ಒಟ್ಟು 1005 ಕಡೆಗಳಲ್ಲಿ , 96 ದಾಸರು , 782 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮಾ ರಾಮಾ ಎಂಬ ನಾಮ ಜಿಹ್ವೆಯೊಳಿರುವನೇಮವನೆ ಸ್ಥಿರನಿಜವ ಮಾಡೋ ರಾಮರಾಮ ದಶರಥರಾಮ ಪಟ್ಟಾಭಿರಾಮ ರಘುರಾಮ ಸೀತಾರಾಮ ರಾಮ(ರಾಮ) ಪ ಬಾಲತನವೆಂಬುದೆಂತು ಲೀಲೆಯಿಂದಲಿ ಸಂತು ಮೇಲೆ ಯೌವನವು ಬಂತೋ ರಾಮಲೋಲಲೋಚನೆಯರ ವಿಶಾಲರತಿಸುಖದೊಳಗೆ ವೋಲಾಡುತಿದ್ದೆನಲ್ಲೋ ರಾಮಕಾಳು ಜರೆ ಮುಸುಕಿ ಕೈಕಾಲು ಕಸದಿಂ ಮುರುಪಿ ನಾಲಿಗೆಯ ಧೃತಿ ತಪ್ಪಿತೋ ರಾಮಕಾಲನವರಿಗೆ ಕರುಣವಿಲ್ಲ ನೀ ಕೈಬಿಟ್ಟ ಮೇಲೆ ರಕ್ಷಿಸುವರಿಲ್ಲಾ ರಾಮ 1 ಹೆತ್ತ ತಾಯಿ ಮೊಲೆವಾಲನುಂಡುದಕೆ ಪಡಿಗೆಟ್ಟೆ ಸಪ್ತಶರನಿಧಿ ಸಾಲದೋ ರಾಮಸತ್ತು ಹುಟ್ಟಿದ ದೇಹದಸ್ಥಿಗುಪಮಿಸೆ ಮೇರುಮಸ್ತಕಕ್ಕತ್ಯಧಿಕವೋ ರಾಮಚಿತ್ರಗುಪ್ತರು ಕರ್ಮಗಳನು ಬರೆಬರೆದು ಬೇಸತ್ತು ಬೆಂಡಾದರಲ್ಲೋ ರಾಮಅತ್ಯಂತ ಕರುಣರಸವೆನ್ನ ಮೇಲೆ ನಿನಗಿರ್ದರೆ ಮುಕ್ತಿಯನು ಕೊಟ್ಟು ಸಲಹೋ ರಾಮ2 ತಂದೆ ತಾಯ್ಗಳು ನೀನೆ ಬಂಧುವರ್ಗವು ನೀನೆ ಮುಂದೆ ರಕ್ಷಿಪನು ನೀನೆ ರಾಮಮುಂದುಗಾಣದೆ ಬಹು ಮದಾಂಧತನದಲಿನಡೆದು ಮಂದಮತಿಯಾಗಿದ್ದೆನೋ ರಾಮಮುಂದಾದರೂ ತಂದೆ ತಾಯಿಯ ಜಠರದಿ ಬಾರದಂದವನು ಮಾಡಿ ಸಲಹೋ ರಾಮಚಂದ್ರಶೇಖರ ಕೆಳದಿ ರಾಮೇಶ್ವರನು ನೀನೆ ಎಂದು ನಾನಿಂದು ತಿಳಿದೆ ರಾಮ 3
--------------
ಕೆಳದಿ ವೆಂಕಣ್ಣ ಕವಿ
ರಾಮಾನುಜ ಮತೋದ್ಧಾರಕತಾಮಸಗುಣಪಾಶಗಿರಿವಜ್ರದಂಡ ಪ ವ್ಯಾಸರ ತೋಳೆಂದು ನಂದಿಯ ಧ್ವಜದಲ್ಲಿಹೇಸದೆ ಕಟ್ಟಿ ಪೂಜಿಪರು ನೋಡವ್ಯಾಸರದೊಂದು ತೋಳಿಗೆ ಶಿವಶರಣನಸಾಸಿರ ತೋಳ್ಗಳ ತರಿದ ನಮ್ಮಯ್ಯ 1 ಹರಿ ಎಂಬ ಶಬ್ದವ ಕೇಳಿ ಪಿಟ್ಟಕ್ಕನುಹರನ ಹೊಟ್ಟೆಯಲ್ಲಿ ಪುಟ್ಟುವೆನೆಂಬಳುಹರಹರ ಎಂಬ ಶೈವರ ಏಳ್ನೂರುಶಿರಗಳನರಿದನು ನಮ್ಮ ತಾತಯ್ಯ2 ಪಾದ ಮೇಲು ತಿಳಿದು ನೋಡಣ್ಣ 3 ಲಿಂಗವೆ ಘನವೆಂದು ಹೆಚ್ಚಿ ಕುಣಿದಾಡುವಸಂಗನ ಶರಣರೆಲ್ಲರು ಕೇಳಿರಿಲಿಂಗಪ್ರಸಾದವು ಮುಟ್ಟದಂತಾಯಿತು ನಮ್ಮರಂಗನ ಪ್ರಸಾದವು ಲೋಕಪಾವನವು 4 ಧರೆಯೊಳು ವಿರಕ್ತರು ವೀರ ಪವಾಡವಇರಿದು ಎಬ್ಬಿಸುವೆವೆಂದಾಡುವರುಹರಿಯ ನಾಮಾವಳಿಯ ಅನುಮಾನವಿಲ್ಲದೆಯೆಧರಿಸಿದಲ್ಲದೆ ದೊರೆಯದು ಗತಿಯಣ್ಣ 5 ಹರಬಂದು ಓಂಕಾರ ಗುರುವೆ ಎನ್ನುತ ಕೃಷ್ಣನರಮನೆಯ ಮುಂದೆ ಭಿಕ್ಷವ ಬೇಡಲುಹರಿಯುಂಡ ಮೇಲೆ ಪ್ರಸಾದವ ನೀಡಲುಹರ ಉಂಡು ಬ್ರಹ್ಮ ಹತ್ಯೆ ಕಳಕೊಂಡ 6 ಶಿವ ಮಹಾದೇವನು, ಧರೆಗೆ ಹರಿಯೆ ದೈವಭುವನಕ್ಕೆ ಹರಿಹರರೇಕಸ್ಥರುಭವರೋಗ ಹರ ಕಾಗಿನೆಲೆಯಾದಿಕೇಶವನವಿವರ ತಿಳಿದು ಭಜಿಸಿರೊ ಭಕ್ತ ಜನರು7
--------------
ಕನಕದಾಸ
ಲಾಲಿ ಶ್ರೀ ಕೃಷ್ಣ ಬಾಲ ಲಾಲಿ ನಂದ ಯಶೋದೆ ಲೀಲ ವೇಣುಗೋಪಾಲ ಪ. ವಸುದೇವ ಸುತನಾಗಿ ಬಂದು ಎಸೆವೊ ಗೋಕುಲದಲಿ ನಿಂದು ಅಸುರಕುಲ ಸಂಹಾರಕೆಂದು ನಸುನಗುತ ಗೋಪಿಯರ ವಶವಾಗ್ವೆನೆಂದು 1 ಪುಟ್ಟಿದಾ ಶಿಶುವನ್ನೆ ನೋಡಿ ನಕ್ಷತ್ರ ರೋಹಿಣಿ ಎಂದು ತಿಳಿದು ಅಷ್ಟಜನ ಸಹಿತ ಗೋಕುಲದಿ ಸಂತುಷ್ಟಿಯೊಳು ನಾಮಕರಣವ ಮಾಡಿ ನಲಿದೂ 2 ವೇದ ಘೋಷಗಳಾಗುತಿರಲೂ ಆದಿ ಮೂರುತಿಗೆ ಮೋಹದಲಿ ಕೃಷ್ಣನೆಂದ್ಹೆಸರನಿಡಲೂ ಸಾದರದಿ ಗೋಪ ದಕ್ಷಿಣೆ ತಾಂಬೂಲ ಅಗಾಧದಲಿ ಬ್ರಾಹ್ಮಣರಿಗೆ ಕೊಟ್ಟು ನಲಿದೂ 3 ಚತುರ ವೇದದ ನಾಲ್ಕು ಸರಪಣಿಯ ಹೂಡಿ ಚತುರ ದಿಕ್ಕನೆ ನಾಲ್ಕು ಚೌಕ ತೊಟ್ಟಿಲನೆ ಕಟ್ಟಿ ಚತುರ್ಮುಖನಯ್ಯನ ತೊಟ್ಟಿಲೊಳಗಿಟ್ಟು ಅತಿಶಯದಿ ನಾರಿಯರು ತೂಗಿದರು ಹರಿಯಾ ಲಾಲಿ4 ಮಚ್ಛಕೂರ್ಮನೆ ವರಹ ಲಾಲಿ ತುಚ್ಛ ದೈತ್ಯನ ಕೊಂದ ನರಹರಿಯೆ ಲಾಲಿ ಅಚ್ಚವಾಮನ ಭಾರ್ಗವ ಕೃಷ್ಣ ಲಾಲಿ ಸಚ್ಚ ಬೌದ್ಯಕ ಶ್ರೀ ಶ್ರೀನಿವಾಸನೆ ಲಾಲಿ 5
--------------
ಸರಸ್ವತಿ ಬಾಯಿ
ಲೋಕನೀತಿ ಇರಬೇಕು ಇದ್ದರು ಇಲ್ಲದಿರಬೇಕು ಪ ಹರಿಯಲ್ಲಿ ಮನವಿಟ್ಟು ತೊರೆದು ಮಮತೆ ಭವದಿ ಅ.ಪ. ಪರದೈವ ಹರಿಯೆಂದು ದೃಢದಿಂದಲಿರಬೇಕು ಗುರುವಾಯು ಸರಿಯೆಂದು ಗುರುಭಕ್ತಿಮಾಡಬೇಕು ಹರಿಯ ಕರುಣ ವಿಲಾಸದಿಂದಲಿ ವೈರಿ ವೃಂದವ ಸ್ಮರಿಸಿ ಸ್ಮರಿಸುತ ಕ್ರಮದಿ ಬಿಂಬನ ಪರಮ ಸುಖದಿಂ ಜ್ಞಾನ ಘಳಿಸುತ 1 ತಿಳಿಯಬೇಕೊ ವಿದ್ಯೆ ತುಳಿಯಬೇಕಾವಿದ್ಯೆ ಬೆಳಿಸಬೇಕು ಭಕ್ತಿ ಹಳಿಯಬೇಕು ಹಂಮದ ನಳಿನ ನಯನನ ಆಳುವೆಂಬುದ ತಿಳಿದು ತವಕದಿ ದೊರೆಯ ತೊಳಳಿಬಳಲಿದೆ ಬಹಳ ವುದರಕೆ 2 ಹರಿಯಿತ್ತದುಣಬೇಕು ಸಮಚಿತ್ತವಿರಬೇಕು ಹರಿಗಿತ್ತುಮಣಿಬೇಕು ಧೊರೆ ಚಿತ್ತವೆನಬೇಕು ಪರರ ಬೇಡದೆ ಬಿಡುತ ಹರಿಯನು ಸಿರಿಗುಪ್ರೇರಕ ವಿಷ್ಣುವೆನ್ನುತ ಹಿರಿಯರಕರುಣ ಪಡೆಯುತ 3 ಮಂತ್ರಸಿದ್ಧಿಯು ಬೇಕು ತಂತ್ರ ವೃಂದವು ಬೇಕು ಯಂತ್ರವಾಹಕ ಹರಿಯ ಸ್ವಾತಂತ್ರವರಿಯಬೇಕು ಕಂತುಪಿತನೇಕಾಂತ ಭಕ್ತರ ಭಾಗ್ಯ ಪಡೆಯುತ 4 ಗಾತ್ರ ಶುದ್ಧಿಯುಬೇಕು ಪಾತ್ರವರಿಯುತ ದಾನವಿತ್ತು ಪೂಜಿಸಬೇಕು ಪುತ್ರಮಿತ್ರ ಕಳತ್ರ ಗತಹರಿ ತುತ್ತುವುಣ್ಣಿಸಿ ಜಗವ ಸಲಹುವ “ಶ್ರೀಕೃಷ್ಣವಿಠಲ”ನ ಕರುಣ ಪಡೆಯಲು 5
--------------
ಕೃಷ್ಣವಿಠಲದಾಸರು
ವಂದಿಪೆ ತವ ಪಾದಕೆ ಭವದ ಬಂಧನ ಕಳೆವುದಕೆಪ ಹಿಂದೆ ಮುಂದೆ ಎಂದೆಂದಿಗು ಎನ್ನಯ ಕುಂದುಗಳೆಣಿಸದೆ ಕರುಣಿಪುದೆನ್ನುತ ಅ.ಪ ಅಪರಾಧಿಯು ಎಂದು ತಿಳಿದರು ಗುಪಿತದಿ ಸಲಹುವದು ಅಪಮೃತ್ಯುವು ಪರಿಹಾರಕೆ ನಿಮ್ಮಯ ಉಪದೇಶದ ಮಂತ್ರವೆ ಪರಮೌಷಧಿ 1 ಕಾಯಕ್ಲೇಶದಿಂದ ಮನಸಿನ ಹೇಯ ವ್ಯಥೆಗಳಿಂದ ಕಾಯಜ ಪಿತನಂಘ್ರಿಯ ಸೇವಿಸದಲೆ ಆಯಾಸದಿ ಮನ ಕಳವಳಗೊಳುತಿದೆ 2 ಆರು ಮಂದಿ ಇಹರು ಮಾಯಾ ಪಾಶಾದಿ ಬಂಧಕ ಪಡಿಸುತ ಹಾಯಲೀಸರೊ ಹರಿ ಅಂಘ್ರಿಗಳಲಿ 3 ಆರಿಗುಸುರಲೇನು ಮಾಡಿದ ಕಾಂiÀರ್iವು ಮುಂದಿನ್ನೂ ಆನಂದಮಯ ವಿಠ್ಠಲದಾಸರ ಕೂಡಿ ಆದರುಸುವುದಿನ್ನೂ ಮುನ್ನೂ4 ಕಮಲನಾಭ ವಿಠ್ಠಲನೊಲುಮೆಯು ಸುಲಭದಿ ಪಡೆವುದಕೆ ಅನುದಿನ ಪ್ರಾರ್ಥಿಸುತ5
--------------
ನಿಡಗುರುಕಿ ಜೀವೂಬಾಯಿ
ವರದ ವೆಂಕಟ ಶ್ರೀನಿವಾಸ ಪ ಕರುಣದಿ ಪಿಡಿಯೊ ಎನ್ನ ಶೇಷಗಿರೀಶಾಅ.ಪ. ಘೋರ ಭವದಿ ನೊಂದೆನು ಇಂದು ಭಾರ ನಿನ್ನದು ಎಂದು ಸಾರಿ ಬೇಡಿದೆ ನಿನಗೆ ಭಕ್ತಬಂಧು ದೂರಮಾಡಲು ಬೇಡ ಕರುಣಾ ಸಿಂಧು ವಾರಿಜಾಸನ ವಂದ್ಯ ನೀರಜನಯನನೆ ಶರಣರ ಪೊರೆಯುವ ಸುರ ದ್ರುಮನೆ ಪರಿಪರಿ ಭವಣೆಯ ತರಿಮಹಿದಾಸನೆ ಚರಣ ಸೇವಕರ ಸೇವಕನೆನಿಸೊ ಶ್ರೀಶನೆ ದುರುಳ ಅಸುರನ ಶಿರವ ತರಿದು ತರಳ ಪ್ರಹ್ಲಾದನ ಪೊರೆದೆ ಎಂದು ಸುರರು ಪೊಗಳವುದನ್ನು ತಿಳಿದು ಭರದಿ ಬಂದು ಶಿರವ ನಮಿಸುವೆ ನಿಂದು 1 ಸಿರಿ ಅಜಭವಾದಿ ವಂದಿತ ಚರಣ ಪರಿಮಿತಿಯಿಲ್ಲದ ಗುಣ ಗಣ ಪೂರ್ಣ ನೀರಜ ಭವಾಂಡೋದಯಕೆ ಕಾರಣ ದುರಿತ ಹರಣ ಕ್ರೂರಜನ ಕುಠಾರ ದೇವನೆ ಗರುಡಗಮನ ಭೀಮರೂಪನೆ ಅರಗಳೆಣಿಸದೆ ಪೊರೆಯಂ ಬೇಗನೆ ಕರವ ಮುಗಿದು ಸಾರಿ ಬೇಡುವೆ ಕರಿಯ ತೊಡರನು ತರಿದು ನಕ್ರನ ಶಿರವ ಸೀಳಿದ ಕರುಣಿ ಕೃಷ್ಣನೆ ಸೀರೆ ಪಾಲಿಸಿ ಪೊರೆದ ದಾತನೆ ಮರಳಿ ಬರುವ ಭವವ ಬಿಡಿನೊ ರಂಗನೆ 2 ನಂಬಿದವರ ಕಲ್ಪವೃಕ್ಷ ನಂಬದವರ ಕಲುಷಕೆ ಶಿಕ್ಷಾ ಇಂಬಾಗಿ ಸರ್ವತ್ರ ಸುಜನರ ರಕ್ಷಾ ತುಂಬಿದ ವೈಭವದಿ ಮೆರೆಯೊ ದಕ್ಷಾ ಕಂಬುಕಂಠನೆ ನಿನ್ನ ನಂಬಿದೆ ಅಂಬರದಲಿ ಕಾಣೆಂದು ಬೇಡಿದೆ ಬಿಂಬನ ನಾಮನುಡಿಸೆಂದು ಕೇಳಿದೆ ಶಂಬರವೈರಿ ನಿನ್ನ ಚರಣವ ಸಾರಿದೆ ಶಂಭುವಂದಿತ ತುಂಬುರ ಪ್ರಿಯ ನಂಬಿ ಭಜಿಸುವೆ ತುಂಬು ಮನದೊಳು ಅಂಬುಜಾಕ್ಷನೆ ಜಯತೀರ್ಥ ಮುನೀಂದ್ರ ಬೆಂಬಲವಾಯುಗ ಶ್ರೀ ಕೃಷ್ಣವಿಠಲಾ 3
--------------
ಕೃಷ್ಣವಿಠಲದಾಸರು
ವರದೇಂದ್ರ ಯತಿ ಚಕ್ರವರ್ತಿ ನಿರಂತರ ವರಣಿಸುವೆ ನಿಮ್ಮ ಕೀರ್ತಿ ಪರಮ ಕರುಣಿ ನಿಮ್ಮ ಚರಣಕಮಲಯುಗ ಕ್ಕೆರಗಿ ಬೇಡುವೆ ವರವಾ ಎಮ್ಮನು ಪೊರೆವಾ ಪ ನತಜನಬಂಧು ನೀನೆಂದೂ | ತಿಳಿದು ನತಿಸಿದೆ ಗುಣಗಣಸಿಂಧು ಪ್ರತಿಗಾಣೆ ನಿಮಗೆ ಸುವ್ರತಿ ವರ ಪ್ರಣತ ಕಾ ಮಿತ ಕಲ್ಪತರುವೆ ನಿರ್ಜಿತಮಾರಮಾರ್ಗಣ ಕ್ಷಿತಿಪರಿಗೆ ಪ್ರತಿದಿನದಿ ಪರಮಾದ್ಭುತವೆನಿಸುವುದು ನಿಮ್ಮದಾನ ಪ್ರತತಿ ಸಾಂಪ್ರತ ಮಧುರವಚನಾ ಶಾಸ್ತ್ರ ಪ್ರವಚನಾ1 ಮರುತ ಮತಾಂಬುಧಿ ಚಂದ್ರಾ | ಚಾಮಿ ಕರವರ್ಣಸರಸ ರವೀಂದ್ರ ಪರವಾದಿತಿಮಿರ ಭಾಸ್ಕರ ವಸುಧೀಂದ್ರ ಸ ದ್ಗುರು ಕರಸಂಜಾತ ನಿರುಪಮ ನಿರ್ಭೀತಾ ಖರಮಥನ ಪದಕೋನದ ಮಧುಕರ ಕೃಪಾಕರ ಕರವ ಪಿಡಿದುದ್ಧರಿಸುವುದು ಭೂ ಸುರ ಕುಲೋತ್ತಂಸಾ ನಮೋ ಪರಮಹಂಸಾ 2 ಕಲಿತ ಸುಂದರ ಮಂದಹಾಸಾ ಹೇ ನಿ ಷ್ಕಲುಷ ಸುತತ್ವ ವಿಲಾಸಾ ಗಳಿತಾ ಘಸಂಘನಿಶ್ಚಲ ಜಗನ್ನಾಥ ವಿ ಠಲನೊಲಿಮೆಯ ಪಡೆದಿಳಿಯೊಳು ಚರಿಸುವ ಭಳಿರೆ ಪ್ರತಿಯೋಗಿಗಳೆನಿಪ ಕಂ ಕಲಭಕೇಸರಿ ನಿಮ್ಮ ದಾಸರೊಳೊಲಿದು ಪಾಲಿಪುದನವರತ ಎನ್ನ ನಂಬಿದೆನೋ ನಿನ್ನ 3
--------------
ಜಗನ್ನಾಥದಾಸರು
ವಾದಿಸಿ ಗತಿಹ್ಯದೇನಣ್ಣ ನಿಜ ಹಾದಿತಿಳಿದು ನೋಡೆಲೊ ಜಾಣ ಪ ವಾದ ಭೇದ ನೀಗಿ ಮಾಧವನ ಮಹ ಪಾದ ಮಹಿಮೆಯನು ಕಾಣಣ್ಣ ಅ.ಪ ವೇದಕೆ ನಿಲುಕದ ಮಾತಣ್ಣ ನಿನ್ನ ವಾದಕೆ ಸುಲಭರುತಿಹ್ಯದೇನ ವೇದಸ್ಮøತಿಯ ನಿಜಬೋಧನರಿದು ಯಮ ಭವ ತುಳಿಯಣ್ಣ 1 ವಾಸನೆ ಹಸನ ಮಾಡಣ್ಣ ಮನ ದಾಸೆ ದ್ವೇಷಗಳ ಕಡಿಯಣ್ಣ ಶ್ರೀಶನ ದಾಸರ ವಾಸದಿರ್ದು ಅನು ಪಾದ ಭಜಿಸಣ್ಣ2 ಹಮ್ಮು ಚುಮ್ಮುಗುಣ ನೀಗಣ್ಣ ಕಾಯ ಕರ್ಮ ಕಡಿದು ನಿರ್ಮಲಾಗಣ್ಣ ನಿರ್ಮಲಾತ್ಮ ಪರಬ್ರಹ್ಮ ಶ್ರೀರಾಮನ ಮರ್ಮ ತಿಳಿದು ಮುಕ್ತಿ ಕೂಡಣ್ಣ 3
--------------
ರಾಮದಾಸರು
ವಾಯುದೇವರು ಆನಂದ ಸಾಧನ ತಿಳಿ ಕಂಡ್ಯಾ ಮನವೆ ಪ ಶಕುತಿಯು ಇದ್ದಷ್ಟು ತಿಳಿದು ಮತವು ಬಲು ಯುಕುತಿಯಿಂದಲಿ ನೀ ಒಲಿಸು ಕಂಡ್ಯ ಭಕುತಿಯು ಗುರುಗಳ ಪದದಲಿ ಮಾಡಲು ಮುಕುತಿಯು ಕರವಶವಾಗುವದೊ ಸಿದ್ಧ 1 ತಿಳಿಯದಿದ್ದರೆ ನೀನು ತಿಳಿದವರ ಬಳಿಯಲ್ಲಿ ಮಿಳಿತನಾಗಿ ಪೋಗಿ ತಿಳಿದುಕೊಳ್ಳೊ ಖಳಜನ ಸಹವಾಸ ಕುಮತಗಳಭ್ಯಾಸ ಒಳಿತಲ್ಲವೊ ನಿನಗೆಂದಿಗನ್ನ 2 ಪ್ರವಚನ ಮಾಡುವ ಬುಧಜನ ಪೇಳುವ ಸುವಚನ ಕೇಳಿ ನೀ ಬದುಕು ಕಂಡ್ಯಾ ಭವ ಛಳಿ ಬಾಧಿಗೆ ಪ್ರವಚನ ಬಾಹೋದೆಂದಿಗನ್ನ3 ಇದ್ದವರಿಗೆ ಕೊಟ್ಟು ಅವರ ಹಿಂದೆ ಇಷ್ಟು ಮೆದ್ದರೆ ಕೋಟಿ ಭೋಜನದ ಪುಣ್ಯ ಗೆದ್ದರು ಇವರನ್ನ ನಂಬಿದ ಜನರು ಬಿದ್ದರು ದೂಷಕ ಜನ ತಮದಿ 4 ಕಾಸುವೀಸಕೆ ನೀನು ಮೋಸಗೊಳಲು ಬ್ಯಾಡ ತಾಸು ಘಳಿಗೆ ನೆಚ್ಚಲು ಬೇಡ ಏಸೇಸು ಸುಕೃತದಿ ದೊರಕಿತು ಈ ಮತ ವಾಸುದೇವವಿಠಲನ್ನ ಪಾಡೊ 5
--------------
ವ್ಯಾಸತತ್ವಜ್ಞದಾಸರು
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ವಾಸುದೇವನ್ನಾ ಪಾದವ ನಂಬಬಾರದೇ | ಈಶನೊಲಮಿಂದಾ ಸದ್ಗತಿ ಸುಖವು ದೊರದೇ ಪ ವನಜಭವಾದಿಗಳು ದೋರುವೆನಾ ಮುಕುತಿಯು ಪಾಯಾ | ಯನುತ ಬಂದರೆಯುನೊಡದಿರು ಅವರ ಕಡೆಯಾ 1 ಜಠರ ಬಾಗಿಲವಾ ಕಾವಾಶ್ವಾನನ ಪರಿಯಂತೆ | ನಿಷ್ಠೆಯೊಂದನೆ ಬಿಟ್ಟು ತಿರುಗಬ್ಯಾಡ ಕಂಡಂತೆ2 ಇಂದಿಗೆ ನಾಳಿಗೇ ಹ್ಯಾಂಗೆಂದು ಚಿಂತಿಸದಿರು | ಛಂದದಿ ಗೀತೆಯಲಿ ಸಾರಿದ ವಾಕ್ಯಾ ಮರೆಯದಿರು 3 ಶಿಲೆಯೊಳಗಿರುತಿಹಾ ಕಪ್ಪಿಗಾಹಾರ ನೀಡುವರಾರೋ | ತಿಳಿದು ನೀನೀಗ ಹಲವ ಹಂಬಲವ ಹಿಡಿಯದಿರು 4 ಎರಡು ದಿನದಿದು ಸಂಸಾರವೆಂಬುದು ನೋಡಿ | ಅರಿತು ಇದರೋಳಗ ಸಾರ್ಥಕ ಸಾಧನವ ಮಾಡಿ 5 ಒಂದು ಭಾವದಲಿ ತ್ವರಿತದಿ ಹೊಕ್ಕರ ಶರಣವನು | ತಂದೆ ಮಹಿಪತಿ ಸುತ ಸನ್ಮಾರ್ಗ ಕೂಡಿಸುತಿಹನು 6 ಏನೆಂದರಿಯದಾ ಕಂದಗೆ ಉದ್ದರಿಸಿದ ನೋಡೀ | ತಂದೆ ಮಹಿಪತಿಯು ದಾರಿಯ ದೋರಿದ ದಯಮಾಡಿ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಜಯವಿಠ್ಠಲ ನಾಮ ಭಜಿಸಿದಾ ಮಾನವಗೆ ಸತತ ಸಂಪದವಕ್ಕು ಪ ಕಾಯ ಶುಚಿಯಾಗುವದು ಕಠಿನತನ ಪೋಗುವದು ಆಯು ಹೆಚ್ಚುವುದು ನಿಯೋಗಿ ಯಾಹಾ ನಾಯಿ ಮೊದಲಾದ ಪ್ರಾರಬ್ಧ ಜನುಮಗಳಿರಲು ಬಾಯಿಲಿಂದಾಕ್ಷಣ ತೀರಿ ಪೋಪವು ಕೇಳಿ 1 ದ್ವೇಷಿಗಳು ಎಲ್ಲ ಬಾಂಧವರಾಗಿ ಇಪ್ಪರು ದ್ವೇಷ ಪುಟ್ಟದು ತನಗೇತರ ಮೇಲೆ ದೇಶ ಮಧ್ಯದಲಿ ತಾನೆ ಎಲ್ಲಿ ಇದ್ದರೂ ಕೋಶಾಧಿಪತಿಯಾಗಿ ಸಂಚರಿಸುತಿಪ್ಪರು2 ಹೀನ ವಿಷಯಂಗಳಿಗೆ ಅವನ ಮನವೆರಗಿದರೆ ಕಾಣಿಸುವನು ತಾನೆ ಮುಂದೊಲಿದು ಏನು ಹೇಳಲಿ ಹರಿಯ ಅನುಕಂಪನಾತನಕೆ ಕಾಲ ಕಡೆಗಾಣನು 3 ದೇವಾದಿ ಮುನಿತತಿಯ ಮೊದಲಾದವರು ನೆನೆದು ಆವಾವ ಸೌಖ್ಯದಲಿ ಇಪ್ಪರದಕೋ ಭಾವದಲಿ ತಿಳಿದು ಭಕುತಿಯ ಮಾಡಿರೋ ಜನರು ಕಾವುತಲಿಪ್ಪ ಸರ್ವಾಶ್ರಯನಾಗಿ ಹರಿ4 ಕಂಡವಗೆ ದೊರಕದು ಈ ನಾಮ ಜಪಿಸಿದರು ಕಂಡವಗೆ ಬಲು ಸುಲಭ ಭಯವೆಯಿಲ್ಲಾ ಮಂಡಲವ ಚರಿಸಿ ನಾನಾ ವ್ರತ ಮಾಡದಿರಿ ಕೊಂಡಾಡು ವಿಜಯವಿಠ್ಠಲನ ಆಸರ ಸೇರಿ5
--------------
ವಿಜಯದಾಸ
ವಿಠಲಾ ಎನ್ನಿರೊ ಸುಜನರೆಲ್ಲಾ ಪ ವಿಠಲಾ ಎಂದಾರೆ ಸುಟ್ಟುಹೋಗೊದು ಪಾಪ ಅ.ಪ ಪ್ರಾತಃ ಕಾಲದೊಳು ಸ್ನಾನಾದಿಕರ್ಮ ಮುಗಿಸೀವಿಠಲಾ.... ವಾತದೇವನ ದ್ವಾರ ಅರ್ಪಿಸುತ್ತಾ ನೀವು | ವಿಠಲಾ....1 ಗುರುಗಳಲ್ಲಿಗೆ ಪೋಗಿ ವಂದಿಸಿ ಮೆಲ್ಲಾನೆ ವಿಠಲಾ.... ಮರÀುತಮತದ ಸಚ್ಛಾಸ್ತ್ರಗಳ ನೋಡುತಾ ವಿಠಲಾ.... 2 ಪಂಚÀಭೇದ ಪ್ರಾಪಂಚ ಸರ್ವವು ತಿಳಿದು ವಿಠಲಾ... ಪಂಚಬಾಣನಯ್ಯ ಪಂಚರೂಪದಿ ತೋರುವಾ ವಿಠಲಾ.... 3 ಪ್ರಾರಂಭಮಾಡಿ ಪರಮೇಷ್ಠಿ ಪರಿಯಂತ ವಿಠಲಾ.... ಶ್ರೀಪ್ರಣವ ಪ್ರತಿಪಾದ್ಯಗಿವರು ಪ್ರತಿಬಿಂಬರೆಂದು ವಿಠಲಾ.... 4ಮಾತುಮಾತುಗಳೆಲ್ಲಾ ಶ್ರೀಹರಿಸ್ತೋತ್ರವೆಂದು ವಿಠಲಾ.... ಆತುಮಾಂತಾರಾತ್ಮನೆಂದು ಕೂಗುತ ಒಮ್ಮೆ ವಿಠಲಾ.... 5 ತೀರ್ಥಕ್ಷೇತ್ರಗಳಿಗೆ ಪೋಗಿ ಬರುವಾಗ ವಿಠಲಾ.... ಪಾರ್ಥಸಖನ ಪ್ರೇರಣೆಯಿಂದ ಮಾಡಿದೆವೆಂದು ವಿಠಲಾ.... 6 ನಂಬೀದ ಜನರೀಗೆ ಬೆಂಬಲನಾಗುವ ವಿಠಲಾ.... ಸಂಭ್ರಮದಿಂದಾ ಸಂರಕ್ಷಿಸುವನೆ ಇವನೂ ವಿಠಲಾ.... 7 ಕಂಚಿಕಾಳಾಹಸ್ತಿ ಶ್ರೀರಂU ಮೊದಲಾಗಿರುವ ವಿಠಲಾ... ವಂಚನೆಯಿಲ್ಲಾದೆ ಭಜಿಸಿದವರ ಪೊರೆವಾ ವಿಠಲಾ.... 8 ಪಂಚಪ್ರಾಣಾರಲಿನಿಂತು ಕಾರ್ಯಮಾಳ್ಪ ವಿಠಲಾ.... ಕರ್ಮ ಇವನಿಂದ ನಾಶವೆಂದು ವಿಠಲಾ.... 9 ಊಧ್ರ್ವಪುಂಡ್ರಗಳು ದ್ವಾದಶನಾಮ ಇಡುವಾಗ ವಿಠಲಾ.... ಶುದ್ಧನಾಗೀ ಶುಭ್ರಹೊಸ ವಸ್ತ್ರ ಹೊದುವಾಗ ವಿಠಲಾ..... 10 ಪಂಚಮುದ್ರೆಗಳಲಿ ಪಂಚರೂಪದಿ ಇರುವ ವಿಠಲಾ... ನಿರ್ವಂಚನಾಗಿ ಧರಿಸಿದವರಿಗೊಲಿವಾ ವಿಠಲಾ... 11 ಪರಿಯಂತ ವಿಠಲಾ... ವೇದೈಕವೇದ್ಯ ವಿಶ್ವಾಮೂರ್ತಿ ಕಾರ್ಯಗಳೆಂದು ವಿಠಲಾ.... 12 ಚೇತನಾ ಚೇತನ ಜಡದೊಳಗೆ ನೀವು ವಿಠಲಾ... ಪ್ರೀತಿಯಿಂದಾಲಿ ಪೂಜೆಮಾಡಿದವರಾಗೆ ಒಲಿವ ವಿಠಲಾ.... 13 ಪರಿ ಚಿಂತಿಸಿ ವಿಠಲಾ... ಶಾರೀರದೊಳಿÀರುವ ಪ್ರಾಜ್ಞನಲಿ ಕೂಡಿಸಿ ವಿಠಲಾ.... 14 ಮಧ್ವಾಂತರ್ಯಾಮಿಯಾಗಿ ಉಡುಪಿಯಲ್ಲಿ ನಿಂತ ವಿಠಲಾ... ಕರ್ತು ವಿಠಲಾ..... 15
--------------
ಮುದ್ದುಮೋಹನವಿಠಲದಾಸರು
ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