ಒಟ್ಟು 829 ಕಡೆಗಳಲ್ಲಿ , 93 ದಾಸರು , 682 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕಾರ್ಕಳದ ವೆಂಕಟೇಶನನ್ನು ನೆನೆದು)ಶ್ರೀನಿವಾಸ ನಮೋ ನಮೋ ಶ್ರುತಿಗಾನಲೋಲಪಾಹಿಪ.ಭಾನುಕೋಟಿ ಸಮಾನ ಭಾಸಿತ ದಾನವವಿಪಿನನ-ವೀನದವಾನಲ ದೀನೋದ್ಧಾರ ದಯಾನಿಧೆ ಸುಂದರ ಅ.ಪ.ಶೇಷಗಿರಿಯಿಂದ ಸುಜನಗಳ ಘೋಷದಿ ನಂಬಿದದಾಸಜನರಭಿಲಾಷೆಯನು ಸಂತೋಷದಿ ಕೊಡಲು-ಲ್ಲಾಸದಿಂದ ಪರೇಶ ನಾನಾ ವಿಲಾಸದಿ ನೆಲಸುತಕಾಸುವೀಸದ ಭಾಷೆಯನು ದಿಗ್ದೇಶದಿಂದ ಮಹಾಸುಕೀರ್ತಿಯರಾಸಿಗಳಿಸಿ ಜಗದೀಶ ಪರೇಶ ಮ-ಹೇಶವಿನುತನಿರ್ದೋಷಜಗನ್ಮಯ1ಉತ್ತಮಾಂಗಸುರತ್ನಖಚಿತಕಿರೀಟದ ನಿಜಪದ-ಭಕ್ತಜನಮನವೃತ್ತಿ ಒಲಿಸುವ ಕೂಟದ ಕರುಣೋ-ತ್ಪತ್ತಿ ಸರಸಿಜನೇತ್ರಯುಗ್ಮದ ನೋಟದ ಭೂಷಣ-ಮೊತ್ತದಿಂದಾದಿತ್ಯಕೋಟಿಯನ್ನೆತ್ತಿಂದತೆಸೆವುತ್ತ ಮಂಗಲ-ಮೂರ್ತಿಧರಿಸಿ ಜನರರ್ತಿಯ ಸಲಿಸುವಚಿತ್ತಜಜನಕ ಸರ್ವೋತ್ತಮ ನಿರುಪಮ 2ಪಂಕಜಾಂಬಕ ಶಂಕರಾಪ್ತ ಶುಭಾಕರ ಶ್ರೀವ-ತ್ಸಾಂಕ ಮುಕ್ತಾಲಂಕೃತ ಕರುಣಾಕರ ಭಕ್ತಾ-ತಂಕರಹಿತ ನಿಶ್ಯಂಕ ನಿತ್ಯನಿರಾಕರ ಪ್ರಭುವೆಂಕಟೇಶ ನಿರಾಮಯಾಮರಸಂಕುಲಾರ್ಚಿತ ಶಂಖಚಕ್ರಗ-ದಾಂಕಿತ ದನುಜಭಯಂಕರವರನಿರ-ಹಂಕರ ನಿಜದ ನಿಷ್ಕಳಂಕಚರಿತ್ರ 3ಮಂದರಾಧರ ಮಾಪತೇ ಮುಖಚಂದಿರ ಮೌನಿವೃಂದವಂದ್ಯ ಸುರೇಂದ್ರಪೂಜ್ಯ ಧುರಂಧರ ಮಹಾ-ಸಿಂಧುಶಯನ ಮುಕುಂದಕಂಬುಕಂಧರಶೋಭಿಪಕುಂದರದನ ಕುಚೇಲಪಾಲಾರವಿಂದನಾಭ ಪುರಂದರಾರ್ಚಿತಮಂದಹಾಸ ಮುಚುಕುಂದವರದ ಗೋ-ವಿಂದಸಚ್ಚಿದಾನಂದಉಪೇಂದ್ರ4ಮೂರು ಲೋಕೋದ್ಧಾರಿ ಘನಗಂಭೀರನೆ ವೆಂಕಟಧೀರಕಾರ್ಕಳಸಾರನಗರಾಧಿಕಾರನೆ ಭೂಸುರ-ಭೂರಿವೇದಪುರಾಣಘೋಷಾದಿಹಾರನೆ ಸಂತತಚಾರುಗೌಡಸಾರಸ್ವತಶೃಂಗಾರಋಗ್ವೇದಾಖ್ಯ ಉತ್ತಮದಾರುಣೀಸುರರಿಂದನವರತ ಮಂಗ-ಲಾರತಿಗೊಂಬ ಲಕ್ಷ್ಮೀನಾರಾಯಣಹರಿ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಧರ್ಮಸ್ಥಳ ಮಂಜುನಾಥನನ್ನು ನೆನೆದು)ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥಲೋಕೇಶಮಾಡುನಿರ್ಭಯಪ.ಪಾಕಹಪ್ರಮುಖದಿವೌಕಸಮುನಿಜನಾ-ನೀಕವಂದಿತಪದಕೋಕನದಕೋವಿದಅ.ಪ.ಪಾಪಾತ್ಮಪಾಪಸಂಭವ ನಾನೆಂಬುವದಕಾ-ಕ್ಷೇಪವೇನಿಲ್ಲೋಮಾಧವಶ್ರೀಪರಮೇಶ್ವರ ಕೋಪಕಲುಷಹರತಾಪತ್ರಯಶಮನಾಪದ್ಭಾಂಧವಗೋಪತುರಂಗ ಮಹಾಪುರುಷ ಗಿರೀಶ 1ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ-ನಾಮ ಪಾಪವಿಮೋಚನವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮಕಾಮಾರಿ ನಿನ್ನ ನಾ ಮರೆಹೊಕ್ಕೆನುಹೇ ವiಹಾದೇವ ಸೋಮಚೂಡಾಮಣಿ 2ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ-ಬ್ರಹ್ಮ ಸುಜ್ಞಾನದಾಯಕನಿರ್ಮಲನಿತ್ಯಸತ್ಕರ್ಮಪ್ರೇರಕ ಗಜ-ಚರ್ಮಾಂಬರಧರ ದುರ್ಮತಿಪ್ರಹರಭರ್ಮಗರ್ಭಜಭವಾರ್ಣವತಾರಕ3ಕಪ್ಪಕಾಣಿಕೆಗಳನು ತರಿಸುವರ-ಣ್ಣಪ್ಪದೈವವೆ ದೂತನುತಪ್ಪದೆ ಚಂದಯ ಹೆಗ್ಗಡೆಯರ ಮನದೊಳಿಪ್ಪ ದಧಿಮಥನ ತುಪ್ಪದಂತೆಸೆವಕರ್ಪೂರಗೌರ ಸರ್ಪವಿಭೂಷಣ 4ಪೊಡವಿಗಧಿಕವಾಗಿಹ ಕುಡುಮಪುರ-ಕ್ಕೊಡೆಯ ಭಕ್ತಭಯಾಪಹಕಡಲಶಯನ ಲಕ್ಷ್ಮೀನಾರಾಯಣಗತಿ-ಬಿಡೆಯದವನು ನಿನ್ನಡಿಗೆರಗುವೆವರಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಪಡುಬಿದ್ರೆಯ ಗಣೇಶ)ಮಾಡೆನ್ನೊಳು ಕರುಣ ಗಜಾನನ ಪ.