ಒಟ್ಟು 1531 ಕಡೆಗಳಲ್ಲಿ , 106 ದಾಸರು , 1191 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗಾಯಿತು ಏಳಿ ಪಾದ ನಳಿನ ಸೇವಕರು ಪ ಉದಯ ಕಾಲದೊಳೆದ್ದು ಹೃದಯ ನಿರ್ಮಲರಾಗಿ ಮಧುಸೂದನನ ಪಾಡಿ ಸ್ತುತಿಸುತಲಿ ಮುದದಿಂದ ಮಾಧವನ ವಿಧವಿಧದಿ ಪೂಜಿಸಿ ಪದುಮನಾಭನ ಪಾಡಿ ಪೊಗಳುವ ಜನರು 1 ರಂಗನ ಮಹಾದ್ವಾರದ ಮುಂದೆ ಕಾಣುವ ಗಜ ಸಾಲುಗಳ ನೋಡುತ ಬಂಗಾರ ಕೋಡುಳ್ಳ ಗೋವ್ಗಳಿಗೆರಗುತ್ತ ಅಂಗಜ ಜನಕನ ಪಾಡಿ ಪೊಗಳುವರು2 ರಂಭೆ ಊರ್ವಶಿ ಮೇನಕೆಯರೆಲ್ಲರು ಕೂಡಿ ಸಂಭ್ರಮದಲಿ ನಾಟ್ಯವಾಡುತಿರೆ ಗಂಗೆ ಗೋದಾವರಿ ಕೃಷ್ಣ ತುಂಗಭದ್ರೆ ಯಮುನೆಯರು ಇಂಬಿಲ್ಲದೆ ಪಾಡುತಿಹರೊ ಶ್ರೀ ಹರಿಯ 3 ಅತ್ರಿ ವಸಿಷ್ಠ ಗೌತಮ ಭಾರದ್ವಾಜರು ಅರ್ಥಿಯಲ್ಲಿ ಜಮದಗ್ನಿ ಋಷಿಗಳೆಲ್ಲ ಸ್ತೋತ್ರಮಾಡುತ ಪುರುಷೋತ್ತಮನನು ಪಾಡಿ ವಿಶ್ವಾಮಿತ್ರರು ಬಹು ಭಕ್ತಿಯಲಿ 4 ಸುತ್ತ ಸನಕಾದಿ ನಾರದರೆಲ್ಲ ಪಾಡಲು ನೃತ್ಯಗಾಯನದಿಂದ ಶ್ರೀ ಕೃಷ್ಣನ ಅರ್ತಿಯಿಂದ ಅಜಭವ ಸುರರೆಲ್ಲ ಸ್ತುತಿಸಲು ಸ್ತೋತ್ರಮಾಡಲು ದುರ್ಗದೇವಿಯರು5 ಗಜರಾಜ ಗೋಮಾತೆ ಮೊದಲಾದವರು ಬಂದು ಮಧುಸೂದನನ ನೋಡೆ ನಿಂತಿಹರು ಮದಗಜಗÀಮನೇರು ಮುದದಿ ಕಲಶ ಕನ್ನಡಿಗಳ ಪಿಡಿದು ನಿಂತಿಹರು ಬೇಗದಲಿ 6 ಮುತ್ತಿನ ಕದಗಳು ತೆಗೆವ ವ್ಯಾಳ್ಯದಲಿ ನೌಬತ್ತು ನಗಾರಿ ವಾದ್ಯಗಳಾಗಲು ಸಪರ್Àನ್ಹಾಸಿಕೆಯಲ್ಲಿ ಮಲಗಿರುವ ದೇವನ ಅರ್ಥಿವೈಭವ ನೋಡೊ ವೇಳೆ ಮೀರುವದು7 ಗಂಗಾಜನಕನ ಚರಣಂಗಳು ನೋಡುವ ಬಂಗಾರ ಕಿರುಗಂಟೆಗಳ ನಡುವನು ನೋಡುವ ರಂಗು ಕೇಸರಿಯ ಪೀತಾಂಬರ ನೋಡುವ ಶೃಂಗಾರ ವೈಜಯಂತಿಯ ನೋಡುವ 8 ವಕ್ಷ ಸ್ಥಳದಲ್ಲಿ ಶ್ರೀ ಲಕ್ಷ್ಮಿಯ ನೋಡುವ ಹಸ್ತದ ಆಭರಣಂಗಳ ನೋಡುವ ಮುತ್ತಿನ ಭುಜ ಕೀರ್ತಿ ರತ್ನದ್ಹಾರಗಳಿಂದ ಒಪ್ಪುವ ಉರದಿ ಶ್ರೀವತ್ಸನ ಸ್ತುತಿಸೆ 9 ಕೋಟಿ ಸೂರ್ಯರ ಕಾಂತಿ ಸೋಲಿಪ ನಗುಮುಖ ಲಲಾಟದಿ ಕಸ್ತುರಿ ತಿಲಕ ಒಪ್ಪಿರಲು ಮಾಟದ ಕರ್ಣಕುಂಡಲಗಳು ಹೊಳೆಯುತ್ತ ನೋಟದಿ ಜಗವ ಮೋಹಿಪ ದೇವನನು ನೋಡೆ10 ಅಂದದ ಮುಗುಳು ನಗೆಯು ದಂತ ಪಂಙÉ್ತಯು ಪಾದ ಕದಪುಗಳಂದವು ಇಂದ್ರ ನೀಲದಮಣಿ ಖಚಿತ ಕಿರೀಟದ ಮಂದಹಾಸದ ನಗೆÀಮುಖ ನೋಡುವ 11 ಕಡೆಗಣ್ಣ ನೋಟದಿ ಜಗವ ಸೃಷ್ಟಿಪದೇವ ಖಗವಾಹನನು ಸಂರಕ್ಷಿಪ ಲೋಕವ ಅಗಣಿತ ಮಹಿಮ ಅತಿಶಯದಿ ಲಯವ ಮಾಳ್ಪ ಸುಗುಣ ಸುಂದರನ ಗುಣ ಪೊಗಳುವ ಜನರು12 ನಿಖಿಳ ವ್ಯಾಪಕ ಕೃಷ್ಣ ಶುಕಮುನಿ ವಂದಿತ ದಿವ್ಯ ಚರಣನ ರುಕುಮಿಣಿ ಅರಸನ ಭಕುತರ ಪೋಷನ ಸಖ್ಯದಿಂದ ಪ್ರಿಯನ ನೋಡುವ ಸುಜನರು13 ಅನಿರುದ್ಧ ದೇವ ಶ್ರೀ ಪ್ರದ್ಯುಮ್ನ ಮೂರ್ತಿಯ ಸಂಕರುಷಣ ವಾಸುದೇವೇಶನ ನವನೀತ ಚೋರನ ನಾರಾಯಣನ ನಾಮ ಸ್ಮರಿಸುವ ಸುಜನರು 14 ಕವಿಜನ ಪ್ರಿಯನ ಕಮನೀಯ ರೂಪನ ಕಮಲನಾಭವಿಠ್ಠಲನ ಪಾಡುವ ಕಮಲಸಖನ ಸೋಲಿಸುವ ಮುಖಕಾಂತಿಯಕಮಲಾಕ್ಷಿಯರಸನ ಪೊಗಳುವ ಸುಜನರು15
--------------
ನಿಡಗುರುಕಿ ಜೀವೂಬಾಯಿ
ಬೆಳಗಾಯಿತೇಳಿರಯ್ಯಾ ಜನರೆ ಪ ಒಳಹೊರಗೆ ಅಂಧಕಾರವು ವ್ಯಾಪಿಸಿರೆ ರಾತ್ರಿ ಲಲನೆಯರ ತೆಕ್ಕೆಯಲಿ ನಿದ್ರಾಭರದಿ ಕಾಲ ತಳಮಳದೆ ತಮ್ಮ ಸ್ಥಳಗಳನು ಬಿಟ್ಟು ತಾವ್ ಕಲಕಲಧ್ವನಿಯಿಂದ ದೆಸೆದೆಸೆಗೆ ಪೋಗುತವೆ ಮಲಗಿರುವುದುಚಿತವಲ್ಲ ಜನರೆ 1 ಮರೆವೆಯನು ಬಿಟ್ಟು ಕಣ್ದೆರದು ಕೈಯುಜ್ಜಿ ಶ್ರೀ- ಹರಿಯ ಸಂಸ್ಮರಿಸಿ ಗುರುಹಿರಿಯರಡಿಗಳಿಗೆರಗಿ ದೊರೆಭಾಗ್ಯವಂತಗೋಸತಿಯರಿಗೆ ನಮಿಸಿ ದರ್ಪಣ ನೋಡಿನಿತ್ಯ ಕೃತ್ಯ ಹರುಷದಲಿ ನಿಮ್ಮ ನಿಮ್ಮನುಕೂಲದಂತೆ ಆ- ಸುಖಂಗಳ ಪಡಿಯಿರೈ 2 ವ್ಯರ್ಥಕಾಲಕ್ಷೇಪ ಮಾಡದಿರಿಯಿದರಿಂದ- ನರ್ಥ ಬರದಂತೆ ಯೋಚಿಸಿ ಈಗ ನಾವೇ ಕೃ- ಜನ್ಮವು ದುರ್ಲಭ ತೀರ್ಥಪಾದಗೆ ಸಮರ್ಪಣೆಗೈಯ್ಯೆಮನದಿಷ್ಟ ಸಜ್ಜನರು ಸಾಕ್ಷಿ 3 ನೆರೆಹೊರೆಯ ನೋಡುತಾಭರಣ ವಸ್ತ್ರಗಳು ಬಹು ದೊರೆತ ಮಟ್ಟಿಗೆ ಭೋಗ ಭಾಗ್ಯಗಳನನುಭವಿಸಿ ಪರಮಧರ್ಮವ ಘಳಿಸಿರೈ 4
--------------
ಗುರುರಾಮವಿಠಲ
ಬೆಳಗಿನ ಝಾವದಿ ಬಾರೊ ಹರಿಯೆ, ನಿನ್ನ ಪ ಚರಣ ತೊಳೆದು ಜಲಪಾನ ಮಾಡುವೆನೊಅ.ಪ. ನೀರೊಳು ನಿನ್ನನು ಕಾಂಬೆ ಗಿರಿ ಭಾರಪೊತ್ತರೆ ನಗುವಳೊ ನಿನ್ನ ರಂಭೆ ಮೋರೆ ತಗ್ಗಿಸಿದರೇನೆಂಬೆ ಅಲ್ಲಿ ನಾರಸಿಂಹನಾಗಿ ಪೂಜೆಯ ಗೊಂಬೆ 1 ಬಲಿಯದಾನವ ಬೇಡಿದ್ದೆಲ್ಲ ನೀ ಛಲದಿ ಕ್ಷತ್ರಿಯರ ಸಂಹಾರ ಮಾಡೆದ್ಯಲ್ಲ ಛಲವಂತ ನಿನಗೆದುರಿಲ್ಲ ನೀ ನೊಲಿದ್ಹನುಮನಿಗೆ ಅಜಪದವನಿತ್ಯೆಲ್ಲ 2 ರುಕ್ಮಿಣೀಶಗೆ ಸಮರಿಲ್ಲ ಕೃಷ್ಣ ಬಿಮ್ಮನೆ ತ್ರಿಪುರ ಸತಿಯರಪ್ಪಿದ್ಯೆಲ್ಲ ಬ್ರಹ್ಮಾದಿಗಳು ಸಮರಲ್ಲ ಬಲು ಹಮ್ಮಿಲಿ ಹಯವೇರಿ ವಿಜಯವಿಠ್ಠಲ 3
--------------
ವಿಜಯದಾಸ
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬೇಡುವುದೂ ಬಲು ಕಷ್ಟ ಪ ನೀಡದಿದ್ದವನೇ ನಷ್ಟ ಅ.ಪ. ನಾಚಿಕೆ ಎಲ್ಲನು ತೊರೆದು ಮಹಾ ನೀಚರಿಗೆ ಬಾಯ್ತೆರದು 1 ಕೊಟ್ಟಾರೆಂಬ ದುರಾಶಾ ಕ್ರಿಯಾ ಭ್ರಷ್ಟರರಿಯರೂ ಕ್ಲೇಶಾ 2 ಚಿತ್ತವೃತ್ತಿಯನು ಕಂಡೂ ಅಧಮರ ಹೊತ್ತುಹೊತ್ತಿಗೆ ಕಾಣಿಸಿಕೊಂಡು 3 ಗುಣಹೀನರ ಕೊಂಡಾಡೀ ಬಂದು ಕ್ಷಣಕ್ಷಣಕವರನು ನೋಡೀ 4 ಶ್ರೀದವಿಠಲನ ಬಿಟ್ಟೂ ಅಧಮಾಧಮರಿಗೆ ದೈನಬಟ್ಟು 5
--------------
ಶ್ರೀದವಿಠಲರು
ಬೈಯದವನಿಗಿಂತಲೂ ಬೈಯುವವನೇ ಮೇಲು ಹೊಯ್ಯದವಗಿಂತಲೂ ಹೊಯ್ಯುವವನೆ ಮೇಲು ಪ ಬಾಯೆನಲು ಬರಲೊಲ್ಲೆ ಮಾಯಾಕಾರ ನಿನ್ನಅ.ಪ ಒಬ್ಬ ಧರಣಿಯನೊಯ್ದ ಒಬ್ಬ ಖಡ್ಗವ ಹಿಡಿದ ಒಬ್ಬ ಧರಣಿಯನೆ ಕದ್ದ ಒಬ್ಬ ಬೈದಾ ಉಬ್ಬಿ ನೀ ಸಂತಸದಿ ಅಬ್ಬರಿಸಿ ಪರಿದೈದೆ ಒಬ್ಬೊಬ್ಬರಿಗೂ ದಿವ್ಯ ದರ್ಶನವನು 1 ಜಾರನೆಂದರು ಕೆಲರು ಚೋರನೆಂದರು ಕೆಲರು ಪೋರನಿವನೆಂದರು ನಾರಿಯರು ಪಲರು ಆರೇನ ಬೈದರೂ ದೂರಿ ನಿಂದಿಸಿದರೂ ಸ್ಮರಿಸಿದಾ ನಿಮಿಷಾರ್ಧ ಹರಿ ನಿನ್ನ ಭಕ್ತರ 2 ಇರಬಹುದು ಹಸಿವು ಬಾಯಾರಿಕೆಗಳಿಂದ ಅರಿವು ನಿದ್ರಾ ನೀರಡಿಕೆಗಳ ತೊರೆದು ಅರಸುವಾ ಸಮಯದಲಿ ಬರುವೆ ನೀನದರಿಂದ 3 ಇಳೆಯನೇ ತೆತ್ತವನ ತುಳಿದು ಕೈಸೆರೆ [ಮಾಡ್ದೆ] ಹಳಿದು ನಿಂದಿಸಿದವನ ಬಳಿಗೆ ಹೋದೆ ಮುಳಿಸಿನಿಂದೊದ್ದವನ ಕಾಲುಗಳ ನೀತೊಳೆದೆ ಹಳಿವು ಬೈಗಳು ನಿನಗೆ ಹಿತವು ಮಾಂಗಿರಿಯ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ
ಬ್ರಹ್ಮ ಸುಖದಲಿ ನಲಿದಾಡುವೆ ಧ್ರುವ ನಮೋ ಶ್ರೀ ಗಣನಾಯಕನಿಗೆ ನಮೋ ನಮೋ ಶ್ರೀ ಸರಸ್ವತಿಗೆ ನಮೋ ನಮೋ 1 ಸದ್ಗುರುವಿಗೆ ನಮೋ ಶ್ರೀ ಸ್ವಾಮಿಗೆ ನಮೋ ನಮೋ 2 ಇಷ್ಟದೈವಕೆ ನಮೋ ಮಹಿಮಗೆ ನಮೋ ನಮೋ 3 ಸೂತ್ರಾಂತ್ರಿಗೆ ನಮೋ ಸುಪಥಕೆ ನಮೋ ನಮೋ 4 ಸುಸರ್ವ ದೈವಕೆ ನಮೋ ರೂಪಕೆ ನಮೋ ನಮೋ 5 ಶಕ್ತಿಗೆ ನಮೋ ಮುನಿಗಳಿಗೆ ನಮೋ ನಮೋ 6 ಸುಭಾಗವತರಿಗೆ ನಮೋ ನಮೋ ನಮೋ 7 ಸುಮಹಿಮರಿಗೆ ನಮೋ ಸುತೀರ್ಥಕ್ಷೇತ್ರಕ್ಕೆ ನಮೋ ನಮೋ 8 ಸುಪುಣ್ಯಶ್ಲೋಕರಿಗೆ ನಮೋ ಸಜ್ಜನರಿಗೆ ನಮೋ ನಮೋ 9 ತ್ರೈಲೋಕ್ಯನಾಥಗೆ ನಮೋ ಸರ್ವೋತ್ಮಗೆ ನಮೋ ನಮೋ 10 ಸುಕರುಣಿಗೆ ನಮೋ ಭಕ್ತವತ್ಸಲಗೆ ನಮೋ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಬ್ರಹ್ಮದೇವರು ಪರಮೇಷ್ಠಿ ನಿನ್ನನಾ ಸ್ಮರಿಸುವೆನನುದಿನ ಕರುಣದಿಂದ ಅಭಯವಿತ್ತು ಕಾಯೊ ಎಂದೆ ನಾ ಪ ಸೃಷ್ಟಿ ಕರ್ತನೆ ಜಗಕೆ ವಸಿಷ್ಠನಯ್ಯನೆ ಶ್ರೇಷ್ಠ ಮದ್ಯಮಾಧಮರಿಗಭೀಷ್ಟ ಕೊಡುವನೆ 1 ಹಿರಣ್ಯಗರ್ಭನೆ ಸುರಾಸುರೇಶನೆ ಸರಸ್ವತಿ ಮನೋಹರನೆ ದಯಾ ಸಮುದ್ರನೆ 2 ಗುರುರಾಮವಿಠಲನಾ ನೆರೆ ನಂಬಿದವರನಾ ಪರಮ ಸುಖದೊಳಿಟ್ಟು ಮುಕ್ತಿ ಪಥವ ತೋರ್ಪನಾ 3
--------------
ಗುರುರಾಮವಿಠಲ
ಭಕುತರ ರಿಣಕಂಜಿ ಅಡಗಿದರೇ | ಅಖಿಳದಿ ಬಿಡುವರೇ ಪ್ರಕಟಿಸಿ ಬಾ ರಂಗಯ್ಯಾ ಪ ಕತ್ತಲೆಯೊಳು ಹೆಜ್ಜೆ ದೋರದೇ ತಿರುಗುತಾ | ಮತ್ತೆ ದೊಡ್ಡ ಬೆಟ್ಟದಾ ಮರಿಲ್ಯಾಡುತಾ | ಅತ್ತಿತ್ತ ನೋಡದೆವೆ ಝುಡಪಿನೊಳಗ ಹೊಕ್ಕು | ಉತ್ತಮ ನರಮೃಗದಂತಡವಿಯ ಸೇರಿ1 ಬಡತನ ದೋರಲೆಂದು ಯಾಚಕನಾದರೇನು | ಕಡಲ ಬೊರಿಯಾ ಮನೆ ಮಾಡಿರಲೇನು | ಜಡೆಗಟ್ಟ ನಾರ ಸೀರೆನುಟ್ಟು ಉಪವಾಸ ಮಾಡಿ | ಗಿಡವೇರಿ ಮಡುಹೊಕ್ಕು ಕಳವಿಲಿ ತಿರುಗುತಾ 2 ಮುನಿಯಂತೆ ದಿಗಂಬರ ರೂಪವ ತಾಳಲೇನು | ಜನದ ಕಲಿಕೀ ಮಾತು ಕಡೆಗಾಣುದೇ | ಘನಗುರು ಮಹಿಪತಿ ಸುತ ಪ್ರಭು ನಿನ್ನೊಳಿದ್ದಾ | ಸಂತೈಸಿ ಶರಣರ ರಕ್ಷಿಸಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ
ಭಕುತವತ್ಸಲ ಶೀಲಾ-ಶೇಷಗಿರಿಯ ಲೋಲಾ ಪ ನೀ ಕರುಣಿಸೊ ಎನ್ನಾ-ಕುಲಸ್ವಾಮಿ ಘನ್ನಾಅ.ಪ ಮಂದಭಾಗ್ಯನು ನಾನು ವೃಂದಾರಕ ವಂದ್ಯ ತಂದೆ ಎನಗೆಂದೆಂದು ಅನಿಮಿತ್ತಬಂಧೂ ವಂದಿಪೆ ನಿನ್ನಯ ದ್ವಂದ್ವಪಾದದ ಧ್ಯಾನ ಅ- ದೊಂದನಾದರು ಇತ್ತು ಬಂಧವ ಪರಿಹರಿಸೊ ಹಿಂದೆ ನಿನ್ನಯ ನಾಮ ಒಂದೇ ಬಂಧಹರಿಸಿತು ಭಕುತವೃಂದಕೆ ಅಂದು ಅವರೇನೆಂದು ಕರೆದರೋ ಮಂದರೋದ್ಧರ ಬಂಧಮೋಚಕ1 ಓಲೈಪರೋ ಮುಕ್ತಜಾಲ ನಿನ್ನ ಕಾಲನಾಮಕ ಆಪತ್ಕಾಲಬಾಂಧವನೆಂದು ಕಾಲಿಗೆರಗುವೆ ಕೃಪಾಳು ನೀನಲ್ಲವೆ ಸೊಲ್ಲಲಾಲಿಸೊ ಲಕುಮಿನಲ್ಲ ನೀ ನಲ್ಲದಲೆ ಇನ್ನಿಲ್ಲವೆಂದಿಗೂ ಬಲ್ಲಿದರಿಗತಿಬಲ್ಲಿದನು ಆ- ವಲ್ಲಿ ನೆನೆದರೆ ಅಲ್ಲೇ ಪೊರೆವೆ 2 ಪುರಾಣಪುರುಷನೆ ಪರಮ ಕರುಣಿ ಎಂದು ಪುರಾಣದೊಳು ನೀನೆ ಪ್ರತಿಪಾದ್ಯನೊ ಕರಿ ಧ್ರುವ ಭೃಗು ಭೀಷ್ಮರ ಚರಿತೆಯ ನೋಡಲು ಹರಿ ನಿನ್ನ ಸರಿಯುಂಟೆ ದುರಿತಾಪಹಾರದಿ ಸ್ಮರಿಪರಘ ಪರಿಹರಿಪ ಶ್ರೀಪ ಸುರಪಹರಮುಖವಿಬುಧವಂದ್ಯ ದರಸುದರ್ಶನಧಾರಿ ಶ್ರೀ ವೇಂಕಟೇಶಉರುಗಾದ್ರಿವಾಸ ವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಭಕುತಿಯಾಬೇಡುವೆ ಪ ಮುಕುತರೊಡೆಯ ನಿನ್ನಪದಪಂಕಜದೊಳುಅ.ಪ ಬಾರಿಬಾರಿಗೆ ನಿನ್ನ ನಾಮವ ನಾ| ಸ್ಮರಿಸಲು ದಾರಿಯ ಕಾಣೆನೊ ಮಾರಮಣನೆ ದಯತೋರದಿರಲು ಇ- ನ್ಯಾರಿಗೆ ಮೊರೆಯಿಡಲಯ್ಯ ಶ್ರೀಹರೇ 1 ಘನ್ನದುರಿತಗಳಿಂದ ಹಿಂದೆ ನಾ ಬನ್ನಪಟ್ಟು ಬಹು ಖಿನ್ನನಾಗಿಹೆ ಸನ್ನುತಾಂಗ ಶ್ರೀನಲ್ಲನೆ ನೀ ಇನ್ನುಮನ್ನಿಸದಿರೆ ಇನ್ನಾರಿಗೆ ಪೇಳಲೊ 2 ಮಂಕುಮತಿಯಾಗಿದ್ದರೆನ್ನ ಹೃ- ತ್ಪಂಕಜದೊಳಗೆ ಅಕಳಂಕನಾಗಿಹೆ ಶಂಕೆ ಏಕೋ ನಿನ್ನ ಕಿಂಕರನಲ್ಲವೇ ಸಂಕಟ ಹರಿಸೋ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು