ಒಟ್ಟು 13403 ಕಡೆಗಳಲ್ಲಿ , 136 ದಾಸರು , 5923 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಾವಿಯೀ ಪರಮಾತ್ಮಗೊಂದೂ ಇಲ್ಲ |ಶ್ರೀ ವರನೆ ಇದು ಅಲ್ಲವೆಂಬರಿಲ್ಲ ಪಮೊಮ್ಮಕ್ಕಳನ್ನು ವಂಚಿಸಿ ತಾನೆ ಕೊಲ್ಲಿಸಿದ |ಮೊಮ್ಮಗಗೆ ತನ್ನ ತಂಗಿಯನು ಕೊಟ್ಟ ||ಮೊಮ್ಮಗನ ನಾದಿನಿಯರಲ್ಲಿ ಮಕ್ಕಳ ಪಡೆದ |ಮೊಮ್ಮಗನ ವಹಿಸಿ ಪುತ್ರನ್ನ ಅಳಿದ 1ಒಬ್ಬ ಮಾವನ ನೋಡ ನೋಡ ಪ್ರಾಣವಕೊಂಡ|ಒಬ್ಬ ಮಾವನ ಕೂಡ ಕಡಿದಾಡಿದ ||ಒಬ್ಬ ಮಾವನ ಮೇಲೆ ಬಾಣವನ್ನೇರಿಸಿದ |ಒಬ್ಬ ಮಾವನ ಮಗನಮಾನಕಳೆದ2ಒಬ್ಬ ಅತ್ತೆಗೆ ತಾನೆ ತಂದೆಯನ್ನಿಸಿಕೊಂಬ |ಒಬ್ಬ ಅತ್ತೆಗೆ ಗಂಡನಾದನಿವನು |ಒಬ್ಬ ಅತ್ತೆಗೆ ಮಾವನಾದನೀ ಕೇಶವನು |ಒಬ್ಬ ಅತ್ತೆಯ ಬಹಳ ಶ್ರಮ ಬಡಿಸಿದ 3ಒಬ್ಬ ಮಗಳನು ತನ್ನ ಹಿರಿಯ ಮಗನಿಗೆ ಕೊಟ್ಟ |ಒಬ್ಬ ಮಗಳನು ತಾನೇ ಮದುವೆಯಾದ ||ಒಬ್ಬ ಮಗಳಿಗೆ ಒಂದು ರೀತಿಯಲಿ ಮಗನಾದ |ಒಬ್ಬ ಮಗಳನು ಹಲವರಲ್ಲಿರಿಸುವ 4ಇವನ ನಿಜ ಭಕ್ತನೆಂಬವನು ತನ್ನ ಸತಿಯನು |ಸವಿಯಾಗಿ ನಾಲ್ವರಿಗೆಹಂಚಿಕೊಟ್ಟ ||ಭುವನದೊಳಗೆ ಪ್ರಾಣೇಶ ವಿಠಲನ ಮನೆ ನಡತೆಯಿದು |ಕವಿಗಳೆಲ್ಲರು ತಿಳಿದು ಪೂಜಿಸುತಿಹರು ಮುದದೀ 5
--------------
ಪ್ರಾಣೇಶದಾಸರು
ವಾಸವನೆ ಮಾಡಿರೋ ಕಾಶಿಯಲಿ ಪವಾಸವನೆ ಮಾಡಿ ಕಾಶಿಯಲಿ ವಸುಧೆಯ ಜನರು |ಏಸುಜನ್ಮದ ಪಾಪವನೆ ಕಳೆದು ಯಮಪುರಿಯ ||ಹೇಸಿಕೆಯ ರಾಶಿಗಳ ಒದೆದು ಹೆಚ್ಚಳವಾದ |ಮೀಸಲಳಿಯದಪದವಿಸಾರಿರಯ್ಯಅಪಶ್ರೀ ವಿಷ್ಣು ಸಿರಿಸಹಿತ ಗರುಡ ವಾಹನನಾಗಿ |ಜೀವಿಗಳ ಸ್ಥಿತಿಯ ನೋಡುತ ಬರಲು ಮರುಗಿ ಆ |ದೇವಿ ಬಿನ್ನಹ ಮಾಡಲಾಗ ಕರುಣಾಕರನು |ಭಾವಿಸಿದನೀ ಕೃತಿಯನು |ದೇವತ್ರಿಧಾಮನವ ದಿವ್ಯ ವೈಕುಂಠದೊಳು |ಪಾವನಸ್ಥಳವಿದೆಂದೊರೆದ ಧರೆಯೊಳು ಕಾಶಿ |ಶ್ರೀ ವಾರಣಾಸಿ ಪಂಚಕ್ರೋಶಮಿತಿಯಲ್ಲಿಆ ವಿಪುಳ ಮಣಿಕರಣಿಕೆ 1ಬಲಿಯ ಬಳಿ ಮೂರಡಿಯ ಭೂದಾನವನೆ ಬೇಡಿ |ನೆಲನಳೆಯ ಈರಡಿಗೆ ಸಾಲದಿರೆ ಬ್ರಹ್ಮಾಂಡ |ಬಲಪದದ ನಖದಿ ಸೀಳಲ್ಕೆ ಬಹಿರಾವರಣ |ಜಲಸುರಿಯೆ ಅಂಗುಟದಲಿ ||ಸಲೆ ತೀರ್ಥವೆಂದಜ ಕಮಂಡಲದೊಳಗೆ ಧರಿಸಿ |ತೊಳೆದನಾ ಚರಣಗಳ ಬಲು ಗಂಗೆ ಬರಲು ಜಡೆ - |ತಲೆಯೊಳಿಟ್ಟಾ ಶಿವ ಭಗೀರಥನ ಯತ್ನದಿಂ |ದಿಳಿದಿಹಳು ಕಾಶಿಯಲ್ಲಿ 2ಪರಮನಿರ್ಮಲ ಶುಭ್ರತರದ ಭಾಗೀರಥಿಯನಿರಜೆ ನೀಲಾಭೆ ಯಮುನೆಯ ಮಧ್ಯದಲಿ ಕಾರ್ತ |ಸ್ವರವರ್ಣದಿಂದಲ್ಲಿ ಗುಪ್ತಗಾಮಿನಿಯಾದ |ಸರಸತಿಯ ಸಂಗಮದಲಿ ||ಮೆರೆಯುವ ತ್ರಿವೇಣಿಯೆನಿಸುವ ತೀರದಲ್ಲಿ ವಟ - |ತರುಛಾಯೆಯಲ್ಲಿಹುದು ದೇವ ಋಷಿ - ಮೌನೀಗಣ 3
--------------
ಪುರಂದರದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು
ವಾಸುದೇವನ ಗುಣೋಪಾಸನೆತಾರಕxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹೇಸಿಕೆಸಂಸಾರ ಮಾರಕವೋ ಪಕ್ಲೇಶದ ಭವದೊಳಾಯಾಸಿ ಬಡದೆಹರಿದಾಸರ ದಾಸ ನೀನಾಗೋ ಭವನೀಗೋ ಅ.ಪಥಳಥಳ ದೇಹವ ತೊಳೆದು ನಾಮವಹಚ್ಚಿಛಳಿಗಂಜದೆ ನಿತ್ಯಜಲದಿ ಮುಳುಗಿಕರ್ಮಒಳಗೆ ಹೊರಗೆ ಎಲ್ಲಾ ಹೊಳೆವ ಹರಿಯಮೂರ್ತಿತಿಳಿಯದೆ ಯಮನಿಗೆ ಸಿಲುಕುವೆಯಲ್ಲೋ 1ಡೊಂಬನಂದದಿ ಡಾಂಬಿಕ ಕರ್ಮದ ಆ -ಅಂಬರಹಾಸಿಟ್ಟು ಕುಂಭದಿ ನೀರೆರೆದುಬಿಂಬನುಂಡನು ತೆಗಿ ಎಂಬುವಿಯಲ್ಲೋ 2ಕರ್ತಶಾಸ್ತ್ರಾರ್ಥತ್ವದ ಅರ್ಥ ತಿಳಿಯದೆ ಜೀವ -ಅತ್ತಣದ್ವಾರ್ತೆಯ ಮರೆತಿರುವೀ 3ಒಡೆಯನೆನುತನಿತ್ಯಪೊಡವಿತಳದಿ ಬಹುಧೃಢಮನದಲಿ ನೇಮಹಿಡಿದು ಮಾಡಿದಕರ್ಮಜಡಜನಾಭನಪಾದದೃಢ ಮಾಡಲೊಲ್ಲೆ4ಪ್ರೀತಿಯಾಗುವಕರ್ಮವ್ರಾತಮಾಡದೆನೀಗಿ5
