ಒಟ್ಟು 782 ಕಡೆಗಳಲ್ಲಿ , 82 ದಾಸರು , 674 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನಾ ಕನಸಿನಲಿ ಗೋವಿಂದನ ಪಕಂಡೆನಾ ಕನಸಿನಲಿ ಕನಕರತ್ನದ ಮಣಿಯ |ನಂದನ ಕಂದ ಮುಕುಂದನ ಚರಣವ ಅ.ಪಅಂದುಗೆಕಿರುಗೆಜ್ಜೆ ಘಲಿರೆಂಬ ನಾದದಿಬಂದು ಕಾಳಿಂಗನ ಹೆಡೆಯನೇರಿ ||ಧಿಂಧಿಮಿ ಧಿಮಿಕೆಂದು ತಾಳಗಳಿಂದಾನಂದದಿ ಕುಣಿವ ಮುಕುಂದನ ಚರಣವ 1ಉಟ್ಟ ಪೀತಾಂಬರ ಉಡಿಯ ಕಾಂಚಿಯದಾಮತೊಟ್ಟ ಮುತ್ತಿನ ಹಾರ ಕೌಸ್ತುಭವು ||ಕಟ್ಟಿದವೈಜಯಂತಿತುಲಸಿಯ ವನಮಾಲೆಇಟ್ಟ ದ್ವಾದಶನಾಮ ನಿಗಮಗೋಚರನ 2ಕಿರುಬೆರಳಿನ ಮುದ್ರೆಯುಂಗುರ ಮುಂಗಡೆಕರದಲಿ ಕಂಕಣ ನಳಿತೋಳುಗಳ ||ವರಚತುರ್ಭುಜ ಶಂಖಚಕ್ರದಿ ಮೆರೆವನನಿರುತದಿ ಒಪ್ಪುವ ಕರುಣಾ ಮೂರುತಿಯ 3ಬಣ್ಣದ ತುಟಿ ಭಾವರಚನೆಯ ಸುಲಿಪಲ್ಲಸಣ್ಣ ನಗೆಯ ನುಡಿ ಸವಿಮಾತಿನ ||ಪುಣ್ಯ ಚರಿತ್ರನ ಪೊಳೆವ ಕಿರೀಟನಕಣ್ಣು ಮನ ತಣಿಯದಕಂಸಾರಿಕೃಷ್ಣನ4ಮಂಗಳ ವರತುಂಗಭದ್ರದಿ ಮೆರೆವನಅಂಗಜಪಿತಶ್ರೀ ಲಕ್ಷ್ಮೀಪತಿಯ ||ಶೃಂಗಾರ ಮೂರುತಿಪುರಂದರವಿಠಲನಕಂಗಳಿಂದಲಿ ಕಂಡೆ ಹಿಂಗಿತು ಭವಭಯ 5
--------------
ಪುರಂದರದಾಸರು
ಕಂಡೆನಾ..............ಸಾಸಿರನಾಮದಶೇಷಮಹಿಮ ವೆಂಕಟೇಶನ ಮೂರುತಿಯ ಪ.ಶೇಷಗಿರಿಗೆ ಕೈವಲ್ಯವೆನಿಪ ಸ್ವಾಮಿಪುಷ್ಕರಿಣಿಯವಾಸನಕಂಡೆನಾಅ.ಪ.ವಿಕಸಿತಸರಸಿಜ ಸಮಪದಯುಗಳನಅಖಿಳಜಗದೆರೆಯನನಖಶ್ರೇಣಿಗಳೊಳು ತರತರದಿ ಮೆರೆವಸುಖಮಣಿಗಳ ಕಂಡೆನಾ 1ಗುಲ್ಛಕೆ ನೂಪುರ ಭೂಷಿತ ವರಫಣಿತಲ್ಪನ ಮೂರುತಿಯಒಪ್ಪುವ ದ್ವಿಜದಂತಿಹ ಜಘನ ಕಂದರ್ಪನಯ್ಯನ ಕಂಡೆನಾ 2ಹೊಂಗನ್ನಡಿಗಳ ಹಳಿದೊಪ್ಪುವ ಜಾನುಂಗಳ ಚೆನ್ನಿಗನಬಂಗಾರ ಬಾಳೆಯ ಕಂಬದಂತೆಸೆವ ಬೆಡಂಗಿನ ತೊಡೆಯವನ ಕಂಡೆನಾ 3ಕಟ್ಟಿಹ ಕಟಹವನಿಟ್ಟ ಝಗ ಝಗಿಸುವ ಪೊಂಬಟ್ಟೆಯನುಟ್ಟವನಇಟ್ಟ ಕಿಂಕಿಣಿದಾಮ ಮಧ್ಯತ್ರಿವಳಿ ನಾಭಿಸೃಷ್ಟಿಯುದರದವನ ಕಂಡೆನಾ 4ಉರದಿ ಮೆರೆವ ಸಿರಿವತ್ಸಲಾಂಛನಕೇಯೂರ ಕೌಸ್ತುಭಧರನಸಿರಿತುಲಸಿ ಪದಕಹಾರ ಕಂಬುಕಂದರತಿರುವೆಂಗಳಯ್ಯನ ಕಂಡೆನಾ5ಅರಿಮಥÀನವ ಮಾಳ್ಪರಿ ಶ್ರುತಿಮಯವಾದವರಶಂಖೋಧೃತನವರಾಭಯ ನೀಡುವವರಗದೆಪದುಮದಪರಮಾಂಗನ ಕಂಡೆ ನಾ 6ಅಂಬುಜಮೊಗದೊಳು ಕಾಂತಿಯ ಬೀರುವಲಂಬಿತ ಕುಂಡಲನಪೊಂಬಣ್ಣದ ಸಂಪಿಗೆ ಸಂಪಿಗೆನಾಸಿಕಲುಳಿ ನಾಸಾಪುಟದವನ ಕಂಡೆನಾ 7ಮರಿಕೂರುಮನಂದದಿ ಕದಪುಗಳು ಅಮರುತ ಬಿಂಬಾಧರನಪೆರೆನೊಸಲಿನ ಭ್ರೂಲತೆ ಕಿರುನಗೆ ಕಸ್ತೂರಿ ತಿಲಕಾಂಕಿತನ ಕಂಡೆನಾ 8ಕೋಟಿಇನತೇಜದಮಕುಟವರಕರುಣನೋಟದ ಜಗಪಾಲನಹಾಟಕಗಿರಿಯ ಪ್ರಸನ್ನವೆಂಕಟ ಜಗನ್ನಾಟಕ ಸೂತ್ರಧಾರನ ಕಂಡೆನಾ 9
--------------
ಪ್ರಸನ್ನವೆಂಕಟದಾಸರು
ಕರುಣಿಯೆಂಬೆ ಕರುಣಾಬ್ಧಿಯೆಂಬೆ ಶರಣು ಶರಣೆಂಬೆಪರಮಭಾಗವತರ ಅರಿಗಳ ತರಿದು ನೀನರಕ ತಪ್ಪಿಸಿ ನಿಜಪುರಕೊಯ್ಯುವೆಯೆಂದು ಪ.ತಾಯಿಯೆಂಬೆ ತವರೂರೆಂಬೆತ್ರಾಹಿತ್ರಾಹಿ ಎಂಬೆಬಾಯೆಂಬೆ ಮಾನವರಘ ಕಾಣಿಸುತಿರೆನೀಯಜಾಮಿಳಗಾಶ್ರಯನಿತ್ತೆಯೆಂದು 1ತಾತನೆಂಬೆ ಆದ್ಯಾಪ್ತನೆಂಬೆ ನಾಥನಾಥೆಂಬೆಪಾತಕಕೌರವರಾತಂಕ ಬಿಡಿಸಿ ಸಂಪ್ರೀತಿಲಿ ಪಾಂಡವರ ಕಾಯುವೆಯೆಂದು 2ಏಕನೆಂಬೆ ಅನೇಕನೆಂಬೆ ಸಾಕು ಸಾಕು ಎಂಬೆಶ್ರೀಕಾಂತ ಪ್ರಸನ್ವೆಂಕಟೇಕಾಂತ ದಾಸರಬೇಕಾಗಿ ದಡ ನೂಕುವೆಯೆಂದು 3
--------------
ಪ್ರಸನ್ನವೆಂಕಟದಾಸರು
ಕಾಶಿ ಪಿತಾಂಬರ ಕೈಯಲಿ ಕೊಳಲು |ಪೂಸಿದ ಶ್ರೀಗಂಧ ಮೈಯಲಿ ||ಲೇಸಾದ ಪುಷ್ವಮಾಲಿಕೆ ಹಾಕಿದ-ನಮ್ಮ-|ವಾಸುದೇವಹರಿಬಂದ ಕಾಣಿರೇನೆ? 2ಕರದಲಿ ಕಂಕಣ ಬೆರಳಲಿ ಉಂಗುರ |ಕೊರಳಲಿ ಹಾಕಿದ ಹುಲಿಯುಗರಮ್ಮ ||ಅರಳೆಲೆ ಕನಕಕುಂಡಲ ಕಾಲಲಂದಿಗೆ-ನಮ್ಮ-|ಉರಗಶಯನ ಬಂದ ಕಾಣಿರೇನೆ? 3ಹದಿನಾರು ಸಾವಿರ ಗೋಪಸ್ತ್ರೀಯರ ಕೂಡಿ |ಚದುರಂಗ-ಪಗಡೆಯನಾಡಿದನ ||ಮದನಮೋಹನರೂಪ ಎದೆಯಲ್ಲಿ ಕೌಸ್ತುಭ-ನಮ್ಮ |ಮಧುಸೂದನ ಬಂದ ಕಾಣಿರೇನೆ? 4ತೆತ್ತೀಸಕೋಟಿ ದೇವತೆಗಳು ಕೂಡಿ |ಹತ್ತವತಾರವ ಧರಿಸಿದನ ||ಸತ್ಯಭಾಮೆಯ ಅರಸ ಶ್ರೀ ಪುರಂದರವಿಠಲ |ನಿತ್ಯೋತ್ಸವ ಬಂದ ಕಾಣಿರೇನೆ? 5
--------------
ಪುರಂದರದಾಸರು
ಕುಳಿತೆಯ ಕೃಷ್ಣ ಕುಳ್ಳಿರ ಕಲಿತೆಯ |ಕುಳಿತೆಯ ಎನ್ನೊಡೆಯ ಪಇಳೆಯೊಳು ಭಕುತರ ಹೃದಯ ಕಮಲದೊಳು |ಕುಳಿತೆಯ ಎನ್ನೊಡೆಯ ಅ.ಪಜಲಚರರೂಪದಿ ನಿಗಮಗಳೆಣಿಸುತ ಕುಳಿತೆಯ ಎನ್ನೊಡೆಯ |ಕುಲಗಿರಿಗಳನೆಲ್ಲ ನೆಗಹಿಕೂರ್ಮನಾಗಿ ಕುಳಿತೆಯ ಎನ್ನೊಡೆಯ ||ಛಲದಿ ವರಾಹನಾಗಿ ಭೂಮಿದೇವಿಯ ತಂದುಕುಳಿತೆಯ ಎನ್ನೊಡೆಯಖಳಹಿರಣ್ಯಾಖ್ಯನ ಕರುಳಬಗಿವೆನೆಂದುಕುಳಿತೆಯ ಎನ್ನೊಡೆಯ 1ತೊಡೆ ವಟುವೇಷವ ಸುರರ ರಕ್ಷಿಪೆನೆಂದು ಕುಳಿತೆಯ ಎನ್ನೊಡೆಯ |ಪೊಡವಿಯ ಕ್ಷತ್ರಿಯ ವಂಶ ಸವರುವೆನೆಂದು ಕುಳಿತೆಯ ಎನ್ನೊಡೆಯ ||ಮಡದಿಯ ಒಯ್ದನ ಕೆಡಹಿ ಲಂಕೆಯಲಿಕುಳಿತೆಯ ಎನ್ನೊಡೆಯ |ಕಡುಮೂರ್ಖ ಕೌರವನನ್ನು ಕೊಲುವೆನೆಂದು ಕುಳಿತೆಯ ಎನ್ನೊಡೆಯ 2ತ್ರಿಪುರರ ಸತಿಯರ ವ್ರತವ ಕೆಡಿಪೆನೆಂದು ಕುಳಿತೆಯ ಎನ್ನೊಡೆಯ |ಉಪಸನಿಷದ್ವಾಹನ ತೇಜಿಯ ಬೆನ್ನಲಿ ಕುಳಿತೆಯ ಎನ್ನೊಡೆಯ |ಕೃಪೆಯಿಂದಲಿ ಮನದೊಳು ನೆನೆವವರಲಿಕುಳಿತೆಯ ಎನ್ನೊಡೆಯ |ಕಪಟನಾಟಕಸಿರಿ ಪುರಂದರವಿಠಲ ಕುಳಿತೆಯ ಎನ್ನೊಡೆಯ3
--------------
ಪುರಂದರದಾಸರು
ಕೃಷ್ಣ ರಕ್ಷಿಸೆನ್ನ ಜಯ ಜಯಪಕ್ಷಿರಾಜಗಮನಾದುಷ್ಟಹನನ ಜಲಜಾಕ್ಷ ಜನಾರ್ದನಶಿಷ್ಟ ಜನರ ಮನದಿಷ್ಟ ಪ್ರದಾಯಕ ಪಗೋಕುಲದೊಳು ನೆಲಸಿ ದೈತ್ಯರ-ನೇಕರನು ಮಥಿಸಿಲೋಕದ ಜನರಿಗೆ ರೀತಿಯ ತೋರುತ-ನೇಕರ ಮನೆ ಮನೆ ಬೆಣ್ಣೆಯ ಭುಜಿಸಿದ 1ದ್ವಾರಕೆಯೊಳು ನಿಂತೆ ಕೌರವವೀರಗಾಯುಧವಿತ್ತೆಸಾರಥಿಯಾಗುತೆ ಧಾರುಣಿ ಗೆಲಿಸಿದೆಧೀರ£Àುನೀ ಗೋವಿಂದನೆ ದಾಸನೆ 2
--------------
ಗೋವಿಂದದಾಸ
ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿರೆ ಪಮಸ್ತಕದಲಿ ಮಾಣಿಕದ ಕಿರೀಟಕಸ್ತುರಿ ತಿಲಕವು ಹೊಳೆವಲಲಾಟ||ಹಸ್ತದಿ ಕೊಳಲನೂದುವ ನರೆ ನೋಟಕೌಸ್ತುಭದೆಡ ಬಲದೊಳು ಲೋಲಾಟ 1ಮಘಮಘಿಸುವ ಸೊಬಗಿನ ಸುಳಿಗುರುಳುಚಿಗುರು ತುಳಸಿವನ ಮಾಲೆಯಿಟ್ಟ ಕೊರಳುಉಗುರಿಗೆ ಹೊನ್ನ ಮುದ್ರಿಕೆಯಿಟ್ಟ ಬೆರಳುಸೊಗಸಿನ ನಾಭಿಯು ತಾವರೆಅರಳು2ಉಡುದಾರಒಡ್ಯಾಣಸಕಲಾಭರಣಬೆಡಗಿನ ಪೀತಾಂಬರ ರವಿಕಿರಣ ||ಕಡಗಗಗ್ಗರಗೆಜ್ಜೆ ಇಕ್ಕಿದಚರಣಒಡೆಯಪುರಂದರವಿಠಲನ ಕರುಣ3
--------------
ಪುರಂದರದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ಕೊಡುವುದೆಂದು ಎನ್ನ ಕೊಂಬುದೆಂದು-ಕೈ-|ಪಿಡಿವುದೆಂದು ನೀ ಒಲಿವುದೆಂದು ಪಕೊಡುಕೊಂಬ ಮಹದನುಗ್ರಹದವನೆಂದು ನಿ-|ನ್ನಡಿಗೆ ಸೇರಿದೆನಯ್ಯ ಬಡತನಕೌಷಧ ಅ.ಪಶ್ವಾನಸೂಕರ ಜನ್ಮ ನಾನುಂಬೆ ನನ್ನಲ್ಲಿ |ನೀನೇ ತತ್ತದ್ರೂಪನಾದೆಯಲ್ಲ ||ಹೀನರೊಳ್ ನಾನತಿ ಹೀನನಾಗಿ-ಅಭಿ-|ಮಾನಿಯಾಗಿ ಕಾಲಕಳೆದೆನಲ್ಲ ||ವಾನರನಂಗೈಯ ಮಾಣಿಕ್ಯದಂತೆನ್ನ |ಮಾನದಂತರ್ಯಾಮಿ ಸಿಕ್ಕೆಯಲ್ಲ ||ಏನೇ ಆದರು ನಿನ್ನೊಳೆನಗೆ ಮುಂದೆ ಭಕ್ತಿ-|ಙ್ಞÕನ-ವೈರಾಗ್ಯ ಭಾಗ್ಯಗಳನು ದೇವ 1ಕಾಡಿನ ಮೃಗವು ತಾ ಹಾಡಿದರೆ ನಂಬಿ |ಆಡುವುದಲ್ಲದೆ ಓಡುವುದೆ? ||ಕಾಡುವ ಪಶುವಿನ ಬಾಲವ ಕಟ್ಟಿಸಿ |ಕೂಡೆ ಪಾಲ್ಗರೆಯಲು ಒದೆಯುವುದೆ? ||ಆಡುವ ಶಿಶು ತಪ್ಪಮಾಡಲು ಜನನಿ-ಕೊಂ-|ಡಾಡುವಳಲ್ಲದೆ ದೂಡುವಳೆ ||ಮೂಢ ಬುದ್ದಿಯೊಳು ಕೆಟ್ಟಿನೆಂದು-ಕೋಪ |ಮಾಡಬೇಡ ದಯೆಮಾಡಿ ನೀಡಿಷ್ಟವ 2ಹಣ್ಣಾದ ಹೊತ್ತು ಬಾಯ್ ಹುಣ್ಣಾದ ತೆರನಂತೆ |ನಿನ್ನ ಸೇರುವ ಯತ್ನ ಬಿಟ್ಟು ನಾನು ||ಹೆಣ್ಣು ಹೊನ್ನು ಮಣ್ಣಿಗಾಗಿಯೆ ಭ್ರಮೆಗೊಂಡೆ |ಸುಣ್ಣಕಿಕ್ಕಿದ ನೀರಿನಂತಾದೆನು ||ಎನ್ನಪರಾಧವನಂತ ಕ್ಷಮಿಸು ನೀನು |ಮನ್ನಿಸದಿರಲಾರಿಗೆ ಪೇಳ್ವೆನು ||ಓಂ ನಮೋ ಶ್ರೀಹರಿಎಂಬ ಪೂರ್ಣಙ್ಞÕನ-|ವನ್ನು ಪುರಂದರವಿಠಲನ ಎನ್ನಪ್ಪನೆ 3
--------------
ಪುರಂದರದಾಸರು
ಕೋಮಲಾಮಲ ಗಾತ್ರನ ತಾಮರಸದಳ ನೇತ್ರನಸ್ವಾಮಿ ಸಿರಿನಿವಾಸನ ಕಂಡೆ ಹೇಮಗಿರಿ ವರದೀಶನ ಪ.ಕನ್ನೆ ಲಕುಮಿಯನೆತ್ತಿದಶುಭಚಿನ್ನವಕ್ಕಿಯ ಹತ್ತಿದರನ್ನದುಡುಗೆಗಳಿಟ್ಟನ ಸುವರ್ಣದಂಬರನುಟ್ಟನಕರ್ಣಕುಂಡಲ ಬೆಳಗಿನ ನುಣ್ಗೆನ್ನೆಲಲುಗುವ ಕುರುಳಿನಸಣ್ಣನಾಮದ ನೊಸಲಿನ ಶ್ರೀ ಚಿನ್ಮಯನ ಬಲು ಚೆಲುವನ 1ಕುಂದದಲರಿನ ಮಾಲೆಯ ಪ್ರಭೆಗುಂದದ ಮಕುಟಮೌಳಿಯಸ್ಯಂದನಾಂಗದರಾಭಯವರ ಹೊಂದಿದಮಲ ಸುಪಾಣಿಯಮುಂದೆ ನಾರದ ಹನುಮರ ಗಾಯನಾನಂದದಲಿ ತಾ ಕೇಳುವಹಿಂದೆಡಬಲದಿ ಛತ್ರವ ಪಿಡಿದಿಂದಿರೆಯರೊಳೊಪ್ಪುವ 2ತೋರ ಮುತ್ತಿನ ಹಾರದಕೇಯೂರಕೌಸ್ತುಭವಕ್ಷದಚಾರುಸ್ಮಿತ ಮುಖರೋಚಿಯ ದಯಾವಾರಿಧಿಯ ಮಹೋದಾರಿಯಸಾರಿದರ ಸುರತರುವಿನ ಸುರವೈರಿಕರಿಪಂಚಾನನಭೂರಿಪ್ರಸನ್ವೆಂಕಟೇಶನ ಹೃದಯಾರವಿಂದ ನಿವಾಸನ3
--------------
ಪ್ರಸನ್ನವೆಂಕಟದಾಸರು
ಕೋಲುಹಾಡುಕೋಲು ಕಾಮನ ಗೆದ್ದ ಕೋಲು ಮಾಯ್ಗಳನೊದ್ದಕೋಲು ಆನಂದಮುನಿ ಪಿಡಿದಿಹ ಕೋಲೆ ಪ.ತಮನೆಂಬುವನ ಕೊಂದು ಕಮಲಜನಿಗೆ ವೇದಕ್ರಮದಿಂದ ಕೊಟ್ಟು ಜಗವನು ಕೋಲೆಕ್ರಮದಿಂದ ಕೊಟ್ಟು ಜಗವನು ರಕ್ಷಿಸಿದವಿಮಲ ಶ್ರೀಮತ್ಸ್ಯಮನೆದೈವ ಕೋಲೆ1ಸುರಪನ ವಿಭವೆಲ್ಲ ಶರಧೀಲಿ ಮುಳುಗಿರೆಗಿರಿಗಹಿ ಸುತ್ತಿ ಕಡೆಯಲು ಕೋಲೆಗಿರಿಗಹಿ ಸುತ್ತಿ ಕಡೆಯಲುನಗಜಾರೆಧರಿಸಿದ ಶ್ರೀಕೂರ್ಮಮನೆದೈವ ಕೋಲೆ2ಹೊಂಗಣ್ಣಿನವನು ಭೂವೆಂಗಳನೆಳೆದೊಯ್ಯೆಮಂಗಳಮಹಿಮ ದಯದಿಂದ ಕೋಲೆಮಂಗಳ ಮಹಿಮ ದಯದಿಂದ ನೆಗಹಿದ್ಯಜ್ಞಾಂಗ ಶ್ರೀವರಾಹ ಮನೆದೈವ ಕೋಲೆ 3ಒಂದೆ ಮನದೊಳಂದು ಕಂದ ನೆನೆಯಲಾಗಬಂದವನಯ್ಯನ್ನೊದೆದನು ಕೋಲೆಬಂದವನಯ್ಯನ್ನೊದೆದನು ಅನಿಮಿತ್ತಬಂಧು ನರಹರಿಯು ಮನೆದೈವ ಕೋಲೆ 4ಎದುರಿಲ್ಲವೆನಗೆಂದು ಮದವೇರಿದವನ ತ್ರಿಪದ ಭೂಮಿ ಬೇಡಿ ಗೆಲಿದನು ಕೋಲೆಪದ ಭೂಮಿ ಬೇಡಿ ಗೆಲಿದಾ ತ್ರಿವಿಕ್ರಮಮುದದ ವಾಮನ ಮನೆದೈವ ಕೋಲೆ 5ಕುಜನರಳಿದು ಭಾಗ್ಯ ಸುಜನರಿಗೊಲಿದಿತ್ತನಿಜ ತಾತನಾಜÕ ಸಲಹಿದ ಕೋಲೆನಿಜ ತಾತನಾಜÕ ಸಲಹಿದ ಶುಭಗುಣದ್ವಿಜರಾಮ ನಮ್ಮ ಮನೆದೈವ ಕೋಲೆ 6ಕೌಸಲ್ಯೆ ಗರ್ಭದಿ ಜನಿಸಿದ ಕೃಪೆಯಲ್ಲಿಕೌಶಿಕಕ್ರತುವ ಕಾಯ್ದನು ಕೋಲೆಕೌಶಿಕಕ್ರತುವ ಕಾಯ್ದ ರಾವಣಾಂತಕಶ್ರೀ ಸೀತಾರಾಮ ಮನೆದೈವ ಕೋಲೆ 7ಗೋಕುಲದಲಿ ಬೆಳೆದುಪೋಕದನುಜರ ಅನೇಕ ಪರಿಯಲಿ ಸದೆದನು ಕೋಲೆ ಅನೇಕ ಪರಿಯಲಿ ಸದೆದ ಪಾಂಡವಪಾಲಶ್ರೀಕೃಷ್ಣ ನಮ್ಮ ಮನೆದೈವ ಕೋಲೆ 8ಮಿಥ್ಯಾವಾದಿಗಳಿಗೆ ಮಿಥ್ಯವನೆ ಕಲಿಸಿಸತ್ಯವಾದಿಗಳ ಪೊರೆದನು ಕೋಲೆಸತ್ಯವಾದಿಗಳ ಪೊರೆದನು ಅಜವಂದ್ಯಕರ್ತಬೌದ್ಧನು ಮನೆದೈವ ಕೋಲೆ9ಸ್ವಾಹಾ ಸ್ವಧಾಕಾರವು ಮಹಿಯೊಳಿಲ್ಲದಾಗೆಸುಹಯವೇರಿ ಕಲಿಯನು ಕೋಲೆಸುಹಯವೇರಿ ಕಲಿಯನೆಳೆದು ಕೊಂದಮಹಾಕಲ್ಕಿ ನಮ್ಮ ಮನೆದೈವ ಕೋಲೆ 10ಹತ್ತವತಾರದಿ ಭಕ್ತಜನರ ಹೊರೆದಮತ್ತಾವಕಾಲದಿ ರಕ್ಷಿಪ ಕೋಲೆಮತ್ತಾವ ಕಾಲದಿ ರಕ್ಷಿಪ ಪ್ರಸನ್ವೆಂಕಟಕರ್ತನ ನಂಬಿ ಸುಖಿಯಾದೆ ಕೋಲೆ 11
--------------
ಪ್ರಸನ್ನವೆಂಕಟದಾಸರು
ಕೌತುಕಲಕುಮಿನಾಥನು ಒಲಿದದ್ದುಭೂತಳದೊಳಗÀಂಜೋದ್ಯಾತರ ಮಾತಿದು ಪ.ವೇದ ತಂದಾತನ ಪಾದವ ನೋಡಿ ನೋಡಿಮೋದಬಟ್ಟನುಬೊಮ್ಮಮಾಧವಅಂಜಿದ್ದು1ಮಂದಾರಗಿರಿಎತ್ತಿ ತಂದ ಅಮೃತವನ್ನುಆನಂದ ಬಟ್ಟನುಬೊಮ್ಮಇಂದೈವರು ಅಂಜಿದ್ದು2ಧರಣಿ ತಂದಾತನ ವರಹಾ ಸುರರರಿಗೆ ಸುಖವಿತ್ತುದೊರೆ ಧರ್ಮನ ಕಂಡುಪರಮಭೀತನಾದ3ನರಸಿಂಹ ದೈತ್ಯನ ವಧಿಸಿಬಿಟ್ಟನೆಂದುಹರುಷವಾದನುಬೊಮ್ಮಅರಸ ಅಂಜಿದ್ದು4ವಾಮನ ರೂಪಕ್ಕೆ ಕಾಮ ಮೋಹಿತರಾಗಿಶಾಮ ವರ್ಣನ ಕಂಡು ಭೀಮ ಭೀತನಾದ 5ಜ್ಞಾನಿಗಳು ಭಾರ್ಗವನ ಧೇನಿಸಿ ನಮಿಸೋರು ಏನೆಂಬೆಪಾರ್ಥನು ತಾ ನೋಡಿ ಅಂಜಿದ್ದು 6ಚಲ್ವರಾಯನಗುಣಎಲ್ಲ ಮೋಹಿಸಬೇಕುನಲ್ಲಿ ದ್ರೌಪತಿದೇವಿಯ ವಲ್ಲಭರಂಜಿದ್ದು 7ಕೃಷ್ಣಾವತಾರಗೆ ಎಷ್ಟು ಮೋಹಿಸುವವರುಧಿಟ್ಟ ನಕುಲರಾಯ ಇಷ್ಟೊಂದು ಅಂಜಿದ್ದು 8ಬೌದ್ಧನ್ನ ಧೇನಿಸಿ ಸಿದ್ಧಿ ಪಡೆದವರೆಷ್ಟುರುದ್ರಾದಿ ವಂದ್ಯಗೆ ಬುದ್ದಿವಂತರು ಬೆದರ 9ಚಲುವ ರಂಗಯ್ಯನು ಕುದುರೆ ಏರಿ ಬರಲುಬುದ್ಧರು ನಮಿಸುವರು ಹೆದರ ಸಹದೇವನು 10ತಂದೆ ರಾಮೇಶನ ಕೊಂಡಾಡೊ ಗುಣವಿಲ್ಲಪುಂಡರಿಕಾಕ್ಷಗೆ ಪಾಂಡವ ರಂಜಿಸಿದ್ದು 11
--------------
ಗಲಗಲಿಅವ್ವನವರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಗುರುರಾಯರ ನಂಬಿರೋ-ಮಾರುತಿಯೆಂಬ ಪಗುರುರಾಯರ ನಂಬಿ ಬಿಡದೆ ಯಾವಾಗಲು |ದುರಿತವ ಕಳೆದು ಸದ್ಗತಿಯ ಪಡೆವರೆಲ್ಲ ಅ.ಪವನಧಿಯ ಮನೋವೇಗದಿಂದ ಲಂಘಿಸಿ ಮಹಿ-ತನುಜೆಯ ಶೋಕತಾಪವ ಕಳೆದು ||ವನವ ಬೇರೊಡನೆ ಕಿತ್ತೀಡಾಡಿ ಎದುರಾದದನುಜರ ಸದೆದು ಲಂಕೆಯ ತನ್ನ ಸಖಗಿತ್ತ 1ಕೌರವ ಬಕ ಹಿಡಿಂಬಕ ಕೀಚಕರೆಂಬ |ಕ್ರೊರಸಂತತಿಯೆಲ್ಲ ನುಗ್ಗಲೊತ್ತಿ ||ಘೋರಪಾತಕಿದುಶ್ಯಾಸನ ರಕುತವಹೀರಿ ಮುದದಿ ಮುರವೈರಿಯ ಭಜಿಸಿದ 2ಜೀವೇಶರೊಂದೆಂಬ ದುರ್ವಾದಿಗಳ ಕು-ಭಾವಶಾಸ್ರ್ತಗಳೆಲ್ಲ ತರಿದೋಡಿಸಿ ||ಕೋವಿದರಿಗೆ ಸದ್ಛಾಷ್ಯ ಸುಧೆಯನಿತ್ತುದೇವ ಪುರಂದರವಿಠಲ ಸೇವಕನಾದ 3
--------------
ಪುರಂದರದಾಸರು