ಒಟ್ಟು 1281 ಕಡೆಗಳಲ್ಲಿ , 95 ದಾಸರು , 1021 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಡವನ ಮನೋರಥ ಪೂರೈಸು ಸಿರಿಕೃಷ್ಣ ಒಡೆಯ ನೀನಲ್ಲದೆ ಪೂರೈಸುವರಿಲ್ಲ ಪ ಕಿವಿಯು ನೀಡಿದುದಕೆ ಎನಗೊಮ್ಯಾದರು ಮನೋ ಕುವರಿಯ ಭೃತ್ಯತನ ಕೊಡು ಕಂಡ್ಯ ಸುವಿಮಲತರ ಮತಿಯಾದ ವಿಷ್ಣುರಾತೋ ದ್ಭವನ ಬಳಿಯಲೊಮ್ಮೆ ನಿಲಿಸಯ್ಯಾ ಹರಿಯೆ 1 ನಯನವು ಕೊಟ್ಟದಕೆ ಎನ್ನೊಮ್ಮೆ ರಣದಿ ವಿ ಜಯನ ಬಳಿಯಲೊಮ್ಮೆ ನಿಲಿಸಯ್ಯಾ ಭಯದಿ ಸೂತರ ಸುಮ್ಮನಿಹ ಭೀಷ್ಮಕ ಕುರುಪ ತಿಯರ ಸಭೆಯಲೊಮ್ಮೆ ನಿಲಿಸಯ್ಯ ಹರಿಯೆ 2 ರಸನವು ಎನಗಿನ್ನು ಕೃಪೆಮಾಡಿದುದಕೆ ಗೋ ರಸವ ಕದ್ದು ಮೆಲುವ ಕಾಲದಲ್ಲಿ ಇಸಕೊಂಬ ಗೋವಳರ ಒಳಗೆ ಎನ್ನನು ಒಬ್ಬ ಶಿಶುವಿನ ಮಾಡಿ ಪುಟ್ಟಿಸು ಕಂಡ್ಯ ಹರಿಯೆ 3 ಎನಗೆ ತ್ವಗೇಂದ್ರಿಯವ ದಯಮಾಡಿದದಕಿನ್ನು ಕರ ಕಂಜರದಿ ಅನುವಾದಿಷ್ಟಕ ಭಾವ ಸರಯು ಯಮುನಾ ತೀರ ಜನಿತವಾಳುಕ ಭಾವವನು ಕೊಡು ಹರಿಯೆ 4 ನಾಶಿಕವು ಇತ್ತದಕೆ ಗೋಪಿಯ ವಿಹಾರದಿ ವಾಸುದೇವವಿಠಲ ನಿನ್ನ ಕೊರಳೊಳಿದ್ದ ಸೂಸಿ ಬಿದ್ದ ಮಾಲಿಕೆಯ ಕುಸುಮಂಗಳ ಬಲು ವಾಸನ ಲÉೂೀಲುಪ ಮಧುಕರ ಭಾವ ನೀಡೊ 5
--------------
ವ್ಯಾಸತತ್ವಜ್ಞದಾಸರು
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬರುದೆ ಭ್ರಮೆಯಗೊಂಡ್ಯೊ ಮರುಳ ಮನುಜ ನೀನು ಧ್ರುವ ಎರವ್ಹಿನ ಮನೆಯೊಳು ಮರಹು ಮರೆಯಗೊಂಡು ಗರವು ಹಿಡಿದು ನಿನ್ನ ಕುರುಹು ತಿಳಿಯಲಿಲ್ಲ ಹರೆದು ಭ್ರಾಂತಿಗೆ ಬಿದ್ದು ಸೊರಗಿ ದಣಿದೆಲ್ಲ 1 ಏನು ಮರುಳಗೊಂಡ್ಯೊ ಹೀನಯೋನಿಯ ಮುಖಕೆ ಕಾನನದೊಳು ಪೊಕ್ಕು ಖೂನ ತಿಳಿಯದೆ ನಿನ್ನ ಜನುಮಜನುಮ ಬಂದ್ಯೊ ಜ್ಞಾನಶೂನ್ಯದಲಿ 2 ನಾನು ನನ್ನದು ಎಂದು ಏನು ಗಳಿಸಿಕೊಂಡ್ಯೊ ಸ್ವಾನುಭವದ ಸುಖ ಅನುಭವಿಸದೆ ಹೋಗಿ ಸ್ವಾನ ಸೂಕರಯೋನಿ ಮುಖಸೋಸಿದೆಲ್ಲ 3 ಹೊನ್ನು ಹೆಣ್ಣಿನ ಸವಿಯು ಬಣ್ಣಿಸಿ ನೀ ಬಯಸಿದಲ್ಲ ಮಣ್ಣೇ ಮಾಣಿಕವೆಂದು ದಣ್ಣನೆ ದಣುವರೆ ಕಣ್ಣಗೆಟ್ಟರೆ ಬ್ಯಾಡೊ ತನ್ನೊಳರಿಯದೆ 4 ಮುತ್ತಿನಂಥ ಜನುಮ ವ್ಯರ್ಥಗಳಿಯಬ್ಯಾಡ ಪಾದ ಬೆರ್ತು ಮಹಿಪತಿ ಪೂರ್ಣ ಸಾರ್ಥಕ ಮಾಡಿಕೊಳ್ಳೊ ಗುರುತುವರಿತು ನೀ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲಗೊಳ್ಳಿರೊ ಭಾವ ಭಕ್ತಿಯಿಂದ ನೆಲೆಯಗೊಂಡು ಮೂಲವಿಡಿದು ನಿಜಮೂಲ ಮೂರ್ತಿಯ ಬಲಗೊಳ್ಳಿ 1 ಏರಿ ನೋಡಿ ಅರುಚಕ್ರದಾಟಿ ತೋರುತಿಹ್ಯ ಪೂರ್ಣಾನಂದ ಶ್ರೀ ಗುರುಮೂರ್ತಿಯ ಬಲಗೊಳ್ಳಿ 2 ಸೆರಗವಿಡಿದು ನೋಡಿ ಕರಗಿಮನ ಅರವಿನೊಳು ಬೆರೆದು ಕೂಡಿ ಹರಿ ಪರಬ್ರಹ್ಮನ ಬಲಗೊಳ್ಳಿ 3 ಆಸಿಯನೆ ಜರೆದು ನಿರಾಸಿಯಲ್ಲಿ ಧ್ಯಾಸವಿಡಿದು ಲೇಸಾಗಿ ಕೂಡಿರೊ ವಾಸುದೇವನ ಬಲಗೊಳ್ಳಿ 4 ಮೂರು ಗುಣಕೆ ಮೀರಿ ತೋರಿತಿಹ್ಯ ನಿರ್ಗುಣನ ನೆರೆದು ಕೂಡಿ ನಿಜ ನಿರುಪಮನ ಬಲಗೊಳ್ಳಿ 5 ಸಹಸ್ರದಳಮಂಟಪದೊಳು ಸೋಹ್ಯವರಿತು ಸಾಯಸದಿಂದ ಶ್ರೀಹರಿಯ ಬಲಗೊಳ್ಳಿ 6 ತಾನೆ ತಾನಾಗಿಹ್ಯ ತನುವಿನೊಳು ಆನಂದೋಬ್ರಹ್ಮ- ಙÁ್ಞನದಿಂದ ನೋಡಿ ಙÁ್ಞನಸಾಗರನ ಬಲಗೊಳ್ಳಿ 7 ಮನವಿಡಿದು ಮಾಡಿರೊ ಧ್ಯಾನ ಮೌನ ಅನುದಿನ ಅನುಕೂಲಾಗುವ ಅನಂತ ಗುಣನ ಬಲಗೊಳ್ಳಿ 8 ಕಣ್ದೆರೆದು ನೋಡಿ ತನ್ನೊಳಗೆ ತಾನೆ ತಿಳಿದು ತನುಮನರ್ಪಿಸಿ ಗುರುಮೂರ್ತಿಯ ಬ¯ಗೊಳ್ಳಿ 9 ಗುರು ಕರುಣದೊಲವಿಂದ ಪಡೆದು ಪೂರ್ಣ ಹರಿಯು ಸುಖ ಸೂರ್ಯಾಡಿ ಪರಮ ಅನಂದ ಸುಪಥ 10 ಅರ್ತುಕೂಡಿದ ನೋಡಿ ಅರ್ತಿಯಿಂದ ಮಹಿಪತಿಯ ಬೆರ್ತುಕೂಡಿದ ಮನ ಕರ್ತುಗುರುವಿನ ಬಲಗೊಳ್ಳಿ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲ್ಲವನಿವನು ಚಿಕ್ಕವನಲ್ಲವೆ ಬಾಲಕನು ಇಲ್ಲದ ನುಡಿಗಳ ಎನ್ನೊಡನುಸುರಲು ಇಲ್ಲಿಗೆ ಬಂದಿರೆ ಗೋಪಿಯರÉಲ್ಲರು ಪ ಮಣಿಮಯದೊಡಿಗೆಯನು ತೆಗೆತೆಗೆದ್ಹಣಿವನೆ ಬಲ್ಲವನು ಉಣಲೊಲ್ಲ ಉಡಲೊಲ್ಲ ಚಲಗೊಂಡಳುವ ಜಾರ ಚೋರನಂಬರೇ 1 ಹೆಣ್ಣಿಗೆ ಮರುಳಾಗುವ ಪ್ರಾಯವೆ ಕಣ್ಣು ನಿಮಗೆ ಕಾಣವೆ ಸಣ್ಣವನಿವಗೆ ನಿಲುಕದ ನೆಲುವಿನ ಪಾ ಲ್ಬೆಣ್ಣೆಯ ಮೆದ್ದೋಡಿ ಬಂದನೆಂದೆಂಬರೆ 2 ಅಂಬರದೊಳು ಮೂಡಿದ ಚಂದ್ರಬಿಂಬವ ತಾರೆನುತ ಕುಂಬಿನಿಯೊಳು ಬಿದ್ದು ಹೊರಳುವ ತರಳ ಹಿಡಿಂಬೆಯ ರಮಣ ಕೋಣೆಯ ಲಕ್ಷ್ಮೀರಮಣನು 3
--------------
ಕವಿ ಪರಮದೇವದಾಸರು
ಬಾ ಉರುಟಣೆಗೆ ಕಾಂತ ಪ್ರಿಯಕಾಂತ ಪ. ಕರುಣವ ತೋರೋ ಕಮಲನಯನನೆ ತರುಣಿಮಣಿಯು ನಾ ಕರೆವೆನು ರಮಣ ಅ.ಪ. ವರ ಪನ್ನೀರಿಲಿ ಚರಣವ ತೊಳೆದು ಅರಿಶಿಣ ಹಚ್ಚುವೆ ಕಾಂತ ನಾ ವರ ಲಲಾಟಕೆ ಹರುಷದಿ ಕುಂಕುಮ ತಿಲಕವ ತಿದ್ದುವೆ ರಮಣ 1 ಅತ್ತರು ಪನ್ನೀರಿನ ಗಂಧವನು ಶಿಸ್ತಿಲಿ ಪೂಸುತಲೀಗ ವಿಸ್ತಾರವಾದ ಮಲ್ಲಿಗೆ ಮಾಲೆಯ ಚಿತ್ತಜನಯ್ಯ ಹಾಕುವೆನು ಪ್ರಿಯ 2 ಬಿಳಿಯೆಲೆ ಅಡಿಕೆ ಚೆಲುವಿನ ಸುಣ್ಣ ನಲಿದು ಕೊಡುವೆ ಬಾ ಕಾಂತ ಛಲವ್ಯಾಕೆನ್ನೊಳು ಶ್ರೀ ಶ್ರೀನಿವಾಸ ಒಲುವಿನಲಿ ಬಾ ಬೇಗ ರಮಣ 3
--------------
ಸರಸ್ವತಿ ಬಾಯಿ
ಬಾ ವೆಂಕಟಶೈಲಾಧಿಪ ಮನ್ಮನಕೆ ತಡಮಾಡುವುದ್ಯಾಕೆ ಶ್ರೀ ವಲ್ಲಭನಾ ನಿನ್ನಂಘ್ರಿ ಕಮಲಕೆ ನಮಿಸುವೆ ಪ್ರತಿ ಕ್ಷಣಕೆ ಪ ನೀ ಒಲಿದೆನ್ನ ದಯಾವಲೋಕನದಿ ಪಾವನಮಾಡಲು ದೇವವರೇಣ್ಯ ಅ.ಪ. ವೈಕುಂಠಾಧೀಶ ವಿಗತಕ್ಲೇಶ ಚಿತ್ಸುಖಮಯವಪುಷ ಭವ ಮದನ ದಿ ವಾಕರ ಪ್ರಮುಖ ದಿವೌಕಸ ವರದ 1 ಮಮಸಮಾಸ್ವಾಮಿ ಮದಂತರ್ಯಾಮಿ ಸರ್ವಾಂತರ್ಯಾಮಿ ಅಮಿತಾತ್ಮ ಅತಿರೋಹಿತ ನಿಷ್ಕಾಮಿ ಸೇವಿತ ಶ್ರೀಭೂಮಿ ಅಮಿತ ಸುಗುಣಪೂರ್ಣ ಅಮಲಮಹಿಮ ಖಳದಮನ ದಯಾಳೊ 2 ನಾಮಾಭಿಧೇಯ ಲೋಕಾಧ್ಯಕ್ಷಾ ಕಮಲಾಯತಾಕ್ಷ ಸೋಮ ಭೂಮ ನಿಸ್ಸೀಮ ಮಹಿಮ ತ್ರಿ ಧಾಮರಾಮ ಘನಶ್ಯಾಮ ಲಲಾಮ 3 ಪವನಂತರಾತ್ಮಾ ನಿರ್ಮಲಾತ್ಮಾ ಪರಮಾತ್ಮ ಜ್ಞಾನಾತ್ಮಾ ಅವಿಕಾರ ಅತಿರೋಹಿತ ಭೂತಾತ್ಮ ಪೂತಾತ್ಮ ಮಹಿತಾತ್ಮ ತ್ರಿವಿಧ ಜೀವರಿಗೆ ವಿವಿಧ ಫಲಂಗಳ ತವಕದಿ ಕೊಟ್ಟವರವರ ಪಾಲಿಸೋ 4 ಸೃಷ್ಟ್ಯಾದಿಕರ್ತ ತ್ರಿಜಗದ್ಭರ್ತ ಲೋಕೈಕ ಸಮರ್ಥ ವೃಷ್ಣೀಶಾ ವೃಂದಾರಕ ರಿಪುಹರ್ತಾ ಮುಕ್ತರ ಪುರುಷಾರ್ಥ ಪರಮೇಷ್ಟಿ ಜನಕ ಶಿ ಷ್ಟೇಷ್ಟ ಹೃಷ್ಟ ಅನಿವಿಷ್ಟ ನಿವಿಷ್ಟ 5 ವೇದಸ್ತೇಯಾರಿ ಮಂದರಧಾರಿ ಭೂವರ ನರಹರಿ ಭೂ ದಾನವ ಬೇಡಿದ ಚಾಪಕುಠಾರಿ ರಾವಣಕುಲವೈರಿ ಯಾದವ ವಂಶ ಮಹೋದಧಿ ಚಂದಿರ ಸಾದಿತ ತ್ರಿಪುರ ಖಳೋದರ ಪಾಹಿ 6 ದಯದಿಂದ ನೋಡೊ ದೀನೋದ್ಧಾರ ಸದ್ಗುಣ ಗಂಭೀರಾ ಪ್ರಿಯ ನೀನೇ ಎನಗೆ ಲೋಕೋದ್ಧಾರ ಸೌಂದರ್ಯಸಾರಾ ಹಯಮುಖ ಲೋಕತ್ರಯ ಪತ್ರಯಾಮಯ ವಯನಗಯ್ಯ ನಾ ಬಯಸುವೆ ನಿನ್ನ7 ಭವ ಭಯಹಾರಿ ಬಿನ್ನೈಸುವೆ ಶೌರಿ ವಿಹಿತಾಹಿತಗಳು ನಿನ್ನನು ಮೀರಿ ಮಾಳ್ಪೆಗೆ ಕಂಸಾರೀ ಮಹಿತ ಶಮಲ ಸದಹಿತ ಲಕುಮಿ ಭೂ ಸಹಿತ ಮನದಿ ಸನ್ನಿಹಿತನಾಗೆಲೋ 8 ದಾತಾ ನೀನಲ್ಲದನ್ಯರರಿಯೇ ಕಂಡವರನು ಕರಿಯೇ ಪ್ರೀತನಾಗೆನ್ನೊಳು ಶ್ರೀ ಹರಿಯೇ ಮೂರ್ಲೋಕದ ದೊರೆಯೇ ಶ್ರೀ ತರುಣಿಯೊಡಗೊಡೀ ತನು ಸದನಕೆ ನೀ ತ್ವ ರಿತದಿ ಜಗನ್ನಾಥ ವಿಠ್ಠಲ 9
--------------
ಜಗನ್ನಾಥದಾಸರು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ 1 ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ 2 ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ 3
--------------
ಕನಕದಾಸ
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೇ ಕೂಗಿಡುವ ಧ್ವನಿಯು ಕೇಳುವುದಿಲ್ಲವೇ ನಿನಗೆ ಪ ಪರಮಪದದೊಳಗೆ ವಿಷಧರನ ತಲ್ಪದೊಳು ಇಂ ದಿರೆಯರಸಿ ಹರುಷವಾರಿಧಿಯೊಳಿರಲೂ ಕರಿ ಗುಪ್ತಕಂಠಧ್ವನಿಯಿಂದಾದಿಮೂಲವೆಂದೊದರೆ ಆಕ್ಷಣ ಕರಿಯ ಕಾಯ್ದೆ ಜಗವರಿಯೆ 1 ಕಡುಮುನಿಸಿನಿಂ ಖಳನು ಖಡ್ಗವನು ಪಿಡಿದು ನಿ ನ್ನೊಡೆಯರಾರೆಂದು ತೋರೆನುತ ಬಡಿಯೆ ದೃಢಭಕುತ ಶಿಶುವು ಕಂಗೆಡದೆ ನಿನ್ನನು ಕರೆಯೆ ಘುಡಿಘುಡಿಸಿಕಂಬದಿಂದೊಡೆದು ಮೂಡಿದೆ ಹರಿಯೆ 2 ಯಮಸುತನರಾಣಿಗಕ್ಷಯ ವಸ್ತ್ರವನಿತ್ತು ಕ್ರಮದಿಂದ ಅಜಮಿಳನ ಪೊರದೆ ಅಂದೂ ಸಮಯಾಸಮಯ ಉಂಟೆ ಭಕುತವತ್ಸಲ ನಿನಗೆ ಕಮಲಾಕ್ಷ ವೈಕುಂಠಚನ್ನಕೇಶವ ಬೇಗ 3
--------------
ಬೇಲೂರು ವೈಕುಂಠದಾಸರು
ಬಾಗಿಲು ತೆಗೆಯಲೆ ಭಾಮತಿ ರನ್ನಳೆ ಈಗ ನಾ ಬಂದೆನು ಇಂದುಮುಖಿ ಪ ನಾಗವೇಣಿಯೆ ನಿನ್ನೀಗಲೆ ನೋಡಲು ಬೇಗನೆ ಬಂದೆನು ತೆಗಿ ಕದವಾ ಅ.ಪ ಯಾರದು ಈ ಸಮರಾತ್ರಿಯ ವೇಳದಿ ಬಾಗಿಲು ತೆಗೆ ಎಂದೆನುತಿಹರು ತೋರದು ಎನಗೊಂದಾಲೋಚನೆ ನಿಮ್ಮ ನಾಮವು ಪೇಳಲು ತೆಗೆಯುವೆನು 1 ನೀಲವೇಣಿಯೆ ಕೇಳೆನ್ನ ಮಾತನು ಬಹಳ ಚಿಂತೆಯಾತಕೆ ಮನದಿ ನೀಲಕಂಠನೆಂದೆನ್ನನು ಕರೆವರು ಕೇಳು ಮನಸು ಚಂಚಲ ಬಿಟ್ಟು 2 ನೀಲಕಂಠನೆಂದರೆ ನೆನಪಾಯಿತು ನವಿಲಿನ ಮರಿ ಬಂದಿಹುದೆಂದು ನಾರಿಯರೆಲ್ಲರು ಹಾಸ್ಯವ ಮಾಳ್ಪರು ಸಾರುತ ವನಗಳ ಚರಿಸೆಂದು 3 ಬೆದರದೆ ತೆರೆ ಕದ ಸುದತಿಮಣಿಯೆ ನಾ ಬದಲೊಂದು ನಾಮವ ಪೇಳುವೆನು ಬುಧ ಜನರೆಲ್ಲರು ಭಕುತಿಲಿ ಸ್ಥಾಣು- ವೆನ್ನುತ ನಾಮವ ಕೊಂಡಾಡುವರು4 ಬೂಟಾಟಿಕೆ ಮಾತುಗಳನ್ನ ಏತಕೆ ಸಾಟಿಯಾರು ಜಗದೊಳಗಿನ್ನು ಮೋಟುಮರಕೆ ಸ್ಥಾಣುವೆನ್ನುತ ಕರೆವರು ಈ ಪೃಥ್ವಿಯ ಮೇಲಿನ ಜನರು 5 ಬಿಸುಜಮುಖಿಯೆ ಇನ್ನೊಂದು ಪೆಸರು ಕೇಳೆ ಪಶುಪತಿಯೆಂದು ಕರೆವರೆನ್ನ ವಸುಧೆಯ ಮೇಲಿನ ಪೆಸರುಗಳಿಗೆ ನೀ ಪ್ರತಿಯಾಗರ್ಥವ ಕಲ್ಪಿಸುವಿ 6 ವೃಷಭರಾಜ ನೀನಾದರೆ ಮುಂದಕೆ ಪಶುಗಳ ಮಂದೆಗೆ ತೆರಳುವದು ಕುಸುಮಗಂಧಿಯರ ಸದನದಿ ಕಾರ್ಯವು ವೃಷಭರಾಜಗಿಲ್ಲವು ಕೇಳೌ 7 ಶೀಲವಾಣಿಯೆ ಸುಶೀಲೆಯೆ ಎನ್ನಯ ವಾಣಿ ಕೇಳಿ ಕದವನು ತೆಗಿಯೆ ಪೇಳುವೆ ಮತ್ತೊಂದು ನಾಮವ ಎನ್ನನು ಶೂಲಿ ಎಂದು ಕರೆವರು ಜನರು 8 ಶೂಲಿಯಾದರೆ ನಿನ್ನ ಬಾಧೆಯ ಕಳೆಯಲು ಯಾರಿಗೆ ಸಾಧ್ಯವು ಜಗದೊಳಗೆ ನಾರಿಯರಿಗೆ ಹೇಳದೆ ಮುಂದಕೆ ನಡೆ ಶೂರರಾದ ವೈದ್ಯರ ಬಳಿಗೆ 9 ಕರಿಯ ಮುಖನ ಮಾತೆಯೆ ತಡಮಾಡದೆ ಕನಕಮಯದ ಕದ ತೆರೆ ಬೇಗ ಕಮಲನಾಭ ವಿಠ್ಠಲನನು ಪಾಡುತ ಶಿವನ ನಮಿಸಿ ತೆಗೆದಳು ಕದವ 10
--------------
ನಿಡಗುರುಕಿ ಜೀವೂಬಾಯಿ
ಬಾರಕ್ಕಾ ನಾವಿಬ್ಬರಾಡುವಾ ಯೋಗ ಸಾಧನವೆಂಬುದು ಮಾಡುವಾ ತಾಮಸ ತನುಗುಣಗಳ ಬಿಟ್ಟು ಸುಜ್ಞಾನ ಕ್ಷೀರ ಸಾಗರದೊಲಗಾಡುವಾ ಪ ಕಳೆಗೂಡಿ ಒಳನೋಟ ನೋಡುವಾ ಅಲ್ಲಿ ಒಳಸಭೆ ಪ್ರಭೆಯೊಳಗಾಡುವಾ ಥಳಥಳಿಸುವ ಮೆರೆವ ಚಿದಾತ್ಮನ ಬೆಳಕಿನೊಳ್ ಬೆಳಕಾಗಿ ಪರವಶವಾಗುವಾ 1 ಅಂಬಾ ಚಂದನ ಗಂಧಿಯೇ ಶಾರ ದಾಂಬಾ ಸುಪ್ರದವೇಣಿಯೇ ಶಂಭು ಸದ್ಗುರು ಎನ್ನೊಳು ಕಡೆನೋಡೆ ಕಂಬುಕಂಠಿನಿ ಚಲ್ವ ಕಮಲದಳಾಕ್ಷಿ 2 ಎಂಟೆರಡು ಕದಗಳ ಕಟ್ಟುವಾ ಅಲ್ಲಿ ಬಂಟರ ತಡೆಗಳ ಅಟ್ಟುವಾ ಮಂಟಪವೆಂಬುದು ಮಹಾಲಿಂಗನದೆಡೆ ಅಂತರಂಗದ ಕಾಂತೆಗಾಡುವಾ 3 ಮಂದರ ಗಿರಿಯಂತೆ ಅಲ್ಲಿ ಭೋರೈಸುವ ಘಂಟಾ ಧ್ವನಿಯಂತೆ ಸಾರ ಅಮೃತವುಂಡು ಕ್ಷೀರಸಾಗರಮಿಂದು ತೋರುವ ಗುರು ವಿಮಲಾನಂದಾ 4
--------------
ಭಟಕಳ ಅಪ್ಪಯ್ಯ
ಬಾರದ್ಯಾಕೊ ಕೃಪಾಧರ ದೇವ ನಿನಗೆನ್ನೊಳ್ಕರುಣಾ ಪ. ಸರಸಿಯೊಳಂದು ಬೆದರಿದ ಕರಿರಾಜನನು ಪೊರೆದ ಬಿರುದ ನೀ ಮರೆವುದು ನೀತಿಯೇನೊ ವರದ 1 ತಾಳಲಾರದಂಥ ವೇದನೆ ಇನ್ನು ಪೇಳಲೇನು ಕಂಸಸೂದನ ಇಳೆಯ ಮ್ಯಾಲೇಳಲಾರದಂತಾಯ್ತೆನ್ನ ಹದನ2 ಸಂಕಟಾಬ್ಧಿ ಪರಿಶೋಷಣಾ ಶ್ರೀ ವೆಂಕಟೇಶ ಚಕ್ರಭೂಷಣ ಕಿಂಕರರಾತಂಕವನ್ನು ದೂರಿಸುತಿಹದಯ್ಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರಮ್ಮಾ ಬಾರಮ್ಮಾ ಭಾಗ್ಯದನಿಧಿಯೇ ತೋರಮ್ಮಾ ತೋರಮ್ಮಾ ಕರುಣಾನಿಧಿಯೇ ಪ. ಬಾರಮ್ಮಾ ಮಹಲಕ್ಷ್ಮಿ ತೋರುತ ಕರುಣವ ಬೀರುತ ತವಕದಿ ಸೇರುತ ಪತಿಸಹ ಅ.ಪ. ಶ್ರೀ ರಮಾದೇವಿ ಇನ್ನಾರು ಸಮನಾಗರೇ ಭೂ ರಮೇಶನ ಸೇವೆಗೆ ನಿಲ್ಲಲು ಬಾರಮ್ಮಾ ಭಕ್ತರುದ್ಧಾರ ಮಾಡಲು ಎಲ್ಲಾ ಕಾರಳು ನೀನಾಗಿ ವಾರುಧಿಶಯನಗೆ ಸೇವಿಸಲು ಘೋರತರ ಸಂಸಾರ ಸಾಗರ ಪಾರುಗಾಣಿಪ ಹರಿಯು ನಿನ್ನೊಳು ಸೇರಿಯಿರುತಿಹನೇ ತೋರಿ ಭಕ್ತರಿಗೆ ಚಾರುಕಮಲ ಕರಾರವಿಂದದಿ ಧೀರೆಯೆತ್ತುಪಕಾರ ಮಾಡಲು ವಾರಿಜಾಕ್ಷಿಯೆ ಸಾರುತೀಗಲೆ 1 ಪುಲ್ಲಲೋಚನೆ ನಿನ್ನ ಗಲ್ಲ ಮಿಂಚಿನ ಸೊಬ ಗೆಲ್ಲ ನೋಡುತ ನಿನ್ನ ಒಡನಾಡುವ ಪಲ್ಲವಾಧರೆ ನಿನ್ನ ವಲ್ಲಭ ಹರಿಯಲ್ಲಿ ಎಲ್ಲ ಭಕ್ತರ ಮನಸಲ್ಲ ಅರುಹು ತಾಯೆ ನಿಲ್ಲದೆಲೆ ಕಾನಲ್ಲಿ ಇಹ ಹರಿ ಎಲ್ಲಿ ಭಕ್ತರು ಕರೆ ದಲ್ಲಿ ಬರುತಿಹನೆ ಮಲ್ಲಮರ್ಧನ ಶ್ರೀ ನಲ್ಲ ಕೃಷ್ಣನು ಚೆಲ್ಲಿ ಕರುಣವ ಬಲ್ಲೆ ನಿನಪತಿ ಗುಣಗಳನೆಲ್ಲ ಕಾಯೆ 2 ರಂಗನರ್ಧಾಂಗಿಯೆ ಮಂಗಳ ಮೂರುತಿ ನಿ ನ್ನಂಗಜನಯ್ಯನ ಕಾಣೆ ಕಾಯೆ ಗಂಗಜನಕ ಸಹ ಸರ್ವರಂಗದೊಳಿದ್ದು ನೀ ರಂಗನ ಲೀಲೆಯತಿಸಂಭ್ರಮದಲಿ ನೋಳ್ಪೆ ತುಂಬುರು ನಾರದರು ಪಾಡಲು ರಂಭೆ ಊರ್ವಶಿ ನಾಟ್ಯವಾಡಲು ಸಂಭ್ರಮದಿ ಶ್ರೀ ಶ್ರೀನಿವಾಸನ್ನ ಇಂಬತೋರಿಸೇ ಅಂಬುಜಾಕ್ಷಿಯೇ ಬೆಂಬಿಡದೇ ಎನ್ನ ನಂಬಿರುವೇ ನಿನ್ನ ಕಂಬುಕಂಧರೆ ಕುಂಭಿಣೀಪತಿ ಸಹಿತ ಬೇಗನೆ 3
--------------
ಸರಸ್ವತಿ ಬಾಯಿ