ಮೂರ್ಖನೆನ್ನುತಲೆನ್ನ ಧಿಕ್ಕರಿಸದಿರುಶಕ್ರವಿನುತಚರಣಗಜಾನನ1ಹರಿನಾಭೀ ಕಮಲಾಕಾಶಾತ್ಮನೆಗಿರಿಜಾಂಕಾಭರಣ ಗಜಾನನ 2ಭಾರತಾರ್ಥ ತತ್ವಾರ್ಥ ಪ್ರಬೋಧನೆಸೂರಿಜನೋದ್ಧರಣ ಗಜಾನನ 3ಕಡಲಶಯನ ಲಕ್ಷ್ಮೀನಾರಾಯಣಸಖಪಡುಬಿದ್ರೆನಿಕೇತನ ಗಜಾನನ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬಪ್ಪನಾಡಿನ ದೇವಿಯನ್ನು ಕುರಿತು)ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆ ಪ.ದಯಮಾಡೆ ಕೇವಲ ಭಯವಿಹ್ವಲನಲ್ಲಿದಯಸಾಗರೆ ಸೌಭಾಗ್ಯಸಂಪದವನ್ನು ಅ.ಪ.ವೇದಾಂತವೇದ್ಯೆ ನಿಖಿಳಜಗದಾದಿವಿನೋದೆಭೂಧರಾತ್ಮಜೆ ಸರ್ವಾಧಾರಶಕ್ತಿ ಕಲಾಧರೆಮಧುರಬಿಂಬಾಧರೆ ನಿನ್ನಯಪಾದವನು ಮರೆಹೊಕ್ಕೆ ಮನಸಿನ ಭೇದವನುಪರಿಹರಿಸಿ ಸರ್ವಾಪ-ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆಗಂಭೀರೆ ಮೇರು ನಿತಂಬೆಸಿಂಹಮಧ್ಯೆಲಂಬೋದರಪರಿರಂಭಕರಾಂಬುಜೆಕುಂಭಿಕುಂಭಪಯೋಜೆ ಶೋಭಿಪ ಕಂಬುಕಂಠಿಮುಖೇಂದುಪದ್ಮ ದ-ಳಾಂಬಕಿ ಎನಗಿಂಬುದೋರೆರೋಲಂಬಕುಂತಳೆಶುಂಭಮರ್ದಿನಿ2ಸಿಂಧೂರನಯನೆ ನಿಖಿಲಾಮರವಂದಿತಚರಣೆಸುಂದರಾಂಗಿ ಸುಮಗಂಧಿವಿಬುಧಮುನಿವೃಂದಸೇವಿತೆನಿತ್ಯಾನಂದಪ್ರಕಾಶಿನಿಅಂಧಕಾಸುರವೈರಿಹೃದಯಾನಂದಪಾರಾವಾರಪೂರ್ಣಮಿ-ಚಂದ್ರೆ ಸದ್ಗುಣಸಾಂದ್ರೆಸುರಥನರೇಂದ್ರವರದೆ ಮೃಗೇಂದ್ರವಾಹಿನಿ 3ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆನಿಜದಿ ನಿನ್ನಯ ಪಾದಂಬುಜವ ನಂಬಿದೆ ತ್ರಿಜಗವಂದಿತೆಮಹಾಗಜಗೌರಿ ಶಂಕರಿತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ-ವ್ರಜವಿದಾರಿ ಮುನೀಂದ್ರ ಮನನೀರಜದಿವಾಕರೆ ಮಾನಿತೋದ್ಧರೆ 4ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರಸರ್ಪಶಯನ ಲಕ್ಷ್ಮೀನಾರಾಯಣಪ್ರೀತಿಯಪ್ಪಂತೆ ದಯೆ ಗೈಯೆಜಗದಾದಿಮಾಯೆಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ-ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬಪ್ಪನಾಡಿನ ಪಂಚದುರ್ಗೆ)ಮಂಗಲಂ ಶ್ರೀಪಂಚದುರ್ಗೆಗೆ ಜಯಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆ ಪ.ಶಂಖಚಕ್ರಶೂಲಾಂಕುಶಪಾಣಿಗೆಶಂಕರನಂಕಾಲಂಕಾರಿಗೆಕುಂಕುಮಬೊಟ್ಟಕಸ್ತೂರಿ ಲಲಾಟೆಗೆಪಂಕಜಗಂಧಿ ಶ್ರೀಪಾರ್ವತಿಗೆ 1ಕೋಕಿಲಗಾನೆಗೆ ಕೋಕಪಯೋಜೆಗೆಶ್ರೀಕಂಠನರ್ಧಾಂಗಿ ಶ್ರೀಗೌರಿಗೆಏಕದಂತನ ಜನನಿಗೆ ಜಗದಂಬೆಗೆಲೋಕನಾಯಕಿ ಶ್ರೀಮಹಾಕಾಳಿಗೆ 2ಕಂಜದಳಾಕ್ಷಿಗೆ ಕಲಧೌತಗಾತ್ರೆಗೆಕುಂಜರಗಮನೆಕಂಧರಜಾತೆಗೆಮಂಜೀರನೂಪುರರಣಿತಪದಾಬ್ಜೆಗೆನಂಜುಂಡನ ಮನಮಂಜುಳೆಗೆ 3ಅಂಗಜರೂಪೆಗೆ ಮಂಗಲದಾತೆಗೆಭೃಂಗಕುಂತಳೆ ಸರ್ವಮಂಗಲೆಗೆಬಂಗಾರಮಕುಟೋತ್ತಮಾಂಗದಿ ಧರಿಸಿದಸಂಗೀತಲೋಲೆಗೆ ಶರ್ವಾಣಿಗೆ 4ರೂಢಿಗಧಿಕ ಬಪ್ಪನಾಡಿಗೊಡತಿಯಾಗಿಮೂಡಿತೋರಿದ ಶ್ರೀಮುಕಾಂಬಿಕೆಗೆಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆಬೇಡಿದಿಷ್ಟವನೀವ ಸರ್ವೇಶೆಗೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಮಂಗಳೂರಿನ ಪ್ರಾಣದೇವರನ್ನು ನೆನೆದು)ಪಾಲಿಸೆನ್ನಪಾವಮಾನಿಪಾವನಾತ್ಮ ಸುಜ್ಞಾನಿಪ.ಮೂರ್ಲೋಕದ ಸಚರಾಚರಜಾಲದಂತರಂಗ ಕರುಣಿ ಅ.ಪ.ಮೂರವತಾರವ ಗೈದು ಮುರಾರಿಯ ಪೂಜಿಸಿದೆಪಾರಮೇಷ್ಠಿಪದ ಪೊಂದಿದೆ ಭಾರತಿಮನೋಹರ 1ಪಾರಗಾಣರು ನಿನ್ನ ಮಹಿಮೆ ಫಾಲನಯನಾದಿಗಳುಕ್ರೂರಕರ್ಮಿಗಳೇನರಿವರು ಶ್ರೀರಾಮಶರಣ್ಯ 2ಪುರಹೂತಾದ್ಯಮರಾರ್ಚಿತ ಪೂರ್ವಮಧ್ವಂಸಅರಿವರ್ಗಗಳತಿಕ್ರಮವ ಧಿಕ್ಕರಿಸೈ ಸುಜ್ಞಾನವಿತ್ತು 3ಸರ್ವಾಪರಾಧಗಳನು ಸಾಧುವರದ ಕ್ಷಮಿಸುಗರ್ವಹಂಕಾರವೀಯದೆ ಗಜವರದನ ಭಕ್ತಿಯಿತ್ತು 4ಕರಣೀಕಾಗ್ರಣಿ ಮಂಗಲಪುರವರ ಪ್ರಾಣೇಶವರಲಕ್ಷ್ಮೀನಾರಾಯಣ ಶರಣಾಗತರೀಶ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
130-1ದ್ವಿತೀಯ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪದ್ವಿತೀಯಾಶ್ರಮವನ್ನು ಯುಕ್ತ ಕಾಲದಿ ಕೊಂಡುಸದ್ಧರ್ಮ ಆಚರಿಸಿ ಗೃಹಕೃತ್ಯದಲ್ಲಿಇದ್ದರು ಜಯತೀರ್ಥ ಆಚಾರ್ಯ ಆದರುಸದಾ ಹರಿಯಲ್ಲೇ ಧಾವಿಸಿತು ಮನಸ್ಸು 1ಕ್ಷೀರಫೇಣವೊಲ್ ತೂಲಿಕ ಹಂಸ ತಲ್ಪವುಶುಭ್ರ ಕನ್ನಡಿ ಚಿತ್ರಾಲಂಕಾರಗಳುಕೊರತೆ ಏನೂ ಇಲ್ಲ ಐಹಿಕ ಸಂಪತ್ತಿಗೆಸ್ಪುರದ್ರೂಪಿಣಿಸತಿಸುಶೀಲೆ ಸುಗುಣೆ2ಪ್ರಾರಬ್ಧ ಕರ್ಮನಿಮಿತ್ತ ಶ್ರೀಹರಿಯೇವೆಪರಿಪರಿಭೋಗಗಳ ಒದಗಿಸಿದ್ದೆಲ್ಲಹರಿಗೆ ಅರ್ಪಿಸುತ ಅನುಭವಿಸುತಿರಲಾಗಹೊರಗಿಂದ ಓರ್ವನು ಹಾಡಿದನು ನುಡಿಯ 3ಮಂಚಬಾರದು ಮಡದಿಬಾರಳು ಕುಂಚುಕನ್ನಡಿ ಬಾರದುಸಂಚಿತಾರ್ಥವು ಮತ್ತೆ ಬಾರದು ಮುಂಚೆ ಮಾಡಿರಿ ಧರ್ಮವಕಂಚಿನ ಗಂಟೆ ಧ್ವನಿ ಅಂದದಿ ಈ ನುಡಿಕೇಳಿಮಂಚದಿಂದಿಳಿದರು ಕುಳಿತರು ಚಿಂತೆಯಲಿ 4ಅಕಳಂಕ ಗುಣನಿಧಿ ನಾರಾಯಣ ಮಾಯೇಶಸಂಕರುಷಣ ಪ್ರದ್ಯುಮ್ನ ಅನಿರುದ್ಧಶ್ರೀಕರಾರ್ಚಿತ ಪಂಚರೂಪನ ಪ್ರೇರಣೆಯೆಂದುಮಾಕಳತ್ರನ ಸ್ಮರಿಸಿ ಹೊರಟರು ಹೊರಗೆ 5ಲೌಕಿಕ ವಿಷಯ ವಿಜೃಂಭಣಾಡಂಬರವಲೆಕ್ಕಿಸದೆ ವೈರಾಗ್ಯ ಮನಪಕ್ವದಿಭಕುತಿ ಉನ್ನಾಹದಿ ಅವಧೂತಚರ್ಯದಿಶ್ರೀಕರ ನಾರಾಯಣನ ಸೇವಿಸಿದರು 6ತೀರ್ಥಕ್ಷೇತ್ರಾಟನ ಮಾಡಲಿಕೆ ಹೊರಟರುಹಾದಿಯಲಿ ಸರ್ಪವು ಅಡ್ಡ ಬರಲುವೇದ್ಯವಾಯಿತು ಜಯತೀರ್ಥ ಮುನಿಗಳು ತಾವೇಬಂದು ತಡೆದರು ಸರ್ಪರೂಪದಲಿಯೆಂದು 7ಈ ಪುಣ್ಯ ಶ್ಲೋಕರು ಜಯತೀರ್ಥವಿಪ್ರಸರ್ಪರೂಪಶೇಷದೇವರ ಜಯಮುನಿಗಳಅಭಿಪ್ರಾಯವನ್ನರಿತು ಶಾಸ್ತ್ರಪ್ರವಚನಶಿಷ್ಯೋಪದೇಶದಿ ಹರಿಯ ಸೇವಿಸಿದರು 8ಮಲಾಪಹಾರಿಣಿ ತೀರಸ್ಥ ಮುನವಳ್ಳಿಶೀಲತಮ ಅಡವಿ ಪ್ರದೇಶ ಗ್ರಾಮದಲಿಕುಳಿತು ಶಿಷ್ಯರಿಗೆ ಸುಧಾದಿಗಳ ಪೇಳಿದರುಪೊಗಳ ಬಲ್ಲೆನೆ ಇವರ ಮಹಿಮೆಸಾಕಲ್ಯ9ಸುಮಧ್ವವಿಜಯ ಪಾರಾಯಣ ಮಾಡುತ್ತಕಲ್ಮಷ ಕಿಲುಬು ಹತ್ತಿದ ಪಾತ್ರೆಯನ್ನಕಲ್ಮಷ ಕಿಲಬನ್ನ ತ್ವರಿತದಿ ನೀಗಿಸಿಹೇಮಮಯ ಮಾಡಿದರು ಜನರು ಕಂಡಿಹರು 10ಹನ್ನೆರಡುಬಾರಿಸುಧಾದಿಗಳ ಪ್ರವಚನ ಮಾಡಿವಿನಯ ಸಂಪನ್ನಶ್ರದ್ಧಾಳು ಶಿಷ್ಯರಿಗೆಹನ್ನೆರಡಾವರ್ತಿ ಸುಧಾ ತತ್ವ ಪ್ರಕಾಶಿಕ ಪೇಳಿಘನಮಹಿಮ ಟಿಪ್ಪಣಿ ಮಾಡಿಹರು ಎರಡಕ್ಕೂ11ಭುಜಗಶಾಯಿ ಕ್ಷೀರಾಬ್ಧಿವಾಸನ ಪ್ರೀತಿಗೂಸುಜನಅಧಿಕಾರಿಗಳ ಉದ್ಧಾರಕ್ಕುರಚಿಸಿ ಗ್ರಂಥಗಳನ್ನ ಕೃತಕೃತ್ಯ ಮನದಲ್ಲಿರಾಜರಾಜೇಶ್ವರಿ ಶ್ರೀ ಹರಿಗರ್ಪಿಸಿದರು 12ಸತ್ಯಸಂಧಾರ್ಯರ ಹಸ್ತಪದ್ಮೋತ್ಪನ್ನಸತ್ಯವರ ತೀರ್ಥರ ಕರಕಂಜದಿಂದಜಯತೀರ್ಥಾಚಾರ್ಯರು ಕೊಂಡರು ತುರ್ಯಾಶ್ರಮತೋಯಜಾಕ್ಷಶ್ರೀ ವಿಷ್ಣುತೀರ್ಥ ನಾಮದಲಿ13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ನಮಹಾಭಕ್ತ ಶ್ರೀ ವಿಷ್ಣು ತೀರ್ಥಾರ್ಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
199ಒಂದೆ ಮನದಲಿ ಭಜಿಸು ವಾಗ್ದೇವಿಯ |ಇಂದುಮತಿಕೊಡುವಳು ಶ್ರೀಹರಿಯ ಧ್ಯಾನದೊಳುಪಹಿಂದೆ ಪ್ರಹ್ಲಾದನು ಕಮಲಜನ ಸತಿಗೆರಗಿ |ಬಂದು ಆರಂಭಿಸಲುಹರಿವಿಶ್ವಮಯನೆಂದು ||ಬಂದವಿಪ್ಲವಕಳೆದು ಭಾವಶುದ್ಧಿಯನಿತ್ತು |ಹೊಂದಿಸಿದಳು ಶ್ರೀ ಹರಿಯ ಚರಣವನು || 1ಅಂದು ದಶಮುಖನನುಜ ವಂದಿಸದೆ ವಾಣಿಯನು |ಬಂದು ತಪವನು ಗೈಯೆ ಬಹುಕಾಲಕೆ ||ಅಂದದಿಂದ ಮೆಚ್ಚಿ ವರವಧಿಕ ಬೇಡೆನಲು |ಬಂದು ಜಿಹ್ವೆಯಲಿ ನಿದ್ರೆಯನು ಬೇಡಿಸಿದಳು 2ಅರಿತು ಭಜಿಸಲು ಬಿಡದೆ ಅಜನರಸಿಯ ನಿತ್ಯ|ಉರುತರವಾದ ವಾಕ್ ಶುದ್ಧಿಯನಿತ್ತು ||ನಿರುತ ಶ್ರೀಪುರಂದರವಿಠಲನ ಸೇವೆಯೊಳು |ಪರತತ್ತ್ವದ ಕಥಾಮೃತವನುಣಿಸಿದಳು 3
--------------
ಪುರಂದರದಾಸರು
212ತುಂಗೆ ಮಂಗಳತರಂಗೆ-ಹರಿಸರ್ವಾಂಗೇ |ಜಯಜಯ ಜಯತು ತುಂಗೆ ಪಆದಿಯಲೊಬ್ಬ ದೈತ್ಯ ಮೇದಿನಿಯಕದ್ದೊಯ್ದ |ಸಾಧಿಸಿ ರಸಾತಳದಲ್ಲಿರಿಸೆ ||ಭೇದಿಸಿದವನ ನಾಸಿಕದಲ್ಲಿ ಪುಟ್ಟಿದೆ |ಆದಿವರಾಹನ ದಾಡೆಯಲಿ ಬಂದೆ ದೇವಿ 1ಜಲವೆಲ್ಲ ಹರಿಮಯ, ಶಿಲೆಯೆಲ್ಲ ಶಿವಮಯ |ಮಳಲುಮಿಟ್ಟೆಗಳೆಲ್ಲ ಮುನಿಮಯವು ||ಬೆಳೆದ ದರ್ಭೆಗಳು ಸಾಕ್ಷಾತು ಬ್ರಹ್ಮಮಯ |ನಳಿನನಾಳವು ಸರ್ವ ವಿಷ್ಣುಮಯ 2ಇದೆ ವೃಂಧಾವನ, ಇದೆಕ್ಷೀರಾಂಬುಧಿ|ಇದೆ ವೈಕುಂಠಕೆ ಸರಿಮಿಗಿಲೆನಿಸಿದೆ ||ಇದೆ ಬದರಿಕಾಶ್ರಮ, ಇದೆ ವಾರಣಾಸಿಗೆ,ಅಧಿಕವೆಂದೆನಿಸಿದೆ ದೇವಿ ತುಂಗೆ 3ಧರೆಗೆ ದಕ್ಷಿಣವಾರಣಾಸಿಯೆಂದೆನಿಸಿದೆ |ಪರಮಪವಿತ್ರ ಪಾವನ ಚರಿತ್ರೆಯು ನಿನ್ನ ||ಸ್ಮರಣೆಮಾತ್ರದಿ ಕೋಟಿ ಜನ್ಮದಘವನಳಿವ |ಪರಮಸಾಯುಜ್ಯದ ಫಲವೀವ ದೇವಿ4ಪರಮಭಕ್ತ ಪ್ರಹ್ಲಾದಗೊಲಿದು ಬಂದ |ಪರಮನರಸಿಂಹಕ್ಚೇತ್ರವೆಂದೆನಿಸಿ ಮೆರೆದೆ ||ಧರೆಯೊಳಧಿಕವಾದ ಕೂಡಲಿ ಪುರದಲಿ |ವರದಪುರಂದರವಿಠಲನಿರಲು ಬಂದೆ5
--------------
ಪುರಂದರದಾಸರು
5 ತತ್ವವಿವೇಚನೆ371ಅಂಜನೆಸುತ ನಮೊ ಸ್ವಾಮಿಕಂಜಜಪದಪತಿ ಮೌಂಜಾಶ್ರಮಿ ಪ.ಪತಿತ ಪಾವನನಾಮಧೇಯ ಹನುಮಾಜೆÕಯಿಂದತೀತಾನಾಗತ ಅಜಾಂಡಜೆÕೀಯಾಮೃತ ಸಂಜೀವನಾದಿ ಚತುರೌಷಧ ತಂದೆಕ್ಷತಘಾತ ಪ್ಲವಗರ ಪ್ರತತಿ ರಕ್ಷಿಸಿದೆ 1ವ್ಯಾಘ್ರೇಶ್ವರಾಜಿತ ಸಮರ್ಥ ವಸುಧಾಹೃತಅಗ್ರಜಯಜ್ಞಾಧಿಕರ್ತಉಗ್ರ ಕೌರವಜನ ನಿಗ್ರಹ ಕೃಷ್ಣ ಮತಾಗ್ರಣಿ ಭೀಮ ಸಮಗ್ರ ಸುಜ್ಞಾನಿ 2ದುಷ್ಟೋಕ್ತಿ ಪೂರ್ವಪಕ್ಷಜಾರಿ ಭೇದೋಚ್ಚಾರಿವಿಷ್ಣುಪಕ್ಷ ಸಿದ್ಧಾಂತಸೂರಿಸೃಷ್ಟಿಲಿ ವರದ ವಾಸಿಷ್ಠ ಪ್ರಸನ್ವೆಂಕಟಾಧಿಷ್ಟನ ಪ್ರಿಯ ಮುನಿ ಶಿಷ್ಟರೊಡೆಯ ನೀ 3
--------------
ಪ್ರಸನ್ನವೆಂಕಟದಾಸರು
ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡ ಜಗಳವೇ ಲೇಸು ಪ.ಡಂಭಕರ ಮನೆಯಪಮಾನದೂಟಕ್ಕಿಂತತುಂಬಿದ ಪಟ್ಟಣದಿ ತಿರಿದುಂಬುವುದೆ ಲೇಸು |ಹಂಬಲಿಸಿ ಹಾಳು ಹರಟೆ ಹೊಡೆವುದಕಿಂತನಂಬಿ ಹರಿದಾಸರೊಳಾಡುವುದೆ ಲೇಸು 1ಒಡಲ ಹಂಗಿಸುವರ ಮನೆಯ ಓಗರಕಿಂತಕುಡಿನೀರ ಕುಡಿದುಕೊಂಡಿಹುದೆ ಲೇಸು |ಬಿಡದೆ ಕಡಿದಾಡುವರ ನೆರೆಯಲಿಹುದಕಿಂತಅಡವಿಯೊಳಜ್ಞಾತವಾಸವೇ ಲೇಸು 2ಮಸೆದು ಮತ್ಸರಿಸುವನ ಬಳಿಯಲಿಹುದಕಿಂತಹಸನಾದ ಹಾಳುಗುಡಿಗಳೆ ಲೇಸು |ಬಿಸಜಾಕ್ಷ ಪುರಂದರವಿಠಲನ ನೆನೆನೆನೆದುವಸುಧೆಯೊಳು ಚಿರಕಾಲವಿರುವುದೆ ಲೇಸು 3
--------------
ಪುರಂದರದಾಸರು
ಆರಿತ್ತರಭವನೇ ಈ ಮನವನೆನಗೆವಾರಿಜೋದ್ಭವಪಿತನೆ ನೀನಲ್ಲದೆ ಬೇರೆ ಪಪರಮಪಾವನ ನಿನ್ನಪರಮಪರತರ ಚರಿತೆಸ್ಥಿರವೆಂದು ನೆರೆನಂಬಿ ಅರಿವ ಬುದ್ಧಿಯನುಮೆರೆವ ನಿಮ್ಮಯ ಬಿರುದ ಹರುಷದಿಂ ಸ್ಮರಿಸ್ಮರಿಸಿಹಿರಿ ಹಿರಿ ಹಿಗ್ಗುತ ಬರೆವ ಈಕರವ1ನಿನ್ನ ದಾಸರಪಾದಭಿನ್ನವಿಲ್ಲದೆ ನೋಡಿಉನ್ನತ ಸುಖಪಡೆವ ಧನ್ಯದ್ವಯನಯನಮುನ್ನ ನಾ ಮಾಡಿದ ಪುಣ್ಯಫಲವೆಂದರಿದುನಿನ್ನ ಚರಣಕೆ ನಮಿಪ ಮಹಪುಣ್ಯಶಿರವ 2ಗಾಢಮಹಿಮನೆ ನಿಮ್ಮ ಈಡಿಲ್ಲದ ಲೀಲೆರೂಢಿಯೊಳಧಿಕೆಂದು ಆಡ್ಯಾಡಿ ಕುಣಿದುಕಾಡಿ ಬೇಡುವ ಮಹಗಾಢ ನಿಮ್ಮಡಿಭಕ್ತಿನೀಡಿದವರೆನಗಾರುನೋಡುಶ್ರೀರಾಮ3
--------------
ರಾಮದಾಸರು