ಒಟ್ಟು 1248 ಕಡೆಗಳಲ್ಲಿ , 98 ದಾಸರು , 1028 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ಅಜಹರವಿನುತ ನಿಜಪಾದ ಅನುದಿನವು ಭಜಸಿಬದುಕೆಲೊ ಪ ತ್ಯಜಿಸಿ ಅವಗುಣ ಸುಜನರೊಡಗೂಡಿ ನಿಜಾನಂದದಿ ಸುಜನ ಭಜಗಶಯನನ ಅ.ಪ ಹಲವು ಭ್ರಾಂತಿಗಳ್ಯಾಕೆಲೊ ಸುಳ್ಳೆ ಸುಳ್ಳೆ ಸಂಸಾರ ಕೊಳಪಟ್ಟು ಕೆಡದಿರೆಲೊ ಮಲಿನಮನಸಿನ ಸರ್ವ ಹೊಲೆಯ ಯೋಚನೆ ಬಿಟ್ಟು ತಿಳಕೊಂಡು ನಿಜಸುಖ ಪದವಿಗೆ ನದರಿಟ್ಟು ಉಳಕೋ ಸಿಕ್ಕ್ಹೊತ್ತುಗಳೆಯದಲೆ ಶುನಕೆಲುವು ಕಡಿದಂತೆ ಅಳಿವ ಸುಖದಾಸೆಗೆಳಸಿ ಕೆಡಬೇಡ ಜಲಜನಾಭನ ಒಲಿಸಿ ನಲಿಯೊ 1 ಬರುವಾಗ್ಗೆ ಬೆನ್ನಿನ್ಹಿಂದೆ ಹೆಡತಲೆ ಮೃತ್ಯುವಿನ ಕರಕೊಂಡು ಧರೆಗೆ ಬಂದಿ ಅರಲವದ ಸುಖಕಾಗಿ ಮರೆದು ಎಲ್ಲವ ನೀನು ಮರುಳನಾದದ್ದು ಕಂಡು ನಗುತಿಪ್ಪ ಮೃತ್ಯವ ಹೊರಳಿನೋಡದೆ ದುರುಳತನದ ಸ್ಥಿರದ ಪ್ರಪಂಚ ಖರೆಯೆಂದೆನ್ವುದು ಸರಿಯಲ್ಲೆಲೊ ಇದು ನಿರುತದ್ಹರಿಪಾದ ಸ್ಮರಣಾನಂದದಿ ಮರೆಯೊ ಬಿಡದೆ 2 ಫಣೆಯ ಬಾಯೊಳಗಿರುವಂಥ ಕಪ್ಪೆಯು ಮುಂದಾಡ್ವ ನೊಣಕ್ಹವಣಿಸುತಿರುವಂತೆ ಒಣಭ್ರಾಂತಿ ಪಡದಿರು ಮನಸಿಗೆ ಬಂದಂತೆ ಕ್ಷಣತೋರಿ ಅಡಗುವ ಕನಸು ಜಗಸುಖ ಜನನ ಮ ರಣೆಂಬ ದಣಿವು ಕಳೆವಂಥ ಜನಕಜಾತೆಯ ಧಣಿಯ ಶ್ರೀರಾಮನೊನರುಹಂಘ್ರಿಯ ಘನವ ಪೊಗಳುತ ಕುಣಿ ಕುಣಿದು ಧನ್ಯವಾಗೆಲೊ 3
--------------
ರಾಮದಾಸರು
ಮಾನವ ಪ ಗರುವವೇತಕೆ ನಿನಗೆ ಎಲೆ ಮಂಕು ಜೀವಅ ರೂಪದಲಿ ಮನ್ಮಥನೆ ಶಾಪದಲಿ ಗೌತಮನೆಕೋಪದಲಿ ದೂರ್ವಾಸ ಮುನಿಯೆ ನೀನುತಪದಲ್ಲಿ ವ್ಯಾಸನೆ ಕೃಪೆಯಲ್ಲಿ ಬಲೀಂದ್ರನೆನಿಪುಣತ್ವದಲಿ ನಾರದ ಮುನಿಯೆ ನೀನು 1 ಯತಿಯಲ್ಲಿ ಅಗಸ್ತ್ಯನೆ ಕ್ಷಿತಿಪರಲಿ ಜನಮೇಜಯನೆಗೀತದಲಿ ಗಂಧರ್ವನೇ ನೀನುವ್ರತದಲ್ಲಿ ಲಕ್ಷ್ಮಣನೆ ಮತಿಯಲ್ಲಿ ಕಶ್ಯಪನೆವಿತರಣ ಗುಣದಲಿ ಯಮಧರ್ಮನೆ ನೀನು 2 ಮಾನವ 3 ಕೊಡುವುದಕೆ ಕರ್ಣನೆ ನಡತೆಯಲಿ ಧರ್ಮಜನೆದೃಢ ಮನಸಿನಲಿ ರುಕ್ಮಾಂಗದನೆ ನೀನುಪಡೆಯಲ್ಲಿ ಕೌರವನೆ ನುಡಿಯಲ್ಲಿ ಗಾಂಗೇಯನೆಮಡದಿಯರ ಭೋಗಕ್ಕೆ ಸುರಪತಿಯೆ ನೀನು4 ಬಾಣದಲಿ ರಾಮನೇ ತ್ರಾಣದಲಿ ಭೀಮನೇಕೇಣದಲಿ ಶಿಶಪಾಲನೇನೊಗುಣದಲಿ ಸುಧರ್ಮನೇ ರಣದಲಿ ಶಲ್ಯನೆ ಆನುಗುಣ್ಯವಾದದಲಿ ನರಪತಿಯೆ ನೀನು5 ಛಲದಲ್ಲಿ ರಾವಣನೆ ಬಲದಲ್ಲಿ ವಾಲಿಯೇನಿಲುಗಡೆಯ ಮನದಲ್ಲಿ ದ್ರೋಣನೆ ನೀನುಕುಲದಲಿ ವಸಿಷ್ಠನೇ ಗೆಲುವಿನಲಿ ಪಾರ್ಥನೇಬಿಲುವಿದ್ಯೆಯಲಿ ಪರಶುರಾಮನೆ ನೀನು 6 ಶಕ್ತಿಯಲಿ ಹನುಮನೇ ಭಕ್ತಿಯಲಿ ವಿಭೀಷಣನೆಕೀರ್ತಿಯಲಿ ಹರಿಶ್ಚಂದ್ರರಾಯನೆ ನೀನುಅರ್ತಿಯಲಿ ಶುಕಮುನಿಯೆ ಸ್ಫೂರ್ತಿಯಲಿ ಸೂರ್ಯನೇಮುಕ್ತಿ ಸಾಧನಕೆ ಪ್ರಹ್ಲಾದನೆ ನೀನು7 ಗೋತ್ರದಲಿ ಬ್ರಹ್ಮನೇ ಸೂತ್ರದಲಿ ಕೌಶಿಕನೆಪಾತ್ರದಲಿ ವಾಲ್ಮೀಕಿ ಋಷಿಯೆ ನೀನುಮಾತಿನಲಿ ಗುರುಸುತನೆ ಜ್ಯೋತಿಯಲಿ ಬೃಹಸ್ಪತಿಯೆನೀತಿಮಾರ್ಗದಲಿ ಸಹದೇವನೇ ನೀನು 8 ಅಂಗದಲಿ ಅಜಮಿಳನೆ ಶೃಂಗದಲಿ ಮಾರುತನೆಕಂಗೊಳಿಪ ತನದಲ್ಲಿ ಕಾಮಸುತನೆಗಂಗೆಯನು ಪಡೆದಂಥ ನೆಲೆಯಾದಿಕೇಶವನಹಿಂಗದೆ ಭಜಿಸಿ ಪಾವನನಾಗು ಮನುಜ 9
--------------
ಕನಕದಾಸ
ಮಾನವ ಪ ಸ್ಮರಿಸಿ ಜೀವಿಸು ರಂಗವಲಿದ ದಾಸರ ಪಾದ ಶರಧಿ ಚಂದಿರನಾದ ಮೊರೆ ಹೊಕ್ಕ ಶರಣಘುಕರಿಗೆ ಕೇಸರಿಯಾದ ಪರಮ ಸಾಧು ಸಹ್ಲಾದ ಅ.ಪ ತರಣಿ ತನಯನ ಸೂತ ಪುರಂದರಾರ್ಯರ ಗೃಹದಿ ತರಳನೆಂದೆನಿಸಿದಾತ ಮರುತ ದೇವನ ಪದಕೆ ಬರುವ ಯತಿಗಳ ದೂತ ವರದೇಂದ್ರ ತೀರ್ಥರಿಗೆ ಪ್ರೀತ || ಗುರುಧೇನು ಪಾಲ ವಿಜಯ ದಾಸವರ್ಯರ ಮಮತ ಭರಿತನಾಗುತ ಪೋಗಿ ಹರಿಣಾಂಕ ಭಾಗದಲಿ ತ್ವರಿತ ಸಿರಿ ಜಗನ್ನಾಥ ವಿಠಲಾಂಕಿತ ಪಡೆದಾತ ನಮಗೀತ ಗತಿ ಪ್ರದಾತ 1 ದುರಿತ ವಿದೂರ ಮೂರ್ಹತ್ತು ಶರಯುಗ್ಮ ಗ್ರಂಥಗಳ ಸುವಿಚಾರ ತೋರಿ ಬರುತಿಹ ದಿವ್ಯ ಹರಿಕಥಾಮೃತಸಾರ ಸಾರಿದಂಥ ಸುಧೀರ || ಕಾರುಣ್ಯದಲಿ ಪೊರೆವ ಧರಣಿಸುರ ಪರಿವಾರ ಸುಜನ ಕೋರಿಕೆಯ ಮಂದಾರ ಭೂರುಹದ ತೆರದಿ ಘುನ ಸೂರೆ ಕೊಡುವನುದಾರ ದುರಿತವಿಪಿನ ಕುಠಾರ 2 ಇವರ ಕವನ ಪಠಣ ಶ್ರವಣ ಮನನಗಳಿಂದ ಲವಕೇಶವಾಗದು ಜವನ ಭವನದ ಬಂಧ ಅವಿವೇಕತಮದಿ ವರಚರಿತೆ ತಿಳಿಯದೆ ನಿಂದೆ ಗೈದ ಮನಜ ದಿವಾಂಧ | ಭುವನದೊಳು ಬೆಳಗುತಿಹ ಇವರ ಮಹಿಮಾನಂದ ವಿವರಿಸಲು ಎನಗೊಶವೆ ಅವನಿಯೊಳು ನಾ ಮಂದ ಇವರ ಸನ್ನಿಧಿಯಲ್ಲಿ ಸಕಲ ನದಿಗಳ ವೃಂದ ನೆಲಸಿಹವು ನಲವಿಂದ 3 ಮೆರೆವ ಮಾನವಿ ಪುರದಿ ಇರುವ ಸ್ತಂಭದಿ ಜಾಣ ಎರಡೆರಡು ಸಚ್ಛಾಸ್ತ್ರವರಿತ ಘನ್ನ ಪ್ರವೀಣ ಪರವಾದಿಗಳ ವಾಗ್ಧುರದಿ ಗೆದ್ದ ಧುರೀಣ ಹರಿಗೆ ಪಂಚಪ್ರಾಣ || ಅರುಹಲೇನಿವರ ಚರಣನಂಬಿದ ಸುಜನ ಪರಮಭಾಗವತರೆನಿಸಿ ನಿರುತ ಹರಿಪದ ಧ್ಯಾನ ಪರರಾಗಿ ಮೆಟುತಲಿ ಮುಕುತಿಪಥ ಸೋಪಾನ ಸೇರಿದರು ನಿಜ ಸ್ಥಾನ 4 ಶಾಮಸುಂದರ ವಿಠಲ ಸ್ವಾಮಿಗತಿ ಪ್ರಿಯದಾಸ ಶ್ರೀಮದಕ್ಷತೆ ಗಂಧ ನಾಮದ್ವಾದಶ ಭೂಷ ತಿಮಿರ ದಿನೇಶ ಭೂಮಿ ವಿಬುಧರ ಪೋಷ || ಈ ಮಹಾತ್ಮರ ಚಾರುಧವಲಕೀರ್ತಿಪ್ರಕಾಶ ಸೋಮಸುಪ್ರಭೆಯಂತೆ ಪಸರಿಸುತÀ ಸಕಲದೇಶ ಸುಜನ ಕುಮುದ ವಿಕಾಸ ಗೊಳಿಸಿಗರೆದುದುಲ್ಹಾಸ 5
--------------
ಶಾಮಸುಂದರ ವಿಠಲ
ಮಾನವನ್ಯಾಕದ್ಯೋ ಎಲೊ ಎಲೋ ಮಾನವನ್ಯಾಕದ್ಯೋ ಪ ಮಾನವನ್ಯಾಕದ್ಯೋ ಹೀನನೆ ಥೂಥೂ ಮಾನವಜನುಮದ ಖೂನವ ತಿಳಿಯದೆ ಅ.ಪ ನರನಾಗವತರಿಸಿಬಂದಿಹ್ಯ ಪರಿಯನು ಶೋಧಿಸಿ ಅರುಹುಗೂಡಿ ಸಿರಿವರನ ಕಥಾಮೃತ ಪರಮಭಕ್ತಿಯಿಂದ ಶ್ರವಣಮಾಡದ 1 ತನುನಿಜವಲ್ಲೆನಿಸಿ ಸತತದಿ ತನುಧನರ್ಪಿಸಿ ಘನತರಭಕುತಿಲಿ ವನಜನಾಭನ ಘನಸತ್ವಚರಿತವನು ಮನನ ಮಾಡದ 2 ಮಂದಮತಿಯ ಹರಿದು ಜಗಕೆ ಬಂದ ಕುರುಹು ತಿಳಿದು ಸಿಂಧುಶಯನ ಮಮತಂದೆ ಶ್ರೀರಾಮನ ಬಂಧುರಂಘ್ರಿ ನಿಜಧ್ಯಾಸವ ರುಚಿಸದ 3
--------------
ರಾಮದಾಸರು
ಮಾನವಾಗ್ರಗಣ್ಯ ಭೂಪ ಪ ರಾವಣಾದಿ ದನುಜ ಹೃದಯ ಜೀವಮಕರ ಧೀವರೇಶ ಸೂರ್ಯ ರಾಮಚಂದ್ರ 1 ಜಲಧಿ ದನುಜ ಸಂಘ ಶೌರ್ಯ ವಾರಿವಾಹವಾತ ಸೂರ್ಯವಂಶ ಸುಪ್ರಕಾಶ2 ದಿಂದ ಧೇನುನಗರಪತಿಯೆ ಬಂದು ಪಾಲಿಸೈ ಶ್ರೀಹರಿಯೆ 3
--------------
ಬೇಟೆರಾಯ ದೀಕ್ಷಿತರು
ಮಾನಸಾಂಡದಿ ಕಾಂಬೊನ್ಯಾರೇ | ನಮ್ಮಮೌನಿ ಧ್ಯಾನಾಗಮ್ಯ ಕೃಷ್ಣಮೂರುತಿಯೇ ಪ ಗುಂಗುರು ಕುಂತಲ ಶೋಭಾನೇ | ನಮ್ಮಗಂಗಾ ಜನಕ ಗೋಪಿರಂಗಾನೇ |ಮಂಗಳ ಮಹಿಮ ಶುಭಾಂಗಾನೇ | ಹೃದ-ಯಾಂಗಣದಲಿ ನಿಂತು ಕುಣಿವಾನೇ 1 ಕೊಳಲ ಕೈಯಲಿ ಧರಿಸ್ಯಾನೇ | ಚಂದ್ರಬೆಳಕಾಮಿತದಲಿ ಕುಣಿದಾನೇ |ಕಲಕುತ್ತಲೆನ್ನಯ ಮನವಾನೇ | ಹರಿಚಳಕದಿ ಕುಣಿವಂತೆ ಮಾಡ್ಯಾನೇ 2 ಅಗಣಿತ ಮಹಿಮ ಲಾವಣ್ಯಾನೇ | ಹರಿಸುಗುಣಿ ಕಾಲಲಿ ಗೆಜ್ಜೆ ಕಟ್ಯಾನೇಝಗಿ ಝಗಿಸುವ ಹಾರ ಪದಕಾನೇ | ಕೃಷ್ಣಮಘವನಾರ್ಚಿತ ದಿವ್ಯ ಚರಣಾನೇ 3 ಯಾದವರೊಡೆಯನು ಬಂದಾನೇ | ಗುರುವಾದಿರಾಜರ ಮಾತು ಸಲಿಸ್ಯಾನೇಸಾದರದಲಿ ಕೈಯ್ಯ ಪಿಡಿದಾನೇ | ಎನ್ನಮೋದದಿ ಕುಣಿವಂತೆ ಮಾಡ್ಯಾನೇ 4 ಗೋವಳರೊಡಯನು ನಗುತಾನೇ | ಹೃದಯನೋವನು ಕಳೆಯಲು ಬಂದಾನೇಸಾವನೀಪರಿ ಕರುಣಿ ಕಳೆದಾನೇ | ಗುರುಗೋವಿಂದ ವಿಠಲ ಹಯಾಸ್ಯಾನೇ 5
--------------
ಗುರುಗೋವಿಂದವಿಠಲರು
ಮಾಮವ ಮಮ ಕುಲಸ್ವಾಮಿ ಗುಹ ನತಜನ ದುರಿತಾಪಹ ಪ. ಭೀಮವೀರ್ಯ ನಿಸ್ಸೀಮಪರಾಕ್ರಮ ಧೀಮತಾಂವರ ನಿರಾಮಯ ಜಯ ಜಯಅ.ಪ. ಜ್ಞಾನಶಕ್ತಿ ಶತಭಾನುಭಾಸುರ ಪ್ರಸನ್ನ ಪಾವನ್ನ ಮೀನಕೇತನಸಮಾನ ಸಹಜ ಲಾವಣ್ಯ ಗಾನಲೋಲ ಕರುಣಾನಿಧಿ ಸುಮನಸ- ಸೇನಾನಾಥ ಭಾವನಿಸುತ ಸುಹಿತ1 ಪಟುತರಶಕ್ತಿ ಕುಕ್ಕಟ ಕುಲಿಶಾಭಯಶಯ ನಿರಪಾಯ ನಿಟಿಲಾಕ್ಷತನಯ ನಿಗಮಜ್ಞ ಬಾಹುಲೇಯ ಕುಟಿಲ ಹೃದಯ ಖಲಪಟಲವಿದಾರಣ ತಟಿತ್ಸಹಸ್ರೋತ್ಕಟರುಚಿರ ಮಕುಟ2 ಪಾವಂಜಾಖ್ಯ ಪವಿತ್ರ ಕ್ಷೇತ್ರಾಧಿವಾಸ ಸರ್ವೇಶ ದೇವ ಲಕ್ಷ್ಮೀನಾರಾಯಣಸ್ಮರಣೋಲ್ಲಾಸ ಸೇವಕ ವಿಬುಧಜನಾವಳಿಪಾಲಕಕೇವಲ ಸುಖಸಂಜೀವ ಜೀವನದ3
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾಭಿಮಾನವೆನಿಸುವ ಮೈಲಿಗೆಯನು ಹೇಯವಿದೆಂದು ಬಿಟ್ಟರಿಕೆಯ ಮಡಿಯುಟ್ಟೆಬಾಯ ಹೊೈುಸುವೆನಿನ್ನು ತಪ್ಪಿದೆಯಾದರೆ ಪಧೀರತನದಿ ಸದಸದ್ವಿವೇಕವ ತೊಟ್ಟು | ಸಾರಿ ಧನಾದಿ ಭೋಗಗಳ ಬಿಟ್ಟುಸಾರವಲ್ಲೆಂದು ಸ್ವರ್ಗಾದಿ ಸುಖಂಗಳ | ಮೀರಿದ ವಿರತನು ನಾನೆಂದೆನಲ್ಲದೆ ನಿನ್ನನಾರಿಯಬೇಕೆಂದೆನೆ ವಿಷಯವಿ | ಕಾರದೊಳ್ಬಳಿಸಂದೆನೆ ಧ್ಯಾನ ಸಾಧನಕಾರವೆ ಸಾಕೆಂದೆನೆ ಕಲ್ಪಿತವಾದ ಘೋರ ಸಂಸಾರವಸಾರವೆಂದೆನಲ್ಲದೆ 1ಶಮೆುಂದ ಚಿತ್ತ ವಿಕ್ಷೇಪವ ತೊಲಯ | ದಯೆುಂದಿಂದ್ರಿಯಗಳ ತಗ್ಗಿಸಿಕ್ರಮದಿಂ ತಿತಿಕ್ಷೆುಂ ಸಹನವ ಮಾಡಿ | ಯಮಿತೋಪರಮದಲಗ್ಗಳನೆಂದೆನಲ್ಲದೆಸಮತೆುಲ್ಲದೆ ಬಂದೆನೆ ತನು ಭೋಗ | ಮಮತೆಯೊಳಗೆ ನಿಂದೆನೆ ವಿಘ್ನವಿಕ್ರಮಕೊಳಗಾದೆನೆಂದೆನೆ ವೇದಾಂತೋಪಕ್ರಮವೆನ್ನೊಳಾುತೆಂದು ವಿವರಿಸಿದೆನಲ್ಲದೆ 2ದೀಪಿತ ಮೋಕ್ಷೇಚ್ಛೆುಂದ ತೋರುವ ಸಕಲ | ತಾಪತ್ರಯಗಳ ತೊಲಗಿಸಿಈಪರಿ ವೇದಾಂತ ಶ್ರವಣ ಮನನದ ಪ್ರ | ತಾಪದಿಂದರಿಗಳಿಲ್ಲೆನಗೆಂದೆನಲ್ಲದೆನೀ ಪುಸಿಯಲ್ಲೆಂದೆನೆ ಕಲ್ಪಿತ ನಾಮ | ರೂಪವ ನಿಜವೆಂದೆನೆ ತಾದೃಶ್ಯ ವಿಲೋಪಕನಲ್ಲೆಂದೆನೆ ಕೇಳು ಪ್ರತಿಜ್ಞೆಯ | ಗೋಪಾಲಾರ್ಯನೆ ನಾನೆಂದೆನಲ್ಲದೆ3
--------------
ಗೋಪಾಲಾರ್ಯರು
ಮಾರುತ ಒಲಿದವಗೆ ಮಾರಮಣನು ಒಲಿವಾ ಪ ಭಾರತೀರಮಣ ಮುನಿಯೆ ಭವಹರ ಹರಿ ಮುನಿವ ಅ.ಪ. ಸುಗ್ರೀವನು ಬಂದು ಹನುಮನ್ನ ಅನುಸರಿಸೆಶೀಘ್ರದಿಂದ ಹರಿ ವಾಲಿಯ ಕೊಂದನು ||ವಿಗ್ರಹದೊಳಗೆ ಕರ್ಣನ ಗೆದ್ದ ಅರ್ಜುನನುಅಗ್ರಜನ ಕೃಪೆ ಇದ್ದ ಕಾರಣಾ1 ಹನುಮಗ್ಹರಿ ಒಲಿಯಲು ರಾವಣನ ಒಂದುಕ್ಷಣದೊಳಗೆ ಹರಿ ಖಂಡಿಸಿದನು ||ಅನುಮಾನವಿಲ್ಲದೆ ಅವನನುಜ ವಿಭೀಷಣಗೆಘನ ಪದವಿಯನಿತ್ತ ಹನುಮ ಬೋಧಿತ ಹರಿ2 ದಾತ ದಾತ 3
--------------
ಮೋಹನದಾಸರು
ಮಾರುತೀ ಕೊಡು ಭಕುತಿ ನುಡಿಸು ಕೀರ್ತಿ ಪ ತೋರೊ ನಿನ್ನೊಳು ಇಹ ನಿರ್ಮಲ ಮೂರುತಿಯಅ.ಪ ಶ್ರವಣಮಾಡಲು ಭಕುತಿ ಆವಕಾಲಕು ಇತ್ತು ತವಪದದಾಸರ ದಾಸ್ಯ ಕೊಡಿಸೋ ದೇವ 1 ಕೀರ್ತನದೊಳು ಹರಿಕೀರ್ತಿ ಕೊಂಡಾಡೆ ಸಂ ಕೀರ್ತನ ಭಕುತಿಗೆ ಕರ್ತದಾತ ನೀನೆ2 ಸ್ಮರಣೆಯು ಹರಿಯಲ್ಲಿ ನಿರುತವು ನಿನ್ನಲ್ಲಿ ಕರುಣಿಸಿ ಪೊರೆಯೊ ಗುರುವರ ಸುಂದರ 3 ಪಾದ ಸೇವೆಯ ಕೊಡು ಸಾದರದಿಂದಲಿ ಶ್ರೀಧರನಾ ಕೃಪಾಪಾತ್ರನೆಂದೆನಿಸಯ್ಯ 4 ಅಚ್ಯುತನಿಗೆ ನೀನಚ್ಚುಮೆಚ್ಚಾಗಿಹೆ ನಿಚ್ಚದಿ ಹರಿಪಾದರ್ಚನೆ ಮಾಡಿಸಯ್ಯ 5 ವಂದನಾಭಕುತಿ ಎನ್ನಿಂದ ನೀ ಮಾಡಿಸಿ ನಂದನಂದನಗಾನಂದಪಡಿಸೊ ದೇವ 6 ದಾಸಭಕುತಿ ಭಾಗ್ಯ ಆಶಿಸುವೆನು ನಿನ್ನ ವಾಸುದೇವನ ನಿಜದಾಸನೆ ಸರ್ವದಾ 7 ಸಖ್ಯಭಕುತಿ ಕೊಡೋ ಮುಖ್ಯಪ್ರಾಣೇಶನೆ ಮುಖ್ಯಕಾರಣ ಹರಿಯ ಮುಖ್ಯ ಪ್ರೇಮಪಾತ್ರ 8 ಆತ್ಮನಿವೇದನ ಭಕುತಿಯನ್ನು ಪರ ಮಾತ್ಮನಲ್ಲಿತ್ತು ನಿರ್ಮಲಾತ್ಮನೆಂದೆನಿಸೊ 9 ನವವಿಧ ಭಕುತಿಯ ಕೊಟ್ಟು ಸಲಹೋ ದೇವ ಅವಕಾಲಕು ಪವಮಾನ ನೀನೆ ಗತಿ 10 ಸಂಕಟ ಹರಿಪ ಶ್ರೀ ವೇಂಕಟೇಶನ ದೂತ ಭಂಟನೆಂದೆನಿಸೆನ್ನ ಸಂಕಟ ಹರಿಸಯ್ಯ11
--------------
ಉರಗಾದ್ರಿವಾಸವಿಠಲದಾಸರು
ಮಾರ್ಗದರ್ಶಕೆ ದೇವಿ ಮಾರ್ಗ ತೋರಮ್ಮ |ಸರ್ವ ಪೂರ್ವದಿ ಕವ್ಯ ಬಾಲನೆಂಬನ ಮಗಳೇ ಪ ಹರಿದೀಕ್ಷೆ ಹರಿತತ್ವ ನಿರ್ಣಯಾದಿಗಳಿರುವನರರು ಕಲಿಯುಗದಲ್ಲಿ ದುರ್ಲಭರು ಎಂದು |ಪರಿಪರಿಯ ಚಿತ್ರಿಸುತ ಸದ್ಬೋಧ ಮಾಡಿರುವೆಹರಿ ಪದಾಬ್ಜದಿ ಭಕುತಿ ಎಷ್ಟಿಹುದೊ ನಿನ್ನಲ್ಲಿ 1 ಶೇಷಾಚಲಕೆ ಬಂದು ಆ ಸುತೀರ್ಥವು ಕಪಿಲಲೇಸಾಗಿ ಮಜ್ಜನವಗೈದು ತಪವಾ |ಸಾಸಿರೊರ್ಷವು ದಿವ್ಯ ಏಕ ಚಿತ್ತದಿ ಗೈದುಭಾಸುರ ಸ್ತೋತ್ರದಿ ಹರಿಯ ತೋಷಿಸಿದೇ 2 ತಂದೆ ತಾಯಿಯು ನೀನು ಬಂಧು ಬಳಗವು ನೀನುಎಂದೆಂದಿU5ಭ್ರಾತ ವಲ್ಲಭನು ನೀನೇ |ಇಂದಿರೇಶನ ಹೊರತು ಮಂದಿ ಬೇರಿಲ್ಲೆನಗೆಎಂದು ನೀತುತಿಸಿ ಹರಿ ಸಂದರ್ಶನವ ಪಡೆದೇ 3 ದ್ವಾಪರದಲಾ ಕವ್ಯ 5À್ನಜಿತು ನೃಪನಾಗೆರೂಪಲಾವಣ್ಯಾತಿಶಯಗಳಿ5 |ಭೂಪ ಕುವರಿಯು ಆಗಿ ನೀಲಾಖ್ಯೆ ಎನಿಸುತ್ತಶ್ರೀ ಪತಿಯ ಕೈ ಪಿಡಿಯೆ ಮನವ ನೀ ಮಾಡ್ಡೇ 4 ದೈತ್ಯ ಸಪ್ತಕರೇವೆ ಗೂಳಿಗಳು ತಾವಾಗಿಸತ್ಯ ಹರಿ ದ್ವೇಷವನೆ ಸಾಧಿಸುವೆವೆಂದೂನಿತ್ಯ ಪುಷ್ಟಾಂಗದಲಿ ಬೆಳೆಯುತ್ತ ನೃಪನಲ್ಲಿಕೃತ್ಯ ಸ್ವಯಂವರ ಕೇಳಿ ಹರ್ಷಿತರು ಆಗೀ 5 ವಿಪರೀತ ಮತಿಯುಳ್ಳ ಅಪರಿಮಿತ ಬಲತೋರ್ವಸಪುತ ಗೂಳಿಗಳನ್ನೆ ಆರು ಬಂಧಿಪರೋ |ನೃಪನೆಂದ ಸುತೆ ನೀಲೆ ಕನ್ಯೆ ಕೊಡುವೆನು ಅವಗೆನೃಪ ನಿಂತು ಪಣತೊಟ್ಟ ಕೌತುಕವ ಕೇಳೀ 6 ಆರು ಬಂದವರೆಲ್ಲ ಹೋರಿಗಳ ಪಿಡಿಯಲ್ಕೆವೀರ್ಯ ಸಾಲದೆ ಮರಳಿ ಹೋಗುತಿರಲೂ |ಮಾರ ಪಿತ ಶಿರಿ ಕೃಷ್ಣ ಹೋರಿ ನಾಸಿಕಗಳಿಗೆದಾರಗಳ ಬಿಗಿಯುತ್ತೆ ಬಂಧವನ ಗೈದಾ 7 ದೇವಿ ಸುಂದರಿ ನೀಲೆ ದಿವ್ಯ ಹಾರವ ಪಿಡಿದು ದೇವ ದೇವೇಶ ಶಿರಿ ಕೃಷ್ಣ ಕಂಠದಲೀಹಾವ ಭಾವದಿ ಬಂದು ಅರ್ಪಿಸಲು ತಕ್ಷಣದಿದೇವ ವಾದ್ಯವು ಮೊರೆಯೆ ಪೂವ ಮಳೆ ಬಿತ್ತು8 ಕೃಷ್ಣ ಮಡದಿಯರಾರು ಮಂದಿಯೊಳು ನೀಲಾಖ್ಯೆಲಗ್ನದುತ್ಸವ ಕೇಳ್ದ ಭಕುತ ಜನರಾ |ಭಗ್ನ ಗೈಸುತ ಪಾಪ ಮಗ್ನವಾಹುದು ಮನವುಕೃಷ್ಣ ಗುರು ಗೋವಿಂದ ವಿಠಲ ಪದದಲ್ಲೀ 9
--------------
ಗುರುಗೋವಿಂದವಿಠಲರು
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮಾಸ ನಿಯಾಮಕ ದೇವತೆಗಳ ವರ್ಣಿಸುವೆನು ಪ ಶ್ರೀಶನಾಜ್ಞೆಯಲಿ ಸಕಲ ಸುಜನರಿದ ಕೇಳಿ ಅ.ಪ. ಸಹವೆಂಬ ಮಾರ್ಗ ಶಿರದಿ ಪುತ್ರ ನಾಮಕ ಸವಿತೃ ಮಹಾ ವಿಶಾಲಾಕ್ಷಿರಮಣ ಕೇಶವ ನಿಯಾಮಕನು ಸಹಸ್ಯವೆನಿಪ ಪುಷ್ಯದೊಳು ವಿಷ್ಣುವೆನಿಪನು ಮಹಲಕುಮಿರಮಣ ನಾರಾಯಣನಿದಕೆ ಕರ್ತೃ 1 ತಪವೆನಿಪ ಮಾಘದೊಳು ಅರುಣನಾಮಕ ಸವಿತೃ ಚಪಲಾಕ್ಷಿ ರುಕ್ಮಿಣೀರಮಣ ಮಾಧವನು ದೊರೆಯು ತಪಸ್ಯವೆನಿಪ ಫಾಲ್ಗುಣದಿ ಸೂರ್ಯನೆನಿಪನು ಸುಪವಿತ್ರೆ ಧಾತ್ರೀಪತಿ ಗೋವಿಂದನಧಿದೇವತೆ2 ಮಧುಮಾಸವಾದ ಚೈತ್ರದೊಳು ವೇದಾಂಗನು ಪದುಮಾಕ್ಷ ಮಾ ರಮಾರಮಣ ವಿಷ್ಣು ನಿಯಾಮಕನು ಮಾಧವನೆನಿಪ ವೈಶಾಖದಿ ಭಾನುವೆಂದೆನಿಸುವನು ಮಧುಸೂದನ ನಾಮಕ ಮೋಹಿನೀ ಪತಿಯು 3 ಶುಕ್ರವೆನಿಪ ಜ್ಯೇಷ್ಠದೊಳು ಇಂದ್ರನೆನಿಪ ಸವಿತೃ ತ್ರಿ ವಿಕ್ರಮನಿದಕಧಿಪತಿಯು ಪದುಮಾಕ್ಷಿರಮಣ ಅಕ್ಕರದಿ ಶುಚಿಯೆನಿಪಾಷಾಡದಿ ರವಿಯೆನಿಪನು ಚಕ್ರಧರ ವಾಮನನಿದರಧಿಪತಿ ಕಮಲಾರಮಣ 4 ನಭವಾದ ಶ್ರಾವಣದಿ ಗಭಸ್ತಿಯೆನಿಸುವನು ತ್ರಿಭುವನದಧಿಪತಿ ಶ್ರೀಧರನು ಕಾಂತಿಮತಿರಮಣ ನಭಸ್ಯವೆನಿಪ ಭಾದ್ರಪದದಿ ಯಮನೆನಿಸುವನು ಇಭವರದ ಹೃಷಿಕೇಶ ಅಪರಾಜಿತಾ ರಮಣ 5 ಒದಗಿಹ ಇಷವೆನಿಪಾಶ್ವೀಜದೊಳು ಸ್ವರ್ಣರೇತಾ ಇದಕಭಿಮಾನಿ ಪದಮಾವತಿಪತಿ ಪದುಮನಾಭ ಉದಯಿಸುತಿಹ ಊರ್ಜಿಯೆನಿಪ ಕಾರ್ತಿಕದಿ ದಿವಾಕರ ರಾಧಾರಮಣ ದಾಮೋದರನಿದರಭಿಮಾನಿ 6 ಆಯಾಯ ಮಾಸದಲಿ ಮಾಳ್ಪ ಸಕಲ ಕರ್ಮಗಳನು ಆಯಾಯಭಿಮಾನಿ ದೇವರುಗಳಿಗರ್ಪಿಸಿ ಮಾಯಾರಮಣ ಶ್ರೀ ರಂಗೇಶವಿಠಲನ ನೆನೆಯುತ ಆಯಾಸವಿಲ್ಲದೆ ಪರಮಪದವನು ಪಡೆಯಿರೊ 7
--------------
ರಂಗೇಶವಿಠಲದಾಸರು
ಮುಕುತಿ ತಮಸು ಎರಡಿಲ್ಲೆ ಕಂಡ್ಯಾ ಮುಕುತಿ ಬೇರೆ ತಮಸು ಬೇರಿಲ್ಲ ಕಂಡ್ಯಾ ಪ ಗುರುಪಾದ ಒಡಗೊಂಡು ಮರುತ ಶಾಸ್ತ್ರವ ನೋಡಿ ಹರಿಯ ಗುಣಂಗಳ ಕೊಂಡಾಡುತ ಪರಮ ಉತ್ತಮರು ಬರಲು ಬನ್ನಿ ಬನ್ನೆಂದು ಎರಗಿ ತಕ್ಕೈಸಿ ಕೊಂಡುಂಬುವದೆ ಮುಕ್ತಿ 1 ನಾನು ನೀನು ಎಂದು ಜ್ಞಾನವನೆ ತಿಳಿಕೊಂಡು ತಾ ನಿಲ್ಲದಿಲ್ಲೆಂದು ಪೇಳಿಕೊಂಬಾ ಈ ನಾಡಿನೊಳಗಿವ ಹೀನವನು ಎಂಬರ್ಥ ಈ ನುಡಿ ಎನಿಸಿಕೊಂಬುದೆ ತಮಸು 2 ಒಂದರೊಳಾನಂತ ಅನಂತದಲಿ ಒಂದು ಒಂದೊಂದು ಅನಂತ ಹರಿಪ್ರೇರಕ ಎಂದು ಗ್ರಹಿಸಿ ಹರಿಗುರು ಹರಿದ್ವೇಷಿಗಳನ್ನ ನಿಂದಕವಾಗಿ ಬಾಳುವದೆ ಮುಕ್ತಿ 3 ಅನ್ನದಾ ಸಮಯ ಇಲ್ಲದೆ ಕಂಡಲ್ಲಿ ತಿನ್ನಲೋಡಿ ಸಮಯವೆನ್ನದೆ ಅನ್ಯರ ಬದುಕ ಪಹರಿಸುವ ಖಲು ಗನ್ನ ಫಾತಕನೆನಿಸಿಕೊಂಬುವದೆ ತಮಸು 4 ಮೀಸಲಾ ಮನದಲ್ಲಿ ವಾಸುದೇವನ ನಿಜ ವಾಸರದಲ್ಲಿ ಜಾಗರಾ ಮಾಡುವಾ ಆಶೆಬಡಕನಲ್ಲ ದೇಶದೊಳಗೆ ಹರಿ ದಾಸನೆಂದು ಪೇಳುವುದೆ ಮುಕ್ತಿ 5 ವ್ರತವಿಲ್ಲ ವಾವಿಲ್ಲ ಮತಿ ಮೊದಲು ಇಲ್ಲಾ ಕಥಾಶ್ರವಣ ಒಂದು ಕೇಳಲಿಲ್ಲ ಪಿತ ಮಾತರನ್ನ ಬೊಗಳುವ ನಾಯಿ ಕು ತ್ಸಿತನು ಎಂದೆನಿಸುವದೆ ತಮಸು 6 ಗುಣ ಒಳ್ಳೇದು ನೀತಿ ಮನ ಒಳ್ಳೇದು ಅಜ ತೃಣ ಜೀವಾದಿಯ ಭೇದಬಲ್ಲನಿವ ಗಣನೆಮಾಡ ವಿಜಯವಿಠ್ಠಲನಲ್ಲದೆ ಕ್ಷಣ ಹೀಗೆ ಎಂದೆನಿಸುವದೆ ಮುಕ್ತಿ 7
--------------
ವಿಜಯದಾಸ
ಮುಚ್ಚ್ಯಾಕೆ ಮರೆಯಾಕ್ಹೆಚ್ಚೀತನೆ ಅಚ್ಯುತ ಸಕಲಕ್ಕೆ ಅಧಿಕಿಹ್ಯನೆ ಪ ಬಚ್ಚಿಟ್ಟುಕೊಂಡು ವೇದ ಕುಚ್ಛಿತ ದೈತ್ಯರೊಯ್ಯೆ ಇಚ್ಛೆಗಾರ ಪಿತ ತಂದು ನಿಶ್ಚಯಗೈದ ಸೃಷ್ಟಿ ಅ.ಪ ಸವೆಯದ ವರವನ್ನು ಹಿರಣ್ಯಕಶ್ಯಪನಿಗೆ ಶಿವ ತಾನುಕೊಟ್ಟ ವೈಕುಂಠನ ಉದರ ಸೀಳಿ ಜವದಿ ತ್ರಿಭುವನವ ದಯದಿ ಸಲಹಿದ ಸಿರಿ ಧವ ನರಸಿಂಗನೆನಿಸಿ 1 ಕೇಳಿದ ವರವನ್ನು ದುರುಳರಾವಣನಿಗೆ ಪಾಲಿಸಿ ವರ ಶಂಭು ಹರಿಯನ್ನು ಅರ್ಚಿಸೆ ಕೀಳುದೈತ್ಯನ ಕುಲಮೂಲ ತರಿದು ಸುರರ ಪಾಲಿಸಿದನು ದಿವ್ಯ ಮೇಲುರೂಪವ ತಾಳಿ 2 ದುರುಳಗೊಲಿದು ಶಿವ ಉರಿಹಸ್ತ ಕರುಣಿಸಿ ಮರುಗುತ ಹರಿಯೆಂದು ಕರವೆತ್ತಿಕೂಗಲು ಭರದಿ ಒದಗಿಬಂದು ಮೆರೆವೀ ಅಸುರನನ್ನು ಉರಿಹಸ್ತ ಹರನಿಗೆ ವರವಿತ್ತ ಶ್ರೀರಾಮ 3
--------------
ರಾಮದಾಸರು