ಒಟ್ಟು 1074 ಕಡೆಗಳಲ್ಲಿ , 105 ದಾಸರು , 887 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೃಂದಾವನ ಪ್ರವೇಶಿಸಿದಂದವ ಚಂದದಿ ಪೇಳುವೆ ಪಾಲಿಪುದು ಪ ಇಂದಿರೆಯರಸನ ಪ್ರೇರಣೆಯಿಂದ ಯತಿ ವೃಂದ ತಿಲಕ ರಾಘವೇಂದ್ರರಾನಂದದಿ ಅ.ಪ ಒಂದು ದಿನವು ಶ್ರೀ ರಾಯರು ಶಿಷ್ಯರ ವೃಂದಕೆ ಪಾಠವ ಹೇಳುತಿರೆ ಅಂದು ವಿಮಾನದಿ ಕೃಷ್ಣದ್ವೈಪಾಯನ ಪ ರಂಧಾಮಕೈದಲು ನೋಡಿ ಕೈ ಮುಗಿದು 1 ಎಷ್ಟು ದಿನವು ನಾವಿಲ್ಲಿರಬೇಕೆಂದು ಶಿಷ್ಟ ಗುರುವರರು ಕೇಳಿದೊಡೆ ಕೃಷ್ಣದ್ವೈಪಾಯನರೆರಡು ಬೆಳಗುಳ ಗಟ್ಟಿಯಾಗಿ ಬೀಸಿ ತೋರಿಸಿ ಪೊರಟರು 2 ನೆರೆದ ಶಿಷ್ಯರದರರ್ಥವೇನೆನುತ ಗುರುಗಳನ್ನು ತಾವ್ ಕೇಳಿದೊಡೆ ಎರೆಡು ವರ್ಷ ತಿಂಗಳು ದಿನವೆರಡೆರಡು ಇರುವುದು ಧರೆಯೊಳಗೆಂದರು ರಾಯರು 3 ಆದವಾನಿಗೆ ಗುರು ಸಂಚಾರ ಪೋಗಿರೆ ಆ ದಿವಾನ ವೆಂಕಣ್ಣ ಬಲು ಆದರಿಸಿದ ಬಳಿ ತಾ ನವಾಬನಿಂದ ಮೋದದಿ ಕೊಡಿಸಿದ ಮಂಚಾಲೆಯನು 4 ಹಿಂದೆ ಪ್ರಹ್ಲಾದರು ಯಾಗವ ರಚಿಸಿದ ಸುಂದರ ಕ್ಷೇತ್ರವಿದೆಂಬುದನು ತಂದು ಮನಕೆ ಗುರುರಾಯರೀ ಕ್ಷೇತ್ರವ ನಂದು ಪಡೆದು ತಾವಿಲ್ಲಿಯೇ ನಿಂತರು 5 ಉತ್ತಮ ನೀಲವರ್ಣದ ಶಿಲೆಯಪಳಿರಿಸಿ ಕೆತ್ತಿಸಿ ವೃಂದಾವನತರಿಸಿ ಕ್ಷೇತ್ರರಕ್ಷಣೆಯಗಷ್ಟ ದಿಕ್ಕುಗಳಲಿ ದೇವ ಮೂರ್ತಿಗಳನು ಸ್ಥಾಪಿಸಿ ನಿಲಿಸಿದರು 6 ವೃಂದಾವನದಲಿ ಸ್ಥಾಪಿಸಲೇಳ್ನೂರು ಚಂದದ ಸಾಲಿಗಾಮಗಳ ತಂದಿಟ್ಟರೆ ಸಿದ್ಧತೆಗಳು ಸಕಲವು ಕುಂದಿಲ್ಲದಂದೆ ನಡೆದಿರಲಾಗಲೆ 7 ಮುಂದಕೆ ತಮ್ಮ ಸಂಸ್ಥಾನವ ವಹಿಸಿ ಯೋ ಗೀಂದ್ರರೆಂಬ ಪ್ರಿಯ ಶಿಷ್ಯರಿಗೆ ಸಂದಿಪ ವಿರಹದಿ ನೊಂದಿದ ಶಿಷ್ಯರ ವೃಂದವ ಬಲು ಸಂತೈಸಿದರಾಗಲೇ8 ನಲವತ್ತೇಳು ಸಂವತ್ಸರ ನಾಲ್ಕು ತಿಂ ಗಳು ಇಪ್ಪತ್ತೊಂಭತ್ತು ದಿನಕಾಲ ನಲವಿನಿಂದ ವೇದಾಂತ ಸಾಮ್ರಾಜ್ಯವ ಸಲಹಿ ಸುಕೀರ್ತಿಯ ಗಳಿಸಿದ ಬಳಿಕ 9 ಸಾವಿರದೈನೂರು ತೊಂಭತ್ಮೂರನೆ ಕ್ರತು ಸಂವತ್ಸರದ ಶ್ರಾವಣ ಕೃಷ್ಣ ದ್ವಿತೀಯದ ಗುರುವಾರ ವಾಸರ ಮುಹೂರ್ತದಿ ಗುರುವರ 10 ಹಸ್ತದಿ ಜಪಮಾಲೆ ಪಿಡಿದು ಯೋಗೀಂದ್ರರ ಹಸ್ತಲಾಘವವ ಸ್ವೀಕರಿಸಿ ಸ್ವಸ್ತಿವಾಚನಗಳ್ ವಿಪ್ರರು ಪೇಳುತಿರೆ ಅರ್ಥಿಯಲಿ ವೃಂದಾವನವ ಪ್ರವೇಶಿಸಿ 11 ಪದ್ಮಾಸನದಲಿ ಮಂಡಿಸಿ ಎದುರಲಿ ಮುದ್ದುಪ್ರಾಣೇಶನ ನೋಡುತಲಿ ಪದ್ಮನಾಭನ ಧ್ಯಾನದೊಳಿರೆ ಜಪಸರ ಬಿದ್ದು ಬಿಡಲು ಮುಚ್ಚಳಿಕೆಯನಿಡಲು 12 ನೆರೆದಿಹ ವಿಪ್ರರು ಜಯ ಜಯವೆನ್ನುತ ಪರಿಪರಿ ರಾಯರ ಪೊಗಳಿದರು ಕರಿಗಿರೀಶನ ಕರುಣ ಪಡೆದ ನಮ್ಮ ಗುರುಸಾರ್ವಭೌಮನ ಸರಿಯಾರಿಹರು 13
--------------
ವರಾವಾಣಿರಾಮರಾಯದಾಸರು
ವೃಂದಾವನಗಳಿಗಾನಮಿಸಿ ನಿತ್ಯ ನಂದ ತೀರ್ಥ ಮತೋದ್ದಾರಕರೆನಿಪ ಪ ವರ ಮಧ್ವಮುನಿ ಕÀಮಲಕರ ಪದ್ಮ ಸಂಜಾತ ಪದ್ಮನಾಭ ಶ್ರೀ ರಾಮತೀರ್ಥ ಕವೀಂದ್ರಾ ಕರಸರೋರುಹ ಜಾತ ವಾಗೀಶಮುನಿ ಪರಘುವರ್ಯ ಗೋವಿಂದಾಖ್ಯ ಒಡೆಯರ ಪವಿತ್ರತಮ 1 ಶ್ರೀ ಸುಧೀಂದ್ರಾರ್ಯರ ಪ್ರಪೌತ್ರರೆನಿಪ ವಸುಧೀಂದ್ರ ವ್ಯಾಸರಾಯ ಶ್ರೀನಿವಾಸ ಮುನಿಯಾ ಭೂಸುರರು ಪರಮ ಸಂತೋಷದಲಿ ಸ್ಮರಿಸೆ ನಿ ರ್ದೋಷರನ ಮಾಡಿ ಅಭಿಲಾಷೆ ಪೂರೈಸುತಿಹ 2 ದೇವತೆಗಳು ಇವರು ಸಂದೇಹ ಬಡಸಲ್ಲಾ ಮಿ ಪರಾಭವ ಮಾಡಿ ಈ ವಸುಂಧರೆಯೊಳಗೆ ಕೀರ್ತಿಯುತರಾಗಿ ಲಕ್ಷ್ಮೀವರ ಜಗ ನ್ನಾಥ ವಿಠಲನ ಐದಿಹರಾ 3 ಸತ್ಯಬೋಧ ತೀರ್ಥ
--------------
ಜಗನ್ನಾಥದಾಸರು
ವೆಂಕಟ ಕೃಷ್ಣವಿಠಲ | ಲೆಂಕನನ ಸಲಹೋ ಪ ಪಂಕಜೋದ್ಭವ ಪಿತನೆ | ವೆಂಕಟೇಶಾ ಅ.ಪ. ಅಬುಜ ಜಾಂಡೋದರನೆ | ಶಬರಿ ಎಂಜಲನುಂಡೆಕುಬುಜೆಗಂಧಕೆ ಒಲಿದು | ಸದ್ಗತಿಯನಿತ್ತೆಇಭವರದ ನೀನಾದೆ | ಕುಲಶೀಲನೆಣಿಸದಲೆವಿಭುವೆ ಈ ಭಕುತಂಗೆ | ವೈಭವವ ತೋರೋ 1 ಮಧ್ವಮತ ತತ್ವದಲಿ | ಶುದ್ಧ ಭಕುತಿಯ ತೋರ್ಪಶ್ರದ್ಧಾಳು ಎನಿಸಿಹನು | ಬುದ್ಧಿ ಪೂರ್ವಾಸಿದ್ಧಾಂತ ತಾತ್ಪರ್ಯ | ಬುದ್ಧಿಗೆಟಕೂವಂತೆಉದ್ಧರಿಸ ಬೇಕಿವನ | ಅಬ್ದಿಜೆಯ ರಮಣ 2 ನೀಚೋಚ್ಚ ತರತಮದ | ಸ್ವಚ್ಛ ಜ್ಞಾನವ ನೀಯೊಮತ್ಸ್ಯಕಚ್ಛಪರೂಪಿ | ಸಚ್ಚಿದಾನಂದಾನಿಚ್ಚ ನಾಮಸ್ಮರಣೆ | ಸ್ವಚ್ಛ ಪೇರ್ಮೆಲಿ ಗೈವಉತ್ಸಾಹ ಇವಗಿತ್ತು | ಉದ್ಧರಿಸೊ ಹರಿಯೇ 3 ವ್ಯಾಜ ಕರುಣೀ4 ಪಾಕ್ಕು ಕರ್ಮವ ಕಳೆದು | ಲೋಕದಲಿ ಸತ್ಕೀರ್ತಿಬೇಕಾದ ವರಗಳನೆ | ತೋಕನಿಗೆ ಈಯೋನಾಗನದಿ ಪಿತ ಗುರೂ | ಗೋವಿಂದ ವಿಠ್ಠಲನೆವಾಕು ಮನ್ನಿಸಿ ಕಾಯೋ | ಶ್ರೀ ಕರಾರ್ಜಿತನೇ 5
--------------
ಗುರುಗೋವಿಂದವಿಠಲರು
ವೆಂಕಟಾಚಲ ನಿಲಯ ಪಿಡಿಯೆನ್ನ ಕೈಯ ಪಂಕಜಾಲಯ ಸುಪ್ರೀಯ ಪ ಅಹಿ ಕಂಕಣನುತ ಪದ- ಪಂಕಜ ತೋರೊ ಮೀನಾಂಕನ ಜನಕ ಅ.ಪ. ಪತಿತ ಪಾವನ ಮೋಹನ, ಪಾಲಿಸೊ ಎನ್ನ ಸತತ ಬಿಡದೆ ನೋಡೆನ್ನ ಹಿತರಹಿತರಾದವರನ್ನ ಪೊರೆದಳಿದೆ ಘನ್ನ ನತಜನರಿಗೆ ಪ್ರಸನ್ನ ದಿತಿಸುತ ತತಿಸಂಗತಿಯಲಿ ಮಥಿಸಲು ವನಧಿಯ ಅತಿ ಸಮ್ಮತಿಯಲಿ ಚತುರ ಧರಿಸಿ ಪರ್ವತ ಸುರತತಿಗ- ಮೃತ ವುಣಿಸಿದ ಶಾಶ್ವತಗತಿನಾಥ 1 ಸತಿಯ ಕಾಯಿದ ವಿನೋದ ಸಾಮಜವರದ ಚತುರದಶ ಲೋಕಾಧಿನಾಥ ಗತಿ ನೀನೆ ಮಹಾಪ್ರಸಾದ ಪರಮಮೋದ ಅತಿಶಯದಿ ಪೊಳೆವ ಪಾದ ಶತಪತ್ರವು ಹೃದ್ಗತವಾಗಲಿ ಉ- ನ್ನತ ಮಹಿಮನೆ ಕೀರುತಿವಂತನೆ ಅ- ಪ್ರತಿಭಾರತಮಲ್ಲ ಮೂರವತಾರಗೆ ಅತಿಪ್ರಿಯನೆನಿಪ ಮೂರತಿ ಚತುರದೇವ 2 ಸ್ಥಿತ ಮನ ಮಾಡೋ ಭವಭಂಗ ಸಂಗ ನಿಸ್ಸಂಗ ಚ್ಯುತಿ ದೂರ ಶೌರೀ ಕಾಳಿಂಗ- ದುರಿತ ಮಾತಂಗ-ಮರಿಗೆ ಸಿಂಗ ತುತಿಪೆ ಕರುಣಾಂತರಂಗ ಕ್ಷಿತಿಯೊಳಗಹಿ ಪರ್ವತನಿವಾಸನೆ ಖರೆಗೊಳಿಸುವ ದುರ್ಮತಿಯನು ತೊಲಗಿಸಿ ತ್ವತು ಪಾದದಲಿಡು ಮತಿಯಲ್ಲದೆ ತಿರು - ಪತಿ ವಿಜಯವಿಠ್ಠಲ ಇತರವನರಿಯೆ 3
--------------
ವಿಜಯದಾಸ
ವೆಂಕಟಾದ್ರಿಯಲ್ಲಿ ಮೆರೆವ ವೆಂಕಟೇಶನು ಪ. ವೆಂಕಟೇಶನು ನಮ್ಮ ಸಂಕಟಹರನು ಮಘಮಘಿಸುವ ದಿವ್ಯ ಕಿರೀಟ ಶೋಭನು ಜಗದೊಳೀತನ ಮಹಿಮೆ ಪೊಗಳಲೊಶವೇ ನಮ್ಮ 1 ಫಾಲ ಕಮಲನೇತ್ರ ಶೋಭನು ನಾಸಿಕ ಚಂಪಪುಷ್ಪದಂತೆ ಪೊಲ್ವು ನಮ್ಮ 2 ಕಪೋಲ ಕರ್ಣಕುಂಡಲವನು ಚನ್ನ ಕರ್ಪೂರದ ಕರಡಿಗೆಯನ್ನು ಪೋಲ್ವ ವದನ ನಮ್ಮ 3 ದಂತ ದಾಳಿಂಬಬೀಜದಂತೆ ಪೊಳೆವನು ಕಂತುಪಿತನ ಮೃದುಜಿಹ್ವೆ ಶಾಂತಮೂರುತಿಯ ಕಂಡೆ 4 ಉಭಯ ಪಾಶ್ರ್ವದ ಭಾಜಕೀರ್ತಿ ಅಭಯಹಸ್ತವು ದೇವ ಉಭಯ ಪಾಶ್ರ್ವದಿ ಶ್ರೀ ಭೂಸಹಿತ ಭಕ್ತರಿಗಭಯ ಕೊಡುವೊ 5 ಕಮಲ ಹಾರಶೋಭನು ಶ್ರೀ ಕೃಷ್ಣಂಗೆ ಸಾಲಿಗ್ರಾಮ ಹಾರ ಮೆರೆವೋದ ಕಂಡೆ 6 ಥಳ ಥಳಿಸುವಂಥ ದಿವ್ಯ ಥಳಕಿನ ಹಾರ ಬೆಳಕಾದ ರತ್ನದ ಪದಕ ವಲಿವ ಏಕಾವಳಿಯ ಕಂಡೆ 7 ಮೆರೆವ ಪೀತಾಂಬರ ವಡ್ವಾಣ್ಯ ಕರಡಿ ಕಂಜರಿಗೆ ಶಲ್ಯ ಶರಧಿ ಗಂಭೀರನ ಕಂಡೆ 8 ಕಂತುಪಿತ ತನ್ನ ಏಕಾಂತ ಭಕ್ತರ ಶಾಂತ ನೋಟದಿಂದ ನೋಡಿ ಭ್ರಾಂತಿ ಬಿಡಿಸಿ ಪೊರೆವೊದ ಕಂಡೆ 9 ಭಕ್ತರನ್ನು ಪೊರೆವ ಬಿರುದಿನ ಪಾಡಗ ಧರಿಸಿ ದಿವ್ಯ ಅಶಕ್ತಜನ ಪೋಷ ಶ್ರೀ ಶ್ರೀನಿವಾಸ ದೊರೆಯ ಕಂಡೆ 10
--------------
ಸರಸ್ವತಿ ಬಾಯಿ
ವೆಂಕಟೇಶ ಎನ್ನ ಮುಂದೆ ನಿಂತಿದಂತಿದೆ ಪ ದೆಸೆಗೆ ಪ್ರಜ್ವಲಿಸುವ ಎಸೆವ ಕಿರೀಟ ನೊಸಲೊಳು ತಿದ್ದಿದ ನಾಮದ ಮಾಟ ಅಸಮ ನೇತ್ರಗಳಿಂದ ನೋಡುವ ನೋಟ ಬಿಸಜಭವನ ಪರಿಚರಿಯದ ಆಟ1 ತಿಲಪುಷ್ಟದಂದದಿ ಚಲುವನಾಸಗಳು ಬಿಳಿಯ ಮುಗುಳ್ನಗೆ ಸಾಲು ದಂತಗಳು ಗಳದಿ ಮೂರೇಖೆಯು ವೈಜಯಂತಿಗಳು ಹೊಳೆವ ಮೌಕ್ತಿಕದಂತೆ ಕಿರು ಬೆವರುಗಳು 2 ಕೌಸ್ತುಭ ಎಡಗೈಯ ಶಂಖ ಕಿರು ನೇಸರಂದದಿ ಚಕ್ರದ ಬಿಂಕ ಕರದೊಳು ಜಗವನು ತೋರುವ ವೆಂಕ ಮುರುಕ ಕಟಿಯೊಳು ಇರಿಸಿದ ನಿಃಶಂಕ 3 ತೋರ ಮುತ್ತಿನ ಸರ ಮಕರಕುಂಡಲವು ತೋರುವ ಭುಜಕೀರ್ತಿ ಚಕ್ರದ ಸರವು ಹಾರ ಹೀರಾವಳಿ ಬೆರಳುಂಗುರವು ಚಾರು ಭಾಪುರಿ ಘಂಟೆ ಸರಪಣಿಯಿರವು 4 ಕಿರುಡೊಳ್ಳಿಗೊಪ್ಪುವ ನಾಭಿಯ ಸಿರಿಯು ಸರಸಿಜಮಿತ್ರನ ತೇಜದ ಪರಿಯು ಮರುಗು ಮಲ್ಲಿಗೆ ಜಾಜಿ ಸಂಪಿಗೆ ಸರಿಯು ಪರಿಮಳಿಸುವ ಮೈಯ ಪುಳಕದ ಸಿರಿಯು 5 ಉಡಿಯ ಪೀತಾಂಬರ ಮೇಲುಡುದಾg À ಕಡಹದಂದದಿ ಚಲ್ವ ಕಾಲ್ಗಳ ತೋರ ಅಡಿಯಿಟ್ಟು ನಿಂದಿಹ ಬೆಡಗಿನ ವೀರ ಮಡದಿ ಮಹಾಲಕ್ಷ್ಮೀ ಪುಡುಮಿಯುದಾರ 6 ಸ್ವಾಮಿ ಪುಷ್ಕರಣಿಯ ತೀರ ನಿವಾಸ ಭೂಮಿ ವರಾಹತಿಮ್ಮಪ್ಪನ ದಾಸ ಪ್ರೇಮದಿ ರಚಿಸಿದನಿದರೊಳು ಪ್ರಾಸ ತಾಮಸವಿದ್ದರು ತಿದ್ದಲು ಲೇಸ 7
--------------
ವರಹತಿಮ್ಮಪ್ಪ
ವೇಂಕಟೇಶನೆ ಎನ್ನಾ ಪಾಲಿಪುದೊ ಹರಣ ಪ ಪಂಕಜೋದ್ಭವ ಹರ ವಂದ್ಯ ಪರಾತ್ಪರ ನಿಖಿಲಾಗಮೈಕವಿಜ್ಞೇಯ ಲೋಕೋದ್ಧಾರ ಅ.ಪ ವತ್ಸರ ಬ- ಹುಧಾನ್ಯ ಸಂದ ಶುಕ್ಲ ದ್ವಿತೀಯ ಸಂಧ್ಯಾಸವನ ಬಂದು ಕೀರ್ತನ ಸೇವಾ- ನಂತರದಿ ಎನ್ನಾ ಮಂದಿರದೊಳು ಸುಪ್ತಾವಸ್ಥೆ ಯಿಂದಿರಲಾಗ ಅಂದು ಕಡೆಯ ಯಾ- ಮದಿ ತೈಜಸನೆ ನೀ ಹಂಸರಿಂದೆನ್ನ ಮನಸಂಶಯ ಹರಿಸಿದೆ1 ಅರುಣೋದಯಲೆದ್ದು ಮುದದಿ ಕರಣಶುಧ್ದನಾಗಿ ತ್ವರಿತದಿ ಸ್ವಪನದ ವಿ- ವರಕಾಗಿ ಹರುಷದಿ ಹರಿಪೂಜಾಕಾಲದಿ ಅರುಹಿದ ಮರುತ ಮೂರುತಿಯಾ ಉರುತರ ಚರಿತೆಯ ನಿರುತಪೊಗಳಲಾಯತವಿತ್ತ ತಿರುಪತಿಶೈಲಾಧಿಪ ಮಮಕುಲಸ್ವಾಮಿ2 ಹರಿಗುರುಸೇವೆಯನು ಸರ್ವಸದ್ಯೋಗ್ಯಸಾಧನವನ್ನು ಪರಮಹಂಸರು ಇತ್ತವೇಂಕಟೇಶಾಂಕಿತ ಮೂರುತಿಯ ನುತಿಪಾ ನಿಜ ಹರಿಭಕುತರ ಚರಣಕಮಲಬಂಡುಣಿಯೆನಿಸಿ ಇವನನಿರುತ ರಕ್ಷಿಸೋ ಉರಗಾದ್ರಿವಾಸವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ವೇಣು ಗೋಪಾಲವಿಠ್ಠಲರೇಯ ನಿನ್ನ ಪದ ರೇಣು ನಂಬಿದ ಮಾನವ ಏನು ಅರಿಯದಲಿಪ್ಪ ನೀನೊಲಿದು ಕರುಣದಲಿ ಜ್ಞಾನ ಭಕುತಿಯ ಕೊಡುವುದು ಸ್ವಾಮಿ ಪ ಪರದೈವ ನೀನೆಂದು ಮೂಢಮತಿಯಾದವನು | ಪರಿಪೂರ್ಣವಾಗಿ ನಿರುತ | ನೆರೆ ನಂಬಿದೆನು ನಾನಾ ಪ್ರಕಾರದಲಿ ಸ್ಮರಣೆ ಮಾಡುತ ಮನದಲಿ | ತರತಮ್ಯ ಭಾವದಲಿ ಮಾರ್ಗವನೆ ತೋರಿ ವಿ ಸ್ತರ ಮಾಡು ಇವನ ಕೀರ್ತಿ ಕರುಣಾಕರನೆ ನಿನ್ನ ಮೊರೆಹೊಕ್ಕ ಶರಣನ್ನ ಕರಪಿಡಿದು ಪಾಲಿಸುವುದು ಸ್ವಾಮಿ1 ಲೌಕಿಕವೆಲ್ಲಿನಗೆ ವೈದಿಕವೆಂದೆನಿಸಿ | ಸಾಕುವುದು ಸಾಕಾರನೆ ನೂಕು ದುರಳದಿಂದ ಬಂದ ವಿಪತ್ತುಗಳ ತಾಕಗೊಡದಂತೆ ವೇಗ ಶುಭ | ವಾಕು ನೇಮಿಪುದು ಸತತ ನಾಕಜನ ಬಲವಾಗಿ ರಕ್ಷಿಸಲಿ ಸುರತರುವೆ ಶ್ರೀ ಕಾಂತ ನಿನ್ನಿಂದಲಿ ಸ್ವಾಮಿ 2 ಓರ್ವನ ಪೆಸರುಗೊಂಡು ಪೇಳಲೇತಕೆ ಇನ್ನು | ಸರ್ವರನು ಈ ವಿಧದಲಿ | ಊರ್ವಿಯೊಳಗೆ ಇಟ್ಟು ಉದ್ಧರಿಸಿ ಉರುಕಾಲ ನಿವ್ರ್ಯಾಜದವನ ಮಾಡಿ ಸರ್ವರಗೋಸುಗ ತುತಿಸುತಲಿ ಯೋಗ್ಯರಿಗೆ ಸರ್ವದಾ ಕೃಪೆಮಾಡು ಎಂಬೆ ಸಿರಿ ವಿಜಯವಿಠ್ಠಲ ನಿನ್ನ ಶರ್ವ ತುತಿಸಿ ಕಾಣ ನಾನೊಬ್ಬ ಪೊಗಳುವನೆ 3
--------------
ವಿಜಯದಾಸ
ವೇಣುನಾದ ಪ್ರಿಯ ಗೋಪಾಲಕೃಷ್ಣ ಪ. ವೇಣುನಾದ ವಿನೋದ ಮುಕುಂದಗಾನವಿನೋದ ಶೃಂಗಾರ ಗೋಪಾಲ ಅ.ಪ. ವಂದಿತಚರಣ ವಸುಧೆಯಾಭರಣಇಂದಿರಾರಮಣ ಇನಕೋಟಿತೇಜಮಂದರಧರ ಗೋವಿಂದ ಮುಕುಂದಸಿಂಧುಶಯನ ಹರಿ ಕಂದರ್ಪಜನಕ 1 ನವನೀತಚೋರ ನಂದಕುಮಾರಭುವನೈಕವೀರ ಬುದ್ಧಿವಿಸ್ತಾರರವಿಕೋಟಿತೇಜ ರಘುವಂಶರಾಜದಿವಿಜವಂದಿತ ದನುಜಾರಿ ಗೋಪಾಲ2 ಪರಮದಯಾಳು ಪಾವನಮೂರ್ತಿವರ ಕೀರ್ತಿಹಾರ ಶೃಂಗಾರಲೋಲಉರಗೇಂದ್ರಶಯನ ವರ ಹಯವದನಶರಣರಕ್ಷಕ ಪಾಹಿ ಕೋದಂಡರಾಮ 3
--------------
ವಾದಿರಾಜ
ವೇದವ್ಯಾಸ ಮೂರುತೀ ಬದರಿಯೊಳಗಿರುತಿ ಮೇದಿನಿಯೊಳ್ ನಿನ್ನ ಕೀರುತಿ ಪಸರಿಸುತಿರುತಿ ಪ ಮಧ್ವಮುನಿಗಾನಂದದಿ ವೇದ ಶಾಸ್ತ್ರಾಂಬುಧಿಯೊಳು ಇಂದಿಗಾಯ್ತೊಂಭತ್ತು ಶತವು ಚಂದದಿಂ ವತ್ಸರಗಳು 1 ಕೀಟದಿಂದ ರಾಜ್ಯಭಾರ- ವಾಟದಂತೆ ನಡೆಸಿದಿ | ಪುಟ್ಟತನದಿ ಮಾತೆಗೊಲಿದು ಶ್ರೇಷ್ಠ ನೀನೆಂದೆನಿಸಿದಿ 2 ರಾಜಸೂಯ ನಡೆಸಿದಿ | ರಾಜನಾಥ ಹಯಮುಖ ನೀ ಮೂಜಗದಿ ಮೆರೆಯುತಿ3
--------------
ವಿಶ್ವೇಂದ್ರತೀರ್ಥ
ವ್ಯರ್ಥಕಳೆವರೇನೊ ಕಾಲವ ಹೇ ಪ್ರಾಣಿ ನೀನು ಪ ಕೀರ್ತಿಸದೆ ಕುವಾರ್ತೆಯಿಂದ ಅ.ಪ. ನೇಸರನುದಯಿಸದ ಮುನ್ನ ಕರ್ಮ ನಾಮ ಬೇಸರದಲೇ ಸ್ಮರಿಸದೇ ಗ್ರಾಸದ್ಹರಟೆಗಳನು ಹರಟಿ 1 ಪವನ ಮತವನವಲಂಬಿಸಿದ ಸ್ಥವಿರ ಕವಿಗಳಿಂದ ಕಥಾ ಶ್ರವಣ ರಸವ ಕಿವಿಯ ದಣಿಯೆ ಸವಿದು ಸುಖಿಸಿ ಪ್ರವರನಾಗದೆ 2 ಕ್ಷಿತಿ ಜಲಾಗ್ನಿ ವಾಯು ಖಂ ಅತುಳ ಬುದ್ಧಿ ಅಹಂಕಾರಗಳು ಕೃತಿರಮಣನ ವಿಮಲ ಭಿನ್ನ ಪ್ರತಿಮೆಯೆಂದರಿದು ಭಜಿಸದೆ 3 ಶ್ರೀಪಯೋಜ ಪೀಠ ಶೈಲ ಚಾಪ ಗೋಪಮುಖರು ದ್ವಿತೀಯ ರೂಪರೆಂದು ಹರಿಗೆ ನೀ ಪ ದೇ ಪದೇ ನಮಸ್ಕರಿಸದೆ 4 ಪುತ್ರ ಜನನಿ ಜನಕ ವಿತ್ತ ಕರ್ತ ಜಗನ್ನಾಥವಿಠಲ ಕರ್ಮ ಕಠಿಣ ಕ್ರಿಯಾ ಭೋಕ್ತನು ಮಿತ್ರನೆಂದರಿಯದೆ 5
--------------
ಜಗನ್ನಾಥದಾಸರು
ವ್ಯಾಸ ತತ್ವಜ್ಞರ ಚರಿಯಾ ಮನಕಾಶ್ಚರಿಯಾ ಪರಮಹಂಸ ಕುಲಜ ಭುವನೇಂಧ್ರರ ತನಯಾ ಪ ಶೇಷಗಿರೀಶ್ವರ ಕೃಪಯಾ ಐಜಿ ವ್ಯಾಸವೆಂಕಟ ನರ- ಸಿಂಹಾಭಿಧೇಯ ಭೂಸುರೋತ್ತಮರಿಗೆ ತನಯಾ ನೆನಿಸಿ ಭಾಸುರ ಕೀರ್ತಿಯ ಪಡೆದ ರಾಮಾರ್ಯ 1 ವೇಣಿ ಸೋಮಪುರ ನಿಲಯ ಪಾಹಿ ಆನತ ಜನಸುರಧೇನೋ ಮಾಂಕೃಪಯಾ ವೇಣು ಗೋಪಾಲನ ಪ್ರೀಯ ಎಂದು ಸೂರ್ಯ 2 ಕೇಳಿವರ ಮಹಿಮೆ ಅಪಾರ ಗದ್ ವಾಲ ಭೂಪಗೆ ಬಂದ ಭಯ ಪರಿಹಾರ ಪೇಳಲು ಶ್ಲೋಕಾರ್ಥಸಾರ ಕೃಷ್ಣಾ ಮೇಲೆ ಪ್ರವಹಿಸಲು ಓಡಿತು ಶತೃನಿಕರ 3 ಭೃಂಗ ತನ್ನ ನೇಮದಿಂದಲಿ ಶೇವಿಪರ ಭವಭಂಗ ಪರ ಬ್ರಹ್ಮ ನಾನೆಂಬೊ ದುರ್ಮತ ಗಜಸಿಂಗ4 ನಂದ ನಂದನ ಗುಣಸ್ತವನ ಮಾಳ್ಪ ನಂದ ತೀರ್ಥರ ಮತಾಂಬುದಿ ಶೀತ ಕಿರಣ ಒಂದಾರು ಜನರೊಳು ಕರುಣ ಕೃತ ಮಂದ ನಂದಿನಿ ವ್ಯಜನಾದಿ ವ್ಯಾಖ್ಯಾನ 5 ಘನ್ನ ಮಹಿಮ ಜಿತಕಾಮಾ ಅ- ರಣ್ಯ ಕಾಚಾರ್ಯ ಸೇವಿತ ಪದ ಪದುಮ ಶುಭ ಗುಣಸ್ತೋಮ ಮನವೇ ಬಣ್ಣಿಸಲೊಶವೆ ಪಂಚಾಮೃತ ಮಹಿಮಾ 6 ವಾಸುದೇವನ ಗುಣತತಿಯ ಪೇಳಿ ದಾಸ ಜನರಿಗೆ ಪಾಲಿಸಿದಿ ಸನ್ಮತಿಯಾ ಭಾಸುರ ಕುಸುಮೂರ್ತಿರಾಯ ನೆನಿಸಿ'ಶ್ರೀಶಕಾರ್ಪರ ನರಹರಿ’ ಗತಿ ಪ್ರೀಯ 7
--------------
ಕಾರ್ಪರ ನರಹರಿದಾಸರು
ವ್ಯಾಸಕೂಟ-ದಾಸಕೂಟ ನಮನ (ಶ್ರೀ ಜಯತೀರ್ಥರ ಪ್ರಾರ್ಥನೆ) ನಾಕನಾಯಕಟೀಕಾಕೃತ್ಪಾದ ನಾಕನಾಯಕ ಪ. ನಾಕನಾಯಕ ನಿರಾಕೃತ ತಾಮಸ ರಾಕಾ ರಮಣ ಸುಧಾಕರ ಮೂರ್ತೆ 1 ಪೂರ್ಣಮನೀಷಿಮತಾರ್ಣವ ಘೂರ್ಣನ ಪೌರ್ಣಮಿಯ ವಿಧುವರ್ಣಿತ ಕೀರ್ತೆ 2 ಕುಂಡಲೀಂದ್ರ ಗಿರಿ ಮಂಡನ ಧೂಷಕ ಖಂಡನ ದೈಶಿಕ ಪಾಂಡ್ಯಜ ಭೂಪಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ವ್ಯಾಸರಾಯ ನಿನ್ನ ಅನುದಿನಾ | ಸ್ಮರಿಪ ಜನಕೆತೋಷದಿಂದ ಲೀವೆ ಸಾಧನಾ |ವಾಸುದೇವ ಕೃಷ್ಣಲೀಲೆ | ರಾಶಿಗುಣವ ಬೋಧಿಸುತ್ತಶ್ರೀಶ ಪಾದಪದುಮ ಕಾಂಬ | ಲೇಸು ಮುಕ್ತಿ ಮಾರ್ಗತೋರ್ವೆ ಅ.ಪ. ಏಸೊ ಮುನಿಗಳಿದ್ದು ಮಾಡದಾ | ಶಾಸ್ತ್ರವೆಂಬ ಭೂಷಣಂಗಳ್ಹರಿಗೆ ತೊಡಿಸಿದಾ |ಕೇಶವನೆ ಸರ್ವೋತ್ತಮನು | ದೋಷದೂರನೆಂದು ತಿಳಿಸಿಮೋಸಪಡಿಪ ಮಾಯಿ ಮತವ | ಘಾಸಿಮಾಡಿ ಜಯವ ಪಡೆದೆ 1 ವಾಸುದೇವ ವಾಲೀಲೆಯಏಸೊ ವಾದಿ ಜಯದ ಪತ್ರ | ಭೂಷಣಗಳ್ ಶ್ರೀಶಗಿತ್ತೆ 2 ಶೇಷನಾವೇಶದಿಂದಲಿ | ಪುಟ್ಟಿ ನೀವುವ್ಯಾಸರಾಯರೆಂಬ ಪೆಸರಲಿ |ದೇಶ ಪತಿಗೆ ಬಂದ ಕುಹು | ದೋಷಯೋಗ ಹರಿಸುತ ಸಿಂಹಾಸನೇರಿ ಜಗದಿ ಬಹಳ | ಭಾಸುರ ಸುಕೀರ್ತಿ ಪಡೆದೆ 3 ನ್ಯಾಯ ಗ್ರಂಥವೆಂದು ಕರೆಸಿಹ | ಚಂದ್ರಿಕಾದಿನ್ಯಾಯಾ ಮೃತವು ತರ್ಕ ತಾಂಡವ |ಗೇಯದಿಂದ ತುಚ್ಛ ಭಾಷ್ಯ | ಗಾಯನ ಮಾಡ್ದದುರ್ಮತೆನ್ನ ಮಾಯಿಮತವ ಗೆದ್ದು ಮಧ್ವ | ಧೇಯ ಸಾಧಿಸೀದ ಗುರುವೆ 4 ಪರಮ ಶಿಷ್ಯರೆಂದು ಮೆರೆವರಾ | ವಿಜಯಿಂದ್ರವರ ಸುವಾದಿರಾಜರೆಂಬರಾ |ಗುರುಗಳಾಗಿ ಯತಿ ಸುರೇಂದ್ರ | ವರ ಸುಪುತ್ರ ಭಕ್ಷೆ ಬೇಡೆಪರಮ ಹರುಷದಿಂದ ವಿಜಯ | ಇಂದ್ರರನ್ನ ಕಳುಹಿ ಪೊರೆದೆ 5 ಜ್ಞಾನಿಯರಸ ವ್ಯಾಸ ಮುನಿಗಳಾ | ಮನುಜರೆಂದುಹೀನ ಜನರು ಪೇಳೆ ಆವರ್ಗಳಾ |ಭಾನುಸೂನು ನರಕ$ನೇಕ | ಕಾಣಿಸುತ್ತ ಹಿಂಸಿಸೂವಶ್ರೀನಿವಾಸ ಹರಿಯ ಮುಂದೆ | ಗಾನ ಗೈದು ಆಡುತಲಿಪ್ಪ 6 ಪರಮಹಂಸ ಮುನಿಯು ಮನದಲಿ | ಪೂಜೆಗೈದುಹರಿಯ ಕಾಂಬ ಹೃದಯ ಗುಹೆಯಲಿ |ಗುರುವರ ಬ್ರಹ್ಮಣ್ಯ ಪೂಜ್ಯ | ಗುರು ಗೋವಿಂದ ವಿಠ್ಠಲಾನಚರಣ ವನಜ ಧ್ಯಾನಾಸಕ್ತ | ವರ ಸುನವ ವೃಂದಾವನಸ್ಥ 7
--------------
ಗುರುಗೋವಿಂದವಿಠಲರು
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು