಟ್ಟಿಮನೆಯೆಲ್ಲ |ಹಾಳು ಮಾಡಿಯೇನೋ ತಂದನಮ್ಮ 7ಹುಡುಗರ ಅಂಬೆಯಾಗಿಯೇರಿಸಿಕೊಂಡಾಡಿಸಿ |ಕೆಡಹಿ ಕೈಕಾಲು ಮುರಿದನಮ್ಮ ||ಬಡವರೆಂದರೆ ಪುನಃ ಬಿಡದಲೆ ತಾ ಹತ್ತಿ |ನಡುವ ನೋಯಿಸೀಹ ನೋಡಮ್ಮ 8ಬಾಲೆ ಅದೇನು ಕಾರಣವೋ ತಿಳಿಯದು ನಮ್ಮ |ಮೂಲೆಯಲಡಗಿದ್ದನಮ್ಮ ||ಛೀ ಲಕುಮೀಶ ನಡೆಯೆಂದೆ ಕೈ ಸಂಧಿಸದಾಕಳ |ಮೊಲೆ ಉಂಡಿದ್ದನಮ್ಮ 9ಗಂಡಅತ್ತೆಯ ಮನೆಘೋಗಿ ನಡುವ ಹೆಣ್ಣಾ |ಪುಂಡ ಬಂದಪ್ಪಿಕೊಂಡನಮ್ಮ ||ಕಂಡು ನಾನಿದು ತರವೇನೆಲೆ ರಂಗಾಯೆನ್ನಲು |ಭಂಡು ಮಾಡಿದನು ನೋಡಮ್ಮ 10ಭ್ರಷ್ಟ ಮಾತಲ್ಲವೆ ಬಾಣಂತಿ ಮಂಚದಡಿ ಕೆಂಡ- |ವಿಟ್ಟರೆ ಕಾಸಿಕೊಂಡನಮ್ಮ ||ಥಟ್ಟನೆ ಕಂಡಂಜಿ ಪ್ರಾಣಾಂತಿಕ ಆಯಿತು ಪ್ರಾಣೇಶ |ವಿಠಲನಿಂಥವ ಕಾಣಿರಮ್ಮ 11
--------------
ಪ್ರಾಣೇಶದಾಸರು
ವನದೊಳಗತ್ರಿಯ ಮುನಿವರತರುಣಿಘನಪತಿವ್ರತೆಯೆಂದೆನಿಸಿದಳಾ ರಮಣಿಮನವ ಶೋಧಿಸೆ ಬಂದ ತ್ರಿಮೂರ್ತಿಗಳ ಕಂಡುಅನಸೂಯೆ ತನಯರೆಂದೆನಿಸಿ ತೂಗಿದಳೂ ಜೋ ಜೋ1ಜೋಜೋ ಸತ್ಯಲೋಕೇಶ ಬ್ರಹ್ಮನಿಗೆಜೋಜೋ ಹತ್ತಾವತಾರ ವಿಷ್ಣುವಿಗೆಜೋಜೋಮೃತ್ಯುಂಜಯಮೂರ್ತಿಶಂಕರಗೆಜೋ ಎಂದು ಸ್ತನಪಾನ ಗೈಸಿ ತೂಗಿದಳೂ ಜೋಜೋ2ಸೃಷ್ಟಿಕರ್ತನೆ ಜೋಜೋ ಹಂಸವಾಹನನೆಸೃಷ್ಟಿಪಾಲನೆ ಗರುಡವಾಹನನೆನಿಟಿಲನೇತ್ರನೆ ಜೋಜೋ ನಂದಿವಾಹನನೆಂದುರನ್ನ ತೊಟ್ಟಿಲೊಳಿಟ್ಟು ಪಾಡಿ ತೂಗಿದಳೂ ಜೋಜೋ3ವಾರಿಜಾಸನೆ ಜೋಜೋ ವಾಣೀಶ ಜೋಜೋಸಾರಸಾಕ್ಷನೆ ಜೋಜೋ ಸಿರಿಯರಸ ಜೋಜೋಮಾರವೈರಿಯೆ ಜೋಜೋ ಗೌರೀಶ ಜೋಜೋಮೂರು ಮೂರ್ತಿಯೆ ಜೋಯೆಂದೆನುತತೂಗಿದಳೂ ಜೋಜೋ4ಸುಂದರಮೂರ್ತಿಚತುರಾನನಜೋಜೋಸಿಂಧುಪುರೀಶ ಗೋವಿಂದನೆ ಜೋಜೋಚಂದಿರಧರನೀಲಕಂಧರಜೋಯೆಂದುಚಂದದಿಂದನುಸೂಂiÉು ಪಾಡಿ ತೂಗಿದಳೂ ಜೋಜೋ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ವರತೀರ್ಥರಾಜ ಪ್ರಯಾಗವೆನಿಸುವ ಕ್ಷೇತ್ರ - |ದೊರೆ ಮಾಧವನ ಭಜಿಸಿರೈ 3ಆ ಮಾಘಮಾಸದತಿಶಯವಾದ ಸ್ನಾನವನು |ಈ ಮಹಾನದಿಯೊಳಗೆ ಮಾಡಲೋಸುಗಬೊಮ್ಮ |ಸೋಮಶೇಖರ ಮುಖ್ಯ ದೇವತೆಗಳೈತಹರು |ಪ್ರೇಮದಿಂದಲಿ ನಿರುತ ||ನೇಮವಿದು ದ್ವಿಜಕುಲೋತ್ತಮರಾದವರುಕೇಳಿ |ಕಾಮ - ಕ್ರೋದವ ಜರಿದ ಪ್ರಾಯಾಗ ಕ್ಷೇತ್ರದಲಿ |ರಾಮಣೀಯಕ ಸ್ನಾನನುಷ್ಠಾನ ತೀರ್ಥವಿಧಿ |ಹೋಮಗಳ ಮಾಡಿರಯ್ಯ 4ಆರ್ಯವರ್ತದ ಬ್ರಹ್ಮವರ್ತ ದೇಶದ ಮಧ್ಯೆ |ಧಾರ್ಯವಾದಲೆ ಪುಣ್ಯವಾರಾಣಾಸೀ ಕ್ಷೇತ್ರ |ಕಾರ್ಯವಿಶ್ವೇಶತಾರಕ ಮಂತ್ರವುಪದೇಶಿ |ಸೂರ್ಯಚಂದ್ರಾಗ್ನಿನಯನ||ತ್ವರ್ಯುಗ್ರನೆನಿಪಭೂತೇಶ ಭೈರವನಲ್ಲಿ |ವೀರ್ಯದಿಂದಘಾಕಾರಿ ಜೀವಿಗಳ ಶಿಕ್ಷಿಸುವ |ಶೌರ್ಯಅಗಣಿತ ಮಹಿಮ ಶ್ರೀ ಬಿಂದು ಮಾಧವಗೆ |ಕಾರ್ಯದೊರೆತನವು ಅಲ್ಲಿ 5ಅರ್ತಿಯಲಿ ಪಂಚಗಂಗೆಯಲಿ ಮಜ್ಜನಮಾಡಿ |ನಿತ್ಯ ನೈಮಿತ್ತ್ಯ ಕರ್ಮಂಗಳನು ಪತಿಕರಿಸಿ |ಸುತ್ತಿ ಅಂತರ್ವೇದಿಯನ್ನು ಪಂಚಕ್ರೋಶ - |ಯಾತ್ರೆಗಳ ಮಾಡಿ ಬಳಿಕ ||ಮತ್ತೆ ಶ್ರೀ ವಿಶ್ವೇಶ್ವರಗೆ ಪ್ರದಕ್ಷಿಣೆ ಮಾಡಿ |ಭಕ್ತಿಪೂರ್ವಕವಾಗಿ ಅಲ್ಲಲ್ಲಿ ಇಹ ವೈಷ್ಣ - |ವೋತ್ತಮರಿಗೆರಗಿ ಸದ್ಧರ್ಮಗಳ ಮಾಡಿ -ಕೃತ ಕೃತ್ಯರೆಂದೆನಿಸಿದರಯ್ಯ 6
--------------
ಪುರಂದರದಾಸರು
ವರವ ಕೊಡೆ ತಾಯೆ ವರವ ಕೊಡೆ ಪ.ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆನೆರೆನಂಬಿದೆನು ನಿನ್ನ ಚರಣಕಮಲವನುಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ 1ಹೊಳೆವಂಥ ಅರಸಿನ ಹೊಳೆವ ಕರಿಯಮಣಿಸ್ಥಿರವಾಗಿ ಕಟ್ಟುವಂಥ ವರವ ಕೊಡೆತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆಯಾವಾಗಲಿರುವಂಥ ವರವ ಕೊಡೆ 2ಬಾಗಿಲ ತೋರಣ ಮದುವೆ ಮುಂಜಿ ನಾಮಕರಣಯಾವಾಗಲಾಗುವಂಥ ವರವ ಕೊಡೆಬಂಧುಬಳಗ ಹೆಚ್ಚಿ ಹೆಸರುಳ್ಳಮನೆಕಟ್ಟಿಉಂಡಿಟ್ಟಿಡುವಂಥ ವರವ ಕೊಡೆ 3ಹಾಲ ಕರೆಯುವ ಮೇಲಾದ ಸರಳೆಮ್ಮೆಸಾಲಾಗಿ ಕಟ್ಟುವಂಥ ವರವ ಕೊಡೆಕಂಡಕಂಡವರಿಗೆ ಕರೆದು ಮೃಷ್ಟಾನ್ನವತಿಳಿ ನೀರು ಕೊಡುವಂಥ ವರವ ಕೊಡೆ 4ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿಅಷ್ಟೈಶ್ವರ್ಯವು ಪುತ್ರಸಂತಾನವಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾಯು ದೇವರುಮುದದಿ ಪಾಲಿಸೊ ಮುದತೀರಥ ರಾಯಾಸದ್ಬುಧ ಜನ ಗೇಯಾ ಪಪದುಮನಾಭ ಪದ ಪದುಮ ಮುದುಪ ಸದಯಾಸದಮಲಶುಭಕಾಯಾ ಅ.ಪ.ವದಗಿರಾಮ ಕಾರ್ಯದಿ ನೀ ಮನಸಿಟ್ಟಿಲಂಕಾಪುರ ಮೆಟ್ಟಿಹೆದರದೆ ದಿತಿಜರನೆಲ್ಲ ಕೊಂದು ಬಿಟ್ಟೆಪುಚ್ಚದಿಪುರ ಸುಟ್ಟಕದನದಿ ಭೀಮವೃಕೋದರ ಜಗಜಟ್ಟಿಸಂನ್ಯಾಸ ತೊಟ್ಟಿ 1ಸೀತಾಶೋಕವಿನಾಶನ ಮಹಂತಾಮಹಬಲಿ ಹನುಮಂತದಾತಜವಾರಿಜಜಾತನಾಗುವಂತಾಖ್ಯಾತಿಯುಳ್ಳವಂಥಾಕೋತಿರೂಪಿಧರ್ಮಾನುಜಜಯವಂತಯತಿನಾಥನೆ ಶಾಂತಾ 2ಶಿರಿಗೋವಿಂದ ವಿಠಲನ ಪ್ರೀತಿ ಕಂದಾಭೀಮನೆ ಆನಂದಾಗರಿದು ಮುರಿದು ಪರಮತವನೆಆನಂದಾ ಮುನಿ ರೂಪದಲಿಂದ ಶಿರಿರಾಮನಸುತರ ಪ್ರೀಯ ಭರದಿಂದಾಬದರಿಗೆ ನಡೆ ತಂದಾ 3
--------------
ಸಿರಿಗೋವಿಂದವಿಠಲ
ವಾಯುಕುಮಾರಗೆ ಮಂಗಳ - ರಘು - |ರಾಯಸೇವಕಗೆ ಮಂಗಳ ಪ.ಅಂಜನಿಗರ್ಭಸಂಜಾತಗೆ ಮಂಗಳ |ರಂಜಿತ ದಿವ್ಯ ಮೂರ್ತಿಗೆ ಮಂಗಳ ||ಮಂಜುಳ ಕೀರ್ತಿ ಮಾಹತ್ಮ್ಯಗೆ ಮಂಗಳ |ಸಂಜೀವರಾಯಗೆ ಮಂಗಳ 1ದನುಜನಿಕರ ಸಂಹಾರಗೆ ಮಂಗಳ |ಜಾನಕಿಶೋಕ ವಿನಾಶಗೆ ಮಂಗಳ ||ವನಧಿ ವಿರೋಧಿಗೆ ಮಂಗಳ ಜಯ |ಹನುಮವಿಲಾಸಗೆ ಮಂಗಳ 2ಸೇತುವೆಗಟ್ಟಿದಾತಗೆ ಮಂಗಳ |ಸೀತೆಯ ತಂದ ಬಂಟಗೆ ಮಂಗಳ ||ಖ್ಯಾತ ಪುರಂದರವಿಠಲನ ಕರುಣೆಗೆ |ಪಾತ್ರನಾದ ಭಕುತೆಗೆ ಮಂಗಳ 3
--------------
ಪುರಂದರದಾಸರು
ವಾಯುದೇವರು152ಎಣೆಗಾಣೆ ಭುವನದಿ ಶ್ರೀರಾಮಚಂದ್ರನ ಪ್ರಿಯವೀರಹನುಮ ಘನಧೀರ ಪ.ಬ್ರಹ್ಮ ಪಿತೃ ಪಾದಕ್ಕೆರಗಿ ಉಮ್ಮಯದಿ ಕೊಂಡಾಜೆÕಸಮನೆಶರಧಿಗೋಷ್ಪದ ಮಾಡಿ ಹೋಗ್ಯಮ್ಮ ಜಾನಕಿಗೆ ಪರಬೊಮ್ಮನುಂಗುರವಿತ್ತುಹಮ್ಮಿನ ನಿಶಾಚರನಿಗುಮ್ಮಳಿಕೆನಿತ್ತೆ 1ಕ್ರೀಡೆಯಿಂ ದಶಶಿರನನೊಡೆವನಾಯದೆ ಶಿಥಿಲಮಾಡುವನಾಗಿನಾ ಮಾತನಾಡಿ ರಮೆಯಚೂಡಾಮಣಿಯ ತಂದು ನೀಡಿ ರಾಘವಗೆ ಸುಖಮಾಡಿಸಿದೆ ಅಪ್ರತಿಮಾರುತಿ ಅತಿಧೀರ 2ಗರುವಿನ ಖಳನ ವನದತರುವಿಟಪಮೂಲಸಹಮುರಿದು ಕರಚರಣದಿ ತಂದಾನೆರದ ರಿಪುರಕ್ಕಸರ ತರಿ ತರಿದು ಮರಲುಂದಿ ರಭಸದಿಂದಸುರಪುರವನುರುಹಿದೆ 3ಕದನಕರ್ಕಶರಿಪುಗಳೆದೆಯೊದೆದು ಕೋಟಿ ಸಿಂಹದ ರಭಸದಿನಲ್ಲಿ ಬಿಸುಟಿ ಉದಧಿಯಲ್ಲಿಸುದುರ್ಲಭಾದ ನಾಕೌಷಧವ ತಂದು ರಣದಿ ಮಲಗಿದ ವೀರರಸುಗಾಯಿದೆ ಅದ್ಭುತ ಮಹಿಮ 4ಸೀತಾಪತಿಯ ಪ್ರೀತಿಯತ್ಯಾದರದಿ ಪಡೆದು ವಿಷಯಾತೀತನಾಗಿ ವಿಧಾತನಾದೆವಾತಜಾತನೆ ನಿಮ್ಮ ಖ್ಯಾತಿಯ ಹೊಗಳಲಳವೆನಾಥ ಪ್ರಸನ್ನವೆಂಕಟ ದಾತನಿಗೆ ದೂತ 5
--------------
ಪ್ರಸನ್ನವೆಂಕಟದಾಸರು
ವಾರಣವದನ ತ್ರೈಲೋಕ್ಯಸುಮೋಹನ ವಾರಣವದನ ಪ.ವಾರಿಜಾಕ್ಷ ವರಗುಣಾಕರವಾರಿಜಾಕ್ಷಿ ವರದಾಯಕಸನ್ನುತನಾರದಾದಿ ಮುನಿವಂದಿತ ಪದಯುಗ ಅ.ಪ.ಸುಂದರಾಂಗ ಸುಕಲಾನ್ವಿತ ನಿಭಚರಣಕಟಿಶೋಭಿತ ವ್ಯಾಳಸ-ಬಂಧನಾಬ್ಧಿ ಶತಕೋಟಿಸದೃಶ ಕಿರಣಚಂದನಾಂಗಾರ್ಚಿತ ಸುಮನೋಹರಮಂದಹಾಸ ಮಹಿಮಾಂಬುಧಿಚಂದಿರ 1ಕಂಬುಗ್ರೀವಕಮನೀಯಕರಾಂಬುರುಹಪಾಶಾಂಕುಶಧರವರಶಂಬರಾರಿಜಿತುತನಯ ಮಧುರಗೇಹಜಂಭಭೇದಿವಂದಿತ ಅತ್ರಿವಂದಿತಲಂಬೋದರ ವಿಘ್ನಾಂಬುಧಿಕುಂಭಜ2ಚಾರುಭಾರ ಕನ್ಯಾಪುರವರನಿಲಯಮೃಕಂಡುಜದ ಮುನಿವರಸಾರಮಂತ್ರಸ್ಥಾಪಿತ ಮಂಗಲ ಕೆರೆಯವರಕಪಿತ್ಥಫಲೋರಸಭುಂಜಿತಧೀರ ಲಕ್ಷ್ಮೀ ನಾರಾಯಣಸಖಸುತ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಾಸವನೆ ಮಾಡಿರೋ ಕಾಶಿಯಲಿ ಪವಾಸವನೆ ಮಾಡಿ ಕಾಶಿಯಲಿ ವಸುಧೆಯ ಜನರು |ಏಸುಜನ್ಮದ ಪಾಪವನೆ ಕಳೆದು ಯಮಪುರಿಯ ||ಹೇಸಿಕೆಯ ರಾಶಿಗಳ ಒದೆದು ಹೆಚ್ಚಳವಾದ |ಮೀಸಲಳಿಯದಪದವಿಸಾರಿರಯ್ಯಅಪಶ್ರೀ ವಿಷ್ಣು ಸಿರಿಸಹಿತ ಗರುಡ ವಾಹನನಾಗಿ |ಜೀವಿಗಳ ಸ್ಥಿತಿಯ ನೋಡುತ ಬರಲು ಮರುಗಿ ಆ |ದೇವಿ ಬಿನ್ನಹ ಮಾಡಲಾಗ ಕರುಣಾಕರನು |ಭಾವಿಸಿದನೀ ಕೃತಿಯನು |ದೇವತ್ರಿಧಾಮನವ ದಿವ್ಯ ವೈಕುಂಠದೊಳು |ಪಾವನಸ್ಥಳವಿದೆಂದೊರೆದ ಧರೆಯೊಳು ಕಾಶಿ |ಶ್ರೀ ವಾರಣಾಸಿ ಪಂಚಕ್ರೋಶಮಿತಿಯಲ್ಲಿಆ ವಿಪುಳ ಮಣಿಕರಣಿಕೆ 1ಬಲಿಯ ಬಳಿ ಮೂರಡಿಯ ಭೂದಾನವನೆ ಬೇಡಿ |ನೆಲನಳೆಯ ಈರಡಿಗೆ ಸಾಲದಿರೆ ಬ್ರಹ್ಮಾಂಡ |ಬಲಪದದ ನಖದಿ ಸೀಳಲ್ಕೆ ಬಹಿರಾವರಣ |ಜಲಸುರಿಯೆ ಅಂಗುಟದಲಿ ||ಸಲೆ ತೀರ್ಥವೆಂದಜ ಕಮಂಡಲದೊಳಗೆ ಧರಿಸಿ |ತೊಳೆದನಾ ಚರಣಗಳ ಬಲು ಗಂಗೆ ಬರಲು ಜಡೆ - |ತಲೆಯೊಳಿಟ್ಟಾ ಶಿವ ಭಗೀರಥನ ಯತ್ನದಿಂ |ದಿಳಿದಿಹಳು ಕಾಶಿಯಲ್ಲಿ 2ಪರಮನಿರ್ಮಲ ಶುಭ್ರತರದ ಭಾಗೀರಥಿಯನಿರಜೆ ನೀಲಾಭೆ ಯಮುನೆಯ ಮಧ್ಯದಲಿ ಕಾರ್ತ |ಸ್ವರವರ್ಣದಿಂದಲ್ಲಿ ಗುಪ್ತಗಾಮಿನಿಯಾದ |ಸರಸತಿಯ ಸಂಗಮದಲಿ ||ಮೆರೆಯುವ ತ್ರಿವೇಣಿಯೆನಿಸುವ ತೀರದಲ್ಲಿ ವಟ - |ತರುಛಾಯೆಯಲ್ಲಿಹುದು ದೇವ ಋಷಿ - ಮೌನೀಗಣ 3
--------------
ಪುರಂದರದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು