ಒಟ್ಟು 801 ಕಡೆಗಳಲ್ಲಿ , 92 ದಾಸರು , 741 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ತುಳಸಿ ದೇವಿ ತಾಯಿ ಶ್ರೀ ತುಳಸೀಯೆ | ಕಾಯೆ ಭಕ್ತರ ಪ್ರೀಯೆಕಾಯೆ ಶ್ರೀಹರಿ ಜಾಯೆ | ತಾಯೆ ವರವ ನೀಯೇ ಪ ಪಾದ | ತೋಯಜ ಕಾಂಬುವದಾಯವಿತ್ತೆನ್ನ ನೀ | ಪ್ರೀಯದಿಂದಲಿ ಕಾಯೇ ಅ.ಪ. ಅಮೃತ ಕಲಶಹರಿಯು ಉದುಭವಿಸಲು | ವರ ಧನ್ವಂತ್ರೀಯೂ ||ಹರುಷೋದ್ರೇಕದಿ ನಯನ | ವರಬಿಂದು ಉದುರಲುಶಿರಿ ತುಳಸಿ ಎನಿಸೀದೆ | ಶರಣರ್ಗೆ ಗತಿ ಕೊಡುವ 1 ಓಲಗ ಗೈವರು 2 ಕಲುಷ ಸುಜನ | ಮಲಗಳ ಕಳೆದೂ |ಆಲವ ಭೋದರೆ ಶಾಸ್ತ್ರ | ವಲಿಸಿ ಕೀರ್ತಿಪ ನರಗೆನೆಲೆಯ ಕಾಣಿಪ ತನ್ನ | ಚೆಲುವ ವೈಕುಂಠದಿ 3 ಕರುಣಿಸು ಹರಿಪಾದ | ವರ ಪದ್ಮ ದ್ವಯದಲ್ಲಿನಿರುತ ಭಕುತಿಯನ್ನೆ | ವರಗುಣ ಸಂಪನ್ನೆ |ಕರವೀರ ಪುರದರಿಸಿ | ವರ ಸನ್ನಿಧಾನಕ್ಕೆನಿರುತದಿ ಸತ್ಪಾತ್ರೆ | ಪರಮ ಪಾವನ ಗಾತ್ರೆ 4 ಹಂಬಲೊಂದೆನಗುಂಟು | ಜಾಂಬುವತಿಯೆ ತುಳಸಿಇಂಬಿಟ್ಟು ಸಲಹುವೆ | ನೆಂಬ ಮತಿಯು ಇರೇ |ಬಿಂಬನು ಗುರು ಗೋ | ವಿಂದ ವಿಠಲ ಪಾದಅಂಬುಜದ್ವಯ ತೋರಿ | ಸಂಭ್ರಮದಲ್ಲಿ ಇರಿಸೆ 5
--------------
ಗುರುಗೋವಿಂದವಿಠಲರು
ಶ್ರೀ ನರಸಿಂಹ ದೇವರು ರಕ್ಷಿಸೆನ್ನನು ನಿರುತ ನರಮೃತನಾಥ ಪ ರಕ್ಷಿಸೆನ್ನ ಜಗತ್ಕುಕ್ಷಿಯೆ ಕರುಣಾಕ ಟಾಕ್ಷದಿಂದೀಕ್ಷಿಸಿ ತ್ರ್ಯಕ್ಷಾಂತರ್ಗತದೇವ ಅ.ಪ ಪತಿತಪಾವನ ಪರಶತ ಮೋದಗತ ಬೇದ ಚತುರ್ವೇದ ಪಾಲ ಶತಕ್ರತು ಕೃತಿನಾಥ || ಯತಿ ತತಿ ಮಾನಸವೃತ ತೇಜ ಭಾಸ್ಕರ ಸತತ ನಿನ್ನಯ ಪಾದವ | ಸದ್ಭಕುತಿಯಲಿ ಸ್ತುತಿಪ ದಾಸರ ಸಂಗವ | ಗರೆದು ಭವ ಮಾಧವ ನೀನೊಲಿದತಿ ಹಿತದಿಂದುಣಿಸು ನಿನ್ನ ಕಥೆ ಸುಧಾರಸವ 1 ಅರಿದರ ಗದಾಪದ್ಮಧರ ಚತುಷ್ಟಯಕರ ತಸ್ಕರ ಹರ ನರಗಾತ್ರ ಹರಿವಕ್ರ ಸುರಪಾನುಜವಟು ಪರಶುಪಾಣಿಯೆ ವಾನರ ನರಪಾಲಕವಿgಹಿÀ ತಾಂ ಬರಕಲ್ಕಿ ಶರಣ ಜನರು ಭಕ್ತಿಪರವಶದಲಿ ಕೂಗಿ ಕರೆಯಲಾಕ್ಷಣ ಓ ಎಂದು ಭರದಿ ಬಂದು ಪೊರೆವ ಪ್ರಭು ನೀ ಎಂದು ಬುಧರು ಪೇಳ್ವ ವರವಾಕ್ಯ ಮನಕೆ ತಂದು ಪ್ರಾರ್ಥಿಪೆ ನಿನ್ನ ಚರಿತೆ ಪಾಡುವ ಸುಖಗರಿಯೊ ಬಂಧು 2 ಸಿಂಧು ಶಯನ ಶಾಮ ಸುಂದರ ವಿಠಲ ಇಂದಿರಾತ್ಮಕ ತ್ರಯ ಮಂದಿರ ಕಾರ್ಪರ ಮಂದಿರ ತರುರಾಜ ಮಂದಿರ ದ್ವಿಜ ಮಧ್ಯ ಮಂದಿರಾತ್ಮಜ ಹೃ ನ್ಮಂದಿರ ಸದ್ಧಕ್ತ ಮಂದಾರ ಭೂರುಹ3
--------------
ಶಾಮಸುಂದರ ವಿಠಲ
ಶ್ರೀ ನರಸಿಂಹ ವಿಠಲ | ಕಾಪಾಡೊ ಇವಳಾ ಪ ದೀನ ಜನ ಮಂದಾರ | ಕಾರುಣ್ಯ ಮೂರ್ತೆ ಅ.ಪ. ತೈಜಸನೆ ನೀನಾಗಿ ಯೋಜಿಸಿದ ರೂಪವನುಮಾಜದಲೆ ಇತಿಹೆನೊ | ವಾಜಿ ವದನಾಖ್ಯಮೂಜಗಕ್ಕೊಡೆಯ ಹರಿ | ಗೋಜುಗಳ ಬಿಡಿಸುತ್ತವ್ಯಾಜ ರಹಿತನೆ ಕಾಯೊ | ಭ್ರಾಜಿಷ್ಗು ಮೂರ್ತೇ 1 ಹರಿ ಗುರೂ ಸದ್ಭಕುತಿ | ವರಜ್ಞಾನ ಕರುಣಿಸುತನಿರುತ ಪೊರೆ ಇವಳನ್ನ | ವೈರಾಗ್ಯವಿತ್ತೂ |ದುರಿತ ರಾಶಿಗಳಳಿದೂ | ಕರುಣಿಸೋ ನರಹರಿಯೇಮರುತಾಂತರಾತ್ಮಕನೆ | ಶರಣ ವತ್ಸಲನೇ 2 ಪಾದ ಕಮಲ ಸನ್ನುತ ಗುರೂ | ಗೋವಿಂದ ವಿಠಲಾ3
--------------
ಗುರುಗೋವಿಂದವಿಠಲರು
ಶ್ರೀ ಪತಿಯೆ ನಿನ್ನ ದಯವೆಂತಾಹದೋ ಪಾಪಕರ್ಮವ ಮಾಡಿ ಜೀವಿಸುವೆ ನಿರುತ ಪ ಬಾಲತನವನು ಬಾಲಲೀಲೆಯಿಂದಲಿ ಕಳೆದೆ ಕೀಳು ಜನರೊಡನೆ ಸ್ನೇಹವ ಬೆರಸಿದೆ ಹಾಳು ಹರಟೆಗೆ ಹೊತ್ತು ಸಾಲದೋಯಿತು ಯನಗೆ ಶ್ರೀ ಲೋಲ ನಿನ್ನಡಿಗೆ ದೂರಾದೆ ನಾನು 1 ಬುದ್ಧಿ ಪೂರ್ವಕದಿ ಸದ್ವಿದ್ಯೆಯನು ಕಲಿಯದಲೆ ಶುದ್ಧ ತಾಮಸ ವಿದ್ಯದೊಳು ರಮಿಸಿದೆ ಮಧ್ವಶಾಸ್ತ್ರದಸಾರವನ್ನು ತಿಳಿಯದೆ ನಾನು ಕದ್ದಕಳ್ಳನ ತೆರದಿ ಬಾಳಿದೆನು ಬರಿದೆ 2 ಪ್ರಾಯತನವೆ ವಿಷ ಪ್ರಾಯವಾಯಿತು ಎನಗೆ ಕಾಯಜನ ಉಪಟಳದಿ ಮತ್ತನಾದೆ ತೋಯಜಾಕ್ಷಿಯರ ದುರ್ಮಾಯ ಜಾಲಕೆ ಸಿಲುಕಿ ನೋಯಿಸಿದೆ ನಿಜ ಸತಿಯ ಪರಿಪರಿಯಲಿಂದ 3 ಮದನ ಜನಕನೆ ನಿನ್ನ ಮಧುರನಾಮವ ಮರೆದು ಸುದತಿಯರ ಅಧರಾಮೃತಕೆ ಬೆರೆದು ವಿಧಿಕುಲಾಚರಣೆ ಜರೆದ್ಹÀÀಗಲಿರುಳು ನಾರಿಯರ ವದನವನು ನೋಡಿ ಮೋದಿಪನರಾಧಮನೊಳ್ 4 ಉದರ ಗೋಸುಗ ಪರರ ಹೃದಯ ದ್ರವಿಸುವ ತೆರದಿ ವಿಧ - ವಿಧದಿ, ಆತ್ಮ ಸ್ತೊತ್ರವನೆ ಪೊಗಳಿ ಸದ-ಸದ್ವಿ ವೇಕವನು ತೊರೆದನ್ಯರ್ಹಳಿದು ಬಲು ಚದುರ ನಾನೆಂಧೇಳಿ ಮೋಸಗೊಳಿಸುತ ಜನರ 5 ಸಿರಿ ಚರಣಕ್ಕೆ ಶಿರ ಬಾಗ ದ್ಹರಿ ಭಕುತರಿಗೆ ವಿನಯದಿಂದೆರಗದೆ ನಿರುತದಲಿ ನಾಚಿಕಿಲ್ಲದಲೆ ಭೂದನುಜಯ ವಾನರಿಗೆ ಕರಮುಗಿದು ಜೀವಿಪÀಖೂಳ ಮನುಜನೊಳು 6 ಸತ್ಯಧರ್ಮವÀ ತ್ಯಜಿಸಿ ಮತ್ತೆಯುತ್ತಮರಜಾ - ನ್ನತ್ಯವನು ಸಹಿಸದಲೆ ತತ್ತಳಿಸುವೆ ಪೆತ್ತವರ ಸೇವಿಸದೇ ಮಿಥ್ಯವನೆ ಬೊಗಳಿದು - ಷ್ಕøತ್ಯದಿಂಬಾಳ್ವ ಉನ್ಮತ್ತನರ ಪಶುವಿನೊಳು 7 ಹರಿಗೆರಗದಿರುವÀÀ ಶಿರ ಹರಿಯ ಸ್ಮರಿಸದ ಜಿಂಹೆ ಹರಿವಾರ್ತೆಯಾಲಿಸದ ಕರ್ಣಂಗಳು ಕರ ಹರಿಯ ನೋಡದ ಚಕ್ಷು ಸರುವ ಪರಿಯ ಪವಿತ್ರದೇಹಧರಿಸಿದ ನರಗೆ 8 ವಿತ್ತ ಪಹರಿಸಿ ಪರರ ನಿಂದಿಸಿ ಪರರ ಬಲುವಂಚಿಸಿ ಪರಮೇಷ್ಟಿ ಜನಕನೆ ಪರತರ ಪರಂಜ್ಯೋತಿ ಪರದೈವನೆಂದರಿಯದಿರುವ ಪಾಮರನಿಗೆ 9 ನಾಮಾಡದಿಹ ಪಾಪ ವೀಮಹಿಯೊಳೊಂದಿಲ್ಲ ಸೀಮೆಗಾಣಲು ರವಿಜನಿಗೆ ಸಾಧ್ಯವಿಲ್ಲ ಆ ಮಹಾನರಕÀಂಗಳೆನಗೆÀ ತಕ್ಕವು ಅಲ್ಲ ಸ್ವಾಮಿ ನೀಪೊರೆಯದಿರೆ ಯನಗಾರು ಗತಿಯಿಲ್ಲ 10 ಏನಾದರೊಳಿತೆ ವರದೇಶ ವಿಠಲ ನಿನ್ನಾ ಙÁ್ಞನುಸಾರದಿ ಕರ್ಮಗಳ ಮಾಡಿದೆ ಧೀನರಕ್ಷಕನೆಂಬ ಬಿರಿದು ನಿಜ ವಿದ್ದರಾ - ದೀನನಾದವನನುದ್ಧರಿಸಲರಿಯಾ 11
--------------
ವರದೇಶವಿಠಲ
ಶ್ರೀ ಪ್ರಾಣೇಶದಾಸಾರ್ಯರ ಸ್ತುತಿ ತೆರಳಿದರು ಪರಮ ತೋಷದಲಿ ಹರಿಪರಕೆ |ಹರಿಪ್ರೀಯರಾದ ಪ್ರಾಣೇಶದಾಸರು ತ್ವರದಿ ಪ ನಿರುತದಲಿ ಹರಿಪೂಜೆ |ಮರಿಯದಲಿ ಮಾಡಿ ಬಲು |ಸ್ಥಿರ ಬುದ್ಧಿ ಪೂರ್ವಕದಲಿ |ಗುರುಗಳಲಿ ಸರ್ವಜ್ಞರಾಯರಿಂದಧಿಕ ಮ ||ತ್ತಿರಲುಂಟೆ ಎಂದು ತಿಳುಹಿ |ದುರುಳ ಜನರನುಸರಿಸದಲೆ ಕವಿಗಳೊಡನಾಡಿ |ಚರಿಸಿ ದೇಶಗಳಲ್ಲಿ ಮೆರೆದು ಖ್ಯಾತಿಯ ಪಡದು 1 ಭಾಗವತ ಶ್ರೇಷ್ಟ ಜಗನ್ನಾಥ ದಾಸಾಖ್ಯರಡಿ |ಜಾಗುಮಾಡದಲರ್ಚಿಸಿ |ಭೋಗಿವರ ಶಯನ ಪ್ರಾಣೇಶವಿಠಲಾಂಕಿತವ ||ಆ ಗುರುಗಳಿಂದ ಕೊಂಡು |ರಾಗದ್ವೇಷಗಳೆಂಬ ಅರಿಗಳನು ಸಂಹರಿಸಿ |ರಾಗದಲಿ ಹರಿಕಥನ ಕವನ ರೂಪದಿ ಪೇಳಿ2 ಪ್ರಾಣಮತವನನುಸರಿಸಿ ಆಚರಣಿಯನು ಮಾಡಿ |ಪ್ರಾಣಿಗಳಿಗೆ ತಿಳಿಸದೆ |ಕ್ಷೋಣಿಯೊಳಗಿನ್ನು ಇರಸಾಕೆಂದು ಆ |ಚಿತ್ರಭಾನು ಆಶ್ವಯುಜ ಶುದ್ಧ ಸಪ್ತಮಿಯಲಿ ||ಜ್ಞಾನಪೂರ್ವಕ ಲಯ ಚಿಂತನೆಯ ಮಾಡಿ ಗುರು |ಪ್ರಾಣೇಶ ವಿಠಲನಿದ್ದಾ ಪುರಕೆ ಜವದಿಂದ3
--------------
ಗುರುಪ್ರಾಣೇಶವಿಠಲರು
ಶ್ರೀ ಮಹಾದೇವರ ಸ್ತೋತ್ರ ಗಿರಿಜಾಪತಿ ತವ ಚರಣಕೆ ಎರಗುವೆ ಕರುಣದಿಂದೆನ್ನನು ಪೊರೆ ಮಹಾದೇವ ಪ ನಂದಿವಾಹನ ಸುರವೃಂದ ಸುಪೂಜಿತ ಇಂದ್ರವಿನುತ ಭಕ್ತಾನಂದದಾಯಕನೇ 1 ಶುಂಡಾಲ ಮದಹರ ಚಂಡವಿಕ್ರಮ ಮೃಕಂಡಜ ವರದ 2 ಭೂಜಗ ವಿಭೂಷ ವಿಜಯ ಸುಪೋಷ ಅಜಿನಾಂಬರಧರ ತ್ರಿಜಗವಂದಿತನೆ 3 ಗರಕಂಧರ ಹರ ಸುರಗಂಗಾಧರ ಸ್ಮರಸಂಹರ ನಿಜ ಶರಣರಪಾಲ 4 ವರದೇಶ ವಿಠಲನನಿರುತದಿ ಸ್ಮರಿಸುವ ಕರುಣಾಕರಭವಹರ ಶಂಕರ ಶಿವ 5
--------------
ವರದೇಶವಿಠಲ
ಶ್ರೀ ಮಹಾದೇವರು ಅಂಬಿಕಾಪತಿ ಶಂಭು ರಕ್ಷಿಸೆನ್ನಶಂಬರಾರಿ ಹರನೆ ನಂಬಿದೆನೊ ನಿನ್ನ ಪ ಭವ ಭ್ರಕುಟ ಭವಹರನೆ ನೀಎನ್ನಅವಗುಣಗಳೆಣಿಸದಿರು ಕವಿಗೇಯನೆ ||ಅವನಿಯೊಳು ಎನಗೀಗ ಸುವಿವೇಕಿಗಳ ಸಂಗಜವದಿ ಪಾಲಿಸು ಮುದದಿ ಜವನಾರಿ ಶಿವನೆ 1 ವಿನುತ ಇಳೆವರೂಥನೆ ನಿರುತತಲೆವಾಗಿ ಬೇಡುವೆನು ಸಲಹೆಂದು ನಾಎಲರುಣಿ ಭೂಷಣೆನೆ ಒಲಿದು ಪಾಲಿಸುದಯದಿಛಳಿಗಿರೀಶನ ಅಳಿಯ ನಳಿನಾರಿ ಧರನೆ 2 ಸಿರಿರಮಣ ಶಾಮಸುಂದರ ವಿಠಲ ಸಖನೆಮೊರೆ ಹೊಕ್ಕೆ ಮರೆಯದಿರು ಗರಗೊರಳನೆಕರುಣದಿಂದಲಿ ನಿನ್ನ ಚರಣ ಸೇವೆಯನಿತ್ತುಕರವಿಡಿದು ಕಾಪಾಡೊ ಕರಿಚರ್ಮಧರನೆ 3
--------------
ಶಾಮಸುಂದರ ವಿಠಲ
ಶ್ರೀ ಮಹಾಲಕ್ಷ್ಮೀ ಬಂದು ನಿಲ್ಲೇ ಎನ್ನ ಮಂದಿರದಲ್ಲೇ ಕೊಲ್ಲಾಪುರ ನಿಲಯೇ ಪ. ಇಂದಿರಲಾರೆನು ಮುಂದರಿಯೇ ಇಂದಿನ ದಿನ ಅ.ಪ. ನವಮೋಹನಾಂಗಿಯೇ ನೀನು ನೀಲಾಂಬರವನುಟ್ಟು ಜರತಾರಂಚಿನ ಕುಪ್ಪಸ ಬಿಗಿದು ತೊಟ್ಟು ಪಾದಕೊಪ್ಪುವ ಪೈಜಣ ಋಳಿ ಕಾಲುಂಗರವಿಟ್ಟು ಲಲಾಟದ ಕುಂಕುಮ ಬಟ್ಟು 1 ಕರದಲಿ ಕಂಕಣ ಬೆರಳಲಿ ಉಂಗುರ ನಿಮ್ಮ ಮುಖದಿ ಸೂರ್ಯನ ಕಿರಣ ನಾನಾಲಂಕೃತ ಭರಣ ದೇವಿ ನಾ ಮಾಡುವೆ ಶರಣು 2 ನಿನ್ನ ಹೊರತಿನ್ನು ಜಗದೊಳಗೆ ಅನ್ಯರ ಕಾಣೆನೊ ನಿರುತ ನಂಬಿದೆ ನೀಲವೇಣಿ ಪಂಕಜಪಾಣಿ ಕಾಳೀಮರ್ಧನಕೃಷ್ಣನ ರಾಣಿ3
--------------
ಕಳಸದ ಸುಂದರಮ್ಮ
ಶ್ರೀ ರಘುದಾಂತರ ಚಾರುಚರಣಗಳು ಸೇವಿಪರಘಗಳನು ದೊರಗೈಸಿ ಕೃತಕೃತ್ಯನಾದೆನಾನು ಭವಭಯವೆನಗೇನು ಪ ಹೇಸಿಭವದಿ ಸುಖಲೇಶಕಾಣದಿರಲು ಬೇಸರವಾಗಲು ದೇಶ ದೇಶದೋಳು ಬರುಪರಿಯರಿತಿರುಗಿ ಚರಿಸಿ ತೋಷಬಡದೆ ಭವ ಬಂಧ ಕಡಿದೆ 1 ಹೀನಜನರ ಸಂಸರ್ಗದೋಷವನು ಕಲಿಮಲ ಕಲುಷವನು ದಹಿಪವು ಬಿಡು ಭ್ರಾಂತಿ ನಾನಾತೀರ್ಥ ಕ್ಷೇತ್ರ ಯಾತ್ರೆಫಲವು ಒದಗಿಸಿಕೊಡುತಿಹವು ಗುರುಗಳ ಪದಯುಗವು 2 ಗುರುಪದರಜದ ಮಹಿಮೆಯ ಪರಿಮಿತವು ವರ್ಣಿಸಲಸದಳವು ಶಿರದಿ ಧರಿಸೆಸಾರಿಸಕುಲಪಾವನವು ಎನಿಪುದು ನಿಶ್ಚಯವು ಶರೀರಕೆ ಲೇಪಿಸೆ ಸಕಲವ್ಯಾಧಿ ಭಯವು ಪರಿಹರವಾಗುವವು ನಿರುತಸೇವಿಸೆ ಮುಕುತಿಯೆ ಕರಗತವು ಅಹುದು ಶಾಶ್ವತವು 3 ತಿಳಿ ಮನಸಿಗೆ ತಂದು ಈ ನುಡಿ ಸಿದ್ಧಾಂತ ಕರುಣಿಪ ಕೈಬಿಡದೆ ಮನದಲಿ ಪೊಳೆಯುವನು 4 ಸಂತತ ಲಭಿಸುವವು ಪರಿಶುದ್ಧ ಭಕುತಿಯು ಬಡದಿರು ಸಂಶಯವ ಬಹುದುಃಖವ ಬಡುವ5
--------------
ವರದೇಶವಿಠಲ
ಶ್ರೀ ರಮಣಪತಿ ವಿಠಲ ನೀ ಕರುಣಿಸೋ |ಮಾರಪಿತ ಮರುತ ಮನೆಮಂದಿರ ನಿವಾಸಾ ಪ ಉದಯದಲಿ ಎದ್ದು ಹರಿಧ್ಯಾನವನು |ಮುದದಿಂದ ಬ್ಯಾಸರದೆ ನಿರುತ ಮಾಡಿ |ಸದಮಲ ಶ್ರೀ ಮುದ್ರಿಊಧ್ರ್ವಪುಂಡ್ರವ |ಪದುಮಾಕ್ಷಿ ಶ್ರೀತುಲಸಿಸರಗಳಿಂದಾ 1 ಸಿರಿ ಬೊಮ್ಮ ಪಂಚಭೇದ ಜ್ಞಾನದ, ತತ್ವವಿಚಾರ |ಹರಿದಾಸ ಸಹವಾಸ ಸರ್ವದಾ ಕೊಟ್ಟು 2 ಶ್ರೀಶ ಪ್ರಾಣೇಶ ವಿಠ್ಠಲರಾಯನೇ ನಿನ್ನ |ದಾಸತ್ವವನೆ ಕೊಟ್ಟು ಉದ್ಧರಿಪದೋ ||ಲೇಸಾಗಿ ಪ್ರಾರ್ಥಿಸದೆ ಎನ್ನ ಭಿನ್ನಪವು ಉ |ದಾಸಿಸದೆ ನೀ ಕರುಣಿಸೆಂದು ದಿನದೇ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ಪ ನಿರುತಾದಿ ಸೇವಿಸುವರಾ ಕಾಮಿತ ಕಲ್ಪತರುವೇಅ.ಪ ತುಂಗಾ ತೀರದೊಳ್ ಬಂದೂ ಮಂಗಾಳ ಮಹಿಮರು ನಿಂದೂ ಮಂಗಳಾ ಮೂರುತಿ ಶ್ರೀ ರಾಮಚಂದ್ರನ್ನ ಪೂಜೀಪರಿಂದೂ 1 ಕಾವೀಶಾಠಿಯನುಟ್ಟೂ ಗಂಧಾಕ್ಷತೆಗಳಿಟ್ಟೂ | ತಿರ್ದಿ ಹಚ್ಚಿರುವಾನಾಮಾ ಫಣಿಯಲ್ಲಿ ಹೊಳೆÉಯುತಾಲೀ 2 ವೀಣಾವಾದನದಿಂದಾ ಗಾನವ ಮಾಡುತಲೀ ವೇಣುಗೋಪಾಲ ಕೃಷ್ಣನ್ನ ಕುಣಿಸಿ ಕೊಂಡಾಡುತಿಹರು3 ಭಕ್ತಿಯಿಂದಲಿಸ್ತುತಿಪ ಜನರಾ ಆಪತ್ತುಗಳೆಲ್ಲವ ಕಳೆವಾ ಸಂಪತ್ತು ಸೌಭಾಗ್ಯವೀವಾ ಶರಣೇಂದವರ ಪೊರೆವಾ 4 ಸರಿಯಾರು ನಿಮಗೆ ದೇವಾ ಈ ಧರುಣಿಯೊಳರಸೆ ಕಾವಾ ದೊರಗಳ ನಾ ಕಾಣೆನಯ್ಯ ಶ್ರೀ ರಾಘವೇಂದ್ರ ಜೀಯಾ 5
--------------
ರಾಧಾಬಾಯಿ
ಶ್ರೀ ರಾಘವೇಂದ್ರಸ್ವಾಮಿಗಳ ಸ್ತೋತ್ರ ತಂಗಿನೀ ಕೇಳಿದ್ಯಾ ರಾಘವೇಂದ್ರಾ | ಘಂಗಳ ಕಳದು ಸುಖಂಗಳ ಕೊಡುವದು || ತಂಗಿ ನೀ ಕೇಳಿದ್ಯಾ ಪ ಶ್ರೀ ಪೂರ್ಣಬೋಧರ ಮತಾಪಯೋಬ್ದಿಗೆ ಚಂದ್ರ |ತಾಪಸೋತ್ತಮರ ದಿವ್ಯಾಪಾರ ಮಹಿಮೆಯ 1 ಅಂಗಹೀನರಿಗೆ ದಿವ್ಯಾಂಗ ಕೊಟ್ಟರೆಂದು |ಸಂಗೀತ ಮುಖದಿ ಜನಂಗಳು ಪಾಡುವದು 2 ಕಿವಿಯಿಲ್ಲದವರಿಗೆ ತವಕಾದಿ ಕೊಟ್ಟರೆಂದು |ಸುವಿವೇಕ ಮನದಿಂದ ಕವಿಜನ ಪಾಡುವದು 3 ವಂಧ್ಯಾಸ್ತ್ರೀಯರು ಬಂದು ನಿಂದು ಆರಾಧಿಸೆ |ಸಂದೇಹವಿಲ್ಲ ಬಹು ಮಂದಿ ಮಕ್ಕಳ ಕೊಟ್ಟ 4 ಗುರು ಪ್ರಾಣೇಶ ವಿಠಲಾ ಸರುವ ಕಾಮಿತಾರ್ಥವಾ |ಗುರು ರಾಘವೇಂದ್ರರಲ್ಲಿ ನಿರುತದಿ ಕೊಡಿಸುವ 5
--------------
ಗುರುಪ್ರಾಣೇಶವಿಠಲರು
ಶ್ರೀ ರುದ್ರ ದೇವರ ಸ್ತುತಿ ಪಾಲಿಸೆನ್ನ ಕಾಪಾಲಿಯೆ ನೀನು ಪ ವಾಲಗ ಕೊಟ್ಟು ಅ.ಪ ನೀ ಮಹದೌಷಧಿ ಕಾಮಾದಿಗಳೆಂಬಾಮಯ ಸ್ತೋಮಕೆ ಹೇ ಮಮಸ್ವಾಮಿ 1 ನೀ ಕಾಯದೆ ಬಿಡೆ ಕಾಯಜ ಭಯ ನೂಕೆಯನ್ನ ಕಡೆಗ್ಹಾಕುವರ್ಯಾರೈ 2 ತಿಂಗಳಚೂಡ ತ್ರಿಗಂಗಳ ಶೋಭಿತ ಅಂಗಜ ರಿಪು ಭಸಿತಾಂಗನೆ ಲಿಂಗಾ 3 ನಾಕರಮುಗಿಯುವೆನು ನಾಕಪನುತ ರ ತ್ನಾಕರ ಸುತೆವರನಾ ಕರತಾರೋ 4 ಕಂದನು ಇವನೆಂತೆಂದು ಎನ್ನ ನೀ ಮುಂದಕೆ ಕರೆಯೈ ನಂದಿಶ್ಯಂದನಾ 5 ಅರ್ಧಂಗನ ವಪುಸ್ವರ್ಧುನಿಧರಾ ಅಘ ಮರ್ದನ ಕಾಯೋ ಕಪರ್ದಿಯೆ ನಿರುತಾ 6 ಪತಿ ಮಹರುದ್ರನೆ ನಮಿಸುವೆ ಕ್ಷುದ್ರ ಮನಸಿನ ಉಪದ್ರವ ಬಿಡಿಸಿ 7 ದುರ್ಜನರರಿ ಖತಿವರ್ಜಿತ ಪಾಲಿಸೋ ನಿರ್ಜರನುತನ ಗುರು ಅರ್ಜುನ ವರದಾ 8 ನೀನೊಲಿಸಿದ ಸಿರಿಗೋವಿಂದವಿಠಲನ ಪಾವನ ಮೂರುತಿ ಕೋವಿದರೊಡೆಯ 9
--------------
ಅಸ್ಕಿಹಾಳ ಗೋವಿಂದ
ಶ್ರೀ ಲಕ್ಷ್ಮೀ ದೇವಿಯರು ಕಾಯೆ_ಕಾಯೆ _ ಶ್ರೀ ಹರಿಜಾಯೆ ಪ ಕಾಯೆ ಕಾಯೆ ಸಂತೋಷವೀಯೆ ಮೂರು ಜಗ ಕಾಯೆ ವಿಷ್ಣುಮನ ಛಾಯೆ ಭಕುತಿವರವೀಯೆ ನಿತ್ಯ ಎಳೆಕಾಯೆ ಸುಜನಗಣ ಧ್ಯೇಯೆ ನಿಗಮತತಿಗೇಯೆ ಮಾಯೆ ಅ.ಪ. ಶರಣು-ಶರಣು-ಶರಣು ಗುಣಭರಣಿ ಭವ ತರಣೀ ಶರಣು ತ್ರಿಗುಣ ಧಣಿ ಶರಣು ಸೊಬಗು ಖಣಿ ಶರಣು ನಿಗಮಧ್ವನಿ ಮಣಿ ಸಿರಿ 1 ಅಂಬೇ-ಅಂಬೇ-ಅಂಬೇ-ಅಂಬೇ ನಿರುತಹರಿ ಕಾಂಬೆ ಉರದಲಿಹೆ ಎಂಬೆ ಪಡೆದೆ ಜಗ- ವೆಂಬೆ ಭಕುತಿ ಜನಸ್ತಂಭೆ ಅಮಿತಶಶಿ ವಿಧಿ ಯಿಂಬೆ ತ್ರಿಗುಣ ಹರಿ ಕೃತಿ 2 ರಾಣೀ_ರಾಣೀ-ಶ್ರೀ ಅನಿರುದ್ಧನ ರಾಣಿ ಲಕ್ಷಣ ಶ್ರೇಣಿ ಪಂಕಜಪಾಣಿ ಭುಜಂಗ ಸು- ನಿತ್ಯ ಕಲ್ಯಾಣಿ ಮಂಗಳವಾಣಿ ದುಃಖವ ಕಾಣಿ ನೀ ಬಹು ಜಾಣಿ ವಲಿದಿಹ ಹರಿ 3 ಅಮ್ಮ-ಅಮ್ಮ-ನೀಜಗದಮ್ಮ ಅಮ್ಮ ಕಣ್ ತೆಗೆಯಮ್ಮ ಸಿರಿಸುರಿಸಮ್ಮ ಉರಿಹರಿಸಮ್ಮ ದಯಮಾಡಮ್ಮ ವಿಧಿಗುರುವಮ್ಮ ಭುಜಿಸೊಸೆಯಮ್ಮ ಹರಿಗ್ಹೇಳಮ್ಮ ದಕ್ಷಣೆ 4 ಶೀಲೆ-ಶೀಲೆ- ನಿರುತ ಹರಿಯ ಜಪ ಶೀಲೆ ಕುಂಕುಮ ವಾಲೆ ಇಟ್ಟಹೆ ಬಾಲೇ, ಚಂಚಲ ಲೀಲೆ ನತಜನ ಪಾಲೆ ಖಳರೆದೆಶೂಲೆ ಹರಿಗಿಹೆಮಾಲೆ 5 ಹೇತು-ಹೇತು-ಕಾರ್ಯ ಕಾರಣ ನೀ ಒಡವೆಗಳಾಗಿ ವಸ್ತ್ರಗಳಾಗಿ ಶಸ್ತ್ರಗಳಾಗಿ ಚರಣದಿ ಬಾಗಿ ಹರಿಗನುವಾಗಿ ಸಾಧಕಳಾಗಿ ಧೊರೆವಶಳಾಗಿ ಗಂಡನ ಭಜಿಪೆ 6 ಇಲ್ಲ-ಇಲ್ಲ-ಹರಿಯಗಲಿಕೆ ನಿನಗಿಲ್ಲ ಕ್ಲೇಶವು ಇಲ್ಲ ದೋಷಗಳಿಲ್ಲ ಪಾಶಗಳಿಲ್ಲ ಹರಿ ಬಿಡನಲ್ಲ ಸರಿಯಾರಿಲ್ಲ ಮುಕ್ತರಿಗೆಲ್ಲ ಒಡೆಯಳೆ ಚೆಲ್ವೆ ನೀ ಆಕಾಶೆ7 ನೀರೆ-ನೀರೆ-ಹರಿ ಸಮಾಸಮನೀರೆ ಘನ ಗಂಭೀರೆ-ಶ್ರುತಿಗಳ ಮೇರೆ ಮೀರುತ ಧೀರೆ ಹರಿಮನಸಾರೆ-ಪೊಗಳುವೆ ಬೇರೆ ಸಾಟಿಯು ಯಾರೆ-ಹರಿಪುರ ತೋರೆ ಕರುಣದಿ 8 ಕಂದ-ಕಂದ-ನಾನಿಹೆ ನಿನ್ನ ನಂದದ ಶ್ರೀ ಕೃಷ್ಣವಿಠಲನ ರಾಣಿ ಇಂದಿರೆಸಲಹೆ ಕುಂದುಗಳಳಿಸೆ ತಂದೆಯ ತೋರೆ ಚೆಂದದ ಭಕುತಿ ಮುಂದಕೆ ತಂದೂ 9
--------------
ಕೃಷ್ಣವಿಠಲದಾಸರು
ಶ್ರೀ ಲಕ್ಷ್ಮೀದೇವಿಯ ಸ್ತೋತ್ರ ಭಾಗ್ಯವೆ ಪಾಲಿಸೆನ್ನಗೆ ಭಾರ್ಗವಿ ಜನನಿ ಪ ಭಾಗ್ಯವೆ ಪಾಲಿಸು ಭಾರ್ಗವಿ, ಕಮಲಜ ಭಾರ್ಗಾದ್ಯನಿಮಿಷ ವರ್ಗಸೇವಿತೆ ಅ.ಪ ಹರಿಸರ್ವೋತ್ತಮ ಗುರುಸುಖತೀರ್ಥರು ಹರಫಣಿ ವಿಪಶಕ್ರಾದಿಗಳು ತರತಮ ಭೇದ ಮೂರೆರಡು ಸತ್ಯ ವೆಂ - ದರಿತು ಮನದಿ ಬಲು ಹರುಷ ಬಡುತಲಿಹ 1 ಕಾಮಕ್ರೋಧಗಳ ಗೆಲಿದು ಸತತನಿ - ಷ್ಕಾಮ ಭಕ್ತಿಯಲಿ ಮನವುಬ್ಬಿ ರಾಮ ರಾಮ ಎಂದ್ ಪ್ರೇಮದಿ ಪಾಡುತ ರೋಮಾಂಚಿತ ತನುವಿಲಿನರ್ತಿಪ ಸೌ 2 ದುರ್ಜನ ಸಂಗ ವಿವರ್ಜಿಸಿ ನಿರುತದಿ ಸಜ್ಜನಸಂಗಸುಖವ ಬಯಸಿ ಅರ್ಜುನಸಖನ ಪದಾಬ್ಜಧ್ಯಾನ ದೊಳು ಗರ್ಜಿಸುತಲಿ ನಿರ್ಲಜ್ಜನೆನಿಪ ಸೌ 3 ನಾನುನನ್ನದೆಂಬೊಹೀನ ಮತಿಯ ಕಳೆ - ದೆನು ಮಾಡುತಿಹಕರ್ಮಗಳ ಶ್ರೀನಿವಾಸನ ಪ್ರೇರಣೆ ಎಂದು ಸ - ದಾನುರಾಗದಲಿ ಅರ್ಪಿಸುತಿಹ ಸೌ 4 ಸೂಸುವ ಭಕ್ತಿ ವಿರಕ್ತಿ ಙÁ್ಞನಧನ ರಾಶಿಯ ಕೋಟ್ಟೀಭವಸುಖದ ಆಶೆಬಿಡಿಸಿ ವರದೇಶ ವಿಠಲನ ದಾಸರ ದಾಸರ ದಾಸ ನೆನಿಪ ಸೌ 5
--------------
ವರದೇಶವಿಠಲ