--------------
ಗುರುಜಗನ್ನಾಥದಾಸರು
ವಾಸೂಕಿ ಶಯನ ಅಶೋಕ ಪರಾಕೂ |ವಾಸುದೇವಾನಿರುದ್ಧ ಶ್ರೀ ಕೃಷ್ಣ ಪರಾಕೂ ||ಸಾಸಿರನಾಮದ ಹರಿಯೆ ಪರಾಕೂ |ದೋಷರಹಿತ ರಘುಪತಿಯೆ ಪರಾಕೆಂದು ||ಮೀಸಲಾರುತಿಯಾ ಬೆಳಗೀರೆ ಪವೃಂದಾವನದೊಳಗಿಹನೆ ಪರಾಕೂ |ತಂದಿ ತಾಯ್ಗಳ ಬಿಡಿಸಿಹನೆ ಪರಾಕೂ ||ಸಿಂಧುರವರದ ಗೋಪಾಲ ಪರಾಕೂ ||ಸಿಂಧುಶಯನಪದ್ಮನಾಭಪರಾಕೆಂದು ||ಛಂದದಲಾರುತಿಯಾ ಬೆಳಗೀರೆ1ಸತ್ಯಾಭಾಮಿ ರುಗ್ಮಿಣಿ ರಮಣಾ ಪರಾಕೂ |ಮುತ್ಯಗ ಪಟ್ಟಗಟ್ಟಿದವನೆ ಪರಾಕೂ ||ಭಕ್ತ ಪೋಷಕ ತ್ರಿವಿಕ್ರಮನೆ ಪರಾಕೂ |ಸತ್ಯಸಂಕಲ್ಪಹೃಷಿಕೇಶ ಪರಾಕೆಂದು ||ಮುತ್ತಿನಾರುತಿಯಾ ಬೆಳಗೀರೆ 2ಮಾಧವಖರ ದೂಷಣಾರಿ ಪರಾಕೂ |ಬಾದರಾಯಣಪುರುಷೋತ್ತಮ ಪರಾಕೂ ||ಯಾದವರೊಳು ಪುಟ್ಟಿದನೆ ಪರಾಕೂ |ವೇದ ಉದ್ಧರ ಮತ್ಸ್ಯರೂಪಿ ಪರಾಕೆಂದು ||ಮೋದದಲಾರುತಿಯಾ ಬೆಳಗೀರೆ3ಇಂದ್ರ ಬಲಿಯನುಂಡಾ ಧೀರ ಪರಕೂ |ಕಂದಗೊಲಿದ ನರಸಿಂಹ ಪರಾಕೂ ||ನಂದನಂದನಶೌರಿಪರಾಕೂ |ಮಂದರಪರ್ವತ ಧರನೆ ಪರಾಕೆಂದು ||ಕುಂದಣದಾರುತಿಯಾ ಬೆಳಗೀರೆ 4ಜಟ್ಟೇರ ಹುಡಿಗುಟ್ಟೀದವನೆ ಪರಾಕೂ |ದುಷ್ಟ ಕಂಸನ ತರಿದವನೆ ಪರಾಕೂ ||ಕೆಟ್ಟಾಜಾಮಿಳಗೊಲಿದವನೆ ಪರಾಕೂ |ಅಷ್ಟು ಲೋಕವ ಸಲಹುವನೆ ಪರಾಕೆಂದು ||ತಟ್ಟಿಯೊಳಾರುತಿಯಾ ಬೆಳಗೀರೆ5ಮಾರನಯ್ಯಾ ಪ್ರಾಣೇಶ ವಿಠಲ ಪರಾಕೂ |ನೀರಜಾಂಬಕ ಶ್ರೀನಿವಾಸ ಪರಾಕೂ ||ದ್ವಾರಕಿನಿಲಯಮುರಾರೆ ಪರಾಕೂ |ಕ್ಷೀರಾಬ್ಧಿ ಸುತಿಯ ವಲ್ಲಭನೆ ಪರಾಕೆಂದು ||ನಾರಿಯರಾರುತಿಯಾ ಬೆಳಗೀರೆ 6
--------------
ಪ್ರಾಣೇಶದಾಸರು
ವಿಜಯಆರಿಂದಲೆನಗೆ ಆಗುವುದೊಪರತತ್ವವಿಚಾರ ಪರಮನಿಷ್ಠರಸಂಗಭೂಸುರರಸೇವೆ ಯಾತ್ರೆ ದಾನ ಧರ್ಮಜ್ಞಾನಿಗಳಿಂ ಮಾನಕ್ಷೋಣಿಯೊಳಗೆ ಶಶ್ಯು ?ಬಂಧು ಜನಸಂದಣಿ ಚೆಂದುಳ್ಳ ಆಭರಣಾ-ಅಪಾರಜನುಮ ಇವರಪಾದಆಶ್ರೈಸಿ
--------------
ಗೋಪಾಲದಾಸರು
ವಿಠಲಯ್ಯ ವಿಠಲಯ್ಯ |ವಟಪತ್ರ ಶಯನವಟುಶ್ರೀ ಪ್ರಾಣೇಶ ಪಗಂಗಾಜನಕವಿಹಂಗವಾಹನ ವಿಧು-ಪಿಂಗಳ ಕೋಟಿ ನಿಭಾಂಗನೆ ಪ್ರಾಣೇಶ 1ನಂದನವನದಿಸಂಕ್ರಂದನಮದಹರಇಂದಿರಾದಶಮತಿಮಂದಿರ ಶ್ರೀ ಪ್ರಾಣೇಶ 2ಕಾದುಕೋ ಶರಣರ ವೇದವಿನುತಮಧುಸೂದನ ನತಸುರ ಪಾದಪ ಪ್ರಾಣೇಶ3
--------------
ಪ್ರಾಣೇಶದಾಸರು
ವಿಠ್ಠಲ ದೇವರುನಮೋಯೆಂಬೆ ನಮೋಯೆಂಬೆನಮ್ಮಯ ವಿಠಲಗೆ ಪಕಾಷ್ಟಹಾರನ ಇಷ್ಟಮಿತ್ರನದಿಟ್ಟಪುತ್ರನ ಮನದಿಷ್ಟವಿತ್ತವಗೆ 1ಉತ್ತರಿತ್ತರಿ ತಮ್ಮ ಕತ್ತಲಮನೆಯೊಳುನೆತ್ತಿಹೊಡೆಸಿದಸ್ತ್ರೀನೆತ್ತಿ ಸಲಹಿದಗೆ2ಮಂಗಲಮುನಿಯಿಂದ ಭಂಗಪಟ್ಟವನಅಂಗಜನಶ್ವ ಶೃಂಗಾರದ್ಹಿಡಿದಗೆ 3ಕುರುಪನನುಜೆಯ ಪರಪತಿಶಿವತರಣಿಯಿದಿರಿನೋಳ್ ತರಿಸಿದ ಮಹಿಮಗೆ 4ಭಕ್ತವತ್ಸಲ ಮುಕ್ತಿದಾಯಕಭಕ್ತರ ಇಷ್ಟವ ಪೂರ್ತಿಪ ಶ್ರೀರಾಮಗೆ 5
--------------
ರಾಮದಾಸರು
ವಿದುರನ ಭಾಗ್ಯವಿದು |ಪದುಮಜಾಂಡ ತಲೆದೂಗುತಲಿದೆ ಕೊ ಪಕುರುರಾಯನು ಖಳನನುಜನು ರವಿಜನು |ಗುರುಗಾಂಗೇಯರು ಎದುರಿರಲು ||ಹರಿಸಿ ರಥವ ನಡು ಬೀದಿಯಲ್ಲಿ ಬಹ |ಹರಿಯ ತಾನು ಕಂಡನು ಹರುಷದಲಿ 1ದಾರಿಯಲಿ ಬಹ ಮುರವೈರಿಯ ಕಾಣುತ |ಹಾರುತ ಚೀರುತ ಕುಣಿಯುತಲಿ ||ವಾರಿಧಾರೆಯನು ನೇತ್ರದಿ ಸುರಿಸುತ |ಬಾರಿಬಾರಿಗೆ ಹಿಗ್ಗುವ ಸುಖದಿ 2ಆಟಕೆ ಲೋಕಗಳೆಲ್ಲಾ ಸೃಜಿಸುವ |ನಾಟಕಧರ ತನ್ನ ಲೀಲೆಯಲಿ ||ನೀಟಾದವರ ಮನೆಗಳ ಜರೆದು |ಕುಟೀರದಲಿ ಬಂದುಹರಿ ಕುಳಿತ3ಅಡಿಗಡಿಗೆ ತನ್ನ ತನುಮನ ಹರಹಿ |ಅಡಗೆಡೆಯುತ ಬಲು ಗದ್ಗದದಿ ||ನುಡಿಗಳ ತೊದಲಿಸಿ ರೋಮವ ಪುಳಕಿಸಿ |ದುಡುದುಡು ಓಡುವ ದಶದಿಶೆಗೆ 4ಕಂಗಳುದಕದಿ ಪದಂಗಳ ತೊಳೆದು |ಗಂಧವ ಪೂಸಿದ ತನುಪೂರಸಿ ||ಮಂಗಳ ಮಹಿಮನ ಚರಣಕೆರಗಿ ಪು-ಷ್ಪಂಗಳಿಂದ ಪೂಜೆಯ ಮಾಡಿದನು 5ನೋಡಿದ ಭಕುತನ ಮನದ ಹವಣಿಕೆಯು |ಪಾಡುವ ಪೊಗಳುವ ಹರುಷದಲಿ ||ನೀಡಿದ ಕರದಲಿ ಬಿಗಿದಪ್ಪಿದ ಕೊಂ -ಡಾಡಿದ ಕರುಣದಿ ಜಗದೊಡೆಯ 6ಕ್ಷೀರವಾರಿಧಿ ಶಯನಗೆ ವಿದುರನು |ಕ್ಷೀರವನುಣ ಬಡಿಸಿದ ನೋಡಾ ||ವಾರಿಜನಾಭನು ಕರಸಂಪುಟದಲಿ |ಆರೋಗಣಿಸಿದ ಘನತೆಯನು 7ಒಂದು ಕುಡಿತೆ ಪಾಲುಹರಿ ತಾ ಸವಿದು |ಮುಂದಕೆ ನಡೆಸಿದ ಧರೆಮೇಲೆ ||ಇಂದಿರೆಯರಸನ ಚರಿತೆ ವಿಚಿತ್ರವು |ಚೆಂದದಿ ಹರಿದುದು ಬೀದಿಯಲಿ 8ಕರುಣಾಕರ ಸಿರಿಹರಿ ತನ್ನ ಭಕುತರ |ಪೊರೆವನುಅನುದಿನ ಆಯತದಿ ||ಸಿರಿಯ ಅರಸು ನಮ್ಮಪುರಂದರ ವಿಠಲನ |ಶರಣರು ಧನ್ಯರು ಮೇಲೆ 9
--------------
ಪುರಂದರದಾಸರು
ವಿಧಿನಿಷೇಧವು ನಿನ್ನವರಿಗೆಂತೊ ಹರಿಯೇ ಪವಿಧಿನಿನ್ನ ಸ್ಮರಣೆಯು ನಿಷೇಧ ವಿಸ್ಮøತಿಯೆಂಬವಿಧಿಯನೊಂದನೆ ಬಲ್ಲರಲ್ಲದೇ ಮತ್ತೊಂದು ಅ.ಪಮಿಂದದ್ದೆ ಗಂಗಾದಿ ಪುಣ್ಯತೀರ್ಥಂಗಳುಬಂದದ್ದೆ ಪುಣ್ಯಕಾಲ ಸಾಧುಜನರು ||ನಿಂದದ್ದೆ ಗಯೆ ವಾರಣಾಸಿ ಕುರುಕ್ಷೇತ್ರಸಂದೇಹವೇಕೆ ಮದದಾನೆ ಪೋದುದೆ ಬೀದಿ 1ಕಂಡಕಂಡಲ್ಲಿ ವಿಶ್ವಾದಿ ಮೂರುತಿಯು ಭೂಮಂಡಲದಿ ಶಯನವೆ ನಮಸ್ಕಾರವು ||ತಂಡತಂಡದ ಕ್ರಿಯೆಗಳೆಲ್ಲ ನಿನ್ನಯ ಪೂಜೆಮಂಡೆಬಾಗಿಸಿ ನಮಿಪಭಾಗವತಜನಕೆ 2ನಡೆದ ನಡಿಗೆಯು ಎಲ್ಲ ಲಕ್ಷ ಪ್ರದಕ್ಷಿಣೆಯುನುಡಿವ ನುಡಿಗಳು ಎಲ್ಲ ಗಾಯತ್ರಿ ಮಂತ್ರ ||ಕೊಡುವುದೆಲ್ಲವು ಅಗ್ನಿಮುಖದಲ್ಲಿ ಆಹುತಿದೃಢಭಕ್ತರೇನ ಮಾಡಿದರದೇ ಮರ್ಯಾದೆ 3ನಷ್ಟವಾದುದು ಎಲ್ಲ ಸಂಚಿತದ ಕರ್ಮವುಮುಟ್ಟಲಂಜುವುವೆಲ್ಲ ಆಗಾಮಿಕರ್ಮ ||ಸ್ಪಷ್ಟವಾಗಿರುವ ಪ್ರಾರಬ್ಧ ಕರ್ಮವ ಮೀರಿಸೆಟ್ಟಿಮೆಟ್ಟಿದ್ದೆ ಪಟ್ಟಣವೆಂಬುದೇ ನಿಜವು 4
--------------
ಪುರಂದರದಾಸರು
ವಿನಾಯಕ ಪ್ರಾರ್ಥನೆಮೂಷಕವಾಹನದೋಷ ವಿನಾಶನxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ದೋಷವ ನೋಡದೆ ಪೋಷಿಸು ಎನ್ನಾ ಪಶೇಷಶಯನನ ವಿಶೇಷಜಾÕನವನಿತ್ತುಈಷಣತ್ರಯಭವಸೋಷವ ಗೈಸೋ ದೇವಾ1ನವನವÀ ಪಾಲಿಸೊ ಭವವರ ಪುತ್ರನೆ 2ನ್ನಾಥವಿಠಲ ಸಂಪ್ರೀತಿ ಪಾತ್ರನು ನೀನೈ
--------------
ಗುರುಜಗನ್ನಾಥದಾಸರು
ವಿವೇಕವೆಂಬ ಘೌಜದು ಮುತ್ತಲುಉಳಿವು ಅಸುರರಿಗಿಲ್ಲಾಯ್ತುಸವರಿಯೆ ಹೋದರು ದುಷ್ಟರು ನುಣ್ಣಗೆಸಂತೋಷವು ನಗರಕ್ಕಾಯ್ತುಪಭೂತ ದಯನು ಶಾಂತಾತ್ಮ ವಿಚಾರನುಬ್ರಹ್ಮನಿಷ್ಠವಿರತೆನಿಸುವನುಖ್ಯಾತಿಗೆ ಬಂದಿಹ ಹಿರಿಯ ವಜೀರರುಕವಿದರು ತನುಪುರದುರ್ಗವನು1ಧಮಧಮ ನಾದದ ನಗಾರಿ ಬಾರಿಸೆದಿಂಡೆಯರಸುಗಳು ನೆಲಕೊರಗೆಅಮಮ ಅಡರಿಯೆ ದುರ್ಗವ ಕೊಂಡರುಅರೆದರು ದುಷ್ಟರು ಊರೊಳಗೆ2ಕಡಿದರು ಕಾಮನ ಹೊಡೆದರು ಡಂಭನಕೆಡಹಿಯೆ ಕೊಯ್ದರು ಚಂಚಲನಹುಡಿಮಾಡಿದರು ಅಹಂಕಾರ ಕ್ರೋಧರಹುರಿದರು ಖಳರು ಬೀಜವನು3ಆದನು ಪುರಕೆ ವಿವೇಕ ಮಂತ್ರಿಯುಆದನು ವಿರತಿಯು ದಳವಾಯಿಆದನು ಶಾಂತನು ಸಮಸ್ತ ವೃತ್ತಿಗೆಆಯಿತು ನಗರಕೆ ಅದು ಹಾಯಿ4ಜೀವ ರಾಜನು ಹಿಡಿದೆ ಬೋಧಿಸಿಜಡನಾದಸುರ ಪ್ರಕೃತಿ ಎಂದುಜೀವ ಚಿದಾನಂದ ಸ್ವಾಮಿಯೆನೀನೆಂದು ದರಬಾರನೆ ಕಾಯ್ದರಂದು5
--------------
ಚಿದಾನಂದ ಅವಧೂತರು
ವಿಷಯ ಸಂಗದಲಿಂದ ಕುಶಲವನು ಬಯಸಿದರೆಅಸಮಜ್ಞಾನಿಗಳ ಧೀಯು ಮಸಳಿ ಮರುಳಾಗುವುದುಭರತರಾಯನನೋಡುಹರಿಣ ಕುಣಪನು ಪೋಗೆಮೌನಿ ವಿಶ್ವಾಮಿತ್ರ ತಾನು ಊರ್ವಶಿ ಕೂಡಿವಿಪುಳಮತಿಯಾದ ಸೌಭರಿಯು ದೃಢ ಮನಸಿನಲಿಲೇಸಾದ ಕುಲದಲ್ಲಿ ಸಂಜನಿಸಿದಜಮಿಳನುಅಂದಣವನೇರಿದ ನಹುಷರಾಯನನೋಡುವಿಷಯದಲಿ ಮನ ಸನ್ನಿಕರ್ಷವಾದರೆ ನಿನ್ನವಿವಿಧ ಸಾಂಸಾರಿಕ ದುಃಖ ದರುಶನವಾಗೆಈಷಣತ್ರಯನಿನಗೆ ಮೋಸಗೊಳಿಸಿ ಕಡೆಗೆಕ್ರಿಮಿ ಭಸ್ಮ ಮಲವಾಗಿ ಪೋಪದೇಹಕೆ ಬಹಳಇಂತುಮಹಾಂತದೃಷ್ಟಾಂತ ತೋರಿದೆ ನಿನಗೆದ್ರವ್ಯಕಾರಕ ಕ್ರಿಯಭ್ರಮವೆಂಬ ಭ್ರಮಣದಲಿ
--------------
ಗೋಪಾಲದಾಸರು
ವಿಷಯದ ವಿಚಾರ ಬಿಡು ವಿಹಿತಕರ್ಮವಮಾಡು|ವೈರಾಗ್ಯ ಭಾಗ್ಯಬೇಡು ಪ.ವಿಷವೆಂದು ಕಾಮ - ಕ್ರೋಧಗಳೆಲ್ಲವೀಡಾಡು |ಮಸಣಮನವೇ ಮಾಧವನನು ಕೊಂಡಾಡು ಅಪಅನುದಿನದಿ ಹರಿಕಥೆಯಕೇಳಿ ಸಂತೋಷಪಡು |ದಿನದಿನವು ಸಜ್ಜನರ ಕೂಡು ||ಮನಮುಟ್ಟಿ ದುರಾಚಾರ ಮಾಳ್ಪರನು ನೀ ಕಾಡು |ಹಣ - ಹೊನ್ನು ಪರಹೆಣ್ಣು ಹೆಂಟೆಯಂತೆನೋಡು1ವೇದ ಶಾಸ್ತ್ರಾರ್ಥ ತತ್ವದ ವಿಚಾರವಮಾಡು |ಮಾಧವನ ಭಕ್ತಿ ಬೇಡು ||ಪಾದದಲಿ ಪುಣ್ಯತೀರ್ಥದ ಯಾತ್ರೆಮಾಡು ಮಧು - |ಸೂದನನ ಕೀರ್ತಿ ಸಂಕಿರ್ತನೆಯಮಾಡು2ಅಂಬುಗುಳ್ಳಗಳಂತೆ ಎಂದಿಗಿದ್ದರು ದೇಹ |ನಂಬಿ ನೀ ಕೆಡಲುಬೇಡ ||ಕೊಂಬುವರು ಬಂದರಾಕ್ಷಣಕೆ ಬೆಲೆಯಾಗುವುದು |ಅಂಬುಜಾಕ್ಷ ಪುರಂದರವಿಠಲನ ನೆನೆ ಮನವೆ 3
--------------
ಪುರಂದರದಾಸರು